Tag: covid care centre

  • ರೇಣುಕಾಚಾರ್ಯ ಆರೋಗ್ಯ ಸಚಿವರಾಗುವಂತೆ ಸೋಂಕಿತನ ಪಟ್ಟು

    ರೇಣುಕಾಚಾರ್ಯ ಆರೋಗ್ಯ ಸಚಿವರಾಗುವಂತೆ ಸೋಂಕಿತನ ಪಟ್ಟು

    ದಾವಣಗೆರೆ: ಕೋವಿಡ್ ಕೇರ್ ಸೆಂಟರ್ ನಲ್ಲಿ ವಾಸ್ತವ್ಯ ಹೂಡಿ ಸೋಂಕಿತರ ಜೊತೆ ಕಾಲ ಕಳೆದಿದ್ದ ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ಆರೋಗ್ಯ ಸಚಿವರಾಗಬೇಕೆಂದು ಕೊರೊನಾ ಸೋಂಕಿತನೊಬ್ಬ ಪಟ್ಟು ಹಿಡಿದ ಘಟನೆ ದಾವಣಗೆರೆಯ ಹೊನ್ನಾಳಿ ಪಟ್ಟಣದ ಅರಬಗಟ್ಟೆ ಕೊವೀಡ್ ಕೇರ್ ಸೆಂಟರ್ ನಲ್ಲಿ ನಡೆದಿದೆ.

    ಹೊನ್ನಾಳಿ ತಾಲೂಕಿನಲ್ಲಿ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್ ನಲ್ಲಿ ರೇಣುಕಾಚಾರ್ಯರವರೇ ಆರೋಗ್ಯ ಸಚಿವರಾಗಬೇಕೆಂದು ಸೋಂಕಿತನೋರ್ವ ಪಟ್ಟು ಹಿಡಿದಿದ್ದಾನೆ. ಕೊರೊನಾ ಬಂದ ಸಂದರ್ಭದಲ್ಲಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಇದ್ದು ಸೋಂಕಿತರಿಗೆ ಧೈರ್ಯ ತುಂಬಿದ್ದೀರಿ, ನಿಮ್ಮನ್ನು ಆರೋಗ್ಯ ಸಚಿವರನ್ನಾಗಿ ಮಾಡಿದರೆ ಇಡೀ ರಾಜ್ಯಕ್ಕೆ ಒಳ್ಳೆಯ ಸೇವೆ ಸಿಗುತ್ತದೆ ಎಂದು ಸೋಂಕಿತ ಅಭಿಪ್ರಯಾಪಟ್ಟಿದ್ದಾರೆ. ಇದನ್ನೂ ಓದಿ: ಕೆಲವರು ಸೂಟು ಹೊಲಿಸಿ ಸಿಎಂ ಆಗುವ ತಿರುಕನ ಕನಸು ಕಾಣ್ತಿದ್ದಾರೆ: ರೇಣುಕಾಚಾರ್ಯ

    ಕೋವಿಡ್ ಕೇರ್ ಸೆಂಟರ್‍ ನಲ್ಲಿ ಚಿಕಿತ್ಸೆ ಪಡೆದು ಸೋಂಕಿನಿಂದ ಗುಣಮುಖರಾದವರನ್ನು ಬೀಳ್ಕೋಡುಗೆ ನೀಡಿದ ರೇಣುಕಾಚಾರ್ಯರವರಿಗೆ ಮನೆಗೆ ತೆರಳುವ ಮುನ್ನ ಮಹಿಳೆಯರು ಒಂದು ದಿನ ನೀವು ಕೋವಿಡ್ ಕೇರ್ ಸೆಂಟರ್ ನಲ್ಲಿ ಇಲ್ಲ ಎಂದರೆ ಮನೆಯಲ್ಲಿ ಯಜಮಾನನಿಲ್ಲದಂತೆ ಆಗುತ್ತದೆ ಎಂದು ರೇಣುಕಾಚಾರ್ಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಗುಣಮುಖರಾದವರನ್ನು ತಮ್ಮ ಅಂಬ್ಯುಲೆನ್ಸ್ ನಲ್ಲೇ ಕಳುಹಿಸಿಕೊಟ್ಟ ರೇಣುಕಾಚಾರ್ಯರವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಕೋವಿಡ್ ಕೇರ್ ಸೆಂಟರ್ ಬಿಟ್ಟು ಹೋಗುತ್ತಿರುವಾಗ ಗುಣಮುಖರಾದವರು ಕಣ್ಣೀರು ಹಾಕುತ್ತಾ ಮನೆಯತ್ತ ತೆರಳಿದ ಪ್ರಸಂಗವೂ ನಡೆದಿದೆ.

  • ಕೊರೊನಾ ಕೇರ್ ಸೆಂಟರ್ ಆರಂಭಿಸಿದ ಗ್ರಾಮಸ್ಥರು-ಸೋಂಕು ನಿಯಂತ್ರಣಕ್ಕೆ ದಿಟ್ಟ ನಿರ್ಧಾರ

    ಕೊರೊನಾ ಕೇರ್ ಸೆಂಟರ್ ಆರಂಭಿಸಿದ ಗ್ರಾಮಸ್ಥರು-ಸೋಂಕು ನಿಯಂತ್ರಣಕ್ಕೆ ದಿಟ್ಟ ನಿರ್ಧಾರ

    ದಾವಣಗೆರೆ: ಜಿಲ್ಲೆಯ ಹಲವು ಗ್ರಾಮಗಳಲ್ಲಿ ಸೋಂಕಿನ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಸೋಂಕಿತರು ಮನೆಯಲ್ಲೇ ಇದ್ದು ಮತ್ತಷ್ಟು ಸೋಂಕು ಹೆಚ್ಚಾಗುವ ರೀತಿ ಮಾಡುತ್ತಿದ್ದಾರೆ. ಹೀಗಾಗಿ ಗ್ರಾಮಸ್ಥರೆ ಸೇರಿ ಕೊರೊನಾ ಸೆಂಟರ್‌‌ವೊಂದನ್ನು ಆರಂಭಿಸಿದ್ದಾರೆ.  ಇದನ್ನೂ ಓದಿ: ಸಿಎಂ ಬಿಎಸ್‍ವೈಗೆ ಹೈಕಮಾಂಡ್ ಬಿಗ್ ರಿಲೀಫ್ – ಸಕ್ರಿಯರಲ್ಲದ ಸಚಿವರಿಗೆ ಕೊಕ್ ಸಾಧ್ಯತೆ

    ಮಾಜಿ ಸಿಎಂ ದಿ. ಜೆ.ಎಚ್ ಪಟೇಲ್ ತವರೂರು ಕಾರಿಗನೂರು ಗ್ರಾಮದಲ್ಲಿ ಕೊರೊನಾ ಸೋಂಕು ಹೆಚ್ಚಳವಾದ ಕಾರಣ ಗ್ರಾಮ ಪಂಚಾಯಿತಿ ಹಾಗೂ ಗ್ರಾಮಸ್ಥರೆಲ್ಲರೂ ಸೇರಿ ಕೋವಿಡ್ ಸೆಂಟರ್ ಆರಂಭಿಸಿದ್ದಾರೆ. ಇಂಜೆಕ್ಷನ್, ಔಷಧೋಪಚಾರ ಹೊರತುಪಡಿಸಿ ಉಳಿದೆಲ್ಲವನ್ನೂ ಸ್ಥಳೀಯವಾಗಿ ಕ್ರೋಢಿಕರಿಸಿ ಮನೆಯ ವಾತಾವರಣ ಅನುಭವಕ್ಕೆ ಬರುವಂತ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.ಚನ್ನಗಿರಿ ತಾಲ್ಲೂಕಿನ ಕಾರಿಗನೂರು ಗ್ರಾಮದಲ್ಲಿ 15ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮದ ಮೊರಾರ್ಜಿ ಬಾಲಕರ ವಸತಿ ಶಾಲೆಯಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದ್ದು, ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಖಾಸಗಿ ಆಸ್ಪತ್ರೆಗಳಲ್ಲಿಯೂ ಉಚಿತವಾಗಿ ಕೋವಿಡ್ ಲಸಿಕೆ ನೀಡುವಂತೆ ಯುವ ಕಾಂಗ್ರೆಸ್ ಆಗ್ರಹ

    ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ಪಟೇಲ್ ಅವರ ನೇತೃತ್ವದಲ್ಲಿ ಈ ಸೆಂಟರ್ ಆರಂಭಿಸಲಾಗಿದ್ದು, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯರು ತಮ್ಮ ಕೈಯಲ್ಲಾದಷ್ಟರ ಮಟ್ಟಿಗೆ ಸಹಾಯ ಮಾಡಿದ್ದಾರೆ. ಜೊತೆಗೆ ಸೋಂಕಿತರಿಗೆ ತಾನು ರೋಗಿ, ಆಸ್ಪತ್ರೆಯಲ್ಲಿದ್ದೇನೆ ಎಂಬುದು ನೆನಪಿಗೆ ಬಾರದ ರೀತಿಯಲ್ಲಿ ವಿಶಾಲವಾದ ಜಾಗದಲ್ಲಿ ಸೆಂಟರ್ ರೂಪಿಸಲಾಗಿರುವುದು ಮತ್ತೊಂದು ವಿಶೇಷವಾಗಿದೆ.

    ಬೆಡ್ ಸಿಗದ ಕಾರಣ ಆಸ್ಪತ್ರೆಗೆ ಹೋಗಿ ಪರದಾಡುವುದನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ. ಎಲ್ಲದಕ್ಕೂ ಸರ್ಕಾರವನ್ನೇ ನಿರೀಕ್ಷಿಸುವುದಕ್ಕಿಂತ ನಮ್ಮಿಂದಾದಷ್ಟು ಸೌಲಭ್ಯ ಒದಗಿಸಿದರೆ, ಎಚ್ಚರಿಕೆ ವಹಿಸಿದರೆ ಕೋವಿಡ್ ನಿಯಂತ್ರಣವನ್ನು ಶೀಘ್ರವಾಗಿ ನಿಯಂತ್ರಿಸಲು ಸಹಕಾರಿಯಾಗುತ್ತದೆ.

  • ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರಿಗೆ ಮಾಂಸದೂಟ – ಜಿಲ್ಲಾಡಳಿತದ ಕಾರ್ಯಕ್ಕೆ ಮೆಚ್ಚುಗೆ

    ಕೋವಿಡ್ ಕೇರ್ ಸೆಂಟರ್ ನಲ್ಲಿ ಸೋಂಕಿತರಿಗೆ ಮಾಂಸದೂಟ – ಜಿಲ್ಲಾಡಳಿತದ ಕಾರ್ಯಕ್ಕೆ ಮೆಚ್ಚುಗೆ

    ಮಡಿಕೇರಿ: ಕೊವಿಡ್ ಕೇರ್ ಸೆಂಟರ್ ಅಂದ್ರೆ ಕೇವಲ ಸಮಸ್ಯೆಗಳ ಕೇಂದ್ರ ಆನ್ನೋ ಸ್ಥಿತಿ ಎಷ್ಟೋ ಕಡೆಗಳಲ್ಲಿ ಇರಬಹುದು. ಊಟ ತಿಂಡಿ ಚೆನ್ನಾಗಿಲ್ಲ ದೂರುಗಳು ಬರುತ್ತಿರಬಹುದು. ಆದರೆ ಕೊಡಗು ಜಿಲ್ಲೆಯ ಕೊವಿಡ್ ಕೇರ್ ಸೆಂಟರ್ ನಲ್ಲಿ ಹಾಗಲ್ಲ. ಸರ್ಕಾರ ನೀಡಿರುವ ಮೆನು ಬದಲಿಗೆ ಕೊಡಗಿನ ಆಹಾರ ಪದ್ಧತಿಯ ರೀತಿಯಲ್ಲೇ ಕೊವಿಡ್ ಕೇರ್ ಸೆಂಟರ್ ಗಳಲ್ಲಿ ಇರುವವರಿಗೆ ಆಹಾರ ನೀಡಲಾಗುತ್ತಿದೆ. ಅದಕ್ಕಿಂತ ಮುಖ್ಯವಾಗಿ ಅವರಿಗೆ ವಾರದಲ್ಲಿ ಒಮ್ಮೆ ಮಾಂಸದ ಊಟ, ಮೊಟ್ಟೆ ರೆಸಿಪಿಗಳನ್ನು ಕೊಟ್ಟು ಸೋಂಕಿತರಿಗೆ ಭರ್ಜರಿ ಊಟ ನೀಡಲಾಗುತ್ತಿದೆ. ಇದು ಸೋಂಕಿತರಿಗೆ ಫುಲ್ ಖುಷಿಯಾಗುವಂತೆ ಮಾಡಿದೆ.

    ಸರ್ಕಾರ ಕೋವಿಡ್ ಕೇರ್ ಗಳಲ್ಲಿರುವವರಿಗೆ, ಕೊವಿಡ್ ಆಸ್ಪತ್ರೆಗಳಲ್ಲಿ ಇರುವವರಿಗೆ ಇಂಥಹದ್ದೇ, ಇಂತಿಷ್ಟೇ ಆಹಾರ ಕೊಡಬೇಕು ಎಂದು ಮೆನು ಮಾಡಿದೆ. ಆ ಮೆನು ಪ್ರಕಾರ ಆಹಾರ ನೀಡೋದಾದ್ರೆ, ತಿಂಡಿಗೆ ಚಿತ್ರಾನ್ನ, ಪೊಂಗಲ್, ಬಿಸಿಬೇಳೆ ಬಾತ್ ಇಂತಹವುಗಳನ್ನು, ಊಟಕ್ಕೆ ಅನ್ನ ಸಾಂಬಾರ್ ಗಳನ್ನು ನೀಡಬೇಕು. ಇಂತಹವುಗಳನು ಕೊಡಗಿನ ಜನರು ಹೆಚ್ಚಿನ ಪ್ರಮಾಣದಲ್ಲಿ ಅನ್ನದ ಆಹಾರಗಳನ್ನು ಬಳಸೋದು ಕಡಿಮೆ. ಒಂದು ವೇಳೆ ಅವುಗಳನ್ನು ನೀಡಿದರೆ ಕೊಡಗಿನ ಕೊವಿಡ್ ಕೇರ್ ಸೆಂಟರ್ ಗಳಲ್ಲಿ ಇನ್ನಿಲ್ಲದ ಸಮಸ್ಯೆ ಎದುರಾಗೋದ್ರಲ್ಲಿ ಎರಡು ಮಾತಿಲ್ಲ. ಹೀಗಾಗಿ ಕೊವಿಡ್ ಕೇರ್ ಸೆಂಟರ್ ಗಳಲ್ಲಿ ಕೊಡಗಿನ ಆಹಾರ ಪದ್ಧತಿಯಂತೆ, ಕಡುಬು ಸಾಗು, ದೋಸೆ, ಚಪಾತಿ ಇಂತಹವುಗಳನ್ನು ನೀಡಲಾಗುತ್ತಿದೆ. ಜೊತೆಗೆ ಸರ್ಕಾರ ಮೆನು ಪ್ರಕಾರ ಮೊಟ್ಟೆಯನ್ನು ಕೊಡಲು ಅವಕಾಶವಿದೆ. ಆದರೆ ಕೇವಲ ಮೊಟ್ಟೆ ಕೊಟ್ಟರೆ ಅದು ಬಾಯಿಗೆ ರುಚಿಸದಿರಬಹುದು ಎಂದು ಜೊತೆಗೆ ಮೊಟ್ಟೆ ಮಸಾಲ ಮಾಡಿಕೊಡಲಾಗುತ್ತಿದೆ.

    ಅದಕ್ಕಿಂತ ಮುಖ್ಯವಾಗಿ ವಾರದಲ್ಲಿ ಒಂದು ದಿನ ಚಿಕನ್ ಊಟ ಪೂರೈಸಲಾಗುತ್ತಿದೆ. ಕಡಿಮೆ ಪ್ರಮಾಣದಲ್ಲಿ ಮಸಾಲೆಯನ್ನು ಬಳಸಿ ಚಿಕನ್ ಮಾಡಿ ಅದರ ಜೊತೆಗೆ ಚಪಾತಿ ಪೂರೈಸಲಾಗುತ್ತಿದೆ. ಕೊಡಗಿನಲ್ಲಿ ಸಹಜವಾಗಿ ಹೆಚ್ಚು ಮಾಂಸ ಪ್ರಿಯರಾಗಿದ್ದು, ಮಾಂಸದೂಟ ಇಲ್ಲದಿದ್ದರೆ ಬಾಯಿಗೆ ರುಚಿಸೋದಿಲ್ಲ. ಹೀಗಾಗಿ ಸರ್ಕಾರದ ಮೆನು ಪ್ರಕಾರಕ್ಕೆ ಬದಲಾಗಿ ರುಚಿಕಟ್ಟಾದ ಮತ್ತು ಕೊಡಗಿನ ಆಹಾರ ಪದ್ಧತಿಯ ಊಟವನ್ನೇ ಪೂರೈಸಲಾಗುತ್ತಿದೆ. ಇದು ಕೊವಿಡ್ ಸೋಂಕಿತರಿಗೆ ತುಂಬಾನೇ ಖುಷಿ ಕೊಟ್ಟಿದೆ.

  • ಕೊರೊನಾ ಗೆದ್ದವರಿಗೆ ಗುಲಾಬಿ ನೀಡಿ ಬೀಳ್ಕೊಡುಗೆ

    ಕೊರೊನಾ ಗೆದ್ದವರಿಗೆ ಗುಲಾಬಿ ನೀಡಿ ಬೀಳ್ಕೊಡುಗೆ

    ಧಾರವಾಡ: ಕಲಘಟಗಿ ತಾಲೂಕಿನ ಹಿರೇಹೊನ್ನಳ್ಳಿ ಕೋವಿಡ್ ಕಾಳಜಿ ಕೇಂದ್ರದಲ್ಲಿ ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದವರಿಗೆ ಗುಲಾಬಿ ನೀಡಿ ಬೀಳ್ಕೊಡುಗೆ ನೀಡಲಾಗಿದೆ. ಹಿರೇಹೊನ್ನಳ್ಳಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಮಾತೋಶ್ರೀ ರಮಾಬಾಯಿ ಅಂಬೇಡ್ಕರ ವಿದ್ಯಾರ್ಥಿ ನಿಲಯವನ್ನು ಕೋವಿಡ್ ಕಾಳಜಿ ಕೇಂದ್ರವನ್ನಾಗಿ ಮಾಡಲಾಗಿದೆ.

    ಜಾರ್ಖಂಡ್ ಮೂಲದ ಓರ್ವ ಹಾಗೂ ಹಿರೇಹೊನ್ನಳ್ಳಿ ಗ್ರಾಮದ ಎಂಟು ಜನರು ಗುಣಮುಖರಾಗಿದ್ದು, ಡಿಸ್ಚಾರ್ಜ್ ಆದರು. ಗ್ರಾಮ ಪಂಚಾಯ್ತಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಗುಲಾಬಿ ಹೂ ನೀಡಿ, ಚಪ್ಪಾಳೆ ತಟ್ಟಿ ಹರ್ಷದಿಂದ ಬೀಳ್ಕೊಟ್ಟರು. ಅಧಿಕಾರಿಗಳು ಮತ್ತು ಆರೋಗ್ಯ ಸಿಬ್ಬಂದಿಗೆ ಕೈ ಮುಗಿದು ಗುಣಮುಖರು ತಮ್ಮ ಮನೆಗಳಿಗೆ ಹಿಂದಿರುಗಿದರು.

    ಹಿರೇಹೊನ್ನಳ್ಳಿಯ ಕೋವಿಡ್ ಕಾಳಜಿ ಕೇಂದ್ರದಲ್ಲಿ 100 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದ್ದು, 17 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಳಜಿ ಕೇಂದ್ರಕ್ಕೆ ಆಗಮಿಸುವ ಸೋಂಕಿತರಿಗೆ ಮನೆಯವರಂತೆ ಪ್ರೀತಿಯಿಂದ ಕಾಣುವ ಮತ್ತು ಗುಣಮುಖರಾದ ಸೋಂಕಿತರನ್ನು ಖುಷಿಯಿಂದ ಹೋಗುವಂತೆ ನೋಡಿಕೊಳ್ಳಲಾಗುತ್ತಿದೆ.

  • ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಜಿಲ್ಲಾಡಳಿತ – ಕೋವಿಡ್ ಕೇರ್ ಸೆಂಟರ್ ಗೆ ಜಿಲ್ಲಾಧಿಕಾರಿ ಭೇಟಿ

    ಪಬ್ಲಿಕ್ ಟಿವಿ ವರದಿ ಬಳಿಕ ಎಚ್ಚೆತ್ತ ಜಿಲ್ಲಾಡಳಿತ – ಕೋವಿಡ್ ಕೇರ್ ಸೆಂಟರ್ ಗೆ ಜಿಲ್ಲಾಧಿಕಾರಿ ಭೇಟಿ

    ಬಳ್ಳಾರಿ: ಪಬ್ಲಿಕ್ ಟಿವಿ ವರದಿ ಬಳಿಕ ಬಳ್ಳಾರಿ ಜಿಲ್ಲಾಧಿಕಾರಿಗಳು ಕೋವಿಡ್ ಕೇರ್ ಕೇಂದ್ರಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.

    ಕಳೆದ ಎರಡು ದಿನಗಳ ಹಿಂದ ಕೋವಿಡ್ ಕೇರ್ ಸೆಂಟರ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಊಟ ಮಾಡದೆ ಪ್ರತಿಭಟನೆ ಮಾಡಿದ್ದರು. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಸರಿಯಾದ ಊಟ ನೀಡದ ಕಾರಣ ಅಲ್ಲಿನ ಸುಮಾರು 60 ಜನ ರೋಗಿಗಳು ಊಟ ಮಾಡದೇ ಪ್ರತಿಭಟನೆ ಮಾಡಿದ್ದರು.

    ಈ ಕುರಿತು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು. ಪಬ್ಲಿಕ್ ಟಿವಿ ವರದಿಗೆ ಎಚ್ಚೆತ್ತ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಸೇರಿದಂತೆ ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ಅವರು ಕೋವಿಡ್ ಕೇರ್ ಸೆಂಟರ್ ಗೆ ಭೇಟಿ ನೀಡಿದ್ದಾರೆ. ಅಲ್ಲಿ ದಾಖಲಾಗಿರುವ 60ಕ್ಕೂ ಹೆಚ್ಚು ಜನರ ಯೋಗಕ್ಷೇಮ ವಿಚಾರ ನಡೆಸಿ, ಸರಿಯಾದ ರೀತಿಯಲ್ಲಿ ಊಟ ನೀಡುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

    ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಬೆಡ್ ಕಡಿಮೆ ಇರುವ ಕಾರಣ ರೋಗ ಲಕ್ಷಣಗಳು ಇಲ್ಲದವರನ್ನು ಮನೆಯಲ್ಲಿರಿಸಿ ಚಿಕಿತ್ಸೆ ನೀಡಲು ಸರ್ಕಾರ ಮುಂದಾಗಿತ್ತು, ಆದ್ರೆ ಹೋಮ್ ಐಸೋಲೇಶನ್ ನಿಂದಾಗಿ ಸೋಂಕು ಹೆಚ್ಚಾದ ಕಾರಣ ಜಿಲ್ಲಾಡಳಿತ ಪ್ರತಿ ತಾಲೂಕಿನ ಕೋವಿಡ್ ಕೇರ್ ಸೆಂಟರ್ ತೆರೆದು ಅಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್ ನಲ್ಲಿ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ರೋಗಿಗಳು ಪ್ರತಿಭಟನೆ ಮಾಡಿದ್ದರು.

  • ಬೆಂಗಳೂರಿನಲ್ಲಿ ಮನೆ ಪಕ್ಕದಲ್ಲೇ ಕೋವಿಡ್‌ ಕೇರ್; ಓಯೋ ಆರೈಕೆ ಕೇಂದ್ರ ಉದ್ಘಾಟಿಸಿದ ಡಿಸಿಎಂ

    ಬೆಂಗಳೂರಿನಲ್ಲಿ ಮನೆ ಪಕ್ಕದಲ್ಲೇ ಕೋವಿಡ್‌ ಕೇರ್; ಓಯೋ ಆರೈಕೆ ಕೇಂದ್ರ ಉದ್ಘಾಟಿಸಿದ ಡಿಸಿಎಂ

    ಗಿವ್‌ ಇಂಡಿಯಾ, ಅಜೀಂ ಪ್ರೇಂ ಜೀ ಪ್ರತಿಷ್ಠಾನದ ಡಾಕ್ಸರ್ಸ್‌ ಫಾರ್‌ ಯು ಸಹಯೋಗ

    ಬೆಂಗಳೂರು: ನಗರದ ತಮ್ಮ ಮನೆಯ ಅಕ್ಕಪಕ್ಕದಲ್ಲೇ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಹೋಟೆಲ್ ನಲ್ಲಿ  ಆರಂಭಿಸಲಾಗಿರುವ ʼಓಯೋ ಕೋವಿಡ್‌ ಕೇರ್‌ ಸೆಂಟರ್‌ʼಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಮಂಗಳವಾರ  ಉದ್ಘಾಟನೆ ಮಾಡಿದರು.

    ಬಳಿಕ ಮಾತನಾಡಿದ ಡಿಸಿಎಂ ಅವರು, “ಗಿವ್‌ ಇಂಡಿಯಾ, ಅಜೀಂ ಪ್ರೇಂ ಜೀ ಪ್ರತಿಷ್ಠಾನದ ಡಾಕ್ಸರ್ಸ್‌ ಫಾರ್‌ ಯುವರ್ಸ್‌ ಮತ್ತು ಒಯೋ ಹೋಟೆಲ್ಸ್‌ನವರು ಸೇರಿ ಸಂಯುಕ್ತವಾಗಿ ಮಾಡಿರುವ ಈ ವ್ಯವಸ್ಥೆಯೂ ಪ್ರಾಯೋಗಿಕವಾಗಿ ನಗರದ ಕಲ್ಯಾಣನಗರದಲ್ಲಿ ಆರಂಭವಾಗಿದ್ದು, ಇದು ಯಶಸ್ವಿಯಾದರೆ ಓಯೋ ಹೋಟೆಲ್ಸ್‌ನವರ ಜತೆ ಒಡಂಬಡಿಕೆ ಮಾಡಿಕೊಂಡು ಅವರು ಎಲ್ಲೆಲ್ಲಿ ಹೋಟೆಲ್‌ ಚೈನ್‌ ಹೊಂದಿದ್ದಾರೆಯೋ ಅಲ್ಲೆಲ್ಲ ಕೋವಿಡ್‌ ಕೇಂದ್ರಗಳನ್ನು ತೆರೆಯಲಾಗುವುದು. ಗ್ರಾಮೀಣ ಭಾಗದ ಹೋಟೆಲ್ ಗಳಲ್ಲಿ ಯೂ ಈ ರೀತಿಯ ಕೇಂದ್ರಗಳನ್ನು ತೆರೆಯಲಾಗುವುದು” ಎಂದರು.

     

    ಹೋಟೆಲ್ ಅನ್ನು ಓಯೋನವರು ಕೊಟ್ಟರೆ, ಕೋವಿಡ್‌ ಕೇರ್‌ಗೆ ಅಗತ್ಯ ಆರ್ಥಿಕ ಸಂಪನ್ಮೂಲವನ್ನು ಗಿವ್‌ ಇಂಡಿಯಾ ಒದಗಿಸುತ್ತದೆ. ಉಳಿದಂತೆ ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ಅಜೀಂ ಪ್ರೇಂ ಜೀ ಪ್ರತಿಷ್ಠಾನದ ಡಾಕ್ಸರ್ಸ್‌ ಫಾರ್‌ ಯು ಒದಗಿಸುತ್ತದೆ. ಒಂದು ಖಾಸಗಿ ವ್ಯವಸ್ಥೆ ಅದೆಷ್ಟು ಪರಿಣಾಮಕಾರಿಯಾಗಿ ಸೋಂಕಿನ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದು ಡಾ.ಅಶ್ವತ್ಥನಾರಾಯಣ ಮೆಚ್ಚುಗೆ ವ್ಯಕ್ತಪಡಿಸಿದರು.

    ಸದ್ಯಕ್ಕೆ ಕಲ್ಯಾಣನಗರದ  ಕೋವಿಡ್‌ ಕೇರ್‌ನಲ್ಲಿ 20 ಬೆಡ್‌ಗಳಿದ್ದು, ಅಕ್ಕಪಕ್ಕದಲ್ಲಿ ಯಾರಾದರೂ ಸೋಂಕಿತರಿದ್ದರೆ ಇಲ್ಲಿ ಬಂದು ಚಿಕಿತ್ಸೆ ಪಡೆಯಬಹುದು. ಇದು ಒಂದು ರೀತಿ ಹೋಮ್ ಹೈಸೋಲೇಷನ್ ರೀತಿ ಇರುತ್ತದೆ. ಇಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ, ಆರೈಕೆ ಹಾಗೂ ಊಟೋಪಚಾರವೂ ಇರುತ್ತದೆ. ಕೊಠಡಿಗಳು ಸ್ಟಾರ್ ಹೋಟೆಲ್ ಕೊಠಡಿಗಳ ಹಾಗೆ ಇವೆ. ಅಕ್ಸಿಜನ್‌ ಒದಗಿಸಲು ಆಮ್ಲಜನಕ ಸಾಂದ್ರಕಗಳ ಸೌಲಭ್ಯ ಕೂಡ ಇದೆ ಎಂದು ಅವರು‌ ಹೇಳಿದರು.

    ಈ ಸಂದರ್ಭದಲ್ಲಿ ರಾಜ್ಯ ಕರಕುಶಲ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು, ಗಿವ್‌ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ವಿನೋದ್‌, ಸರ್ಕಾರಕ್ಕೆ ಸಿಎಸ್ ಆರ್ ನಿಧಿ ಬಗ್ಗೆ ಸಲಹೆ‌  ನೀಡುವ‌ ಕೆ.ವಿ.ಮಹೇಶ, ಡಾಕ್ಟರ್ಸ್ ಫಾರ್ ಯು ಸಂಸ್ಥೆಯ ಆರೋಗ್ಯ ಮತ್ತು ಪೌಷ್ಟಿಕ ವಿಭಾಗದ ನಿರ್ದೇಶಕಿ ಡಾ.ವೈಶಾಲಿ ವೇಣು ಇದ್ದರು.

  • ಕೋವಿಡ್ ಕೇರ್ ಸೆಂಟರ್‍ ಗೆ ಕನ್ನ ಹಾಕಿದ ಕಳ್ಳ – ಸಿಸಿಟಿವಿಯಲ್ಲಿ ಸೆರೆ

    ಕೋವಿಡ್ ಕೇರ್ ಸೆಂಟರ್‍ ಗೆ ಕನ್ನ ಹಾಕಿದ ಕಳ್ಳ – ಸಿಸಿಟಿವಿಯಲ್ಲಿ ಸೆರೆ

    ಹುಬ್ಬಳ್ಳಿ: ಕೋವಿಡ್ ಕೇರ್ ಸೆಂಟರ್‍ ನಲ್ಲಿ ಕರ್ತವ್ಯ ನಿರತ ವೈದ್ಯರ ಮೊಬೈಲ್‍ನ್ನು ಕಳ್ಳತನ ಮಾಡಿರುವ ಘಟನೆಯೊಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ಕೇರ್ ಸೆಂಟರ್ ನಲ್ಲಿ ನಡೆದಿದೆ. ಕಳ್ಳನ ಕೈಚಳಕ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರೊಬ್ಬರು ತನ್ನ ಮೇಜಿನ ಮೇಲೆ ಮೊಬೈಲ್‍ನ್ನು ಇಟ್ಟು ರೋಗಿಗಳನ್ನು ವಿಚಾರಿಸುತ್ತಿದ್ದರು. ಈ ಸಮಯವನ್ನು ಬಳಸಿಕೊಂಡ ವ್ಯಕ್ತಿಯೋರ್ವ ಐವತ್ತು ಸಾವಿರ ಬೆಲೆಯುಳ್ಳ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಕಳ್ಳತನ ಮಾಡಿರುವ ದೃಶ್ಯ ಹಾಗೂ ಕಳ್ಳನ ಸಂಪೂರ್ಣ ಚಲನವಲನ ಆಸ್ಪತ್ರೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಾಕಿ ಕಳ್ಳ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ ಮಾಡಿರುವುದು ವರದಿಯಾಗಿದೆ.

    ಆಸ್ಪತ್ರೆಗೆ ಬಂದಂತಹ ರೋಗಿಗಳಿಗೆ ಚಿಕಿತ್ಸೆ ಕೊಡುತ್ತಿದ್ದಾಗ ಮೊಬೈಲ್ ಎಗರಿಸಿದ ಕಳ್ಳನ ವಿರುದ್ಧ ವೈದ್ಯರು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ನೆಲಮಂಗಲ ಸಮೀಪವಿರೋ ದೇಶದ ಅತೀ ದೊಡ್ಡ ಕೋವಿಡ್ ಕೇರ್‌ಸೆಂಟರ್ ಕ್ಲೋಸ್

    ನೆಲಮಂಗಲ ಸಮೀಪವಿರೋ ದೇಶದ ಅತೀ ದೊಡ್ಡ ಕೋವಿಡ್ ಕೇರ್‌ಸೆಂಟರ್ ಕ್ಲೋಸ್

    ನೆಲಮಂಗಲ: ಕೋಟಿ ಕೋಟಿ ಖರ್ಚು ಮಾಡಿ ನಿರ್ಮಾಣ ಮಾಡಿದ್ದ ಕೋವಿಡ್ ಕೇರ್ ಸೆಂಟರ್ ಬಾಗಿಲು ಮುಚ್ಚಿದೆ. ಸುಮಾರು 10,100 ಹಾಸಿಗೆ ಎಂದು ಹೇಳಿ ಪ್ರಾರಂಭವಾಗಿದ್ದ ದೇಶದ ಅತಿದೊಡ್ಡ ಕೇರ್ ಸೆಂಟರ್ ಇದೀಗ ಖಾಲಿಯಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಇದೀಗ ಖಾಲಿ ಖಾಲಿ ವಾತಾವರಣ ಕಂಡಿದೆ. ದೇಶದ ಅತಿ ದೊಡ್ಡ ಕೋವಿಡ್ ಕೇರ್ ಸೆಂಟರ್ ಎಂದೇ ಬಿಂಬಿಸಿದ್ದ ಕೇರ್ ಸೆಂಟರ್ ಕೆಲವೇ ತಿಂಗಳಲ್ಲಿ ಕ್ಲೋಸ್ ಆಗಿದೆ. ಕೇರ್ ಸೆಂಟರ್ ನಲ್ಲಿ ರೋಗಿಗಳು ಇಲ್ಲ, ವೈದ್ಯರು ಇಲ್ಲ ದೇಶದ ಅತಿದೊಡ್ಡ ಕೇರ್ ಸೆಂಟರ್ ಖಾಲಿಯಾಗಿದೆ.

    ನೆಲಮಂಗಲ ಸಮೀಪದ ಮಾದವಾರದ ಬಿಐಇಸಿ ಕೋವಿಡ್ ಕೇರ್ ಸೆಂಟರ್ ಇನ್ನೂ ಕೇವಲ ಹೆಸರಿಗೆ ಮಾತ್ರವಾಗಿದೆ. ಎ ಸಿಂಪ್ಟಮ್ಸ್ ಇರೋ ಕೋವಿಡ್ ರೋಗಿಗಳ ಚಿಕಿತ್ಸೆಗೆ ತೆರೆಯಲಾಗಿದ್ದ ಅತಿದೊಡ್ಡ ಕೇರ್ ಸೆಂಟರ್ ಇದಾಗಿತ್ತು. ಇದೀಗ ಯಾರೂ ಸೆಂಟರ್‍ಗೆ ಸೋಂಕಿತರು ಬಾರದಿರೋ ಎಂಬ ನೆಪವೊಡ್ಡಿ ಕ್ಲೋಸ್ ಮಾಡಿದ್ದಾರೆ.

    ಕೋವಿಡ್ ಕೇರ್ ಸೆಂಟರ್‍ನಲ್ಲಿರೋ ವಸ್ತುಗಳನ್ನ ರಾಜ್ಯದ ವಿವಿಧ ಇಲಾಖೆಗೆ ಶಿಫ್ಟ್ ಆಗಿದ್ದು, ಈಗಾಗಲೇ ರಾಜ್ಯ ಸರ್ಕಾರದಿಂದ ಖರೀದಿ ಮಾಡಿದ್ದ ವಸ್ತುಗಳ ಸ್ಥಳಾಂತರವಾಗಿದೆ. ಇತ್ತ ಸಮಾಜಕಲ್ಯಾಣ ಇಲಾಖೆ ಹಾಸ್ಟೆಲ್, ತೋಟಗಾರಿಕೆ ವಿವಿ ಹಾಸ್ಟೆಲ್, ಜಿಕೆವಿಕೆ ಹಾಗೂ ಇತರೆ ಆಸ್ಪತ್ರೆಗೆ ಹಸ್ತಾಂತರ ಮಾಡಲಾಗಿದೆ ಎನ್ನಲಾಗಿದೆ. ಕೇರ್ ಸೆಂಟರ್ ನ ಜವಬ್ದಾರಿ ಹೊತ್ತಿದ್ದ ಬಿಬಿಎಂಪಿ ಇಂದು ಬಿಐಇಸಿಗೆ ಜಾಗ ಇಂದು ಅಧಿಕೃತವಾಗಿ ಜಾಗ ಖಾಲಿ ಮಾಡಕೊಡಲಿದೆ.

  • ಜೀವ ಹೋಗ್ತಿದೆ ಅಂದ್ರೂ ಡೋಂಟ್‍ಕೇರ್ – ಸೋಂಕಿತರಿಗೆ ಆಕ್ಸಿಜನ್ ನೀಡಲು ಆರ್ಡರ್ ಬರ್ಬೇಕಂತೆ

    ಜೀವ ಹೋಗ್ತಿದೆ ಅಂದ್ರೂ ಡೋಂಟ್‍ಕೇರ್ – ಸೋಂಕಿತರಿಗೆ ಆಕ್ಸಿಜನ್ ನೀಡಲು ಆರ್ಡರ್ ಬರ್ಬೇಕಂತೆ

    – ಕೋವಿಡ್ ಕೇರ್ ಸೆಂಟರ್ ಸಿಬ್ಬಂದಿ ಚೆಲ್ಲಾಟ

    ನೆಲಮಂಗಲ: ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್‍ನಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಉಸಿರಾಟ ತೊಂದರೆ ಇದ್ದರೂ ಆಂಬುಲೆನ್ಸ್ ಗೆ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪವೊಂದು ಕೇಳಿಬಂದಿದೆ.

    ನೆಲಮಂಗಲದ ಮಾದವಾರದಲ್ಲಿರುವ ಬಿಐಇಸಿ ಕೋವಿಡ್ ಕೇರ್ ಸೆಂಟರ್‍ನಲ್ಲಿದ್ದ ಸೋಂಕಿತರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ. ಆದರೆ ಸೋಂಕಿತರಿಗೆ ಕೋವಿಡ್ ಕೇರ್ ಸೆಂಟರ್‍ನಲ್ಲಿ ಆಕ್ಸಿಜನ್ ವ್ಯವಸ್ಥೆ ಇಲ್ಲ. ಗಂಟೆಗಟ್ಟಲೇ ಕಾದರೂ ಸ್ಥಳಕ್ಕೆ ಅಂಬುಲೆನ್ಸ್ ಬರಲಿಲ್ಲ. ಅಲ್ಲದೆ ಉಸಿರು ಹೋಗ್ತಿದೆ ಅಂದರೂ ಇಲ್ಲಿ ಡೋಂಟ್ ಕೇರ್ ಎಂದಿದ್ದಾರೆ. ಉಸಿರಾಡಲು ಆಗ್ತಿಲ್ಲ ಅಂತ ಗೋಗರೆದರೂ ಸಿಬ್ಬಂದಿ ಮಾತ್ರ ಫೋನ್‍ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ.

    ಇನ್ನು ಅಂಬುಲೆನ್ಸ್ ಬಂದರೂ ಬಿಬಿಎಂಪಿ ಅಧಿಕಾರಿಗಳು ಆಕ್ಸಿಜನ್ ವ್ಯವಸ್ಥೆ ನೀಡಿಲ್ಲ. ಈ ಮೂಲಕ ಕೊರೊನಾ ಸೋಂಕಿತರಿಗೆ ಇಲ್ಲ ಆಕ್ಸಿಜನ್ ವ್ಯವಸ್ಥೆ ಸಿಗುತ್ತಿಲ್ಲ. ಎಲ್ಲಾ ವ್ಯವಸ್ಥೆ ನೀಡುವ ಭರವಸೆಯನ್ನು ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಅಧಿಕಾರಿಗಳು ನೀಡಿದ್ದರು. ಆದರೆ ಗಂಟೆಗಟ್ಟಲೆ ಕಾದರೂ ಆಕ್ಸಿಜನ್ ವ್ಯವಸ್ಥೆ ನೀಡಿಲ್ಲ.

    ಪಬ್ಲಿಕ್ ಟಿವಿಗೆ ವಿಡಿಯೋ ಮಾಡಿ ರಕ್ಷಣೆಗೆ ನಿಲ್ಲುವಂತೆ ರಾಜ್ಯ ಸರ್ಕಾರದ ವಿರುದ್ಧ ಸೋಂಕಿತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಂಬುಲೆನ್ಸ್ ಇದ್ದರೂ ಆಸ್ಪತ್ರೆಗೆ ದಾಖಲಿಸುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಸೋಂಕಿತರು ಆರೋಪಿಸಿದ್ದಾರೆ.

    ಆಕ್ಸಿಜನ್ ಸಮಸ್ಯೆ ಇದ್ರೆ ಅಧಿಕಾರಿಗಳು ಬರಬೇಕು. ಅವರು ಹೇಳಿದರೆ ಮಾತ್ರ ನಾವು ಸಿದ್ಧ ಎಂದು ಸಿಬ್ಬಂದಿ ಹೇಳಿದ್ದಾರೆ. ಹಾಗಾದರೆ ರೋಗಿಯ ಜೀವಕಿಂತ ಅಧಿಕಾರಿಗಳ ಆದೇಶ ಮುಖ್ಯನಾ?. ರೋಗಿಯ ಜೀವ ಉಳಿಸಲು ಅಧಿಕಾರಿಗಳ ಆದೇಶ ಮುಖ್ಯವಾಯಿತಾ ಎಂದು ಸಾರ್ವಜನಿಕರು ಕಿಡಿಕಾರುತ್ತಿದ್ದಾರೆ.

  • ಕೋವಿಡ್ ಕೇರ್ ಸೆಂಟರ್‌ಗೆ ವೈದ್ಯರು ಬರ್ತಿಲ್ಲ, ಬಿಸಿ ನೀರು ಕೊಡ್ತಿಲ್ಲ: ಸೋಂಕಿತರು ಪ್ರತಿಭಟನೆ

    ಕೋವಿಡ್ ಕೇರ್ ಸೆಂಟರ್‌ಗೆ ವೈದ್ಯರು ಬರ್ತಿಲ್ಲ, ಬಿಸಿ ನೀರು ಕೊಡ್ತಿಲ್ಲ: ಸೋಂಕಿತರು ಪ್ರತಿಭಟನೆ

    ಚಾಮರಾಜನಗರ: ಕೋವಿಡ್ ಕೇರ್ ಸೆಂಟರ್‌ನಲ್ಲಿ ಅವ್ಯವಸ್ಥೆ ವಿರೋಧಿಸಿ ಕೊರೊನಾ ಸೋಂಕಿತರು ಪ್ರತಿಭಟನೆ ನಡೆಸಿ ಸಿಬ್ಬಂದಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

    ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಐದು ದಿನಗಳ ಕಾಲ ಚಿಕಿತ್ಸೆ ನಂತರ ಮೆಡಿಕಲ್ ಕಾಲೇಜಿನಲ್ಲಿರುವ ಕೋವಿಡ್ ಕೇರ್ ಸೆಂಟರ್‍ಗೆ ಸ್ಥಳಾಂತರಿಗೊಳಿಸಲಾಗಿದೆ. ಆದರೆ ಇಲ್ಲಿ ಇದೀಗ ಸೋಂಕಿತರು ಪ್ರತಿಭಟನೆ ನಡೆಸಿದ್ದಾರೆ.

    ನಾಲ್ಕೈದು ದಿನಗಳಿಂದ ಕೊರೊನಾ ಕೇರ್ ಸೆಂಟರ್‍ಗೆ ವೈದ್ಯರು ಬರುತ್ತಿಲ್ಲ, ಯಾವ ತಪಾಸಣೆಯನ್ನೂ ಮಾಡುತ್ತಿಲ್ಲ. ಬಿಸಿ ನೀರು ಕೊಡುತ್ತಿಲ್ಲ. ಅಲ್ಲದೆ ಕೇರ್ ಸೆಂಟರ್ ನಲ್ಲಿ ಅಶುಚಿತ್ವ ತಾಂಡವಾಡುತ್ತಿದೆ. ಸಿಬ್ಬಂದಿ ಒರಟಾಗಿ ವರ್ತಿಸುತ್ತಾರೆ ಎಂದು ಆರೋಪಿಸಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

    ಎರಡನೇ ಬಾರಿ ಸ್ವ್ಯಾಬ್ ಟೆಸ್ಟ್ ಮಾಡದೆ ಡಿಸ್ಚಾರ್ಜ್ ಮಾಡಲಾಗುತ್ತಿದೆ ಎಂದು ಕೂಡ ಸೋಂಕಿತರು ಆರೋಪಿಸಿದ್ದಾರೆ.