Tag: covid xe

  • XE ರೂಪಾಂತರಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ: ಮಾ ಸುಬ್ರಮಣಿಯನ್

    XE ರೂಪಾಂತರಿಯನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ: ಮಾ ಸುಬ್ರಮಣಿಯನ್

    ಚೆನ್ನೈ: ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ XE ತಳಿ ರಾಜ್ಯದಲ್ಲಿ ಹೊರಹೊಮ್ಮಿದರೆ ಅದನ್ನು ನಿಭಾಯಿಸಲು ರಾಜ್ಯ ಸರ್ಕಾರವು ಸಿದ್ಧವಾಗಿದೆ ಎಂದು ತಮಿಳುನಾಡು ಆರೋಗ್ಯ ಸಚಿವ ಮಾ ಸುಬ್ರಮಣಿಯನ್ ಭರವಸೆ ನೀಡಿದ್ದಾರೆ.

    ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ ಶಾಸಕ ಸಿ ವಿಜಯಭಾಸ್ಕರ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಮಾ ಸುಬ್ರಮಣಿಯನ್ ಅವರು, ಮಹಾರಾಷ್ಟ್ರ ಮತ್ತು ಗುಜರಾತ್‍ನಲ್ಲಿ XE ರೂಪಾಂತರಿ ವೈರಸ್ ಪತ್ತೆಯಾದ ಬಳಿಕ ಕೇಂದ್ರ ಸರ್ಕಾರ ಕೊರೊನಾ ಹೊಸ ರೂಪಾಂತರಿಯಾಗಿರುವ XE ಬಗ್ಗೆ ಆತಂಕಪಡುವ ಅಗತ್ಯವಿಲ್ಲ ಅಂತ ತಿಳಿಸಿದೆ ಎಂದಿದ್ದಾರೆ. ಇದನ್ನೂ ಓದಿ:  XE ರೂಪಾಂತರಿ ಮಾರಣಾಂತಿಕವಲ್ಲ: ಮಹಾರಾಷ್ಟ್ರ ಸಚಿವ

    corona

    ರಾಜ್ಯದಲ್ಲಿ ಹೊಸ ರೂಪಾಂತರಿ ವೈರಸ್ XE ಹರಡುವಿಕೆಯನ್ನು ತಡೆಗಟ್ಟಲು ತಮಿಳುನಾಡು ಸರ್ಕಾರ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಅಲ್ಲದೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಇತರ ದೇಶಗಳಿಂದ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾವಹಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಪ್ರಧಾನಿ ಮೋದಿ ತವರಿಗೇ ಲಗ್ಗೆಯಿಟ್ಟ XE ಕೊರೊನಾ ರೂಪಾಂತರಿ

    ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಷ್ಟ್ರೀಯ ತಾಂತ್ರಿಕ ಸಲಹಾ ಗ್ರೂಪ್ ಆನ್ ಇಮ್ಯುನೈಸೇಶನ್ (ಎನ್‍ಟಿಎಜಿಐ) ಮುಖ್ಯಸ್ಥ ಎನ್‍ಕೆ ಅರೋರಾ ಅವರು, ಈ ಸೋಂಕು ಮಾರಣಾಂತಿಕವಲ್ಲ ಹಾಗೂ ಲಕ್ಷಣರಹಿತವಾಗಿದೆ. ಅಲ್ಲದೇ ವೇಗವಾಗಿ ಹರಡುವುದಿಲ್ಲ ಎಂದು ಹೇಳಿದ್ದಾರೆ.

  • XE ರೂಪಾಂತರಿ ಮಾರಣಾಂತಿಕವಲ್ಲ: ಮಹಾರಾಷ್ಟ್ರ ಸಚಿವ

    XE ರೂಪಾಂತರಿ ಮಾರಣಾಂತಿಕವಲ್ಲ: ಮಹಾರಾಷ್ಟ್ರ ಸಚಿವ

    ಮುಂಬೈ: ಕೊರೊನಾ ಸೋಂಕಿನ ಹೊಸ ರೂಪಾಂತರಿಯಾಗಿರುವ XE ತಳಿ ವಯಸ್ಸಾದ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದ್ದು, ಈ ಸೋಂಕು ಮಾರಣಾಂತಿಕವಲ್ಲ  ಹಾಗೂ ಲಕ್ಷಣರಹಿತವಾಗಿದೆ ಎಂದು ಮಹಾರಾಷ್ಟ್ರದ ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‍ನಲ್ಲಿರುವ 67 ವರ್ಷದ ಮುಂಬೈ ನಿವಾಸಿಗೆ XE ಸೋಂಕು ತಗುಲಿತ್ತು. ಆ ವ್ಯಕ್ತಿ ಮಾ.6ರಂದು ಲಂಡನ್‍ನಿಂದ ಆಗಮಿಸಿದ್ದರು. ಜೊತೆಗೆ ಅವರು ಇಬ್ಬರು ಬ್ರಿಟಿಷ್ ವ್ಯಕ್ತಿಗಳ ಸಂಪರ್ಕದಲ್ಲಿದ್ದರು. ಮಾ.11ರಂದು ಅವರಿಗೆ ಸಣ್ಣದಾಗಿ ಜ್ವರ ಕಾಣಿಸಿಕೊಂಡಿತು. ಮಾ.12ರಂದು ವಡೋದರಾದಲ್ಲಿ ಅವರನ್ನು ಪರೀಕ್ಷಿಸಲಾಯಿತು. ಜೊತೆಗೆ ಮಾದರಿಯನ್ನು ಜೀನೋಮ್‍ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಅವರು ಮರುದಿನ ಗುಜರಾತ್‍ನಿಂದ ಮುಂಬೈಗೆ ಬಂದಿದ್ದರು.

    ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದ ಇತರೆ ಮೂವರು ವ್ಯಕ್ತಿಯನ್ನು ಪರೀಕ್ಷಿಸಲಾಗಿತ್ತು. ಆದರೆ ಅವರಿಗೆಲ್ಲರಿಗೂ ನೆಗೆಟಿವ್ ಬಂದಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲ್ಲ, ಕಾನೂನು ತನ್ನ ಮಾರ್ಗವನ್ನು ತೆಗೆದುಕೊಳ್ಳುತ್ತೆ: ಶೆಹಬಾಜ್ ಷರೀಫ್

    ಆ ವ್ಯಕ್ತಿ ಮಾರ್ಚ್ 20ರಿಂದ ಮುಂಬೈನಲ್ಲಿರುವ ತನ್ನ ಮನೆಯಲ್ಲಿ ಕ್ವಾರಂಟೈನ್‍ನಲ್ಲಿದ್ದಾನೆ. ಅವರು ರೋಗ ಲಕ್ಷಣರಹಿತರಾಗಿದ್ದಾರೆ. ಅವರು ಎರಡು ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದರು. ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಹೊಸ ರೂಪಾಂತರದ ಬಗ್ಗೆ ಯಾವುದೇ ಆತಂಕವಿಲ್ಲ. ಇದು ಮಾರಣಾಂತಿಕವಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ