Tag: Coronavirus

  • ಉಡುಪಿ ಜಿಲ್ಲಾಡಳಿತಕ್ಕೆ 10 ಲಕ್ಷ ರೂ. ಮೌಲ್ಯದ ದಿನಸಿ ಹಸ್ತಾಂತರಿಸಿದ ಪುತ್ತಿಗೆ ಶ್ರೀ

    ಉಡುಪಿ ಜಿಲ್ಲಾಡಳಿತಕ್ಕೆ 10 ಲಕ್ಷ ರೂ. ಮೌಲ್ಯದ ದಿನಸಿ ಹಸ್ತಾಂತರಿಸಿದ ಪುತ್ತಿಗೆ ಶ್ರೀ

    ಉಡುಪಿ: ಕೊರೊನಾ ವೈರಸ್ ದೇಶವನ್ನು ಸ್ತಬ್ಧ ಮಾಡಿದ್ದು, ಜನ ಸಂಕಷ್ಟದಲ್ಲಿದ್ದಾರೆ. ಜನೋಪಯೋಗಕ್ಕಾಗಿ ನಮ್ಮ ಮಠದ ವತಿಯಿಂದ ಹತ್ತು ಲಕ್ಷ ದೇಣಿಗೆ ಕೊಡುತ್ತಿದ್ದೇವೆ ಎಂದು ಉಡುಪಿ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಕೊರೊನಾ ವೈರಸ್ ಅನ್ನು ಉದ್ದೇಶಪೂರ್ವಕವಾಗಿ ಪಸರಿಸಲಾಗುತ್ತಿದೆ. ಈ ಬಗ್ಗೆ ನಮಗೆ ಅನುಮಾನ ಇದೆ. ಕೊರೊನಾ ನರಕಾಸುರನಂತೆ ಭಾಸವಾಗುತ್ತಿದೆ. ಕೊರೊನಾವನ್ನು ಉಲ್ಟಾ ಹೇಳಿದರೆ ನರಕ ಎಂದಾಗುತ್ತದೆ. ನರಕಾಸುರನ ಸಂಹಾರ ಮಾಡಲು ಕೃಷ್ಣನ ಅವತಾರ ಎತ್ತಿ ಬರಬೇಕಾಗಿದೆ. ಮಾನವ ಸಮುದಾಯ ಮಾಡಿದ ತಪ್ಪುಗಳಿಂದ ಈ ಪರಿಸ್ಥಿತಿ ಬಂದಿದೆ ಎಂದರು. ಇದೇ ವೇಳೆ ಐದು ಲಕ್ಷ ರೂ. ಮೌಲ್ಯದ ದಿನಸಿಯನ್ನು ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರ್ ಅವರ ಮೂಲಕ ಸ್ವಾಮೀಜಿ ಹಸ್ತಾಂತರ ಮಾಡಿದರು.

    ನಾವು ಪ್ರಾಚೀನ ಮೌಲ್ಯಗಳನ್ನು ಬದಿಗೆ ಇಟ್ಟಿದ್ದೇವೆ. ಅನಗತ್ಯ ಪ್ರಾಣಿ ಸಂಹಾರದಿಂದ ಕೊರೊನಾ ಬಂದಿದೆ. ಮನುಷ್ಯನ ದೇಹಕ್ಕೆ ಸಸ್ಯಾಹಾರವೇ ಸೂಕ್ತ. ಮನುಷ್ಯ ಬದುಕಲು ಮಾಂಸಾಹಾರದ ಅಗತ್ಯ ಇಲ್ಲ. ಜೀವಂತ ಪ್ರಾಣಿಗಳನ್ನು ಹಿಡಿದು ತಿನ್ನುವುದರಿಂದ ಕೊರೊನಾ ಬಂದಿದೆ. ಮಾನವ ಸಮುದಾಯ ವಿಧ್ವಂಸಕ ಚಿಂತನೆಯಲ್ಲಿ ಸಾಗುತ್ತಿದೆ ಎಂದು ಸ್ವಾಮೀಜಿ ಹೇಳಿದರು.

    ಭಗವಂತ ಭೂಮಿಯನ್ನು ಸೃಷ್ಟಿ ಮಾಡಿದ್ದು ಬದುಕುವುದಕ್ಕಾಗಿ. ಮನುಷ್ಯರು ಶಸ್ತ್ರಾಸ್ತ್ರ ಒಗ್ಗೂಡಿಸುವಲ್ಲಿ ನಿರತರಾಗಿದ್ದಾರೆ. ಕೊರೊನಾದಿಂದ ಜಗತ್ತನ್ನು ನಾಶ ಮಾಡಬಹುದೆಂದು ದುಷ್ಟರಿಗೆ ಗೊತ್ತಾಗಿದೆ. ಉದ್ದೇಶಪೂರ್ವಕವಾಗಿ ಕೊರೊನಾ ಹರಡುವ ಪ್ರಯತ್ನವೂ ಆಗಬಹುದು. ಒಬ್ಬ ದುಷ್ಟ ನಿಂದ ಸಮಾಜಕ್ಕೆ ದೇಶಕ್ಕೆ ತೊಂದರೆಯಾಗುತ್ತದೆ. ಜಾಗತಿಕ ವೇದಿಕೆಯಲ್ಲಿ ಕೊರೊನಾ ಬಗ್ಗೆ ಚರ್ಚೆಯಾಗಲಿ. ಈಗಾಗಲೇ ವಿಶ್ವದ ಧಾರ್ಮಿಕ ನಾಯಕರ ಜೊತೆ ಚರ್ಚೆ ನಡೆಸಿದ್ದೇನೆ ಎಂದರು.

    ಕೊರೊನಾದ ವಿರುದ್ಧ ದೂರಗಾಮಿ ಆಲೋಚನೆಯ ಅಗತ್ಯತೆ ಇದೆ. ಇತರ ದೇಶಗಳನ್ನು ಕಂಡು ಸಮಸ್ಯೆಯ ತೀವ್ರತೆಯನ್ನು ಅರಿಯಬೇಕು. ಕೊರೊನಾದಿಂದ ಪುತ್ತಿಗೆ ಮಠದ ವಿದೇಶಿ ಬ್ರಾಂಚ್ ಗಳಿಗೆ ತೊಂದರೆಯಾಗಿದೆ. ಅಮೆರಿಕ, ಲಂಡನ್‍ನ 11 ಶಾಖೆಗಳನ್ನು ಮುಚ್ಚಿದ್ದೇವೆ. ಮಠದ ಸಿಬ್ಬಂದಿ, ಅರ್ಚಕರು ಗೊಂದಲದಲ್ಲಿದ್ದಾರೆ. ಅಲ್ಲಿನ ಸರ್ಕಾರಗಳು ನಮಗೆ ಸಾಕಷ್ಟು ಸಹಾಯ ಮಾಡಿದೆ ಎಂದು ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

  • ರೆಡ್ ಝೋನ್‍ಗಳಲ್ಲಿ ಲಾಕ್‍ಡೌನ್ ಮುಂದುವರಿಸಲು ಚಿಂತನೆ- ಸುಧಾಕರ್

    ರೆಡ್ ಝೋನ್‍ಗಳಲ್ಲಿ ಲಾಕ್‍ಡೌನ್ ಮುಂದುವರಿಸಲು ಚಿಂತನೆ- ಸುಧಾಕರ್

    – ರಾಜ್ಯದಲ್ಲಿ ಎಲ್ಲೆಲ್ಲಿ ರೆಡ್ ಝೋನ್?
    – ಬೆಂಗ್ಳೂರು ಕೊರೊನಾ ಸೋಂಕಿತರಿಗೆ ಹೈಫೈ ಫುಡ್!

    ಬೆಂಗಳೂರು: ರಾಜ್ಯದ ರೆಡ್ ಝೋನ್‍ಗಳಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ನಾವು ಯೋಜನೆ ಮಾಡುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರ ಡಾ.ಸುಧಾಕರ್ ಹೇಳಿದ್ದಾರೆ.

    ಲಾಕ್‍ಡೌನ್ ವಿಸ್ತರಣೆ ವಿಚಾರವಾಗಿ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಸಚಿವರು, ಬೆಂಗಳೂರಿನ ಕೆಲ ಪ್ರದೇಶ, ಮೈಸೂರು, ನಂಜನಗೂಡು, ಗೌರಿಬಿದನೂರು, ಬೀದರ್, ಮಂಗಳೂರನ್ನು ರೆಡ್ ಝೋನ್ ಎಂದು ಗುರುತಿಸಿದ್ದೇವೆ. ಏಪ್ರಿಲ್ 14ರ ಬಳಿಕ ಬಳಿಕ ಸಿಎಂ ಹಾಗೂ ಕೇಂದ್ರ ಸರ್ಕಾರದ ಜೊತೆಗೆ ಸಭೆ ನಡೆಸಿ ರೆಡ್ ಝೋನ್‍ಗಳಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದೇವೆ. ಹಂತ ಹಂತವಾಗಿ ಇಲ್ಲಿ ನಿರ್ಬಂಧ ಹೇರುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

    ನಂಜನಗೂಡು ನಮ್ಮ ನಿರೀಕ್ಷೆ ಮೀರಿ ಹೋಗಿದೆ. ಅದನ್ನು ರೆಡ್ ಝೋನ್ ಅಂತ ಘೋಷಣೆ ಮಾಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿ ಇಂಪ್ಯಾಕ್ಟ್:
    ವಿಕ್ಟೋರಿಯಾ ಆಸ್ಪತ್ರೆಯ ನರ್ಸ್ ಗಳಿಗೆ ನ್ಯೂಟ್ರಿಷನ್ ಆಹಾರ ಕೊರತೆ ಬಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು. ಈ ಬೆನ್ನಲ್ಲೆ ಆಹಾರ ಪೂರೈಕೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಈಗಾಗಲೇ ವೈದ್ಯರ ಹಾಗೂ ನರ್ಸ್ ಗಳ ಜೊತೆಗೆ ಸಭೆ ನಡೆಸಿದ್ದು, ಯಾವುದೇ ಕೊರತೆ ಬಾರದಂತೆ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಇನ್ಮುಂದೆ ಕೋವಿಡ್ ವಾರ್ಡ್ ನಲ್ಲಿ ಸೇವೆ ಸಲ್ಲಿಸುವ ಬೆಂಗಳೂರಿನ ನರ್ಸ್, ವೈದ್ಯರು ಹಾಗೂ ರೋಗಿಗಳಿಗೆ ತಾಜ್ ಹೋಟೆಲ್‍ನಿಂದ ಆಹಾರ ಸರಬರಾಜು ಮಾಡಲಾಗುತ್ತದೆ. ಊಟ ಸರಬರಾಜು ಮಾಡಲು ತಾಜ್ ಹೋಟೆಲ್ ಮುಂದೆ ಬಂದಿದೆ. ಜೊತೆಗೆ ರಾಜ್ಯಾದ್ಯಂತ ಎಲ್ಲಾ ರೋಗಿಗಳಿಗೆ ನ್ಯೂಟ್ರಿಷನ್ ಊಟದ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

  • ತಬ್ಲೀಘಿ ಕೊರೊನಾ ಎಫೆಕ್ಟ್- ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ

    ತಬ್ಲೀಘಿ ಕೊರೊನಾ ಎಫೆಕ್ಟ್- ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ

    ಬಾಗಲಕೋಟೆ: ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿಯ ಜಮಾತ್ ನಲ್ಲಿ ಭಾಗಿಯಾದ ತಬ್ಲೀಘಿಗಳಿಂದ ವೇಗವಾಗಿ ಕೊರೊನಾ ಹಬ್ಬುತ್ತಿದೆ. ಈ ಹಿನ್ನೆಲೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ಬಾಗಲಕೋಟೆಯಲ್ಲಿ ಹಲ್ಲೆ ನಡೆಸಲಾಗಿದೆ.

    ಜಿಲ್ಲೆಯ ಮುಧೋಳ ತಾಲೂಕಿನ ಬಿದರಿ ಗ್ರಾಮದಲ್ಲಿ ಘಟನೆ ನಡೆದಿದ್ದು, ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಗ್ರಾಮದ ಮುಸ್ಲಿಂ ವ್ಯಕ್ತಿಗಳನ್ನು ಮಾರ್ಗಮಧ್ಯೆ ನಿಲ್ಲಿಸಿ ಒದ್ದು, ಕೋಲಿನಿಂದ ಹೊಡೆದು ಹಲ್ಲೆ ಮಾಡಲಾಗಿದೆ. ನಿಮ್ಮಿಂದಲೇ ಕೊರೊನಾ ಹಬ್ಬುತ್ತಿದೆ. ನಮ್ಮ ಗ್ರಾಮದ ಕಡೆ ಯಾಕೆ ಬರುತ್ತಿದ್ದೀರಿ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ.

    ನಿಮ್ಮ ಗ್ರಾಮದ ಕಡೆ ಬರುವುದಿಲ್ಲ ಬಿಟ್ಟು ಬಿಡಿ ಎಂದು ಮುಸ್ಲಿಂ ವ್ಯಕ್ತಿಗಳು ಬೇಡಿಕೊಂಡಿದ್ದಾರೆ. ಗ್ರಾಮದ ಕಡೆ ಎಂದೂ ಕಾಲಿಡಬೇಡಿ ಎಂದು ಎಚ್ಚರಿಕೆ ನೀಡಿ ಗ್ರಾಮಸ್ಥರು ಬಿಟ್ಟು ಕಳುಹಿಸಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ಕಳೆದ 24 ಗಂಟೆಯಲ್ಲಿ 27 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ ನೂರರ ಗಡಿ ದಾಟಿದೆ. ಭಾನುವಾರ ಸುಮಾರು 12 ಜನರನ್ನು ಕೊರೊನಾ ಬಲಿ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ.

    ಭಾನುವಾರ ಒಂದೇ ದಿನ ಸುಮಾರು 500ಕ್ಕೂ ಅಧಿಕ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕಳೆದ ನಾಲ್ಕು ದಿನಗಳಿಂದ ಸೋಂಕಿಂತರ ಸಂಖ್ಯೆ ದ್ವಿಗುಣವಾಗಿ ಏರಿಕೆಯಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಏಪ್ರಿಲ್ 1ರಂದು ದೇಶದಲ್ಲಿ ಅಂದಾಜು 2 ಸಾವಿರ ಸೋಂಕಿತರಿದ್ದರು. ಕೇವಲ ನಾಲ್ಕೈದು ದಿನಗಳಲ್ಲಿ ಈ ಸಂಖ್ಯೆ ಡಬಲ್ ಆಗಿದೆ.

    ದೆಹಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿಯ ಜಮಾತ್ ನಲ್ಲಿ ಭಾಗಿಯಾದ ತಬ್ಲೀಘಿಗಳಿಂದ ವೇಗವಾಗಿ ಕೊರೊನಾ ಹಬ್ಬುತ್ತಿದೆ. ಶೇ.30ರಷ್ಟು ಕೊರೊನಾ ಸೋಂಕಿತ ಪ್ರಕರಣಗಳು ದೆಹಲಿ ಜಮಾತ್ ಲಿಂಕ್ ಹೊಂದಿವೆ. ಇದೇ ರೀತಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾದಲ್ಲಿ ಈ ಮುಂದಿನ ಏಳು ದಿನಗಳಲ್ಲಿ ದ್ವಿಗುಣವಾಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಲಾಗಿದೆ.

  • ಧಾರವಾಡದ ಜನರಿಗೆ ಗುಡ್ ನ್ಯೂಸ್ – ಜಿಲ್ಲೆಯ ಕೊರೊನಾ ಸೋಂಕಿತ ಗುಣಮುಖ

    ಧಾರವಾಡದ ಜನರಿಗೆ ಗುಡ್ ನ್ಯೂಸ್ – ಜಿಲ್ಲೆಯ ಕೊರೊನಾ ಸೋಂಕಿತ ಗುಣಮುಖ

    – ರೋಗಿ 21 ಕಿಮ್ಸ್‌ನಿಂದ ಡಿಸ್ಚಾರ್ಜ್

    ಹುಬ್ಬಳ್ಳಿ: ಕೋವಿಡ್-19 ಪಾಸಿಟಿವ್ ಸೋಂಕು ತಗುಲಿದ್ದ ಧಾರವಾಡದ ಹೊಸಯಲ್ಲಾಪುರ ನಿವಾಸಿ ಸಂಪೂರ್ಣ ಗುಣಮುಖರಾಗಿದ್ದು, ಭಾನುವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್‌ನಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

    ಆಸ್ಟ್ರೇಲಿಯಾದಿಂದ ದುಬೈ, ಮಸ್ಕತ್, ಪಣಜಿ ಮಾರ್ಗವಾಗಿ ಧಾರವಾಡ ನಗರಕ್ಕೆ ಮಾರ್ಚ್ 12ರಂದು ಆಗಮಿಸಿದ್ದ 33 ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಆದ್ದರಿಂದ ಮಾರ್ಚ್ 17ರಂದು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದರು. ಅಲ್ಲಿಂದ ಮಾರ್ಚ್ 18 ರಿಂದ 21ರವರೆಗೆ ಎಸ್‍ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬಳಿಕ ಅವರ ಥ್ರೋಟ್ ಸ್ವ್ಯಾಬ್ ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು.

    ಪ್ರಯೋಗಾಲಯದ ರಿಪೋರ್ಟ್ ನಲ್ಲಿ ಕೋವಿಡ್-19 ಪಾಸಿಟಿವ್ ಬಂದ ದಿನದಿಂದ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಕಿಮ್ಸ್‌ನಲ್ಲಿ ಉತ್ತಮ ಚಿಕಿತ್ಸೆ ಪಡೆದ ಅವರು ಚೇತರಿಸಿಕೊಳ್ಳತೊಡಗಿದರು. ಬಳಿಕ ಅವರ ಗಂಟಲು ದ್ರವದ ಪ್ರಯೋಗಾಲಯದ ಮಾದರಿಯನ್ನು ಮಾರ್ಚ್ 31 ಹಾಗೂ ಏಪ್ರಿಲ್ 3ರಂದು ಎರಡು ಬಾರಿ ಮತ್ತೆ ಶಿವಮೊಗ್ಗದ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿತ್ತು. ಎರಡೂ ಬಾರಿಯೂ ಕೋವಿಡ್-19 ನೆಗೆಟಿವ್ ವರದಿ ಬಂದಿದ್ದು, ಗುಣಮುಖರಾದ ಇವರನ್ನು ಭಾನುವಾರ ಸಂಜೆ ಕಿಮ್ಸ್ ನಿಂದ ಡಿಸ್ಚಾರ್ಜ್ ಮಾಡಿ ಮನೆಗೆ ಕಳುಹಿಸಿಕೊಡಲಾಗಿದೆ.

    ಗುಣಮುಖರಾದ ಅವರು ಧಾರವಾಡ ಜಿಲ್ಲೆಯ ಮೊದಲ ಹಾಗೂ ರಾಜ್ಯದ 21ನೇ ಕೊರೊನಾ ಸೋಂಕಿತ ವ್ಯಕ್ತಿಯಾಗಿದ್ದರು. ಕೋವಿಡ್-19 ಪಾಸಿಟಿವ್ ವ್ಯಕ್ತಿಗೆ ಉತ್ತಮ ಚಿಕಿತ್ಸೆ ನೀಡಿ ಅವರನ್ನು ರೋಗದಿಂದ ಗುಣಪಡಿಸುವಲ್ಲಿ ಹುಬ್ಬಳ್ಳಿಯ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್, ಚಿಕಿತ್ಸೆ ನೀಡಿದ ತಜ್ಞ ವೈದ್ಯರು, ಶುಶ್ರೂಷಕಿಯರು, ಸಹಾಯಕ ಸಿಬ್ಬಂದಿ ಶ್ರಮಿಸಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

    ರೋಗಿಯ ಪ್ರಾಥಮಿಕ ಮತ್ತು ಸೆಕೆಂಡರಿ ಸಂಪರ್ಕಕ್ಕೆ ಬಂದ ಎಲ್ಲಾ ಜನರ ಮಾಹಿತಿಗಳನ್ನು ತ್ವರಿತವಾಗಿ ಸಂಗ್ರಹಿಸಿ ಅಗತ್ಯ ಇದ್ದವರನ್ನು ಪರೀಕ್ಷೆಗೊಳಪಡಿಸುವಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಯಶವಂತ್ ಮದೀನಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸುಜಾತಾ ಹಸವಿಮಠ ಸೇರಿದಂತೆ, ಆರೋಗ್ಯ, ಪೊಲೀಸ್, ಮಹಾನಗರಪಾಲಿಕೆ ಎಲ್ಲಾ ಸಂಬಧಿತ ಇಲಾಖೆಗಳು ಶ್ರಮಿಸಿದ್ದರು. ಅವರ ಪರಿಶ್ರಮಕ್ಕೆ ಜಿಲ್ಲಾಧಿಕಾರಿಗಳು ಕೃತಜ್ಞತೆ ತಿಳಿಸಿದ್ದಾರೆ.

  • ಕೊರೊನಾ ಅಂಧಕಾರದ ವಿರುದ್ಧ ಬೆಳಕಿನ ಯುದ್ಧ – ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ

    ಕೊರೊನಾ ಅಂಧಕಾರದ ವಿರುದ್ಧ ಬೆಳಕಿನ ಯುದ್ಧ – ಪ್ರಧಾನಿ ಮೋದಿ ಕರೆಗೆ ಓಗೊಟ್ಟ ಜನ

    ಬೆಂಗಳೂರು: ಮನುಕುಲದ ಹೆಮ್ಮಾರಿ, ಮಹಾಮಾರಿ, ಕೊರೊನಾ ವೈರಸ್ ಮೂಡಿಸಿರೋ ಅಂಧಕಾರ ಸಂಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ‘ಲೈಟ್ಸ್ ಆರಿಸಿ.. ದೀಪ ಹಚ್ಚಿ’ ಆಂದೋಲನ ಜನ ಭರ್ಜರಿ ಬೆಂಬಲ ಸೂಚಿಸಿದ್ದಾರೆ.

    ದೇಶಾದ್ಯಂತ ದೀಪಾವಳಿಯಂತೆ ಜನ ದೀಪ ಹಚ್ಚುತ್ತಿದ್ದಾರೆ. ಮನೆಗಳ ಲೈಟ್ಸ್ ಆಫ್ ಮಾಡಿ, ದೇವರ ಮನೆ, ಮನೆ ಒಳಗೆ, ಮನೆ ಆವರಣ, ತುಳಸಿ ಗಿಡ, ಬಾಲ್ಕನಿ, ಟೆರೆಸ್‍ಗಳಲ್ಲಿ ದೀಪ, ಮೇಣದ ಬತ್ತಿ, ಮೊಬೈಲ್ ಫ್ಲ್ಯಾಶ್ ಹಾಗೂ ಟಾರ್ಚ್‍ಗಳ ಮೂಲಕ ಬೆಳಕು ಮೂಡಿಸಿದ್ದಾರೆ.

    ಲೈಟ್ ಸ್ವಿಚ್ ಆಫ್ ಮಾಡಿದ್ರೆ ವೋಲ್ಟೇಜ್ ಏರಿಳಿತವಾಗಿ ಪವರ್ ಗ್ರಿಡ್ ಬ್ಲಾಸ್ಟ್ ಆಗುತ್ತೆ ಅನ್ನೋ ವದಂತಿಯನ್ನೆಲ್ಲಾ ತಳ್ಳಿಹಾಕಿ, ಜನ ಸ್ವಯಂ ಪ್ರೇರಿತರಾಗಿ ದೀಪಾಂದೋಲನಕ್ಕೆ ಕೈ ಜೋಡಿಸಿದರು.

    ದೆಹಲಿ, ಮುಂಬೈ, ಕೋಲ್ಕತಾ, ಬೆಂಗಳೂರು, ಚೆನ್ನೈ ಸೇರಿದಂತೆ ದೇಶದ ಪ್ರಮುಖ ನಗರಗಳು ಮಾತ್ರ ಹಳ್ಳಿಗಳಲ್ಲೂ ಜನ ದೀಪ ಹಚ್ತಿದ್ದಾರೆ. ಅಂದಹಾಗೆ, ಈ ದೀಪಾಂದೋಲನಕ್ಕೆ ಸಾರ್ಕ್ ರಾಷ್ಟ್ರಗಳು ಕೂಡ ಪ್ರಧಾನಿ ಮೋದಿಗೆ ಬೆಂಬಲ ನೀಡಿತ್ತು.

  • ಮಹಾರಾಷ್ಟ್ರದಲ್ಲಿ ಒಂದೇ ದಿನ 13 ಸಾವು- ಮೃತರ ಸಂಖ್ಯೆ 45ಕ್ಕೆ ಏರಿಕೆ

    ಮಹಾರಾಷ್ಟ್ರದಲ್ಲಿ ಒಂದೇ ದಿನ 13 ಸಾವು- ಮೃತರ ಸಂಖ್ಯೆ 45ಕ್ಕೆ ಏರಿಕೆ

    ಮುಂಬೈ: ಹೆಮ್ಮಾರಿ ಕೊರೋನಾದಿಂದಾಗಿ ನೆರೆಯ ರಾಜ್ಯ ಮಹಾರಾಷ್ಟ್ರ ಅಕ್ಷರಶಃ ಮುದ್ದೆ ಮುದ್ದೆಯಾಗುತ್ತಿದೆ. ಭಾನುವಾರ ಒಂದೇ ದಿನದಲ್ಲಿ 13 ಜನರ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.

    ಈ ಕುರಿತು ಮಾಹಿತಿ ನೀಡಿರುವ ಮಹಾರಾಷ್ಟ್ರ ಆರೋಗ್ಯ ಇಲಾಖೆ, ರಾಜ್ಯದಲ್ಲಿ ಇಂದು 13 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಹೀಗಾಗಿ ಈವರೆಗೂ ಕೊರೊನಾಗೆ ಒಟ್ಟು 45 ಜನರ ಬಲಿಯಾಗಿದ್ದಾರೆ. ಇಂದು ಮುಂಬೈನಲ್ಲಿ 8 ಮಂದಿ, ಪುಣೆಯಲ್ಲಿ ಮೂವರು, ಕಲ್ಯಾಣ್, ಡೊಂಬಿವಾಲಿ ಹಾಗೂ ಔರಂಗಬಾದ್‍ನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿಸಿದೆ.

    ರಾಜ್ಯದಲ್ಲಿ ಭಾನುವಾರ ಒಂದೇ ದಿನದಲ್ಲಿ 113 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 478ಕ್ಕೆ ಏರಿಕೆ ಕಂಡಿದೆ. ಈ ಪೈಕಿ 56 ಜನರು ಗುಣಮುಖರಾಗಿದ್ದು ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮಹಾರಾಷ್ಟ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

    ಮಧ್ಯಪ್ರದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 193ಕ್ಕೆ ಏರಿಕೆ ಕಂಡಿದೆ. ಇಂದು ಓರ್ವ ಕೊರೊನಾ ಸೋಂಕಿತ ಮೃತಪಟ್ಟಿದ್ದು, ಸಾವನ್ನಪ್ಪಿದವರ ಸಂಖ್ಯೆ 12ಕ್ಕೆ ಏರಿದೆ ಎಂದು ಮಧ್ಯಪ್ರದೇಶದ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಪಲ್ಲವಿ ಜೈನ್ ಗೋವಿಲ್ ತಿಳಿಸಿದ್ದಾರೆ.

    ದೇಶಾದ್ಯಂತ ಡೆಡ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದೆ. ಈವರೆಗೆ ದೆಹಲಿಯಲ್ಲಿ 445 ಪ್ರಕರಣಗಳು ದಾಖಲಾಗಿದ್ದು ಸದ್ಯದವರೆಗೆ 6 ಮಂದಿ ಕೊರೊನಾಗೆ ಬಲಿ ಆಗಿದ್ದಾರೆ. ತಬ್ಲಿಘಿಯಲ್ಲಿ ಭಾಗಿಯಾಗಿದ್ದವರ ಪತ್ತೆಗೆ ಮೊಬೈಲ್ ನಂಬರ್ ಗಳನ್ನು ದೆಹಲಿ ಪೊಲೀಸರು ಬೆನ್ನತ್ತಿದ್ದಾರೆ. ಇದರ ಮಧ್ಯೆ ದೆಹಲಿ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ಪಲಾಯನಕ್ಕೆ ಯತ್ನಿಸ್ತಿದ್ದ 8 ಮಂದಿ ಮಲೇಷ್ಯನ್ನರನ್ನು ಬಂಧಿಸಲಾಗಿದೆ. ಇವರು ಸಹ ಜಮಾತ್ ಕಾರ್ಯಕಮ್ರದಲ್ಲಿ ಭಾಗಿಯಾಗಿದ್ದರು ಎಂದು ಶಂಕಿಸಲಾಗಿದೆ.

    ರಾಜದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್, ರಾಜ್ಯದಲ್ಲಿ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳನ್ನು ಗುರುತಿಸುವಂತೆ ತಿಳಿಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ಇಂದು 34 ಹೊಸ ಪ್ರಕರಣಗಳು ಪತ್ತೆ ಆಗಿದ್ದು, ಸೋಂಕಿತರ ಸಂಖ್ಯೆ 226ಕ್ಕೇರಿದೆ. ಕರ್ನೂಲ್‍ನಲ್ಲಿ 23, ಚಿತ್ತೂರಿನಲ್ಲಿ 7, ನೆಲ್ಲೂರು, ಪ್ರಕಸಂನಲ್ಲಿ ತಲಾ 2 ಕೇಸ್‍ಗಳು ಪತ್ತೆ ಆಗಿದೆ. ಇವುಗಳಲ್ಲಿ ಬಹುತೇಕರಿಗೆ ಜಮಾತ್ ನಂಟಿದೆ ಎನ್ನಲಾಗಿದೆ.

  • ಧಮ್ ಹೊಡೆದು ಕೊರೊನಾಗೆ ತುತ್ತಾಗದಿರಿ

    ಧಮ್ ಹೊಡೆದು ಕೊರೊನಾಗೆ ತುತ್ತಾಗದಿರಿ

    ದ್ಯ ಎಲ್ಲೆಡೆ ಕೇಳಿ ಬರುತ್ತಿರುವ ಮಾತು ಕೊರೊನಾ ವೈರಸ್ ಮಾತ್ರ. ವಿಶ್ವವ್ಯಾಪಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್‍ಗೆ ಘಟಾನುಘಟಿ ರಾಷ್ಟ್ರಗಳು ತತ್ತರಿಸಿ ಹೋಗಿವೆ. ಭಾರತ ಕೂಡ ಕೊರೊನಾ ವೈರಸ್ ಹಾವಳಿಗೆ ತುತ್ತಾಗಿದ್ದು, ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವ ಮಂದಿಗೆ ಕೊರೊನಾ ಸೋಂಕು ಬಹುಬೇಗ ತಗಲುತ್ತದೆ. ಅದರಲ್ಲೂ ಧೂಮಪಾನ ಪ್ರಿಯರಿಗೆ ಕೊರೊನಾ ವೈರಸ್ ತಟ್ಟುವ ಸಾಧ್ಯತೆ ಹೆಚ್ಚಿದೆ ಎಂದು ಅಧ್ಯಯನಗಳು ತಿಳಿಸಿವೆ.

    ಆಗಾಗ ಬಾಯಿ, ಮೂಗು, ಕಣ್ಣು ಮುಟ್ಟಬೇಡಿ ಇದರಿಂದ ಕೊರೊನಾ ವೈರಸ್ ಬಹುಬೇಗ ಹರಡುತ್ತದೆ ಎಂದು ವೈದ್ಯರು, ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ. ಆದರೆ ಧೂಮಪಾನ ಮಾಡುವಾಗ ಕೈ ಬಾಯಿಗೆ ತಾಗುತ್ತದೆ, ಬಾಯಿ ಮೂಲಕ ವೈರಸ್ ದೇಹವನ್ನು ಸೇರಿ ಶ್ವಾಸಕೋಶಕ್ಕೆ ಹಾನಿ ಮಾಡುವ ಸಾಧ್ಯತೆ ಹೆಚ್ಚಿರುತ್ತದೆ.

    ಧೂಮಪಾನ ಮಾಡಿದ್ದರಿಂದ ಶ್ವಾಸಕೋಶಕ್ಕೆ ಮೊದಲೇ ಹಾನಿಯಾಗಿರುತ್ತದೆ. ಈಗ ಕೊರೊನಾ ವೈರಸ್ ತಗಲಿದರೆ ಉಸಿರಾಟದ ತೊಂದರೆ ಜಾಸ್ತಿಯಾಗುತ್ತದೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ತಮವಾಗಿರಬೇಕು. ಆದರೆ ಧೂಮಪಾನಿಗಳ ಶ್ವಾಸಕೋಶ ಮೊದಲೇ ಹಾನಿಯಾಗಿತ್ತದೆ ಹೀಗಾಗಿ ಸೋಂಕು ಕಾಣಿಸಿಕೊಂಡರೆ ಅವರ ದೇಹದಲ್ಲಿ ಸೋಂಕನ್ನು ಎದರಿಸುವ ಶಕ್ತಿ ತೀರ ಕಡಿಮೆ ಇರುತ್ತದೆ. ಪರಿಸ್ಥಿತಿ ಮತ್ತಷ್ಟು ಗಂಭೀರವಾದರೆ ಶ್ವಾಸನಾಳದಲ್ಲಿ ದ್ರವ ತುಂಬಿಕೊಂಡು, ಆಮ್ಲಜನಕ ಸರಿಯಾಗಿ ದೊರೆಯದೆ ನ್ಯೋಮೋನಿಯಾ ಉಂಟಾಗಿ ಉಸಿರಾಡಲು ಕಷ್ಟವಾಗಿ ಸಾವಿಡೀಡಾಗುವ ಸಾಧ್ಯತೆ ಹೆಚ್ಚಾಗಿದೆ.

    ಧೂಮಪಾನ ಮಾಡುವವರು ಹೆಚ್ಚಾಗಿ ಆರೋಗ್ಯ ಸಮಸ್ಯೆ ಎದರಿಸುತ್ತಾರೆ ಎಂದು ಅಧ್ಯಯನ ವರದಿಗಳು ತಿಳಿಸಿವೆ. ಅದರಲ್ಲೂ ಕ್ಯಾನ್ಸರ್, ಹೃದಯ ಸಮಸ್ಯೆ ಮತ್ತಿತರ ಗಂಭೀರ ಸಮಸ್ಯೆ ಎದರಿಸುವ ರೋಗಿಗಳಲ್ಲಿ ಶೇ. 51ರಷ್ಟು ಧೂಮಪಾನಿಗಳ, ಶೇ. 17ರಷ್ಟು ಮಂದಿ ಧೂಮಪಾನಿಗಳು ಎಳೆದು ಬಿಟ್ಟ ಹೊಗೆ ಸೇವಿಸುವವರು(ಪ್ಯಾಸಿವ್ ಸ್ಮೋಕರ್ಸ್) ಆಗಿರುತ್ತಾರೆ ಎಂದು ತಿಳಿಸಲಾಗಿದೆ.

    ಇತ್ತ ಇ ಸಿಗರೇಟ್ ಸೇದುವ ಮಂದಿಯಲ್ಲೂ ರೋಗ ನಿರೋಧಕ ಶಕ್ತಿ ಕುಗ್ಗಿರುತ್ತದೆ ಎಂದು ವೈದ್ಯರು ಹೇಳುತ್ತಾರೆ. ಶ್ವಾಸಕೋಶ ಮಾತ್ರವಲ್ಲ ಇದು ದೇಹದ ಜೀನ್‍ಗಳ ಮೇಲೂ ಕೆಟ್ಟ ಪರಿಣಾಮ ಬೀರುತ್ತದೆ. ಇದು ದೇಹದಲ್ಲಿ 60ಕ್ಕೂ ಹೆಚ್ಚು ಜೀನ್‍ಗಳಿಗೆ ಹಾನಿ ಮಾಡುತ್ತದೆ. ಇದರಿಂದ ರೋಗ ನಿರೋಧಕ ಶಕ್ತಿ ದೇಹದಲ್ಲಿ ಕಡಿಮೆಯಾಗಿ ರೋಗಗಳಿಗೆ ಬಹುಬೇಗ ಧೂಮಪಾನಿಗಳು ತುತ್ತಾಗುತ್ತಾರೆ.

  • ರಾಜ್ಯದಲ್ಲಿ 7 ಮಂದಿಗೆ ಕೊರೊನಾ, ಐವರಿಗೆ ಜಮಾತ್ ನಂಟು

    ರಾಜ್ಯದಲ್ಲಿ 7 ಮಂದಿಗೆ ಕೊರೊನಾ, ಐವರಿಗೆ ಜಮಾತ್ ನಂಟು

    – ಬೆಂಗಳೂರಿನ ವೃದ್ಧ ದಂಪತಿಗೆ ಸೋಂಕು
    – ಕೊರೊನಾ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆ

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 151ಕ್ಕೆ ಏರಿದೆ. ಶನಿವಾರ ಏಕಾಏಕಿ 16 ಮಂದಿ ಸೋಂಕಿತರು ಪತ್ತೆಯಾಗಿದ್ದರೆ, ಇಂದು 7 ಜನರಿಗೆ ಕೊರೊನಾ ತಗುಲಿರುವುದು ದೃಢವಾಗಿದೆ. ಈ ಪೈಕಿ 5 ಕೇಸ್‍ಗಳು ದೆಹಲಿಯ ತಬ್ಲಿಘಿ ಧರ್ಮ ಸಭೆಗೆ ಹೋಗಿ ಬಂದವರೇ ಆಗಿದ್ದಾರೆ.

    ಬೆಳಗಾವಿಯ ನಾಲ್ವರು, ಬಳ್ಳಾರಿಯ ಒಬ್ಬರ ಜೊತೆ ದುಬೈನಿಂದ ಬೆಂಗಳೂರಿಗೆ ಆಗಮಿಸಿದ ವೃದ್ಧ ದಂಪತಿಗೆ ಸೋಂಕು ಬಂದಿದೆ.

    ರೋಗಿ 145 – ಬೆಂಗಳೂರಿನ 68 ವರ್ಷದ ವೃದ್ಧ. ದುಬೈಗೆ ಪ್ರಯಾಣ ಮಾಡಿರುವ ಹಿನ್ನಲೆ ಹೊಂದಿದ್ದು, ಮಾರ್ಚ್ 22ರಂದು ಭಾರತಕ್ಕೆ ಹಿಂದಿರುಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಆಕಾಶ್ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.

    ರೋಗಿ 146 – ಬೆಂಗಳೂರಿನ 62 ವರ್ಷದ ವೃದ್ಧೆ (ರೋಗಿ 145ರ ಪತ್ನಿ). ದುಬೈಗೆ ಪ್ರಯಾಣ ಮಾಡಿರುವ ಹಿನ್ನಲೆ ಹೊಂದಿದ್ದು, ಮಾರ್ಚ್ 22ರಂದು ಭಾರತಕ್ಕೆ ಹಿಂದಿರುಗಿದ್ದಾರೆ. ಬೆಂಗಳೂರು ಗ್ರಾಮಾಂತರದ ಆಕಾಶ್ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ನಲ್ಲಿ ಇಡಲಾಗಿದೆ.

    ರೋಗಿ 147 – ಬೆಳಗಾವಿ ಜಿಲ್ಲೆ ರಾಯ್‍ಬಾಗ್‍ನ 36 ಮಹಿಳೆ. ಅವರು ಮಾರ್ಚ್ 13ರಿಂದ 18ರವರೆಗೆ ನಡೆದ ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಮಾರ್ಚ್ 20ರಂದು ವಾಪಸ್ ಬಂದಿದ್ದರು. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.

    ರೋಗಿ 148 – ಬೆಳಗಾವಿ ಜಿಲ್ಲೆ ರಾಯ್‍ಬಾಗ್‍ನ 40 ವರ್ಷದ ಪುರುಷ. ಅವರು ಮಾರ್ಚ್ 13ರಿಂದ 18ರವರೆಗೆ ನಡೆದ ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಮಾರ್ಚ್ 20ರಂದು ವಾಪಸ್ ಬಂದಿದ್ದರು. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ಕೊಡಲಾಗುತ್ತಿದೆ.

    ರೋಗಿ 149 – ಬೆಳಗಾವಿ ಜಿಲ್ಲೆ ರಾಯ್‍ಬಾಗ್‍ನ 67 ವರ್ಷದ ವೃದ್ಧೆ. ಅವರು ಮಾರ್ಚ್ 13ರಿಂದ 18ರವರೆಗೆ ನಡೆದ ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಮಾರ್ಚ್ 20ರಂದು ವಾಪಸ್ ಬಂದಿದ್ದರು. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಲಾಗಿದೆ.

    ರೋಗಿ 150 – ಬೆಳಗಾವಿ ಜಿಲ್ಲೆ ರಾಯ್‍ಬಾಗ್‍ನ 41 ವರ್ಷದ ಮಹಿಳೆ. ಅವರು ಕೂಡ ಮಾರ್ಚ್ 13ರಿಂದ 18ರವರೆಗೆ ನಡೆದ ದೆಹಲಿಯ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿಂದ ಮಾರ್ಚ್ 20ರಂದು ವಾಪಸ್ ಬಂದಿದ್ದರು. ಅವರನ್ನು ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ರೋಗಿ 151 – ಬಳ್ಳಾರಿಯ 41 ಪುರುಷ. ದೆಹಲಿಯ ತಬ್ಲಿಘಿ ಜಮಾತ್ ಸಭೆಯಲ್ಲಿ ಮಾರ್ಚ್ 13ರಿಂದ 18ರವಗೆ ಭಾಗವಹಿಸಿದ್ದರು. ಅವರನ್ನು ಬಳ್ಳಾರಿಯ ಎಂ.ಡಿ.ಆರ್.ಎಸ್.ನಲ್ಲ ಕ್ವಾರಂಟೈನ್ ಮಾಡಲಾಗಿದ್ದು, ಇಲ್ಲಿಯವರೆಗೆ ಇವರಿಗೆ ರೋಗ ಲಕ್ಷಣಗಳು ಕಂಡು ಬಂದಿಲ್ಲ.

    ಕರ್ನಾಟಕದಲ್ಲಿ ಒಟ್ಟು ಪತ್ತೆ ಮಾಡಲಾಗಿರುವ 151 ಸೋಂಕಿರಲ್ಲಿ 8 ಮಂದಿ ಕೇರಳದವರಾಗಿದ್ದಾರೆ. ಅವರು ಕರ್ನಾಟಕದ ವಿಮಾನ ನಿಲ್ದಾಣಗಳಿಗೆ ಆಗಮಿಸಿ, ಕರ್ನಾಟಕದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಪ್ರಿಲ್ 4ರಂದು 86 ಜನರನ್ನು ಮಂಗಳೂರು ಕಡಲು ಬಂದರಿನಲ್ಲಿ ತಪಾಸಣೆ ಮಾಡಲಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

    ವಿದೇಶದಿಂದ ಬಂದು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‍ನಲ್ಲಿದ್ದ 47 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದೆ.

  • ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

    ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

    ಮುಂಬೈ: ವಿಶ್ವಾದ್ಯಂತ ಹಾಗೂ ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿ ತೊಂದರೆಗೆ ಸಿಲುಕಿದೆ. ಆದರೆ ಏನೇ ಆದರೂ ಈ ಬಾರಿಯ ಟೂರ್ನಿ ನಡೆಯಲೇ ಬೇಕು ಅಂತ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಟೂರ್ನಿ ನಡೆಸುವ ಬಗ್ಗೆ ಸಲಹೆ ಕೂಡ ನೀಡಿದ್ದಾರೆ.

    ಖಾಲಿ ಮೈದಾನ, ಕ್ರಿಕೆಟ್ ಅಭಿಮಾನಿಗಳಿಲ್ಲದ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿಯೇ ಟೂರ್ನಿ ನಡೆಸಬೇಕು. ಇದರಿಂದ ಪ್ರೇಕ್ಷಕರ ಜೀವಕ್ಕೆ ಯಾವುದೇ ಅಪಾಯವಿಲ್ಲ ಇರುವುದಿಲ್ಲ ಎಂದು ಪಿಟರ್ಸನ್ ಸಲಹೆ ನೀಡಿದ್ದಾರೆ.

    ಐಪಿಎಲ್ ಟೂರ್ನಿ ಮೂರು ಅಥವಾ ನಾಲ್ಕು ವಾರಗಳಲ್ಲಿ ಕೊನೆಗೊಳ್ಳಬೇಕು. ಹೀಗಾಗಿ ಈ ಬಾರಿ ಐಪಿಎಲ್‍ನ ಸ್ವರೂಪವೂ ಚಿಕ್ಕದಾಗಿರಬೇಕು ಎಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

    ಕೊರೊನಾ ವೈರಸ್ ಹಾಗೂ ವಿದೇಶಿ ಆಟಗಾರರಿಗೆ ವೀಸಾ ನಿರ್ಬಂಧದಿಂದಾಗಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮಾರ್ಚ್ 29ರಿಂದ ಏಪ್ರಿಲ್ 15ರವರೆಗೆ ಮುಂದೂಡಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಬೇಕಿತ್ತು.

    “ಜುಲೈ-ಆಗಸ್ಟ್‍ನಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಬೇಕು. ಐಪಿಎಲ್‍ನ 13ನೇ ಆವೃತ್ತಿಯನ್ನು ಸಹ ನಡೆಸಬೇಕು ಎಂದು ಬಯಸುತ್ತೇನೆ. ವಿಶ್ವದ ಪ್ರತಿಯೊಬ್ಬ ಆಟಗಾರನೂ ಇದನ್ನೇ ಬಯಸುತ್ತಿದ್ದಾರೆ. ಅವರು ಸಹ ಟೂರ್ನಿಯಲ್ಲಿ ಆಡಲೇಬೇಕು ಎನ್ನುವ ಇಚ್ಛೆಯನ್ನು ಹೊಂದಿದ್ದಾರೆ. ಆಟಗಾರರು ಮತ್ತು ಫ್ರಾಂಚೈಸಿಗಳ ಜೊತೆಗೆ ತೆರೆಮರೆಯಲ್ಲಿ ಕೆಲಸ ಮಾಡುವವರಿಗೆ ಐಪಿಎಲ್ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಫ್ರ್ಯಾಂಚೈಸಿ ಸ್ವಲ್ಪ ಹಣವನ್ನು ಉಳಿಸುವ ಮಾರ್ಗವನ್ನು ಸಹ ಕಂಡುಕೊಳ್ಳಬೇಕು. ಉದಾಹರಣೆಗೆ ಎಲ್ಲಾ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತದೆ. ಹೀಗಾಗಿ ಟೂರ್ನಿಯನ್ನು ಮೂರು ಅಥವಾ ನಾಲ್ಕು ವಾರಗಳಿಗೆ ಕಡಿತಗೊಳಿಸಬಹುದು” ಎಂದು ಸಲಹೆ ನೀಡಿದ್ದಾರೆ.

    ಭಾರತದ ಮಾಜಿ ಬ್ಯಾಟ್ಸ್‌ಮನ್ ಸಂಜಯ್ ಮಂಜ್ರೇಕರ್ ಕೂಡ ಐಪಿಎಲ್‍ನ ಮಹತ್ವವನ್ನು ವ್ಯಕ್ತಪಡಿಸಿದ್ದಾರೆ. ಪೀಟರ್ಸನ್ ಅವರ ಸಲಹೆಗೆ ಸಹಮತ ನೀಡಿರುವ ಮಂಜ್ರೇಕರ್, ಸರ್ಕಾರ, ಮಂಡಳಿ ಮತ್ತು ಫ್ರಾಂಚೈಸಿಗಳು ಸೇರಿದಂತೆ ಇತರ ಎಲ್ಲಾ ಸಂಬಂಧಿತ ಸಂಸ್ಥೆಗಳಿಂದ ಒಪ್ಪಿಗೆ ಪಡೆದು ಐಪಿಎಲ್ ನಡೆಸಬೇಕು. ಇದು ವಿಶೇಷ ಆರ್ಥಿಕತೆಯನ್ನು ಸಹ ಪ್ರಾರಂಭಿಸುತ್ತದೆ. ಏಕೆಂದರೆ ಈ ಟೂರ್ನಿ ನಡೆಬೇಕಾಗಿರುವುದು ಮುಂಬೈ ಇಂಡಿಯನ್ಸ್, ಎಂ.ಎಸ್.ಧೋನಿ ಅಥವಾ ವಿರಾಟ್ ಕೊಹ್ಲಿ ಅವರಿಗಾಗಿ ಅಷ್ಟೇ ಅಲ್ಲ. ಐಪಿಎಲ್‍ನಿಂದ ಉದ್ಯೋಗ ಪಡೆಯುವವರಿಗೆ ಟೂರ್ನಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

    ಇದೇ ವಿಚಾರವಾಗಿ ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಜಸ್ಟಿನ್ ಲ್ಯಾಂಗರ್, ನೀವು ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ ನಿಮ್ಮ ಮುಂದೆ ಜನಸಂದಣಿ ಇರುತ್ತಿರಲಿಲ್ಲ. ಆಗಲೇ ಕ್ರಿಕೆಟ್ ಆಡಿದ್ದೀರಿ. ಏಕೆಂದರೆ ನೀವು ಆಟವನ್ನು ಇಷ್ಟಪಡುತ್ತೀರಿ. ನಿಮ್ಮ ತಂಡದ ಆಟಗಾರರೊಂದಿಗೆ ಆಡಲು ಇಷ್ಟಪಡುತ್ತೀರಿ. ಈ ಆಟದ ಪ್ರೀತಿಯಿಂದಾಗಿ ಇಂದು ಹೆಚ್ಚಿನ ಜನರು ಟಿವಿ ಮಾಧ್ಯಮ ಮತ್ತು ರೇಡಿಯೋ ಮೂಲಕ ಜನರನ್ನು ರಂಜಿಸಲು ಸಮರ್ಥರಾಗಿದ್ದೀರಿ. ಇದಕ್ಕಾಗಿಯೇ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ನಡೆಸುವುದು ಮುಖ್ಯವಾಗಿದೆ. ಇದು ಸ್ವಲ್ಪ ವಿಭಿನ್ನವಾಗಿರುತ್ತದೆ. ಆದರೆ ನಾವೆಲ್ಲರೂ ಎಷ್ಟು ಅದೃಷ್ಟವಂತರು ಎಂಬುದನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಐಪಿಎಲ್ ಟೂರ್ನಿ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ.

  • ಕೊರೊನಾ ಭೀತಿ ನಡುವೆ ಭಾರತ ಉತ್ತಮ ಸಾಧನೆ ಮಾಡ್ತಿದೆ – ಅಮೆರಿಕದಿಂದ ವೈದ್ಯನ ಮೆಚ್ಚುಗೆ

    ಕೊರೊನಾ ಭೀತಿ ನಡುವೆ ಭಾರತ ಉತ್ತಮ ಸಾಧನೆ ಮಾಡ್ತಿದೆ – ಅಮೆರಿಕದಿಂದ ವೈದ್ಯನ ಮೆಚ್ಚುಗೆ

    ಮಡಿಕೇರಿ: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಇಡೀ ದೇಶವನ್ನೇ ಲಾಕ್‍ಡೌನ್ ಮಾಡಿದ್ದಾರೆ. ಇದೀಗ ಕೊರೊನಾ ವೈರಸ್‍ನ ಬಗ್ಗೆ ಭಾರತ ಉತ್ತಮ ರೀತಿಯಲ್ಲಿ ಸಾಧನೆ ಮಾಡುತ್ತಿದೆ ಎಂದು ಅಮೆರಿಕದಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿರುವ ಕೊಡಗು ಮೂಲದ ಕಾರ್ಯಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಜನರು ಸ್ವಲ್ಪ ಸಪೋರ್ಟ್ ಮಾಡಿದರೆ ಈ ಮಹಾಮಾರಿ ಕೊರೊನಾ ವೈರಸ್ ಅನ್ನು ಮಟ್ಟಹಾಕಬಹುದು ಎಂದು ಜನರಿಗೆ ಕಿವಿಮಾತು ಹೇಳಿದ್ದಾರೆ. ದೇಶದ ಆರ್ಥಿಕ ಮಟ್ಟ ಮತ್ತು ಕುಟುಂಬಗಳನ್ನು ಕೊರೊನಾ ನಾಶಮಾಡಿದೆ. ಆದರೆ ಅಮೆರಿಕ ಮತ್ತು ಯೂರೋಪ್ ದೇಶಗಳಿಗೆ ಹೋಲಿಸಿದರೆ ಭಾರತ ಉತ್ತಮವಾಗಿದೆ. ಇಂತಹ ಸಂದರ್ಭದಲ್ಲಿ ಪ್ರಮುಖವಾದ ಕ್ರಮದ ಅಗತ್ಯವಿದೆ. ಅದಕ್ಕಾಗಿ ದೇಶವನ್ನು ಲಾಕ್‍ಡೌನ್ ಮಾಡಲಾಗಿದೆ. ಇದಕ್ಕಾಗಿ ಜನರು ಮನೆಯಲ್ಲೇ ಇರಿ, ಆರೋಗ್ಯವಾಗಿರಿ. ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯವಿದೆ ಎಂದು ಹೇಳಿದ್ದಾರೆ.

    ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿಸಲು ಹೋದಾಗ 6 ಅಡಿ ಅಂತರ ಕಾಯ್ದುಕೊಳ್ಳಿ. ಮನೆಯಲ್ಲೇ ಇರುವಾಗ ಶ್ವಾಶಕೋಶದ ಸಾಮರ್ಥ್ಯ ಹೆಚ್ಚಿಸುವ ವ್ಯಾಯಾಮ ಮಾಡಿ. ಕೆಲವು ದಿನಗಳು ಈ ರೀತಿ ಮಾಡಿದರೆ ಕೊರೊನಾ ವೈರಸ್ ದೇಶದಲ್ಲಿ ಕಡಿಮೆಯಾಗುತ್ತದೆ ಎಂದು ಅಮೆರಿಕದಿಂದ ಕೊಡಗಿನ ಜನತೆಗೆ ವಿಡಿಯೋ ಸಂದೇಶ ಕಳಿಸಿದ್ದಾರೆ.

    ಕಾರ್ಯಪ್ಪ ಅವರು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರ ಪುತ್ರರಾಗಿದ್ದಾರೆ. ಸದ್ಯಕ್ಕೆ ಇವರು ಅಮೆರಿಕದಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿದ್ದಾರೆ.