Tag: court

  • ಕೋವಿಡ್‌ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್‌

    ಕೋವಿಡ್‌ನಿಂದ ಹಳೆಯದೆಲ್ಲಾ ಮರೆತುಹೋಗಿದೆ ಎಂದ ದಿಲ್ಲಿ ಆರೋಗ್ಯ ಸಚಿವ – ಜಾಮೀನು ತೀರ್ಪು ಕಾಯ್ದಿರಿಸಿದ ಕೋರ್ಟ್‌

    ನವದೆಹಲಿ: ಕೋವಿಡ್‌ ಪರಿಣಾಮದಿಂದಾಗಿ ಹಳೆಯ ಘಟನೆಗಳೆಲ್ಲ ಮರೆತು ಹೋಗಿದೆ. ನನಗೆ ಸ್ಮರಣೆ ಶಕ್ತಿಯಿಲ್ಲ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್‌ ವಿಚಾರಣೆ ವೇಳೆ ಹೇಳುತ್ತಿದ್ದಾರೆಂದು ವಿಚಾರಣಾ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಮಾಹಿತಿ ನೀಡಿದೆ.

    ಎಎಪಿ ಸಚಿವರ ಇ.ಡಿ ಬಂಧನವನ್ನು ಜೂನ್ 13ರ ವರೆಗೆ ವಿಸ್ತರಿಸಲಾಗಿತ್ತು. ಜೈನ್‌ಗೆ ಜಾಮೀನು ನೀಡುವ ಸಂಬಂಧದ ವಿಚಾರಣೆಯನ್ನು ಜೂನ್ 14ಕ್ಕೆ ನಿಗದಿಪಡಿಸಲಾಗಿತ್ತು. ನ್ಯಾಯಾಲಯವು ಮಂಗಳವಾರ ಸತ್ಯೇಂದ್ರ ಜೈನ್ ಅವರ ಜಾಮೀನು ಅರ್ಜಿಯನ್ನು ಆಲಿಸಿತು. ಜೈನ್ ಅವರ ಜಾಮೀನು ಅರ್ಜಿಯ ಆದೇಶವನ್ನು ಜೂನ್‌ 18ಕ್ಕೆ ನ್ಯಾಯಾಲಯ ಕಾಯ್ದಿರಿಸಿದೆ. ಇದನ್ನೂ ಓದಿ: ಹಿಂಸಾಚಾರ ಪ್ರತಿಭಟನೆ: ಪೊಲೀಸರಿಂದ ಪರಿಸ್ಥಿತಿ ನಿಯಂತ್ರಿಸಲಾಗದಿದ್ರೆ ಕೇಂದ್ರ ಪಡೆ ಕರೆಸಿ – ಹೈಕೋರ್ಟ್

    ಕಳೆದ ವಾರ ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌.ವಿ.ರಾಜು, ಸತ್ಯೇಂದ್ರ ಜೈನ್ ತುಂಬಾ ನಿಧಾನವಾಗಿ ಬರೆಯುತ್ತಾರೆ. ಅವರು ಒಂದು ಪುಟವನ್ನು ಬರೆಯಲು ಸುಮಾರು ಎರಡು ಗಂಟೆಗಳನ್ನು ತೆಗೆದುಕೊಳ್ಳುತ್ತಾರೆ. ಅವರ ಹೇಳಿಕೆಯನ್ನು ಅವರ ಕೈಬರಹದಲ್ಲಿ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಅದು ನನ್ನ ಹೇಳಿಕೆಯಲ್ಲ ಎಂದು ಅವರು ಹೇಳುತ್ತಾರೆ ಎಂದು ವಾದಿಸಿದ್ದರು.

    ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 6 ಮತ್ತು 7 ರಂದು ಸಚಿವ ಸತ್ಯೇಂದ್ರ ಜೈನ್‌ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿದಂತೆ ಇತರೆ ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿತ್ತು. ಮೇ 30 ರಂದು ಜೈನ್‌ ಅವರನ್ನು ಇ.ಡಿ ಬಂಧಿಸಿತ್ತು. ನಂತರ ಮೇ 31 ರಂದು ವಿಚಾರಣಾ ನ್ಯಾಯಾಲಯವು ಜೈನ್‌ ಅವರನ್ನು ಇ.ಡಿ ಕಸ್ಟಡಿಗೆ ವಹಿಸಿತ್ತು. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

  • ಮಳಲಿ ಮಸೀದಿ ಬಗ್ಗೆ ಯಾವುದೇ ಆದೇಶ ಹೊರಡಿಸುವಂತಿಲ್ಲ- ಹೈಕೋರ್ಟ್ ಮಹತ್ವದ ಆದೇಶ

    ಮಳಲಿ ಮಸೀದಿ ಬಗ್ಗೆ ಯಾವುದೇ ಆದೇಶ ಹೊರಡಿಸುವಂತಿಲ್ಲ- ಹೈಕೋರ್ಟ್ ಮಹತ್ವದ ಆದೇಶ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿಯಲ್ಲಿರುವ ಮಸೀದಿ ಬಗೆಗಿನ ವಿವಾದಕ್ಕೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

    ಹೈಕೋರ್ಟ್‌ನಲ್ಲಿ ವಿಹೆಚ್‌ಪಿ ಪರವಾಗಿ ಹಿರಿಯ ವಕೀಲ ವಿವೇಕ್ ರೆಡ್ಡಿ ವಾದ ಮಂಡಿಸಿದ್ದಾರೆ. ಮಳಲಿ ಮಸೀದಿ ಬಗ್ಗೆ ಮಂಗಳೂರಿನ ಸಿವಿಲ್ ಕೋರ್ಟ್ ವಿಚಾರಣೆ ಮಾತ್ರವೇ ಮಾಡಬೇಕು. ಈ ಬಗ್ಗೆ ಯಾವುದೇ ಆದೇಶವನ್ನು ಹೊರಡಿಸುವಂತಿಲ್ಲ ಎಂದು ಮಂಗಳೂರು ಜಿಲ್ಲಾ ಮೂರನೇ ಸಿವಿಲ್ ಕೋರ್ಟ್‌ಗೆ ಹೈಕೋರ್ಟ್ ಸೂಚನೆ ನೀಡಿದೆ.

    ಮಳಲಿ ಮಸೀದಿ ಪುನರ್ ನಿರ್ಮಾಣಕ್ಕೆ ಮಸೀದಿ ಆಡಳಿತ ಮಂಡಳಿ ಮುಂದಾಗಿತ್ತು. ಆದರೆ ಇದಕ್ಕೆ ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಮಸೀದಿಯ ನಡೆಯನ್ನು ಪ್ರಶ್ನಿಸಿ ಮಂಗಳೂರು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಅರ್ಜಿ ವಿಚಾರಣೆ ಸಂದರ್ಭ ಮಸೀದಿ 700 ವರ್ಷಗಳ ಹಿಂದಿನಿಂದ ಇದೆ ಎಂದು ಮಸೀದಿ ಪರ ವಕೀಲರು ವಾದಿಸಿದ್ದರು. ಇದನ್ನೂ ಓದಿ: ಶಿಕ್ಷಕರು, ಪದವೀಧರ ಕ್ಷೇತ್ರಕ್ಕೆ ಯಶಸ್ವಿ ಮತದಾನ – ಜೂನ್ 15ಕ್ಕೆ ಫಲಿತಾಂಶ

    ಮಸೀದಿಯೇ 700 ವರ್ಷಗಳಷ್ಟು ಹಳೆಯದಾಗಿದ್ದರೆ, ಅದರಲ್ಲೇ ಇದ್ದ ದೇವಾಯ ಅದಕ್ಕಿಂತಲೂ ಹಳೆಯದು ಎಂದು ಹಿಂದೂ ಪರ ವಕೀಲರು ವಾದಿಸಿದ್ದಾರೆ. ದೇವಸ್ಥಾನ ಎಷ್ಟು ವರ್ಷಗಳ ಹಿಂದೆ ಇತ್ತು? ದೇವಸ್ಥಾನ ಒಡೆದು ಮಸೀದಿ ಕಟ್ಟಲಾಗಿದೆಯಾ? ಎಂಬೆಲ್ಲಾ ಪ್ರಶ್ನೆಗೆ ಉತ್ತರ ತಿಳಿಯಲು ಹಿಂದೂ ಸಂಘಟನೆ ಪರ ವಕೀಲರು ಕಮಿಷನ್ ಒಂದನ್ನು ನೇಮಕ ಮಾಡಲು ಮನವಿ ಮಾಡಿದ್ದರು.

    ಕೆಳಹಂತದ ನ್ಯಾಯಾಲಯ ಮಳಲಿ ಮಸೀದಿಯ ವಾಸ್ತವ ಸ್ಥಿತಿಯನ್ನು ಮುಂದುವರೆಸಬಹುದು ಎಂದು ಸೂಚನೆ ನೀಡಿತ್ತು. ಆದರೆ ಕೆಳ ಹಂತದ ಸೂಚನೆಯನ್ನು ಒಪ್ಪದ ವಕೀಲರು ಹೈಕೋರ್ಟ್ ಮೆಟ್ಟಿಲು ಏರಿದ್ದರು ಹಾಗೂ ಸಾರ್ವಜನಿಕ ಪೂಜಾಸ್ಥಳ ಅಧಿನಿಯಮ 1991ರ ಪ್ರಕಾರ ಅರ್ಜಿ ಸಲ್ಲಿಸಿದ್ದರು. 100 ವರ್ಷ ಮೇಲ್ಪಟ್ಟ ದೇವಾಲಯಗಳಿಗೆ ಅಧಿನಿಯಮ ಅನ್ವಯವಾಗುತ್ತದೆ. ಹೀಗಾಗಿ 700 ವರ್ಷಗಳ ಹಿಂದೆ ಇದ್ದ ದೇವಾಲಯಕ್ಕೆ ಕಮಿಷನ್ ನೇಮಕ ಮಾಡಲು ವಿವೇಕ್ ರೆಡ್ಡಿ ಹೈಕೋರ್ಟ್‌ನಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಜೋಗ ಜಲಪಾತ ಮುಂಗಾರಿನ ವಿಸ್ಮಯ – ಬೀಸುವ ಗಾಳಿಗೆ ಮೇಲಕ್ಕೆ ಹಾರುತ್ತಿದೆ ಶರಾವತಿ!

    ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಂಗಳೂರು ಕೋರ್ಟ್ಗೆ ಯಾವುದೇ ಆದೇಶವನ್ನು ನೀಡುವಂತಿಲ್ಲ ಎಂದು ಸೂಚನೆ ನೀಡಿದೆ. ಮಸೀದಿಯ ಯಥಾಸ್ಥಿತಿಯನ್ನು ಮುಂದುವರಿಸುವಂತೆ ಸೂಚನೆ ನೀಡಿದ್ದು, ವಿವರವಾದ ವಿಚಾರಣೆ ನಡೆಯುವವರೆಗೆ ಕೆಳಹಂತದ ನ್ಯಾಯಾಲಯ ಯಾವುದೇ ಆದೇಶ ನೀಡುವಂತಿಲ್ಲ ಎಂದಿದೆ.

    ಮಳಲಿ ಮಸೀದಿ ವಿಚಾರಣೆ ಜ್ಞಾನವಾಪಿ ರೀತಿಯಲ್ಲಿ ನಡೆಯುತ್ತಿದ್ದು, ದೇವಾಲಯದ ಇತಿಹಾಸ ಮೊದಲು ತಿಳಿಯಬೇಕು, ಕಮಿಷನ್ ನೇಮಕವಾಗಿ ವರದಿ ಕೊಡುವ ತನಕ ಯಾವುದೇ ಕಾರ್ಯಚಟುವಟಿಕೆಗಳನ್ನು ನಡೆಸಬಾರದು ಎಂದು ಆದೇಶಿಸಿದೆ.

  • ಹುಬ್ಬಳ್ಳಿ ಗಲಭೆ ಪ್ರಕರಣ – 11 ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಹುಬ್ಬಳ್ಳಿ ಗಲಭೆ ಪ್ರಕರಣ – 11 ಎಫ್‍ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಧಾರವಾಡ: ಕಳೆದ ಏಪ್ರಿಲ್ 16 ರಂದು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು ನಡೆದಿದ್ದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 12 ಎಫ್‍ಐಆರ್‌ಗಳಲ್ಲಿ 11 ಎಫ್‍ಐಆರ್ ರದ್ದು ಗೊಳಿಸಬೇಕು ಎಂದು ಆರೋಪಿಗಳ ಪರ ಧಾರವಾಡ ಹೈಕೋರ್ಟ್‍ಗೆ ಹಾಕಿದ್ದ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ.

    ಏಪ್ರಿಲ್ 16 ರಂದು ಅಭಿಷೇಕ್ ಎಂಬ ಯುವಕ ವಿವಾದಾತ್ಮಕ ಪೋಸ್ಟ್ ಒಂದನ್ನು ಹಾಕಿದ್ದ. ಈ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದು, ಗುಂಪೊಂದು ಹಳೆ ಹುಬ್ಬಳ್ಳಿ ಠಾಣೆ ಎದುರು ಪೊಲೀಸರ ಹಾಗೂ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಈ ಹಿನ್ನೆಲೆ ಪೊಲೀಸರು 12 ಎಫ್‍ಐಆರ್ ದಾಖಲಿಸಿ 156 ಜನರನ್ನು ಬಂಧಿಸಿದ್ದರು. ಈ ವಿಚಾರವಾಗಿ ಆರೋಪಿಗಳ ಪರ ವಕೀಲರು 11 ಎಫ್‍ಐಆರ್ ರದ್ದು ಮಾಡಬೇಕು ಎಂದು ಧಾರವಾಡ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಯಾರ‍್ರೀ ಆ ಡಿಸಿ?: ಪಿಎಸ್‌ಐಗೆ ಹೊರಟ್ಟಿ ಪ್ರಶ್ನೆ

    ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ, ಸದ್ಯ ಪ್ರಕರಣದ ತನಿಖೆ ನಡೆಯುತಿದ್ದು, ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಕೆ ಆಗಬೇಕಿದೆ, ಈ ಹಿನ್ನೆಲೆ ಎಫ್‍ಐಆರ್ ರದ್ದು ಮಾಡಲು ಆಗಲ್ಲ ಎಂದು ಆರೋಪಿಗಳ ಪರ ಹಾಕಿದ್ದ ಅರ್ಜಿ ವಜಾ ಮಾಡಿ ಆದೇಶಿಸಿದೆ. ಸದ್ಯ ಆರೋಪಿ ಪರ ವಕೀಲರು ಮತ್ತೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಬೇರೊಬ್ಬರ ಪತ್ನಿ ಜೊತೆಗೆ ಲವ್ವಿ-ಡವ್ವಿ – ಕೊಲೆಯಾದ ಆಟೋ ಚಾಲಕ

  • ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ – 921 ಕೋಟಿ ನೀಡಲು ಮುಂದಾದ ಗೂಗಲ್‌

    ಮಹಿಳಾ ಉದ್ಯೋಗಿಗಳಿಗೆ ತಾರತಮ್ಯ – 921 ಕೋಟಿ ನೀಡಲು ಮುಂದಾದ ಗೂಗಲ್‌

    ಸ್ಯಾನ್‌ಫ್ರಾನ್ಸಿಸ್ಕೋ: ಮಹಿಳಾ ಉದ್ಯೋಗಿಗಳಿಗೆ ಸಂಬಳದ ವಿಚಾರದಲ್ಲಿ ತಾರತಮ್ಯ ಮಾಡಿದ್ದಕ್ಕೆ ಗೂಗಲ್‌ 118 ದಶಲಕ್ಷ ಡಾಲರ್‌(ಅಂದಾಜು 921 ಕೋಟಿ ರೂ.) ಪರಿಹಾರ ನೀಡಲು ಒಪ್ಪಿಕೊಂಡಿದೆ.

    ಕ್ಯಾಲಿಫೋರ್ನಿಯಾದಲ್ಲಿ ಕೆಲಸ ಮಾಡುತ್ತಿರುವ 15,500 ಮಹಿಳಾ ಉದ್ಯೋಗಿಗಳು ನಮಗೆ ಸಂಬಳದಲ್ಲಿ ಅನ್ಯಾಯವಾಗಿದೆ. ಪುರುಷರಷ್ಟೇ ಕೆಲಸ ಮಾಡುತ್ತಿದ್ದರೂ ನಮ್ಮ ಸಂಬಳ ಕಡಿಮೆ ಎಂದು ಆರೋಪಿಸಿದ್ದರು.

    ಈ ಸಂಬಂಧ ಮಾಜಿ ಮಹಿಳಾ ಉದ್ಯೋಗಿಗಳು 2017ರಲ್ಲಿ ಗೂಗಲ್‌ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದರು. ಇದನ್ನೂ ಓದಿ: ಇನ್ಮುಂದೆ ಅಮೆಜಾನ್‌ನಲ್ಲಿ ಶೂ ಕೊಳ್ಳುವುದಕ್ಕೂ ಮೊದಲು ವರ್ಚುವಲ್ ಆಗಿ ಟ್ರೈಮಾಡಿ

    ಗೂಗಲ್‌ ಎಲ್ಲ ಆರೋಪಗಳನ್ನು ತಿರಸ್ಕರಿಸಿ, ಉದ್ಯೋಗಿಗೆ ಸಂಬಂಧಿಸಿದ ಎಲ್ಲ ಕಾನೂನುಗಳನ್ನು ಸರಿಯಾಗಿ ಪಾಲಿಸಲಾಗುತ್ತಿದೆ ಎಂದು ಹೇಳಿತ್ತು. ಈಗ ಎಲ್ಲ ಮಾಜಿ ಉದ್ಯೋಗಿಗಳಿಗೆ ಪರಿಹಾರ ನೀಡುವುದಾಗಿ ಗೂಗಲ್‌ ಕೋರ್ಟ್‌ ಮುಂದೆ ಹೇಳಿದೆ.

    ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಗೂಗಲ್‌, 5 ವರ್ಷಗಳ ಕಾಲ ನಡೆದ ಈ ಕಾನೂನು ಹೋರಾಟಕ್ಕೆ ಕೊನೆ ಹಾಡಲು ಮುಂದಾಗಿದ್ದೇವೆ. ಎರಡು ಕಡೆಯುವರು ಸಹಮತದ ನಿರ್ಧಾರಕ್ಕೆ ಬಂದಿದ್ದೇವೆ ಎಂದು ತಿಳಿಸಿದೆ.

  • ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್

    ಪದವೀಧರ ಮಹಿಳೆಯನ್ನು ಕೆಲಸಕ್ಕೆ ಹೋಗುವಂತೆ ಒತ್ತಾಯಿಸುವಂತಿಲ್ಲ – ಹೈಕೋರ್ಟ್

    ಮುಂಬೈ: ವಿದ್ಯಾವಂತೆ ಎನ್ನುವ ಕಾರಣಕ್ಕೆ ಮಹಿಳೆಯನ್ನು ಜೀವನ ನಿರ್ವಹಣೆಗೆ ದುಡಿಯುವಂತೆ ಒತ್ತಾಯಿಸುವಂತಿಲ್ಲ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

    ಪುಣೆಯ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿದೆ. ಇದನ್ನೂ ಓದಿ: ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಅರ್ಜಿಯಲ್ಲಿ ವಿಚ್ಛೇದಿತ ಪತ್ನಿ ಪ್ರಸ್ತುತ ಸ್ಥಿರ ಆದಾಯದ ಮೂಲ ಹೊಂದಿದ್ದಾರೆ. ಆದರೆ ನ್ಯಾಯಾಲಯದಿಂದ ಸತ್ಯವನ್ನು ಮರೆಮಾಚಿದ್ದಾರೆ ಎಂದೂ ಆರೋಪಿಸಿದ್ದರು. ಇದನ್ನೂ ಓದಿ: ರಾಯಚೂರಿನ ನೀರಿನ ಟ್ಯಾಂಕ್ 25 ವರ್ಷಗಳಿಂದ ಸ್ವಚ್ಛತೆಯನ್ನೇ ಕಂಡಿಲ್ಲ!

    ಈ ಕುರಿತು ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್, ಮಹಿಳೆ ಶೈಕ್ಷಣಿಕ ಪದವಿ, ಅರ್ಹತೆ ಹೊಂದಿದ್ದರೂ ಕೆಲಸ ಮಾಡಬಹುದು ಇಲ್ಲವೇ ಮನೆಯಲ್ಲೇ ಉಳಿಯುವ ಆಯ್ಕೆ ಮಾಡಿಕೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.

    ಮನೆಯ ಮಹಿಳೆ ಆರ್ಥಿಕವಾಗಿ ಕೊಡುಗೆ ನೀಡಬೇಕು ಎಂಬುದನ್ನು ನಮ್ಮ ಸಮಾಜ ಇನ್ನೂ ಒಪ್ಪಿಕೊಂಡಿಲ್ಲ. ಏಕೆಂದರೆ ಅದು ಮಹಿಳೆಯ ಆಯ್ಕೆಯಾಗಿದೆ. ಆದ್ದರಿಂದ ಕೆಲಸಕ್ಕೆ ಹೋಗುವಂತೆ ಒತ್ತಾಯಿಸಲಾಗುವುದಿಲ್ಲ. ಪದವೀಧರಳು ಎಂಬ ಕಾರಣಕ್ಕೆ ಕುಳಿತುಕೊಳ್ಳಬಾರದು ಎಂದು ಹೇಳಲು ಸಾಧ್ಯವಿಲ್ಲ. ಉದಾಹರಣೆಗೆ `ನಾನಿಂದು ನ್ಯಾಯಧೀಶನಾಗಿದ್ದೇನೆ, ನಾಳೆ ಮನೆಯಲ್ಲೇ ಕುಳಿತುಕೊಳ್ಳಬಹುದು. ಆಗ ನಾನು ನ್ಯಾಯಾಧೀಶನಾಗಲು ಅರ್ಹನಾಗಿದ್ದೇನೆ ಮನೆಯಲ್ಲಿ ಕುಳಿತುಕೊಳ್ಳಬಾರದು’ ಎಂದು ಹೇಳುತ್ತೀರಾ ಎಂದು ಪ್ರಶ್ನಿಸಿದೆ.

    ಈ ಎಲ್ಲ ಅಂಶಗಳನ್ನು ಪರಿಗಣಿಸಿದ ಕೌಟುಂಬಿಕ ನ್ಯಾಯಾಲಯವು ಆಕೆ ಪತಿಯೊಂದಿಗೆ ವಿಚ್ಛೇದನ ಪಡೆದ ನಂತರ ಜೀವನಾಂಶ ಪಡೆಯುವ ಸಾಮರ್ಥ್ಯ ಹೊಂದಿರುತ್ತಾಳೆ ಎಂದು ಹೇಳಿದೆ. ಜೊತೆಗೆ ಅರ್ಜಿದಾರರು ಪತ್ನಿಗೆ ಪ್ರತಿ ತಿಂಗಳು 5 ಸಾವಿರ ಹಾಗೂ ಪ್ರಸ್ತುತ 13 ವರ್ಷದ ಮಗಳು ತಾಯಿಯೊಂದಿಗೆ ವಾಸಿಸುತ್ತಿರುವುದರಿಂದ ಮಗಳ ನಿರ್ವಹಣೆಗಾಗಿ 7 ಸಾವಿರ ಪಾವತಿಸಲು ನ್ಯಾಯಾಲಯ ಸೂಚಿಸಿದೆ.

    ಹೆಚ್ಚಿನ ವಿಚಾರಣೆ ಮುಂದಿನ ವಾರಕ್ಕೆ ಮುಂದೂಡಿದೆ.

  • ಲಾಲೂ ಪ್ರಸಾದ್ ಯಾದವ್‌ಗೆ 6,000 ರೂ. ದಂಡ ವಿಧಿಸಿದ ನ್ಯಾಯಾಲಯ

    ಲಾಲೂ ಪ್ರಸಾದ್ ಯಾದವ್‌ಗೆ 6,000 ರೂ. ದಂಡ ವಿಧಿಸಿದ ನ್ಯಾಯಾಲಯ

    ರಾಂಚಿ: 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‌ಗೆ ಜಾರ್ಖಂಡ್‌ನ ಪಲಾಮು ವಿಶೇಷ ನ್ಯಾಯಾಲಯ ಬುಧವಾರ 6,000 ರೂಪಾಯಿ ದಂಡ ವಿಧಿಸಿದೆ.

    2009ರಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್‌ರನ್ನು ಸಂಸದ ಮತ್ತು ಶಾಸಕರ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ 6,000 ರೂ. ದಂಡ ವಿಧಿಸುವ ಮೂಲಕ ಪ್ರಕರಣ ಇತ್ಯರ್ಥಗೊಂಡಿದ್ದು, ಅವರು ಈಗ ಆರೋಪ ಮುಕ್ತರಾಗಿದ್ದಾರೆ ಎಂದು ಲಾಲೂ ಅವರ ವಕೀಲ ಧೀರೇಂದ್ರ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಧೀಮಂತ ಜನ ನಾಯಕ: ಪ್ರಚಾರ ಸಮಯದಲ್ಲಿ ತಂದೆ ಸಾಧನೆಯನ್ನು ಗುಣಗಾನ ಮಾಡಿದ ವಿಜಯೇಂದ್ರ

    ಕಳೆದ ತಿಂಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಲಾಲೂ ಯಾದವ್ ಅವರ ಪತ್ನಿ, ಪುತ್ರಿಯರು ಮತ್ತು ಇದಕ್ಕೆ ಸಂಬಂಧಿಸಿದ ಇತರರನ್ನು ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿತ್ತು. ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಎಂಬ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ದೆಹಲಿ ಮತ್ತು ಬಿಹಾರದಲ್ಲಿ ಲಾಲೂ ಯಾದವ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ ಒಟ್ಟು 17 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ಯಾದವ್ 2004 ರಿಂದ 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಈ ಹಗರಣ ನಡೆದಿದೆ.

    ಕಿಡ್ನಿ ಕಸಿ ಮಾಡಿಸಿಕೊಳ್ಳಲು ವಿದೇಶಕ್ಕೆ ತೆರಳಬೇಕಾಗಿರುವುದರಿಂದ ಪಾಸ್‌ಪೋರ್ಟ್ ನವೀಕರಣಕ್ಕಾಗಿ ಬಿಡುಗಡೆ ಮಾಡುವಂತೆ ಕೋರಿ ಲಾಲೂ ಯಾದವ್ ರಾಂಚಿಯ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬಿಜೆಪಿಯಲ್ಲಿ 75 ವರ್ಷಕ್ಕೆ ಮನೆಗೆ ಕಳಿಸ್ತಾರೆ, ಕಾಂಗ್ರೆಸ್‌ನಲ್ಲಿ 90 ಆದ್ರೂ ಚುನಾವಣೆಗೆ ನಿಲ್ಲಿಸ್ತಾರೆ: ಕತ್ತಿ

    ಲಾಲೂ ಯಾದವ್ ಅವರು ಕಿಡ್ನಿ ಕಸಿಗಾಗಿ ಸಿಂಗಾಪುರಕ್ಕೆ ಹೋಗುವ ಸಾಧ್ಯತೆ ಇದೆ. ಈ ಮಧ್ಯೆ ಪಾಸ್‌ಪೋರ್ಟ್ ನವೀಕರಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ನವೀಕರಿಸಿದ ಪಾಸ್‌ಪೋರ್ಟ್‌ ಅನ್ನು ಮತ್ತೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಯಾದವ್ ಪರ ಮತ್ತೊಬ್ಬ ವಕೀಲ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

  • ಕೋರ್ಟ್ ವಿಚಾರಣೆ ವೇಳೆ ಬಿಟ್ರು ನೂರಾರು ಜಿರಳೆ

    ಕೋರ್ಟ್ ವಿಚಾರಣೆ ವೇಳೆ ಬಿಟ್ರು ನೂರಾರು ಜಿರಳೆ

    ಅಲ್ಬನಿ: ಇದುವರೆಗೂ ಕೇಳಿರದ ವಿಲಕ್ಷಣ ಘಟನೆಯೊಂದು ನ್ಯೂಯಾರ್ಕ್‍ನಲ್ಲಿ ನಡೆದಿದೆ. ಮಂಗಳವಾರ ವಿಚಾರಣೆ ನಡೆಯುತ್ತಿದ್ದ ವೇಳೆ ನೂರಾರು ಜಿರಳೆಗಳನ್ನು ನ್ಯೂಯಾರ್ಕ್ ನ್ಯಾಯಾಲಯದಲ್ಲಿ ಬಿಡುಗಡೆ ಮಾಡಲಾಗಿದೆ.

    ಅಲ್ಬನಿ ಸಿಟಿ ಕೋರ್ಟ್‍ನಲ್ಲಿ ನಾಲ್ಕು ಜನ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಕೋರ್ಟ್‍ನಲ್ಲಿ ವಾದಗಳು ಪ್ರಾರಂಭವಾಗಿ ವಾಗ್ವಾದಕ್ಕೆ ತಿರುಗಿಕೊಂಡಿತ್ತು. ಈ ವೇಳೆ ಕೋರ್ಟ್ ಒಳಗಡೆ ತಂದಿದ್ದ ಪ್ಲಾಸ್ಟಿಕ್ ಕಂಟೇನರ್‌ಗಳಲ್ಲಿ ನೂರಾರು ಜಿರಳೆಗಳನ್ನು ಬಿಡಲಾಗಿದೆ. ನಂತರ ಈ ದೃಶ್ಯವನ್ನು ಚಿತ್ರೀಕರಿಸಲಾಗುತ್ತಿದ್ದು, ನಂತರ ನ್ಯಾಯಾಲಯದ ಅಧಿಕಾರಿಗಳು ತಡೆದಿದ್ದಾರೆ.

    During the hearing, hundreds of cockroaches started crawling in the courtroom, the debate was stopped due to insects! – Pankri.World

    ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದು, ಜಿರಳೆಗಳನ್ನು ಉದ್ದೇಶಪೂರ್ವಕವಾಗಿ ನ್ಯಾಯಾಲಯದ ಒಳಗೆ ಬಿಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ಪ್ರಸ್ತುತ ನಾವು ಘಟನೆ ಬಗ್ಗೆ ಯಾವುದೇ ರೀತಿಯ ತೀರ್ಮಾನಕ್ಕೆ ಬರಲು ಅಥವಾ ಯಾವುದೇ ಆರೋಪಗಳನ್ನು ಮಾಡಲು ಬಯಸುವುದಿಲ್ಲ. ಆದರೆ ಜಿರಳೆಗಳನ್ನು ಪ್ರತಿಭಟನೆಯಾಗಿ ಬಳಸಲಾಗಿದೆ ಎಂದು ಕಾಣಿಸುತ್ತಿದೆ ಎಂದರು. ಇದನ್ನೂ ಓದಿ: ಮಂತ್ರಿ, ಮುಖ್ಯಮಂತ್ರಿ ಯಾವುದನ್ನೂ ತಲೆಯಲ್ಲಿ ಇಟ್ಟುಕೊಂಡು ಕೆಲಸ ಮಾಡ್ತಿಲ್ಲ: ವಿಜಯೇಂದ್ರ 

    Disorder in the court: Cockroaches released during hearing - WeirdNews - Dunya News

    ಸರ್ಕಾರಿ ಆಡಳಿತಕ್ಕೆ ಅಡ್ಡಿಪಡಿಸುವುದು ಮತ್ತು ಭೌತಿಕ ಸಾಕ್ಷ್ಯವನ್ನು ನಾಶ ಮಾಡಲು ಯತ್ನ ಮಾಡಿದಕ್ಕೆ ನ್ಯಾಯಾಲಯದ ಅಧಿಕಾರಿಗಳು 34 ವರ್ಷದ ಮಹಿಳೆಯನ್ನು ಬಂಧಿಸಿದ್ದಾರೆ.

  • ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

    ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

    ಮುಂಬೈ: ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿದ್ದು, `ನೀನೂ ಮೂಸೆವಾಲಾನ ರೀತಿ ಕೊನೆಯಾಗುತ್ತೀಯ’ ಎಂದು ಅನಾಮಿಕ ಪತ್ರದಲ್ಲಿರುವುದಾಗಿ ವರದಿಯಾಗಿದೆ.

    ಸಿನಿಮಾ ಬರಹಗಾರ, ನಿರ್ಮಾಪಕ ಸಲೀಂ ಖಾನ್ ಅವರು ಬೆಳಗಿನ ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ದಿನವೂ ಕುಳಿತುಕೊಳ್ಳುವ ಸ್ಥಳದ ಬಳಿ ಅವರ ಭದ್ರತಾ ಸಿಬ್ಬಂದಿಗೆ ಪತ್ರ ಸಿಕ್ಕಿದೆ. ಈ ಸಂಬಂಧ ಪೊಲೀಸರು FIR ದಾಖಲಿಸಿದ್ದಾರೆ. ಇದನ್ನೂ ಓದಿ: ಎರಡೇ ದಿನಕ್ಕೆ 100 ಕೋಟಿ ಕ್ಲಬ್ ಸೇರಿದ ಕಮಲ್ ಹಾಸನ್ ನಟನೆಯ `ವಿಕ್ರಮ್’ ಚಿತ್ರ

    Salim Khan Salman Khan

    ಕಾರಣವೇನು?: ಬಿಷ್ಣೋಯಿ ಸಮುದಾಯವು ಕೃಷ್ಣಮೃಗವನ್ನು ಪೂಜನೀಯವಾಗಿ ಕಾಣುತ್ತದೆ. ಕೃಷ್ಣಮೃಗ ಬೇಟೆ ಪ್ರಕರಣದ ಸಂಬಂಧ ಸಲ್ಮಾನ್‌ಗೆ ಜೋಧಪುರದಲ್ಲಿ ಕೊಲೆ ಬೆದರಿಕೆ ಹಾಕಲಾಗಿತ್ತು. ಲಾರೆನ್ಸ್ ಬಿಷ್ಣೋಯಿ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಖೈದಿ ಎನ್ನಲಾಗಿದೆ.

    ಮೂಸೆವಾಲಾ ಹತ್ಯೆಯ ಬೆನ್ನಲ್ಲೇ ಸಲ್ಮಾನ್ ಖಾನ್ ಅವರಿಗೆ ಭದ್ರತೆ ನೀಡಲಾಗಿದೆ. ಬಾಂದ್ರಾದ ಗ್ಯಾಲಕ್ಸಿ ಅಪಾರ್ಟ್ಮೆಂಟ್ಸ್ ಸುತ್ತಲೂ ಭದ್ರತೆ ಹೆಚ್ಚಿಸುವ ಸಾಧ್ಯತೆ ಇರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಬೇಬಿ ಶವರ್‌ನಲ್ಲಿ ಮಿಂಚಿದ ಪ್ರಣೀತಾ ಸುಭಾಷ್

    ಕಳೆದವಾರ ಪಂಜಾಬ್‌ನ ಮಾನ್ಸಾ ಗ್ರಾಮದಲ್ಲಿ ಪಂಜಾಬಿ ಗಾಯಕ, ರಾಜಕಾರಣಿ ಸಿಧು ಮೂಸೆವಾಲಾ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಅದೇ ಗ್ಯಾಂಗ್ 2018ರಲ್ಲಿ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಹಾಕಿದೆ.

  • ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    ಮದ್ವೆಯಾಗಿ 6 ವರ್ಷ ಕಳೆದ್ರೂ ಫಸ್ಟ್ ನೈಟ್ ಆಗಿಲ್ಲ – ಪತಿಯ ಮನೆ ತೊರೆಯುವಂತೆ ಪತ್ನಿಗೆ ಕೋರ್ಟ್ ಆರ್ಡರ್

    ಭುವನೇಶ್ವರ್: ಒಡಿಶಾದ ಕಟಕ್ ಜಿಲ್ಲೆಯ ಉಪವಿಭಾಗ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಎಸ್‍ಡಿಜೆಎಮ್) ನ್ಯಾಯಾಲಯವು ರಾಜ್ಯದ ಖ್ಯಾತ ನಟಿ ವರ್ಷಾ ಪ್ರಿಯದರ್ಶಿನಿಗೆ ನಟ ಮತ್ತು ಲೋಕಸಭಾ ಸಂಸದ ಅನುಭವ್ ಮೊಹಂತಿ ಅವರ ಮನೆಯನ್ನು ಖಾಲಿ ಮಾಡುವಂತೆ ಆದೇಶಿಸಿದೆ.

    court order law

    ಈ ವೇಳೆ ಪ್ರತಿ ತಿಂಗಳು 10 ರಂದು ಅಥವಾ ಅದಕ್ಕೂ ಮೊದಲು ಪ್ರಿಯದರ್ಶಿನಿ ಅವರಿಗೆ ಅನುಭವ್ ಮೊಹಂತಿಯವರು 30 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವಂತೆ ಸೂಚಿಸಿದೆ. ಇತ್ತೀಚೆಗೆ ಒಡಿಶಾ ಹೈಕೋರ್ಟ್, ಅನುಭವ್ ಮೊಹಾಂತಿ ಮತ್ತು ವರ್ಷಾ ಪ್ರಿಯದರ್ಶಿನಿ ಅವರ ಸಾಂಪ್ರದಾಯಿಕ ಚಿತ್ರವನ್ನು ಗಮನದಲ್ಲಿಟ್ಟುಕೊಂಡು, ಸಾಮಾಜಿಕ ಜಾಲತಾಣಗಳಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದ ಯಾವುದೇ ರೀತಿಯ ವೀಡಿಯೋವನ್ನು ಅಪ್‍ಲೋಡ್ ಮಾಡದಂತೆ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ಆಂಧ್ರಪ್ರದೇಶದ ಕಾರ್ಖಾನೆಯಲ್ಲಿ ಅನಿಲ ಸೋರಿಕೆ – 200 ಮಹಿಳಾ ಕಾರ್ಮಿಕರು ಅಸ್ವಸ್ಥ

    BRIBE

    ಅನುಭವ್ ಮೊಹಂತಿ ಮತ್ತು ವರ್ಷಾ ಪ್ರಿಯದರ್ಶಿನಿ ಯಾರು? ಅವರ ಖಾಸಗಿ ಜೀವನ ಏಕೆ ನ್ಯಾಯಾಲಯದ ಮೆಟ್ಟಿಲೇರಿತು? ಒಡಿಸ್ಸಿ ಚಲನಚಿತ್ರಗಳ ಜಗತ್ತಿನಲ್ಲಿ ದೊಡ್ಡ ಹೆಸರನ್ನು ಪಡೆದ ನಂತರ, ಅನುಭವ್ ಮೊಹಾಂತಿ ಅವರು 2014 ರಲ್ಲಿ ರಾಜ್ಯದ ಜನಪ್ರಿಯ ನಟಿ ವರ್ಷಾ ಪ್ರಿಯದರ್ಶಿನಿ ಅವರನ್ನು ವಿವಾಹವಾಗಿದ್ದರು. ಅದರ ನಂತರ ನಟ ಮತ್ತು ನಟಿ ಇಬ್ಬರೂ ದಾಪಂತ್ಯ ಜೀವನ ಚೆನ್ನಾಗಿಯೇ ಇತ್ತು. ಕೆಲವು ದಿನಗಳ ನಂತರ ಅವರ ಕೌಟುಂಬಿಕ ಜೀವನದಲ್ಲಿ ಬಿರುಕು ಮೂಡಲಾರಭಿಸಿತು. ಇದನ್ನೂ ಓದಿ: ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

    ಅನುಭವ್ ಮೊಹಾಂತಿ ಅವರು 2016 ರಲ್ಲಿ ತಮ್ಮ ಪತ್ನಿ ವರ್ಷಾ ವಿರುದ್ಧ ಮೊದಲ ಬಾರಿಗೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಮದುವೆಯಾಗಿ 2 ವರ್ಷಗಳು ಕಳೆದಿವೆ. ಆದರೆ ನನ್ನ ಪತ್ನಿ ಲೈಂಗಿಕ ಸಂಬಂಧ ಬೆಳೆಸಲು ಮತ್ತು ಸಹಜ ವೈವಾಹಿಕ ಜೀವನಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ಅರ್ಜಿ ಸಲ್ಲಿಸಿದ್ದರು. ಮತ್ತೊಂದೆಡೆ ವರ್ಷ ಅವರು ಸಹ ಪತಿ ಅನುಭವ್ ವಿರುದ್ಧ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದು, ಅವರು ಮದ್ಯವ್ಯಸನಿಯಾಗಿದ್ದು, ಇತರ ಮಹಿಳೆಯರೊಂದಿಗೆ ಅನೈತಿಕ ಸಂಬಂಧಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

    ಅನುಭವ್ ಮೊಹಾಂತಿ ಒಡಿಯಾ ಚಲನಚಿತ್ರಗಳಲ್ಲಿ ನಟಿಸುವ ಮೂಲಕ ಜನಪ್ರಿಯ ನಟರಾಗಿ ಪರಿಚಿತರಾದವರು, ನಂತರ ಅವರು 2013 ರಲ್ಲಿ ರಾಜ್ಯದ ಆಡಳಿತ ಪಕ್ಷವಾದ ಬಿಜು ಜನತಾದೊಂದಿಗೆ ರಾಜಕೀಯಕ್ಕೆ ಪ್ರವೇಶಿಸಿದರು. ಅದೇ ಸಮಯದಲ್ಲಿ, 2014 ರಲ್ಲಿ ಒಡಿಶಾ ಸರ್ಕಾರವು ಮೊಹಾಂತಿ ಅವರನ್ನು ರಾಜ್ಯಸಭಾ ಸಂಸದರನ್ನಾಗಿ ಮಾಡಿತು. 2019 ರಲ್ಲಿ, ಮೊಹಾಂತಿ ಅವರನ್ನು ಕೇಂದ್ರದ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ತೆಗೆದುಕೊಳ್ಳುವ ಮೂಲಕ ಚುನಾವಣೆಯಲ್ಲಿ ಕಣಕ್ಕಿಳಿಸಲಾಯಿತು. ಅದರಲ್ಲಿ ಅವರು ಗೆಲುವು ಪಡೆದರು. ಆದಾಗ್ಯೂ, ಕೌಟುಂಬಿಕ ಕಲಹಗಳಿಂದಾಗಿ ಮೊಹಾಂತಿಯವರ ರಾಜಕೀಯ ಜೀವನವು ನಿರಂತರ ವಿವಾದದಲ್ಲಿ ಉಳಿಯಿತು.

    ಈ ಕುರಿತು ಅವರ ವೈಯಕ್ತಿಕ ಜೀವನ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಂಸದ ಅನುಭವ್ ಮೊಹಂತಿ ಕಳೆದ ಹಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ವೈಯಕ್ತಿಕ ಜೀವನವನ್ನು ಜನರಿಗೆ ತಿಳಿಸಲು ಪ್ರಯತ್ನಿಸಿದ್ದಾರೆ. ಆದರೆ ಸಂಸದರು ತಮ್ಮ ಪತ್ನಿಯೊಂದಿಗಿನ ಲೈಂಗಿಕ ಸಂಬಂಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಮಾಡುವ ಮೂಲಕ ಪ್ರಸ್ತಾಪಿಸಿದ್ದಾರೆ. ಮೊಹಂತಿ ಮಾತನಾಡಿ, ಕಳೆದ 8 ವರ್ಷಗಳಿಂದ ಕೌಟುಂಬಿಕ ಕಲಹದ ನಡುವೆ ಪತ್ನಿ ವರ್ಷಾ ಪ್ರಿಯದರ್ಶಿನಿ ಜತೆ ದೈಹಿಕ ಸಂಬಂಧ ಹೊಂದಿರಲಿಲ್ಲ. ಇತ್ತೀಚಿನ ದಿನಗಳಲ್ಲಿ ನನ್ನ ಇಡೀ ಕುಟುಂಬ ಮತ್ತು ನಾನು ಹೆಂಡತಿಯ ಕಾರಣದಿಂದ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದೇನೆ. ಇದರಿಂದ ನನ್ನ ರಾಜಕೀಯ ಜೀವನದ ಮೇಲೆ ಪರಿಣಾಮ ಬೀರುತ್ತಿದೆ. ನಾನು ನನ್ನ ಹೆಂಡತಿಯಿಂದ ವಿಚ್ಛೇದನವನ್ನು ಬಯಸುತ್ತೇನೆ ಆದರೆ ಇದೀಗ ಈ ನಿರ್ಧಾರವು ನ್ಯಾಯಾಲಯದಲ್ಲಿದೆ ಎಂದಿದ್ದರು.

  • ಮಳಲಿ ದರ್ಗಾ ವಕ್ಫ್ ಆಸ್ತಿ ವಿಚಾರಣೆ ನಡೆಸುವಂತಿಲ್ಲ- ಮಂಗಳೂರು ಕೋರ್ಟಿನಲ್ಲಿ ಹೀಗೊಂದು ವಾದ

    ಮಳಲಿ ದರ್ಗಾ ವಕ್ಫ್ ಆಸ್ತಿ ವಿಚಾರಣೆ ನಡೆಸುವಂತಿಲ್ಲ- ಮಂಗಳೂರು ಕೋರ್ಟಿನಲ್ಲಿ ಹೀಗೊಂದು ವಾದ

    ಮಂಗಳೂರು: ಮಳಲಿ ಮಸೀದಿ ವಿವಾದ ಕುರಿತ ಅರ್ಜಿ ವಿಚಾರಣೆಯನ್ನು ಮಂಗಳೂರು ಕೋರ್ಟ್ ಜೂನ್ 6ಕ್ಕೆ ಮುಂದೂಡಿದೆ.

    ಇಂದಿನ ವಿಚಾರಣೆ ವೇಳೆ ವಾದ ಮಂಡಿಸಿದ ವಿಹೆಚ್‍ಪಿ ಪರ ವಕೀಲರು, ಇಸ್ಲಾಂ ಪ್ರಕಾರ ಎಲ್ಲಿ ಬೇಕಿದ್ರೂ ನಮಾಜ್ ಮಾಡಬಹುದು. ಮಳಲಿ ಮಸೀದಿಯ ವೀಡಿಯೋ ಸಮೀಕ್ಷೆಗೆ ಕೋರ್ಟ್ ಆದೇಶ ನೀಡಬೇಕು ಎಂದು ನ್ಯಾಯಾಧೀಶರನ್ನು ಕೋರಿದ್ರು. ಆದರೆ ಮಸೀದಿ ಪರ ವಕೀಲರು ಇದಕ್ಕೆ ಆಕ್ಷೇಪಿಸಿದ್ರು. ಇದು ದರ್ಗಾ ಅನ್ನೋದ್ರಲ್ಲಿ ಯಾವ ಸಂದೇಹವೂ ಇಲ್ಲ. ಇದಕ್ಕೂ ಜ್ಞಾನವಾಪಿಗೂ ಹೋಲಿಕೆ ಸರಿಯಲ್ಲ. ಇದು ವಕ್ಫ್ ಬೋರ್ಡ್ ಜಮೀನು ಆಗಿರುವ ಕಾರಣ ಕೋರ್ಟ್‍ಗೆ ಈ ವಿಚಾರಣೆ ನಡೆಸುವ ಅಧಿಕಾರ ಇಲ್ಲ. ಹಿಂದೂಗಳ ಅರ್ಜಿಯನ್ನು ಪರಿಗಣಿಸಬಾರದು ಎಂದು ವಾದ ಮಂಡಿಸಿದ್ರು.

    ಅತ್ತ ಜೂನ್ ನಾಲ್ಕರಂದು ಹಿಂದೂ ಸಂಘಟನೆಗಳು ಚಲೋ ಶ್ರೀರಂಗಪಟ್ಟಣಕ್ಕೆ ಕರೆ ನೀಡಿವೆ. ಸಾವಿರಾರು ಮಂದಿ ಹನುಮ ಭಕ್ತರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಜೂನ್ 3, 4 ರಂದು ಜಾಮಿಯಾ ಮಸೀದಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಬೆಳಗಾವಿಯ ಬಾಪಟ್‍ಗಲ್ಲಿ ಮಸೀದಿ ಈ ಹಿಂದೆ ದೇಗುಲವಾಗಿತ್ತು ಎಂದಿದ್ದ ಶಾಸಕ ಅಭಯ್ ಪಾಟೀಲ್ ವಿರುದ್ಧ ಮುಸ್ಲಿಮರು ಸಿಡಿದಿದ್ದಾರೆ. ಇದನ್ನೂ ಓದಿ:  ದಯವಿಟ್ಟು ನನ್ನ ಹೆಂಡತಿಯನ್ನು ನನಗೆ ಕೊಡಿ- ಕಣ್ಣೀರು ಹಾಕಿದ ವರ

    2011ರಲ್ಲಿ ಅಭಯ್ ಪಾಟೀಲ್ ಬೆಳಗಾವಿಯಲ್ಲಿ ಸಾಯಿ ಮಂದಿರ ತೆರವುಗೊಳಿಸಿದ್ದ ಬಗ್ಗೆ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ. ಇದಕ್ಕೆ ತಿರುಗೇಟು ನೀಡಿದ ಅಭಯ್ ಪಾಟೀಲ್, ಅಲ್ಲಿಯ ಜನರ ಮನವೊಲಿಸಿ ಸಾಯಿ ಮಂದಿರ ತೆರವು ಮಾಡಲಾಗಿದೆ. ಇದು ವಿವಾದವೇ ಅಲ್ಲ ಎಂದಿದ್ದಾರೆ.