Tag: Covid vaccines

  • ವಯಸ್ಕರಲ್ಲಿ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ; ಐಸಿಎಂಆರ್-ಏಮ್ಸ್ ವರದಿಯಲ್ಲಿ ಸ್ಪಷ್ಟನೆ

    ವಯಸ್ಕರಲ್ಲಿ ದಿಢೀರ್ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ ಕಾರಣವಲ್ಲ; ಐಸಿಎಂಆರ್-ಏಮ್ಸ್ ವರದಿಯಲ್ಲಿ ಸ್ಪಷ್ಟನೆ

    ನವದೆಹಲಿ: ವಯಸ್ಕರಲ್ಲಿ ಸಂಭವಿಸುತ್ತಿರುವ ದಿಢೀರ್‌ ಹೃದಯಾಘಾತಕ್ಕೆ ಕೋವಿಡ್ ವ್ಯಾಕ್ಸಿನ್ (COVID Vaccines) ಕಾರಣವಲ್ಲ ಎಂದು ಐಸಿಎಂ‌ಆರ್ ಮತ್ತು ಏಮ್ಸ್ ನಡೆಸಿದ ಜಂಟಿ ಅಧ್ಯಯನ ವರದಿ ಸ್ಪಷ್ಟಪಡಿಸಿದೆ. ಹೃದಯಾಘಾತಕ್ಕೆ ಬದಲಾದ ಜೀವನ ಶೈಲಿ, ಆನುವಂಶಿಕ ಹಿನ್ನಲೆಗಳು ಕಾರಣ ಎಂದು ವರದಿ ವಿವರಿಸಿದೆ.

    ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (Ministry of Health and Family Welfare) ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು, ಯುವ ಜನರಲ್ಲಿ ಕೋವಿಡ್ -19 ಲಸಿಕೆಗಳು ಮತ್ತು ಹೃದಯಾಘಾತದ (Heart Attack) ನಡುವೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಭಾರತೀಯ ರೈಲ್ವೆ ಇಲಾಖೆಯಿಂದ RailOne ಆಪ್‌ ಬಿಡುಗಡೆ- ಏನೆಲ್ಲಾ ಸೇವೆ ಲಭ್ಯವಿದೆ?

    ಐಸಿಎಂಆರ್‌ನ ರಾಷ್ಟ್ರೀಯ ಸಾಂಕ್ರಾಮಿಕ ರೋಗ ವಿಜ್ಞಾನ ಸಂಸ್ಥೆ (NIE) ಮೇ-ಆಗಸ್ಟ್ 2023ರ ನಡುವೆ 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 47 ಆಸ್ಪತ್ರೆಗಳಲ್ಲಿ ʻFactors associated with unexplained sudden deaths among adults aged 18–45 years in Indiaʼ ಎಂಬ ಶೀರ್ಷಿಕೆಯಡಿಯಲ್ಲಿ ಮೊದಲ ಅಧ್ಯಯನ ನಡೆಸಿತು. ಈ ಅಧ್ಯಯನವು ಅಕ್ಟೋಬರ್ 2021 ರಿಂದ ಮಾರ್ಚ್ 2023ರ ನಡುವೆ ಸಂಭವಿಸಿದ ಹಠಾತ್ ಮರಣಗಳನ್ನು ವಿಶ್ಲೇಷಿಸಿತು. ಕೋವಿಡ್-19 ಲಸಿಕೆಯಿಂದ ಹಠಾತ್ ಮರಣದ ಅಪಾಯ ಹೆಚ್ಚುವುದಿಲ್ಲ ಎಂದು ಈ ಅಧ್ಯಯನ ತೋರಿಸಿದೆ. ಇದನ್ನೂ ಓದಿ: ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್‌ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ

    ಸಾಂದರ್ಭಿಕ ಚಿತ್ರ

    2ನೇ ಅಧ್ಯಯನದಲ್ಲಿ ಏಮ್ಸ್ ದೆಹಲಿಯಲ್ಲಿ ಐಸಿಎಂಆರ್‌ನ ಸಹಯೋಗದೊಂದಿಗೆ ʻEstablishing the cause in sudden unexplained deaths in youngʼ ಎಂಬ ಶೀರ್ಷಿಕೆಯಡಿಯಲ್ಲಿ ನಡೆಯುತ್ತಿರುವ ಸಂಶೋಧನೆಯು ಯುವಕರಲ್ಲಿ ಹಠಾತ್ ಮರಣದ ಕಾರಣಗಳನ್ನು ಗುರುತಿಸುತ್ತಿದೆ. ಪ್ರಾಥಮಿಕ ಫಲಿತಾಂಶಗಳು ಹೃದಯಾಘಾತ (myocardial infarction), ಆನುವಂಶಿಕ ಕಾರಣಗಳು ಮತ್ತು ಅನಾರೋಗ್ಯಕರ ಜೀವನಶೈಲಿಯನ್ನು ಪ್ರಮುಖ ಕಾರಣಗಳಾಗಿ ಗುರುತಿಸಿವೆ. ಇದನ್ನೂ ಓದಿ: ಬೈಕ್ ಟ್ಯಾಕ್ಸಿಗೆ ಕೇಂದ್ರದಿಂದ ಅಸ್ತು – ಮಾರ್ಗಸೂಚಿ ಬಿಡುಗಡೆ

    ಈ ವರದಿಗಳ ಬೆನ್ನಲೆ ಕೊವಿಡ್-19 ಲಸಿಕೆಯನ್ನು ಹೃದಯಾಘಾತಕ್ಕೆ ಸಂಬಂಧಿಸುವ ಯಾವುದೇ ವೈಜ್ಞಾನಿಕ ಪುರಾವೆ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ಲಸಿಕೆಯ ಬಗ್ಗೆ ಆಧಾರ ರಹಿತ ಆರೋಪಗಳು ಸಾರ್ವಜನಿಕರಲ್ಲಿ ಭಯವನ್ನುಂಟುಮಾಡಿ, ಲಸಿಕೆಯ ವಿರುದ್ಧ ಗೊಂದಲ ಸೃಷ್ಟಿಸಬಹುದು, ಇದು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕವಾಗಿದೆ ಎಂದು ಅದು ಹೇಳಿದೆ. ಇದನ್ನೂ ಓದಿ: 30 ವರ್ಷದಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಸ್ಫೋಟದ ಉಗ್ರ ಬಂಧನ

    ವರದಿಗಳ ಪ್ರಕಾರ ಹೃದಯಾಘಾತಕ್ಕೆ ಕಾರಣ ಏನು?
    * ಆನುವಂಶಿಕ ಕಾರಣಗಳು: ಆನುವಂಶಿಕ ರೋಗಗಳು ಮತ್ತು ಹೃದಯ ಸಂಬಂಧಿತ ಕಾಯಿಲೆಗಳ ಕುಟುಂಬ ಇತಿಹಾಸ
    * ಜೀವನಶೈಲಿ: ಧೂಮಪಾನ, ಮದ್ಯಪಾನ, ಔಷಧಿಗಳ ಬಳಕೆ ಮತ್ತು ತೀವ್ರವಾದ ದೈಹಿಕ ಒತ್ತಡ.
    * ಪೂರ್ವ-ಅಸ್ತಿತ್ವದಲ್ಲಿರುವ ಆರೋಗ್ಯ ಸಮಸ್ಯೆಗಳು: ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು.
    * ಕೊವಿಡ್-ನಂತರದ ತೊಡಕುಗಳು: ಕೊವಿಡ್-19 ಸೋಂಕಿನಿಂದ ಉಂಟಾಗುವ ದೀರ್ಘಕಾಲೀನ ಆರೋಗ್ಯ ಸಮಸ್ಯೆಗಳಿಂದ ಹೃದಯಾಘಾತ ಸಂಭವಿಸಿರಬಹುದು.

  • ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಮೂಲಕ ಕೋವಿಡ್ ಲಸಿಕೆ ಟ್ರಯಲ್

    ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಡ್ರೋನ್ ಮೂಲಕ ಕೋವಿಡ್ ಲಸಿಕೆ ಟ್ರಯಲ್

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ಡ್ರೋನ್ ಮೂಲಕ ಕೋವಿಡ್ ಲಸಿಕೆಯನ್ನು ವಿತರಣೆ ಮಾಡುವ ಕಾರ್ಯ ನಡೆದಿದೆ.

    ಆನೇಕಲ್ ತಾಲೂಕಿನ ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೋವಿಡ್ ಲಸಿಕೆಯನ್ನು ಪ್ರಪ್ರಥಮ ಬಾರಿಗೆ ಡ್ರೋನ್ ಮೂಲಕ ವಿತರಣೆ ಮಾಡುವ ಕಾರ್ಯ ಯಶಸ್ವಿಯಾಗಿ ನಡೆಯಿತು. ಚಂದಾಪುರದ ಆರೋಗ್ಯ ಕೇಂದ್ರದಿಂದ ಹಾರಗದ್ದೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ 14 ಕಿಲೋಮೀಟರ್ ನಷ್ಟು ದೂರವಿದ್ದು ವಾಹನದಲ್ಲಿ ಸಂಚರಿಸಿದರೆ ಸುಮಾರು 40 ನಿಮಿಷಗಳ ಕಾಲ ತೆಗೆದುಕೊಳ್ಳುತ್ತದೆ. ಆದರೆ ಈ ಡ್ರೋನ್ ಮೂಲಕ ಮೇಲೆ ಹಾರಿದಾಗ ಕೇವಲ 7 ಕಿಲೋಮೀಟರ್ ನಷ್ಟು ಅಂತರವಿದ್ದು, 7 ನಿಮಿಷಗಳಲ್ಲಿ ತಲುಪಬಲ್ಲ ಸಾಮರ್ಥ್ಯ ಹಾಗೂ 15 ಕೆಜಿಯಷ್ಟು ತೂಕವನ್ನ ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಭದ್ರತೆ ಕೊಡಿ ಎಂದು ಮೋದಿಗೆ ಮನವಿ ಸಲ್ಲಿಸಿದ ಪಾಕ್ ಕ್ರಿಕೆಟಿಗನ ಪತ್ನಿ

    ಇದನ್ನು ಕೌನ್ಸಿಲ್ ಆಫ್ ರಿಸರ್ಚ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ ಹಾಗೂ ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರಿಸ್ (CSIR-NAL) ನಿಂದ ಈ ಪ್ರಯೋಗವು ನಡೆದಿದ್ದು, ನಾಗರಿಕ ವಿಮಾನಯಾನ ಸಚಿವಾಲಯವು ನಿಯಂತ್ರಕ ಅನುಸರಣೆಯೊಂದಿಗೆ ಡ್ರೋನ್ ಪ್ರಯೋಗಗಳನ್ನು ನಡೆಸಲು ಷರತ್ತುಬದ್ಧ ಅನುಮತಿಯನ್ನು ನೀಡಿದ್ದು, ಈ ಪ್ರಯೋಗವನ್ನ ವೈದ್ಯರು, ವಿಜ್ಞಾನಿಗಳು ಹಾಗೂ ಡ್ರೋನ್ ಆಪರೇಟರ್ ಗಳು ಯಶಸ್ವಿಯಾಗಿ ನಡೆಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪೊಲ್ಯೂಷನ್ ಲಾಕ್‍ಡೌನ್ – 1 ವಾರ ಆನ್‌ಲೈನ್‌ ಕ್ಲಾಸ್‌, ವರ್ಕ್‌ ಫ್ರಂ ಹೋಂ

  • ಉಚಿತ ಕೊರೊನಾ ಲಸಿಕೆ ನೀಡಿದ್ದಕ್ಕೆ ಪೆಟ್ರೋಲ್ ಬೆಲೆ ಹೆಚ್ಚಳ: ಸಚಿವ ತೇಲಿ

    ಉಚಿತ ಕೊರೊನಾ ಲಸಿಕೆ ನೀಡಿದ್ದಕ್ಕೆ ಪೆಟ್ರೋಲ್ ಬೆಲೆ ಹೆಚ್ಚಳ: ಸಚಿವ ತೇಲಿ

    ದಿಸ್ಪುರ: ಉಚಿತವಾಗಿ ಕೊರೊನಾ ಲಸಿಕೆ ನೀಡುತ್ತಿರುವ ಕಾರಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ ಎಂದು ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ದುಬಾರಿಯಲ್ಲ. ಕೇಂದ್ರ ಮತ್ತು ರಾಜ್ಯಗಳು ವಿಧಿಸುತ್ತಿರುವ ತೆರಿಗೆಯಿಂದಾಗಿ ದುಬಾರಿಯಾಗುತ್ತಿದೆ. ನೀವೆಲ್ಲರೂ ಉಚಿತವಾಗಿ ಕೊರೊನಾ ಲಸಿಕೆ ಪಡೆದಿದ್ದೀರಿ. ಅದನ್ನು ಪೂರೈಸಲು ಹಣ ಎಲ್ಲಿಂದ ಬಂದಿತ್ತು? ದೇಶದ 130 ಕೋಟಿ ಜನರಿಗೆ ಉಚಿತವಾಗಿ 2 ಡೋಸ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಡೋಸ್ ಲಸಿಕೆಗೆ 1,200 ರೂ. ವೆಚ್ಚವಾಗುತ್ತದೆ. ಇದು ಸರ್ಕಾರಕ್ಕೆ ಹೊರೆಯಾಗಲಿದೆ. ಲಸಿಕೆ ಹಣವನ್ನು ಪೆಟ್ರೋಲ್ ತೆರಿಗೆ ಮೂಲಕವಾಗಿ ಪಡೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ?

    ಪೆಟ್ರೋಲ್ ಬೆಲೆಯನ್ನು ನಮ್ಮ ಸಚಿವಾಲಯ ನಿರ್ಧರಿಸುವುದಿಲ್ಲ. ಕಚ್ಚಾತೈಲದ ಬೆಲೆಯಲ್ಲಿ ಬದಲಾವಣೆ ಉಂಟಾದರೆ ಪೆಟ್ರೋಲ್ ಡೀಸೆಲ್ ಬೆಲೆಯಲ್ಲೂ ಬದಲಾವಣೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಿಂದ ಮಳೆ ನೀರು ಹೊರ ಹಾಕುವ ವೇಳೆ ಕರೆಂಟ್ ಶಾಕ್ – ವ್ಯಕ್ತಿ ದುರ್ಮರಣ