Tag: Cow meat

  • ಅಕ್ರಮ ಗೋಮಾಂಸ ಮಾರಾಟಕ್ಕೆ 60 ಕ್ಕೂ ಹೆಚ್ಚು ಗೋವುಗಳ ವಧೆ – 10 ಸಾವಿರ ಕೆಜಿ ಗೋಮಾಂಸ ಪೊಲೀಸರ ವಶಕ್ಕೆ

    ಅಕ್ರಮ ಗೋಮಾಂಸ ಮಾರಾಟಕ್ಕೆ 60 ಕ್ಕೂ ಹೆಚ್ಚು ಗೋವುಗಳ ವಧೆ – 10 ಸಾವಿರ ಕೆಜಿ ಗೋಮಾಂಸ ಪೊಲೀಸರ ವಶಕ್ಕೆ

    ಹಾಸನ: ಅಕ್ರಮವಾಗಿ ಗೋಮಾಂಸ ಮಾರಾಟಕ್ಕಾಗಿ 60 ಕ್ಕೂ ಹೆಚ್ಚು ಗೋವುಗಳನ್ನು ವಧೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಗೂರು ರಸ್ತೆ ಬಳಿ ನಡೆದಿದೆ.

    ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪೊಲೀಸರು, 10 ಸಾವಿರ ಕೆಜಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ. ಈ ವೇಳೆ 5 ಗೋವುಗಳನ್ನು ರಕ್ಷಣೆ ಮಾಡಿದ್ದಾರೆ.

    ಗೋವುಗಳನ್ನು ಹತ್ಯೆ ಮಾಡುವಾಗಲೇ ಪೊಲೀಸರು ದಾಳಿ ನಡೆಸಿದ್ದಾರೆ. ಗೋಮಾಂಸ ಮಾರಾಟಕ್ಕಾಗಿ ಸುಮಾರು 60 ಕ್ಕೂ ಗೋವುಗಳನ್ನು ಹತ್ಯೆ ಮಾಡಿ ನೇತು ನೇತುಹಾಕಲಾಗಿತ್ತು. ಮಹಮದ್ ಅಬ್ದುಲ್ ಹಕ್ ಎಂಬಾತನ ವಿರುದ್ಧ ಆರೋಪ ಕೇಳಿಬಂದಿದೆ.

    ಗೋವುಗಳ ರಕ್ತವನ್ನು ಕೆರೆಗೆ ಹರಿಸಲಾಗುತ್ತಿತ್ತು. ಪೊಲೀಸರು ದಾಳಿ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಟ್ರಕ್‌ನಲ್ಲಿದ್ದದ್ದು ಹಸು ಮಾಂಸ ತ್ಯಾಜ್ಯ ಅಲ್ಲ: ನಟಿ ಐಂದ್ರಿತಾ ರೈ ಪೋಸ್ಟ್‌ಗೆ ಡಿಸಿಪಿ ಸ್ಪಷ್ಟನೆ

    ಟ್ರಕ್‌ನಲ್ಲಿದ್ದದ್ದು ಹಸು ಮಾಂಸ ತ್ಯಾಜ್ಯ ಅಲ್ಲ: ನಟಿ ಐಂದ್ರಿತಾ ರೈ ಪೋಸ್ಟ್‌ಗೆ ಡಿಸಿಪಿ ಸ್ಪಷ್ಟನೆ

    ಬೆಂಗಳೂರು: ಟ್ರಕ್‌ನಲ್ಲಿ ಹಸು ಮಾಂಸ ತ್ಯಾಜ್ಯ ಸಾಗಣೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ ಹಾಕಿ ನಟಿ ಐಂದ್ರಿತಾ ರೈ (Aindrita Ray) ಮಾಡಿದ್ದ ಆರೋಪಕ್ಕೆ ಆಗ್ನೇಯ ವಿಭಾಗದ ಡಿಸಿಪಿ ಸಿ.ಕೆ.ಬಾಬಾ ಸ್ಪಷ್ಟನೆ ಕೊಟ್ಟಿದ್ದಾರೆ. ಅದು ಹಸು ಮಾಂಸ ತ್ಯಾಜ್ಯ ಅಲ್ಲ ಎಂದು ತಿಳಿಸಿದ್ದಾರೆ.

    ನಟಿ ಆರೋಪಕ್ಕೆ ಡಿಸಿಪಿ ಸಿ.ಕೆ.ಬಾಬಾ ಸ್ಪಷ್ಟನೆ ನೀಡಿರುವ ಡಿಸಿಪಿ, ಟ್ರಕ್‌ನಲ್ಲಿದ್ದ ಮಾಂಸದ ತ್ಯಾಜ್ಯ ಪರಿಶೀಲನೆ ನಡೆಸಲಾಗಿದೆ. ಟ್ರಕ್‌ನಲ್ಲಿದ್ದದ್ದು ಹಸು ಮಾಂಸದ ತ್ಯಾಜ್ಯವಲ್ಲ. ಟ್ರಕ್‌ನಲ್ಲಿದ್ದ ಮೂಳೆಗಳು, ಕೊಂಬು, ಚರ್ಮ ಹಸುವಿನದ್ದಲ್ಲ. ಪತ್ತೆಯಾದ ತ್ಯಾಜ್ಯ ಬಿಬಿಎಂಪಿ ಪೂರ್ವ ವಿಭಾಗದ ಕಸಾಯಿಖಾನೆಗೆ ಸಂಬಂಧಪಟ್ಟಿದ್ದು ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: KRSಗೆ ಇಂದು ಬಿಜೆಪಿ ನಿಯೋಗ – ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆ

    ಟ್ರಕ್‌ನಲ್ಲಿ ಮಾಂಸದ ತ್ಯಾಜ್ಯ ಸಾಗಣೆ ಮಾಡಲಾಗುತ್ತಿತ್ತು. ಅದು ಹಸು ಮಾಂಸ ತ್ಯಾಜ್ಯ ಎಂದು ಆರೋಪ ಮಾಡಲಾಗಿತ್ತು. ಸಾಗಣೆ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ನಟಿ ಐಂದ್ರಿತಾ ರೈ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದ್ದರು. ತನಿಖೆ ನಡೆಸಿ ಎಫ್‌ಐಆರ್‌ ಹಾಕಲು ಪೊಲೀಸರು ನಿರಾಕರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌, ಬೆಂಗಳೂರು ಪೊಲೀಸ್‌ ಹಾಗೂ ಆಗ್ನೇಯ ಡಿಸಿಪಿಗೆ ಟ್ಯಾಗ್‌ ಮಾಡಿದ್ದರು.

    ಬುಧವಾರ ರಾತ್ರಿ ಬೊಮ್ಮನಹಳ್ಳಿ ಬಳಿ ಮಾಂಸ ಸಾಗಣೆಯಾಗುತ್ತಿತ್ತು. ತ್ಯಾಜ್ಯ ಸಾಗಿಸುತ್ತಿದ್ದ ಟ್ರಕ್ ಅಡ್ಡಗಟ್ಟಿ ಕೆಲ ವ್ಯಕ್ತಿಗಳು ವೀಡಿಯೋ ಮಾಡಿದ್ದರು. ಇದನ್ನು ನಟಿ ಐಂದ್ರಿತಾ ರೈ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಆಕೆಯ ಪೊಲೀಸರು ಪರಿಶೀಲನೆ ನಡೆಸಿದ್ದರು.

    ಆದರೆ ಟ್ರಕ್‌ನಲ್ಲಿ ಸಾಗಣೆ ಮಾಡುತ್ತಿದ್ದದ್ದು ಹಸು ತ್ಯಾಜ್ಯ ಅಲ್ಲ ಎಂಬ ವಿಚಾರವನ್ನು ಪಾಲಿಕೆ ಪಶು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಪಾಲಿಕೆ ಪಶುವೈದ್ಯರು ಪರಿಶೀಲನೆ ಮಾಡಿ ಎಮ್ಮೆ ತ್ಯಾಜ್ಯ ಎಂಬುದನ್ನು ದೃಢಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಆರೋಗ್ಯ ಸುಧಾರಣೆಗೆ ಪ್ರತ್ಯೇಕ ವಿಭಾಗ, ಡೆಂಗ್ಯೂ ಪ್ರಕರಣಗಳ ಮೇಲ್ವೀಚಾರಣೆಗೆ ತಂತ್ರಾಶ: ದಿನೇಶ್ ಗುಂಡೂರಾವ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೀಫ್ ಸೇವಿಸುವವರಿಗೆ ಹಾಲಿನ ಮಹತ್ವ ತಿಳಿಯುವುದಿಲ್ಲ- ದಿಲೀಪ್ ಘೋಷ್

    ಬೀಫ್ ಸೇವಿಸುವವರಿಗೆ ಹಾಲಿನ ಮಹತ್ವ ತಿಳಿಯುವುದಿಲ್ಲ- ದಿಲೀಪ್ ಘೋಷ್

    ಕೋಲ್ಕತ್ತಾ: ಭಾರತೀಯ ತಳಿಯ ಹಸುಗಳು ವಿಶೇಷ ಗುಣಗಳನ್ನು ಹೊಂದಿದ್ದು, ಹಾಲಿನಲ್ಲಿ ಚಿನ್ನ ಬೆರೆತಿರುತ್ತದೆ ಎಂದು ಹೇಳಿದ್ದ ಬಿಜೆಪಿ ಮುಖಂಡ ದಿಲೀಪ್ ಘೋಷ್ ಸದ್ಯ ಮತ್ತೊಂದು ಹೇಳಿಕೆಯನ್ನು ನೀಡಿದ್ದು, ಗೋ ಮಾಂಸ (ಬೀಫ್) ಸೇವಿಸುವವರಿಗೆ ಹಾಲಿನ ಮಹತ್ವ ಅರ್ಥ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

    ಗೋವಿನ ಹಾಲಿನಲ್ಲಿ ಚಿನ್ನ ಬೆರೆತಿದೆ ಎಂಬ ಹೇಳಿಕೆಗೆ ಭಾರೀ ವಿಮರ್ಶೆಗಳು ಕೇಳಿಬಂದ ಹಿನ್ನೆಲೆಯಲ್ಲಿ ದಿಲೀಪ್ ಅವರು ಪ್ರತಿಕ್ರಿಯೆ ನೀಡಿದ್ದು, ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ನನ್ನ ವಿರುದ್ಧ ಟೀಕೆ ಮಾಡುವವರು ನಾನು ಹೇಳಿದ್ದು ಸುಳ್ಳು ಎಂದು ಸಾಬೀತು ಪಡಿಸಲಿ ಎಂದು ಸವಾಲು ಎಸೆದರು.

    ಈಗಾಗಲೇ ಯುಎಸ್‍ಎ, ಪೋಲ್ಯಾಂಡ್ ದೇಶಗಳಲ್ಲಿ ಹಸುವಿನ ಹಾಲಿನ ಬಣ್ಣದ ಕಾರಣ ತಿಳಿಯಲು ಹಲವು ಸಂಶೋಧನೆಗಳನ್ನು ನಡೆಸಿದ್ದಾರೆ. ಈ ಸಂಶೋಧನೆಗಳಲ್ಲಿ ಹಾಲಿಗೆ ಹಳದಿ ಬಣ್ಣ ಬರಲು, ಆದರಲ್ಲಿ ಹೆಚ್ಚಿನ ಪ್ರಮಾಣದ ಚಿನ್ನದ ಅಂಶವಿರುವುದೇ ಕಾರಣ ಎಂಬುವುದು ತಿಳಿದು ಬಂದಿದೆ ಎಂದು ತಮ್ಮ ವಾದಕ್ಕೆ ಸಮರ್ಥನೆಯನ್ನು ನೀಡಿದರು.

    ಕೆಲವರು ನಮ್ಮ ಸಂಸ್ಕೃತಿ, ಸಂಪ್ರಾದಾಯಗಳನ್ನು ಆಕ್ಷೇಪಿಸಲು ಇಷ್ಟಪಡುತ್ತಾರೆ. ಆದರೆ ನನ್ನ ಹೇಳಿಕೆಯನ್ನು ತಪ್ಪು ಎಂದು ಸಾಬೀತು ಪಡಿಸುವ ಚಿಂತನೆ ಮಾತ್ರ ಇಲ್ಲ. ಯಾರು ಈ ಬಗ್ಗೆ ಸಂಶೋಧನೆ ಮಾಡಲು ಬಯಸುವುದಿಲ್ಲ ಎಂದು ಟೀಕೆ ಮಾಡಿದ್ದಾರೆ. ಅಲ್ಲದೇ ಗೋ ಮಾಂಸ ಸೇವನೆ ಮಾಡುವವರಿಂದ ಹೇಗೆ ನೀವು ಹಾಲಿನ ಮಹತ್ವ ಬಗ್ಗೆ ಅರಿಯಲು ಪ್ರಯತ್ನಿಸುತ್ತಿರಿ ಎಂದು ಪ್ರಶ್ನಿಸಿದ್ದಾರೆ.

    ಈ ಹಿಂದೆಯೂ ಗೋ ಮಾಂಸ ಸೇವನೆ ಮಾಡುವವರ ವಿರುದ್ಧ ಟೀಕೆ ಮಾಡಿದ್ದ ಘೋಷ್, ಗೋವು ನಮ್ಮ ತಾಯಿ. ನಮ್ಮ ತಾಯಿಯೊಂದಿಗೆ ಯಾರದರು ಅಸಭ್ಯವಾಗಿ ನಡೆದುಕೊಂಡರೆ ಸುಮ್ಮನೆ ಇರುವುದಿಲ್ಲ. ಅವರಿಗೆ ಯಾವ ರೀತಿ ಪಾಠ ಕಲಿಸಬೇಕೋ ಹಾಗೆ ಕಲಿಸುತ್ತೇವೆ. ಪವಿತ್ರ ಭೂಮಿಯಲ್ಲಿ ಗೋವು ಹತ್ಯೆ ಹಾಗೂ ಗೋ ಮಾಂಸ ಸೇವಿಸುವುದು ಅಪರಾಧ ಎಂದು ಹೇಳಿದ್ದರು.

  • ಗೋಮಾಂಸ ಸಾಗಿಸ್ತಿದ್ದ ಲಾರಿಗಳನ್ನು ತಡೆದ ಹಿಂದೂಪರ ಸಂಘಟನೆ- ಐವರ ಬಂಧನ

    ಗೋಮಾಂಸ ಸಾಗಿಸ್ತಿದ್ದ ಲಾರಿಗಳನ್ನು ತಡೆದ ಹಿಂದೂಪರ ಸಂಘಟನೆ- ಐವರ ಬಂಧನ

    ಧಾರವಾಡ: ಬೆಳಗಾವಿಯಿಂದ ಗೋಮಾಂಸ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ತಡೆದ ಹಿಂದೂಪರ ಸಂಘಟನೆಯ ಮೇಲೆ ಹಲ್ಲೆ ಮಾಡಿರುವ ಘಟನೆ ಧಾರವಾಡದ ನರೇಂದ್ರ ಬೈಪಾಸ್ ಟೊಲ್‍ಗೇಟ್ ಬಳಿ ನಡೆದಿದೆ.

    ಜಿಲ್ಲೆಯಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಲಾರಿಗಳನ್ನು ತಡೆದಿದ್ದಾರೆ. ಈ ವೇಳೆ ಲಾರಿಯಲ್ಲಿದ್ದವರಿಗೆ ಹಾಗೂ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದು ಜಗಳವಾಗಿದೆ. ಜಗಳ ತಾರಕ್ಕೇರಿದ್ದು, ಪರಿಣಾಮ ಹಿಂದೂಪರ ಸಂಘಟನೆ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಗೋಮಾಂಸ ರಫ್ತು ಮಾಡುತ್ತಿದ್ದ ವಾಹನವನ್ನು ಹಾಗೂ ಲಾರಿ ಜತೆಯಲ್ಲಿದ್ದ ಇನ್ನೊಂದು ಕಾರಿನಲ್ಲಿದ್ದವರನ್ನು ಕಾರ್ಯಕರ್ತರು ಪೊಲೀಸರ ವಶಕ್ಕೆ ನೀಡಿದ್ದಾರೆ.

    ಗೋಮಾಂಸವನ್ನ ಅಕ್ರಮವಾಗಿ ರಫ್ತು ಮಾಡಲಾಗುತ್ತಿದೆ. ಮಾರಕಾಸ್ತ್ರಗಳಿಂದ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಗಳ ಮೇಲೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಐವರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದು, ಹಲ್ಲೆಗೆ ಒಳಗಾದವರನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಬಗ್ಗೆ ತನಿಖೆ ಕೈಗೊಂಡಿರುವ ಗ್ರಾಮೀಣ ಪೊಲೀಸರು, ಪರಿಸ್ಥಿತಿಯನ್ನ ಸರಿಪಡಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 7 ಗೋವುಗಳ ಗೋಮಾಂಸ ಸಾಗಾಣೆ ಮಾಡುತ್ತಿದ್ದವರ ಬಂಧನ

    7 ಗೋವುಗಳ ಗೋಮಾಂಸ ಸಾಗಾಣೆ ಮಾಡುತ್ತಿದ್ದವರ ಬಂಧನ

    ಧಾರವಾಡ: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಸ್ಥಳೀಯ ಯುವಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ಮಹಮ್ಮದ ಶಫಿ ಶೇಖ ಮತ್ತು ಇಸ್ಮಾಯಿಲ್ ಬೇಫಾರಿ ಎಂಬವರೇ ಬಂಧಿತರು. ಶುಕ್ರವಾರ ರಾತ್ರಿ 7 ಗೋವುಗಳ ಮಾಂಸವನ್ನ ಗೋವಾ ಹಾಗೂ ಮಹಾರಾಷ್ಟ್ರಕ್ಕೆ ರವಾನಿಸುತ್ತಿದ್ದರು. ಈ ವೇಳೆ ಕೆಲ ಯುವಕರು ಈ ಮಾಂಸ ರವಾನಿಸುತ್ತಿದ್ದ ವಾಹನವನ್ನು ತೆಡೆದು ಅಳ್ನಾವರ ಪೊಲೀಸರ ವಶಕ್ಕೆ ನೀಡಿದ್ದಾರೆ.

    ಈ ವೇಳೆ ವಾಹನದಲ್ಲಿದ್ದ ಇನ್ನಿಬ್ಬರು ಪರಾರಿಯಾಗಿದ್ದಾರೆ. ಈ ಸಂಬಂಧ ಅಳ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.