Tag: Cow Slaughter Bill

  • ಗೋಹತ್ಯೆ ನಿಷೇಧ ಕಾಯ್ದೆ – ಪರಿಷತ್‍ನಲ್ಲಿ ಕಾಂಗ್ರೆಸ್, ಬಿಜೆಪಿ ಜಟಾಪಟಿ

    ಗೋಹತ್ಯೆ ನಿಷೇಧ ಕಾಯ್ದೆ – ಪರಿಷತ್‍ನಲ್ಲಿ ಕಾಂಗ್ರೆಸ್, ಬಿಜೆಪಿ ಜಟಾಪಟಿ

    ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ (Cow Slaughter Bill) ವಿಚಾರವಾಗಿ ಆಡಳಿತ ಪಕ್ಷ (Congress) ಹಾಗೂ ವಿಪಕ್ಷ ಬಿಜೆಪಿ (BJP) ನಡುವಿನ ಗದ್ದಲ ತಾರಕಕ್ಕೇರಿದೆ. ಇದೇ ವಿಚಾರವಾಗಿ ಬುಧವಾರ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಗೋಹತ್ಯೆ ನಿಷೇಧ ಕಾಯ್ದೆ ರದ್ದುಪಡಿಸುವ ಪ್ರಸ್ತಾಪ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಪಶು ಸಂಗೋಪನೆ ಸಚಿವ ಕೆ.ವೆಂಕಟೇಶ್ ಅಂತಹ ಪ್ರಸ್ತಾಪ ಈಗ ಸರ್ಕಾರದ ಮುಂದಿಲ್ಲ ಎಂದು ಉತ್ತರಿಸಿದರು. ಇದಕ್ಕೆ ಪ್ರತಿಯಾಗಿ ಮಾತನಾಡಿದ ರವಿಕುಮಾರ್, ಸಚಿವರು ಈಗ ಈ ಉತ್ತರ ನೀಡಿದ್ದಾರೆ. ಆದರೆ ಜೂನ್ 3 ರಂದು ಮೈಸೂರಿನಲ್ಲಿ ಎಮ್ಮೆ ಕೋಣ ಕಡಿಯುವುದಾದರೆ ಗೋವುಗಳನ್ನು ಯಾಕೆ ಕಡಿಯಬಾರದು ಎಂದು ಅವರೇ ಹೇಳಿಕೆ ಕೊಟ್ಟಿದ್ದಾರೆ. ಈಗ ಪ್ರಸ್ತಾಪ ಇಲ್ಲ ಎನ್ನುವ ಉತ್ತರ ನೀಡಿದ್ದಾರೆ ನಮಗೆ ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 40% ಕಮಿಷನ್ ಸೇರಿ ಎಲ್ಲದರ ತನಿಖೆಯಾಗ್ಲಿ- ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್

    ಅಲ್ಲದೇ ಈಗ ಇಲ್ಲ ಎನ್ನುತ್ತಿದ್ದೀರಿ, ಹಾಗಾದರೆ ಮುಂದೆ ಇದೆಯೇ? ಲಕ್ಷಾಂತರ ಜನ ಹಸು ಸಾಕುವವರಿದ್ದಾರೆ. ವಯಸ್ಸಾದ ಹಸುಗಳನ್ನು ಏನು ಮಾಡಬೇಕು ಎಂದು ಪ್ರಶ್ನಿಸಿದ್ದಿರಿ. ಸಮಾಜ ಈಗಾಗಲೇ ಇದಕ್ಕೆ ಪರಿಹಾರ ಕಂಡುಕೊಂಡಿದೆ. ಸರ್ಕಾರ ತನ್ನ ಸ್ಪಷ್ಟ ನಿರ್ಧಾರ ತಿಳಿಸಿಬೇಕು. ಇತ್ತೀಚಿನ ಹಬ್ಬದಲ್ಲಿ ಗೋಹತ್ಯೆಯಾಯಿತು ಯಾಕೆ ಕ್ರಮ ವಹಿಸಲಿಲ್ಲ. ಕಾಯ್ದೆ ಇದ್ದರೂ ಗೋವುಗಳ ರಕ್ಷಣೆ ಯಾಕಿಲ್ಲ? ಎಂದು ಅವರು ಕಿಡಿಕಾರಿದರು.

    ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸರ್ಕಾರದ ಸ್ಪಷ್ಟನೆಗೆ ಆಗ್ರಹಿಸಿ ದನಿಗೂಡಿಸಲು ಮುಂದಾದರು. ಇದಕ್ಕೆ ಗರಂ ಆದ ಸಭಾಪತಿ ಬಸವರಾಜ ಹೊರಟ್ಟಿ, ಪೂಜಾರಿ ನೀವೀಗ ಪ್ರತಿಪಕ್ಷದ ನಾಯಕರಲ್ಲ. ಆಗಾಗ ಎದ್ದು ನಿಲ್ಲಬೇಡಿ ಎಂದು ತಾಕೀತು ಮಾಡಿದರು. ನಂತರ ಗೋಹತ್ಯೆಗೆ ಕ್ರಮ ವಹಿಸುವ ವಿಚಾರದ ಕುರಿತು ಸ್ಪಷ್ಟ ಉತ್ತರಕ್ಕೆ ಆಗ್ರಹಿಸಿ ಬಿಜೆಪಿ ನಾಯಕರು ಸದನದ ಬಾವಿಗಿಳಿದು ಧರಣಿ ನಡೆಸಿದರು.

    ಈ ವೇಳೆ ಮಾತನಾಡಿದ ಸಚಿವ ರಾಮಲಿಂಗಾರೆಡ್ಡಿ, ಗೋಮಾಂಸ ರಫ್ತಿನದಲ್ಲಿ ದೇಶ ಎರಡನೇ ಸ್ಥಾನದಲ್ಲಿದೆ. ಇದಕ್ಕೆ ಮೊದಲು ಉತ್ತರ ಕೊಡಬೇಕು. ಇದಕ್ಕೆ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹಮದ್ ಸಾಥ್ ನೀಡಿ, ಬೇರೆ ರಾಜ್ಯದಲ್ಲಿ ಏನಿದೆ ಅದರ ಬಗ್ಗೆ ಮಾತನಾಡಿ, ಅಂಕಿ ಅಂಶ ತೆಗೆದುನೋಡಿ ಎಂದಿದ್ದಾರೆ.

    ನಂತರ ಮಾತನಾಡಿದ ಸಚಿವ ಕೃಷ್ಣಬೈರೇಗೌಡ, ಬಿಜೆಪಿ ಸದಸ್ಯರು ಸದನದ ಸಮಯ ಹಾಳು ಮಾಡುತ್ತಿದ್ದಾರೆ. ರಾಜಕೀಯ ಕಾರಣಕ್ಕೆ ಸದನದ ಸಮಯ ಹಾಳು ಮಾಡುತ್ತಿದ್ದಾರೆ. ಇದು ರಾಜಕೀಯ, ಮತಗಳ ಬೇಟೆಗೆ ಸದನದ ಸಮಯ ಬಲಿ ಕೊಡುತ್ತಿದ್ದಾರೆ. ನಮ್ಮ ನಿಲುವು ಹೇಳಲಾಗಿದೆ. ರಾಜಕೀಯವನ್ನು ಹೊರಗೆ ಹೋಗಿ ಮಾಡಿ. ನಿಮಗೆ ಸದನ ನಡೆಯುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

    ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಸಚಿವರು ಸೂಕ್ತ ಉತ್ತರ ಕೊಟ್ಟ ನಂತರ ಇದೇ ರೀತಿ ಉತ್ತರ ಕೊಡಬೇಕು ಎನ್ನುವ ಮೊಂಡುತನ ಸರಿಯಲ್ಲ ಎಂದಿದ್ದಾರೆ. ಇದಕ್ಕೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಗೋಹತ್ಯೆ ನಿಷೇಧ ಬಿಲ್ ವಾಪಸ್ ಪಡೆಯಲ್ಲ ಎನ್ನುವ ಭರವಸೆ ನೀಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವ ವೆಂಕಟೇಶ್ ಇತ್ತೀಚೆಗೆ ಗೋಹತ್ಯೆ ನಡೆದಿದ್ದು ಕಂಡುಬಂದಲ್ಲಿ ಕ್ರಮ ವಹಿಸಲಾಗುತ್ತದೆ ಎಂದು ಭರವಸೆ ನೀಡಿದರು.

    ಆದರೂ ಸರ್ಕಾರದ ಉತ್ತರವನ್ನು ಖಂಡಿಸಿ ಬಿಜೆಪಿ ಸದಸ್ಯರು ಸದನದಲ್ಲಿ ಧರಣಿ ಮುಂದುವರೆಸಿದರು. ಸಭಾಪತಿ ಮನವಿಗೂ ಸ್ಪಂದಿಸದೆ ಘೋಷಣೆ ಕೂಗಿದರು. ಸಭಾಪತಿಗಳು ಮುಂದಿನ ಕಲಾಪ ಕೈಗೆತ್ತಿಕೊಂಡರೂ ಬಿಜೆಪಿ ಸದಸ್ಯರು ಘೋಷಣೆ ಕೂಗಿ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಗದ್ದಲ ಉಂಟಾದ ಕಾರಣ ಕಲಾಪವನ್ನ ಮುಂದೂಡಲಾಯಿತು. ಇದನ್ನೂ ಓದಿ: ನನ್ನ ಬಳಿ ದಾಖಲೆ ಇದೆ- ಹೆಚ್‍ಡಿಕೆ ಪೆನ್‍ಡ್ರೈವ್ ಬಾಂಬ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಾಕತ್ತಿದ್ರೆ ಸಂಪೂರ್ಣ ಗೋಮಾಂಸ ರಫ್ತು ನಿಷೇಧಿಸಿ: ಸಿದ್ದರಾಮಯ್ಯ ಚಾಲೆಂಜ್

    ತಾಕತ್ತಿದ್ರೆ ಸಂಪೂರ್ಣ ಗೋಮಾಂಸ ರಫ್ತು ನಿಷೇಧಿಸಿ: ಸಿದ್ದರಾಮಯ್ಯ ಚಾಲೆಂಜ್

    – ಗೋ ಹತ್ಯೆ ನಿಷೇಧ ಮಸೂದೆ ಹಿಂದೆ 2 ದುರುದ್ದೇಶ
    – ಬಿಜೆಪಿ ಆಡಳಿತ ಇರುವ ಗೋವಾದಲ್ಲಿ ಏಕಿಲ್ಲ ಮಸೂದೆ?

    ಬೆಂಗಳೂರು: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಗೋ ಹತ್ಯೆ ನಿಷೇಧ ಮಸೂದೆ ಜಾರಿಗೆ ತಂದಿರೋದಕ್ಕೆ ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿಮಗೆ ತಾಕತ್ತಿದ್ರೆ ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ ಎಂದು ಓಪನ್ ಚಾಲೆಂಜ್ ಹಾಕಿದ್ದಾರೆ. ಗೋ ಹತ್ಯೆ ನಿಷೇಧ ಮಸೂದೆ ಬಗ್ಗೆ ಸಾಲು ಸಾಲು ಟ್ವೀಟ್ ಗಳ ಮೂಲಕ ಸಿದ್ದರಾಮಯ್ಯನವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮಸೂದೆ ಹಿಂದೆ ಎರಡು ದುರುದ್ದೇಶ: ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಬಿಜೆಪಿ ನಾಯಕರಿಗೆ. ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸುವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಇಲ್ಲ.

    ಇಷ್ಟೆಲ್ಲ ನಾಟಕ ಮಾಡಬೇಕೇ?: ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊಂದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ? ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಿಂದಾಗಿ ರೈತರು ಮಾತ್ರ ಅಲ್ಲ, ಚರ್ಮದ ಉತ್ಪನ್ನಗಳ ತಯಾರಿಕೆಗೆ ಚರ್ಮದ ಕೊರತೆ ಎದುರಾಗಲಿದ್ದು, ಉತ್ಪಾದನೆ ಕುಂಠಿತಗೊಳ್ಳಲಿದೆ. ಇದರಿಂದ ನೇರವಾಗಿ ಮತ್ತು ಪರೋಕ್ಷವಾಗಿ ಈ ಕಸುಬನ್ನು ನಂಬಿ ಬದುಕುತ್ತಿರುವ ಸಾವಿರಾರು ಕುಟುಂಬಗಳು ಉದ್ಯೋಗ ಕಳೆದುಕೊಂಡು ಬೀದಿಪಾಲಾಗಲಿವೆ.

    ಗೋ ಶಾಲೆಗಳು ಎಷ್ಟಿವೆ?: ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎಂದೆಲ್ಲ ಹೇಳುವವರು ಕನಿಷ್ಠ ದೇಶಕ್ಕೆಲ್ಲ ಅನ್ವಯವಾಗುವಂತಹ ಸಮಾನ ಗೋಹತ್ಯೆ ನಿಷೇಧ ಕಾನೂನು ತರಬಾರದೇಕೆ? ನಿಮಗೆ ತಾಕತ್ತಿದ್ದರೆ ಬಿಜೆಪಿ ಆಡಳಿತ ಇರುವ ಗೋವಾ, ಈಶಾನ್ಯ ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೆ ತನ್ನಿ. ಗೋಮಾಂಸ ರಫ್ತುಮಾಡುವುದನ್ನು ಸಂಪೂರ್ಣ ನಿಷೇಧಿಸಿ. ವಯಸ್ಸಾದ ಹಸುಗಳ ಪಾಲನೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವೇ ಹೊರಲಿದೆ ಎಂದು ಹೇಳಿದ್ದೀರಿ. ರಾಜ್ಯದಲ್ಲಿ ಎಷ್ಟು ಸರ್ಕಾರವೇ ನಡೆಸುತ್ತಿರುವ ಗೋಶಾಲೆಗಳಿವೆ? ಎಷ್ಟು ಹೊಸ ಗೋಶಾಲೆಗಳನ್ನು ತೆರೆಯಲಿದ್ದೀರಿ? ಇದಕ್ಕಾಗಿ ಎಷ್ಟು ಹಣ ಒದಗಿಸಿದ್ದೀರಿ? ಈ ವಿವರಗಳನ್ನು ಮೊದಲು ಬಹಿರಂಗಪಡಿಸಿ.