Tag: Covid Guidelines

  • ಕೋವಿಡ್‌ ಕೇಸ್‌ ಹೆಚ್ಚಳ ಬೆನ್ನಲ್ಲೇ ಶಾಲೆಗಳಿಗೆ ಹೊಸ ಮಾರ್ಗಸೂಚಿ ರಿಲೀಸ್‌

    ಕೋವಿಡ್‌ ಕೇಸ್‌ ಹೆಚ್ಚಳ ಬೆನ್ನಲ್ಲೇ ಶಾಲೆಗಳಿಗೆ ಹೊಸ ಮಾರ್ಗಸೂಚಿ ರಿಲೀಸ್‌

    ಬೆಂಗಳೂರು: ಕೊರೊನಾ (Corona) ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಅಲರ್ಟ್‌ ಆಗಿದ್ದು, ಶಾಲೆಗಳಿಗೆ ಹೊಸ ಮಾರ್ಗಸೂಚಿ (Covid Guidelines For Schools) ಬಿಡುಗಡೆ ಮಾಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

    ಶಾಲೆಗಳಿಗೆ ಹೊಸ ಮಾರ್ಗಸೂಚಿಯಲ್ಲಿ ಏನಿದೆ?
    * ಮಕ್ಕಳಿಗೆ ನೆಗಡಿ, ಜ್ವರ, ಕೆಮ್ಮು ಇದ್ರೆ ಶಾಲೆಗೆ ಕಳುಹಿಸದೇ ವೈದ್ಯರ ಸಲಹೆ ಪಡೆದುಕೊಂಡು ಸೂಕ್ತ ಚಿಕಿತ್ಸೆ, ಆರೈಕೆ ನೀಡಬೇಕು
    * ಜ್ವರ ಸಂಪೂರ್ಣ ಗುಣಮುಖವಾದ ಬಳಿಕ ಮಕ್ಕಳನ್ನ ಶಾಲೆಗೆ ಕಳಿಸಬೇಕು
    * ಶಾಲೆಗೆ ಬಂದ ನಂತ್ರ ಮಕ್ಕಳಲ್ಲಿ ಜ್ವರ ಶೀತ ಗುಣಲಕ್ಷಣಗಳು ಕಂಡುಬಂದ್ರೇ ತಕ್ಷಣ ಪೋಷಕರ ಗಮನಕ್ಕೆ ತಂದು ಮನೆಗೆ ಕಳುಹಿಸಬೇಕು
    * ಶಾಲಾ ಶಿಕ್ಷಕರಿಗೆ ಸಿಬ್ಬಂದಿಗೆ ಜ್ವರ, ಶೀತದಂತಹ ಲಕ್ಷಣ ಕಂಡುಬಂದ್ರೆ ಸೂಕ್ತ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು.
    * ಸ್ಯಾನಿಟೈಸ್ ಬಳಕೆ, ಕೈಗಳ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳೋದು ಸೇರಿದಂತೆ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನ ಶಾಲೆಯಲ್ಲಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

    ಬೆಂಗಳೂರಿನಲ್ಲಿ 150ರ ಗಡಿ ದಾಟಿದ ಕೊರೊನಾ ಪ್ರಕರಣ
    ರಾಜ್ಯದಲ್ಲಿ ಕೋವಿಡ್ ಕೇಸ್ ಗಣನೀಯವಾಗಿ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಆಕ್ಟೀವ್ ಕೇಸ್ 234 ಇದ್ದು, ಅದರಲ್ಲಿ ಬೆಂಗಳೂರು ಒಂದರಲ್ಲೇ ಬರೋಬ್ಬರಿ 150ಕ್ಕೂ ಹೆಚ್ಚು ಆಕ್ಟೀವ್ ಕೇಸ್‌ಗಳು ದಾಖಲಾಗಿದೆ. ಬೆಂಗಳೂರು ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗುತ್ತಿದೆ. ಐಎಲ್ ಮತ್ತು ಸಾರಿ ಕೇಸ್‌ಗಳಿಗೆ ಕಡ್ಡಾಯವಾಗಿ ಟೆಸ್ಟ್ ಮಾಡಲು ಸರ್ಕಾರ ಸೂಚಿಸಿದೆ. ಇನ್ನು ಬೆಂಗಳೂರಿನಲ್ಲಿ ಕೇಸ್ ಏರಿಕೆ ಆಗುತ್ತಿದ್ದು, ಕೋವಿಡ್ ನಿಯಂತ್ರಣ ಜೊತೆಗೆ ಡೆಂಗ್ಯೂ ಕಾಪಾಡಿಕೊಳ್ಳೋದು ಸವಾಲಾಗಿದೆ. ಮಳೆಗಾಲ ಆಗಿರುವುದರಿಂದ ಬಿಬಿಎಂಪಿ ಆರೋಗ್ಯ ವಿಭಾಗ ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.

    ಬೆಂಗಳೂರಿನಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ವು ಐಎಲ್‌ಐ, ಸಾರಿ ಕೇಸ್‌ಗಳು ಇವೆ ಎಂಬ ಮಾಹಿತಿ ಇದೆ. ಬಿಬಿಎಂಪಿಯ ಎಂಟು ವಲಯ ಮಹಾದೇವಪುರ, ಯಲಹಂಕ, ಪೂರ್ವ ವಲಯ, ಪಶ್ಚಿಮ ವಲಯ ಮತ್ತು ಬೆಂಗಳೂರು ದಕ್ಷಿಣದಲ್ಲೂ ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಮತ್ತು ಬೇರೆ ಬೇರೆ ಖಾಯಿಲೆಗಳಿಂದ ಬಳಲುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಲು ಪಾಲಿಕೆ ಮುಂದಾಗಿದೆ. ಆದರೆ ಮಹಾದೇವಪುರ ಬೆಂಗಳೂರು ದಕ್ಷಿಣ ವಲಯ ಜೊತೆಗೆ ಪೂರ್ವ ವಲಯದಲ್ಲಿ ಕೇಸ್ ಏರಿಕೆ ಆಗುತ್ತಿದೆ. ಪೂರ್ವ ವಲಯದಲ್ಲಿ 30ರ ಗಡಿ ದಾಟಿದೆ. ಮಹಾದೇವಪುರದಲ್ಲಿ ಆಕ್ಟೀವ್ ಕೇಸ್ 30ರ ಗಡಿ ದಾಟಿದೆ ಜೊತೆಗೆ ದಕ್ಷಿಣ ವಲಯದಲ್ಲೂ ಕೇಸ್ ಏರಿಕೆ ಆಗಿದೆ.

    ಇನ್ನೂ ಡೆಂಗ್ಯೂ ಜೊತೆಗೆ ಕೋವಿಡ್ ಕಂಟ್ರೋಲ್ ಮಾಡಲು ಬಿಬಿಎಂಪಿ ಹಲವು ಕ್ರಮ ವಹಿಸುತ್ತಿದೆ. ಐಎಲ್‌ಐ ಮತ್ತು ಸಾರಿ ಕೇಸ್‌ಗಳ ಬಗ್ಗೆ ಎಚ್ಚರಿಕೆ ವಹಿಸುತ್ತಿದೆ.

    ಕೋವಿಡ್ ಲಕ್ಷಣಗಳಿದ್ದರೆ ಏನು ಮಾಡಬೇಕು?
    * ಐಎಲ್‌ಐ, ಸಾರಿ ರೋಗಲಕ್ಷಣಗಳಿದ್ದರೆ ಟೆಸ್ಟ್ ಮಾಡಿಸಬೇಕು.
    * ಆರೋಗ್ಯದಲ್ಲಿ ಏರುಪೇರಾದ್ರೆ ವೈದ್ಯರನ್ನ ಭೇಟಿ ಮಾಡಬೇಕು.
    * ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮಾವಳಿ ಪಾಲಿಸಬೇಕು.
    * ಮಾಸ್ಕ್ ಹಾಕಬೇಕು, ಸ್ಯಾನಿಟೈಸೇಷನ್ ಮಾಡಿಕೊಳ್ಳಬೇಕು.
    * ಬೇರೆ ಬೇರೆ ಖಾಯಿಲೆಯಿಂದ ಬಳಲುತ್ತಿದ್ದರೆ ಚಿಕಿತ್ಸೆ ಅಗತ್ಯ.

  • ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕೊರೊನಾ ಕರಿನೆರಳು – ದೇವಾಲಯಗಳಿಗೆ ಟಫ್ ರೂಲ್ಸ್?

    ಬೆಂಗಳೂರು: ಚೀನಾದಲ್ಲಿ ಡೆಡ್ಲಿ ಕೊರೊನಾ (Corona Virus) ರೂಪಾಂತರಿಯ ಅಬ್ಬರ ಜೋರಾಗಿದ್ದು ಚೀನಾ ಅಕ್ಷರಶಃ ನಲುಗಿ ಹೋಗಿದೆ. ಈಗಾಗಲೇ ಭಾರತದಲ್ಲೂ (India) ಚೀನಾದ ಬಿಎಫ್.7 ಉಪತಳಿ (BF7 Variant) ಪತ್ತೆಯಾಗಿದ್ದು, ರಾಜ್ಯದಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರ್ಕಾರ (Government Of Karnataka) ಹಲವು ಕ್ರಮಗಳನ್ನ ಜಾರಿಗೊಳಿಸಿದೆ.

    ಮುಂದಿನ 3 ತಿಂಗಳು ಅಲರ್ಟ್ ಆಗಿರಲು ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳನ್ನ ಎಚ್ಚರಿಸಿದ್ದು, ನಮ್ಮ ರಾಜ್ಯವೂ ಸಕಲ ಸಿದ್ಧತೆ ಮಾಡಿಕೊಳ್ತಿದೆ. ಈ ಬಾರಿ ಹೊಸ ವರ್ಷಕ್ಕೆ ಮಾತ್ರವಲ್ಲದೇ ವೈಕುಂಠ ಏಕಾದಶಿ ಸಂಕ್ರಾಂತಿ ಸಂಭ್ರಮದ ಮೇಲೂ ಕೊರೊನಾ ಕರಿನೆರಳು ಆವರಿಸಿದೆ. ಪ್ರತಿ ವಾರವೂ ಕೊರೊನಾ ಮಾರ್ಗಸೂಚಿಗಳ (Covid Guidelines) ಅವಲೋಕನ ಮಾಡಿಕೊಳ್ಳಲಾಗುತ್ತಿದ್ದು, ಕೊಂಚ ಕೇಸ್ ಏರಿಕೆಯಾದ್ರೂ ಮುಂದಿನ 90 ದಿನಗಳಿಗೆ ನಿಯಮಗಳು ನಿರ್ಣಾಯಕವಾಗಲಿದೆ. ಹೀಗಾಗಿ ಆರೋಗ್ಯ ಇಲಾಖೆ (Health Department) ಎಚ್ಚರಿಕೆಯ ಹೆಜ್ಜೆಗಳನ್ನಿಡುತ್ತಿದೆ. ಇದನ್ನೂ ಓದಿ: ಶೂಟಿಂಗ್ ಮುಗಿಸಿದ ‘ಆಪರೇಷನ್ ಡಿ’ ಸಿನಿಮಾ

    ಧಾರ್ಮಿಕ ಕಾರ್ಯಕ್ರಮಗಳ ಮೇಲೂ ನಿಗಾ: ರಾಜ್ಯ ಸರ್ಕಾರ ಹೊಸ ವರ್ಷಕ್ಕೆ ಮಾತ್ರವಲ್ಲದೇ ಧಾರ್ಮಿಕ ಕಾರ್ಯಕ್ರಮಗಳಲ್ಲಿಯೂ ಜನ ಸೇರುವುದನ್ನು ಕಡಿವಾಣ ಹಾಕಲು ದೇವಸ್ಥಾನಗಳಿಗೂ ಕೆಲವು ನಿಯಮಗಳನ್ನು ಜಾರಿಗೊಳಿಸಿದೆ. ಇದನ್ನೂ ಓದಿ: ವಿವಾಹಿತೆಯೊಂದಿಗೆ ಪ್ರೇಮ- ಹೋಟೆಲ್‌ನಲ್ಲಿ ರಾತ್ರಿ ತನ್ನೊಂದಿಗೆ ಇರಲು ನಿರಾಕರಿಸಿದ್ದಕ್ಕೆ ಕೊಲೆ

    ಕ್ರಮಗಳು ಏನೇನು ಬರಲಿವೆ?: ವೈಕುಂಠ ಏಕಾದಶಿ ದಿನ ಭಕ್ತರು ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ ನೀಡುವುದು, ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಅಳವಡಿಸುವುದು, ಜನಜಂಗುಳಿ ತಡೆಯಲು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಹಾಗೂ ಸಂಕ್ರಾಂತಿ ಹಬ್ಬಕ್ಕೆ (Sankranti Festival) ಜನಜಂಗುಳಿ ತಡೆಯಲು ಈಗಿನಿಂದಲೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.

    Live Tv
    [brid partner=56869869 player=32851 video=960834 autoplay=true]

  • ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

    ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

    ನವದೆಹಲಿ: ದೆಹಲಿ, ಗುಜರಾತ್, ಉತ್ತರಪ್ರದೇಶ, ತಮಿಳುನಾಡು, ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಿಯಂತ್ರಿಸಲು ಅಧಿಕಾರಿಗಳು ನಾನಾ ರೀತಿಯ ಕ್ರಮ ಕೈಗೊಳ್ಳಲು ಮುಂದಾಗುತ್ತಿದ್ದಾರೆ. ಕಠಿಣ ನಿಯಮಗಳಿಗೂ ಬಗ್ಗದ ಜನರಿಗೆ ಪೊಲೀಸರು ಹಾಗೂ ಅಧಿಕಾರಿಗಳು ದಂಡದ ಮೂಲಕ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ.

    Chitradurga mask Awareness

    ಕೊರೊನಾ ನಿಯಂತ್ರಿಸುವ ಸಲುವಾಗಿ ಈಗಾಗಲೇ ಬಹುತೇಕ ರಾಜ್ಯಗಳಲ್ಲಿ ಮಾಸ್ಕ್, ಸಾರ್ವಜನಿಕ ಅಂತರ ಪಾಲನೆಯನ್ನು ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ, ಚಂಡೀಗಢ ಮೊದಲಾದ ರಾಜ್ಯಗಳಲ್ಲೂ ಇಂದಿನಿಂದ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ. ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ, ಸಂಚಾರದ ವೇಳೆ ಉಗುಳುವುದು ಕಂಡು ಬಂದರೆ ಅಂಥವರಿಗೆ ದಂಡದ ಬಿಸಿ ಮುಟ್ಟಿಸುವಂತೆಯೂ ಸರ್ಕಾರ ಸೂಚನೆ ನೀಡಿದೆ. ಅದರಂತೆ ಹಲವು ರಾಜ್ಯಗಳು ಹಲವು ರೀತಿಯಲ್ಲಿ ದಂಡ ಶುಲ್ಕವನ್ನು ನಿಗದಿಮಾಡಿವೆ. ಇದನ್ನೂ ಓದಿ: ಉಕ್ರೇನ್ ರಿಟರ್ನ್ ವಿದ್ಯಾರ್ಥಿಗಳು ಶೀಘ್ರವೇ ಗುಡ್ ನ್ಯೂಸ್: ಸುಧಾಕರ್

    mask Awareness

    ನಿಯಮ ಉಲ್ಲಂಘಿಸುವವರಿಗೆ ಕರ್ನಾಟಕದಲ್ಲಿ ಪ್ರತಿ ಅಪರಾಧಕ್ಕೆ 250 ರೂ., ಗೋವಾದಲ್ಲಿ 200 ರೂ., ಆಂಧ್ರಪ್ರದೇಶದಲ್ಲಿ 100 ರೂ. ಇದ್ದರೆ, ಒಡಿಶಾ, ಗುಜರಾತ್, ಉತ್ತರಖಾಂಡ, ತಮಿಳುನಾಡು, ತೆಲಂಗಾಣ ಮೊದಲಾದ ರಾಜ್ಯಗಳಲ್ಲಿ 500 ರಿಂದ 5 ಸಾವಿರ ರೂ. ವರೆಗೂ ದಂಡದ ಮೊತ್ತವನ್ನು ನಿಗದಿ ಮಾಡಲಾಗಿದೆ. ಅದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. ಇದನ್ನೂ ಓದಿ:  ಆನೆ ದಂತದಲ್ಲಿ ಚೆಸ್ ಪಾನ್ ಕೆತ್ತನೆ – ಮಾರಾಟ ಮಾಡುವಾಗ ಸಿಕ್ಕಿಬಿದ್ದ 

    Social distance

    ಯಾವ ರಾಜ್ಯದಲ್ಲಿ ಎಷ್ಟು ಶುಲ್ಕ? (ರೂಪಾಯಿಗಳಲ್ಲಿ)
    ಕರ್ನಾಟಕ- 250
    ಒಡಿಶಾ- 2 ರಿಂದ 5 ಸಾವಿರ
    ಉತ್ತರಖಾಂಡ್- 100 ರಿಂದ 1000
    ದೆಹಲಿ- 500 (ಪ್ರತಿ ಅಪರಾಧಕ್ಕೆ)
    ತೆಲಂಗಾಣ- 1000
    ತಮಿಳುನಾಡು- 500
    ಮಧ್ಯಪ್ರದೇಶ – 500
    ರಾಜಾಸ್ಥಾನ- 500
    ಗೋವಾ – 200
    ಗುಜರಾತ್- 1000
    ಆಂಧ್ರಪ್ರದೇಶ- 100
    ಚಂಡೀಗಢ- 500
    ಛತ್ತಿಸ್‌ಗಢ- 500
    ಹರಿಯಾಣ- 500

  • ಸಂಚಾರದ ವೇಳೆ ಉಗುಳಿದರೂ ಬೀಳುತ್ತೆ ದಂಡ: ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಸಂಚಾರದ ವೇಳೆ ಉಗುಳಿದರೂ ಬೀಳುತ್ತೆ ದಂಡ: ಕೋವಿಡ್ ಹೊಸ ಮಾರ್ಗಸೂಚಿಯಲ್ಲಿ ಏನಿದೆ?

    ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಾಥಮಿಕ ಹಂತದಲ್ಲೇ ಕಡಿವಾಣ ಹಾಕುವ ಸಲುವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಕೋವಿಡ್ ನೂತನ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ.

    covid guidelines

    ರಾಜ್ಯದಲ್ಲಿ ಫೆ.28 ರಿಂದ ಕೋವಿಡ್ ನಿರ್ಬಂಧಗಳನ್ನು ತೆಗೆದುಹಾಕಲಾಗಿತ್ತು. ಕೋವಿಡ್ ಕಡಿಮೆಯಾದ ಹಿನ್ನೆಲೆಯಲ್ಲಿ, ಸಾರ್ವಜನಿಕರ ದೈನಂದಿನ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡಲಾಗಿತ್ತು. ಆದರೆ, ಪ್ರಸ್ತುತ ಕರ್ನಾಟಕ, ದೆಹಲಿ, ಹರಿಯಾಣ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಕೋವಿಡ್ ನೂತನ ಮಾರ್ಗಸೂಚಿಯನ್ನು ಪಾಲಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ದೆಹಲಿ ಶಾಲೆಯ ತರಗತಿಯಲ್ಲಿ ಹಾಜರಾಗಿ ಪಾಠ ಕೇಳಿದ ಕೇಜ್ರಿವಾಲ್, ಭಗವಂತ್ ಮಾನ್

    covid

    ರಾಜ್ಯ ಕೋವಿಡ್-19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸಿನಂತೆ ಸಲಹೆ ಆದೇಶ ಹೊರಡಿಸಲಾಗಿದ್ದು, ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾರ್ವಜನಿಕ ಅಂತರ ಪಾಲನೆ ಮಾಡಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಸಂಚಾರದ ವೇಳೆ ಉಗುಳುವುದನ್ನು ನಿರ್ಬಂಧಿಸಬೇಕು. ಒಂದು ವೇಳೆ ಉಗುಳುವುದು ಕಂಡರೆ ಸ್ಥಳೀಯ ಆಡಳಿತಾಧಿಕಾರಿಗಳು ದಂಡ ವಿಧಿಸುವಂತೆ ನಿಯಮ ಜಾರಿಗೊಳಿಸಬೇಕು ಎಂದು ಪಿ.ರವಿ ಕುಮಾರ್ ಆದೇಶ ಹೊರಡಿಸಿದ್ದಾರೆ.

  • ಕೋವಿಡ್ ಮಾರ್ಗಸೂಚಿಯನ್ನೇ ತೆಗೆದ ನಾರ್ವೆ

    ಕೋವಿಡ್ ಮಾರ್ಗಸೂಚಿಯನ್ನೇ ತೆಗೆದ ನಾರ್ವೆ

    ಓಸ್ಲೊ: ಪ್ರಪಂಚದಾದ್ಯಂತ ಕೋವಿಡ್ ರೂಪಾಂತರಿ ಓಮಿಕ್ರಾನ್ ಉಲ್ಬಣಗೊಳ್ಳುತ್ತಿದ್ದರೂ ನಾರ್ವೆ ದೇಶದಲ್ಲಿ ಮಾತ್ರ ಕೋವಿಡ್ ಕಟ್ಟು ನಿಟ್ಟಿನ ಮಾರ್ಗಸೂಚಿಗಳನ್ನು ತೆಗೆದು ಹಾಕಿದೆ.

    ನಾರ್ವೆ ಸರ್ಕಾರ ಕೋವಿಡ್-19 ತಡೆಗಟ್ಟಲು ವಿಧಿಸಿದ್ದ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದು ಹಾಕಿದೆ. ಇದರ ಪ್ರಕಾರ ಅಲ್ಲಿನ ಜನರು ಇನ್ನು ಮುಂದೆ ಸಾಮಾಜಿಕ ಅಂತರ ಹಾಗೂ ಮಾಸ್ಕ್‌ಗಳನ್ನು ಧರಿಸುವ ಅಗತ್ಯ ಇರುವುದಿಲ್ಲ. ಇದನ್ನೂ ಓದಿ: ಒಟ್ಟು 3,202, ಬೆಂಗ್ಳೂರಲ್ಲಿ 1,293 ಕೇಸ್ – ಪಾಸಿಟಿವಿಟಿ ರೇಟ್ ಶೇ.2.95ಕ್ಕೆ ಇಳಿಕೆ

    ಸಾಮಾಜಿಕ ಅಂತರದ ನಿಯಮವನ್ನು ನಾವು ತೆಗೆದು ಹಾಕುತ್ತಿದ್ದೇವೆ. ಇನ್ನು ಮುಂದೆ ನಾವು ಮೊದಲಿನಂತೆ ಜೀವಿಸಬಹುದು. ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ನಾವಿನ್ನು ಬೆರೆಯಬಹುದು. ಬಸ್ಸು, ರೈಲು ಹಾಗೂ ದೋಣಿಯಲ್ಲಿ ನಿಶ್ಚಿಂತರಾಗಿ ಪ್ರಯಾಣಿಸಬಹುದು ಎಂದು ನಾರ್ವೆ ಪ್ರಧಾನ ಮಂತ್ರಿ ಜೊನಾಸ್ ಗಹರ್ ಸ್ಟೋರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರತಿ ಜಿಲ್ಲೆಗಳಲ್ಲೂ ಮಹಿಳಾ ಪೊಲೀಸ್ ಠಾಣೆ ಇರಬೇಕು – ಸಂಸದೀಯ ಸಮಿತಿ

    ಕೋವಿಡ್ ಸಾಂಕ್ರಾಮಿಕ ಇನ್ನೂ ಮುಗಿದಿಲ್ಲ. ಲಸಿಕೆ ಹಾಕಿಸಿಕೊಳ್ಳದವರು ಸಾಮಾಜಿಕ ಅಂತರ ಪಾಲಿಸುವುದನ್ನು ಮುಂದುವರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಅಸಾಧ್ಯವಾದಾಗ ಮಾಸ್ಕ್ ಧರಿಸುವುದು ಅಗತ್ಯ ಎಂದು ಒತ್ತಿ ಹೇಳಿದ್ದಾರೆ.

  • 5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ

    5 ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಕಡ್ಡಾಯವಲ್ಲ: ಕೇಂದ್ರ

    ನವದೆಹಲಿ: ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬೇಡ, 5 ವರ್ಷದವರೆಗೆ ಮಾಸ್ಕ್ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

    ಮಕ್ಕಳಿಗೆ ಸಂಬಂಧಿಸಿದಂತೆ ಕೇಂದ್ರ  ಸರ್ಕಾರ ಕೋವಿಡ್‌ ಮಾಗ ಸೂಚಿಯನ್ನು ಹೊರಡಿಸಿದೆ. 5 ವರ್ಷ ಕ್ಕಿಂತ ಕೆಳಗಿನ ಮಕ್ಕಳಿಗೆ ಮಾಸ್ಕ್‌ ಅಗತ್ಯವಿಲ್ಲ. 6ರಿಂದ 11 ವಷದ ಮಕ್ಕಳಿಗೆ ಅವರ ಸಾಮರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್‌ ಹಾಕಬೇಕು. 12ರಿಂದ 18ವಷದ ಮಕ್ಕಳು ದೊಡ್ಡವರಂತೆ ಮಾಸ್ಕ್‌ ಧರಿಸಬೇಕು ಎಂದು ಸೂಚಿಸಿದೆ.

    ಕೊರೊನಾ, ಓಮಿಕ್ರಾನ್ ಸೋಂಕು ತೀವ್ರತೆ ಎಷ್ಟೇ ಇದ್ದರೂ 18 ವರ್ಷದೊಳಗಿನ ಮಕ್ಕಳಿಗೆ, ಪ್ರತಿಕಾಯ ಸೃಷ್ಟಿಗೆ ಪೂರಕವಾದ ಆ್ಯಂಟಿಬಾಡಿ ಔಷಧಗಳನ್ನು ಬಳಸಬಾರದು ಎಂದು ಕೇಂದ್ರ ಸರ್ಕಾರ ಹೇಳಿದೆ. ಸ್ಟಿರಾಯ್ಡ್ ಅನ್ನು ಬಳಸುವುದಾದರೂ ಅದು 10 ರಿಂದ 14 ದಿನಕ್ಕೆ ಸೀಮಿತವಾಗಿರಬೇಕು. ಮಕ್ಕಳು ಮತ್ತು ಅಪ್ರಾಪ್ತರಿಗೆ ಸಂಬಂಧಿಸಿದಂತೆ ಕೋವಿಡ್ ನಿರ್ವಹಣೆ ಕುರಿತ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.

    ಐದು ವರ್ಷ ಮತ್ತು ಅದಕ್ಕೂ ಕೆಳಗಿನ ವಯಸ್ಸಿನ ಮಕ್ಕಳಿಗೆ ಮಾಸ್ಕ್ ಧರಿಸುವುದನ್ನು ಕಡ್ಡಾಯಪಡಿಸಿಲ್ಲ. 6-11 ವರ್ಷದ ಮಕ್ಕಳು ಮಾಸ್ಕ್ ಬಳಸುವ ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ, ಪೋಷಕರ ಮೇಲ್ವಿಚಾರಣೆಯಲ್ಲಿ ಬಳಸಬಹುದು. 5 ವರ್ಷ ಮೀರಿದವರು,  ವಯಸ್ಕರು ಕಡ್ಡಾಯವಾಗಿ ಧರಿಸುವಂತೆಯೇ ಮಾಸ್ಕ್ ಧರಿಸಬೇಕು ಎಂದು ಹೇಳಿದೆ. ಇದನ್ನೂ ಓದಿ: 1200 ಕೋಟಿ ರೂ. ವೆಚ್ಚದ ಶಿರಾಡಿ ಘಾಟ್ ಚತುಷ್ಪಥ ರಸ್ತೆಗೆ ಕೇಂದ್ರ ಅನುಮೋದನೆ

    ಸೋಂಕಿನ ತೀವ್ರತೆಯನ್ನು ಸೋಂಕಿನ ಲಕ್ಷಣ ಇಲ್ಲದಿರುವುದು, ಸಾಧಾರಣ, ಗಮನಿಸಬೇಕಾದುದು ಮತ್ತು ತೀವ್ರವಾದುದು ಎಂದು ವರ್ಗೀಕರಿಸಲಾಗಿದೆ. ಮಾರ್ಗದರ್ಶಿ ಸೂತ್ರಗಳ ಪ್ರಕಾರ, ಕೋವಿಡ್-19 ಸಾಂಕ್ರಾಮಿಕ ರೋಗ. ಇವುಗಳ ನಿರ್ವಹಣೆಯಲ್ಲಿ (antimicrobial) ಆ್ಯಂಟಿಮೈಕ್ರೊಬಯುಲ್‍ಗಳ ಪಾತ್ರ ಇಲ್ಲ ಎಂದು ಹೇಳಿದೆ.

    ಓಮಿಕ್ರಾನ್ ರೂಪಾಂತರ ತಳಿಯ ಕೋವಿಡ್ ಸೋಂಕು ಪ್ರಕರಣ ಏರಿಕೆಯ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯು ಗುರುವಾರ ಕೊರೊನಾ ಮಾರ್ಗಸೂಚಿಗಳನ್ನು ಪರಿಷ್ಕರಿಸಿತು. ಇತರೆ ದೇಶಗಳಿಗೆ ಸಂಬಂಧಿಸಿದ ಅಂಕಿ ಅಂಶಗಳ ಪ್ರಕಾರ, ಓಮಿಕ್ರಾನ್ ಸೋಂಕಿನ ಪರಿಣಾಮ, ತೀವ್ರತೆ ಕಡಿಮೆ ಆಗಿದೆ. ಪ್ರಸ್ತುತ ಏರಿಕೆ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವುದು ಅಗತ್ಯವಾಗಿದೆ.

  • ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂಗೆ ಚಿಂತನೆ

    ಕರ್ನಾಟಕದಲ್ಲಿ ಮತ್ತೆ ನೈಟ್ ಕರ್ಫ್ಯೂಗೆ ಚಿಂತನೆ

    ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ಕೇಸ್‍ಗಳ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ಇತ್ತ ಹೊಸವರ್ಷ ಸನಿಹದಲ್ಲಿದೆ. ಜನ ಹೊಸ ವರ್ಷಾಚರಣೆಗೆಂದು ಗುಂಪುಗೂಡಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುವ ಮುನ್ನಾ ಕರ್ನಾಟಕ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

    ಕೇಂದ್ರ ಸರ್ಕಾರದ ಸೂಚನೆಯ ಬೆನ್ನಲ್ಲೇ ಟಫ್ ರೂಲ್ಸ್ ಜಾರಿಗೆ ಮಹಾರಾಷ್ಟ್ರ ಸರ್ಕಾರ ಮುಂದಾಗಿದ್ದು, ನಿನ್ನೆಯಿಂದ ಟಫ್ ರೂಲ್ಸ್ ಜಾರಿ ಮಾಡಿದೆ. ಹೊಸ ವರ್ಷ, ಮದುವೆ ಸೀಸನ್, ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ನೈಟ್ ಕರ್ಫ್ಯೂ, ನಿಷೇಧಾಜ್ಞೆ ಹೊರಡಿಸಿದೆ. ಜೊತೆಗೆ ಸಭೆ ಸಮಾರಂಭಕ್ಕೆ 100 ರಿಂದ 250 ಜನರಿಗಷ್ಟೇ ಅವಕಾಶ, ಪಬ್ ಬಾರ್‌ಗಳಿಗೆ ಕಠಿಣ ನಿಯಮ ಮತ್ತು ಜಿಮ್, ಥಿಯೇಟರ್‌ಗಳಿಗೆ ಮಹಾ ಸರ್ಕಾರ ಅಂಕುಶ ಹಾಕಿದೆ. ಇದನ್ನೂ ಓದಿ: ಕೋವಿಡ್ ಫೈನ್ – 2 ದಿನಗಳಲ್ಲಿ 1.5 ಕೋಟಿ ರೂ. ಸಂಗ್ರಹ

    ಈಗಾಗಲೇ ಬೆಂಗಳೂರಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷ ಆಚರಣೆಗೆ ಅವಕಾಶ ಇಲ್ಲ. ಹೊಸವರ್ಷಾರಣೆ ದಿನ ಪಬ್, ಬಾರ್‌ಗಳಲ್ಲಿ ವಿಶೇಷ ಕಾರ್ಯಕ್ರಮಕ್ಕೆ ಅವಕಾಶ ನಿರಾಕರಿಸಲಾಗಿದ್ದು, ಎಂಜಿರೋಡ್, ಬ್ರೀಗೆಡ್ ರೋಡ್‍ನಲ್ಲಿ ಸಂಭ್ರಮಾಚರಣೆಗೆ ನಿಷೇಧ ಹೇರುವ ಬಗ್ಗೆ ಸರ್ಕಾರದಿಂದ ಆದೇಶ ಜಾರಿ ಮಾಡಲಾಗುತ್ತೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಬಟ್ಟೆ ಮಾಸ್ಕ್ ಬೇಡ.. ಎನ್95, ಕೆ95 ಮಾಸ್ಕ್‌ಗಳನ್ನೇ ಬಳಸಿ – ತಜ್ಞರ ಸಲಹೆ

    ಈ ನಡುವೆ ಬೆಂಗಳೂರು ಸಹಿತ ರಾಜ್ಯದ್ಯಾಂತ ಡಿ.30 ರಿಂದ ಜ.1ರ ವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲು ಸಿದ್ಧತೆ ಮಾಡಿಕೊಂಡಿದೆ ಎಂದು ಮೂಲಗಳಿಂದ ವರದಿಯಾಗಿದ್ದು, ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

  • ರೆಸಿಡೆನ್ಷಿಯಲ್‌ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ: ಸಚಿವ ಬಿ.ಸಿ.ನಾಗೇಶ್‌

    ರೆಸಿಡೆನ್ಷಿಯಲ್‌ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ: ಸಚಿವ ಬಿ.ಸಿ.ನಾಗೇಶ್‌

    ಬೆಂಗಳೂರು: ರಾಜ್ಯದ ಕೆಲವು ರೆಸಿಡೆನ್ಷಿಯಲ್‌ (ವಸತಿ) ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಯಲ್ಲಿ ಕೊರೊನಾ ಪಾಸಿಟಿವ್‌ ಬಂದಿದೆ. ಮುಂಜಾಗ್ರತೆ ಕ್ರಮವಾಗಿ ರೆಸಿಡೆನ್ಷಿಯಲ್‌ ಶಾಲೆಗಳಿಗೆ ನಾಳೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ತಿಳಿಸಿದ್ದಾರೆ.

    ʼಪಬ್ಲಿಕ್‌ ಟಿವಿʼ ಜೊತೆ ಈ ಕುರಿತು ಮಾತನಾಡಿದ ಅವರು, ಕೆಲವು ವಸತಿ ಶಾಲೆಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಸಂಬಂಧಪಟ್ಟ ಶಾಲೆಗಳ ಆಡಳಿತ ಮಂಡಳಿಗೆ ಸೋಂಕು ನಿಯಂತ್ರಣಕ್ಕೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯ ಸಂಪುಟ ಸಭೆಯಲ್ಲಿ ಬಿಗಿ ನಿಯಮಗಳ ಬಗ್ಗೆ ಚರ್ಚೆ: ಬೊಮ್ಮಾಯಿ

    ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಶಾಲಾ-ಕಾಲೇಜು ಬಂದ್‌ ಮಾಡುವುದಿಲ್ಲ. ಆನ್‌ಲೈನ್‌ ತರಗತಿಗಳಿಂದ ಮಕ್ಕಳ ಶೈಕ್ಷಣಿಕ ಪ್ರಗತಿ ಸುಧಾರಿಸುವುದಿಲ್ಲ. ಆದ್ದರಿಂದ ಶಾಲಾ-ಕಾಲೇಜು ಬಂದ್‌ ಮಾಡುವ ಪ್ರಶ್ನೆಯೇ ಇಲ್ಲ. ಆದರೆ ಶಾಲೆಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

    ಶಾಲಾ-ಕಾಲೇಜು ಬಂದ್‌ ಮಾಡುವುದು ಬೇಡ ಎಂದು ತಜ್ಞರ ಸಮಿತಿ ಹೇಳಿದೆ. ಕೋವಿಡ್‌ ಪರೀಕ್ಷೆಯನ್ನು ಹೆಚ್ಚಿಸಿದ್ದರೂ, ಪಾಸಿಟಿವ್‌ ಪ್ರಕರಣ ಹೆಚ್ಚಾಗಿಲ್ಲ. ಹೀಗಾಗಿ ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೆ ನಿಯಮ ಪಾಲನೆಗೆ ಕ್ರಮಕೈಗೊಳ್ಳುವಂತೆ ಶಾಲೆಗಳಿಗೆ ಸೂಚಿಸುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಜನರು ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ತಿದ್ದಾರೆ: ಕೆ. ಸುಧಾಕರ್

    ಎಷ್ಟೋ ಕಡೆ ನೂರಾರು ಮಕ್ಕಳು ಮಾಸ್ಕ್‌ ಹಾಕಿ ಶಾಲೆಗೆ ಬರುವುದೇ ಇಲ್ಲ. ಇದನ್ನು ನಾನೇ ಗಮನಿಸಿದ್ದೇನೆ. ಪೋಷಕರು ತಮ್ಮ ಮಕ್ಕಳಿಗೆ ತಿಳಿಸಿ ಹೇಳಬೇಕು. ಖಂಡಿತ ಮಕ್ಕಳು ಹೇಳಿದ ಮಾತನ್ನು ಕೇಳುತ್ತಾರೆ. ಡಿ.10ರ ನಂತರ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದಿದ್ದಾರೆ.

  • ಬಿಜೆಪಿ ಜಿಲ್ಲಾಧ್ಯಕ್ಷರ ಅದ್ಧೂರಿ ಹುಟ್ಟುಹಬ್ಬ- ನಡುರಸ್ತೆಯಲ್ಲಿ ಡಿಜೆ ಸಾಂಗ್, ಡ್ಯಾನ್ಸ್

    ಬಿಜೆಪಿ ಜಿಲ್ಲಾಧ್ಯಕ್ಷರ ಅದ್ಧೂರಿ ಹುಟ್ಟುಹಬ್ಬ- ನಡುರಸ್ತೆಯಲ್ಲಿ ಡಿಜೆ ಸಾಂಗ್, ಡ್ಯಾನ್ಸ್

    – ಕುಣಿದು ಕುಪ್ಪಳಿಸಿದ ಅಭಿಮಾನಿಗಳು

    ಹಾಸನ: ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್ ಕೊರೊನಾ ನಿಯಮ ಗಾಳಿಗೆ ತೂರಿ, ರಸ್ತೆಯಲ್ಲಿ ಡಿಜೆ ಸಾಂಗ್ ಹಾಕಿಕೊಂಡು ಮೆರವಣಿಗೆ ಮಾಡುತ್ತಾ ತಮ್ಮ ಅದ್ಧೂರಿ ಹುಟ್ಟುಹಬ್ಬ ಆಚರಿಸಿಕೊಂಡು ಇದೀಗ ಟೀಕೆಗೆ ಗುರಿಯಾಗಿದ್ದಾರೆ.

    ಹಾಸನದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ ಎಂದು ಜಿಲ್ಲಾಡಳಿತ ಶುಕ್ರವಾರ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಆದರೆ ಆಡಳಿತ ಪಕ್ಷವಾದ ಜಿಜೆಪಿಯ ಜಿಲ್ಲಾಧ್ಯಕ್ಷ ಹುಲ್ಲಹಳ್ಳಿ ಸುರೇಶ್, ನಿನ್ನೆ ಬೇಲೂರಿನಲ್ಲಿ ಕೊರೊನಾ ನಿಯಮ ಗಾಳಿಗೆ ತೂರಿ ತಮ್ಮ ಅದ್ಧೂರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಡಿಜೆ ಸಾಂಗ್ ಹಾಕಿಕೊಂಡು, ತಮ್ಮ ಐಷರಾಮಿ ಕಾರಿನಲ್ಲಿ ಮೆರವಣಿಗೆ ಮಾಡುತ್ತಾ, ಪುಷ್ಪವೃಷ್ಟಿ ಮಾಡಿಸಿಕೊಂಡು ನಡುರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅವರ ಅಭಿಮಾನಿಗಳು ರಸ್ತೆಯಲ್ಲಿ ಮನಸ್ಸೋ ಇಚ್ಚೆ ಕುಣಿದು ಕುಪ್ಪಳಿಸಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕೋವಿಡ್ ಮೂರನೇ ಅಲೆ ಆತಂಕ, ನಿಷೇಧದ ನಡುವೆಯೂ ಅದ್ಧೂರಿಯಾಗಿ ನಡೆದ ಜಾತ್ರೆ

    ಜಿಲ್ಲಾಧ್ಯಕ್ಷರ ಹುಟ್ಟು ಹಬ್ಬದ ಆಚರಣೆ ನೋಡಿದ್ರೆ ಹಾಸನದಲ್ಲಿ ಕೊರೊನಾ ನಿಯಮಗಳು, ವೀಕೆಂಡ್ ಕರ್ಫ್ಯೂ ಇವೆಲ್ಲ ಕೇವಲ ಜನಸಾಮಾನ್ಯರಿಗೆ ಎಂಬಂತಾಗಿದೆ. ಈ ಬಗ್ಗೆ ಮಾತನಾಡಿದ ಡಿಸಿ ಆರ್.ಗಿರೀಶ್, ಅದ್ಧೂರಿ ಹುಟ್ಟುಹಬ್ಬ ಆಚರಣೆ ವಿಷಯ ನನ್ನ ಗಮನಕ್ಕೆ ಬಂದಿದೆ. ವರದಿ ನೀಡಲು ಎಸ್‍ಪಿಗೆ ಸೂಚಿಸಿದ್ದೇನೆ ಎಂದಿದ್ದಾರೆ. ಇತ್ತ ಎಸ್‍ಪಿ, ನಾನು ನಮ್ಮ ಪೊಲೀಸರಿಂದ ಮಾಹಿತಿ ಕೇಳಿದ್ದೇನೆ. ಅವರು ಮೆರವಣಿಗೆ ಮಾಡಿ ಸಂಭ್ರಮಾಚರಣೆ ಮಾಡಿರುವುದಕ್ಕೆ ಕ್ರಮ ಕೈಗೊಳ್ಳುತ್ತೇವೆ ಎಂದರು.

    ಹಾಸನದಲ್ಲಿ ಕೊರೊನಾ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಜಿಲ್ಲಾಡಳಿತ ವೀಕೆಂಡ್ ಕರ್ಫ್ಯೂ ವಿಧಿಸಿದೆ. ಆದರೆ ರಾಜಕಾರಣಿಗಳು ಕೊರೊನಾ ನಿಯಮ ಮೀರಿ ಅದ್ಧೂರಿ ಕಾರ್ಯಕ್ರಮ ಮಾಡುತ್ತಾ ಹೋದರೆ ವೀಕೆಂಡ್ ಕರ್ಫ್ಯೂ ಮಾಡಿ ಪ್ರಯೋಜನವಾದರೂ ಏನು ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಟ್ಯಾಂಕರ್‌ನಿಂದ ಕಳಚಿದ ಗ್ಯಾಸ್ ಟ್ಯಾಂಕ್- ತಪ್ಪಿದ ಭಾರೀ ದುರಂತ