Tag: Cost

  • ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರು ಪ್ರಶ್ನೆ

    ರಾಜ್ಯ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರು ಪ್ರಶ್ನೆ

    – ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು
    – ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ

    ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ಖರ್ಚು ವೆಚ್ಚದ ಲೆಕ್ಕದ ಬಗ್ಗೆ ರಾಜ್ಯ ಸರ್ಕಾರಕ್ಕೆ ಆರು ಪ್ರಶ್ನೆಗಳನ್ನು ಕೇಳಿದ್ದಾರೆ.

    ಸಿದ್ದರಾಮಯ್ಯ ಸರ್ಕಾರಕ್ಕೆ 6 ಪ್ರಶ್ನೆಗಳನ್ನ ಕೇಳಿರುವ ವಿಡಿಯೋ ಬಿಡುಗಡೆ ಮಾಡಿದ್ದಾರೆ. ಸಿದ್ದರಾಮಯ್ಯ ಟ್ವಿಟ್ಟರಿನಲ್ಲಿ ವಿಡಿಯೋವನ್ನು ಪೋಸ್ಟ್ ಮಾಡಿದ್ದು, “ಕೊರೊನಾ ನಿಯಂತ್ರಣದಲ್ಲಿ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್‍ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ. ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೋ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು ವಿನಂತಿ” ಎಂದು ಬರೆದುಕೊಂಡಿದ್ದಾರೆ. ಜೊತೆಗೆ #LekkaKodi ಹ್ಯಾಷ್ ಟ್ಯಾಗ್ ಹಾಕಿದ್ದಾರೆ.

    ಸಿದ್ದರಾಮಯ್ಯ ಕೇಳಿರುವ ಆರುವ ಪ್ರಶ್ನೆಗಳು:
    1. ಕೊರೊನಾ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ ಸರ್ಕಾರ ಖರ್ಚು ಮಾಡಿದ ಹಣ ಎಷ್ಟು? ಕೇಂದ್ರ ಸರ್ಕಾರ ಎಷ್ಟು ನೀಡಿದೆ?
    2. ಯಾವ ಯಾವ ಇಲಾಖೆ ಯಾವ ಬಾಬತ್ತಿಗೆ ಎಷ್ಟು ಹಣ ಖರ್ಚು ಮಾಡಿವೆ?
    3. ಪಿಪಿಇ ಕಿಟ್, ಟೆಸ್ಟ್ ಕಿಟ್, ಗ್ಲೌಸ್, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ಕಿಯೋಸ್ಕ್ ಮುಂದಾದವುಗಳಿಗೆ ಮಾರುಕಟ್ಟೆ ದರ ಎಷ್ಟು? ನೀವು ಪ್ರತಿಯೊಂದನ್ನ ಯಾವ ದರಕ್ಕೆ ಖರೀದಿಸಿದ್ದೀರಿ? ಯಾವ ಕಂಪನಿಯಿಂದ ಖರೀಸಿದ್ದೀರಿ?
    4. ಈವರೆಗೆ ಎಷ್ಟು ಫುಡ್ ಕಿಟ್, ಎಷ್ಟು ಫುಡ್ ಪ್ಯಾಕೆಟ್ ಕೊಟ್ಟಿದ್ದೀರಿ? ಯಾರಿಗೆ ಕೊಟ್ಟಿದ್ದೀರಿ? ಪ್ರತಿಯೊಂದಕ್ಕೆ ಎಷ್ಟು ಹಣ ಖರ್ಚು ಮಾಡಿದ್ದೀರಿ? ತಾಲ್ಲೂಕು ವಾರು, ವಾರ್ಡ್ ವಾರು ಲೆಕ್ಕ ಕೊಡಿ?


    5. ವಲಸೆ ಕಾರ್ಮಿಕರಿಗೆ ಪ್ರಯಾಣದ ಸಂದರ್ಭದಲ್ಲಿ ಎಷ್ಟು ಫುಡ್ ಕಿಟ್ ಕೊಟ್ಟಿದ್ದೀರಿ? ಏನೇನು ಕೊಟ್ಟಿದ್ದೀರಿ? ಪ್ರತಿ ಕಿಟ್‍ಗೆ ಖರ್ಚು ಮಾಡಿದ ಹಣ ಎಷ್ಟು?
    ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರ, ರಾಜ್ಯ ಸರ್ಕಾರಗಳು ಘೋಷಿಸಿದ ಪ್ಯಾಕೇಜ್‍ಗಳು ಯಾವುವು? ಇದುವರೆಗೆ ಯಾವ ಯಾವ ವೃತ್ತಿಯವರಿಗೆ, ಯಾವ ಯಾವ ಸಮುದಾಯಕ್ಕೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ?
    6. ಕೊರೊನಾ ಸಂತಸ್ತರಗೆ ಆರೈಕೆಗೆ ಎಷ್ಟು ಹಣ ಖರ್ಚು ಮಾಡಿದ್ದೀರಿ? ಈ ಎಲ್ಲದರ ಸಂಪೂರ್ಣ ಲೆಕ್ಕ ಕೊಡಿ

    ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು. ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ ಎಂದು ಸಿದ್ದರಾಮಯ್ಯ ಕೊನೆಯಲ್ಲಿ ಹೇಳಿದ್ದಾರೆ.

  • ಮೆಟ್ ಗಾಲಾದಲ್ಲಿ ಪ್ರಿಯಾಂಕಾ ಧರಿಸಿದ ಗೌನ್ ಬೆಲೆ ರಿವೀಲ್

    ಮೆಟ್ ಗಾಲಾದಲ್ಲಿ ಪ್ರಿಯಾಂಕಾ ಧರಿಸಿದ ಗೌನ್ ಬೆಲೆ ರಿವೀಲ್

    ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ‘ಮೆಟ್ ಗಾಲಾ 2019’ ಕಾರ್ಯಕ್ರಮದಲ್ಲಿ ಧರಿಸಿದ್ದ ಗೌನಿನ ಬೆಲೆ ರಿವೀಲ್ ಆಗಿದೆ. ಪ್ರಿಯಾಂಕಾ ಚೋಪ್ರಾ ಈ ಕಾರ್ಯಕ್ರಮಕ್ಕೆ ಬರೋಬ್ಬರಿ 45 ಲಕ್ಷ ರೂ. ವೆಚ್ಚದ ಗೌನ್ ಧರಿಸಿದ್ದಾರೆ.

    ಪ್ರಿಯಾಂಕಾ ಮೆಟ್ ಗಾಲಾ ಕಾರ್ಯಕ್ರಮಕ್ಕೆ ಡಿಯೋರ್ ವಿನ್ಯಾಸದ ಡ್ರಾಮಾಟಿಕ್ ಡಿಯೋರ್ ಗೌನ್ ಧರಿಸಿ ಅದಕ್ಕೆ ಬಿಳಿ ಬಣ್ಣದ ಐಬ್ರೋ ಹಾಗೂ ಐಲ್ಯಾಶಸ್ ಮಾಡಿಸಿದ್ದರು.

    ಪ್ರಿಯಾಂಕಾ ಈ ಕಾರ್ಯಕ್ರಮಕ್ಕೆ ಬರೋಬ್ಬರಿ 45 ಲಕ್ಷ ರೂ.ಯ ಗೌನ್ ಧರಿಸಿದ್ದರು. 1500 ಗಂಟೆಗಳ ಕಾಲ ಶ್ರಮವಹಿಸಿ ಈ ಗೌನ್‍ನನ್ನು ಟುಲೆಯಿಂದ ತಯಾರಿಸಲಾಗಿದೆ. ಆ ಗೌನ್‍ಗೆ ಪ್ರಿಯಾಂಕಾ ಸುಮಾರು 10 ಲಕ್ಷ ರೂ. ಮೌಲ್ಯದ ವಜ್ರದ ಇಯರಿಂಗ್ ಹಾಕಿದ್ದರು.

    ಸದ್ಯ ಪ್ರಿಯಾಂಕಾ ಚೋಪ್ರಾ ಅವರ ಮೆಟ್ ಗಾಲಾ ಲುಕ್ ನೋಡಿ ಅಭಿಮಾನಿಗಳು ಅವರನ್ನು ಸಾಕಷ್ಟು ಟ್ರೋಲ್ ಹಾಗೂ ಹಲವಾರು ಮಿಮ್ಸ್ ಗಳನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಆದರೆ ಈಗ ಪ್ರಿಯಾಂಕ ಲುಕ್ ಬಗ್ಗೆ ಸ್ವತಃ ಅವರ ತಾಯಿ ಮಧು ಚೋಪ್ರಾ ಅವರು ಪ್ರತಿಕ್ರಿಯೆ ನೀಡಿದ್ದಾರೆ.

    ಪ್ರಿಯಾಂಕಾ ಲುಕ್ ಬಗ್ಗೆ ಅವರ ತಾಯಿ ಮಧು ಚೋಪ್ರಾ ಬಳಿ ಕೇಳಿದ್ದಕ್ಕೆ, “ಇಷ್ಟು ದೂರದಿಂದ ನಾನು ಏನೆಂದು ಪ್ರತಿಕ್ರಿಯಿಸಲಿ. ಪ್ರಿಯಾಂಕಾ ನನ್ನ ಮುಂದೆ ಇದ್ದಿದ್ದರೆ ನಾನು ಅವಳನ್ನು ತಬ್ಬಿಕೊಳ್ಳುತ್ತಿದೆ. ಏಕೆಂದರೆ ಅವಳು ಅಷ್ಟು ಸುಂದರವಾಗಿ ಹಾಗೂ ಸ್ಪೆಷಲ್ ಆಗಿ ಕಾಣಿಸುತ್ತಿದ್ದಳು” ಎಂದು ಹೇಳಿದ್ದಾರೆ.

    ಮೆಟ್ ಗಾಲಾ ಕಾರ್ಯಕ್ರಮಕ್ಕೆ ಪ್ರಿಯಾಂಕ ಪತಿ, ಅಮೆರಿಕದ ಗಾಯಕ ನಿಕ್ ಜೋನಸ್ ಪ್ರಿಸ್ಟಿನ್ ಬಿಳಿ ಬಣ್ಣದ ಸೂಟ್ ಧರಿಸಿ ಪತ್ನಿ ಜೊತೆ ಆಗಮಿಸಿದ್ದರು. ಡಿಂಪಲ್ ಬೆಡಗಿ ದೀಪಿಕಾ ಪಡುಕೋಣೆ ಕೂಡ ಡಿಸ್ನಿ ಪ್ರಿನ್ಸೆಸ್ ಲುಕ್‍ನಲ್ಲಿ ಆಗಮಿಸಿದ್ದರು. ಈ ಕಾರ್ಯಕ್ರಮದಲ್ಲಿ ದೀಪಿಕಾ 400 ಕಸೂತಿ ತುಣುಕುಗಳೊಂದಿಗೆ ಅಲಂಕರಿಸಲ್ಪಟ್ಟ, ಝಾಕ ಪೊಸೆನ್ ವಿನ್ಯಾಸದ ಗುಲಾಬಿ ಬಣ್ಣದ ಲೋರೆಕ್ಸ್ ಜಾಕ್ವಾರ್ಡ್ ಗೌನ್ ಧರಿಸಿದ್ದರು.

  • ಎಣ್ಣೆ ಪ್ರಿಯರಿಗೆ ಶಾಕ್ – ಮದ್ಯದ ಬೆಲೆ ಎಷ್ಟು ಏರಿಕೆಯಾಗುತ್ತೆ?

    ಎಣ್ಣೆ ಪ್ರಿಯರಿಗೆ ಶಾಕ್ – ಮದ್ಯದ ಬೆಲೆ ಎಷ್ಟು ಏರಿಕೆಯಾಗುತ್ತೆ?

    ಬೆಂಗಳೂರು: ಸಿಎಂ ಕುಮಾರಸ್ವಾಮಿ 2019-20ರ ಬಜೆಟ್‍ನಲ್ಲಿ ಎಣ್ಣೆ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ. ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇ.150 ರಿಂದ ಶೇ.175ಕ್ಕೆ ಏರಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ.

    ಕುಮಾರಸ್ವಾಮಿ ಕಳೆದ ಬಾರಿ ಮಂಡಿಸಿದ್ದ ಬಜೆಟ್ ನಲ್ಲಿ ಅಬಕಾರಿ ಇಲಾಖೆಗೆ 19,750 ಕೋಟಿ ರೂ.ನಷ್ಟು ಗುರಿ ನೀಡಲಾಗಿತ್ತು. 2019-20ನೇ ಆರ್ಥಿಕ ವರ್ಷಕ್ಕೆ 20,950 ಕೋಟಿ ರೂ. ರಾಜಸ್ವ ಸಂಗ್ರಹಣೆ ಗುರಿಯನ್ನು ನೀಡಲಾಗಿದೆ. ಫೆ.14ರ ವೇಳೆಗೆ 17 ಸಾವಿರ ಕೋಟಿ ರೂ. ಸಂಗ್ರಹವಾಗಿದೆ.

    ಡ್ರಾಟ್ ಬಿಯರ್, ಮೈಕ್ರೊ ಬ್ರಿವರಿಯಲ್ಲಿ ತಯಾರಾಗುವ ಬಿಯರ್ ಹಾಗೂ ಕಡಿಮೆ ಆಲ್ಕೋಹಾಲಿಕ್ ಬಿವರೇಜಸ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಏರಿಸಲು ನಿರ್ಧರಿಸಿದೆ. ರೈತರ ಸಾಲ ಮನ್ನಾ ಮತ್ತಿತರ ವಲಯಗಳಿಗೆ ಸಂಪನ್ಮೂಲ ಸಂಗ್ರಹಕ್ಕಾಗಿ ಅಬಕಾರಿ ಆದಾಯ ಹೆಚ್ಚಳಕ್ಕೆ ಒತ್ತು ನೀಡಲಾಗಿದ್ದು, ಮದ್ಯ ಪ್ರಿಯರ ಜೇಬಿಗೆ ಕತ್ತರಿ ಹಾಕಿದ್ದಾರೆ.

    ಎಷ್ಟು ಅಬಕಾರಿ ಸುಂಕ ಹೆಚ್ಚಳ?
    ಬಿಯರ್ ಮೇಲೆ ಹಾಲಿ ಶೇ.150 ಇದ್ದು ಶೇ.175ಕ್ಕೆ ಏರಿಕೆ.
    ಡ್ರಾಟ್ ಬಿಯರ್ ಮೇಲೆ ಹಾಲಿ ಶೇ.115 ಅಬಕಾರಿ ಸುಂಕವಿದ್ದು, ಶೇ.150ಕ್ಕೆ ಏರಿಕೆ
    ಮೈಕ್ರೊ ಬ್ರಿವರಿಯಲಿ ತಯಾರಾಗುವ ಬಿಯರ್ ಪ್ರತಿ ಲೀಟರ್ 5 ರೂ.ನಿಂದ 10 ರೂ.ಗೆ ಏರಿಕೆ
    ಪ್ರತಿ ಲೀಟರ್ ಬಲ್ಕ್ ಬಿಯರ್ ಗೆ ಹೆಚ್ಚುವರಿ ಅಬಕಾರಿ ಶುಲ್ಕ 12.50 ರಿಂದ 25 ರೂ.ಗೆ ಹೆಚ್ಚಳ
    ಲೋ ಆಲ್ಕೋಹಾಲಿಕ್ ಬಿವೆರೇಜಸ್ (ಎಲ್.ಎ.ಬಿ) ಹಾಲಿ ಇರುವ ಪ್ರತಿ ಬಲ್ಕ್ ಲೀಟರ್ 5 ರೂ. ನಿಂದ 10 ರೂ.ಗೆ ಏರಿಕೆ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಜೆಪಿ ಶಾಸಕರ 5 ದಿನ ವಾಸ್ತವ್ಯಕ್ಕೆ 3.16 ಕೋಟಿ ರೂ. ಖರ್ಚು!

    ಬಿಜೆಪಿ ಶಾಸಕರ 5 ದಿನ ವಾಸ್ತವ್ಯಕ್ಕೆ 3.16 ಕೋಟಿ ರೂ. ಖರ್ಚು!

    ಬೆಂಗಳೂರು: ಸತತ ಐದು ದಿನಗಳ ಕಾಲ ಶಾಸಕರನ್ನು ರೆಸಾರ್ಟ್ ನಲ್ಲಿ ಉಳಿಸಿಕೊಂಡಿದ್ದಕ್ಕೆ ಬಿಜೆಪಿ, ಹತ್ತಿರ 4 ಕೋಟಿ ರೂ. ಹಣವನ್ನು ಖರ್ಚು ಮಾಡಿದೆ. ಶಾಸಕರ ರೆಸಾರ್ಟ್ ರಾಜಕೀಯ ಅಂತ್ಯವಾಗಿದ್ದು, ಇಂದು ಮಧ್ಯಾಹ್ನ ಬೆಂಗಳೂರಿಗೆ ಶಾಸಕರು ವಾಪಸ್ ಬರುತ್ತಿದ್ದಾರೆ.

    104 ಶಾಸಕರ ಪೈಕಿ ಐವರು ಮಾತ್ರ ರೆಸಾರ್ಟಿಗೆ ಹೋಗಿರಲಿಲ್ಲ. ಶಾಸಕ ಗೋವಿಂದ ಕಾರಜೋಳ, ಎಸ್.ಎ. ರವೀಂದ್ರನಾಥ್, ಕರುಣಾಕರೆಡ್ಡಿ, ಸಿ.ಎಂ. ಉದಾಸಿ ಮತ್ತು ಸಿ.ಟಿ. ರವಿ ರೆಸಾರ್ಟ್ ಗೆ ಹೋಗಲಿಲ್ಲ. ಉಳಿದ 99 ಶಾಸಕರು ರೆಸಾರ್ಟ್ ನಲ್ಲಿ ತಂಗಿದ್ದರು.

    ಗುರುಗ್ರಾಮದ ಐಟಿಸಿ ಗ್ರಾಂಡ್ ಭಾರತ್, ಲೆಮೆನ್ ಟ್ರೀ ಮತ್ತು ಮುಂಬೈ ರೆಸಾರ್ಟ್ ನಲ್ಲಿ ಬಿಜೆಪಿ ಶಾಸಕರು ತಂಗಿದ್ದರು. ಮೊದಲ 5 ದಿನ ಐಶಾರಾಮಿ ಐಟಿಸಿ ಗ್ರಾಂಡ್ ಭಾರತ್ ರೆಸಾರ್ಟ್ ನಲ್ಲಿ ಬಿಜೆಪಿಯ 97 ಶಾಸಕರು ಇದ್ದರು. ಐಟಿಸಿ ಗ್ರಾಂಡ್ ಭಾರತ್ `7′ ಸೌಲಭ್ಯದ ರೆಸಾರ್ಟ್ ಆಗಿದ್ದು, ಇಲ್ಲಿ ಒಂದು ದಿನಕ್ಕೆ ಒಂದು ರೂಮಿಗೆ ಕನಿಷ್ಟ 25 ಸಾವಿರ ರೂ. ಇದೆ. ಇಲ್ಲಿನ ವಿಲ್ಲಾಗಳ ಒಂದು ದಿನದ ಬಾಡಿಗೆ ಬರೋಬ್ಬರಿ 3 ಲಕ್ಷ ರೂಪಾಯಿ ಆಗಿದ್ದರೆ, ಬಿಜೆಪಿ ಶಾಸಕರು ಉಳಿದುಕೊಂಡಿದ್ದ ರೂಮ್ ಗಳ ಒಂದು ದಿನದ ಬಾಡಿಗೆ 75 ಸಾವಿರ ರೂ. ಇದೆ.

    ಬಿಜೆಪಿ ತನ್ನ ಶಾಸಕರಿಗಾಗಿ ಒಟ್ಟು 60 ರೂಮ್ ಗಳನ್ನು ಬುಕ್ ಮಾಡಿತ್ತು. ಒಟ್ಟು ಗುರುಗ್ರಾಮದ ಐಶಾರಾಮಿ ರೂಮ್ ಬಾಡಿಗೆಯೇ 2 ಕೋಟಿ 27 ಲಕ್ಷ ರೂಪಾಯಿ ಆಗಿದೆ. ಇನ್ನೂ ರೂಮ್ ಬಾಡಿಗೆ, ಜಿಮ್, ಹೇರ್ ಸೆಲೂನ್, ಬಾಡಿ ಮಸಾಜ್, ಬ್ರೇಕ್ ಫಾಸ್ಟ್, ಸ್ನ್ಯಾಕ್ಸ್ ಸೇರಿದ ಎಲ್ಲ ಪ್ಯಾಕೇಜ್ ಕೂಡ ಇತ್ತು. ಮಧ್ಯಾಹ್ನ, ರಾತ್ರಿ ಊಟ ಹಾಗೂ ಮದ್ಯದ ವೆಚ್ಚ ಬೇರೆ ಇತ್ತು.

    ಲೆಮನ್ ಟ್ರೀ ರೆಸಾರ್ಟ್ ನಲ್ಲಿ 23 ಶಾಸಕರು ಇದ್ದರು. ಅದರ ಖರ್ಚು ಒಟ್ಟು 10 ಲಕ್ಷ ರೂಪಾಯಿ ಆಗಿದ್ದು, ರೂಮ್ ಬಾಡಿಗೆ ಬ್ರೇಕ್ ಫಾಸ್ಟ್, ಸ್ನ್ಯಾಕ್ಸ್ ಸೇರಿದ ಪ್ಯಾಕೇಜ್ ಆಗಿತ್ತು. ಒಟ್ಟಾರೆ ಆಪರೇಷನ್ ಕಮಲ ಮಾಡಲು ಬಿಜೆಪಿ ನಾಯಕರು 3.16 ಕೋಟಿ ರೂಪಾಯಿ ವೆಚ್ಚ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಒಂದು ರೂ. ನಾಣ್ಯ ಟಂಕಿಸಲು 1.11 ರೂ. ವೆಚ್ಚ!- ಯಾವ ನಾಣ್ಯಕ್ಕೆ ಎಷ್ಟು?

    ಒಂದು ರೂ. ನಾಣ್ಯ ಟಂಕಿಸಲು 1.11 ರೂ. ವೆಚ್ಚ!- ಯಾವ ನಾಣ್ಯಕ್ಕೆ ಎಷ್ಟು?

    ನವದೆಹಲಿ: ಇತ್ತೀಚಿನ ಮಕ್ಕಳಿಗೆ ಒಂದು ರೂಪಾಯಿ ಕೊಟ್ಟರೆ ನಮಗೆ ಬೇಡ. ಇದರಲ್ಲಿ ಏನು ಸಿಗುತ್ತೆ ಅಂತಾ ಪ್ರಶ್ನೆ ಮಾಡುತ್ತಾರೆ. ಅಷ್ಟೇ ಅಲ್ಲ ಒಂದು ರೂ. ಮುಖಬೆಲೆಯ ನಾಣ್ಯ ಮುದ್ರಣ ಮಾಡೋದಕ್ಕೆ ಸರ್ಕಾರ ಕೂಡ ಅದಕ್ಕಿಂತ ಹೆಚ್ಚು ಹಣ ವೆಚ್ಚ ಮಾಡಬೇಕಾಗುತ್ತದೆ.

    ಹೌದು, 1.ರೂ ಟಂಕಿಸಲು ಸರ್ಕಾರ 1.11 ರೂ. ವೆಚ್ಚ ಮಾಡಬೇಕಾಗಿದೆ. ನಾಣ್ಯಗಳನ್ನು ಟಂಕಿಸಲು ಎಷ್ಟು ವೆಚ್ಚ ಮಾಡಲಾಗುತ್ತಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ) ಪ್ರಶ್ನೆ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸರ್ಕಾರ ಎಲ್ಲ ರೀತಿಯ ಮುಖ ಬೆಲೆಯ ನಾಣ್ಯಕ್ಕೆ ಎಷ್ಟು ವೆಚ್ಚ ಮಾಡಲಾಗುತ್ತದೆ ಎನ್ನುವ ಮಾಹಿತಿ ನೀಡಿದೆ ಎಂದು ವರದಿಯಾಗಿದೆ.

    ಯಾವ ನಾಣ್ಯಕ್ಕೆ ಎಷ್ಟು ವೆಚ್ಚ?:
    1, 2, 5 ಹಾಗೂ 10 ರೂ. ಮುಖಬೆಲೆಯ ನಾಣ್ಯಗಳನ್ನು ಟಂಕಿಸಿ ಮಾರುಕಟ್ಟೆಗೆ ಬಿಡುಗಡೆಮಾಡುವ ಕೆಲಸವನ್ನು ಆರ್‌ಬಿಐ ಮಾಡುತ್ತಿದೆ. 2ರೂ. ನಾಣ್ಯಕ್ಕೆ 1.20 ರೂ., 5 ರೂ. ನಾಣ್ಯಕ್ಕೆ 3.69 ರೂ., ಮತ್ತು 10 ರೂ. ನಾಣ್ಯಕ್ಕೆ 5.54 ರೂ. ವೆಚ್ಚ ಮಾಡಬೇಕಾಗುತ್ತದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮದ್ವೆಗೆ ಕುದುರೆ ಬದಲು ಸಮುದ್ರ ವಿಮಾನದಲ್ಲಿ ರಣ್‍ವೀರ್ ಎಂಟ್ರಿ- ರೆಸಾರ್ಟ್ ಒಂದು ದಿನದ ಬಾಡಿಗೆ ಎಷ್ಟು?

    ಮದ್ವೆಗೆ ಕುದುರೆ ಬದಲು ಸಮುದ್ರ ವಿಮಾನದಲ್ಲಿ ರಣ್‍ವೀರ್ ಎಂಟ್ರಿ- ರೆಸಾರ್ಟ್ ಒಂದು ದಿನದ ಬಾಡಿಗೆ ಎಷ್ಟು?

    ಇಟಲಿ: ಬಾಲಿವುಡ್‍ನ ಬಾಜಿರಾವ್ ಹಾಗೂ ಮಸ್ತಾನಿಯಾದ ರಣ್‍ವೀರ್ ಸಿಂಗ್ ಹಾಗೂ ದೀಪಿಕಾ ಪಡುಕೋಣೆ ಇಂದು ಇಟಲಿಯಲ್ಲಿರುವ ಲೇಕ್ ಕೊಮೊ ಸರೋವರದ ತೀರದಲ್ಲಿ ಮದುವೆಯಾಗಲಿದ್ದಾರೆ.

    ವಿಲ್ಲಾ ಡೆಲ್ ಬಾಲ್‍ಬಿಯಾನೆಲ್ಲೋದಲ್ಲಿ ನಡೆಯಲಿರುವ ಈ ಮದುವೆಯ ಸ್ಥಳಕ್ಕೆ 700 ವರ್ಷದ ಇತಿಹಾಸ ಇದೆ. ಸರೋವರದ ತೀರದಲ್ಲಿ ದೀಪ್‍ವೀರ್ ಮದುವೆ ಮಂಟಪವಿದ್ದು, ರಣ್‍ವೀರ್ ಸಿಂಗ್ ಕುದುರೆ ಏರಿ ಬರುವ ಬದಲು ಸಮುದ್ರ ವಿಮಾನದಲ್ಲಿ ಎಂಟ್ರಿ ನೀಡಲಿದ್ದಾರೆ.

    ರಣ್‍ವೀರ್ ಸಿಂಗ್ ಹಾಗೂ ಅವರ ಕುಟುಂಬದವರು ಮಾತ್ರ ಸಮುದ್ರದ ವಿಮಾನದಲ್ಲಿ ಮದುವೆ ಮಂಟಪಕ್ಕೆ ಎಂಟ್ರಿ ನೀಡಲಿದ್ದಾರೆ. ಆದರೆ ಸಂಬಂಧಿಕರಿಗಾಗಿ ರಣ್‍ವೀರ್ ದುಬಾರಿ ಬೆಲೆಯ ಯಾಚ್‍ಗಳನ್ನು ಬುಕ್ ಮಾಡಿದ್ದಾರೆ ಎಂದು ವರದಿಯಾಗಿದೆ.

    ರಣ್‍ದೀಪ್ ಹಾಗೂ ಅವರ ಸಂಬಂಧಿಕರು ತಂಗಿರುವ ರೆಸಾರ್ಟ್‍ನಲ್ಲಿ ಒಟ್ಟು 75 ರೂಮ್, 4 ರೆಸ್ಟೋರೆಂಟ್ ಹಾಗೂ ಬಾರ್, 4 ಕಾನ್ಫರೇನ್ಸ್ ರೂಂ, ಸ್ಪಾ, ಇನ್‍ಡೋರ್ ಸ್ವಿಮ್ಮಿಂಗ್ ಪೂಲ್ ಇದೆ. ಈ ಜಾಗ ಒಟ್ಟು 26,000 ಚದರ ಅಡಿ ಇದ್ದು, ಮದುವೆ ಮಂಟಪಕ್ಕೆ 40-45 ನಿಮಿಷ ಬೋಟ್‍ನಲ್ಲಿ ಪ್ರಯಾಣಿಸಬೇಕು.

    ಈ ರೆಸಾರ್ಟ್ ನಲ್ಲಿರುವ ರೂಮಿನ ಒಂದು ದಿನದ ಬಾಡಿಗೆ 400 ಯೂರೋ ಎಂದರೆ 33 ಸಾವಿರ ರೂ. ಸದ್ಯ ರಣ್‍ವೀರ್ ಹಾಗೂ ದೀಪಿಕಾ 75 ರೂಮ್‍ಗಳನ್ನು ಬುಕ್ ಮಾಡಿದ್ದಾರೆ. ಹಾಗಾಗಿ ಅವರು ಒಂದು ದಿನಕ್ಕೆ 24,75,000 ರೂ. ನೀಡುತ್ತಿದ್ದು, ಒಂದು ವಾರಕ್ಕೆ 1,73,25,000 ರೂ. ನೀಡಿದ್ದಾರೆ ಎಂದು ವರಿದಯಾಗಿದೆ. ಸದ್ಯ ರಣ್‍ದೀಪ್ ನ. 17ರವರೆಗೂ ರೆಸಾರ್ಟ್ ಬುಕ್ ಮಾಡಿದ್ದಾರೆ.

    ಡೇವಿಡ್ ಬೋವೆ, ಜಾರ್ಜ್ ಕ್ಲೂನಿ ಮತ್ತು ಕಿಮ್ ಕರ್ದಾಶಿಯನ್ ಮುಂತಾದವರು ಕೂಡಾ ಲೇಕ್ ಕೊಮೊ ತಾಣದಲ್ಲಿ ಮದುವೆಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಹಚ್ಚಹಸಿರಾಗಿ ಸುಂದರವಾಗಿದ್ದ ಪಾರ್ಕ್ ಅಭಿವೃದ್ಧಿಗೆ ಬರೋಬ್ಬರಿ 1.30 ಕೋಟಿ ರೂ. ಖರ್ಚು!

    ಹಚ್ಚಹಸಿರಾಗಿ ಸುಂದರವಾಗಿದ್ದ ಪಾರ್ಕ್ ಅಭಿವೃದ್ಧಿಗೆ ಬರೋಬ್ಬರಿ 1.30 ಕೋಟಿ ರೂ. ಖರ್ಚು!

    ಬೆಂಗಳೂರು: ನಗರದ ಶಾಸಕ ಹಾಗೂ ಬಿಬಿಎಂಪಿ ಸದಸ್ಯರು ಸೇರಿ ಹಚ್ಚಹಸಿರಾಗಿ ಎಲ್ಲ ಸೌಲಭ್ಯವಿದ್ದ ಪಾರ್ಕ್ ಅಭಿವೃದ್ಧಿ ಮಾಡುತ್ತೇವೆ ಎಂದು ಸುಮಾರು 1.30 ಕೋಟಿ ಖರ್ಚು ಮಾಡಿದ್ದಾರೆ.

    ಶಂಕರಮಠ ಬಳಿಯ ಸ್ವಾಮಿ ವಿವೇಕಾನಂದ ಪಾರ್ಕ್ ಅಭಿವೃದ್ಧಿಗಾಗಿ ಕೋಟ್ಯಾಂತರ ರೂ. ಖರ್ಚು ಮಾಡಿದ್ದಾರೆ. ಈಗಾಗಲೇ ಈ ಪಾರ್ಕಿನಲ್ಲಿ ವಾಕಿಂಗ್ ಪಾಥ್ ಗಳಿಗೆ ಕಾಬುಲ್ ಕಲ್ಲು, ಸಾವಿರಾರು ವರ್ಷ ಆದ್ರೂ ಅಲುಗಾಡದ ಕಲ್ಲುಗಳು ಮತ್ತು ಹಸಿರು ಗಿಡ ಮರಗಳು ಇದ್ದವು. ಆದರೆ ಈ ಪಾರ್ಕನ್ನು ಶಾಸಕ ಗೋಪಾಲಯ್ಯ ಹಾಗೂ ಬಿಬಿಎಂಪಿ ಸದಸ್ಯರು ಸೇರಿ ಅಭಿವೃದ್ಧಿ ಮಾಡುತ್ತೇವೆ ಅಂತ ಚೆನ್ನಾಗಿದ್ದ ಗಿಡಗಳನ್ನ, ಕಲ್ಲುಗಳನ್ನ ಕಿತ್ತು ಹೊಸದಾಗಿ ಕಾಂಕ್ರೀಟ್ ಹಾಕಿ ಟೈಲ್ಸ್ ಪಾಥ್ ಮಾಡುತ್ತಿದ್ದಾರೆ.

    ಟೈಲ್ಸ್ ಪಾಥ್ ನಲ್ಲಿ ಮಳೆ ನೀರು ಬಂದರೆ ನೀರು ಭೂಮಿಗೆ ಇಂಗೋದೆ ಇಲ್ಲ. ಹಳೆಯ ವಾಕಿಂಗ್ ಪಾಥ್ ಗೆ ಏನಾಗಿತ್ತು. ಅಭಿವೃದ್ಧಿ ಮಾಡಿ ಅಂದರೆ ಅನಾವಶ್ಯಕವಾಗಿ ದುಡ್ಡನ್ನ ಯಾಕೆ ಹಾಳು ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ನರೇಂದ್ರ ಬಾಬು ಅವರು ಆಕ್ರೋಶಗೊಂಡು ಪ್ರಶ್ನಿಸಿದ್ದಾರೆ.

    ಈ ಪಾರ್ಕ್ ನಲ್ಲಿ ಈಗಾಗಲೇ ಒಂದು ಓಪನ್ ಜಿಮ್ ಇದೆ. ಇದೀಗ ಮತ್ತೊಂದು ಜಿಮ್ ಮಾಡುತ್ತಿದ್ದಾರೆ. ಇದಕ್ಕಾಗಿ 30 ಲಕ್ಷ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಇದ್ದ ಗಿಡಗಳನ್ನೆಲ್ಲ ಕಡಿದು ಹಾಕಿ ಹೊಸ ಗಿಡಗಳನ್ನ ನೆಡುವುದಕ್ಕೆ 30 ಲಕ್ಷ ರೂಪಾಯಿಗಳನ್ನ ಬಳಸುತ್ತಿದ್ದಾರೆ. ಅಷ್ಟೇ ಅಲ್ಲದೇ ಅಭಿವೃದ್ಧಿ ಹೆಸರಲ್ಲಿ ಚೆನ್ನಾಗಿ ಬೆಳೆದಿದ್ದ ಮರಗಳಿಗೆ ಕೊಡಲಿ ಹಾಕಿದ್ದಾರೆ. ಅಭಿವೃದ್ಧಿ ಕಾಮಗಾರಿ ಬಗ್ಗೆ ಟೆಂಡರ್ ಪಡೆದಿರುವವರು ಯಾರು?, ಯಾವ ನಿಧಿಯಿಂದ ಹಣ ಬಂದಿದೆ? ಎಷ್ಟು ಹಣದಲ್ಲಿ ಕಾಮಗಾರಿ ನಡೆಯುತ್ತಿದೆ? ಅಂತಾ ಸರ್ವಾಜನಿಕರಿಗೆ ತಿಳಿಯುವಂತೆ ನೋಟಿಸ್ ಹಾಕಬೇಕು. ಆದ್ರೆ ಇಲ್ಲಿ ಅದೂ ಕೂಡ ಹಾಕಿಲ್ಲ. ಈ ಪಾರ್ಕ್ ಅಭಿವೃದ್ಧಿಗೆ ಸುಮಾರು 1.30 ಕೋಟಿ ಖರ್ಚು ಮಾಡುತ್ತಿದ್ದು, ಹಣವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ನಾವು ಈ ಸಂಬಂಧ ದೂರು ದಾಖಲು ಮಾಡುತ್ತೇವೆ ಎಂದು ಮಾಜಿ ಉಪಮೇಯರ್ ಹರೀಶ್ ಎಚ್ಚರಿಸಿದ್ದಾರೆ.

    ಮಾಜಿ ಶಾಸಕ ನರೇಂದ್ರ ಬಾಬು

    ಈ ಬಗ್ಗೆ ಶಾಸಕ ಗೋಪಾಲಯ್ಯ ಪ್ರತಿಕ್ರಿಯಿಸಿ, ಯಾವುದೇ ದುಂದುವೆಚ್ಚ ಮಾಡುತ್ತಿಲ್ಲ. ಹಣ ದುರುಪಯೋಗ ಮಾಡಿದರೆ ಜನ ಮತ್ತೆ ನನ್ನ ಶಾಸಕ ಮಾಡುತ್ತಿರಲಿಲ್ಲ. ನನ್ನ ಕ್ಷೇತ್ರದ ಇತರೆ ಪಾರ್ಕ್ ನ ಅಭಿವೃದ್ಧಿ ಮಾದರಿಯಲ್ಲೇ ಇಲ್ಲೂ ಅಭಿವೃದ್ಧಿ ಮಾಡುತ್ತಿದ್ದೇವೆ. ಜನರ ಜೊತೆ ಮಾತನಾಡಿಯೇ ಅಲ್ಲಿ ಹೊಸ ಮಾದರಿಯ ಪಾರ್ಕ್ ಮಾಡುತ್ತಿರುವುದು. ಪಾರ್ಕ್ ಉದ್ಘಾಟನೆಯಾದ ಮೇಲೆ ನೋಡಿ ಬೆಂಗಳೂರಿನ ಬೆಸ್ಟ್ ಪಾರ್ಕ್ ಆಗುತ್ತದೆ ಎಂದು ಹೇಳುವ ಮೂಲಕ ಸಮರ್ಥಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ರಾಷ್ಟ್ರಪತಿ ಭವನದ ಉದ್ಯಾನವನ ನಿರ್ವಹಣೆಗೆ 12.70 ಕೋಟಿ ರೂ. ವೆಚ್ಚ!

    ರಾಷ್ಟ್ರಪತಿ ಭವನದ ಉದ್ಯಾನವನ ನಿರ್ವಹಣೆಗೆ 12.70 ಕೋಟಿ ರೂ. ವೆಚ್ಚ!

    ಬೆಳಗಾವಿ: ನವದೆಹಲಿಯಲ್ಲಿರುವ ರಾಷ್ಟ್ರಪತಿ ಭವನದ ಉದ್ಯಾನವನದ ನಿರ್ವಹಣೆಗಾಗಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸುಮಾರು 12.70 ಕೋಟಿ ರೂಪಾಯಿ ವೆಚ್ಚಮಾಡಲಾಗಿದೆ ಎಂದು ಆರ್ ಟಿಐ ಮೂಲಕ ಬಹಿರಂಗವಾಗಿದೆ.

    ನಗರದ ಆರ್ ಟಿಐ ಕಾರ್ಯಕರ್ತರಾದ ಭೀಮಪ್ಪ ಗಡಾದ ರವರು, ರಾಷ್ಟ್ರಪತಿ ಭವನ ಉದ್ಯಾನವನದ ಖರ್ಚು-ವೆಚ್ಚಗಳ ಬಗ್ಗೆ ಆರ್ ಟಿಐ ಅಡಿಯಲ್ಲಿ ಪ್ರಶ್ನಿಸಿದಾಗ ಈ ಸತ್ಯ ಹೊರಬಂದಿದೆ. ಉದ್ಯಾನವನದ ನಿರ್ವಹಣೆಗಾಗಿ ಇಷ್ಟೊಂದು ಹಣ ವೆಚ್ಚ ಮಾಡುವ ಅವಶ್ಯಕತೆ ಇದೆಯೇ ಎಂದು ಭೀಮಪ್ಪ ಗಡಾದ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

    ಆರ್ ಟಿಐ ಅಡಿಯಲ್ಲಿ ರಾಷ್ಟ್ರಪತಿ ಭವನದಿಂದ ಪಡೆದಿರುವ ಮಾಹಿತಿಯನ್ನು ಗುರುವಾರ ಸುದ್ದಿಮಾಧ್ಯಮಗಳಿಗೆ ಭೀಮಪ್ಪ ಗಡಾದ್ ಬಿಡುಗಡೆ ಮಾಡಿದ್ದಾರೆ. ಈ ವೇಳೆ ಮಾಹಿತಿ ನೀಡಿದ ಅವರು, ಉದ್ಯಾನವನ ನಿರ್ವಹಣೆಗಾಗಿ ಕಳೆದ ಮೂರು ವರ್ಷಗಳಲ್ಲಿ ಸುಮಾರು 12.70 ಕೋಟಿ ರೂ., ಹೂದೋಟ ಯಂತ್ರೋಪಕರಣಗಳ ಖರೀದಿಗಾಗಿ 1.46 ಕೋಟಿ ರೂ. ಹಾಗೂ ಉದ್ಯಾನವನ ಸಿಬ್ಬಂದಿಯವರ ವೇತನಕ್ಕಾಗಿ ಪ್ರತಿವರ್ಷ ಅಂದಾಜು 8.64 ಕೋಟಿ ರೂ. ವೆಚ್ಚ ಮಾಡಲಾಗಿದ್ದು ಸುಮಾರು 20 ಕೋಟಿ ಉದ್ಯಾನವನ ನಿರ್ವಹಣೆಗೆ ಖರ್ಚಾಗಿದೆ ಎಂದು ತಿಳಿಸಿದ್ದಾರೆ.

    ಇಷ್ಟೊಂದು ಹಣ ವೆಚ್ಚ ಮಾಡಿ ಉದ್ಯಾನವನ ನಿರ್ವಹಣೆ ಮಾಡುವುದರಿಂದ ಏನಾದರೂ ಪ್ರಯೋಜನವಾಗುತ್ತಿದೆಯೇ ಎಂದು ಪ್ರಶ್ನಿಸಿದ ಅವರು, ಕೂಡಲೇ ರಾಷ್ಟ್ರಪತಿಗಳ ಈ ಕುರಿತು ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.

    ಸರ್ಕಾರದ ವಿವಿಧ ಯೋಜನೆಗಳ ಪಿಂಚಣಿಗೆ ಹಣ ಪ್ರತಿ ತಿಂಗಳು ಸಮಯಕ್ಕೆ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ. ಪಿಂಚಣಿ ಬಂದಿಲ್ಲವೆಂದು ವಯೋವೃದ್ಧರು, ವಿಧವೆಯರು ಧರಣಿ ಮಾಡುವುದು ಎಲ್ಲಾ ಕಡೆ ನಡೆಯುತ್ತಲೇ ಇರುತ್ತದೆ. ಪರಿಸ್ಥಿತಿ ಹೀಗಿರುವಾಗ, ಸಾರ್ವಜನಿಕರಿಂದ ಸಂಗ್ರಹವಾದ ತೆರಿಗೆ ಹಣವನ್ನು ಈ ರೀತಿ ಪೋಲು ಮಾಡುತ್ತಿರುವುದು ಎಷ್ಟು ಸರಿ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.