Tag: covid bulletin karnataka

  • ಮತ್ತೆ ಏರುಗತಿಯಲ್ಲಿ ಕೋವಿಡ್‌ ಪ್ರಕರಣ- 313 ಮಂದಿಗೆ ಸೋಂಕು, 4 ಸಾವು

    ಮತ್ತೆ ಏರುಗತಿಯಲ್ಲಿ ಕೋವಿಡ್‌ ಪ್ರಕರಣ- 313 ಮಂದಿಗೆ ಸೋಂಕು, 4 ಸಾವು

    ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿಯಲ್ಲಿ ಸಾಗುತ್ತಿದೆ. ನಿನ್ನೆ 308 ಪ್ರಕರಣಗಳು ದೃಢಪಟ್ಟಿದ್ದವು. ಆದರೆ ಇಂದು ಆ ಸಂಖ್ಯೆ 313 ಕ್ಕೆ ಏರಿದೆ. ಸೋಂಕಿನಿಂದ ಇಂದು 4 ಮಂದಿ ಮೃತಪಟ್ಟಿದ್ದಾರೆ.

    ಬೆಂಗಳೂರು ನಗರ-2, ರಾಮನಗರ-1, ಉತ್ತರ ಕನ್ನಡ-1 ಸಾವು ಪ್ರಕರಣ ಹೊರತುಪಡಿಸಿದರೆ ಉಳಿದ ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣಗಳು ವರದಿಯಾಗಿದೆ. ಇದನ್ನೂ ಓದಿ: ಭಾರೀ ಮಳೆ- ಬೆಂಗಳೂರು ಸೇರಿ 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ, ಅಲರ್ಟ್‌ ಆಗಿರಲು 13 ಜಿಲ್ಲೆಗಳಿಗೆ ಸೂಚನೆ

    ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,92,897 ತಲುಪಿದೆ. ಕೋವಿಡ್‌ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 38,165 ಕ್ಕೇರಿದೆ. ಇಂದು 369 ಮಂದಿ ಗುಣಮುಖರಾಗಿದ್ದು, ಈವರೆಗೆ 29,47,354 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. 7,349 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ ಪ್ರಕರಣ ಪ್ರಮಾಣ ಶೇ. 0.36 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.1.27 ಇದೆ.

    ರಾಜ್ಯದಲ್ಲಿ ಇಂದು 2,06,970 ಮಂದಿಗೆ ಕೋವಿಡ್-‌19 ಲಸಿಕೆಯನ್ನು ನೀಡಲಾಗಿದೆ. ಅಲ್ಲದೇ 86,690 ಜನರಿಗೆ ಕೋವಿಡ್‌ ಪರೀಕ್ಷೆ (17,331 ರ‍್ಯಾಪಿಡ್‌ ಆ್ಯಂಟಿಜನ್‌ ಹಾಗೂ 69,359 ಆರ್‌ಟಿ-ಪಿಸಿಆರ್‌ ಪರೀಕ್ಷೆ) ನಡೆಸಲಾಗಿದೆ. ಇದನ್ನೂ ಓದಿ: ನನಗೆ ಸಲ್ಮಾನ್ ಜೊತೆ ನಟಿಸಲು ಇಷ್ಟವಿರಲಿಲ್ಲ ಎಂದ ಆಯುಷ್ ಶರ್ಮಾ

    ಆರೋಗ್ಯ ಇಲಾಖೆಯ ಬುಲೆಟಿನ್‌ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 179, ಬೀದರ್ 1, ಚಾಮರಾಜನಗರ 2, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 6, ಚಿತ್ರದುರ್ಗ 2, ದಕ್ಷಿಣ ಕನ್ನಡ 9, ದಾವಣಗೆರೆ 0, ಧಾರವಾಡ 1, ಗದಗ 0, ಹಾಸನ 13, ಹಾವೇರಿ 0, ಕಲಬುರಗಿ 0, ಕೊಡಗು 1, ಕೋಲಾರ 6, ಕೊಪ್ಪಳ 0, ಮಂಡ್ಯ 0, ಮೈಸೂರು 51, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 20, ಉಡುಪಿ 4, ಉತ್ತರ ಕನ್ನಡ 11, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

  • ರಾಜ್ಯದಲ್ಲಿ ಇಂದು 255 ಮಂದಿಗೆ ಕೊರೊನಾ ಸೋಂಕು, 7 ಸಾವು

    ರಾಜ್ಯದಲ್ಲಿ ಇಂದು 255 ಮಂದಿಗೆ ಕೊರೊನಾ ಸೋಂಕು, 7 ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್‌ ದೃಢಪಟ್ಟ 255 ಪ್ರಕರಣಗಳು ವರದಿಯಾಗಿದ್ದು, ಸೋಂಕಿನಿಂದಾಗಿ 7 ಮಂದಿ ಮೃತಪಟ್ಟಿದ್ದಾರೆ. ಅಲ್ಲದೇ, ಇಂದು 667 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

    ಬೆಳಗಾವಿ-1, ಬೆಂಗಳೂರು ನಗರ-2, ಚಿತ್ರದುರ್ಗ-1, ದಕ್ಷಿಣ ಕನ್ನಡ-1, ಧಾರವಾಡ-1, ತುಮಕೂರು-1 ಹೊರತುಪಡಿಸಿದರೆ ಉಳಿದೆಲ್ಲ ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣಗಳು ವರದಿಯಾಗಿವೆ.

    ರಾಜ್ಯದಲ್ಲಿ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 29,92,276ಕ್ಕೇರಿದೆ. ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 38,153 ಆಗಿದೆ. ಈವರೆಗೆ 29,46,601 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. 7,493 ಸಕ್ರಿಯ ಪ್ರಕರಣಗಳಿವೆ. ಕೋವಿಡ್‌ ಪ್ರಕರಣ ಪ್ರಮಾಣ ಶೇ. 0.38 ರಷ್ಟಿದ್ದರೆ, ಸಾವಿನ ಪ್ರಮಾಣ ಶೇ.2.74 ಇದೆ.

    ರಾಜ್ಯದಲ್ಲಿ ಇಂದು 1,63,811 ಮಂದಿಗೆ ಕೋವಿಡ್-‌19 ಲಸಿಕೆಯನ್ನು ನೀಡಲಾಗಿದೆ. ಅಲ್ಲದೇ 66,993 ಜನರಿಗೆ ಕೋವಿಡ್‌ ಪರೀಕ್ಷೆ (19,520 ರ‍್ಯಾಪಿಡ್‌ ಹಾಗೂ 47,473 ಆ್ಯಂಟಿಜನ್‌ ಪರೀಕ್ಷೆ) ನಡೆಸಲಾಗಿದೆ.

    ಆರೋಗ್ಯ ಇಲಾಖೆಯ ಬುಲೆಟಿನ್‌ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 163, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಚಿತ್ರದುರ್ಗ 1, ದಕ್ಷಿಣ ಕನ್ನಡ 13, ದಾವಣಗೆರೆ 1, ಧಾರವಾಡ 1, ಗದಗ 0, ಹಾಸನ 3, ಹಾವೇರಿ 0, ಕಲಬುರಗಿ 2, ಕೊಡಗು 6, ಕೋಲಾರ 6, ಕೊಪ್ಪಳ 0, ಮಂಡ್ಯ 0, ಮೈಸೂರು 19, ರಾಯಚೂರು 0, ರಾಮನಗರ 0, ಶಿವಮೊಗ್ಗ 9, ತುಮಕೂರು 2, ಉಡುಪಿ 8, ಉತ್ತರ ಕನ್ನಡ 8, ವಿಜಯಪುರ ಮತ್ತು ಯಾದಗಿರಿಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.