Tag: Count

  • ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – ಭಕ್ತಾದಿಗಳಿಂದ ಹರಿದು ಬಂತು ಕೋಟ್ಯಂತರ ರೂ.

    ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ – ಭಕ್ತಾದಿಗಳಿಂದ ಹರಿದು ಬಂತು ಕೋಟ್ಯಂತರ ರೂ.

    ಮೈಸೂರು: ಕೋವಿಡ್-19 ಮಹಾಮಾರಿ ಎಲ್ಲಾ ಉದ್ಯಮಗಳ ಮೇಲೂ ಬಾರಿ ಹೊಡೆತ ಬೀರಿದೆ. ಇದರಿಂದ ಜನರಂತೂ ತತ್ತರಿಸಿ ಹೋಗಿದ್ದಾರೆ. ಹೀಗಿದ್ದರೂ ಕೊರೊನಾ ಸಾಂಕ್ರಮಿಕ ರೋಗದ ನಡುವೆಯೂ ರಾಜ್ಯದ ದೇವಾಲಯಗಳ ಹುಂಡಿಗೆ ಭಕ್ತರಿಂದ ಅಪಾರವಾದ ಹಣ ಸಂಗ್ರಹವಾಗಿದೆ.

    ಇತ್ತೀಚೆಗಷ್ಟೇ ಮಲೆಮಹದೇಶ್ವರ ಬೆಟ್ಟದ ದೇವಾಲಯ ಹುಂಡಿ ಹಣ ಏಣಿಕೆ ಮಾಡಲಾಯಿತು. ಮಹದೇಶ್ವರನಿಗೆ ಭಕ್ತರಿಂದ ಕ್ಯೋಟ್ಯಂತರ ರೂಪಾಯಿ ಹಣ ಹರಿದುಬಂದಿದೆ. ಇದೀಗ ಮೈಸೂರಿನಲ್ಲಿರುವ ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಹುಂಡಿ ಹಣ ಎಣಿಕೆ ಮಾಡಲಾಯಿತು. ಈ ವೇಳೆ ನಂಜುಂಡೇಶ್ವರ ಸನ್ನಿಧಾನಕ್ಕೂ ಒಂದು ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ.

    ಹೌದು, ಈ ಬಾರಿ ನಂಜುಂಡೇಶ್ವರ ದೇವಾಲಯಕ್ಕೆ ಭಕ್ತಾದಿಗಳು ಕಾಣಿಕೆ ರೂಪದಲ್ಲಿ ಕೋಟ್ಯಂತರ ರೂಪಾಯಿ ಸಲ್ಲಿಸಿದ್ದಾರೆ. ಒಂದು ತಿಂಗಳ ಅವಧಿಯಲ್ಲಿ 1,01,71,910 ರೂ. ಸಂಗ್ರಹವಾಗಿದೆ. ಏಣಿಕೆ ವೇಳೆ 7500 ರೂ ಮೌಲ್ಯದ ನಿಷೇಧಿತ ನೋಟುಗಳು ಪತ್ತೆಯಾಗಿದ್ದು, 1000 ಮೌಲ್ಯದ 2 ನೋಟುಗಳು ಹಾಗೂ 500 ಮೌಲ್ಯದ 11 ನಿಷೇಧಿತ ನೋಟುಗಳು ಸಂಗ್ರಹವಾಗಿದೆ. ಅಲ್ಲದೆ 2 ವಿದೇಶಿ ಕರೆನ್ಸಿಗಳು ಕಾಣಿಕೆ ರೂಪದಲ್ಲಿ ಬಂದಿದೆ.

    ಇಲ್ಲಿಯವರೆಗೂ 20ಕ್ಕೂ ಹೆಚ್ಚು ಹುಂಡಿಗಳ ಹಣವನ್ನು 50ಕ್ಕೂ ಹೆಚ್ಚು ಸಿಬ್ಬಂದಿ ಎಣಿಕೆ ಮಾಡಿದ್ದಾರೆ. ಜೊತೆಗೆ ಹುಂಡಿಯಲ್ಲಿ 70 ಗ್ರಾಂ ಚಿನ್ನ ಹಾಗೂ 3.5 ಕೆಜಿ ಬೆಳ್ಳಿ ಕೂಡ ಸಂಗ್ರಹವಾಗಿದೆ. ಲಾಕ್‍ಡೌನ್ ಮುಗಿಯುತ್ತಿದ್ದಂತೆ ನಂಜುಂಡೇಶ್ವರ ಸ್ವಾಮಿಗೆ ಭಕ್ತರು ಉದಾರವಾಗಿ ಕಾಣಿಕೆ ಸಲ್ಲಿಸಿದ್ದಾರೆ.

  • ಕೊರೊನಾ ವೇಳೆಯಲ್ಲೂ ಗೊರವನಹಳ್ಳಿ ಮಹಾಲಕ್ಷ್ಮಿ ಹುಂಡಿಯಲ್ಲಿ ಭರ್ಜರಿ ಕಾಣಿಕೆ

    ಕೊರೊನಾ ವೇಳೆಯಲ್ಲೂ ಗೊರವನಹಳ್ಳಿ ಮಹಾಲಕ್ಷ್ಮಿ ಹುಂಡಿಯಲ್ಲಿ ಭರ್ಜರಿ ಕಾಣಿಕೆ

    ತುಮಕೂರು: ಕೊರಟಗೆರೆ ತಾಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಗೊರವನಹಳ್ಳಿ ಶ್ರೀಮಹಾಲಕ್ಷ್ಮಿ ದೇವಾಲಯದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದ್ದು, ಅಪಾರ ಪ್ರಮಾಣದಲ್ಲಿ ಹಣ ಹಾಗೂ ಆಭರಣಗಳು ಕಾಣಿಕೆ ರೂಪದಲ್ಲಿ ಹರಿದು ಬಂದಿದೆ.

    ಕಳೆದ 4 ತಿಂಗಳಿನಿಂದ 8 ಹುಂಡಿಗಳಲ್ಲಿ ಸಂಗ್ರಹವಾಗಿದ್ದ ಹಣವನ್ನು ಎಣಿಕೆ ಮಾಡಲಾಗಿದ್ದು, ಈ ಸಂದರ್ಭದಲ್ಲಿ 49,89,780ರೂ. ನಗದು ಹಾಗೂ ಲಕ್ಷಾಂತರ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಕಾಣಿಕೆ ರೂಪದಲ್ಲಿ ಲಭಿಸಿದೆ. ಆಭರಣಗಳ ಪೈಕಿ ಬಂಗಾರದ ತಾಳಿ 6, ನತ್ತು 3, ಬೆಳ್ಳಿಯ ಲಕ್ಷ್ಮೀ ಮುಖವಾಡ 1, ಬಳೆ 1, ಬಿಸ್ಕತ್ತು 2, ಕಾಲುಚೈಲು 4, ಲಕ್ಷ್ಮಿನಾಣ್ಯ 1, ಕಾಲುಂಗರ 2, ತಾಳಿ 2, ಕಣ್ಣು 2, ನಾಗಪ್ಪ ವಿಗ್ರಹ 1 ಸೇರಿ ಲಕ್ಷಾಂತರ ರೂ. ಮೌಲ್ಯದ ಒಡವೆಗಳು ಕಾಣಿಕೆ ಹುಂಡಿಯಲ್ಲಿ ದೊರೆತಿವೆ.

    ಕೊರೋನಾ ಹಿನ್ನೆಲೆಯಲ್ಲಿ ಮಾರ್ಚ್‍ನಿಂದ ಜುಲೈ 07ರವರಗೆ ದೇವಸ್ಥಾನ ಬಂದ್ ಮಾಡಲಾಗಿತ್ತು. ಜುಲೈ 08ರಿಂದ ಪುನಃ ಭಕ್ತಾದಿಗಳ ದರ್ಶನಕ್ಕೆ ಅನುವು ಮಾಡಿಕೊಡಲಾಗಿತ್ತು. ಅಲ್ಲಿಂದ ನವೆಂಬರ್ ಅಂತ್ಯದವರೆಗೆ ಬರೋಬ್ಬರಿ 50 ಲಕ್ಷ ರೂ ಸಂಗ್ರವಾಗಿದೆ.

    ಬುಧವಾರ ಹಾಗೂ ಗುರುವಾರ ಎರಡು ದಿನಗಳ ಕಾಲ ನಡೆದ ಹುಂಡಿ ಹಣ ಎಣಿಕೆಯನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಲಾಗಿದೆ. ಎಣಿಕೆ ವೇಳೆ ಕೋಳಾಲ ಉಪತಹಶೀಲ್ದಾರ್ ಮಧುಸೂಧನ್, ಆಹಾರ ಶಿರಸ್ತೆದಾರ್ ನರಸಿಂಹಮೂರ್ತಿ ಹಾಜರಿದ್ದರು. 40ಕ್ಕೂ ಅಧಿಕ ಗ್ರಾಮ ಸಹಾಯಕರು, ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಮಹಾಲಕ್ಷ್ಮಿ ದೇವಾಲಯದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗಿಯಗಿದ್ದರು.

  • ಮಲೆ ಮಹದೇಶ್ವರ ಹುಂಡಿ ಎಣಿಕೆ: ಬರೋಬ್ಬರಿ 1.32 ಕೋಟಿ ರೂ. ಸಂಗ್ರಹ

    ಮಲೆ ಮಹದೇಶ್ವರ ಹುಂಡಿ ಎಣಿಕೆ: ಬರೋಬ್ಬರಿ 1.32 ಕೋಟಿ ರೂ. ಸಂಗ್ರಹ

    ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಸ್ವಾಮಿಯ ದೇವಾಲಯದ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಈ ಬಾರಿ ಬರೊಬ್ಬರಿ 1.32 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ.

    ಅಕ್ಟೋಬರ್ ತಿಂಗಳ ಕೊನೆಯ ದಿನವಾದ ಬುಧವಾರ ಎಣಿಕೆ ಕಾರ್ಯವನ್ನು ಆರಂಭಿಸಲಾಗಿತ್ತು. ಈ ವೇಳೆ ಒಟ್ಟು 1,32,83,620 ರೂ. ಸಂಗ್ರಹವಾಗಿದೆ. ಅಲ್ಲದೇ 45 ಗ್ರಾಂ ಚಿನ್ನ ಹಾಗೂ 1 ಕೆಜಿ 5 ಗ್ರಾಂ ಬೆಳ್ಳಿಯ ಆಭರಣಗಳು ಭಕ್ತರಿಂದ ಕಾಣಿಕೆ ರೂಪದಲ್ಲಿ ಲಭ್ಯವಾಗಿದೆ.

    ಹುಂಡಿ ಎಣಿಕೆ ಕಾರ್ಯವನ್ನು ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜಿ.ರೂಪಾ ಹಾಗೂ ಸಾಲೂರು ಮಠದ ಗುರುಸ್ವಾಮಿ ಸಮ್ಮುಖದಲ್ಲಿ ನೆರವೇರಿತ್ತು. ಎಸ್‍ಬಿಐ ಶಾಖೆಯ ಬ್ಯಾಂಕ್ ಸಿಬ್ಬಂದಿ ಹಾಗೂ ಸಿಸಿಟಿವಿಯ ಕಣ್ಗಾವಲಿನಲ್ಲಿ ಬುಧವಾರ ತಡರಾತ್ರಿಯವರೆಗೂ ಎಣಿಕೆ ಕಾರ್ಯ ನಡೆದಿತ್ತು.

    ಮಲೆ ಮಹದೇಶ್ವರ ದೇವಾಲಯವು ರಾಜ್ಯದಲ್ಲಿಯೇ ಮುಜರಾಯಿ ಇಲಾಖೆಗೆ ಅತಿ ಹೆಚ್ಚು ಆದಾಯ ತರುವ ದೇವಸ್ಥಾನಗಳ ಪೈಕಿ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಪ್ರತಿ ತಿಂಗಳ ಕೊನೆಯ ದಿನದಂದು ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ಇದನ್ನೂ ಓದಿ: ಚಾಮುಂಡಿ ದೇವಸ್ಥಾನದಲ್ಲಿ ಕೋಟಿ ದಾಟಿದ ಹುಂಡಿ ಹಣ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಾಮುಂಡಿ ದೇವಸ್ಥಾನದಲ್ಲಿ ಕೋಟಿ ದಾಟಿದ ಹುಂಡಿ ಹಣ

    ಚಾಮುಂಡಿ ದೇವಸ್ಥಾನದಲ್ಲಿ ಕೋಟಿ ದಾಟಿದ ಹುಂಡಿ ಹಣ

    ಮೈಸೂರು: ಕೋಟಿ ರೂಪಾಯಿ ಹುಂಡಿ ಹಣ ಸಂಗ್ರಹವಾಗುವ ದೇವಸ್ಥಾನಗಳ ಪಟ್ಟಿಗೆ ಮೈಸೂರಿನ ಚಾಮುಂಡಿ ಬೆಟ್ಟದ ಚಾಮುಂಡೇಶ್ವರಿ ದೇಗುಲ ಮತ್ತೇ ಸೇರ್ಪಡೆಯಾಗಿದೆ.

    ಕಳೆದ ಬಾರಿಯಂತೆ ಈ ಬಾರಿ ಹುಂಡಿಯೊಂದರಲ್ಲೇ ಕೋಟಿ ಹಣ ಸಂಗ್ರಹವಾಗಿದೆ. ಕಳೆದ ಬಾರಿಗಿಂತ 7 ಲಕ್ಷ ರೂ. ಹೆಚ್ಚಿನ ಹಣ ಹುಂಡಿಯಲ್ಲಿ ಸಂಗ್ರಹವಾಗಿದ್ದು, ಕಾವೇರಿ ಗ್ರಾಮೀಣ ಬ್ಯಾಂಕ್‍ನ ಸಿಬ್ಬಂದಿ ಹುಂಡಿ ಏಣಿಕೆ ಕಾರ್ಯ ನಡೆಸಿದ್ದಾರೆ.

    ಒಂದೂವರೆ ತಿಂಗಳ ಬಳಿಕ ಎಣಿಕೆಯಾದ ದೇವಾಲಯದ 7 ಹುಂಡಿಯಲ್ಲಿ ಬರೋಬ್ಬರಿ 1 ಕೋಟಿ, 27 ಲಕ್ಷದ 67 ಸಾವಿರದ 605 ರೂ.(1,27,67,605) ಸಂಗ್ರಹವಾಗಿದೆ. ಹುಂಡಿಯಲ್ಲಿ ಒಟ್ಟು 34 ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ಚಿನ್ನ ಮತ್ತು ಬೆಳ್ಳಿ ಮುಂದಿನ ದಿನಗಳಲ್ಲಿ ಏಣಿಕೆಯಾಗುವ ಬಗ್ಗೆ ದೇವಾಲಯದ ಕಾರ್ಯನಿರ್ವಾಹಕಾಧಿಕಾರಿ ಪ್ರಸಾದ್ ಮಾಹಿತಿ ನೀಡಿದ್ದಾರೆ.

    ಕಾವೇರಿ ಗ್ರಾಮೀಣ ಬ್ಯಾಂಕ್‍ನ 35 ಮಂದಿ ಸಿಬ್ಬಂದಿ ಹುಂಡಿ ಹಣ ಎಣಿಕೆ ಕಾರ್ಯನಡೆಸಿದ್ದು, ಕಳೆದ ಬಾರಿ 1 ಕೋಟಿ 20 ಲಕ್ಷ ರೂ. ಹಣ ಹುಂಡಿಯಲ್ಲಿ ಸಂಗ್ರಹವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೂರೇ ತಿಂಗಳಲ್ಲಿ ಚಿಕ್ಕ ತಿರುಪತಿಯ ಹುಂಡಿಯಲ್ಲಿ ಸಂಗ್ರಹವಾಯ್ತು ದಾಖಲೆ ಮೊತ್ತದ ಹಣ

    ಮೂರೇ ತಿಂಗಳಲ್ಲಿ ಚಿಕ್ಕ ತಿರುಪತಿಯ ಹುಂಡಿಯಲ್ಲಿ ಸಂಗ್ರಹವಾಯ್ತು ದಾಖಲೆ ಮೊತ್ತದ ಹಣ

    ಕೋಲಾರ: ಜಿಲ್ಲೆಯ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣ ಸ್ವಾಮಿ ಮೂರೇ ತಿಂಗಳಲ್ಲಿ ದೇವಾಲಯದ ಹುಂಡಿಯಲ್ಲಿ ನಗದು, ಚಿನ್ನಾಭರಣ ಸೇರಿದಂತೆ ಸುಮಾರು ಮೂರು ಕೋಟಿ ರೂ. ಅಧಿಕ ಮೊತ್ತ ಸಂಗ್ರಹವಾಗಿದೆ.

    ಜಿಲ್ಲೆ ಮಾಲೂರು ತಾಲ್ಲೂಕು ಚಿಕ್ಕತಿರುಪತಿಯಲ್ಲಿರುವ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯ ಹೆಚ್ಚು ಪ್ರಸಿದ್ಧಿಯಾಗಿರುವ ದೇವಾಲಯವಾಗಿದೆ. ಜಿಲ್ಲೆ ವಿವಿಧ ಭಾಗ, ನೆರೆ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ.

    ಇಂದು ಮೂರು ತಿಂಗಳಲ್ಲಿ ಸಂಗ್ರಹವಾಗಿರುವ ಹುಂಡಿ ಹಣ ಎಣಿಕೆ ಕಾರ್ಯ ನಡೆಸಲಾಗಿದ್ದು, 46,07,247 ರೂ. ನಗದು, 50 ಗ್ರಾಂ ಚಿನ್ನಾಭರಣ, 347 ಗ್ರಾಂ ಬೆಳ್ಳಿ, ವಿದೇಶಿ ಕರೆನ್ಸಿ ಸಂಗ್ರಹವಾಗಿದೆ. ಕಳೆದ ವರ್ಷ ದೇವಾಲಯದ ಹುಂಡಿಯಲ್ಲಿ 1.62 ಕೋಟಿ ರೂಪಾಯಿ ಸಂಗ್ರಹವಾಗಿತ್ತು.

    ಪ್ರೇಮ ನಿವೇದನೆ: ಹುಂಡಿ ಎಣಿಕೆ ಕಾರ್ಯದ ವೇಳೆ ಯುವತಿಯೊಬ್ಬರು ತನ್ನ ಪ್ರೇಮ ಕುರಿತು ಪತ್ರ ಬರೆದಿದ್ದು, ತಾನು ಗಣೇಶ್ ಎಂಬಾತನನ್ನು ಕಳೆದ ಎಂಟು ವರ್ಷಗಳಿಂದ ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದೇನೆ. ಯಾವುದೇ ತೊಂದರೆ ಆಗದೆ ನಿನ್ನ ಸನ್ನಿಧಿಯಲ್ಲೇ ನಮ್ಮಿಬ್ಬರ ಮದುವೆ ಮಾಡಿಸು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.