Tag: cow protection

  • ಗೋ ರಕ್ಷಣೆಗೆ ಬಜರಂಗದಳ ಟೊಂಕ ಕಟ್ಟಿ ನಿಂತಿದೆ: ಕೇಶವ ಹೆಗಡೆ

    ಗೋ ರಕ್ಷಣೆಗೆ ಬಜರಂಗದಳ ಟೊಂಕ ಕಟ್ಟಿ ನಿಂತಿದೆ: ಕೇಶವ ಹೆಗಡೆ

    ಬೆಳಗಾವಿ: ಗೋಹತ್ಯೆ ಮಾಡುವವರ ಮೇಲೆ ಪ್ರಕರಣ ದಾಖಲಿಸುವುದಿಲ್ಲ. ಅದನ್ನು ತಡೆಯುವ ವಿಶ್ವ ಹಿಂದೂ ಪರಿಷದ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಾರೆ. ಆದರೂ ಗೋವು ರಕ್ಷಣೆಗೆ ಬಜರಂಗದಳ ಟೊಂಕ ಕಟ್ಟಿ ನಿಂತಿದೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕೇಶವ ಹೆಗಡೆ ಹೇಳಿದರು.

    ಇಂದು ನಗರದ ಮರಾಠಾ ಮಂದಿರದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಹಿತ ಚಿಂತಕ ಅಭಿಯಾನದ ಸಮಾವೇಶ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದೂ ಸಮಾಜವನ್ನು ಸದೃಢಗೊಳಿಸಲು ಎಲ್ಲರೂ ಸೇರಿ ಶ್ರಮಿಸಬೇಕಿದೆ. ಎಲ್ಲಾ ಸಮುದಾಯದ ಹಿಂದೂಗಳು ಸಂಕಲ್ಪ ಮಾಡಿ ರಾಷ್ಟ್ರ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕಿದೆ ಎಂದರು.

    ಕೇಂದ್ರ ಸರ್ಕಾರ ಹಿಂದೂಗಳ ರಕ್ಷಣೆಗೆ ಪೌರತ್ವ ಕಾಯ್ದೆಯನ್ನು ಜಾರಿಗೆ ತಂದಿದೆ. ಇದನ್ನು ಕಾಂಗ್ರೆಸ್ ಪಕ್ಷ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದೆ. ಈ ಕಾಯ್ದೆಯ ಬಗ್ಗೆ ಯಾರಿಗೆ ತಿಳಿದಿರುವುದಿಲ್ಲವೋ ಅಂಥವರು ಇದನ್ನು ವಿರೋಧಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ರುದ್ರಕೇಶ ಮಠದ ಹರಿಗುರು ಶ್ರೀ ಮಹಾರಾಜ ಸ್ವಾಮೀಜಿ ಮಾತನಾಡಿ, ಕಳೆದ 55 ವರ್ಷಗಳಿಂದ ಆರಂಭವಾದ ವಿಶ್ವ ಹಿಂದೂ ಪರಿಷದ್ ಸಂಘಟನೆಯಲ್ಲ. ಇದು ಹಿಂದೂತ್ವದ ಆಧಾರ ಸ್ಥಂಭವಾಗಿದೆ ಎಂದರು. ಈ ಕಾರ್ಯಕ್ರಮದಲ್ಲಿ ಕಾರಂಜಿ ಮಠದ ಶ್ರೀ ಗುರುಸಿದ್ಧ ಸ್ವಾಮೀಜಿ, ಲಾಲಚಂದ್ರ ಚಂಡೇರಿ, ಜೀಜಾಲಾಲ ಪಟೇಲ್, ಬಾರ್ ಅಸೋಸಿಯೇಷನ್ ಅಧ್ಯಕ್ಷ ಅನಿಲ್ ಮುಳವಾಡಮಠ, ವಿನಾಯಕ್ ಕಾಕತಿಕರ, ಸುನೀಲ್ ತಳವಾರ, ಜಯರಾಮ್ ಸುತಾರ, ಬಸವರಾಜ್ ಹಳಬರ, ಅರುಣ್ ಗವಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

  • ಗೋಮಾಂಸ ತಿನ್ನುವವರು ರಾಕ್ಷಸ ಸಮಾನ: ಪೇಜಾವರ ಶ್ರೀ

    ಗೋಮಾಂಸ ತಿನ್ನುವವರು ರಾಕ್ಷಸ ಸಮಾನ: ಪೇಜಾವರ ಶ್ರೀ

    – ಹುಲಿ, ಸಿಂಹದಷ್ಟೇ ಗೋವು ಶ್ರೇಷ್ಠವಲ್ಲವೇ?

    ಉಡುಪಿ: ಗೋಮಾಂಸ ತಿನ್ನುವವ ರಾಕ್ಷಸ ಸಮಾನ ಎಂದು ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಕೃಷ್ಣಮಠದ ರಥಬೀದಿಯಲ್ಲಿ ನಡೆದ ದೇಸಿ ಗೋವು ಸಮ್ಮೇಳನದಲ್ಲಿ ಮಾತನಾಡಿದ ಅವರು, ಗೋವು ಭಕ್ಷಣೆ ಮಾಡುವವ ಮನುಷ್ಯನೇ ಅಲ್ಲ. ಗೋವು ಹಾಲು ಕೊಡುವ ಎಲ್ಲರ ತಾಯಿ. ಗೋವಿನ ಹಾಲು ಕುಡಿದವನಿಗೆ ಅದನ್ನು ಕೊಲ್ಲುವಾಗ ಏನೂ ಅನ್ನಿಸೋದಿಲ್ಲವೇ? ಗೋವನ್ನು ಕೊಲ್ಲುವವ ಮಾನವನೇ ಅಲ್ಲ. ಅವನು ರಾಕ್ಷಸ ಸಮಾನ. ಗೋಹತ್ಯೆ, ಗೋವು ಮಾಂಸ ಭಕ್ಷಣೆ ಹೇಯವಾದ ಕೃತ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಧಾರ್ಮಿಕ ದೃಷ್ಟಿಗಿಂತ ಆಗದಿದ್ದರೆ, ಮಾನವೀಯ ದೃಷ್ಟಿಯಿಂದಾದರೂ ಗೋ ರಕ್ಷಣೆ ಮಾಡಿ. ಗೋ ರಕ್ಷಣೆಗೆ ಸರ್ಕಾರ ವಿಶೇಷ ಗಮನ ಕೊಡಬೇಕು ಎಂದು ಒತ್ತಾಯಿಸಿದರು. ಕೇಂದ್ರದಲ್ಲಿ ಮೋದಿ ಸರಕಾರ ಬಲವಾಗಿ ಬಂದಿದೆ. ಬಿಜೆಪಿಗೆ ಬಹುಮತ ಇದೆ. ಯಾವ ಪಕ್ಷದ ಬೆಂಬಲ ಇಲ್ಲದಿದ್ದರೂ ಮೊದಲ ವರ್ಷದಲ್ಲೇ ಗೋ ರಕ್ಷಣೆಗೆ ದೃಢ ಕಾನೂನು ತರಬೇಕು ಎಂದು ಮನವಿ ಮಾಡಿಕೊಂಡರು.

    ದೇಶದಲ್ಲಿ ಹುಲಿ, ಸಿಂಹ ಸಂತಾನ ಉಳಿಸಲು ಸರ್ಕಾರ ಬಹಳಷ್ಟು ಕ್ರಮ ಕೈಗೊಳ್ಳುತ್ತದೆ. ಆದರೆ ಗೋವಿನ ತಳಿ ಉಳಿಸಲು ಸರ್ಕಾರ ಈವರೆಗೆ ನಿಗದಿತ ಕ್ರಮ ಕೈಗೊಳ್ಳುವುದಿಲ್ಲ. ಪರಿಣಾಮಕಾರಿಯಾಗಿ ಕೆಲಸ ಮಾಡಿಲ್ಲ. ಸಿಂಹ- ಹುಲಿಗಿಂತ ಗೋವು ಕೀಳಾಗಿಬಿಟ್ಟಿದೆಯೇ? ಹುಲಿ, ಸಿಂಹದಷ್ಟೇ ಗೋವು ಶ್ರೇಷ್ಠವಲ್ಲವೇ? ಎಂದು ಪ್ರಶ್ನಿಸಿದರು. ಬಳಿಕ ಗೋ ಸಾಗಾಟ, ಗೋವು ಕೊಲ್ಲುವ ವಿಧಾನ ಅತ್ಯಂತ ಭಯಾನಕವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

    ಗೋವಿನ ಜೊತೆ ಗೂಳಿಯ ರಕ್ಷಣೆಯೂ ಆಗಬೇಕು. ಹಾಲು ಕೊಡುವ ಹಸುವಿರಬೇಕಾದರೆ ಎತ್ತು, ಕೋಣ ಇರಲೇಬೇಕು. ನಮ್ಮ ಭಾರತದ ದೇಸಿ ತಳಿ ಗೋವುಗಳ ರಕ್ಷಣೆ ಆಗಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು. ರಥಬೀದಿಯಲ್ಲಿ ಇಡೀ ದೇಶದ ದೇಸಿ ಹಸುಗಳ ಪ್ರದರ್ಶನ ನಡೆಯುತ್ತಿದ್ದು, ಬರುವ ಜನರಿಗೆ ಗೋವುಗಳ ಬಗ್ಗೆ ಮಾಹಿತಿಯನ್ನು ಕೊಡಲಾಗುತ್ತಿದೆ ಎಂದು ಸ್ವಾಮೀಜಿ ತಿಳಿಸಿದರು.

    https://www.youtube.com/watch?v=-atjvRa7zrk

  • ಮೂರು ಮಂತ್ರವನ್ನು ಜಪಿಸಿ `ಲೋಕ’ ಗೆಲ್ಲಿ: ಅಮಿತ್ ಶಾಗೆ ಆರ್‌ಎಸ್‌ಎಸ್ ಮುಖಂಡರಿಂದ ಸಲಹೆ

    ಮೂರು ಮಂತ್ರವನ್ನು ಜಪಿಸಿ `ಲೋಕ’ ಗೆಲ್ಲಿ: ಅಮಿತ್ ಶಾಗೆ ಆರ್‌ಎಸ್‌ಎಸ್ ಮುಖಂಡರಿಂದ ಸಲಹೆ

    ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಲು ಆರ್‌ಎಸ್‌ಎಸ್ ಮುಖಂಡರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಮೂರು ಮಂತ್ರಗಳ ಸಲಹೆಯನ್ನು ನೀಡಿದ್ದಾರೆ.

    ಮಂಗಳೂರಿನ ಸಂಘನಿಕೇತನಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್ ಬೈಠಕ್‍ನಲ್ಲಿ ಬುಧವಾರ ರಾತ್ರಿ ಭಾಗವಹಿಸಿದ್ದ ಅಮಿತ್ ಶಾ ಅವರಿಗೆ ಸಂಘದ ಮುಖಂಡರು ತಿಳಿಸಿದ ಸೂತ್ರಗಳು ಭಾರೀ ಅಸ್ತ್ರಗಳಾಗಿವೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಲು ಸಂಘದ ಪ್ಲಾನ್ ಬಗ್ಗೆ ಸವಿವರವಾಗಿ ನೀಡಿದ್ದಾರೆ. ಈ ಮೂಲಕ ಉತ್ತರ ಹಾಗೂ ದಕ್ಷಿಣ ಭಾರತದಲ್ಲಿ ಹೇಗೆ ಗೆಲುವು ಸಾಧಿಸಬಹುದು ಎನ್ನುವ ರಣತಂತ್ರ ತಿಳಿ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಏನಿದು ಮೂರು ಮಂತ್ರಗಳು?
    ಉತ್ತರ ಭಾರತದಲ್ಲಿ ಅಯೋಧ್ಯೆ ರಾಮ ಮಂದಿರ ವಿಚಾರವನ್ನು ಹೆಚ್ಚು ಪ್ರಚಾರ ಮಾಡಬೇಕು. ರಾಮಮಂದಿರ ಸ್ಥಾಪನೆಗೆ ಬಿಜೆಪಿ ಇದೂವರೆಗೆ ನಡೆಸಿದ ಹೋರಾಟದ ಬಗ್ಗೆ ಪ್ರಚಾರ ಮಾಡಬೇಕು. ದಕ್ಷಿಣ ಭಾರತದಲ್ಲಿ ಅಯ್ಯಪ್ಪ ಭಕ್ತರ ಸಂಖ್ಯೆ ಜಾಸ್ತಿಯಿದೆ. ಹೀಗಾಗಿ ಶಬರಿಮಲೆಗೆ ಮಹಿಳೆಯ ಪ್ರವೇಶ ವಿರೋಧಿಸಿ ಹೋರಾಟ ತೀವ್ರಗೊಳ್ಳಬೇಕು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಜಾಸ್ತಿ ಸಂಖ್ಯೆಯಲ್ಲಿ ಅಯ್ಯಪ್ಪ ಭಕ್ತರಿದ್ದಾರೆ. ಶಬರಿಮಲೆಗೆ ಮಹಿಳೆಯ ಪ್ರವೇಶ ನೀಡದಂತೆ ಪ್ರತಿಭಟನೆಗೆ ರಣತಂತ್ರ ನಡೆಸಿ. ನಾಳೆಯಿಂದ ಶಬರಿಮಲೆಯಲ್ಲಿ ಅಯ್ಯಪ್ಪ ದೇಗುಲ ತೆರೆಯಲಿದ್ದು, ಹೋರಾಟ ತೀವ್ರಗೊಳಿಸಿ ಎಂದು ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಕರಾವಳಿಯಲ್ಲಿ ಗೋವುಗಳ ಕಳ್ಳ ಸಾಗಾಣಿಕೆ ಜಾಸ್ತಿಯಾಗುತ್ತಿದ್ದು, ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಒಟ್ಟು 28 ಲೋಕಸಭಾ ಸ್ಥಾನಗಳ ಪೈಕಿ 2014ರಲ್ಲಿ 17 ರಲ್ಲಿ ಬಿಜೆಪಿ ಜಯಗಳಿಸಿತ್ತು. ಈ ಬಾರಿ 25 ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಬೇಕು. ಈ ಮೂರು ತಂತ್ರಗಳನ್ನು ಅನುಸರಿಸಿದರೆ ಕಷ್ಟದ ಕೆಲಸವಲ್ಲ. ಈ ನಿಟ್ಟಿನಲ್ಲಿ ಬಿಜೆಪಿ ನಾಯಕರು ಕೆಲಸ ಮಾಡಬೇಕು ಎಂದು ಅಮಿತ್ ಶಾಗೆ ಆರ್‍ಎಸ್‍ಎಸ್ ಮುಖಂಡರು ಸಲಹೆ ನೀಡಿದ್ದಾರೆ.

    ಈ ವೇಳೆ ಬೈಠಕ್‍ನಲ್ಲಿ ಉಪಸಮರದಲ್ಲಿ ಬಿಜೆಪಿಗೆ ಆದ ಹಿನ್ನಡೆ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಸತತ ನಾಲ್ಕು ಗಂಟೆಗಳ ಕಾಲ  ಆರ್‌ಎಸ್‌ಎಸ್ ಮುಖಂಡರ ಜತೆ ಅಮಿತ್ ಶಾ ಚರ್ಚೆ ನಡೆಸಿದ್ದಾರೆ. ಸುರೇಶ್ ಭಯ್ಯಾಜಿ ಜೋಶಿ, ಮುಕುಂದ್ ಜೀ, ಸಂತೋಷ್ ಜೀ ಸೇರಿದಂತೆ ಕೇರಳ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕ ಆರ್‍ಎಸ್‍ಎಸ್ ಪ್ರಮುಖರ, ಸಂಘಟನಾ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆದಿದೆ.

    ಜ್ವಲಂತ ವಿಚಾರಗಳ ಮೂಲಕ ಎಡಪಕ್ಷಗಳಿಗೆ ಏಟು ನೀಡಿ ಲೋಕಸಭೆ ಚುನಾವಣೆಯಲ್ಲಿ ಮತ್ತೆ ಸ್ಥಾನಗಳನ್ನು ಪಡೆಯಲು ಏನು ಮಾಡಬೇಕು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಸಭೆ ಬಳಿಕ ಹೊರಟ ಅಮಿತ್ ಶಾ ಓಷಿಯನ್ ಪರ್ಲ್ ಹೊಟೇಲ್‍ನಲ್ಲಿ ತಡರಾತ್ರಿಯವರೆಗೂ ಬಿಜೆಪಿ ನಾಯಕರೊಂದಿಗೆ ಸಣ್ಣ ಮಟ್ಟಿನ ಸಭೆ ನಡೆಸಿದ್ದಾರೆ. ಗುರುವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಅಮಿತ್ ಶಾ ದೆಹಲಿಗೆ ಪ್ರಯಾಣಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗೋವು ರಕ್ಷಣೆ ನಿರತ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ! ರಕ್ಷಣೆಗೆ ಪ್ರಧಾನಿಗೆ ಮನವಿ

    ಗೋವು ರಕ್ಷಣೆ ನಿರತ ಮುಸ್ಲಿಂ ಮಹಿಳೆಗೆ ಜೀವ ಬೆದರಿಕೆ! ರಕ್ಷಣೆಗೆ ಪ್ರಧಾನಿಗೆ ಮನವಿ

    ಭೋಪಾಲ್: ಗೋವುಗಳ ಸಂರಕ್ಷಣೆಯಲ್ಲಿ ನಿರತರಾಗಿರುವ ಮುಸ್ಲಿಂ ಮಹಿಳೆಯೊಬ್ಬರಿಗೆ ಸಂಬಂಧಿಕರೇ ಜೀವ ಬೆದರಿಕೆ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನೀಮುಚ್ ಜಿಲ್ಲೆಯಲ್ಲಿ ನಡೆದಿದೆ.

    ಮಧ್ಯಪ್ರದೇಶದ ರಾಷ್ಟ್ರೀಯ ಗೋವು ರಕ್ಷಾ ವಾಹಿಣಿ ಅಧ್ಯಕ್ಷೆ ಮೆಹ್ರುನ್ನೀಸಾ ಖಾನ್ ಜೀವ ಬೆದರಿಕೆಗೆ ಒಳಗಾದ ಮಹಿಳೆ. ಸದ್ಯ ಅವರು ತಮಗೆ ರಕ್ಷಣೆ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

    ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಮೆಹ್ರುನ್ನೀಸಾ ಅವರು, ನಾನು ಗೋವುಗಳ ಸಂರಕ್ಷಣೆ ಮಾಡುತ್ತಿರುವೆ. ಹೀಗಾಗಿ ತಮ್ಮ ಪ್ರತಿಷ್ಠೆಗೆ ದಕ್ಕೆ ಉಂಟಾಗುತ್ತಿದೆ ಎಂದು ಸಂಬಂಧಿಕರು ಅನೇಕ ಬಾರಿ ಥಳಿಸಿದ್ದಾರೆ. ಅಷ್ಟೇ ಅಲ್ಲದೇ ಜೀವ ಬೆದರಿಕೆ ಕೂಡಾ ಹಾಕಿದ್ದಾರೆ ಎಂದು ಅಳಲು ತೊಡಿಕೊಂಡರು. ಇದನ್ನು ಓದಿ: ಆನ್‍ಲೈನ್ ನಲ್ಲಿ ನಿಮಗೆ ಬೇಕಾದ ತಳಿಯ ಹಸುಗಳನ್ನು ಖರೀದಿಸಿ!- ಏನಿದರ ವಿಶೇಷತೆ?

    ಗೋವುಗಳ ರಕ್ಷಣೆಗೆ ಸೇರಿದಾಗಿನಿಂದ ಹಾಗೂ ತ್ರಿವಳಿ ತಲಾಖ್ ವಿರುದ್ಧ ಧ್ವನಿ ಎತ್ತಿದ್ದರಿಂದ ನನ್ನ ತಾಯಿ, ಮಗಳು ಭಾರೀ ವಿರೋಧ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಸಂಬಂಧಿಕರು ನನಗೆ ಥಳಿಸಿದ್ದು, ಜೀವ ಬೆದರಿಕೆ ಹಾಕಿದ್ದಾರೆ. ಹೀಗಾಗಿ ಮೂರು ತಿಂಗಳ ಹಿಂದೆಯೇ ಪೊಲೀಸರ ಸಹಾಯವನ್ನು ಕೇಳಿದ್ದೆ. ಸದ್ಯ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದರಿಂದ ರಕ್ಷಣೆ ನೀಡುವಂತೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿರುವೆ ಎಂದು ಅವರು ಹೇಳಿದರು.

    ನೀಮುಚ್ ನಗರದಿಂದ 500 ಮೀ. ದೂರದಲ್ಲಿ ಗೋಶಾಲೆ ನಡೆಸಲಾಗುತ್ತಿದೆ. ಗೋವುಗಳ ರಕ್ಷಣೆ ನಮ್ಮ ಗೌರವಕ್ಕೆ ದಕ್ಕೆ ತರುತ್ತದೆ. ಹೀಗಾಗಿ ಈ ಕಾರ್ಯವನ್ನು ಕೈಬಿಡುವಂತೆ ಸಂಬಂಧಿಕರು ಒತ್ತಾಯಿಸುತ್ತಿದ್ದಾರೆ. ಆದರೆ ಪ್ರಾಣಿಗಳ ರಕ್ಷಣೆ ನಮ್ಮ ಗೌರವಕ್ಕೆ ಹೇಗೆ ಧಕ್ಕೆ ತರುತ್ತದೆ ಎನ್ನುವುದೇ ನನಗೆ ಅರ್ಥವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.