Tag: cow cub

  • ಚಾಮರಾಜನಗರ| ಊರೊಳಗೆ ನುಗ್ಗಿದ ಚಿರತೆಗೆ ಕರು ಬಲಿ – ಜನರಲ್ಲಿ ಆತಂಕ

    ಚಾಮರಾಜನಗರ| ಊರೊಳಗೆ ನುಗ್ಗಿದ ಚಿರತೆಗೆ ಕರು ಬಲಿ – ಜನರಲ್ಲಿ ಆತಂಕ

    ಚಾಮರಾಜನಗರ: ಕೊಟ್ಟಿಗೆಗೆ ನುಗ್ಗಿ ಕರುವನ್ನು ಚಿರತೆ ಕೊಂದು ತಿಂದಿರುವ ಘಟನೆ ಚಾಮರಾಜನಗರ ತಾಲ್ಲೂಕು ಮಹಂತಾಳಪುರದಲ್ಲಿ ನಡೆದಿದೆ. ಜನರಲ್ಲಿ ಚಿರತೆ ಆತಂಕ ಮೂಡಿದೆ.

    ಗ್ರಾಮದ ಮಧ್ಯಭಾಗದಲ್ಲಿರುವ ಕೊಟ್ಟಿಗೆಗೆ ನುಗ್ಗಿ ಕರುವನ್ನು ಚಿರತೆ ಕೊಂದಿದೆ. ಕಮಲಮ್ಮ ಎಂಬವರಿಗೆ ಸೇರಿದ ಕರು ಇದಾಗಿತ್ತು. ಕೆಲ ದಿನಗಳ ಹಿಂದೆ ಗ್ರಾಮದ ಹೊರವಲಯದಲ್ಲಿ ಮೇಯುತ್ತಿದ್ದಾಗ ಎರಡು ಕುರಿಮರಿಗಳನ್ನು ಚಿರತೆ ಕೊಂದು ಹಾಕಿತ್ತು.

    ಇದೀಗ ಗ್ರಾಮಕ್ಕೇ ನುಗ್ಗಿ ಕರು ತಿಂದಿದೆ. ಗ್ರಾಮಸ್ಥರಲ್ಲಿ ಚಿರತೆ ಆತಂಕ ಮನೆ ಮಾಡಿದೆ. ಚಿರತೆ ಸೆರೆ ಹಿಡಿಯಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದರು.

    ಕೊನೆಗೆ ಗ್ರಾಮಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅರಣ್ಯ ಸಿಬ್ಬಂದಿಗೆ ಜನರು ಕ್ಲಾಸ್ ತೆಗೆದುಕೊಂಡಿದ್ದಾರೆ. ಕ್ವಾರಿಯಿಂದ ಇಲ್ಲಿಗೆ ಬಂದಿದೆ ಅಂತೀರಾ? ಚಿರತೆ ಸೆರೆಹಿಡಿಯದೆ ಏನ್ ಮಾಡ್ತಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.

  • ಕರುವಿಗೆ ತೊಟ್ಟಿಲು ನಾಮಕರಣ ಮಾಡಿದ ಮಹಿಳಾ ಪಿಎಸ್‌ಐ!

    ಕರುವಿಗೆ ತೊಟ್ಟಿಲು ನಾಮಕರಣ ಮಾಡಿದ ಮಹಿಳಾ ಪಿಎಸ್‌ಐ!

    ಕಲಬುರಗಿ: ಸಾಮಾನ್ಯವಾಗಿ ಮನೆಯಲ್ಲಿ ಮಕ್ಕಳು ಹುಟ್ಟಿದರೆ ತೊಟ್ಟಿಲು ನಾಮಕಾರಣ ಮಾಡಿ ಸಂಭ್ರಮಿಸುವುದನ್ನು ನಾವೆಲ್ಲ ನೋಡಿದ್ದೇವೆ. ಆದರೆ ಕಲಬುರಗಿಯಲ್ಲಿ ಮಹಿಳಾ ಪೋಲಿಸ್ ಅಧಿಕಾರಿಯೊಬ್ಬರು ತಾವು ಸಾಕಿದ ಕರುವಿಗೆ ನಾಮಕರಣ ಮಾಡುವ ಮೂಲಕ ಗೋ ಪ್ರೇಮ ಮೆರೆದಿದ್ದಾರೆ.

    ನಗರದ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಪಿಎಸ್ಐ ಯಶೋಧಾ ಕಟಕೆ ಅವರು ಸಾಕಿರುವ ಹಸು ಹೆಣ್ಣು ಕರುವಿಗೆ ಜನ್ಮ ನೀಡಿದೆ. ತಮ್ಮ ಮನೆಯ ಮಗುವಿನಂತೆ ಕರುವಿಗೆ ರಾಧಾ ಎಂದು ನಾಮಕರಣ ಮಾಡಿದ್ದಾರೆ‌. ಇದನ್ನೂ ಓದಿ: ರಾಜ್ಯದಲ್ಲಿ ಕ್ರಿಸ್‍ಮಸ್, ಹೊಸ ವರ್ಷಾಚರಣೆಗೆ ನಿರ್ಬಂಧ ಸಾಧ್ಯತೆ

    ಪೊಲೀಸ್ ಇಲಾಖೆಯ ವೃತ್ತಿ ಜೊತೆ ಪ್ರಾಣಿ-ಪಕ್ಷಿಗಳ ಪಾಲನೆ ಮಾಡುವುದು ಯಶೋಧಾ ಅವರಿಗೆ ಮೊದಲಿನಿಂದಲೂ ಇರುವ ಹವ್ಯಾಸ. ಹೀಗಾಗಿ ಒಂದು ಮಗುವಿಗೆ ಸಿಗುವ ಪ್ರೀತಿ ಈ ಕರುವಿಗೂ ಸಿಗಲಿ ಎಂದು ತೊಟ್ಪಿಲು ಶಾಸ್ತ್ರ ಮಾಡಿ ರಾಧಾ ಅಂತ ಹೆಸರಿಟ್ಟು ಪ್ರಾಣಿಗಳ ಮೇಲಿರುವ ತಮ್ಮ ಪ್ರೀತಿ ವ್ಯಕ್ತಪಡಿಸಿದ್ದಾರೆ.

    ಯಶೋಧಾ ಅವರು ಪೊಲೀಸ್ ಇಲಾಖೆಗೆ ಸೇರಿದ ಮೇಲೆ ಜನಸ್ನೇಹಿ ಪೊಲೀಸ್‌ ಎಂದು ಹೆಸರು ಮಾಡಿದ್ದಾರೆ. ಕೊರೊನಾ ಕಾಲದ ವೇಳೆ ಸ್ವಂತ ಖರ್ಚಿನಲ್ಲಿ ಬಡವರಿಗೆ ಸಹಾಯ ಮಾಡಿದ್ದಾರೆ. ಇದೀಗ ತೊಟ್ಟಿಲು ಕಾರ್ಯಕ್ರಮದಲ್ಲಿ ಮಂಗಳಮುಖಿಯರನ್ನು ಕರೆಸಿ ಅರಿಶಿಣ, ಕುಂಕುಮ ಕೊಟ್ಟು ಗೌರವಿಸಿದ್ದಾರೆ. ತೊಟ್ಟಿಲು ಶಾಸ್ತ್ರದಲ್ಲಿ ಮಂಗಳಮುಖಯರಿಂದಲೇ ಕರುವಿಗೆ ಹೆಸರಿಡಿಸಿದ್ದಾರೆ. ಇದನ್ನೂ ಓದಿ: ಬಲವಂತದ ಮತಾಂತರ ಜಾಮೀನುರಹಿತ ಅಪರಾಧ