Tag: Council Session

  • ಹಾಸನ ಸಹಕಾರ ಬ್ಯಾಂಕ್ ಒಂದು ವಂಶಾಡಳಿತ ಕಪಿಮುಷ್ಠಿಯಲ್ಲಿದೆ- ಎಸ್.ರವಿ

    ಹಾಸನ ಸಹಕಾರ ಬ್ಯಾಂಕ್ ಒಂದು ವಂಶಾಡಳಿತ ಕಪಿಮುಷ್ಠಿಯಲ್ಲಿದೆ- ಎಸ್.ರವಿ

    ಬೆಳಗಾವಿ: ಹಾಸನ ಸಹಕಾರ ಬ್ಯಾಂಕ್ ಒಂದು ವಂಶಾಡಳಿತ ಕಪಿಮುಷ್ಠಿಯಲ್ಲಿದೆ. ಈ ವಂಶಾಡಳಿತವನ್ನು ಕೊನೆಗಾಣಿಸಬೇಕು ಎಂದು ಹೆಸರು ಹೇಳದೇ ಪರೋಕ್ಷವಾಗಿ ದೇವೇಗೌಡ ಕುಟುಂಬದ ಬಗ್ಗೆ ಎಸ್.ರವಿ ಅವರು ಪ್ರಸ್ತಾಪ ಮಾಡಿದ ಘಟನೆ ವಿಧಾನ ಪರಿಷತ್‌ನಲ್ಲಿ ನಡೆಯಿತು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ವೇಳೆ ಕಾಂಗ್ರೆಸ್ ಪರಿಷತ್ ಸದಸ್ಯ ಶಂಬುಲಿಂಗಯ್ಯ ರವಿ ಅವರು, ದೇವೇಗೌಡ ಕುಟುಂಬದ ಬಗ್ಗೆ ಪರೋಕ್ಷವಾಗಿ ಆರೋಪ ಮಾಡಿದರು.ಇದನ್ನೂ ಓದಿ: ವಿಜಯ್ ಮಲ್ಯ, ನೀರವ್ ಮೋದಿ ಅವರ 15,000 ಕೋಟಿ ಆಸ್ತಿ ಬ್ಯಾಂಕ್‌ಗಳಿಗೆ ವಾಪಸ್‌: ಕೇಂದ್ರ ಸರ್ಕಾರ

    ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆ ಕೇಳಿದ ಅವರು, ಹಾಸನ ಸಹಕಾರ ಕೇಂದ್ರ ಬ್ಯಾಂಕ್‌ನಲ್ಲಿ ಸಾಲ ನೀಡಿರುವುದರಲ್ಲಿ ದೊಡ್ಡ ಅಕ್ರಮವಾಗಿದೆ. ಇದು ಚನ್ನರಾಯಪಟ್ಟಣ ತಾಲೂಕಿನಲ್ಲೇ ನಡೆದ ದೊಡ್ಡ ಅಕ್ರಮವಾಗಿದೆ. ಯಾರದ್ದೋ ದಾಖಲಾತಿ ಮೇಲೆ ಸಾಲ ಮಂಜೂರಾಗಿದೆ. ಸಾಲ ಪಡೆಯದೇ ಇದ್ದರೂ ಬೇರೆಯವರ ಜಮೀನಿನ ಮೇಲೆ ಅವರಿಗೆ ಸಾಲ ನೀಡಿದ್ದಾರೆ. ಈ ಅಕ್ರಮದ ಬಗ್ಗೆ ಸಮಗ್ರ ತನಿಖೆ ಆಗಬೇಕು. ಹಾಸನ ಜಿಲ್ಲೆಯಲ್ಲಿ ವಂಶಾಡಳಿತವಾಗಿದೆ. ಹಾಸನ ಸಹಕಾರ ಬ್ಯಾಂಕ್ ವಂಶಾಡಳಿತದ ಕಪಿಮುಷ್ಠಿಯಿಂದ ಮುಕ್ತಿ ಮಾಡಬೇಕು ಎಂದು ಆಗ್ರಹಿಸಿದರು.

    ಇದಕ್ಕೆ ಸಚಿವ ರಾಜಣ್ಣ ಉತ್ತರ ನೀಡಿ, ಚನ್ನರಾಯಪಟ್ಟಣ ಸಹಕಾರ ಬ್ಯಾಂಕ್‌ನಲ್ಲಿ ಹೆಚ್ಚು ಫೈನಾನ್ಸ್ ನೀಡಿರುವುದು ಸತ್ಯ. ಯಾರದ್ದೋ ಹೆಸರಿನ ಪಹಣಿಗೆ ಸಾಲ ಕೊಟ್ಟಿರುವುದು ಗಮನಕ್ಕೆ ಬಂದಿದೆ. ಸಾಲ ಕೊಡದೇ ಹೋದರೂ ರೈತರ ಆರ್‌ಟಿಸಿಯಲ್ಲಿ ಸಾಲ ಕೊಡಲಾಗಿದೆ ಎಂದು ನಮೂದು ಆಗಿದೆ. ಇನ್ನೂ ಕೂಡಾ ಅಕ್ರಮ ಆಗುತ್ತಿವೆ. ಈ ತಿಂಗಳ ಕೊನೆ ವಾರ ಅಥವಾ ಮುಂದಿನ ತಿಂಗಳ ಮೊದಲ ವಾರದ ಒಳಗೆ ಎಲ್ಲಾ ಮಾಹಿತಿ ಪಡೆದು ಸಭೆ ಮಾಡುತ್ತೇನೆ. ಏನಾದರೂ ಅಕ್ರಮ ಆಗಿದ್ದರೆ ಕ್ರಮ ತೆಗೆದುಕೊಳ್ಳುವ ಕೆಲಸ ಮಾಡುತ್ತೀವಿ ಎಂದು ತಿಳಿಸಿದರು.ಇದನ್ನೂ ಓದಿ: ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ವಿಶೇಷ ಅನುದಾನ ಕೊಡಿ – ಯತೀಂದ್ರ ಸಿದ್ದರಾಮಯ್ಯ

  • ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ವಿಶೇಷ ಅನುದಾನ ಕೊಡಿ – ಯತೀಂದ್ರ ಸಿದ್ದರಾಮಯ್ಯ

    ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ವಿಶೇಷ ಅನುದಾನ ಕೊಡಿ – ಯತೀಂದ್ರ ಸಿದ್ದರಾಮಯ್ಯ

    ಬೆಂಗಳೂರು: ದೇಶಿಯ ಕುರಿ ತಳಿ ಸಂರಕ್ಷಣೆ ಮಾಡಲು ರೈತರಿಗೆ ಉಚಿತವಾಗಿ ದೇಶಿ ತಳಿ ಕುರಿಗಳನ್ನ ಸರ್ಕಾರ ನೀಡಬೇಕು ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಆಗ್ರಹಿಸಿದರು.ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕ್ಕರೆ ನಾಡು ಸಿದ್ಧ

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಹಲವಾರು ದೇಶಿಯ ಕುರಿ ತಳಿಗಳು ವಿನಾಶದ ಅಂಚಿನಲ್ಲಿವೆ. ದೇಶಿ ಕುರಿ ತಳಿಗಳ ಸಂರಕ್ಷಣೆಗೆ ಸಾಕಷ್ಟು ಮೂಲಭೂತ ಸೌಕರ್ಯಗಳು ಮತ್ತು ಕುರಿಗಾಹಿಗಳಿಗೆ ಸಹಾಯ ಧನದ ಅವಶ್ಯಕತೆ ಇದೆ. ಇದಕ್ಕಾಗಿ 5 ಕೋಟಿ ರೂ. ವಿಶೇಷ ಅನುದಾನ ಕೊಡಬೇಕು. ಅಲ್ಲದೆ ಉಚಿತವಾಗಿ ರೈತರಿಗೆ ದೇಶಿ ತಳಿ ಕೊಡಬೇಕು ಎಂದು ಒತ್ತಾಯಿಸಿದರು.

    ಇದಕ್ಕೆ ಸಚಿವ ವೆಂಕಟೇಶ ಉತ್ತರ ನೀಡಿ, 2019ರ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ 110.51 ಲಕ್ಷ ಕುರಿಗಳು ಹಾಗೂ 61.69 ಲಕ್ಷ ಮೇಕೆಗಳು ಇವೆ. ಮಂಡ್ಯ, ಹಾಸನ, ಕೆಂಗುರಿ, ಬಳ್ಳಾರಿಯಲ್ಲಿ ಡೆಕನಿ, ಯಳಗ ಕುರಿ ತಳಿಗಳು ಮತ್ತು ನಂದಿದುರ್ಗ, ಬಿದರಿ ಮೇಕೆ ತಳಿಗಳು ಇವೆ. ರಾಜ್ಯದಲ್ಲಿ ವಿನಾಶದ ಅಂಚಿನಲ್ಲಿ ಇರುವ ದೇಶಿಯ ಕುರಿ ತಳಿ ಸಂರಕ್ಷಣೆಗಾಗಿ 5 ಕಡೆ ಕುರಿ/ಮೇಕೆ ತಳಿ ಸಂವರ್ಧನಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈಗಾಗಲೇ ರೈತರಿಗೆ ರಿಯಾಯಿತಿ ದರದಲ್ಲಿ ಮೇಕೆ, ಕುರಿ ತಳಿಗಳನ್ನು ಕೊಡಲಾಗುತ್ತಿದೆ. ವಿಶೇಷ ಅನುದಾನ ನೀಡುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.ಇದನ್ನೂ ಓದಿ: ಜಮ್ಮು ಕಾಶ್ಮೀರದ ಕಥುವಾದಲ್ಲಿ ಮನೆಗೆ ಬೆಂಕಿ – ಮಾಜಿ ಡಿಎಸ್‌ಪಿ ಸೇರಿ 6 ಮಂದಿ ಸಾವು