Tag: covid 119

  • ಕೊರೊನಾ ಮಹಾಸ್ಫೋಟ – 6,570 ಹೊಸ ಪ್ರಕರಣ, 36 ಸಾವು

    ಕೊರೊನಾ ಮಹಾಸ್ಫೋಟ – 6,570 ಹೊಸ ಪ್ರಕರಣ, 36 ಸಾವು

    – ರಾಜಧಾನಿಯಲ್ಲಿ 4,422 ಮಂದಿಗೆ ಪಾಸಿಟಿವ್, 22 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಅಬ್ಬರ ಮುಂದುವರಿದ್ದು, ಇಂದು ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆ ಆರು ಸಾವಿರದ ಗಡಿ ದಾಟಿದೆ. ಇಂದು 6,570 ಹೊಸ ಪ್ರಕರಣಗಳು ವರದಿಯಾಗಿದ್ದು, 36 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿಯೂ ಕೊರೊನಾ ಮಹಾಸ್ಫೋಟವಾಗಿದ್ದು, ಒಂದೇ ದಿನ 4,422 ಜನಕ್ಕೆ ಸೋಂಕು ದೃಢವಾಗಿದೆ.

    ಸದ್ಯ ರಾಜ್ಯದಲ್ಲಿ 53,395 ಸಕ್ರಿಯ ಪ್ರಕರಣಗಳಿದ್ದು, 357 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಕೊರೊನಾ ಪ್ರಕರಣಗಳ ಸಂಖ್ಯೆ 10,40,130ಕ್ಕೇರಿಕೆಯಾಗಿದ್ದು, ಇದುವರೆಗೂ 12,767 ಜನರನ್ನ ಹೆಮ್ಮಾರಿ ಬಲಿ ಪಡೆದುಕೊಂಡಿದೆ.

    2,393 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.6.04 ಮತ್ತು ಮರಣ ಪ್ರಮಾಣ ಶೇ.0.54ಕ್ಕೇರಿಕೆಯಾಗಿದೆ. ಇಂದು ರಾಜ್ಯದಲ್ಲಿ ಒಟ್ಟು 1,08,757 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

    ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 21, ಬಳ್ಳಾರಿ 126, ಬೆಳಗಾವಿ 92, ಬೆಂಗಳೂರು ಗ್ರಾಮಾಂತರ 54, ಬೆಂಗಳೂರು ನಗರ 4,422, ಬೀದರ್ 129, ಚಾಮರಾಜನಗರ 56, ಚಿಕ್ಕಬಳ್ಳಾಪುರ 23, ಚಿಕ್ಕಮಗಳೂರು 40, ಚಿತ್ರದುರ್ಗ 24, ದಕ್ಷಿಣ ಕನ್ನಡ 145, ದಾವಣಗೆರೆ 28, ಧಾರವಾಡ 96, ಗದಗ 14, ಹಾಸನ 94, ಹಾವೇರಿ 15, ಕಲಬುರಗಿ 240, ಕೊಡಗು 19, ಕೋಲಾರ 66, ಕೊಪ್ಪಳ 27, ಮಂಡ್ಯ 29, ಮೈಸೂರು 216, ರಾಯಚೂರು 40, ರಾಮನಗರ 10, ಶಿವಮೊಗ್ಗ 70, ತುಮಕೂರು 183, ಉಡುಪಿ 63, ಉತ್ತರ ಕನ್ನಡ 142, ವಿಜಯಪುರ 60 ಮತ್ತು ಯಾದಗಿರಿಯಲ್ಲಿ 26 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

  • 19 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ- ದೇಶದಲ್ಲಿ ಒಂದೇ ದಿನ 857 ಮಂದಿ ಸಾವು

    19 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ- ದೇಶದಲ್ಲಿ ಒಂದೇ ದಿನ 857 ಮಂದಿ ಸಾವು

    ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಸೋಂಕಿತರ ಸಂಖ್ಯೆ 19 ಲಕ್ಷದ ಗಡಿ ದಾಟಿದೆ.

    ಕಳೆದ 24 ಗಂಟೆಯಲ್ಲಿ 52,509 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 19,08,255ಕ್ಕೆ ಏರಿಕೆಯಾಗಿದೆ.

    ಮಂಗಳವಾರ ಒಂದೇ ದಿನ 857 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ 5,86,244 ಸಕ್ರಿಯ ಪ್ರಕರಣಗಳಿದ್ದು, 12,82,216 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದೂವರೆಗೂ 38,838 ಮಂದಿ ಹೆಮ್ಮಾರಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ.

    ಭಾರತದಲ್ಲಿ ಚೇತರಿಕೆ ಪ್ರಮಾಣ ಕೂಡ ಹೆಚ್ಚಾಗುತ್ತಿದ್ದು, ಸದ್ಯ ದೇಶದಲ್ಲಿ ಅನ್‍ಲಾಕ್ 3.O ನಡೆಯುತ್ತಿದೆ.