Tag: COVID-19 Scam

  • ಕೋವಿಡ್ ಅಕ್ರಮದ ತನಿಖೆಗೆ ಕೌಂಟ್ ಡೌನ್ – ಎಫ್‍ಐಆರ್ ದಾಖಲು

    ಕೋವಿಡ್ ಅಕ್ರಮದ ತನಿಖೆಗೆ ಕೌಂಟ್ ಡೌನ್ – ಎಫ್‍ಐಆರ್ ದಾಖಲು

    ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ನಡೆಯಲಾಗಿದೆ ಎನ್ನಲಾದ ಅಕ್ರಮದ (Covid-19 scam) ತನಿಖೆಗೆ ಕೌಂಟ್ ಡೌನ್ ಶುರುವಾಗಿದೆ. ಐವರು ವೈದ್ಯರು, ಐಎಜಿ ಎಕ್ಸ್‌ಪೋರ್ಟ್ ಕಂಪನಿ ಹಾಗೂ ಜನಪ್ರತಿನಿಧಿಗಳ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ತನಿಖೆಗೆ ಎಸ್‍ಐಟಿ (SIT) ರಚನೆಯಾಗುವ ಸಾಧ್ಯತೆ ಇದೆ. ಇದರಿಂದ ಅಂದಿನ ಸಚಿವರು ಹಾಗೂ ಕೆಲವು ಜನಪ್ರತಿನಿಧಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಎಫ್‍ಐಆರ್ ದಾಖಲಾದ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳಿಂದ `ಪಬ್ಲಿಕ್ ಟಿವಿ’ಗೆ ಮಾಹಿತಿ ಬಂದಿದೆ.

    ಒಬ್ಬ ಡಾಕ್ಟರ್, ಇಬ್ಬರು ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳು ಮತ್ತು ರಾಜಕಾರಣಿಗಳು ಎಂದು ಎಫ್‍ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಯಾವೊಬ್ಬ ರಾಜಕಾರಣಿ ಹೆಸರು ಉಲ್ಲೇಖಿಸದೇ 10 ಪುಟಗಳ ಎಫ್‍ಐಆರ್ ದಾಖಲಾಗಿದೆ.

  • ನಮ್ಮ ಸರ್ಕಾರದ ವಿರುದ್ಧ ಮಾತಾಡಲು ಬಿಜೆಪಿಗೆ ನೈತಿಕತೆ ಇಲ್ಲ: ಶಾಮನೂರು

    ನಮ್ಮ ಸರ್ಕಾರದ ವಿರುದ್ಧ ಮಾತಾಡಲು ಬಿಜೆಪಿಗೆ ನೈತಿಕತೆ ಇಲ್ಲ: ಶಾಮನೂರು

    ದಾವಣಗೆರೆ: ಬಿಜೆಪಿ (BJP) ಅವಧಿಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ ಎಂದು ಕಾಂಗ್ರೆಸ್‍ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಆರೋಪಿಸಿದ್ದಾರೆ.

    ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಕೋವಿಡ್ (Covid-19 Scam) ಕಾಲದಲ್ಲಿ ಯಂತ್ರೋಪಕರಣಗಳನ್ನು ಖರೀದಿ ಮಾಡದೇ ಹಣ ತಿಂದು ಹಾಕಿದ್ದಾರೆ. ಆಗ ಬಿಜೆಪಿ ಮಾಡಿದ ಅವ್ಯವಹಾರ ಈಗ ಬೆಳಕಿಗೆ ಬರುತ್ತಿವೆ ಎಂದಿದ್ದಾರೆ.

    ಹಿಂದಿನ ಬಿಜೆಪಿ ಸರ್ಕಾರಕ್ಕೆ ಕೋವಿಡ್ ಕಾಲದಲ್ಲಿ ಎಲ್ಲರಿಗೂ ಲಸಿಕೆ ಕೊಡಲು ಆಗಿಲ್ಲ. ನಾವು ನಮ್ಮ ಕುಟುಂಬದಿಂದ 6 ಕೋಟಿ ರೂ. ವೆಚ್ಚದಲ್ಲಿ ಕೋವಿಡ್ ಲಸಿಕೆ ವಿತರಿಸಿದ್ದೆವು. ಇದೇ ಕಾರಣಕ್ಕೆ 40% ಭ್ರಷ್ಟಚಾರ ಎಂದು ನಾವು ಬಿಜೆಪಿ ಸರ್ಕಾರವನ್ನ ಕರೆದಿದ್ದೆವು. ಈಗ ನಮ್ಮ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿಗೆ ಯಾವ ನೈತಿಕತೆ ಇಲ್ಲಾ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

  • ಕೋವಿಡ್ ಹಗರಣ – ಬಿಎಸ್‍ವೈ, ರಾಮುಲು ವಿರುದ್ಧ ಸರ್ಕಾರದ ಪ್ರಾಸಿಕ್ಯೂಷನ್ ಅಸ್ತ್ರ

    ಕೋವಿಡ್ ಹಗರಣ – ಬಿಎಸ್‍ವೈ, ರಾಮುಲು ವಿರುದ್ಧ ಸರ್ಕಾರದ ಪ್ರಾಸಿಕ್ಯೂಷನ್ ಅಸ್ತ್ರ

    ಬೆಂಗಳೂರು: ಕೋವಿಡ್ ಸಮಯದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಶ್ರೀರಾಮುಲು ವಿರುದ್ಧ‌ ಪ್ರಾಸಿಕ್ಯೂಷನ್ ಅಸ್ತ್ರ ಪ್ರಯೋಗಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ನ್ಯಾ.ಮೈಕಲ್ ಡಿ ಕುನ್ನಾ ವರದಿ ಆಧಾರದ ಮೇಲೆ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

    ಚೀನಾದಿಂದ ಪಿಪಿಇ ಕಿಟ್ ಖರೀದಿಸಿದ ವಿಚಾರವೇ ಈಗ ಕಾಂಗ್ರೆಸ್ ಸರ್ಕಾರದ ಪಾಲಿಗೆ ಬ್ರಹ್ಮಾಸ್ತ್ರವಾಗಿದೆ. ಇನ್ನೂ ನ್ಯಾ.ಮೈಕಲ್ ಡಿ ಕುನ್ನಾ ವರದಿಯಲ್ಲಿ ಯಡಿಯೂರಪ್ಪ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಿರುವ ಅಂಶ ಬೆಳಕಿಗೆ ಬಂದಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಕೇಸ್ ದಾಖಲಿಸಿ ತನಿಖೆಗೆ ವರದಿಯಲ್ಲಿ ಶಿಫಾರಸು ಮಾಡಲಾಗಿದೆ.

    2020 ಏಪ್ರಿಲ್‍ನಲ್ಲಿ ಚೀನಾದ ಎರಡು ಕಂಪನಿಗಳಿಂದ ಪಿಪಿಇ ಕಿಟ್ ಖರೀದಿಸುವಲ್ಲಿ ಅಕ್ರಮ ಎಸಗಲಾಗಿದೆ ಎಂಬುದು ವರದಿಯಲ್ಲಿ ಉಲ್ಲೇಖವಾಗಿದೆ. ಅಂದಿನ ಸಿಎಂ, ಅಂದಿನ ಆರೋಗ್ಯ ಸಚಿವರ ವಿರುದ್ಧ ತನಿಖೆಗೆ ಶಿಫಾರಸು ಮಾಡಲಾಗಿದೆ. ಉಪಚುನಾವಣೆ ಮುಗಿದ ಬಳಿಕ ರಾಜ್ಯ ಸರ್ಕಾರದಿಂದ ಮುಂದಿನ ಪ್ರಕ್ರಿಯೆಯ ಬಗ್ಗೆ ತೀರ್ಮಾನಿಸುವ ಸಾಧ್ಯತೆ ಇದೆ.

    ಡಿ.ಕೆ.ಶಿವಕುಮಾರ್ ನೇತೃತ್ವದ ಸಂಪುಟ ರಚನೆಯಾಗಿದ್ದು, ಮೊದಲ ಸಭೆಯಲ್ಲಿ ಪ್ರಾಥಮಿಕ ಅಂಶಗಳ ಬಗ್ಗೆ ಚರ್ಚೆ ನಡೆದಿದೆ. ಉಪಚುನಾವಣೆ ಬಳಿಕ ಸಂಪುಟ ಉಪಸಮಿತಿಯ ಎರಡನೇ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಯಡಿಯೂರಪ್ಪ, ರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಪ್ರಕ್ರಿಯೆ ಬಗ್ಗೆ ತೀರ್ಮಾನ ಮಾಡಿ ಸಂಪುಟ ಸಭೆ ಶಿಫಾರಸು ಮಾಡಲಿದೆ. ಬಳಿಕ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

    ಜಸ್ಟೀಸ್ ಕುನ್ನಾ ಮಧ್ಯಂತರ ವರದಿ ಶಿಫಾರಸು ಏನು?

    > 2020, ಏಪ್ರಿಲ್‍ನಲ್ಲಿ ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ
    > ಚೀನಾದ ಎರಡು ಕಂಪನಿಗಳಿಂದ ಪಿಪಿಇ ಕಿಟ್ ಖರೀದಿ
    > ಸುಮಾರು 3 ಲಕ್ಷ ಪಿಪಿಇ ಕಿಟ್‍ಗಳನ್ನ ದುಬಾರಿ ಬೆಲೆಗೆ ಖರೀದಿಸಿದ್ದಾರೆ
    > ಪಿಪಿಇ ಕಿಟ್ ಖರೀದಿಯಲ್ಲೇ ಸುಮಾರು 14 ಕೋಟಿ ಅಕ್ರಮ ಆಗಿದೆ
    > ಟೆಂಡರ್ ಕರೆದಿಲ್ಲ, ಖರೀದಿ ನಿಯಮಗಳು, ಕಾರ್ಯವಿಧಾನ ಅನುಸರಿಸಿಲ್ಲ
    > ಅಂದಿನ ಸಿಎಂ ಯಡಿಯೂರಪ್ಪ, ಅಂದಿನ ಆರೋಗ್ಯ ಸಚಿವ ರಾಮುಲು ಅವರ ಆದೇಶದ ಮೇರೆಗೆ ಖರೀದಿ
    > ಹಾಗಾಗಿ ಅಂದಿನ ಸಿಎಂ, ಆರೋಗ್ಯ ಸಚಿವರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ, ಸೆಕ್ಷನ್ 7ರ ಅಡಿ ತನಿಖೆ ನಡೆಸಬೇಕು, ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಉಲ್ಲೇಖಿಸಲಾಗಿದೆ.