Tag: court

  • ಶೃಂಗೇರಿಗೆ ಶ್ರೀಗಳಿಗೆ ಅಪಮಾನಗೈದ ವ್ಯಕ್ತಿಗೆ 10 ಸಾವಿರ ದಂಡ, 3 ವರ್ಷ ಜೈಲು

    ಶೃಂಗೇರಿಗೆ ಶ್ರೀಗಳಿಗೆ ಅಪಮಾನಗೈದ ವ್ಯಕ್ತಿಗೆ 10 ಸಾವಿರ ದಂಡ, 3 ವರ್ಷ ಜೈಲು

    ಚಿಕ್ಕಮಗಳೂರು: ಶೃಂಗೇರಿ ಶ್ರೀಗಳಿಗೆ ಅಪಮಾನ ಮಾಡಿದ್ದ ವ್ಯಕ್ತಿಗೆ ಶೃಂಗೇರಿ ಕೋರ್ಟ್ ಮೂರು ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

    ಶೃಂಗೇರಿ ಹಿಂದೂಸ್ ಎಂಬ ಫೇಸ್‍ಬುಕ್ ಪೇಜ್‍ನಲ್ಲಿ ಶೃಂಗೇರಿ ಶ್ರೀ ಮಠದ ಗುರುಪರಂಪರೆ ಕುರಿತ ಮಾಹಿತಿ ನೀಡುವ ಪೋಸ್ಟ್‌ ಹಾಕಲಾಗಿತ್ತು. ಅದರಲ್ಲಿ ಶೃಂಗೇರಿ ಶ್ರೀಗಳ ಫೋಟೋ ಸಹ ಇತ್ತು. ಈ ಪೋಸ್ಟ್‌ಗೆ 2015ರ ನವೆಂಬರ್ 19ರಂದು ಹುಬ್ಬಳ್ಳಿ ಮೂಲದ ಮುನ್ನಾ ಅಜರ್ ಅವಾಚ್ಯ ಪದಗಳನ್ನು ಬಳಸಿ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದ. ಈ ಕುರಿತು ಶೃಂಗೇರಿ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಶೃಂಗೇರಿ ಮಠದ ಭಕ್ತರು ಪ್ರತಿಭಟನೆ ನಡೆಸಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು.

    Sringeri

    ಈ ಬಗ್ಗೆ ತನಿಖೆ ಕೈಗೊಂಡ ಶೃಂಗೇರಿ ಪೊಲೀಸರು ಪ್ರಕರಣ ದಾಖಲಿಸಿ ಕೆಲವೇ ದಿನಗಳಲ್ಲಿ ಆರೋಪಿಯನ್ನು ಬಂಧಿಸಿದ್ದರು. ಶೃಂಗೇರಿ ಠಾಣೆಯ ವೃತ್ತ ನಿರೀಕ್ಷಕರಾಗಿದ್ದ ಸುಧೀರ್ ಹೆಗ್ಡೆ ನೇತೃತ್ವದ ತನಿಖಾ ತಂಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿತ್ತು. ಇದನ್ನೂ ಓದಿ: ಮಳೆ ನಿಲ್ಲಲು ಶೃಂಗೇರಿ ಜಗದ್ಗುರುಗಳ ಮೊರೆ ಹೋದ ಬಿಜೆಪಿ, ಕಾಂಗ್ರೆಸ್

    ಸುದೀರ್ಘ ವಿಚಾರಣೆಯ ನಡೆಸಿದ ಶೃಂಗೇರಿ ಕೋರ್ಟ್ ನ್ಯಾಯಾಧೀಶ ಕ್ರಾಂತಿಕುಮಾರ್‌ ಮುನ್ನಾ ಅಜರ್‌ಗೆ 3 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ. ಆರೋಪಿಯ ವಿರುದ್ಧವಾಗಿ ವಕೀಲೆ ಹರೀಣಾಕ್ಷಿ ವಾದ ಮಂಡಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಭ್ರಷ್ಟಾಚಾರ ನಿಗ್ರಹ ದಳ (ACB) ಮತ್ತು ಅದರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ADGP) ಸೀಮಂತ್ ಕುಮಾರ್ ಸಿಂಗ್ ವಿರುದ್ಧ ಮಾಡಿದ್ದ ಆರೋಪಗಳಿಗೆ ಇಂದು ಸುಪ್ರೀಂಕೋರ್ಟ್ ತಡೆ ನೀಡಿದೆ.

    karnataka highcourt

    ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್ ಮತ್ತು ಜೆ.ಮಂಜುನಾಥ್ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ವಿಶೇಷ ಮನವಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿಗಳಾದ ಕೃಷ್ಣ ಮುರಾರಿ ಮತ್ತು ಹಿಮಾ ಕೊಹ್ಲಿ ಅವರಿದ್ದ ತ್ರಿಸದಸ್ಯ ಪೀಠವು ನಡೆಸಿತು. ಇದನ್ನೂ ಓದಿ: L- ಬೋರ್ಡ್‌ ಕಾರಿಗೆ ಲಾರಿ ಡಿಕ್ಕಿ : ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವು

    ವಿಚಾರಣೆ ವೇಳೆ ನ್ಯಾಯಾಧೀಶರ ಅಭಿಪ್ರಾಯಕ್ಕೂ ಹಾಗೂ ಅವರು ವಿಚಾರಣೆ ಮಾಡುತ್ತಿರುವ ಪ್ರಕರಣಕ್ಕೂ ಸಂಬಂಧವಿಲ್ಲ. ಇಲ್ಲಿ ಅಪ್ರಸ್ತುತ ಅವಲೋಕನಗಳನ್ನು ಮಾಡಿದ್ದಾರೆ ಹಾಗೂ ಜಾಮೀನು ಅರ್ಜಿಯ ವ್ಯಾಪ್ತಿಯನ್ನೂ ಮೀರಿದ್ದಾರೆ ಎಂದು ಹೇಳಿದೆ.

    supreme court 12

    ಜಾಮೀನು ಅರ್ಜಿ ಪ್ರಕರಣವೊಂದರ ವಿಚಾರಣೆ ಮಾಡುತ್ತಿದ್ದ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಎಸಿಬಿ ವಿರುದ್ಧ ಖಂಡತುಂಡ ಟೀಕೆ ಮಾಡಿದ್ದರು. ಎಸಿಬಿ ಮುಖ್ಯಸ್ಥ ಸೀಮಂತ್ ಕುಮಾರ್ ಸಿಂಗ್ ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಸೀಮಂತ್ ಕುಮಾರ್ ಸಿಂಗ್ ಬಳಿ ತಮ್ಮ ಸರ್ಕಾರಿ ಸೇವೆಗಳ ವರದಿ ನೀಡುವಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿತ್ತು. ಸುಪ್ರೀಂ ಕೋರ್ಟ್ ಇದಕ್ಕೂ ತಡೆ ನೀಡಿದೆ. ಇದನ್ನೂ ಓದಿ: ಯಾವುದೇ ಧರ್ಮ, ಜಾತಿಯವರಿಗೆ ಸಿಎಂ ಸ್ಥಾನ ಮೀಸಲು ಅಲ್ಲ: ಡಿಕೆಶಿಗೆ ಆರ್. ಅಶೋಕ್ ತಿರುಗೇಟು

    court order law

    ಜೆ.ಮಂಜುನಾಥ್ ಐಎಎಸ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಸ್.ನಾಗಮುತ್ತು ಅವರು, ಈ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಬದಲು ಬೇರೊಂದು ನ್ಯಾಯಪೀಠಕ್ಕೆ ವರ್ಗಾವಣೆ ಮಾಡುವಂತೆ ಕೋರಿದ್ದರು. ಇದಕ್ಕೆ ಅಸಮ್ಮತಿಸಿದ (ಸಮ್ಮತಿಯಿಲ್ಲದ) ನ್ಯಾಯಪೀಠ ವಿಚಾರಣೆಯನ್ನು ನ್ಯಾಯಾಧೀಶರೇ ಮುಂದುವರಿಸುತ್ತಾರೆ. ಆದರೆ ಪ್ರಕರಣಕ್ಕೆ ಸಂಬಂಧಪಡದ ವಿಚಾರಗಳಿಗೆ ನಾವು ತಡೆ ನೀಡುತ್ತಿದ್ದೇವೆ ಎಂದು ಸ್ಪಷ್ಟನೆ ನೀಡಿತು.

    ಕಳೆದ ವಿಚಾರಣೆಯಲ್ಲೂ ಜಾಮೀನು ಮನವಿಯ ವಿಚಾರಣೆಯನ್ನು ಮೂರು ದಿನಗಳ ಕಾಲ ಮುಂದೂಡುವಂತೆ ಸುಪ್ರೀಂ ಕೋರ್ಟ್ಗೆ ಹೈಕೋರ್ಟ್ ಹೇಳಿತ್ತು.

    ಏನಿದು ಪ್ರಕರಣ?
    ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಜಾಮೀನು ಕೋರಿ ಉಪ ತಹಸೀಲ್ದಾರ್ ಪಿ.ಎಸ್.ಮಹೇಶ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಪ್ರಕರಣದಲ್ಲಿ ಸಮರ್ಪಕ ತನಿಖೆ ನಡೆದಿಲ್ಲ ಎಂದು ಎಸಿಬಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ಇದೇ ಕಾರಣಕ್ಕೆ ತಮಗೆ ವರ್ಗಾವಣೆಯ ಬೆದರಿಕೆ ಒಡ್ಡಲಾಗಿದೆ ಎಂಬ ಸ್ಫೋಟಕ ವಿಚಾರವನ್ನು ನ್ಯಾಯಮೂರ್ತಿಗಳು ಮುಕ್ತ ನ್ಯಾಯಾಲಯದಲ್ಲಿ ಬಹಿರಂಗಪಡಿಸಿದ್ದರು. ಅಲ್ಲದೆ, ಬೆದರಿಕೆಯ ವಿಚಾರವನ್ನು ಜು.11ರಂದು ಲಿಖಿತ ಆದೇಶದಲ್ಲಿ ದಾಖಲಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪೊನ್ನಿಯನ್ ಸೆಲ್ವನ್ ವಿವಾದ : ಮಣಿರತ್ನಂ ಮತ್ತು ವಿಕ್ರಮ್ ಗೆ ನೋಟಿಸ್

    ಪೊನ್ನಿಯನ್ ಸೆಲ್ವನ್ ವಿವಾದ : ಮಣಿರತ್ನಂ ಮತ್ತು ವಿಕ್ರಮ್ ಗೆ ನೋಟಿಸ್

    ಮಿಳಿನ ಖ್ಯಾತ ನಿರ್ದೇಶಕ ಮಣಿರತ್ನಂ ಅವರ ನಿರೀಕ್ಷಿತ ಸಿನಿಮಾ ಪೊನ್ನಿಯನ್ ಸೆಲ್ವನ್ ಇದೀಗ ವಿವಾದಕ್ಕೀಡಾಗಿದೆ. ಟೀಸರ್ ಬಗ್ಗೆ ಅಪಾರ ಮೆಚ್ಚುಗೆ ಬಂದ ಹಿನ್ನೆಲೆಯಲ್ಲಿ ಸಂಭ್ರಮಿಸಬೇಕಾಗಿದ್ದ ಚಿತ್ರತಂಡ ಇದೀಗ ಆತಂಕಕ್ಕೊಳಗಾಗಿದೆ. ಚೋಳರ ಇತಿಹಾಸವನ್ನು ಹೇಳಲು ಹೊರಟಿರುವ ನಿರ್ದೇಶಕರು, ಆ ಇತಿಹಾಸವನ್ನು ತಿರುಚಿದ್ದಾರೆ ಎಂದೆ ಸೆಲ್ವನ್ ಅನ್ನುವವರು ಕೋರ್ಟ್ ಮೆಟ್ಟಿಲು ಏರಿದ್ದಾರೆ. ಹಾಗಾಗಿ ನಿರ್ದೇಶಕ ಮಣಿರತ್ನಂ ಮತ್ತು ವಿಕ್ರಮ್ ಗೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

    ಪೊನ್ನಿಯನ್ ಸೆಲ್ವನ್ ಸಿನಿಮಾದಲ್ಲಿ ಚೋಳ ಸಾಮ್ರಾಜ್ಯದ ಉಗಮ ಮತ್ತು ಅದು ಬೆಳೆದು ಬಂದ ಇತಿಹಾಸವನ್ನು ಹೇಳಲು ಹೊರಟಿದ್ದಾರೆ ಮಣಿರತ್ನಂ. ಆದರೆ, ನಿಜ ಇತಿಹಾಸವನ್ನು ಅವರು ಹೇಳುತ್ತಿಲ್ಲ ಎಂದು ಉದಾಹರಣೆ ಸಮೇತ, ಕೋರ್ಟ್ ಮೆಟ್ಟಿಲು ಏರಿದ್ದಾರೆ ಸೆಲ್ವನ್.  ಈ ಸಿನಿಮಾದಲ್ಲಿ ನಟ ವಿಕ್ರಮ್ ಅವರು, ಆದಿತ್ಯ ಕರಿಕಾಲನ್ ಪಾತ್ರದಲ್ಲಿ ನಟಿಸಿದ್ದು, ರಿಲೀಸ್ ಆದ ಪೋಸ್ಟರ್ ನಲ್ಲಿ ಅವರ ಹಣೆ ಮೇಲೆ ತಿಲಕವಿದೆ. ಟೀಸರ್ ನಲ್ಲಿ ತಿಲಕವಿಲ್ಲ ಎಂದು. ಹೀಗಾಗಿ ಇತಿಹಾಸವನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ:ಬ್ರೇಕಪ್ ನಂತರ ಸ್ಟಾರ್ ನಟಿ ಸಹೋದರನ ಜೊತೆ ಇಲಿಯಾನಾ ಡೇಟಿಂಗ್

    ಕೋರ್ಟ್ ನೋಟಿಸ್ ಜಾರಿಯಾಗಿದ್ದರೂ, ಈ ಕುರಿತು ಮಣಿರತ್ನಂ ಆಗಲಿ, ವಿಕ್ರಮ್ ಆಗಲಿ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಅಲ್ಲದೇ, ಸಿನಿಮಾ ರಿಲೀಸ್ ಗೂ ತಮಗೆ ಆ ಸಿನಿಮಾವನ್ನು ತೋರಿಸಬೇಕು ಎಂದು ಸೆಲ್ವನ್ ದೂರಿನಲ್ಲಿ ಬರೆದ್ದಾರೆ. ಆದರೆ, ಈ ಕುರಿತು ಮಣಿರತ್ನಂ ಅವರು ಯಾವುದೇ ನಿರ್ಧಾರ ತಗೆದುಕೊಂಡಿಲ್ಲ. ಐದು ಭಾಷೆಗಳಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಐಶ್ವರ್ಯಾ ರೈ, ಕಾರ್ತಿ, ತ್ರಿಶಾ ಸೇರಿದಂತೆ ಹಲವು ಕಲಾವಿದರು ತಾರಾಗಣದಲ್ಲಿ ಇದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಮ್ಮತಿಯ ಸೆಕ್ಸ್‌ನಿಂದ ಅವಿವಾಹಿತೆ ಗರ್ಭಧಾರಣೆ – 20 ವಾರಗಳ ಬಳಿಕ ಗರ್ಭಪಾತಕ್ಕೆ ಅವಕಾಶವಿಲ್ಲ: ಹೈಕೋರ್ಟ್

    ಸಮ್ಮತಿಯ ಸೆಕ್ಸ್‌ನಿಂದ ಅವಿವಾಹಿತೆ ಗರ್ಭಧಾರಣೆ – 20 ವಾರಗಳ ಬಳಿಕ ಗರ್ಭಪಾತಕ್ಕೆ ಅವಕಾಶವಿಲ್ಲ: ಹೈಕೋರ್ಟ್

    ನವದೆಹಲಿ: 23 ವಾರಗಳ ಭ್ರೂಣದ ಗರ್ಭಪಾತಕ್ಕೆ ಅವಕಾಶ ನೀಡುವಂತೆ ಕೋರಿ 25 ವರ್ಷದ ಅವಿವಾಹಿತ ಯುವತಿ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾ ಮಾಡಿದೆ.

    ಸಮ್ಮತಿಯ ಸೆಕ್ಸ್‍ನಿಂದ ಗರ್ಭವತಿಯಾಗಿ 20 ವಾರಗಳು ಮೀರಿದ ಭ್ರೂಣದ ಗರ್ಭಪಾತಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಆದೇಶ ನೀಡಿದೆ. ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ ಮುಖ್ಯ ನ್ಯಾ.ಸತೀಶ್ ಚಂದ್ರಶರ್ಮಾ ನೇತೃತ್ವದ ವಿಭಾಗೀಯ ಪೀಠವು, ಒಪ್ಪಿಗೆಯ ಲೈಂಗಿಕ ಸಂಬಂಧದಿಂದ ಮಗುವನ್ನು ಹೆರುವ ಅವಿವಾಹಿತ ಮಹಿಳೆಗೆ ವೈದ್ಯಕೀಯ ಗರ್ಭಪಾತದ ನಿಯಮಗಳ ಪ್ರಕಾರ 20 ವಾರಗಳು ಮೀರಿದ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು(2003 MTP ನಿಯಮಗಳು ಪ್ರಕಾರ) ಅನುಮತಿ ಇಲ್ಲ ಎಂದು ಹೇಳಿದೆ. ಇದನ್ನೂ ಓದಿ: ಬಿಸಾಡಿದ ಮಚ್ಚು ತೋರಿಸುತ್ತೇನೆಂದು ಪೊಲೀಸರ ಮೇಲೆಯೇ ಹಲ್ಲೆ – ಆರೋಪಿಗೆ ಗುಂಡೇಟು 

    ಅವಿವಾಹಿತ ಮಹಿಳೆಯಾಗಿರುವ ಮತ್ತು ಸಮ್ಮತಿಯಿಂದ ಗರ್ಭ ಧರಿಸಿರುವ ಅರ್ಜಿದಾರರು, ವೈದ್ಯಕೀಯ ಮುಕ್ತಾಯದ ನಿಯಮಗಳು 2003ರ ಅಡಿಯಲ್ಲಿ ಯಾವುದೇ ಷರತ್ತುಗಳನ್ನು ಸ್ಪಷ್ಟವಾಗಿ ಒಳಗೊಂಡಿರುವುದಿಲ್ಲ. ಆದ್ದರಿಂದ, ಸೆಕ್ಷನ್ 3(2)(ಬಿ) ಈ ಪ್ರಕರಣದ ಸತ್ಯಾಸತ್ಯತೆಗಳಿಗೆ ಕಾಯ್ದೆ ಅನ್ವಯಿಸುವುದಿಲ್ಲ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

    ಎಂಟಿಪಿ ನಿಯಮಗಳ 3ಬಿ ಪ್ರಕಾರ 20 ವಾರಗಳ ನಂತರ ಅವಿವಾಹಿತ ಮಹಿಳೆಯ ಗರ್ಭಧಾರಣೆಯನ್ನು ಮುಕ್ತಾಯಗೊಳಿಸಲು ಅನುಮತಿಸುವುದಿಲ್ಲ. ಆದ್ದರಿಂದ, ನ್ಯಾಯಾಲಯವು ಈಗಿರುವ ಶಾಸನವನ್ನು ಮೀರಿ ಹೋಗುವಂತಿಲ್ಲ ಎಂದು ತನ್ನ ಆದೇಶದಲ್ಲಿ ಸೇರಿಸಿದೆ.

    ನ್ಯಾಯಾಲಯವು ಅರ್ಜಿಯನ್ನು ಬಾಕಿ ಉಳಿಸಿಕೊಂಡಿದೆ. ಆಗಸ್ಟ್ 26ರೊಳಗೆ ಅರ್ಜಿಯ ಬಗ್ಗೆ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ದೆಹಲಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸೂಚನೆ ನೀಡಿದೆ.

    ನಿಯಮಗಳ ಪ್ರಕಾರ, ಅತ್ಯಾಚಾರದ ಸಂತ್ರಸ್ತರು, ಅಪ್ರಾಪ್ತ ವಯಸ್ಕರು, ಗರ್ಭಾವಸ್ಥೆಯಲ್ಲಿ ವೈವಾಹಿಕ ಸ್ಥಿತಿ ಬದಲಾದ ಮಹಿಳೆಯರು, ಮಾನಸಿಕ ಅಸ್ವಸ್ಥ ಮಹಿಳೆಯರು ಅಥವಾ ಭ್ರೂಣದ ವಿರೂಪತೆ ಹೊಂದಿರುವ ಮಹಿಳೆಯರು ಮಾತ್ರ 24 ವಾರಗಳ ಗರ್ಭಾವಸ್ಥೆಯನ್ನು ಅಂತ್ಯಗೊಳಿಸಲು ಅನುಮತಿಸಲಾಗಿದೆ. ಇದನ್ನೂ ಓದಿ:  ಸರ್ಕಾರಿ ನೌಕರರು 2ನೇ ಮದುವೆಯಾಗಲು ಬೇಕು ಇಲಾಖೆ ಅನುಮತಿ – ಇಲ್ಲವಾದ್ರೆ ಸರ್ಕಾರಿ ಸೌಲಭ್ಯವಿಲ್ಲ 

    ಶುಕ್ರವಾರ ಇದೇ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಾಧೀಶರು ಗರ್ಭಪಾತವು ಮಗುವನ್ನು ಕೊಲ್ಲುವುದಕ್ಕೆ ಸಮಾನವಾಗಿರುತ್ತದೆ. ಮಗುವನ್ನು ಹೆತ್ತು, ದತ್ತು ಸ್ವೀಕಾರಕ್ಕೆ ಬಿಟ್ಟುಕೊಡಬಹುದು ಎಂದು ಪೀಠ ಸೂಚಿಸಿತ್ತು. ಮಗುವನ್ನು ಏಕೆ ಕೊಲ್ಲುತ್ತಿದ್ದೀರಿ? ಮಕ್ಕಳ ದತ್ತು ಪಡೆಯಲು ದೊಡ್ಡ ಸರತಿ ಸಾಲು ಇದೆ. ಮಗುವನ್ನು ಬೆಳೆಸಲು ಮಹಿಳೆಯನ್ನು ಒತ್ತಾಯಿಸುವುದಿಲ್ಲ. ಎಲ್ಲವನ್ನೂ ಸರ್ಕಾರ ಅಥವಾ ಆಸ್ಪತ್ರೆ ನೋಡಿಕೊಳ್ಳುತ್ತದೆ ಎಂದು ಸೂಚಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಪಂಜಾಬಿ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ

    ಪಂಜಾಬಿ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಎರಡು ವರ್ಷ ಜೈಲು ಶಿಕ್ಷೆ

    ಬಾಲಿವುಡ್ ನ ಖ್ಯಾತ ಗಾಯಕ ದಲೇರ್ ಮೆಹಂದಿಗೆ ಮಾನವ ಕಳ್ಳಸಾಗಣೆ ಸಂಬಂಧಿಸಿದ ಪ್ರಕರಣಕ್ಕೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. 2003ರ ಪ್ರಕರಣಕ್ಕೆ ಸಂಬಂಧಿಸಿದ ಶಿಕ್ಷೆ ಇದಾಗಿದ್ದು, ಪಟಿಯಾಲ ನ್ಯಾಯಾಲಯವು ಶಿಕ್ಷೆಗೆ ಆದೇಶಿಸಿದೆ.

    ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ದಲೇರ್ ಮೆಹಂದಿ ದೋಷಿಯೆಂದು ಸಾಬೀತಾಗುತ್ತಿದ್ದಂತೆಯೇ ದಲೇರಿ ಭಾವುಕರಾಗಿದ್ದರು. 2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಶೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿದ್ದವು. ಇವರಿಗೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಈ ಶಿಕ್ಷೆಯ ವಿರುದ್ಧ ಅವರು ಮೇಲ್ಮನವಿ ಸಲ್ಲಿಸಿದ್ದರು. ಪಟಿಯಾಲ ಜಿಲ್ಲಾ ನ್ಯಾಯಾಲಯವು ಅದನ್ನು ವಜಾಗೊಳಿಸಿದೆ. ಇದನ್ನೂ ಓದಿ:ರಾಮ್ ಗೋಪಾಲ್ ವರ್ಮಾ ‘ಲಡಕಿ’ ನೋಡಿ ಬೆಚ್ಚಿ ಬಿದ್ದರಂತೆ ಸೆನ್ಸಾರ್ ಟೀಮ್

    19 ವರ್ಷಗಳ ಹಿಂದೆ ದಲೇರ್ ಮತ್ತು ಸಹೋದರ ಜನರನ್ನು ಅಕ್ರಮವಾಗಿ ವಿದೇಶಕ್ಕೆ ಕಳುಹಿಸಲು ಹಣ ತಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಮಾನವ ಕಳ್ಳಸಾಗಣೆ ಮತ್ತು ಪಿತೂರಿಗಾಗಿ ಅವರ ಮೇಲೆ ಆರೋಪ ಹೊರಿಸಲಾಗಿತ್ತು. 2018ರಲ್ಲಿ ಮ್ಯಾಜಿಸ್ಟ್ರೇಟ್ ನ್ಯಾಯಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿ ಮೇಲ್ಮನವಿ ಸಲ್ಲಿಸಿದ್ದರು. ಇದೀಗ ಆ ಮೇಲ್ಮನಿವಿ ಕೂಡ ವಜಾಗೊಂಡಿದ್ದು, ಎರಡು ವರ್ಷಗಳ ಜೈಲು ಶಿಕ್ಷೆಯನ್ನು ಎತ್ತಿ ಹಿಡಿದಿದೆ.

    Live Tv
    [brid partner=56869869 player=32851 video=960834 autoplay=true]

  • ರಮ್ಯಾ ಮೇಲೆ ಬ್ಲ್ಯಾಕ್ ಮೇಲ್ ಆರೋಪ, ಕಾನೂನು ಮೂಲಕ ಹೋರಾಟಕ್ಕಿಳಿದ ನಟ ನರೇಶ್

    ರಮ್ಯಾ ಮೇಲೆ ಬ್ಲ್ಯಾಕ್ ಮೇಲ್ ಆರೋಪ, ಕಾನೂನು ಮೂಲಕ ಹೋರಾಟಕ್ಕಿಳಿದ ನಟ ನರೇಶ್

    ತೆಲುಗು ನಟ ನರೇಶ್ ಮತ್ತು ಬೆಂಗಳೂರಿನ ರಮ್ಯಾ ದಾಂಪತ್ಯದ ವಿವಾದ ಬೀದಿರಂಪ ಆಗಿತ್ತು. ನರೇಶ್ ಅವರ ಮೇಲೆ ರಮ್ಯಾ ಅವರು ಹಲವು ಆರೋಪಗಳನ್ನು ಮಾಡಿದ್ದರು. ಅಲ್ಲದೇ, ಮೈಸೂರಿನಲ್ಲಿ ನರೇಶ್ ಮತ್ತು ಪವಿತ್ರಾ ಲೋಕೇಶ್ ಹೋಟೆಲ್ ವೊಂದರಲ್ಲಿ ಉಳಿದುಕೊಂಡಿದ್ದಾಗ, ಅವರ ಮೇಲೆ ಚೆಪ್ಪಲಿ ಎಸೆಯುವಂತಹ ಪ್ರಯತ್ನ ಕೂಡ ಮಾಡಿದ್ದರು. ಒಂದು ವಾರಗಳ ಕಾಲ ಭಾರೀ ಸದ್ದು ಮಾಡಿದ್ದ ವಿವಾದ, ಒಂದು ವಾರದಿಂದ ತಣ್ಣಗಾಗಿದೆ.

    ಈ ಕುರಿತು ಮಾತನಾಡಿರುವ ನರೇಶ್, ‘ರಮ್ಯಾ ನನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು. ಕೆಲ ಪ್ರಭಾವಿಗಳು ಅವರೊಂದಿಗೆ ಸೇರಿಕೊಂಡು ಈ ರೀತಿ ಗಲಾಟೆ ಮಾಡಿಸುತ್ತಿದ್ದಾರೆ. ರಮ್ಯಾ ಮತ್ತು ನನ್ನ ಡಿವೋರ್ಸ್ ಕೇಸ್ ಕೋರ್ಟಿನಲ್ಲಿದೆ. ಹಾಗಾಗಿ ಇನ್ಮುಂದೆ ಯಾವುದೇ ಹೇಳಿಕೆಯನ್ನು ಕೊಡಲಾರೆ. ನಾನು ಕೋರ್ಟ್ ನಲ್ಲೇ ಹೋರಾಟ ಮಾಡಿ ನ್ಯಾಯ ಪಡೆಯುತ್ತೇನೆ’ ಎಂದಿದ್ದಾರೆ. ಇದನ್ನೂ ಓದಿ:`ಹೊಯ್ಸಳ’ ಡಾಲಿಗೆ ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಸಾಥ್

    ಪವಿತ್ರಾ ಲೋಕೇಶ್ ಮತ್ತು ನರೇಶ್ ಮೈಸೂರಿನ ಹೋಟೆಲ್ ವೊಂದರಲ್ಲಿ ತಂಗಿದ್ದಾಗ ರಮ್ಯಾ ಅವರ ಮೇಲೆ ಹಲ್ಲೆ ಮಾಡಲು ಯತ್ನಿಸಿರುವ ವಿಚಾರವನ್ನೂ ಅವರು ಗಂಭೀರವಾಗಿ ತಗೆದುಕೊಂಡಿದ್ದಾರಂತೆ. ಹಾಗಾಗಿ ಕೋರ್ಟ್ ಮೊರೆ ಹೋಗುವುದಾಗಿ ಅವರು ಆಪ್ತರ ಎದುರು ಹೇಳಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಗಲಾಟೆಯ ನಂತರ ಪವಿತ್ರಾ ಲೋಕೇಶ್ ಮತ್ತು ನರೇಶ್ ಹೈದರಾಬಾದ್ ನಲ್ಲೇ ಉಳಿದುಕೊಂಡಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ಸುದ್ದಿ ಮಾಡಿವೆ.

    Live Tv
    [brid partner=56869869 player=32851 video=960834 autoplay=true]

  • ಮದ್ಯದ ದೊರೆ ವಿಜಯ್‌ ಮಲ್ಯಗೆ 4 ತಿಂಗಳು ಜೈಲು: ಸುಪ್ರೀಂ ಕೋರ್ಟ್ ತೀರ್ಪು

    ಮದ್ಯದ ದೊರೆ ವಿಜಯ್‌ ಮಲ್ಯಗೆ 4 ತಿಂಗಳು ಜೈಲು: ಸುಪ್ರೀಂ ಕೋರ್ಟ್ ತೀರ್ಪು

    ನವದೆಹಲಿ: ಮದ್ಯದ ದೊರೆ ವಿಜಯ್‌ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂಪಾಯಿ ದಂಡ ವಿಧಿಸಿದೆ.

    2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಬಳಿಕ ಪರಾರಿಯಾಗಿರುವ ಮಲ್ಯಗೆ ಸುಪ್ರೀಂ ಕೋರ್ಟ್ 4 ತಿಂಗಳ ಜೈಲು ಶಿಕ್ಷೆ ಹಾಗೂ 2 ಸಾವಿರ ರೂ. ದಂಡ ವಿಧಿಸಿದೆ. ಇದರೊಂದಿಗೆ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ಮಲ್ಯ ಅವರ ಕುಟುಂಬ ಸದಸ್ಯರಿಗೆ ವರ್ಗಾಯಿಸಲಾದ 40 ಮಿಲಿಯನ್ ಡಾಲರ್‌ಗಳನ್ನು ಹಿಂದಿರುಗಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

    ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರ ಭಟ್ ಮತ್ತು ಪಿ.ಎಸ್.ನರಸಿಂಹ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಮಾರ್ಚ್ 10 ರಂದು ಮದ್ಯದ ದೊರೆ ವಿರುದ್ಧದ ವಿಚಾರಣೆಯು `ಡೆಡ್ ವಾಲ್’ ಪ್ರಕರಣದಲ್ಲಿ ತೀರ್ಪನ್ನು ಕಾಯ್ದಿರಿತ್ತು.

    ಈ ಕುರಿತು ನಡೆದ ವಿಚಾರಣೆ ಈ ವೇಳೆ ಹಿರಿಯ ವಕೀಲ ಜೈದೀಪ್ ಗುಪ್ತಾ ಅವರ ವಾದವನ್ನು ಆಲಿಸಿದ ಬಳಿಕ ಮಾರ್ಚ್ 15 ರೊಳಗೆ ಲಿಖಿತ ದಾಖಲೆಗಳನ್ನು ಸಲ್ಲಿಸಲು ಮಲ್ಯ ಅವರನ್ನು ಪ್ರತಿನಿಧಿಸುತ್ತಿದ್ದ ವಕೀಲರಿಗೆ ಸೂಚನೆ ನೀಡಿತ್ತು.

    court order law

    ಹಿಂದೆ 9 ಸಾವಿರ ಕೋಟಿಗೂ ಅಧಿಕ ಮೊತ್ತದ ಸಾಲ ಮರುಪಾವತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳನ್ನು ಮಲ್ಯ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕ್‌ಗಳ ಒಕ್ಕೂಟವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಅವರು ಆಸ್ತಿಯನ್ನು ಬಹಿರಂಗಪಡಿಸುತ್ತಿಲ್ಲ ಮತ್ತು ನಿರ್ಬಂಧದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ ವರ್ಗಾಯಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರಿಂದಾಗಿ 2017ರಲ್ಲಿ ಮಲ್ಯರನ್ನು ಅಪರಾಧಿ ಎಂದು ಪರಿಗಣಿಸಲಾಯಿತು. ನಂತರ ಅವರಿಗೆ ನೀಡಬೇಕಾದ ಉದ್ದೇಶಿತ ಶಿಕ್ಷೆಯ ಕುರಿತು ಪಟ್ಟಿ ಮಾಡಲಾಯಿತು.

    ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತನ್ನ ಮಕ್ಕಳಿಗೆ 40 ಮಿಲಿಯನ್ ಡಾಲರ್ ವರ್ಗಾವಣೆ ಮಾಡಿದ್ದಕ್ಕಾಗಿ 2017ರ ತೀರ್ಪನ್ನು ಅವಹೇಳನ ಮಾಡಿದ ಮಲ್ಯ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಲಾಗಿತ್ತು. ನಂತರದಲ್ಲಿ 2016ರ ಮಾರ್ಚ್‌ನಿಂದ ಯುಕೆಗೆ ತೆಳಿದರು, 2017 ಏಪ್ರಿಲ್‌ 18ರಂದು ಸ್ಕಾಟ್ಲೆಂಡ್ ಯಾರ್ಡ್ ಜಾರಿಗೊಳಿಸಿದ ಹಸ್ತಾಂತರ ವಾರಂಟ್ ಮೇಲೆ ಜಾಮೀನಿನ ಮೇಲೆ ಹೊರಬಂದರು.

    Live Tv
    [brid partner=56869869 player=32851 video=960834 autoplay=true]

  • ಲೈಂಗಿಕ ಸಂಬಂಧ ಮದುವೆಯಲ್ಲಿ ಅಂತ್ಯವಾಗದ ಮಾತ್ರಕ್ಕೆ ಅತ್ಯಾಚಾರ ಆಗುವುದಿಲ್ಲ: ಹೈಕೋರ್ಟ್

    ಲೈಂಗಿಕ ಸಂಬಂಧ ಮದುವೆಯಲ್ಲಿ ಅಂತ್ಯವಾಗದ ಮಾತ್ರಕ್ಕೆ ಅತ್ಯಾಚಾರ ಆಗುವುದಿಲ್ಲ: ಹೈಕೋರ್ಟ್

    ತಿರುವನಂತಪುರಂ: ಪರಸ್ಪರ ಸಮ್ಮತಿಯೊಂದಿಗೆ ಹೊಂದಿರುವ ಲೈಂಗಿಕ ಸಂಬಂಧ ಮದುವೆಯಲ್ಲಿ ಅಂತ್ಯಗೊಂಡಿಲ್ಲ ಎಂಬ ಮಾತ್ರಕ್ಕೆ ಅದು ಅತ್ಯಾಚಾರವೆಂದು (ಐಪಿಸಿ ಸೆಕ್ಷನ್ 376 ಅಡಿಯಲ್ಲಿ) ಸಾಬೀತು ಮಾಡಲು ಆಗುವುದಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ.

    court order law

    ಮೋಸದಿಂದ ಅಥವಾ ದಿಕ್ಕುತಪ್ಪಿಸಿ ಲೈಂಗಿಕ ಕ್ರಿಯೆ ನಡೆಸದ ಹೊರತು ಇಬ್ಬರು ವಯಸ್ಕರ ನಡುವಿನ ಲೈಂಗಿಕ ಸಂಬಂಧ ಐಪಿಸಿ ಸೆಕ್ಷನ್ 376ರ ಅಡಿ ಅತ್ಯಾಚಾರಕ್ಕೆ ಸಮನಾಗಿರುವುದಿಲ್ಲ. ಇಬ್ಬರ ಲೈಂಗಿಕ ಸಂಬಂಧಕ್ಕೆ ಮದುವೆಯ ಅಂಕಿತ ಬೀಳದಿದ್ದರೂ ಲೈಂಗಿಕ ಸಮ್ಮತಿಗೆ ಧಕ್ಕೆ ತರುವ ಯಾವುದೇ ಅಂಶ ಇರದಿದ್ದಾಗ ಅದು ಅತ್ಯಾಚಾರ ಆಗುವುದಿಲ್ಲ. ಇಬ್ಬರು ಶಾರೀರಿಕ ಸಂಬಂಧದಲ್ಲಿ ತೊಡಗಿದ್ದರೂ ನಂತರ ಮದುವೆಗೆ ಒಪ್ಪದಿದ್ದರೆ ಅಥವಾ ಸಂಬಂಧ ಮುಂದುವರಿಸುವುದು ವಿಫಲವಾದರೆ ಆ ಅಂಶಗಳು ಅತ್ಯಾಚಾರ ಆರೋಪ ನಿಗದಿಗೆ ಒಪ್ಪುವಂತಹದ್ದಾಗಿರುವುದಿಲ್ಲ ಎಂದು ನ್ಯಾಯಮೂರ್ತಿ ಬೆಚು ಕುರಿಯನ್ ಥಾಮಸ್ ಅವರಿದ್ದ ಪೀಠ ಹೇಳಿದೆ. ಇದನ್ನೂ ಓದಿ: ʻಸೀತಾ ರಾಮಂʼ ಚಿತ್ರದ ಲುಕ್‌ ಮೂಲಕ ಈದ್‌ ಹಬ್ಬಕ್ಕೆ ಫ್ಯಾನ್ಸ್‌ಗೆ ಶುಭಕೋರಿದ ರಶ್ಮಿಕಾ

    ಅತ್ಯಾಚಾರವಾಗಿದೆ ಎಂಬುದನ್ನು ಸಾಬೀತು ಮಾಡಬೇಕಾದರೆ ಮದುವೆಯಾಗುವ ಭರವಸೆಯನ್ನು ಉದ್ದೇಶಪೂರ್ವಕವಾಗಿ ಸುಳ್ಳಾಗಿಸಿರಬೇಕು ಮತ್ತು ಅಂತಹ (ಸುಳ್ಳು) ಭರವಸೆಗೆ ಮಹಿಳೆ ಒಪ್ಪಿಗೆ ಸೂಚಿಸಿರಬೇಕು ಎಂದು ಪೀಠ ಪ್ರತಿಪಾದಿಸಿದೆ.

    ಮದುವೆಯಾಗುವ ಭರವಸೆ ಪಾಲಿಸಲು ವಿಫಲರಾದ ಕಾರಣಕ್ಕಾಗಿ ಪುರುಷ ಮತ್ತು ಮಹಿಳೆಯ ನಡುವಿನ ದೈಹಿಕ ಸಂಬಂಧವನ್ನು ಅತ್ಯಾಚಾರವಾಗಿ ಪರಿವರ್ತಿಸಬೇಕಾದರೆ ಪುರುಷನ ಭರವಸೆ ಮೇಲೆ ಲೈಂಗಿಕ ಕ್ರಿಯೆಯಲ್ಲಿ ತೊಡಗಲು ಮಹಿಳೆ ನಿರ್ಧರಿಸಿರಬೇಕು. ಮದುವೆ ಕುರಿತ ಸುಳ್ಳು ಭರವಸೆಯನ್ನು ಸಾಬೀತುಪಡಿಸಲು ಭರವಸೆ ನೀಡಿದವನಿಗೆ ಲೈಂಗಿಕ ಕ್ರಿಯೆಯ ಸಂದರ್ಭದಲ್ಲಿ ತನ್ನ ಮಾತನ್ನು ಎತ್ತಿ ಹಿಡಿಯುವ ಉದ್ದೇಶ ಇರಬಾರದು. ಶಾರೀರಿಕ ಮಿಲನ ಮತ್ತು ಮದುವೆಯ ಭರವಸೆಯ ನಡುವೆ ನೇರ ಸಂಬಂಧ ಇರಬೇಕು ಆದೇಶಿಸಲಾಗಿದೆ. ಇದನ್ನೂ ಓದಿ: ಪೌರ ಕಾರ್ಮಿಕರು ರಜೆ ಹಾಕಿದ್ರೆ ಸಂಬಳವೇ ಕಟ್- ರೆಸ್ಟ್‌ಲೆಸ್ ವರ್ಕರ್ಸ್‍ಗೆ ಇದೆಂಥಾ ಅನ್ಯಾಯ..?

    ತನ್ನ ಸಹೋದ್ಯೋಗಿ ಹಾಗೂ ವಕೀಲೆಯೊಬ್ಬರು ನೀಡಿದ್ದ ಲೈಂಗಿಕ ದೌರ್ಜನ್ಯದ ದೂರಿನಡಿ ಬಂಧಿತರಾಗಿರುವ ಕೇಂದ್ರ ಸರ್ಕಾರದ ವಕೀಲ ಕೇರಳದ ನವನೀತ್ ಎನ್.ನಾಥ್ ಅವರ ಪ್ರಕರಣದ ಕುರಿತು ವಿಚಾರಣೆ ನಡೆಯಿತು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಕೆಲ ಷರತ್ತುಗಳನ್ನು ವಿಧಿಸುವ ಮೂಲಕ ಜಾಮೀನು ನೀಡಿತು.

    ನವನೀತ್ ಅವರ ಪರವಾಗಿ ಹಿರಿಯ ವಕೀಲ ರಮೇಶ್ ಚಂದರ್ ಮತ್ತು ನ್ಯಾಯವಾದಿ ಸಿ.ಪಿ.ಉದಯಭಾನು, ದೂರುದಾರರ ಪರವಾಗಿ ವಕೀಲ ಜಾನ್ ಎಸ್.ರಾಲ್ಫ್ ಮತ್ತು ಪಬ್ಲಿಕ್ ಪ್ರಾಸಿಕ್ಯೂಟರ್ ಕೆ.ಎ.ನೌಷಾದ್ ವಾದ ಮಂಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ಕೋರ್ಟ್ ನಲ್ಲಿ ಸಾಯಿಪಲ್ಲವಿಗೆ ಹಿನ್ನೆಡೆ: ವಿಚಾರಣೆಗೆ ಹಾಜರಾಗುವಂತೆ ಸೂಚನೆ

    ಕೋರ್ಟ್ ನಲ್ಲಿ ಸಾಯಿಪಲ್ಲವಿಗೆ ಹಿನ್ನೆಡೆ: ವಿಚಾರಣೆಗೆ ಹಾಜರಾಗುವಂತೆ ಸೂಚನೆ

    ಸಂದರ್ಶನವೊಂದರಲ್ಲಿ ಕಾಶ್ಮೀರ ಪಂಡಿತರ ಹತ್ಯೆಯನ್ನು ಗೋವು ಹತ್ಯೆಯ ಹಂತಕರಿಗೆ ಹೋಲಿಸಿದ್ದ ಸಾಯಿ ಪಲ್ಲವಿಯ ವಿರುದ್ಧ ಹಲವು ಕಡೆ ದೂರು ದಾಖಲಾಗಿತ್ತು. ಹಾಗೆಯೇ ಹೈದರಾಬಾದ್ ನಲ್ಲೂ ದೂರು ದಾಖಲಾಗಿತ್ತು. ಹಾಗಾಗಿ ವಿಚಾರಣೆಗೆ ಹಾಜರಾಗುವಂತೆ ಸಾಯಿ ಪಲ್ಲವಿಗೆ ನೋಟಿಸ್ ಜಾರಿ ಮಾಡಿದ್ದರು. ಅದನ್ನು ರದ್ದುಗೊಳಿಸುವಂತೆ ಸಾಯಿ ಪಲ್ಲವಿ ಕೋರ್ಟ್ ಮೆಟ್ಟಿಲೇರಿದ್ದರು. ಸಾಯಿ ಪಲ್ಲವಿಯ ಮನವಿಯನ್ನು ತೆಲಂಗಾಣ ಹೈಕೋರ್ಟ್ ಕೋರ್ಟ್ ತಿರಸ್ಕರಿಸಿದೆ.

    ಹೈದರಾಬಾದ್ ಸುಲ್ತಾನ್ ಬಜಾರ್ ಸರ್ಕಲ್ ಇನ್ಸ್ಪೆಕ್ಟರ್ ಕೊಟ್ಟಿರುವ ನೋಟಿಸ್ ಅನ್ನು ರದ್ದುಗೊಳಿಸುವಂತೆ ಸಾಯಿ ಪಲ್ಲವಿಯ ಮನವಿಯನ್ನು ತಿರಸ್ಕರಿಸಿರುವ ನ್ಯಾಯಮೂರ್ತಿ ಕನ್ನೆಗಂಟಿ ಲಲಿತಾ, ‘ಅರ್ಜಿದಾರರು ಅಪರಾಧದ ಕುರಿತು ನಿರ್ದಿಷ್ಟಪಡಿಸದ ದುರುದ್ದೇಶಪೂರಿತ ಅರ್ಜಿಯ ಆಧಾರದ ಮೇಲೆ ದೂಷಾರೋಪಣೆಗಾಗಿ ನೋಟಿಸ್ ನೀಡಲಾಗಿದೆ. ಈ ಕುರಿತು ಸತ್ಯಾಸತ್ಯತೆ ಅರಿವುದಕ್ಕಾಗಿ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ. ಇದನ್ನೂ ಓದಿ:ಪೂಲನ್ ದೇವಿ ಬದುಕಿಗೆ ನಿರ್ದೇಶಕ ರಾಜಗುರು ಅವರ ಹೊಸ ಸ್ಪರ್ಶ

    ಹೈದರಾಬಾದ್ ಬಜರಂಗದಳದ ಸದಸ್ಯ ಅಖಿಲ್ ಎನ್ನುವವರು ಸಾಯಿ ಪಲ್ಲವಿಯನ್ನು ವಿಚಾರಣೆ ನಡೆಸುವಂತೆ ಸುಲ್ತಾನ್ ಬಜಾರ್ ಸರ್ಕಲ್ ಇನ್ಸೆಪೆಕ್ಟರ್ ಗೆ ದೂರು ನೀಡಿದ್ದರು. ಅಲ್ಲದೇ, ಇನ್ನೂ ಹಲವು ಕಡೆ ದೂರುಗಳು ದಾಖಲಾಗಿದ್ದವು. ಹಾಗಾಗಿ ಸಾಯಿ ಪಲ್ಲವಿಗೆ ನೋಟಿಸ್ ಜಾರಿ ಮಾಡಲಾಗಿತ್ತು. ಈ ಕುರಿತು ಸಾಯಿ ಪಲ್ಲವಿ ಸ್ಪಷ್ಟನೆ ಕೊಟ್ಟರೂ ದೂರುಗಳು ಮಾತ್ರ ನಿಂತಿರಲಿಲ್ಲ.

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಬಾಲಕಿ ವಯಸ್ಕಳಾದ್ರೂ ಪೋಕ್ಸೋ ಅನ್ವಯ: ಹೈಕೋರ್ಟ್

    ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಬಾಲಕಿ ವಯಸ್ಕಳಾದ್ರೂ ಪೋಕ್ಸೋ ಅನ್ವಯ: ಹೈಕೋರ್ಟ್

    ನವದೆಹಲಿ: ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಬಾಲಕಿ ವಯಸ್ಕಳಾದರೂ ಆಕೆಯ ಮೇಲಿನ ದೌರ್ಜನ್ಯ ತಡೆಯಲು ಪೋಕ್ಸೋ ಅನ್ವಯವಾಗುತ್ತದೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ.

    ತಾನು ಲೈಂಗಿಕ ಸಂಬಂಧ ಹೊಂದಿದ್ದೆ ಎಂದು ಆರೋಪಿಸಲಾಗಿರುವ ಬಾಲಕಿಯು ಮೈನೆರೆದಿದ್ದು, ಆಕೆಯು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿ ವಯಸ್ಕಳಾಗಿದ್ದಾಳೆ. ಹೀಗಾಗಿ ಪೋಕ್ಸೊ ಕಾಯ್ದೆ ತನಗೆ ಅನ್ವಯಿಸದು ಎಂದು ವಾದಿಸಿದ್ದ ಆರೋಪಿಯ ವಾದವನ್ನು ದೆಹಲಿ ಹೈಕೋರ್ಟ್ ಇತ್ತೀಚೆಗೆ ತಿರಸ್ಕರಿಸಿದೆ. ಇದನ್ನೂ ಓದಿ: `ಪವಿತ್ರ’ಪ್ರೇಮ ವಿಫಲ – ಯುವಕ ಕೈಕೊಟ್ಟನೆಂದು ಕಾಲೇಜಿನಲ್ಲೇ ವಿದ್ಯಾರ್ಥಿನಿ ನೇಣಿಗೆ ಶರಣು

    ಪೋಕ್ಸೊ ಕಾಯ್ದೆಗೆ ಸಂಪ್ರದಾಯದ ಕಾನೂನು ಅನ್ವಯಿಸುವುದಿಲ್ಲ. ಲೈಂಗಿಕ ದೌರ್ಜನ್ಯದಿಂದ ಮಕ್ಕಳನ್ನು ರಕ್ಷಿಸಲು ಈ ಕಾನೂನನ್ನು ಜಾರಿಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ನೇತೃತ್ವದ ಏಕಸದಸ್ಯ ಪೀಠ ಹೇಳಿದೆ. ಇದನ್ನೂ ಓದಿ: ಕಾಳಿ ಕೈಗೆ ಸಿಗರೇಟು : ಮಾಳವಿಕಾ ಅವಿನಾಶ್ ಛೀಮಾರಿ, ನಟ ಕಿಶೋರ್ ವಿಭಿನ್ನ ಪ್ರತಿಕ್ರಿಯೆ

    ಮಕ್ಕಳ ಎಳೆಯ ಪ್ರಾಯ ರಕ್ಷಿಸಿ, ಅವರ ಮೇಲಿನ ದೌರ್ಜನ್ಯ ಹಾಗೂ ದುರ್ಬಳಕೆ ತಪ್ಪಿಸಲು ಮತ್ತು ಅವರ ಯೌವ್ವನವನ್ನು ಶೋಷಣೆಯಿಂದ ಪಾರು ಮಾಡುವುದು ಕಾನೂನಿನ ಉದ್ದೇಶ. ಹೀಗಾಗಿ ಸಂತ್ರಸ್ತೆಯು ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿ ವಯಸ್ಕಳಾಗಿದ್ದು ಕಠಿಣವಾದ ಪೋಕ್ಸೊ ಕಾಯ್ದೆ ಅನ್ವಯಿಸದು ಎಂಬ ಅರ್ಜಿದಾರರ ವಾದವನ್ನು ತಿರಸ್ಕರಿಸಲಾಗಿದೆ ಎಂದು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರಿದ್ದ ಪೀಠ ಹೇಳಿದೆ.

    ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ), 377 (ಅಸ್ವಾಭಾವಿಕ ಅಪರಾಧ), 506 (ಕ್ರಿಮಿನಲ್ ಬೆದರಿಕೆ), 406 (ನಂಬಿಕೆ ದ್ರೋಹ) ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್ 6ರ ಅಡಿ ಎಫ್‌ಐಆರ್ ದಾಖಲಿಸಿರುವುದನ್ನು ವಜಾ ಮಾಡುವಂತೆ ಕೋರಿ ಆರೋಪಿ ಸಲ್ಲಿಸಿದ್ದ ಮನವಿಯ ವಿಚಾರಣೆಯ ನ್ಯಾಯಾಲಯ ಈಚೆಗೆ ನಡೆಸಿತು. ಇದನ್ನೂ ಓದಿ: ಫಸ್ಟ್ ನೈಟ್ ಅನ್ನೋದೇ ಇಲ್ಲ ಎಂದು ಹೇಳಿ ಪತಿಯನ್ನೇ ಬೆಚ್ಚಿ ಬೀಳಿಸಿದ ನಟಿ ಆಲಿಯಾ ಭಟ್

    ಏನಿದು ಘಟನೆ?
    ಈಚೆಗೆ ಬಾಲಕಿಯ ಮನೆಗೆ ತೆರೆಳಿದ್ದ ಆರೋಪಿಯು ಆಕೆಯನ್ನು ವಿವಾಹ ಮಾಡಿಕೊಡುವಂತೆ ಬಾಲಕಿಯ ಪೋಷಕರನ್ನು ಕೋರಿದ್ದ. ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಬಳಿಕ ಆಕೆಯನ್ನು ವಿವಾಹ ಮಾಡಿಕೊಡುವ ಷರತ್ತಿನೊಂದಿಗೆ ಪೋಷಕರು ಒಪ್ಪಿಕೊಂಡಿದ್ದರು. ಅದಕ್ಕಾಗಿ ಬಾಲಕಿ ಕುಟುಂಬಸ್ಥರು ಹಲವು ಉಡುಗೊರೆಯ ಜೊತೆಗೆ 10 ಲಕ್ಷ ರೂಪಾಯಿಯನ್ನೂ ವರದಕ್ಷಿಣೆಗೆಂದು ನೀಡಿದ್ದರು. ಈನಡುವೆ ಆರೋಪಿಯು 16 ವರ್ಷದ ಬಾಲಕಿಯ ಜೊತೆ ಲೈಂಗಿಕ ಸಂಪರ್ಕ ಸಾಧಿಸಿದ್ದ ನಂತರ ಆಕೆಯನ್ನು ವಿವಾಹವಾಗಲು ನಿರಾಕರಿಸಿದ್ದ. ಇದರಿಂದಾಗಿ ಆತನ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.

    Live Tv
    [brid partner=56869869 player=32851 video=960834 autoplay=true]