Tag: Corona Warriors

  • ಊಟ, ನೀರಿನ ಸೌಲಭ್ಯವಿಲ್ಲದೆ ಕೊರೊನಾ ವಾರಿಯರ್ಸ್ ಪರದಾಟ

    ಊಟ, ನೀರಿನ ಸೌಲಭ್ಯವಿಲ್ಲದೆ ಕೊರೊನಾ ವಾರಿಯರ್ಸ್ ಪರದಾಟ

    ಹಾವೇರಿ: ಕೊರೊನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಊಟ, ಕುಡಿಯುವ ನೀಡಿನ ಸೌಲಭ್ಯ ಸಿಗದೆ ಪರದಾಡುತ್ತಿರುವ ಘಟನೆ ಜಿಲ್ಲೆಯ ಸವಣೂರು ಪಟ್ಟಣದಲ್ಲಿ ನಡೆದಿದೆ.

    ಸವಣೂರು ಪಟ್ಟಣದ ಕೊರೊನಾ ಸೋಂಕಿತ ರೋಗಿ ಸಂಖ್ಯೆ ಪಿ-639 ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಕಾರಣ ಸ್ಟಾಫ್ ನರ್ಸ್, ಲ್ಯಾಬ್ ಟೆಕ್ನಿಷಿಯನ್, ಆಶಾ ಕಾರ್ಯಕರ್ತೆ ಅವರನ್ನು ಒಳಗೊಂಡಂತೆ ಮೂವರನ್ನು ಜಿಲ್ಲಾಡಳಿತ ನಿನ್ನೆಯಿಂದ ಪಟ್ಟಣದ ಖಾಸಗಿ ಹೋಟೆಲ್‍ನಲ್ಲಿ ಕ್ವಾರಂಟೈನ್ ಮಾಡಿದೆ.

    ಕೊರೊನಾ ವಾರಿಯರ್ಸ್ ಕ್ವಾರಂಟೈನ್ ಮಾಡಿದ ಬಳಿಕ ಜಿಲ್ಲಾಡಳಿತ ಹಾಗೂ ಸ್ಥಳೀಯ ಆರೋಗ್ಯ ಇಲಾಖೆ ಅಧಿಕಾರಿಗಳು ಈವರೆಗೂ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಇಂದು ಸಂಜೆ 4 ಗಂಟೆಯಾದರೂ ಇದುವರೆಗೂ ಕ್ವಾರಂಟೈನ್‍ನಲ್ಲಿರೋ ಮೂವರಿಗೆ ಊಟ ವ್ಯವಸ್ಥೆಯನ್ನೇ ಮಾಡಿಲ್ಲ. ಹೀಗಾಗಿ ಕುಡಿಯಲು ನೀರು, ತಿನ್ನಲು ಊಟ ಸಿಗದೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಪರದಾಡುತ್ತಿದ್ದಾರೆ.

    ನಮ್ಮನ್ನು ಕ್ವಾರಂಟೈನ್ ಮಾಡಿದ್ದು ಬಿಟ್ಟರೆ ಇದುವರೆಗೂ ನಮಗೆ ಯಾವುದೇ ಕನಿಷ್ಠ ಸೌಲಭ್ಯಗಳನ್ನು ನೀಡಿಲ್ಲ ಎಂದು ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

  • ಕಾರವಾರ ಬಂದರಿನಲ್ಲಿ ಮಿಂಚಿದ ವಿಕ್ರಮಾದಿತ್ಯ- ಕೊರೊನಾ ವಾರಿಯರ್ಸ್‍ಗೆ ಸೆಲ್ಯೂಟ್

    ಕಾರವಾರ ಬಂದರಿನಲ್ಲಿ ಮಿಂಚಿದ ವಿಕ್ರಮಾದಿತ್ಯ- ಕೊರೊನಾ ವಾರಿಯರ್ಸ್‍ಗೆ ಸೆಲ್ಯೂಟ್

    – ಕೇರಳ, ಮುಂಬೈ ಬಂದರುಗಳಲ್ಲೂ ನಮನ

    ನವದೆಹಲಿ: ದೇಶಾದ್ಯಂತ ಭಾರತೀಯ ಮೂರು ಪಡೆಯ ಯೋಧರಿಂದ ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸಲಾಗಿದ್ದು, ವಾಯು ಸೇನೆಯಿಂದ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಠಿಗೈದರೆ, ಅತ್ತ ಇಂಡಿಯನ್ ನೇವಿ ಹಡಗುಗಳು ದೀಪಾಲಂಕಾರದಿಂದ ಕಂಗೊಳಿಸುವ ಮೂಲಕ ಗೌರವ ಸಲ್ಲಿಸಿದವು. ಕಾರವಾರದ ನೌಕಾ ನೆಲೆಯಲ್ಲಿ ವಿಕ್ರಮಾದಿತ್ಯ ಸಹ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು.

    ಕೊರೊನಾ ವಾರಿಯರ್ಸ್ ಗೆ ಗೌರವ ಸಲ್ಲಿಸುವ ಸಲುವಾಗಿ ಇಂದು ಐಎನ್‍ಎಸ್ ವಿಕ್ರಮಾದಿತ್ಯ ಹಡಗಿನಲ್ಲಿ ಬಣ್ಣದ ಲೈಟುಗಳನ್ನು ಅಲಂಕಾರ ಮಾಡಿ ಪಟಾಕಿ ರಾಕೆಟ್ ಮೂಲಕ ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಮೂಲಕ ಕೃತಜ್ಞತೆ ಸಲ್ಲಿಸಲಾಯಿತು. ಕಾರವಾರದ ಅರಗಾದ ಕದಂಬ ನೌಕಾ ನೆಲೆಯಲ್ಲಿ ದೇಶದ ಅತಿದೊಡ್ಡ ಯುದ್ಧ ನೌಕೆ ವಿಕ್ರಮಾದಿತ್ಯ ಹಡಗಿನಲ್ಲಿ ಕೊರೊನಾ ವೈರಸ್ ವಿರುದ್ಧ ಹೋರಾಟಡುತ್ತಿರುವ ಕೊರೊನಾ ಯೋಧರಾದ ವೈದ್ಯರು, ಶುಶ್ರೂಷಕರು, ಪೊಲೀಸರು ಹಾಗೂ ನೈರ್ಮಲ್ಯ ಕೆಲಸಗಾರರಿಗೆ ಗೌರವ ಸಲ್ಲಿಸಲಾಯಿತು.

    ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಶುಶ್ರೂಷಕರು, ಪೊಲೀಸರು ಹಾಗೂ ನೈರ್ಮಲ್ಯ ಕೆಲಸಗಾರರಿಗೆ ಗೌರವ ಸಲ್ಲಿಸುವ ಸಲುವಾಗಿ ಕೇಂದ್ರ ಸರ್ಕಾರ ಈ ಕಾರ್ಯವನ್ನು ಹಮ್ಮಿಕೊಂಡಿತ್ತು. ಬೆಳಗ್ಗೆ ಭಾರತೀಯ ವಾಯು ಸೇನೆಯ ಹೆಲಿಕಾಪ್ಟರ್‍ಗಳು ಪುಷ್ಪವೃಷ್ಠಿಗೈದರೆ, ಸಂಜೆ ಇಂಡಿಯನ್ ನೇವಿ ಹಡಗುಗಳಲ್ಲಿ ದೀಪಾಲಂಕಾರ ಮಾಡಲಾಗಿತ್ತು.

    ದೇಶದಲ್ಲೆಡೆ ಅಭಿನಂದನೆ ಸಲ್ಲಿಸಲಾಗಿದ್ದು, ಭಾರತೀಯ ಮೂರು ಪಡೆಯ ಯೋಧರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಕೊರೊನಾ ವಾರಿಯರ್ಸ್ ಮೇಲೆ ಪುಷ್ಪವೃಷ್ಠಿ ಮಾಡಿದರು. ಚೆನ್ನೈ ರಾಜೀವ್ ಗಾಂಧಿ ಆಸ್ಪತ್ರೆ, ಬೆಂಗಳೂರಿನಲ್ಲಿ ಕಮಾಂಡ್, ವಿಕ್ಟೋರಿಯಾ ಆಸ್ಪತ್ರೆ, ದೆಹಲಿಯ ಏಮ್ಸ್, ರಾಜಸ್ಥಾನದ ಸಾವಾಯಿ ಮಾನ್‍ಸಿಂಗ್ ಆಸ್ಪತ್ರೆ, ಚಂಡೀಗಢ, ಗುವಾಹತಿ, ಪಾಟ್ನಾ, ಲೇಹ್‍ಗಳಲ್ಲಿ ಆಸ್ಪತೆಗಳ ಮೇಲೆ ಪುಷ್ಪವೃಷ್ಠಿ ಮಾಡಲಾಯಿತು.

    ಕಾರವಾರ, ಕೇರಳದ ಕೊಚ್ಚಿ ಬಂದರು, ಮುಂಬೈ ಹಾಗೂ ಇತರೆಡೆಗಳಲ್ಲಿ ಹಡಗುಗಳನ್ನು ದೀಪಾಲಂಕಾರದಿಂದ ಕಂಗೊಳಿಸುವಂತೆ ಮಾಡುವ ಮೂಲಕ ವಾರಿಯರ್ಸ್‍ಗೆ ಮನಮ ಸಲ್ಲಿಸಲಾಯಿತು.

  • ಸೇವೆ ಸಲ್ಲಿಸಿದ್ದಕ್ಕೂ ಸಾರ್ಥಕ, ನರ್ಸಿಂಗ್ ವೃತ್ತಿಗೆ ಬಂದಿದ್ದಕ್ಕೆ ಹೆಮ್ಮೆ – ಹೂಮಳೆಗೆ ಸಿಬ್ಬಂದಿ ಸಂತಸ

    ಸೇವೆ ಸಲ್ಲಿಸಿದ್ದಕ್ಕೂ ಸಾರ್ಥಕ, ನರ್ಸಿಂಗ್ ವೃತ್ತಿಗೆ ಬಂದಿದ್ದಕ್ಕೆ ಹೆಮ್ಮೆ – ಹೂಮಳೆಗೆ ಸಿಬ್ಬಂದಿ ಸಂತಸ

    ಬೆಂಗಳೂರು: ದೇಶಕ್ಕಾಗಿ ಕೊರೊನಾ ತೊಲಗಿಸಲು ನಾವು ಸೇವೆ ಮಾಡಿದ್ದಕ್ಕೂ ಸಾರ್ಥಕವಾಯಿತು. ನಮ್ಮ ಸೇವೆಯನ್ನು ಗುರುತಿಸಿ ಇಂದು ಭಾರತೀಯ ವಾಯು ಸೇನೆ ಗೌರವ ಸರ್ಮಪಿಸಿದೆ. ನಿಜಕ್ಕೂ ಇದು ಹೆಮ್ಮೆಯ ವಿಚಾರವಾಗಿದೆ ಎಂದು ವಿಕ್ಟೋರಿಯ ಆಸ್ಪತ್ರೆಯ ನರ್ಸ್ ಮತ್ತು ವೈದ್ಯರು ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ನರ್ಸ್, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನರ್ಸಿಂಗ್ ಆಫಿಸರ್ ಆಗಿ ಕೆಲಸ ಮಾಡಿದ್ದು, ಈ ವೃತ್ತಿಗೆ ಬಂದಿದ್ದಕ್ಕೂ ಹೆಮ್ಮೆಯಾಗುತ್ತದೆ. ನರ್ಸಿಂಗ್ ತುಂಬಾ ಜವಾಬ್ದಾರಿಯುತ ಕೆಲಸವಾಗಿದೆ. ಇಡೀ ದೇಶವೇ ಕೊರೊನಾ ಸಮಸ್ಯೆ ಬಗೆಹರಿಸಲು ಕಷ್ಟಪಡುತ್ತಿದೆ. ಈ ವೇಳೆ ನಾವು ಕೊರೊನಾ ವಿರುದ್ಧ ಹೋರಾಡಲು ಸೇವೆ ಸಲ್ಲಿಸುತ್ತಿದ್ದೀವಿ ಅನ್ನೋದು ತುಂಬಾ ಸಂತಸವಾಗುತ್ತಿದೆ ಎಂದರು.

    ಇಂದು ಕಮಾಂಡರ್ ಕೂಡ ಈ ರೀತಿ ನಮಗೆ ಗೌರವ ಸಲ್ಲಿಸಿದ್ದಾರೆ. ನಿಜಕ್ಕೂ ಇದು ತುಂಬಾ ಖುಷಿಯಾದ ವಿಚಾರ. ಸಾಮಾನ್ಯ ದಿನ ಕೆಲಸ ಮಾಡುವುದು ಬೇರೆ, ಆದರೆ ಕೊರೊನಾ ರೋಗಿಗಳನ್ನು ನೋಡಿಕೊಳ್ಳುವ ಮೂಲಕ ಇನ್ನೂ ನಮ್ಮ ಜವಾಬ್ದಾರಿಯನ್ನ ಹೆಚ್ಚಿಸಿದೆ. ಇದರಿಂದ ನನಗೆ ತುಂಬಾ ಖುಷಿಯಾಗಿದೆ ಎಂದು ಪೊಲೀಸರು, ವೈದ್ಯರು ಮತ್ತು ಮಾಧ್ಯಮದವರಿಗೆ ನರ್ಸ್ ಧನ್ಯವಾದ ತಿಳಿಸಿದರು.

    ಇತರೆ ನರ್ಸ್, ವೈದ್ಯರು ಮಾತನಾಡಿ, ಭಾರತೀಯ ವಾಯು ಸೇನೆ ನಮ್ಮ ಸೇವೆಯನ್ನು ಗುರುತಿಸಿ ಇಂದು ಗೌರವ ಸಲ್ಲಿಸಿದೆ. ಈ ಮೂಲಕ ನಾವು ಇಂತಹ ಕಷ್ಟದ ಸಂದರ್ಭದಲ್ಲಿ ಕೆಲಸ ಮಾಡಿದ್ದಕ್ಕೂ ಸಾರ್ಥಕ ಅನ್ನಿಸುತ್ತಿದೆ ಎಂದರು.

    ನಾನು ಒಂದೂವರೆ ತಿಂಗಳಿಂದ ಕೊರೊನಾ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಇಂದು ಭಾರತೀಯ ಸೇನೆ ಗೌರವ ಸಲ್ಲಿಸಿದ್ದರಿಂದ ನಮಗೆ ಸ್ಫೂರ್ತಿ ಸಿಕ್ಕಿದಂತಾಗಿದೆ. ಇನ್ನೂ ಹೆಚ್ಚಾಗಿ ಕೆಲಸ ಮಾಡಲು ಉತ್ತೇಜನ ಸಿಕ್ಕಿದಂತಾಗಿದೆ ಎಂದು ಸಂತಸಪಟ್ಟರು.

    ನಾವು ನಮ್ಮ ಮಕ್ಕಳು, ಪತಿ ಎಲ್ಲರನ್ನೂ ಬಿಟ್ಟು ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದೇವೆ. ಒಂದು ರೀತಿ ನಾವು ಕೊರೊನಾ ಕ್ವಾರಂಟೈನ್‍ನಲ್ಲಿದ್ದೇವೆ. ನನ್ನ ಸೇವೆಯನ್ನು ಗುರುತಿಸಿ ಭಾರತೀಯ ವಾಯು ಸೇನೆ ಗೌರವ ಸಲ್ಲಿಸಿದ್ದು, ತುಂಬಾ ಹೆಮ್ಮೆಯಾಗುತ್ತಿದೆ ಎಂದು ನರ್ಸ್ ಮತ್ತು ವೈದ್ಯರು ಹರ್ಷ ವ್ಯಕ್ತಪಡಿಸಿದರು.

  • ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ: ಸಚಿವ ಶ್ರೀರಾಮುಲು

    ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ: ಸಚಿವ ಶ್ರೀರಾಮುಲು

    ಹಾಸನ: ಕೋವಿಡ್ ಇರಬೇಕು ಇಲ್ಲ ನಾವಿರಬೇಕು. ಏಕೆಂದರೆ ಕೋವಿಡ್ ನಮ್ಮನ್ನು ಬಿಟ್ಟು ಅಷ್ಟು ಬೇಗ ಹೋಗಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.

    ಜನರ ಜೊತೆಗೆ ಸರ್ಕಾರ ಕೆಲಸ ಮಾಡುತ್ತಿದೆ. ಇಷ್ಟು ದಿನ ನಾವು ತಾಳ್ಮೆಯಿಂದ ಇದ್ದೇವೆ. ಮುಂದೆಯೂ ಯಾರು ತಾಳ್ಮೆ ಕಳೆದುಕೊಳ್ಳಬೇಡಿ. ಕೋವಿಡ್ ನಮ್ಮನ್ನು ಅಷ್ಟು ಬೇಗ ಬಿಟ್ಟು ಹೋಗಲ್ಲ. ನಾವು ಕೂಡ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಶ್ರೀರಾಮುಲು ಹೇಳಿದರು.

    ಕೊರಾನಾ ವಾರಿಯರ್ಸ್ ವಿರುದ್ಧ ಹಲ್ಲೆ ಮಾಡಿದರೆ 5 ವರ್ಷ ಜೈಲು ಗ್ಯಾರಂಟಿ. ಗ್ರೀನ್ ಝೋನ್ ಜಿಲ್ಲೆಗಳಲ್ಲಿ ಈಗಾಗಲೇ ಕೆಲವೊಂದು ಚಟುವಟಿಕೆ ಆರಂಭವಾಗಿದೆ. ಮೇ 3ರ ಬಳಿಕವೂ ಲಾಕ್‍ಡೌನ್‍ನಲ್ಲಿ ಸಾಕಷ್ಟು ಸಡಿಲಿಕೆ ಆಗಲಿದೆ. ಆದ್ದರಿಂದ ನಾವು ಆ ಬಳಿಕವೂ ಎಚ್ಚರಿಕೆಯಿಂದ ಇರಬೇಕು. ಕೊರೊನಾಗೆ ರಾಜ್ಯದಲ್ಲಿ 576 ಮಂದಿಗೆ ಕೊರೊನಾ ಸೋಂಕಿತರಿದ್ದು, ಸಾಕಷ್ಟು ಮಂದಿ ಕೊರೊನಾದಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕೆಲ ತಜ್ಞರು ನನ್ನನ್ನು ಭೇಟಿ ಮಾಡಿ ಕೆಲ ಸಲಹೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿ ಮತ್ತೆ ಪ್ಲಾಸ್ಮಾ ತೆರಪಿ ಚಿಕಿತ್ಸೆ ಮುಂದುವರಿಸುತ್ತೇವೆ. ಇದರಿಂದ ನಮಗೆ ಒಳ್ಳೆಯದಾಗುತ್ತಿದೆ ಎಂದರು.

    ರಾಜ್ಯದಲ್ಲಿ ಪೊಲೀಸರು, ವೈದ್ಯರು, ನರ್ಸ್, ಮಾಧ್ಯಮ ಮಿತ್ರರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಇವರ ಮೇಲೆ ಹಲ್ಲೆ ಮಾಡಿದವರಿಗೆ 5 ವರ್ಷ ಜೈಲು ಶಿಕ್ಷೆ ಆಗಲಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಕ್ಲಿನಿಕಲ್ ಟ್ರಯಲ್ ಆರಂಭ ಮಾಡಿದ್ದೇವೆ. ಆರಂಭ ಯಶಸ್ಸು ನಮಗೆ ಲಭಿಸಿದ್ದು, ಮುಂದಿನ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ಇದನ್ನು ಆರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

  • ಕೊರೊನಾ ವಾರಿಯರ್ಸ್ ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ

    ಕೊರೊನಾ ವಾರಿಯರ್ಸ್ ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ

    ಬೆಂಗಳೂರು: ಕೊರೊನಾ ವಾರಿಯರ್ಸ್ ಕೋವಿಡ್-19 ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ಪರಿಹಾರ ನೀಡುವುದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.

    ಇಡೀ ದೇಶವನ್ನೇ ಮಹಾಮಾರಿಯಾಗಿ ಕಾಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಆಸ್ಪತ್ರೆ ಸಿಬ್ಬಂದಿ, ಪೊಲೀಸರು, ಆಶಾ ಕಾರ್ಯಕರ್ತೆರು ಸೇರಿಂದಂತೆ ಜೀವ ಹಂಗು ತೊರೆದು ಹೋರಾಡುತ್ತಿದ್ದಾರೆ. ಹೀಗಾಗಿ ಒಂದು ವೇಳೆ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸುವಾಗ ಸೋಂಕಿಗೆ ಗುರಿಯಾಗಿ ಸಾವನ್ನಪ್ಪಿದ್ದರೆ, ಅವರಿಗೆ 30 ಲಕ್ಷ ಪರಿಹಾರ ನೀಡುವುದಕ್ಕೆ ಸಿಎಂ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.

    ಕೊರೊನಾ ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತರು, ಅಂಗನವಾಡಿ ಸಹಾಯಕರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಸಿಬ್ಬಂದಿ ಕೋವಿಡ್-19 ಸೋಂಕಿಗೆ ಒಳಪಟ್ಟು ಮೃತಪಟ್ಟರೆ 30 ಲಕ್ಷ ರೂಪಾಯಿಗಳ ಪರಿಹಾರಕ್ಕೆ ಸಿಎಂ ಯಡಿಯೂರಪ್ಪ ಇಂದು ಅನುಮೋದನೆ ನೀಡಿದ್ದಾರೆ.

  • ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆ- ಇಬ್ಬರ ಬಂಧನ

    ಆಶಾ ಕಾರ್ಯಕರ್ತೆಗೆ ಕೊಲೆ ಬೆದರಿಕೆ- ಇಬ್ಬರ ಬಂಧನ

    ಉಡುಪಿ: ಜಿಲ್ಲೆಯಲ್ಲಿ ಮತ್ತೊಮ್ಮೆ ಕೊರೊನಾ ವಾರಿಯರ್ಸ್ ಮೇಲೆ ಬೆದರಿಕೆ ಪ್ರಕರಣ ಮರುಕಳಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ಆಶಾ ಕಾರ್ಯಕರ್ತೆಯನ್ನ ಬೆದರಿಸಿದ ಘಟನೆ ನಡೆದಿದೆ.

    ಕೊರೊನಾ ಲಾಕ್‍ಡೌನ್ ನಡುವೆ ಬೆಂಗಳೂರಿಂದ ಬಂದಿರುವ ಯುವಕ ಸಂದೀಪ್ ಮೇಸ್ತ ಎಂಬಾತನಿಗೆ ಆಶಾ ಕಾರ್ಯಕರ್ತೆ ಲಕ್ಷ್ಮೀ ಹೋಂ ಕ್ವಾರಂಟೈನ್ ವಿಧಿಸಿದ್ದರು. ಆದರೆ ಸಂದೀಪ್ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುತ್ತಿದ್ದ. ಹೀಗಾಗಿ ಸಂದೀಪ್ ನನ್ನ ಮನೆಯಲ್ಲಿರುವಂತೆ ಸೂಚನೆ ನೀಡಿದ್ದೇ ತಡ ಸಂದೀಪ್ ಹಾಗೂ ಆತನ ಗೆಳೆಯ ಮಹೇಶ್ ಖಾರ್ವಿ ಕೊಲೆ ಬೆದರಿಕೆ ಒಡ್ಡಿದ್ದಾರೆ.

    ಕುಂದಾಪುರ ತಾಲೂಕಿನ ಮುದ್ದುಗಡ್ಡೆಯಲ್ಲಿ ಬದುಕಲು ಬಿಡಲ್ಲ ಎಂದು ಬೆದರಿಕೆ ಒಡ್ಡಲಾಗಿದೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

    ಕಳೆದ ಕೆಲ ದಿನದ ಹಿಂದೆ 22ರಂದು ಉಡುಪಿ ಜಿಲ್ಲೆಯ ಪಡುಬಿದ್ರಿ ತಾಲೂಕಿನ ಉಚ್ಚಿಲದಲ್ಲಿ ಆರೋಗ್ಯ ಸಹಾಯಕಿ ಶ್ಯಾಮಲಾ ಅವರ ಮೇಲೆ ಹಲ್ಲೆ ಯತ್ನ, ಜೀವ ಬೆದರಿಕೆ ಘಟನೆ ನಡೆದಿತ್ತು. ಮಾಸ್ಕ್ ಹಾಕಿ ಎನ್ನುವ ಬುದ್ಧಿ ಮಾತು ಹಾಗೂ ಹೊರ ಜಿಲ್ಲೆಯಿಂದ ಬರುವ ಬಗ್ಗೆ ಪ್ರಶ್ನಿಸಿದಕ್ಕೆ ಈ ಪ್ರಕರಣ ನಡೆದಿತ್ತು.

    ವಾರಿಯರ್ಸ್ ಮೇಲೆ ಬೆದರಿಕೆ, ಹಲ್ಲೆ ನಡೆದರೆ ಕಠಿಣ ಶಿಕ್ಷೆಗೆ ಒಳಪಡಿಸುವುದಾಗಿ ಸರ್ಕಾರ ಎಚ್ಚರಿಕೆ ನೀಡಿದ ಬೆನ್ನಲ್ಲೇ ಮತ್ತೆ ಬೆದರಿಕೆ ಪ್ರಕರಣ ನಡೆದಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಉಸ್ತುವಾರಿ ಜಿಲ್ಲೆಯಲ್ಲಿ ಎರಡು ಘಟನೆಗಳು ನಡೆದು ಪ್ರಕರಣಗಳು ದಾಖಲಾಗಿದೆ.

  • ಆರೋಗ್ಯ ಸಿಬ್ಬಂದಿ ರಕ್ಷಣೆಗೆ ನಿಂತ ವಿದ್ಯಾ ಬಾಲನ್

    ಆರೋಗ್ಯ ಸಿಬ್ಬಂದಿ ರಕ್ಷಣೆಗೆ ನಿಂತ ವಿದ್ಯಾ ಬಾಲನ್

    ನವದೆಹಲಿ: ಕೊರೊನಾ ವಿರುದ್ಧ ಹೋರಾಡಲು ಹಲವು ನಟ, ನಟಿಯರು ವಿವಿಧ ರೀತಿಯಲ್ಲಿ ಸಹಾಯ ಮಾಡುತ್ತಿದ್ದು, ಕೆಲವರು ಧನಸಹಾಯ ಮಾಡಿದರೆ, ಇನ್ನೂ ಕೆಲವರು ಅಸಹಾಯಕರಿಗೆ ಅಗತ್ಯ ವಸ್ತುಗಳನ್ನು ನಿಡುತ್ತಿದ್ದಾರೆ. ಇನ್ನಷ್ಟು ಜನ ತಾವೇ ಕೊರೊನಾ ವಾರಿಯರ್ಸ್ ಆಗಿ ಹೋರಾಡುತ್ತಿದ್ದಾರೆ. ಆದರೆ ಬಾಲಿವುಡ್ ಖ್ಯಾತ ನಟಿ ವಿದ್ಯಾಬಾಲನ್ ಅವರು ಕೊರೊನಾ ವಾರಿಯರ್ಸ್‍ಗೆ ಸಹಾಯ ಮಾಡಲು ನಿಂತಿದ್ದಾರೆ.

    ಈಗಾಗಲೇ ದೇಶಾದ್ಯಂತ ಬಹುತೇಕ ನಟ, ನಟಿಯರು ತಮ್ಮದೇಯಾದ ಕೊಡುಗೆ ನೀಡುತ್ತಿದ್ದು, ಹಲವರು ಪಿಎಂ ಕೇರ್ಸ್‍ಗೆ ಹಣ ಸಂದಾಯ ಮಾಡುವ ಮೂಲಕ ನೆರವಾಗುತ್ತಿದ್ದಾರೆ. ಇನ್ನೂ ಕೆಲವರು ಸಂಕಷ್ಟದಲ್ಲಿರುವ ಸಿನಿಮಾ ದಿನಗೂಲಿ ಕಾರ್ಮಿಕರಿಗೆ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲಸ ನಟಿಯರು ತಾವೇ ವೈದ್ಯರಾಗಿ, ನರ್ಸ್‍ಗಳಾಗಿ ಕಾರ್ಯನಿರ್ವಹಿಸುವ ಮೂಲಕ ಜೀವ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ನಟಿ ವಿದ್ಯಾಬಾಲನ್ ವೈದ್ಯರಿಗೆ ಹಾಗೂ ಆರೋಗ್ಯ ಸಿಬ್ಬಂದಿಗೆ ಪಿಪಿಇ ಕಿಟ್ ನೀಡಲು ಮುಂದಾಗಿದ್ದಾರೆ.

    ಹಗಲು-ರಾತ್ರಿ ಎನ್ನದೆ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ಮತ್ತು ಆರೋಗ್ಯ ಸಿಬ್ಬಂದಿಗೆ ಬೇಕಾಗುವ ಅಗತ್ಯ ಪಿಪಿಇ ಕಿಟ್‍ಗಳನ್ನು ನೀಡಿ ಸಹಾಯ ಮಾಡಿದ್ದಾರೆ. ಸುಮಾರು ಒಂದು ಸಾವಿರಕ್ಕೂ ಅಧಿಕ ಪಿಪಿಇ ಕಿಟ್‍ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

    ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ನಮಸ್ತೆ, ಇಂತಹ ಕಠಿಣ ಪರಿಸ್ಥಿತಿಯಲ್ಲಿ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಯ ರಕ್ಷಣೆಗಾಗಿ ಪಿಪಿಇ ಕಿಟ್‍ಗಳ ಅಗತ್ಯವಿದೆ. ಹೀಗಾಗಿ ನಾವು ಸಹಾಯ ಮಾಡಬೇಕು. ನಾನು 1000 ಪಿಪಿಇ ಕಿಟ್‍ಗಳನ್ನು ಕೊಡುಗೆಯಾಗಿ ನೀಡುತ್ತಿದ್ದೇನೆ. ಅಲ್ಲದೆ ಟ್ರಿಂಗ್ ಜೊತೆಗಿನ ಸಹಭಾಗಿತ್ವದಲ್ಲಿ ಒಂದು ಸಾವಿರ ಪಿಪಿಇ ಕಿಟ್ ತಯಾರಿಗೆ ಸಿದ್ಧತೆ ನಡೆಸಿದ್ದೇವೆ. ಇಂತಹ ಕಠಿಣ ಸಂದರ್ಭದಲ್ಲಿ ಇದು ನಮ್ಮ ವೈದ್ಯರಿಗೆ ಅಗತ್ಯವಿದೆ. ಅಲ್ಲದೆ ನಿಮ್ಮಲ್ಲೂ ಮನವಿ ಮಾಡುತ್ತೇನೆ. ನೀವು ಸಹ ಸಹಾಯ ಮಾಡಿದಲ್ಲಿ ವಿಡಿಯೋ ಸಂದೇಶದ ಮೂಲಕ ವೈಯಕ್ತಿಕವಾಗಿ ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ವಿಡಿಯೋ ನಿಮ್ಮೊಂದಿಗೆ ಶಾಶ್ವತವಾಗಿ ನೆನಪಿನಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

    ವಿದ್ಯಾ ಬಾಲನ್ ಇದಕ್ಕಾಗಿ ಒಂದು ತಂಡವನ್ನೇ ಕಟ್ಟಿಕೊಂಡಿದ್ದು, ಮನಿಶ್ ಚಂದ್ರ ಮತ್ತು ನಿರ್ಮಾಪಕ ಅತುಲ್ ಕಸ್ಬೇಕರ್ ಸಹಭಾಗಿತ್ವದಲ್ಲಿ ಈ ಕಾರ್ಯವನ್ನು ಮಾಡಿದ್ದಾರೆ. ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ವಿದ್ಯಾಬಾಲನ್, ಇಂತಹ ಸಮಯದಲ್ಲಿ ಆರೋಗ್ಯ ಸಿಬ್ಬಂದಿ ನಮಗೆ ಬಾರ್ಡರ್‍ನಲ್ಲಿ ಹೋರಾಡುವ ಸೈನಿಕರಿದ್ದಂತೆ. ಆದರೆ ಆರೋಗ್ಯ ಸೈನಿಕರಿಗೆ ಸದ್ಯ ಪಿಪಿಇ ಕಿಟ್‍ಗಳ ಕೊರತೆ ಕಾಡುತ್ತಿದ್ದು, ಇವುಗಳು ಹೆಚ್ಚು ಸಿಗುವಂತೆ ಮಾಡಬೇಕಿದೆ ಎಂದಿದ್ದಾರೆ.

    ಒಂದು ವೇಳೆ ಒಂದು ಯುನಿಟ್‍ನ ಒಬ್ಬರಿಗೆ ಕೊರೊನಾ ಸೋಂಕು ತಗುಲಿದರೂ 10-12 ಜನ ಆರೋಗ್ಯ ಸಿಬ್ಬಂದಿಯನ್ನು 2ರಿಂದ 3 ವಾರಗಳ ಕಾಲ ಕ್ವಾರಂಟೈನ್ ಮಾಡುತ್ತಾರೆ. ಆಗ ಆಸ್ಪತ್ರೆಯಲ್ಲಿ ವೈದ್ಯಕೀಯ ಸಿಬ್ಬಂದಿಯ ಕೊರತೆ ಕಾಡುತ್ತದೆ. ಹೀಗಾಗಿ ನನ್ನೊಂದಿಗೆ ಕೈ ಜೋಡಿಸಿ ಎಂದು ಮನವಿ ಮಾಡಿದ್ದಾರೆ. ನೀವು ಯಾವ ರೀತಿಯಾಗಿ ಸಹಾಯ ಮಾಡಬಹುದು ಎಂಬುದನ್ನು ಸಹ ವಿದ್ಯಾಬಾಲನ್ ತಮ್ಮ ವಿಡಿಯೋದಲ್ಲಿ ತಿಳಿಸಿದ್ದಾರೆ.

  • ಜಾತ್ರೆ ರದ್ದು – ‘ನಡೆದಾಡುವ ದೇವರಿ’ಗೆ ಹುಕ್ಕೇರಿ ಹಿರೇಮಠದಿಂದ ದಾಸೋಹ

    ಜಾತ್ರೆ ರದ್ದು – ‘ನಡೆದಾಡುವ ದೇವರಿ’ಗೆ ಹುಕ್ಕೇರಿ ಹಿರೇಮಠದಿಂದ ದಾಸೋಹ

    ಚಿಕ್ಕೋಡಿ: ಲಾಕ್‍ಡೌನ್ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ನಡೆಯಬೇಕಿದ್ದ ಜಾತ್ರೆಯನ್ನು ರದ್ದು ಮಾಡಿ ಕೊರೊನಾ ವಾರಿಯರ್ಸ್‍ಗೆ ಅನ್ನ ದಾಸೋಹ ಮಾಡಿ ಹುಕ್ಕೇರಿ ಹಿರೇಮಠ ಮಾದರಿಯಾಗಿದೆ.

    ಪ್ರತಿ ವರ್ಷ ಏಪ್ರಿಲ್ 24ರಿಂದ ಹುಕ್ಕೇರಿ ಹಿರೇಮಠದಲ್ಲಿ ಗುರುಶಾಂತೇಶ್ವರ ಜಾತ್ರೆ ನಡೆಯಬೇಕಿತ್ತು. ಆದರೆ ಜಾತ್ರೆಯನ್ನು ಈ ಬಾರಿ ರದ್ದು ಮಾಡಲಾಗಿದೆ. ಜಾತ್ರೆ ರದ್ದಾದರೂ ಕೊರೊನಾ ವಾರಿಯರ್ಸ್‍ಗಳಾದ ವೈದ್ಯರು, ಪೌರ ಕಾರ್ಮಿಕರು, ಪೊಲೀಸರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಅನ್ನ ದಾಸೋಹವನ್ನು ಆಯೋಜಿಸಲಾಗಿತ್ತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಎಲ್ಲ ಕೊರೊನಾ ವಾರಿಯರ್ಸ್‍ಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.

    ಈ ಸಂದರ್ಭದಲ್ಲಿ ಮಾತನಾಡಿದ ಹುಕ್ಕೇರಿ ಹಿರೇಮಠದ ಶ್ರೀಗಳು, ಪ್ರತಿ ವರ್ಷ ನಾವು ದೇವರಿಗೆ ನೈವೈದ್ಯ ಮಾಡುತ್ತಿದ್ದೆವು. ಆದರೆ ಈ ಬಾರಿ ದೇವಾಲಯದ ಬಾಗಿಲುಗಳು ಮುಚ್ಚಿ ಹೋಗಿವೆ. ಹೀಗಾಗಿ ಈ ವರ್ಷ ನಡೆದಾಡುವ ದೇವರುಗಳಾದ ಪೊಲೀಸರು, ವೈದ್ಯರು, ಪೌರ ಕಾರ್ಮಿಕರಿಗೆ, ಆಶಾ ಕಾರ್ಯಕರ್ತರಿಗೆ ಅನ್ನ ದಾಸೋಹ ನೀಡಿದ್ದು ಹೆಮ್ಮೆ ಅನಿಸುತ್ತದೆ. ಈ ರೀತಿಯ ಕಠಿಣ ಸಂದರ್ಭದಲ್ಲಿ ಕಾಪಾಡುತ್ತಿರುವ ಇವರೇ ನಿಜವಾದ ದೇವರು. ಇವರೆಲ್ಲರ ಸುರಕ್ಷತೆಗೆ ಸರ್ಕಾರ ಆದ್ಯತೆ ನೀಡಬೇಕು ಎಂದು ಹೇಳಿದರು.

  • ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

    ಕಿಮ್ಸ್ ಆವರಣದಲ್ಲಿ ಮರಳು ಶಿಲ್ಪದ ಮೂಲಕ ಕೊರೊನಾ ಸೇನಾನಿಗಳಿಗೆ ಗೌರವ

    ಹುಬ್ಬಳ್ಳಿ: ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರು, ನರ್ಸ್, ಪೊಲೀಸರು, ಪೌರಕಾರ್ಮಿಕರು ಹಾಗೂ ಮಾಧ್ಯಮದವರಿಗೆ ಮರಳು ಶಿಲ್ಪದ ಮೂಲಕ ಗೌರವ ಸಲ್ಲಿಸಲಾಗಿದೆ.

    ನಗರದ ಕಿಮ್ಸ್ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಿರುವ ಈ ವಿಶೇಷ ಮರಳು ಶಿಲ್ಪವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ಜಗದೀಶ್ ಶೆಟ್ಟರ್ ವೀಕ್ಷಿಸಿದರು.

    ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ದಿನದ 24 ಗಂಟೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೊರೊನಾ ಸೊಂಕಿತರು ಹಾಗೂ ಪ್ರಾಥಮಿಕ ಹಂತದಕ್ಕೆ ಸಂಪರ್ಕಕ್ಕೆ ಬಂದವರ ವಿವರವನ್ನು ಕಲೆಹಾಕುವ ಕಾರ್ಯದಲ್ಲಿ ತೊಡಗಿದ್ದಾರೆ. ವೈದ್ಯರು ಜೀವದ ಹಂಗು ತೋರದು ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಕಿಮ್ಸ್ ವೈದ್ಯರ ಪರಿಶ್ರಮದಿಂದಾಗಿ ಜಿಲ್ಲೆಯ ಇಬ್ಬರು ಕೋವಿಡ್-19 ರೋಗಿಗಳು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಧಾರವಾಡ ಜಿಲ್ಲಾಡಳಿತ, ಪೊಲೀಸರು, ಪಾಲಿಕೆ ಪೌರಕಾರ್ಮಿಕರು ಸಹ ಸಮರ್ಪಣಾ ಭಾವದಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಇವರ ಕಾರ್ಯಕ್ಕೆ ಇತರೆ ಸರ್ಕಾರೇತರ ಸಂಘ ಸಂಸ್ಥೆಗಳು ಕೈ ಜೋಡಿಸಿದ್ದಾರೆ. ಮಾಧ್ಯಮದವರು ಕೊರೊನಾ ವಿರುದ್ದ ಹೋರಾಟದಲ್ಲಿ ಸಕ್ರಿಯವಾಗಿವ ಭಾಗವಹಿಸಿ ಜನರಲ್ಲಿ ತಿಳಿವಳಿಕೆ ಮೂಡಿಸುತ್ತಿದ್ದಾರೆ. ಇವರೆಲ್ಲರಿಗೂ ಗೌರವ ಸಮರ್ಪಿಸುವ ನಿಟ್ಟಿನಲ್ಲಿ ಕಲಾವಿದ ಮಂಜುನಾಥ ಹಿರೇಮಠ ಮರಳು ಶಿಲ್ಪ ರಚನೆ ಮಾಡಿದ್ದಾರೆ. ಕಲಾಕೃತಿ ಸುಂದರವಾಗಿ ಮೂಡಿ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ
    ಕೇಂದ್ರ ಸರ್ಕಾರದ ನಿಯಮಗಳಂತೆ ಮೊದಲ ಹಂತದಲ್ಲಿ ಗ್ರಾಮೀಣ ಭಾಗದ ಹಾಗೂ ಅಗತ್ಯ ವಸ್ತುಗಳು ನಿರ್ಮಿಸುವ ಕೈಗಾರಿಕೆ ತೆರೆಯಲು ಅನುಮತಿ ನೀಡಲಾಗಿದೆ. ಇದರ ಪರಿಣಾಮಗಳನ್ನು ಅವಲೋಕಿಸಿ ಹಂತ ಹಂತವಾಗಿ ಉದ್ದಿಮೆಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದರು.

    ಹುಬ್ಬಳ್ಳಿ ಕಂಟ್ಯಾಮಿನೇಟೆಡ್ ಜೋನ್ ಹೊರತು ಪಡಿಸಿ ಬೇರೆ ಸ್ಥಳ ಹಾಗೂ ಧಾರವಾಡ ಬೇಲೂರಿನಲ್ಲಿ ಕೈಗಾರಿಕೆಗಳನ್ನು ತೆರೆದು ಆರ್ಥಿಕ ಚಟುವಟಿಕೆಗಳು ಪಾರಂಭವಾಗಲಿ ಎಂಬ ಆಶಯ ಸರ್ಕಾರಕ್ಕೆ ಇದೆ. ಕಂಟ್ಯಾಮಿನೇಟೆಡ್ ಜೋನ್‍ನ ಕೊವೀಡ್-19 ರೋಗಿಯ ವರದಿ ನೆಗೆಟಿವ್ ಬಂದರೆ ಅಲ್ಲಿಯೂ ಉದ್ಯಮೆಗಳನ್ನು ತೆರೆಯಬಹುದು ಎಂಬ ಆಶಯ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ಶಾಸಕರಾದ ಅಬ್ಬಯ್ಯ ಪ್ರಸಾದ್, ಶ್ರೀನಿವಾಸ ಮಾನೆ, ಎಸ್.ವಿ ಸಂಕನೂರ, ಜಿಲ್ಲಾಧಿಕಾರಿ ದೀಪಾ ಚೋಳನ್, ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಆರ್. ದಿಲೀಪ್, ಪಾಲಿಕೆ ಆಯುಕ್ತ ಡಾ. ಸುರೇಶ್ ಇಟ್ನಾಳ್, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರತಾನಿ, ಹುಬ್ಬಳ್ಳಿ ನಗರ ತಹಶೀಲ್ದಾರ್ ಶಶಿಧರ್ ಮಾಡ್ಯಾಳ, ಕಲಾವಿದ ಮಂಜುನಾಥ ಹಿರೇಮಠ ಸೇರಿದಂತೆ ಇತರರು ಉಪಸ್ಥಿತರಿದ್ದರು.

  • ಕೊರೊನಾ ವಾರಿಯರ್ಸ್‍ಗಾಗಿ 8 ಐಶಾರಾಮಿ ಹೋಟೆಲ್‍ಗಳನ್ನೇ ಬಿಟ್ಟುಕೊಟ್ಟ ರೋಹಿತ್ ಶೆಟ್ಟಿ

    ಕೊರೊನಾ ವಾರಿಯರ್ಸ್‍ಗಾಗಿ 8 ಐಶಾರಾಮಿ ಹೋಟೆಲ್‍ಗಳನ್ನೇ ಬಿಟ್ಟುಕೊಟ್ಟ ರೋಹಿತ್ ಶೆಟ್ಟಿ

    ಮುಂಬೈ: ಕೊರೊನಾ ವೈರಸ್ ಹಾವಳಿಗೆ ಭಾರತ ಮಾತ್ರವಲ್ಲದೇ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ದೇಶಾದ್ಯಂತ ಲಾಕ್‍ಡೌನ್ ಜಾರಿಮಾಡಲಾಗಿದೆ. ಲಾಕ್‍ಡೌನ್ ಅಂತ ಎಲ್ಲರೂ ಮನೆಯಲ್ಲಿಯೇ ಇದ್ದಾರೆ. ಆದರೆ ವೈದ್ಯರು, ಸ್ವಚ್ಛತಾ ಕಾರ್ಮಿಕರು, ಪೊಲೀಸರು ಹಾಗೂ ಅಗತ್ಯ ಸೇವೆಗಳಲ್ಲಿ ಕಾರ್ಯನಿರ್ವಹಿಸುವ ಮಂದಿ ಮಾತ್ರ ಕೊರೊನಾ ವಿರುದ್ಧ ಹೋರಾಡುತ್ತಲೇ ಇದ್ದಾರೆ. ಸೆಲೆಬ್ರಿಟಿಗಳು ಆರೋಗ್ಯ ಯೋಧರ ಸಹಾಯಕ್ಕೆ ದೇಣಿಗೆ ನೀಡಿದ್ದಾರೆ. ಹೀಗೆ ಕೊರೊನಾ ಯೋಧರಿಗೆ ನೆರವಿಗೆ ಮುಂದೆ ಬಂದವರ ಪಟ್ಟಿಗೆ ಬಾಲಿವುಡ್‍ನ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಕೂಡ ಈಗ ಸೇರಿಕೊಂಡಿದ್ದಾರೆ.

    ಹೌದು. ವೈದ್ಯರು, ಸ್ವಚ್ಛತಾ ಕಾರ್ಮಿಕರು, ಪೊಲೀಸರು, ಆರೋಗ್ಯ ಕಾರ್ಯಕರ್ತರು ಈ ಮಹಾಮಾರಿ ಹರಡಿರುವ ಸಂಕಷ್ಟದ ಪರಿಸ್ಥಿತಿಯಲ್ಲೂ ತಮ್ಮ ಜೀವವನ್ನು ಪಣಕ್ಕಿಟ್ಟು ದೇಶ ಸೇವೆಯಲ್ಲಿ ತೊಡಗಿದ್ದಾರೆ. ಹೀಗಾಗಿ ಇಂತಹ ಕಷ್ಟದ ಸಮಯದಲ್ಲಿ ಹಗಲು-ರಾತ್ರಿ ದುಡಿಯುತ್ತಿರುವ ಪೊಲೀಸರ ಸಹಾಯಕ್ಕೆ ರೋಹಿತ್ ಶೆಟ್ಟಿ ಧಾವಿಸಿದ್ದಾರೆ. ಪೊಲೀಸರಿಗಾಗಿ ತಮ್ಮ 8 ಐಶಾರಾಮಿ ಹೋಟೆಲ್ ಅನ್ನೇ ರೋಹಿತ್ ಬಿಟ್ಟುಕೊಟ್ಟಿದ್ದಾರೆ. ಹೆಚ್ಚಾಗಿ ರೋಹಿತ್ ಶೆಟ್ಟಿ ಪೊಲೀಸರ ಶೌರ್ಯ, ಸಾಹಸಭರಿತ ಕತೆಗಳನ್ನೇ ಸಿನಿಮಾ ಮಾಡುತ್ತಾರೆ. ಪೊಲೀಸರ ಮೇಲಿರುವ ವಿಶೇಷ ಪ್ರೀತಿ, ಗೌರವದಿಂದ ಇಂದು ಪೊಲೀಸರ ಸಹಾಯಕ್ಕೆ ಧಾವಿಸಿದ್ದಾರೆ.

    https://twitter.com/iaRohitShetty/status/1252640598693199872

    ಮುಂಬೈನಲ್ಲಿನ ತಮ್ಮ 8 ಹೋಟೆಲ್‍ಗಳನ್ನು ಪೊಲೀಸರಿಗಾಗಿ ಉಚಿತವಾಗಿ ರೋಹಿತ್ ಬಿಟ್ಟುಕೊಟ್ಟಿದ್ದಾರೆ. ಪೊಲೀಸರಿಗಾಗಿ ಈ ಹೋಟೆಲ್‍ಗಳಲ್ಲಿ ಉಳಿಯಲು ವ್ಯವಸ್ಥೆ ಮಾಡಿದ್ದು ಮಾತ್ರವಲ್ಲದೇ ಊಟದ ವ್ಯವಸ್ಥೆಯನ್ನೂ ಮಾಡಿದ್ದಾರೆ. ಹೀಗಾಗಿ ಈ ಬಗ್ಗೆ ಮುಂಬೈ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ರೋಹಿತ್ ಶೆಟ್ಟಿ ನೆರವಿಗೆ ಧನ್ಯವಾದ ಹೇಳಿದ್ದಾರೆ.

    ಈ ಹಿಂದೆ ಬಾಲಿವುಡ್ ನಟ ಸೋನು ಸೂದ್ ಅವರು ತಮ್ಮ ಪಂಚತಾರಾ ಹೋಟೆಲ್ ಅನ್ನು ಕೋವಿಡ್-19 ವಿರುದ್ಧ ಹೋರಾಡುತ್ತಿರುವ ವೈದ್ಯರಿಗಾಗಿ ಬಿಟ್ಟುಕೊಟ್ಟಿದ್ದರು. ಹಾಗೆಯೇ ಬಿಟೌನ್ ಕಿಂಗ್‍ಖಾನ್ ಶಾರುಖ್ ಖಾನ್ ತಮ್ಮ ನಾಲ್ಕು ಅಂತಸ್ತಿನ ಕಚೇರಿಯನ್ನು ಕೊರೊನಾ ರೋಗಿಗಳ ಚಿಕಿತ್ಸೆಗೆ ಬಿಟ್ಟುಕೊಟ್ಟಿದ್ದರು. ಈಗ ರೋಹಿತ್ ಶೆಟ್ಟಿ ಅವರು ಪೊಲೀಸರಿಗಾಗಿ 8 ಹೋಟೆಲ್‍ಗಳನ್ನು ಬಿಟ್ಟುಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಮಹಾಮಾರಿ ವಿರುದ್ಧದ ಹೋರಾಟಕ್ಕೆ ದೇಶದ ಕೊರೊನಾ ವಾರಿಯರ್ಸ್ ಜೊತೆ ಕೈಜೋಡಿಸಿದ್ದಾರೆ.