Tag: court

  • ಮಹಿಳೆಗೆ ಕೊಟ್ಟ ಮುತ್ತು ತಂದ ಆಪತ್ತು- 7 ವರ್ಷಗಳ ನಂತರ ಬಂತು ಕುತ್ತು

    ಮಹಿಳೆಗೆ ಕೊಟ್ಟ ಮುತ್ತು ತಂದ ಆಪತ್ತು- 7 ವರ್ಷಗಳ ನಂತರ ಬಂತು ಕುತ್ತು

    ಪಣಜಿ: ಬಸ್ಸು, ರೈಲಿನಲ್ಲಿ ಪ್ರಯಾಣಿಸುವಾಗ ಒಮ್ಮೊಮ್ಮೆ ವಿಪರೀತ ಜನರ ಮಧ್ಯೆ ಬರುವ ಕಿಡಿಗೇಡಿಗಳು ಮಹಿಳೆಯರು, ಹುಡುಗಿಯರನ್ನು ಸುಮ್ಮನೆ ಟಚ್ ಮಾಡಿಕೊಂಡು ಹೋಗುವುದು, ಎದುರು ಕುಳಿತರೆ ದಿಟ್ಟಿಸಿ ನೋಡುವುದು ಹೀಗೆ.. ಅನೇಕ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುವುದನ್ನೇ ಚಾಳಿ ಮಾಡಿಕೊಂಡಿರುತ್ತಾರೆ. ತನ್ನ ಸ್ಟಾಪ್ ಬರುವಷ್ಟರಲ್ಲಿ ಈ ವ್ಯಕ್ತಿ ಕೆಳಗೆ ಬೇಗನೆ ಇಳಿದು ಹೋದರೆ ಸಾಕಪ್ಪಾ ದೇವರೇ ಎಂದು ಮಹಿಳೆಯರು ತಮ್ಮ ಮನಸ್ಸಿನಲ್ಲಿ ಅಂದು ಕೊಳ್ಳುತ್ತಾರೆ. ಹಾಗೇ ಕೆಲ ಧೈರ್ಯಶಾಲಿ ಮಹಿಳೆಯರು ಕಿಡಿಗೇಡಿಗಳಿಗೆ ತಕ್ಕಪಾಠವನ್ನು ಕಲಿಸುವ ಘಟನೆಯೂ ಆಗಾಗ್ಗೆ ನಡೆಯುತ್ತಿದೆ.

    ಇದೀಗ ಇಂತಹದ್ದೇ ಒಂದು ಪ್ರಕರಣದಲ್ಲಿ ರೋಡ್ ರೋಮಿಯೋ ಒಬ್ಬನಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2015ರಲ್ಲಿ ನಡೆದ ಘಟನೆಗೆ ಈಚೆಗೆ ಶಿಕ್ಷೆ ವಿಧಿಸಿದ್ದು, ಮಹಿಳೆಗೆ ನ್ಯಾಯ ಕಲ್ಪಿಸಿದೆ. ಇದನ್ನೂ ಓದಿ: ಅಕ್ರಮ ಸೇಂದಿ ಸಾಗಿಸುತ್ತಿದ್ದ ಐವರ ಬಂಧನ – 250 ಲೀಟರ್ ಜಪ್ತಿ

    ಏನಿದು ಘಟನೆ?: 2015ರಲ್ಲಿ ಮುಂಬೈನ ಸ್ಥಳೀಯ ರೈಲಿನಲ್ಲಿ 37 ವರ್ಷದ ಗೋವಾ ಮೂಲದ ವ್ಯಕ್ತಿಯೊಬ್ಬ ಮಹಿಳೆಯನ್ನು ಕೆಲ ಕಾಲ ಗುರಾಯಿಸಿ ನೋಡಿ ಎದ್ದು ಹೋಗಬೇಕಾದರೆ ಥಟ್ಟನೆ ಆಕೆಯ ಕೆನ್ನೆಗೆ ಚುಂಬಿಸಿದ್ದಾನೆ. ಬಳಿಕ ಮಹಿಳೆ ನೀಡಿದ ದೂರಿನ ಮೇರೆಗೆ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಮಹಿಳೆಯ ಮೇಲಿನ ದೌರ್ಜನ್ಯವೆಂದು ಪರಿಗಣಿಸಿ ಒಂದು ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದೆ.

    law

    10 ಸಾವಿರ ದಂಡ: ಆರೋಪಿಗೆ ನ್ಯಾಯಾಲಯವು ಶಿಕ್ಷೆಯೊಂದಿಗೆ 10 ಸಾವಿರ ರೂ .ಗಳ ದಂಡವನ್ನು ವಿಧಿಸಿತ್ತು. ಅದರಲ್ಲಿ 5 ಸಾವಿರ ರೂ. ಮಹಿಳೆಗೆ ಪರಿಹಾರವಾಗಿ ನೀಡುವಂತೆ ನಿರ್ದೇಶಿಸಿತು. ಆರೋಪಿ ತನ್ನ ಹಿಂದಿನ ಪ್ರಯಾಣಿಕನು ತನ್ನನ್ನು ತಳ್ಳಿದ್ದಾನೆ ಮತ್ತು ಅವನು ಅವಳ ಮೇಲೆ ಬಿದ್ದಿದ್ದಾನೆ. ಅವನ ತುಟಿಗಳು ಅವಳ ಕೆನ್ನೆಯನ್ನು ಸ್ಪರ್ಶಿಸಿವೆ ಎಂದು ಆ ವ್ಯಕ್ತಿ ತನ್ನ ಸಮರ್ಥನೆಯಲ್ಲಿ ಹೇಳಿ ಕೊಂಡಿದ್ದನು. ಅವಳು ತಪ್ಪು ತಿಳುವಳಿಕೆಯಿಂದ ದೂರು ದಾಖಲಿಸಿದ್ದಾಳೆ ಎಂದು ಕೋರಿದ್ದರು. ಆರೋಪಿಯ ವಾದವನ್ನು ತಳ್ಳಿಹಾಕಿ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಇಂಡಿಗೋ ವಿಮಾನದಲ್ಲಿ ಕಾಣಿಸಿಕೊಂಡ ಹೊಗೆ – ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ

    ಸಂತ್ರಸ್ತೆ ಹೇಳಿದ್ದೇನು?
    ವಿಚಾರಣೆಯ ಸಮಯದಲ್ಲಿ ಸಂತ್ರಸ್ತೆ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಳು ಮತ್ತು 2015 ಆಗಸ್ಟ್ 28 ರಂದು, ತನ್ನ ಸ್ನೇಹಿತನನ್ನು ಭೇಟಿಯಾಗಲು ಗೋವಂಡಿಗೆ ಹೋಗಿದ್ದೆ ಎಂದು ವಿವರಿಸಿದ್ದಳು. ಅಲ್ಲಿಂದ ಮಧ್ಯಾಹ್ನ 1.20ರ ಸುಮಾರಿಗೆ ಇಬ್ಬರೂ ಗೋವಂಡಿಯಿಂದ ರೈಲಿನ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸಿದರು. ಈ ವೇಳೆ ಕೃತ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾರೆ.

  • ತನ್ನ ಸಮಸ್ತ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ವಿಲ್ ಮಾಡಿದ 78ರ ಮಹಿಳೆ

    ತನ್ನ ಸಮಸ್ತ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ವಿಲ್ ಮಾಡಿದ 78ರ ಮಹಿಳೆ

    ಡೆಹ್ರಾಡೂನ್: ಉತ್ತರಾಖಂಡ್ ಡೆಹ್ರಾಡೂನ್‌ನ 78 ವರ್ಷದ ಮಹಿಳೆಯೊಬ್ಬರು ತನ್ನ 50 ಲಕ್ಷ ಮೌಲ್ಯದ ಆಸ್ತಿ ಮತ್ತು 10 ತೊಲ ಚಿನ್ನ ಸೇರಿದಂತೆ ತನ್ನ ಸಮಸ್ತ ಆಸ್ತಿಯನ್ನು ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಹೆಸರಿಗೆ ಬರೆದಿರುವ ಅಪರೂಪದ ಘಟನೆಯೊಂದು ಬೆಳಕಿಗೆ ಬಂದಿದೆ.

    ಪುಷ್ಪಾ ಮುಂಜಿಯಾಲ್ ಅವರು ಡೆಹ್ರಾಡೂನ್ ನ್ಯಾಯಾಲಯದಲ್ಲಿ ವಿಲ್ ಸಲ್ಲಿಸಿದ್ದು, ರಾಹುಲ್ ಗಾಂಧಿಗೆ ತಮ್ಮ ಆಸ್ತಿಯ ಮಾಲೀಕತ್ವದ ಶೀರ್ಷಿಕೆಯನ್ನು ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಅವರ ವಿಚಾರಗಳು ದೇಶಕ್ಕೆ ಅಗತ್ಯ ಎಂದು ಪುಷ್ಪಾ ಮುಂಜಿಯಾಲ್ ಬಣ್ಣಿಸಿದ್ದಾರೆ. ರಾಹುಲ್ ಗಾಂಧಿಯವರ ಆಲೋಚನೆಗಳಿಂದ ನಾನು ತುಂಬಾ ಪ್ರಭಾವಿತಳಾಗಿದ್ದೇನೆ, ಅದಕ್ಕಾಗಿಯೇ ನನ್ನ ಅಸ್ತಿಯನ್ನು ಅವರಿಗೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಲೆ ಏರಿಕೆ ಪ್ರಧಾನ ಮಂತ್ರಿ ಜನ್ ಧನ್ ಲೂಟ್ ಯೋಜನೆಯ ಭಾಗ: ರಾಹುಲ್ ಗಾಂಧಿ

    RAHUL GANDHI

    ಕಾಂಗ್ರೆಸ್ ಮುಖಂಡ ಪ್ರೀತಮ್ ಸಿಂಗ್ ಅವರ ನಿವಾಸದಲ್ಲಿ ಪುಷ್ಪಾ ಮುಂಜಿಯಲ್ ಅವರು ರಾಹುಲ್ ಗಾಂಧಿಗೆ ತಮ್ಮ ಆಸ್ತಿಯನ್ನು ವಿಲ್ ಮಾಡಿದ್ದಾರೆ ಎಂದು ಕಾಂಗ್ರೆಸ್ ಮಹಾನಗರ ಅಧ್ಯಕ್ಷ ಲಾಲ್‌ಚಂದ್ ಶರ್ಮಾ ಹೇಳಿದ್ದಾರೆ.

     

  • ಕಾಶ್ಮೀರ ಹತ್ಯಾಕಾಂಡ – 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ

    ಕಾಶ್ಮೀರ ಹತ್ಯಾಕಾಂಡ – 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ 31 ವರ್ಷದ ಹಿಂದೆ ನಡೆದ ಪ್ರಕರಣದ ವಿಚಾರಣೆ ನಡೆಸುವಂತೆ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

    ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ ವಿರುದ್ಧ ಮೃತ ಕಾಶ್ಮೀರಿ ಪಂಡಿತ ಸತೀಶ್ ಟಿಕ್ಕೂ ಅವರ ಕುಟುಂಬವು 31 ವರ್ಷಗಳ ಬಳಿಕ ಮರು ವಿಚಾರಣೆ ನಡೆಸಲು ನ್ಯಾಯಾಲಯಕ್ಕೆ ಇಂದು ಮನವಿ ಮಾಡಿದೆ.

    ಬಿಟ್ಟಾ ಕರಾಟೆ ಆಜಾದಿ ಹೆಸರಲ್ಲಿ ಪ್ರಾರಂಭಿಸಿದ್ದ ಕಾಶ್ಮೀರಿ ಪಂಡಿತರ ಮಾರಣಹೋಮದಲ್ಲಿ ಮೊದಲು ಬಲಿಯಾಗಿದ್ದು ಸತೀಶ್ ಟಿಕ್ಕೂ. ಈತ ಬಿಟ್ಟಾನ ಬಾಲ್ಯದ ಸ್ನೇಹಿತನಾಗಿದ್ದ. ಸತೀಶ್ ಟಿಕ್ಕೂ ಅವರನ್ನು ಕೊಲೆ ಮಾಡಿರುವುದಾಗಿ ಬಿಟ್ಟಾ ಖಾಸಗಿ ಚಾನೆಲ್‍ಗೆ ಸಂದರ್ಶನ ನೀಡಿದ್ದ ವೇಳೆ ಒಪ್ಪಿಕೊಂಡಿದ್ದ. ಈ ಸಾಕ್ಷಿಯನ್ನು ಇಟ್ಟುಕೊಂಡು ಕುಟುಂಬ ಕೋರ್ಟ್ ಮೆಟ್ಟಿಲೇರಿದೆ.

    ಇಂದು ಅರ್ಜಿಯ ವಿಚಾರಣೆ ನಡೆಸಿದ ಶ್ರೀನಗರದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 16ರೊಳಗೆ ಸಂದರ್ಶನದ ಹಾಡ್ ಕಾಪಿಯನ್ನು ಸಲ್ಲಿಸುವಂತೆ ಟಿಕೂ ಕುಟುಂಬದ ವಕೀಲ ಉತ್ಸವ್ ಬೈನ್ಸ್‍ಗೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಿದೆ.

    1990ರ ದಶಕದಲ್ಲಿ ಕಾಶ್ಮೀರಿ ಪಂಡಿತರ ದುಃಸ್ಥಿತಿಯನ್ನು ತೋರಿಸಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಯಶಸ್ಸಿನ ಬೆನ್ನೆಲ್ಲೇ ಈ ಅರ್ಜಿ ಸಲ್ಲಿಸಲಾಗಿದೆ. ಕಳೆದ 31 ವರ್ಷಗಳ ನಂತರದಲ್ಲಿ ಬಿಟ್ಟಾ ಕರಾಟೆ ವಿರುದ್ಧ ಮೊದಲ ಅರ್ಜಿಯಾಗಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಈವರೆಗೂ ಗಳಿಸಿದ್ದು 234.03 ಕೋಟಿ : ಹೇಗೆಲ್ಲ ಲೆಕ್ಕಾಚಾರ

    ಘಟನೆಯೇನು?: ಆಜಾದಿ ಹೆಸರಲ್ಲಿ ಬಿಟ್ಟಾ ಅಲ್ಲಿನ ಕಾಶ್ಮೀರಿ ಪಂಡಿತರ ಮಾರಣ ಹೋಮವನ್ನು ಮಾಡಲು ಪ್ರಾರಂಭಿಸಿದ. ಇವನ ಹಿಂಸಾಚಾರಕ್ಕೆ ಮೊದಲು ಬಲಿಯಾಗಿದ್ದೇ ಕಾಶ್ಮೀರಿ ಪಂಡಿತನಾಗಿದ್ದ ಆತನ ಬಾಲ್ಯದ ಗೆಳೆಯ. ಬಿಟ್ಟಾ ಆತನನ್ನು ತನ್ನ ಮನೆಯ ಮುಂದೆಯೇ ಗುಂಡಿಕ್ಕಿ ಕೊಂದಿದ್ದ.

    1980-1990ರಲ್ಲಿ ಇವರು ಪಂಡಿತರನ್ನು ಹುಡುತ್ತಾ ಶ್ರೀನಗರದ ಬೀದಿಗಳಲ್ಲಿ ಸಂಚರಿಸುತ್ತಿದ್ದ. ಪಂಡಿತರೆಂದು ತಿಳಿದ ತಕ್ಷಣ ಆತ ತನ್ನಲ್ಲಿದ್ದ ಪಿಸ್ತೂಲ್‍ನಿಂದ ಗುಂಡಿಕ್ಕಿ ಕೊಲ್ಲುತ್ತಿದ್ದ. ಕನಿಷ್ಠ 20 ಕಾಶ್ಮೀರಿ ಪಂಡಿತರನ್ನು ಕೊಂದಿದ್ದೇನೆ ಎಂದು ವಿಡಿಯೋ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದ. ಇದನ್ನೂ ಓದಿ: ಯಾರೋ ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವಂತಾಗಿದೆ: ಅಬೂಬಕರ್

    ಘಟನೆಗೆ ಸಂಬಂಧಿಸಿದಂತೆ ಭಾರತೀಯ ಸೈನಿಕರು ಬಿಟ್ಟಾನನ್ನು 1990ರ ಜೂನ್‍ನಲ್ಲಿ ಬಂಧಿಸಿದರು. 2006ರವರೆಗೆ ಅಂದರೆ 16 ವರ್ಷಗಳ ಕಾಲ ಆತ ಸೆರೆಮನೆಯಲ್ಲಿದ್ದ. 2006ರಲ್ಲಿ ಜಾಮೀನಿನ ಮೇಲೆ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಟಾಡಾ ಜಡ್ಜ್ ಎನ್‍ಡಿ ವಾಣಿ ಅವರು, ಆರೋಪಿ ಮಾಡಿರುವ ಅಪರಾಧಗಳು ಗಂಭೀರವಾದದ್ದು ಎಂದು ನ್ಯಾಯಾಲಯಕ್ಕೆ ತಿಳಿದಿದೆ. ಈ ಅಪರಾಧಕ್ಕೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಬೇಕಿತ್ತು. ಆದರೆ ಪ್ರಾಸಿಕ್ಯೂಶನ್ ಆರೋಪ ಸಾಬೀತು ಪಡಿಸಲು ವಿಫಲವಾಗಿದೆ ಮತ್ತು ಪ್ರಕರಣ ಭೇದಿಸಲು ಸಂಪೂರ್ಣ ನಿರಾಸಕ್ತಿ ತೋರಿಸಿದೆ ಎಂದಿದ್ದರು. ಹೀಗಾಗಿ 2006ರ ಅಕ್ಟೋಬರ್‌ನಲ್ಲಿ ಬಿಟ್ಟಾಗೆ ಜಾಮೀನು ಸಿಕ್ಕಿತ್ತು.

    ಪುಲ್ವಾಮಾ ದಾಳಿಯಲ್ಲಿ ಈತನ ಕೈವಾಡ ಇರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಈತನನ್ನು ಬಂಧಿಸಿದ್ದು ಸದ್ಯ ಜೈಲಿನಲ್ಲಿದ್ದಾನೆ. 20 ಪಂಡಿತರ ಹತ್ಯೆ, ಕೆಎಎಸ್ ಅಧಿಕಾರಿ ಜೊತೆ ಮದುವೆ – ಕಾಶ್ಮೀರದ ರಕ್ತಪಾತದ ವಿಲನ್ ಬಿಟ್ಟಾ ಕರಾಟೆಯ ಕಥೆಯಿದು

  • ಅತ್ತೆಯನ್ನ ಕೊಲೆ ಮಾಡಿದ ಅಳಿಯನಿಗೆ ಜೀವಾವಧಿ ಶಿಕ್ಷೆ

    ಅತ್ತೆಯನ್ನ ಕೊಲೆ ಮಾಡಿದ ಅಳಿಯನಿಗೆ ಜೀವಾವಧಿ ಶಿಕ್ಷೆ

    ದಾವಣಗೆರೆ: ಆಸ್ತಿಯ ಸಲುವಾಗಿ ಜಗಳವಾಡಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ, ಕೊನೆಗೆ ಅಳಿಯ ಅತ್ತೆಯನ್ನು ಕೊಲೆ ಮಾಡಿದ್ದ. ಈಗ ಅವನಿಗೆ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡವನ್ನು ವಿಧಿಸಿದೆ.

    ದಾವಣಗೆರೆ ನಗರದ ಹೊಂಡದ ಸರ್ಕಲ್‍ನ ಅಭಿರಾಜ್ ಶಿಕ್ಷೆಗೆ ಒಳಗಾದ ಯುವಕ. ಅತ್ತೆ ಭಾಗ್ಯಮ್ಮ ಕೊಲೆಯಾಗಿದ್ದ ಮಹಿಳೆ. 2019 ರ ಜುಲೈ 18 ರಂದು ಭಾಗ್ಯಮ್ಮಳನ್ನು ಆಸ್ತಿ ಆಸೆಗೆ ಅಭಿರಾಜ್ ಕೊಲೆ ಮಾಡಿದ್ದನು. ಈ ಪ್ರಕರಣ ಇನ್ನೂ ನ್ಯಾಯಾಲಯದ ಮುಂದೆ ಇತ್ತು. ಅಭಿರಾಜ್‍ಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಕೊಟ್ಟಿದ್ದು, ಈ ಕೇಸ್‍ಗೆ ಮುಕ್ತಿ ಸಿಕ್ಕಿದೆ. ಇದನ್ನೂ ಓದಿ: ಇಂದು ರಾಜ್ಯದ ಮೊದಲ ಕೋಕಾ ಕೇಸ್‍ನ ತೀರ್ಪು ಪ್ರಕಟ- ಪಾತಕಿ ಬನ್ನಂಜೆ ರಾಜಾ ಸೇರಿ 13 ಪಾತಕಿಗಳ ಭವಿಷ್ಯ ನಿರ್ಧಾರ

    ಪ್ರಕರಣದ ಹಿನ್ನೆಲೆ: ಈಗಿನ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದದ ಹನುಮಂತಪ್ಪ ಅವರ ಪುತ್ರಿ ಭಾಗ್ಯಮ್ಮ ಅವರು 14 ವರ್ಷಗಳ ಹಿಂದೆ ದಾವಣಗೆರೆಯ ಶಿವಕುಮಾರ್ ಅವರನ್ನು ಮದುವೆಯಾಗಿದ್ದರು.

    ಈ ದಂಪತಿಗೆ ಒಂದು ಹೆಣ್ಣು ಮಗು ಜನಿಸಿತ್ತು. ಮದ್ಯವ್ಯಸನ ಚಟದಿಂದಾಗಿ ಶಿವಕುಮಾರ್ ಐದು ವರ್ಷಗಳ ಹಿಂದೆ ಮೃತಪಟ್ಟಿದ್ದ. ಭಾಗ್ಯಮ್ಮ ಮಗಳನ್ನು ಅಕ್ಕನ ಮನೆಯಲ್ಲಿ ಬಿಟ್ಟು, ಗಂಡನ ಸ್ವಂತ ಮನೆಯಲ್ಲಿ ಒಬ್ಬಳೇ ವಾಸವಾಗಿದ್ದಳು. ಶಿವಕುಮಾರ್ ಅಕ್ಕನ ಮಗನಾದ ಅಭಿರಾಜ್, ಭಾಗ್ಯಮ್ಮ ಅವರ ಹಿಂದಿನ ಮನೆಯಲ್ಲೇ ವಾಸವಾಗಿದ್ದ. ಭಾಗ್ಯಮ್ಮ ವಾಸವಿರುವ ಮನೆಯನ್ನು ಹೇಗಾದರೂ ಮಾಡಿ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂದು ಅವರ ಮನೆಗೆ ಹೋಗಿ ಕಿರುಕುಳ ನೀಡುತ್ತಿದ್ದ.

    ಮಚ್ಚಿನಿಂದ ಕೊಚ್ಚಿದ
    ಭಾಗ್ಯಮ್ಮ ಮನೆಗೆ ಬೇರೆ-ಬೇರೆ ಗಂಡಸರು ಬಂದು ಹೋಗುತ್ತಿದ್ದಾರೆ ಎಂದು ಆಕೆಯ ತಾಯಿ ಹಾಗೂ ಅಣ್ಣನಿಗೆ ಚಾಡಿ ಹೇಳುತ್ತಿದ್ದ. 2019ರ ಜುಲೈ 18 ರಂದು ರಾತ್ರಿ ಅಭಿರಾಜ್ ಮನೆಗೆ ಬಂದಾಗ ತನ್ನ ಬಗ್ಗೆ ಚಾಡಿ ಹೇಳುತ್ತಿರುವುದನ್ನು ಭಾಗ್ಯಮ್ಮ ಪ್ರಶ್ನಿಸಿದ್ದಾರೆ. ಈಕೆಯನ್ನು ಸುಮ್ಮನೆ ಬಿಟ್ಟರೆ ತನಗೆ ಆಸ್ತಿ ಸಿಗುವುದಿಲ್ಲ ಎಂದು ಅಭಿರಾಜ್ ಮಚ್ಚಿನಿಂದ ಭಾಗ್ಯಮ್ಮ ಅವರನ್ನು ಕೊಲೆ ಮಾಡಿದ್ದ. ಇದನ್ನೂ ಓದಿ: ರಣಬೀರ್ ಕಪೂರ್‌ಗೆ ಪತ್ನಿ ಆಗ್ತಾರಾ ನ್ಯಾಷಿನಲ್ ಕ್ರಶ್ ರಶ್ಮಿಕಾ ಮಂದಣ್ಣ?

    ಈ ಪರಿಣಾಮ ಅಂದಿನ ಸಿಪಿಐ ಉಮೇಶ್ ಜಿ.ಬಿ.ತನಿಖೆ ನಡೆಸಿ ದೋಷಾರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜೆ.ವಿ.ವಿಜಯಾನಂದ ಅವರು ಆರೋಪ ಸಾಬೀತಾಗಿದೆ ಎಂದು ಅಭಿಪ್ರಾಯಪಟ್ಟಿದ್ದು, ಶಿಕ್ಷೆಯನ್ನು ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಕೆ.ಕೆಂಚಪ್ಪ ವಾದ ಮಂಡಿಸಿದ್ದರು.

  • ಮೈ ಮುಟ್ಟಿದ ವಕೀಲನಿಗೆ ಚೇರ್, ಕಲ್ಲಿನಿಂದ ಹಲ್ಲೆಗೆ ಮುಂದಾದ ಕೋಲಾರದ ವಕೀಲೆ

    ಮೈ ಮುಟ್ಟಿದ ವಕೀಲನಿಗೆ ಚೇರ್, ಕಲ್ಲಿನಿಂದ ಹಲ್ಲೆಗೆ ಮುಂದಾದ ಕೋಲಾರದ ವಕೀಲೆ

    ಕೋಲಾರ: ವಕೀಲರಿಬ್ಬರು ಕೋರ್ಟ್ ಆವರಣದಲ್ಲಿ ಹೈಡ್ರಾಮಾ ಮಾಡಿರುವ ಘಟನೆ ಕೆಜಿಎಫ್ ನ್ಯಾಯಾಲಯದ ಮುಂಭಾಗ ನಡೆದಿದೆ.

    ತನ್ನ ಮೈ ಮುಟ್ಟಿದ್ದಕ್ಕೆ ವಕೀಲೆಯೊಬ್ಬರು ವಕೀಲನಿಗೆ ಚೇರ್ ಹಾಗೂ ಕಲ್ಲಿನಿಂದ ಹೊಡೆಯಲು ಯತ್ನಿಸಿದ್ದಾರೆ. ವಕೀಲೆ ವೆನಿಲ್ಲಾ, ವಕೀಲ ಬಾಬುವಿಗೆ ಚೇರ್ ಎತ್ತೆಸೆದು ಹಲ್ಲೆಗೆ ಯತ್ನ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್ – ನಾಲ್ವರು ಈಜುಪಟುಗಳು ಅರೆಸ್ಟ್

    ಸ್ಥಳದಲ್ಲಿ ಇಬ್ಬರು ವಕೀಲರ ಹೈಡ್ರಾಮಾ ಕಂಡು ಜನರು ಕೆಲ ಕಾಲ ಚಕಿತಗೊಂಡಿದ್ದಾರೆ. ಇಬ್ಬರ ಗಲಾಟೆಯನ್ನು ಕಂಡ ಇತರ ವಕೀಲರು ಹಾಗೂ ಸ್ಥಳೀಯರು ಆಕೆಯನ್ನು ಪ್ರಶ್ನೆ ಮಾಡಿದಾಗ ವಕೀಲ ನನ್ನ ಮೈ ಮುಟ್ಟಿದ್ದಾನೆ ಎಂದು ಆರೋಪಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ರಾಬರ್ಟ್ಸನ್ ಪೇಟೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್, ಎಟಿಎಂ ಬಾಗಿಲಿನಲ್ಲಿ ಮಲ ವಿಸರ್ಜನೆ ಮಾಡಿ ವಿಕೃತಿ

  • ಗುರಾಯಿಸಿದಕ್ಕೆ ಕೊಲೆ – ಇಬ್ಬರಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಗುರಾಯಿಸಿದಕ್ಕೆ ಕೊಲೆ – ಇಬ್ಬರಿಗೆ ಜೀವಾವಧಿ ಶಿಕ್ಷೆ ಪ್ರಕಟ

    ಹುಬ್ಬಳ್ಳಿ: ರಸ್ತೆ ಬದಿಯಲ್ಲಿ ಕುಳಿತಾಗ ಗುರಾಯಿಸಿದ್ದಕ್ಕೆ ಓರ್ವ ವ್ಯಕ್ತಿಯನ್ನು ಹತ್ಯೆ ಮಾಡಿದ ಇಬ್ಬರಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

    2020ರ ಮಾರ್ಚ್‍ನಲ್ಲಿ ನಡೆದಿದ್ದ ಪ್ರಕರಣ ಇದಾಗಿದ್ದು, ಹುಬ್ಬಳ್ಳಿಯ ಪಠಾಣ ಗಲ್ಲಿಯಲ್ಲಿ ಈ ಘಟನೆ ನಡೆದಿತ್ತು. ಇದೇ ಗಲ್ಲಿಯ ನಿವಾಸಿಗಳಾದ ಶಂಶುದ್ದೀನ್ ಸವಣೂರು ಮತ್ತು ಜುಬೇರ್ ಅಹ್ಮದ್ ಅಲಿಯಾಸ್ ಹಾಜಿ ಎಂಬುವವರು ರಸ್ತೆ ಬದಿಯಲ್ಲಿ ಕುಳಿತಿದ್ದರು. ಇದನ್ನೂ ಓದಿ: ಪರವಾನಿಗೆ ಇಲ್ಲದೆ ಬಂದೂಕುಗಳನ್ನು ಹೊಂದಲು ಕೊಡವರಿಗೆ ಅವಕಾಶ- ರಾಜ್ಯಕ್ಕೆ ಸುಪ್ರೀಂ ನೋಟಿಸ್‌

    ಈ ವೇಳೆ ಶಾಬುದ್ದಿನ್ ಇಬ್ಬರಮನ್ನು ಗುರಾಯಿಸಿದ್ದ. ಈ ಕಾರಕ್ಕೆ ಶಂಶುದ್ದೀನ್ ಮತ್ತು ಅಹ್ಮದ್ ಇಬ್ಬರು ಸೇರಿ ಶಾಬುದ್ದಿನ್‍ಗೆ ಮನಬಂದಂತೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದಾರೆ. ಇದನ್ನೂ ಓದಿ: ಚಾಲಕನ ನಿಯಂತ್ರಣ ತಪ್ಪಿದ ಲಾರಿ: ಅರ್ಧ ಮನೆಯೇ ಧ್ವಂಸ

    BRIBE

    ಇಬ್ಬರ ಆರೋಪ ಸಾಬೀತಾಗಿದ್ದು, 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು, ಆರೋಪಿಗಳಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಜೊತೆಗೆ ತಲಾ 1.50 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ. ದಂಡ ಪಾವತಿಸದೇ ಇದ್ದಲ್ಲಿ ಇನ್ನೂ 2 ವರ್ಷ ಕಾರಾಗೃಹ ಶಿಕ್ಷೆ ಮುಂದುವರಿಸುವಂತೆ, ಜೊತೆಗೆ ದಂಡದ ಮೊತ್ತದಲ್ಲಿ 1.45 ಲಕ್ಷ ಹಣವನ್ನು ಮೃತನ ತಂದೆ ತಾಯಿಗೆ ನೀಡಲು ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ.

  • ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ದಿಗ್ವಿಜಯ್ ಸಿಂಗ್ ಸಹಿತ 6 ಮಂದಿಗೆ 1 ವರ್ಷ ಜೈಲು ಶಿಕ್ಷೆ

    ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ಸೇರಿದಂತೆ ಆರು ಮಂದಿ ಆರೋಪಿಗಳಿಗೆ ಇಂದೋರ್ ವಿಶೇಷ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಂತರ ಜಾಮೀನನ್ನು ಸಹ ನೀಡಿದೆ.

    ಹೌದು, 2011ರಲ್ಲಿ ಭಾರತೀಯ ಜನತಾ ಯುವ ಮೋರ್ಚಾದ (ಬಿಜೆವೈಎಂ) ಪ್ರತಿಭಟನಾ ನಿರತ ಕಾರ್ಯಕರ್ತರೊಂದಿಗೆ ನಡೆದ ಸಂಘರ್ಷಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ದಿಗ್ವಿಜಯ್ ಸಿಂಗ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ನ್ಯಾಯಾಲಯವು ಉಜ್ಜಯಿನಿ ಸಂಸದ ಪ್ರೇಮಚಂದ್ ಗುಡ್ಡು ಸೇರಿದಂತೆ ಎಲ್ಲಾ ಅಪರಾಧಿಗಳಿಗೆ ತಲಾ 25,000 ರೂ.ಗಳ ಶ್ಯೂರಿಟಿ ಮೇಲೆ ಜಾಮೀನು ನೀಡಿದೆ.  ಇದನ್ನೂ ಓದಿ: ನಿಶ್ಚಿತಾರ್ಥ ಮಾಡಿಕೊಂಡ ಸಂಜನಾ ಸಹೋದರಿ ನಿಕ್ಕಿ ಗಲ್ರಾನಿ

    ಈ ಕುರಿತಂತೆ ಮಾತನಾಡಿದ ಸರ್ಕಾರಿ ವಕೀಲ ವಿಮಲ್ ಕುಮಾರ್ ಮಿಶ್ರಾ, ಎಲ್ಲಾ ಆರೋಪಿಗಳಿಗೂ ಮೂರು ವರ್ಷಕ್ಕಿಂತ ಕಡಿಮೆ ಶಿಕ್ಷೆ ವಿಧಿಸಲಾಗಿರುವುದರಿಂದ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದ್ದಾರೆ.

    ಮತ್ತೊಂದೆಡೆ ದಿಗ್ವಿಜಯ್ ಸಿಂಗ್ ಮತ್ತು ಮಾಜಿ ಸಂಸದ ಪ್ರೇಮಚಂದ್ ಗುಡ್ಡು ಅವರು ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಲು ಇಷ್ಟಪಡುವುದಿಲ್ಲ. ಆದರೆ ಹೈಕೋರ್ಟ್‍ನಲ್ಲಿ ವಿಧಿಸಿರುವ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವುದಾಗಿ ತಿಳಿದರು. ಇದನ್ನೂ ಓದಿ: ಬೆಂಗಳೂರು ರಸ್ತೆಗೆ ಹೆವಿ ವೆಹಿಕಲ್‍ಗಳೇ ಕಂಟಕ- ಭಾರೀ ಗಾತ್ರದ ವಾಹನಗಳಿಂದ ರೂಲ್ಸ್ ಬ್ರೇಕ್

    ಇದು 10 ವರ್ಷಗಳ ಹಳೆಯ ಪ್ರಕರಣವಾಗಿದ್ದು, ಎಫ್‍ಐಆರ್‌ನಲ್ಲಿ ನನ್ನ ಹೆಸರಿಲ್ಲ. ಆದರೆ ರಾಜಕೀಯ ಒತ್ತಡದಿಂದ ನಂತರದಲ್ಲಿ ಹೆಸರನ್ನು ಸೇರಿಸಲಾಗಿದೆ. ನಾನು ಹೈಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸುತ್ತೇನೆ ದಿಗ್ವಿಜಯ್ ಸಿಂಗ್ ಅವರು ಕಿಡಿಕಾರಿದ್ದಾರೆ.

    ಪೊಲೀಸರ ಪ್ರಕಾರ, 2011ರ ಜುಲೈ 17ರಂದು ಸಿಂಗ್ ಅವರ ಬೆಂಗಾವಲು ಪಡೆ ಉಜ್ಜಯಿನಿಯ ಜಿವಾಜಿಗಂಜ್ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಬಿಜೆವೈಎಂ ಕಾರ್ಯಕರ್ತರು ಕಪ್ಪು ಬಾವುಟವನ್ನು ತೋರಿಸಲು ಪ್ರಯತ್ನಿಸಿದರು. ಇದು ಘರ್ಷಣೆಗೆ ಕಾರಣವಾಯಿತು.

  • ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಪ್ರತಾಪ್ ಸಿಂಹ

    ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು: ಪ್ರತಾಪ್ ಸಿಂಹ

    ಮಡಿಕೇರಿ: ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು. ಅವರಿಗೆ ಅಂದೇ ಇದೆಲ್ಲಾ ಗೊತ್ತಾಗಿತ್ತು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.

    ಹಿಜಬ್ ವಿಚಾರವಾಗಿ ಕೋರ್ಟ್ ತೀರ್ಪನ್ನೇ ಧಿಕ್ಕರಿಸಿ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಹಿಂದೆ ಅಯೋಧ್ಯೆ ವಿಚಾರದಲ್ಲಿ ಕೋರ್ಟ್, ಕೋರ್ಟ್ ಎಂದು ಹೇಳುತ್ತಿದ್ದರು. ಕೋರ್ಟ್ ತೀರ್ಪಿನಲ್ಲಿಯೇ ದೇವಸ್ಥಾನ ಕಟ್ಟಿದ್ದೇವೆ ಎಂದರು. ಇದನ್ನೂ ಓದಿ: ಗುಜರಾತ್ ಶಾಲಾ, ಕಾಲೇಜ್‍ಗಳಲ್ಲಿ ಭಗವದ್ಗೀತೆ ಕಡ್ಡಾಯ

    ಇವರು ಕೋರ್ಟ್‍ನ್ನೇ ಹಿಯಾಳಿಸುತ್ತಿದ್ದಾರೆ. ಹಿಜಬ್ ವಿಷಯದಲ್ಲೂ ಅಷ್ಟೇ ಹಿಜಬ್ ವಿಚಾರಣೆಯಲ್ಲಿ ಧಾರ್ಮಿಕ ಕಟ್ಟುಪಾಡುಗಳಲ್ಲಿ ಹಿಜಬ್ ಕಡ್ಡಾಯ ಅಲ್ಲ ಎಂದು ತೀರ್ಪು ನೀಡಿದರು. ಇದೀಗ ಸಂವಿಧಾನದ ವಿರುದ್ಧ ತೀರ್ಪು ನೀಡುತ್ತಾರೆ. ಈ ಹಿಂದೆಯೇ ಹಿಂದೂ-ಮುಸ್ಲಿಂ ಒಟ್ಟಿಗೆ ಇರಲು ಸಾಧ್ಯವಿಲ್ಲ ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಹೇಳಿದರು. ಇದನ್ನೂ ಓದಿ: ಎಲ್ಲ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದು, ಹೊಸದಾಗಿ ಸೇರಿಸೋ ಅವಶ್ಯಕತೆ ಇಲ್ಲ: ಡಿಕೆಶಿ

    1947ರಲ್ಲಿ ಭಾರತ-ಪಾಕಿಸ್ತಾನ ವಿಭಜನೆ ಮಾಡುವ ಸಂದರ್ಭದಲ್ಲಿ ಹಿಂದೂಗಳು ಪಾಕಿಸ್ತಾನದಲ್ಲಿ ಇದ್ದರೆ ಭಾರತಕ್ಕೆ ಕರೆತನ್ನಿ ಭಾರತದಲ್ಲಿ ಇರುವ ಮುಸ್ಲಿಂ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಿ ಇವರು ಇಬ್ಬರು ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದು ಅವರಿಗೆ ಯಾವತ್ತೋ ಅರ್ಥ ಆಗಿತ್ತು. ಆದರೆ ನಮಗೆ ಈಗ ಅರ್ಥ ಆಗುತ್ತಿದೆ. ಇವರಿಗೆ ದೇಶಕ್ಕಿಂತ ಧರ್ಮವೇ ಮುಖ್ಯ. ಹಾಗಾಗಿ ಕೋರ್ಟ್ ತೀರ್ಪನ್ನೇ ಧಿಕ್ಕರಿಸಿದ್ದಾರೆ ಎಂದು ಬಂದ್‍ಗೆ ಕರೆ ನೀಡಿದವರಿಗೆ ಟಾಂಗ್ ಕೊಟ್ಟರು.

  • ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಕಲಬುರ್ಗಿ ಹತ್ಯೆ ಪ್ರಕರಣ – ಸಾಕ್ಷಿ ನುಡಿದ ಮಗಳು, ಪತ್ನಿ

    ಧಾರವಾಡ: ಹಿರಿಯ ಸಾಹಿತಿ ಡಾ. ಎಂಎಂ ಕಲಬುರ್ಗಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ 6 ಆರೋಪಿಗಳ ಪೈಕಿ ಐವರನ್ನು ಗುರುವಾರ ಧಾರವಾಡ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಸಾಕ್ಷಿ ವಿಚಾರಣೆ ನಡೆಸಲಾಯಿತು.

    2015ರ ಆಗಸ್ಟ್ 30ರಂದು ಬೆಳಗಿನ ಜಾವ ಕಲಬುರ್ಗಿ ಧಾರವಾಡದ ಕಲ್ಯಾಣನಗರದಲ್ಲಿರುವ ತಮ್ಮ ಮನೆಯಲ್ಲಿ ಕುಳಿತಿದ್ದಾಗ, ಮನೆಗೆ ಬಂದ ಹಂತಕರು ಬಾಗಿಲು ಬಡಿದಿದ್ದರು. ಈ ವೇಳೆ ಹೊರಗೆ ಬಂದು ಬಾಗಿಲು ತೆಗೆಯುತ್ತಿದ್ದಂತೆಯೇ ಕಲಬುರ್ಗಿ ತಲೆಗೆ ಗುಂಡು ಹೊಡೆದು ಆರೋಪಿಗಳು ಬೈಕ್ ಹತ್ತಿ ಪರಾರಿಯಾಗಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳಾದ ಹುಬ್ಬಳ್ಳಿಯ ಅಮಿತ್ ಬದ್ದಿ, ಗಣೇಶ ಮಿಸ್ಕಿನ್, ಬೆಳಗಾವಿಯ ಪ್ರವೀಣ್ ಚತುರ್ ಹಾಗೂ ವಾಸುದೇವ್ ಸೂರ್ಯವಂಶಿ ಸೇರಿದಂತೆ ಇನ್ನೊರ್ವನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ಜೇಮ್ಸ್ ರಿಲೀಸ್ ಬಳಿಕ ಅಪ್ಪು ನೆನೆದು ಕಣ್ಣೀರಿಟ್ಟ ಶಿವಣ್ಣ

    ಕಣ್ಣೀರು ಹಾಕುತ್ತಾ ಸಾಕ್ಷ್ಯ ನುಡಿದ ಕಲಬುರ್ಗಿ ಪುತ್ರಿ: 
    ಈ ವೇಳೆ ಪ್ರಕರಣದಕ್ಕೆ ಸಂಬಂಧಿಸಿದಂತೆ ಪ್ರಮುಖ ಸಾಕ್ಷಿಯಾಗಿರುವ ಹಾಗೂ ಹತ್ಯೆ ನಡೆದ ದಿನ ಅಂದು ಮನೆಯಲ್ಲಿದ್ದ ಕಲಬುರ್ಗಿ ಪುತ್ರಿ ರೂಪದರ್ಶಿಗೆ ಆರೋಪಿಗಳನ್ನು ಗುರುತಿಸುವಂತೆ ಸೂಚಿಸಲಾಯಿತು. ಇದಕ್ಕೂ ಮೊದಲು ಅಂದು ನಡೆದ ಘಟನೆಯನ್ನು ನ್ಯಾಯಾಧೀಶರ ಮುಂದೆ ಎಳೆ ಎಳೆಯಾಗಿ ಬಿಚ್ಚಿಟ್ಟ ಕಲಬುರ್ಗಿ ಪುತ್ರಿ ತಂದೆಯನ್ನು ನೆನೆದು ನ್ಯಾಯಾಧೀಶರ ಎದುರು ಕಣ್ಣೀರು ಹಾಕಿದರು.

    ಅಂದು ಗುಂಡು ಹೊಡೆದು ಪರಾರಿಯಾಗಿದ್ದ ಗಣೇಶ ಮಿಸ್ಕಿನ್‌ನನ್ನು ಗುರುತಿಸುವ ವೇಳೆ ರೂಪದರ್ಶಿ ಕಣ್ಣೀರು ಹಾಕಿ ಬಳಿಕ ಆಕ್ರೋಶದಿಂದ ಇವನೇ ಗುಂಡು ಹೊಡೆದಿದ್ದು ಎಂದು ಹೇಳಿದರು. ಹೊರಗಡೆ ರಸ್ತೆಯಲ್ಲಿ ಬೈಕ್ ಮೇಲೆ ನಿಂತಿದ್ದ ಮತ್ತೋರ್ವ ಆರೋಪಿ ಪ್ರವೀಣ್ ಚತುರ್‌ನನ್ನು ಕೂಡಾ ರೂಪದರ್ಶಿ ಗುರುತಿಸಿದರು.

    ಈ ವಿಚಾರದ ಕುರಿತು ಸಮಗ್ರವಾದ ವಾದ-ವಿವಾದ ನಡೆದ ಬಳಿಕ ಕಲಬುರ್ಗಿ ಪತ್ನಿ ಉಮಾದೇವಿಯ ಸಾಕ್ಷ್ಯದ ವಿಚಾರಣೆಯನ್ನೂ ನಡೆಸಲಾಯಿತು. ಈ ವೇಳೆ ಸಾಕ್ಷಿಗಳನ್ನು ಏಕಕಾಲಕ್ಕೆ ಕ್ರಾಸ್ ಮಾಡಲು ತಮಗೆ ಸಿಆರ್‌ಪಿಸಿ 231 ಸೆಕ್ಷನ್ ಅಡಿಯಲ್ಲಿ ಅನುವು ಮಾಡಿಕೊಡುವಂತೆ ಆರೋಪಿಗಳ ಪರ ವಕೀಲ ಅರ್ಜಿ ಸಲ್ಲಿಸಿದರು. ಇದನ್ನೂ ಓದಿ: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

    ವಿಚಾರಣೆಯಲ್ಲಿ ಕಲಬುರ್ಗಿ ಕೊಲೆ ನಡೆದ ಸಮಯದಲ್ಲಿ ಅವರು ಧರಿಸಿದ್ದ ಶರ್ಟ್, ಬನಿಯನ್, ಪ್ಯಾಂಟ್, ಗುಂಡುಗಡಿಗೆ ಸೇರಿದಂತೆ ಅಂದಿನ ಕೆಲವೊಂದು ವಸ್ತುಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಬಳಿಕ ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ಅಗತ್ಯವಿದೆ ಎಂದು ಅಭಿಪ್ರಾಯಟ್ಟ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ವಿಚಾರಣೆಯನ್ನು ಏಪ್ರಿಲ್ 5ಕ್ಕೆ ಮುಂದೂಡಿದರು.

  • ಹಿಜಬ್ ತೀರ್ಪಿನ ವಿರುದ್ಧ ಬಂದ್ ಕರೆ ಕೊಟ್ಟವರು ಕಿಡಿಗೇಡಿಗಳು: ಆರ್.ಅಶೋಕ್

    ಹಿಜಬ್ ತೀರ್ಪಿನ ವಿರುದ್ಧ ಬಂದ್ ಕರೆ ಕೊಟ್ಟವರು ಕಿಡಿಗೇಡಿಗಳು: ಆರ್.ಅಶೋಕ್

    ಬೆಂಗಳೂರು: ಹಿಜಬ್ ತೀರ್ಪಿನ ವಿರುದ್ಧ ಕರ್ನಾಟಕ ಬಂದ್ ಕರೆ ಕೊಟ್ಟವರು ಕಿಡಿಗೇಡಿಗಳು ಎಂದು ಕಂದಾಯ ಸಚಿವ ಆರ್.ಆಶೋಕ್ ಹೇಳಿದರು.

    ಹಿಜಬ್ ತೀರ್ಪಿನ ವಿರುದ್ಧ ಬಂದ್ ಕರೆ ನೀಡಿರುವ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ಕಿಡಿಗೇಡಿಗಳು ಬಂದ್‍ಗೆ ಕರೆ ನೀಡುವ ಮೂಲಕ ಭಾರತದ ಸಂವಿಧಾನವನ್ನು ಬುಡ ಮೇಲು ಮಾಡುವ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ವಿರುದ್ಧವೇ ಇವರು ಬಂದ್‍ಗೆ ಕರೆ ನೀಡಿದ್ದಾರೆ. ಇವರು ಎಷ್ಟು ಕಾನೂನು ಪಾಲನೆ ಮಾಡುತ್ತಾರೆ ಅಂತ ಇವರನ್ನು ಬೆಂಬಲಿಸೋ ಪಕ್ಷದವರು ಅರ್ಥ ಮಾಡಿಕೊಳ್ಳಬೇಕು ಎಂದರು. ಇದನ್ನೂ ಓದಿ: ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

    ಹಿಜಬ್ ತೀರ್ಪಿನ ಬಗ್ಗೆ ಮೇಲ್ಮನವಿ ಹೋಗಬಹುದು. ಹೈಕೋರ್ಟ್ ವಿರುದ್ಧ ತೀರುಗಿ ನಿಲ್ಲುವುದು ಸರಿಯಲ್ಲ. ಇಂತವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು. ತೀರ್ಪನ್ನು ದೇಶದೆಲ್ಲೆಡೆ ಸ್ವಾಗತ ಮಾಡಿದ್ದಾರೆ. ಆದರೂ ಕೆಲ ಕಿಡಿಗೇಡಿಗಳು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಸಂವಿಧಾನದವನ್ನು ಬುಡಮೇಲು ಮಾಡುವ ಕ್ರಿಯೆ ಇದು. ಕೆಲ ರಾಷ್ಟ್ರ ವಿರೋಧಿಗಳು ಬಂದ್‍ಗೆ ಕರೆ ಕೊಟ್ಟಿದ್ದಾರೆ. ಕೋರ್ಟ್ ತೀರ್ಪು ಬಗ್ಗೆ ಇವರಿಗೆ ಎಷ್ಟು ಗೌರವ ಇದೆ ಅನ್ನುವುದು ಇಲ್ಲಿಯೇ ತಿಳಿಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ