Tag: cow

  • ಜೀವದ ಹಂಗು ತೊರೆದು ಸಮವಸ್ತ್ರದಲ್ಲೇ ನೀರಿಗಿಳಿದು ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    ಜೀವದ ಹಂಗು ತೊರೆದು ಸಮವಸ್ತ್ರದಲ್ಲೇ ನೀರಿಗಿಳಿದು ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    – ಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ

    ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸುವನ್ನ ಅಗ್ನಿಶಾಮಕ ಸಿಬ್ಬಂದಿ ಪ್ರಾಣದ ಹಂಗು ತೊರೆದು ರಕ್ಷಿಸಿರೋ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ.

    ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯುದ್ಧಕ್ಕೂ ಎಲ್ಲೂ ಸರ್ಕಾರ ಬೇಲಿಯನ್ನು ನಿರ್ಮಿಸಿಲ್ಲ. ಆದ್ದರಿಂದ ಮೇಯುವಾಗ ಆಯಾ ತಪ್ಪಿ ಬಿದ್ದ ಹುಸು ಜೀವ ಉಳಿಸಿಕೊಳ್ಳಲು ಹೋರಾಡುತ್ತಿತ್ತು. ವೇಗವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋಗುತ್ತಲೇ ಜೀವ ಉಳಿಸಿಕೊಳ್ಳಲು ಹೋರಾಡುತ್ತಿದ್ದ ಹಸುವನ್ನು ಕಂಡು ಸ್ಥಳೀಯರು ಪೊಲೀಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳ ಗಮನಕ್ಕೆ ತಂದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಸಮವಸ್ತ್ರದ್ಲಲಿ ಸೊಂಟಕ್ಕೆ ಹಗ್ಗ ಕಟ್ಟಿಕೊಂಡು ನೀರಿನಲ್ಲಿ ಧುಮುಕಿ ಹಸುವನ್ನ ರಕ್ಷಿಸಿದ್ದಾರೆ.

    ಸುಮಾರು ಅರ್ಧಗಂಟೆಗಳ ಕಾಲ ನೀರಿನಲ್ಲಿಯೇ ಹಸುವಿಗೆ ಹಗ್ಗ ಕಟ್ಟಿ ಅದನ್ನು ಕಾಲುವೆಯ ಒಂದು ಬದಿಗೆ ಎಳೆತಂದು ಬಳಿಕ ಸ್ಥಳೀಯರ ಸಹಾಯದಿಂದ ಹುಸುವನ್ನು ರಕ್ಷಿಸಿ ಮೇಲೆ ತಂದಿದ್ದಾರೆ. ಆದರೆ ಕಳೆದ ಮೂರು ದಿನಗಳ ಹಿಂದೆ ಇದೇ ರೀತಿ ಅಜ್ಜಂಪುರದ ಸಮೀಪ ಇದೇ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಬಿದ್ದಿದ್ದ ಹಸುವೊಂದನ್ನು ಸ್ಥಳೀಯರು ರಕ್ಷಿಸಲು ಮುಂದಾಗಿದ್ದರು. ನೀರು ವೇಗವಾಗಿ ಹರಿಯುತ್ತಿದ್ದ ಕಾರಣ ಹಸುವನ್ನ ಜೆಸಿಬಿ ಮೂಲಕವೂ ರಕ್ಷಿಸಲು ಮುಂದಾಗಿದ್ದರು. ಆದರೆ ಸ್ಥಳೀಯರ ಕೆಲಸ ಫಲ ಕೊಡಲಿಲ್ಲ. ಹಸು ಕೊಚ್ಚಿ ಹೋಗಿ ಸಾವನ್ನಪ್ಪಿತು. ಅಷ್ಟೆ ಅಲ್ಲದೇ ಕಳೆದ ಎರಡು ದಿನಗಳ ಹಿಂದಷ್ಟೆ ಈಜಲು ಹೋಗಿದ್ದ 22 ವರ್ಷದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದಾನೆ.

    ಕಳೆದ ಮೂರು ತಿಂಗಳಲ್ಲಿ ಸುಮಾರು ನಾಲ್ಕೈದು ಜನ ಇದೇ ಭದ್ರಾ ಮೇಲ್ದಂಡೆ ಯೋಜನೆಗೆ ಬಲಿಯಾಗಿದ್ದಾರೆ. ಹಾಗಾಗಿ ಸ್ಥಳೀಯರು ಸರ್ಕಾರ ವಿರುದ್ಧ ಅಸಮಾಧಾನ ಹೊರಹಾಕಿ, ಜಿಲ್ಲೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯ ಕಾಲುವೆ ನೂರಾರು ಕಿ.ಮೀ. ಸಾಗಿದೆ. ಎಲ್ಲೂ ಕೂಡ ನಾಲೆಯ ಎರಡೂ ಬದಿಗೆ ತಂತಿ ಬೇಲೆ ನಿರ್ಮಿಸಿಲ್ಲ. ಹಾಗಾಗಿ ಸಾವು-ನೋವುಗಳು ಹೆಚ್ಚಾಗುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ನಾಲೆಯ ಎರಡು ಬದಿಗೆ ತಂತಿ ಬೇಲಿ ನಿರ್ಮಿಸಿಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

  • ಮಾಲೀಕನ ರಕ್ಷಣೆಗೆ ಧಾವಿಸುವ ಗೋವು- ವೀಡಿಯೋ ವೈರಲ್

    ಮಾಲೀಕನ ರಕ್ಷಣೆಗೆ ಧಾವಿಸುವ ಗೋವು- ವೀಡಿಯೋ ವೈರಲ್

    – ಗೋವಿನ ಪ್ರಾಮಾಣಿಕತೆಗೆ ಜನ ಫಿದಾ

    ಗಾಂಧಿನಗರ: ಕೆಲ ದಿನಗಳ ಹಿಂದೆ ಮಾಲೀಕನನ್ನ ರಕ್ಷಿಸುವ ವೀಡಿಯೋ ವೈರಲ್ ಆಗಿತ್ತು. ಖಾಸಗಿ ಮಾಧ್ಯಮ ವೀಡಿಯೋ ರಿಯಾಲಿಟಿ ಚೆಕ್ ನಡೆಸಿ ವರದಿ ಬಿತ್ತರಿಸಿದೆ.

    ಗುಜರಾತ್ ರಾಜ್ಯದ ಕಛ್ ಜಿಲ್ಲೆಯ ನಿವಾಸಿ ಮಾನದ್ ಎಂಬವರ ಹಸು ತನ್ನ ಸ್ನೇಹಿತನಂತೆ ಸಾಕಿಕೊಂಡಿದ್ದಾರೆ. ಮಾಲೀಕನ ಮೇಲೆ ಯಾರಾದ್ರೂ ಹಲ್ಲೆಗೆ ಯತ್ನಿಸಿದ್ರೆ ಹಸು ಪ್ರತ್ಯಕ್ಷವಾಗಿ ಒಡೆಯನ ರಕ್ಷಣೆಗೆ ಮುಂದಾಗುತ್ತದೆ.

    ನಾನು ಹಸುವನ್ನು ಗೆಳೆಯನಂತೆ ನೋಡಿಕೊಂಡಿದ್ದೇನೆ. ನನಗೆ ಅಪಾಯವಾದ್ರೆ ರಕ್ಷಣೆಗೆ ಬರುತ್ತೆ. ನೀವು ಬೇಕಾದ್ರೆ ನನ್ನ ಹಲ್ಲೆ ನಡೆಸಿದಂತೆ ನಟಿಸಿ ದೂರದಲ್ಲಿರುವ ನನ್ನ ಹಸು ಓಡೋಡಿ ಬರುತ್ತೆ ಎಂದು ಮಾನದ್ ಹೇಳುತ್ತಾರೆ. ಸ್ಥಳಕ್ಕೆ ತೆರಳಿದ ಮಾಧ್ಯಮ ಸಿಬ್ಬಂದಿ ರಿಯಾಲಿಟಿ ಚೆಕ್ ನಡೆಸಿದ್ದಾರೆ. ಆತನೊಂದಿಗೆ ಇನ್ನೋರ್ವ ಕೋಲಿನಿಂದ ಹೊಡೆದಾಡುವಂತೆ ನಟಿಸಿದಾಗಲೂ ಮೇಯುತ್ತಿದ್ದ ಹಸು ಬಂದಿದೆ.

    ಮಾನದ್ 12 ವರ್ಷದವಾಗಿರಿಂದಲೇ ಹಸುಗಳನ್ನು ಮೇಯಿಸಿಕೊಂಡು ಬರುತ್ತಿದ್ದಾರೆ. ಮಾನದ್ 20 ಜಾನುವಾರುಗಳಿದ್ದು, ಅದರಲ್ಲಿ ಈ ಹಸು ತುಂಬಾ ವಿಶೇಷ ಗುಣವನ್ನು ಹೊಂದಿದೆ. ಇನ್ನು ಮಾನದ್ ಬಿಡುವಿನ ಸಮಯದಲ್ಲಿ ಆಟೋ ಸಹ ಓಡಿಸುತ್ತಾರೆ.

  • ಮೀನು ಸಾಗಾಟದ ಟೆಂಪೋದಲ್ಲಿ 12 ಟನ್ ಗೋಮಾಂಸ ಸಾಗಣೆ

    ಮೀನು ಸಾಗಾಟದ ಟೆಂಪೋದಲ್ಲಿ 12 ಟನ್ ಗೋಮಾಂಸ ಸಾಗಣೆ

    – ಭಜರಂಗದಳದ ಕಾರ್ಯಾಚರಣೆಯಿಂದ ಬಹಿರಂಗ

    ಮಂಗಳೂರು: ಮೀನು ಸಾಗಾಟದ ಟೆಂಪೋದಲ್ಲಿ ಬರೋಬ್ಬರಿ 12 ಟನ್ ಗೋಮಾಂಸ ಸಾಗಣೆ ಮಾಡುತ್ತಿದ್ದ ವೇಳೆ ಭಜರಂಗ ದಳದ ಕಾರ್ಯಕರ್ತರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಪತ್ತೆ ಮಾಡಿದ್ದಾರೆ.

    ಮಂಗಳೂರಿನಲ್ಲಿ ಘಟನೆ ನಡೆದಿದ್ದು, ಭಾರೀ ಪ್ರಮಾಣದಲ್ಲಿ ಗೋಮಾಂಸವನ್ನು ಸಾಗಾಟ ಮಾಡುತ್ತಿರುವ ಬಗ್ಗೆ ಮಂಗಳೂರಿನ ಭಜರಂಗದಳದ ಕಾರ್ಯಕರ್ತರಿಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ನಗರದ ಹೊರವಲಯದ ಅಡ್ಯಾರ್ ನಿಂದ ಮೀನು ಸಾಗಟದ ಟೆಂಪೋವನ್ನು ಭಜರಂಗದಳದ ಕಾರ್ಯಕರ್ತರು ಬೆನ್ನಟ್ಟಿಕೊಂಡು ಬಂದಿದ್ದರು. ಇದೇ ವೇಳೆ ಕಂಕನಾಡಿ ನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ನಗರದ ಪಡೀಲ್ ನಲ್ಲಿ ಟೆಂಪೋವನ್ನು ತಡೆದಿದ್ದಾರೆ.

    ಬಳಿಕ ತಪಾಸಣೆ ನಡೆಸಿದಾಗ ಮೀನು ಸಾಗಾಟದ ಟೆಂಪೋದಲ್ಲಿ ಬರೋಬ್ಬರಿ 12 ಟನ್ ಗೋಮಾಂಸ ಪತ್ತೆಯಾಗಿದ್ದು, ಪೊಲೀಸರು ಗೋಮಾಂಸವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಈ ಗೋಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರೋದಾಗಿ ಆರೋಪಿಗಳು ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾರೆ.

    ಕಳೆದ ಒಂದು ವಾರದ ಹಿಂದೆ ಇದೇ ರೀತಿ ಹಾಲು ಸಾಗಾಟದ ಟೆಂಪೋದಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದಾಗ ಭಜರಂಗದಳದ ಕಾರ್ಯಕರ್ತರು ಅಡ್ಡ ಹಾಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿತ್ತು.

  • ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸ್ತಿದ್ದ ವ್ಯಕ್ತಿಯ ಬಂಧನ

    ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸ್ತಿದ್ದ ವ್ಯಕ್ತಿಯ ಬಂಧನ

    – ಸಿಸಿಟಿವಿಯಲ್ಲಿ  ವ್ಯಕ್ತಿಯ ದುರ್ವರ್ತನೆ ಸೆರೆ

    ತಿರುವನಂತಪುರಂ: ಹಸುವಿನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಕೋಯಿಕ್ಕೋಡ್ ನ ಕುನ್ನಮಂಗಕಂ ಎಂಬಲ್ಲಿ ನಡೆದಿದೆ. ವ್ಯಕ್ತಿಯ ವಿಚಿತ್ರ ವರ್ತನೆ ಸಿಸಿಟಿಯಲ್ಲಿ ಸೆರೆಯಾಗಿದೆ.

    ಆರೋಪಿಯನ್ನು ಮುರಳೀಧರನ್ ಎಂದು ಗುರುತಿಸಲಾಗಿದೆ. ಈತ ಎರ್ನಾಕುಲಂ ಮೂಲದವನಾಗಿದ್ದು, ಕೋಯಿಕ್ಕೋಡ್ ನ ವಲಿಯವಯಾಲ್ ಮುಲ್ಲೆರಿಕುನುಮೆಲ್ ನಲ್ಲಿ ವಾಸವಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

    ಈತ ವಾಸವಿದ್ದ 12 ಮೈಲಿ ದೂರದಲ್ಲಿದ್ದ ಚಥಮಂಗಲಂ ಎಂಬವರ ಮನೆಯ ಹಸುವಿನ ಮೇಲೆ ಆರೋಪಿ ಈ ಕೃತ್ಯ ಎಸಗಿದ್ದಾನೆ. ರಾತ್ರಿ ಎಲ್ಲರೂ ಮಲಗಿದ ಬಳಿಕ ಆರೋಪಿ ಚಥಮಂಗಲಂ ನಿವಾಸದ ಬಳಿ ಬಂದು ಕೊಟ್ಟಿಗೆಯಿಂದ ಹಸುವನ್ನು ಬಿಚ್ಚಿಕೊಂಡು ಹೊರಗಡೆ ಕರೆದೊಯ್ಯುತ್ತಾನೆ. ಬಳಿಕ ಅದರ ಮೇಲೆ ಅಸಹಜ ಲೈಂಗಿಕ ಕ್ರಿಯೆ ಎಸಗುತ್ತಿದ್ದನು. ತನ್ನ ಕಾಮ ತೃಷೆ ತೀರಿಸಿಕೊಂಡ ನಂತರ ಹಸುವನ್ನು ಅಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗುತ್ತಿದ್ದನು.

    ಹೀಗೆ ಅನೇಕ ಬಾರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಬೆಳಗಾಗುವಾಗ ಇಲ್ಲದಿರುವುದರಿಂದ ಆತಂಕಗೊಂಡ ಮಾಲೀಕ ಕುಂತಮಂಗಳಂ ಪೊಲೀಸರಿಗೆ ದೂರು ನೀಡಿದ್ದಾರೆ. ಇತ್ತ ಮಾಲೀಕ ಕೊಟ್ಟಿಗೆಯ ಬಳಿ ಸಿಸಿಟಿವಿ ಕೂಡ ಫಿಕ್ಸ್ ಮಾಡಿದರು. ಹೀಗಾಗಿ ವ್ಯಕ್ತಿಯ ದುರ್ವರ್ತನೆ ಸಿಸಿಟಿಯಲ್ಲಿ ಸೆರೆಯಾಗಿದ್ದು, ನೀಚ ಕೃತ್ಯ ಬಯಲಾಗಿದೆ.

    ಹಸುವನ್ನು ಪಶುವೈದ್ಯರು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅದರ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆದಿರುವುದು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

  • ಚೀನಾಗೆ ಮತ್ತೆ ಹೊಡೆತ – ಮಾರುಕಟ್ಟೆಗೆ ಬರಲಿದೆ 33 ಕೋಟಿ ಸ್ವದೇಶಿ ಹಣತೆ

    ಚೀನಾಗೆ ಮತ್ತೆ ಹೊಡೆತ – ಮಾರುಕಟ್ಟೆಗೆ ಬರಲಿದೆ 33 ಕೋಟಿ ಸ್ವದೇಶಿ ಹಣತೆ

    ನವದೆಹಲಿ: ರಕ್ಷಾ ಬಂಧನದ ಸಮಯದಲ್ಲಿ ಚೀನಾಗೆ ತಿರುಗೇಟು ನೀಡಿದ್ದ ಭಾರತ ಈಗ ದೀಪಾವಳಿ ಸಮಯದಲ್ಲೂ ಆರ್ಥಿಕವಾಗಿ ಹೊಡೆತ ನೀಡಲು ಮುಂದಾಗುತ್ತಿದೆ.

    ಈ ವರ್ಷದ ದೀಪಾವಳಿಗೆ 33 ಕೋಟಿ ಪರಿಸರ ಸ್ನೇಹಿ ಹಣತೆ ಮಾರುಕಟ್ಟೆಗೆ ಬರಲಿದೆ. ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭಭಾಯ್ ಕಥಿರಿಯಾ ಈ ವಿಚಾರವನ್ನು ತಿಳಿಸಿದ್ದು, ಮುಂದಿನ ತಿಂಗಳು 33 ಕೋಟಿ ಪರಿಸರ ಸ್ನೇಹಿ ಹಣತೆಗಳು ಮಾರುಕಟ್ಟೆಗೆ ಬರಲಿದೆ ಎಂದು ತಿಳಿಸಿದ್ದಾರೆ.

    ಸ್ವದೇಶಿ ಉತ್ಪನ್ನಗಳ ರಕ್ಷಣೆ ಮತ್ತು ಉತ್ತೇಜನಕ್ಕೆ ಈ ಆಯೋಗವನ್ನು 2019ರಲ್ಲಿ ಸ್ಥಾಪನೆ ಮಾಡಲಾಗಿದೆ. ಈಗ ದೇಶದೆಲ್ಲೆಡೆ ಸಗಣಿಯಿಂದ ತಯಾರಾದ ಉತ್ಪನ್ನಗಳನ್ನು ಉತ್ತೇಜಿಸಲು ಆಯೋಗ ಮುಂದಾಗುತ್ತಿದೆ.

    ಚೀನಾದಲ್ಲಿ ತಯಾರಾದ ಹಣತೆಯನ್ನು ಈ ಬಾರಿ ತಿರಸ್ಕರಿಸಿ ಮೇಕ್‌ ಇನ್‌ ಇಂಡಿಯಾ ಅಭಿಯಾನದಲ್ಲಿ ತಯಾರಾಗಿರುವ ಹಣತೆಯನ್ನು ಬಳಸಬೇಕು. ಈ ಮೂಲಕ ದೇಶದ ಗ್ರಾಮೀಣ ಜನರ ಕೆಲಸವನ್ನು ಪ್ರೋತ್ಸಾಹಿಸಬೇಕು ಎಂದು ಜನರಲ್ಲಿ ಆಯೋಗ ಕೇಳಿಕೊಂಡಿದೆ. ಇದನ್ನೂ ಓದಿ: ಈ ವರ್ಷ ಮೇಡ್‌ ಇನ್‌ ಇಂಡಿಯಾ ರಾಖಿ – ಚೀನಾಗೆ 4 ಸಾವಿರ ಕೋಟಿ ನಷ್ಟ

     

    ಈಗಾಗಲೇ 15 ರಾಜ್ಯಗಳು ಹಣತೆ ತಯಾರಿಸಲು ಒಪ್ಪಿಕೊಂಡಿವೆ. ಆಯೋಗವೇ ನೇರವಾಗಿ ಹಣತೆಯನ್ನು ತಯಾರು ಮಾಡುವುದಿಲ್ಲ. ಬದಲಾಗಿ ಸ್ವಸಹಾಯ ಗುಂಪುಗಳಿಗೆ ಹಣತೆ ತಯಾರಿಸಲು ತರಬೇತಿ ನೀಡುವ ಕೆಲಸ ಮಾಡುತ್ತಿದೆ.

    ಸ್ವದೇಶಿ ಉತ್ಪನ್ನಗಳನ್ನು ತಯಾರಿಸುವ ನಿಟ್ಟಿನಲ್ಲಿ ಕೃಷಿಕರು, ಹೈನುಗಾರರು ಮತ್ತು ಉದ್ಯಮಿಗಳಿಗೆ ಸರಣಿ ವೆಬಿನಾರ್‌ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ ಎಂದು ರಾಷ್ಟ್ರೀಯ ಕಾಮಧೇನು ಆಯೋಗ ತಿಳಿಸಿದೆ.

    ಗಲ್ವಾನ್‌ ಕಣಿವೆಯಲ್ಲಿ ನಡೆದ ಘರ್ಷಣೆಯ ಬಳಿಕ ಭಾರತ ಒಂದೊಂದೆ ನಿರ್ಧಾರದ ಕೈಗೊಳ್ಳುವ ಮೂಲಕ ಚೀನಾಗೆ ಶಾಕ್‌ ನೀಡುತ್ತಿದ್ದು, ಈ ಬಾರಿ ಭಾರೀ ಪ್ರಮಾಣದಲ್ಲಿ ಸ್ಬದೇಶಿ ರಾಖಿಗಳು ತಯಾರಾಗಿತ್ತು.

    ಪ್ರತಿ ವರ್ಷ ವರ್ತಕರು ರಕ್ಷಾ ಬಂಧನದಂದು ಚೀನಾದಿಂದ ಆಮದು ಮಾಡಿಕೊಡ ರಾಖಿಗಳನ್ನು ಮಾರಾಟ ಮಾಡುತ್ತಿದ್ದರು. ಆದರೆ ಜೂ.10 ರಂದು ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ರಾಖಿ ಹಬ್ಬವನ್ನು ಹಿಂದೂಸ್ಥಾನಿ ರಾಖಿ ಎಂದು ಆಚರಣೆ ಮಾಡಬೇಕೆಂದು ಕರೆ ನೀಡಿತ್ತು.

    ಸಿಎಐಟಿಯ ರಾಷ್ಟ್ರೀಯ ಅಧ್ಯಕ್ಷ ಬಿಸಿ ಭಾರ್ತಿಯಾ ಪ್ರತಿಕ್ರಿಯಿಸಿ, ಈ ವರ್ಷ ಒಂದೇ ಒಂದು ರಾಖಿಯನ್ನೂ ಚೀನಾದಿಂದ ಈ ಬಾರಿ ಆಮದು ಮಾಡಿಕೊಂಡಿಲ್ಲ. ಪ್ರತಿ ವರ್ಷ 6 ಸಾವಿರ ಕೋಟಿ ರೂ. ಮೌಲ್ಯದ 50 ಕೋಟಿ ರಾಖಿಗಳು ಮಾರಾಟವಾಗುತ್ತಿತ್ತು. ಇವುಗಳ ಪೈಕಿ 4 ಸಾವಿರ ಕೋಟಿ ಮೌಲ್ಯದ ಚೀನಾ ರಾಖಿಗಳನ್ನು ಆಮದು ಮಾಡಿಕೊಳ್ಳಲಾಗುತ್ತಿತ್ತು ಎಂದು ತಿಳಿಸಿದ್ದರು.

     

  • ಕಾರಿನಲ್ಲಿ ಹಸುಗಳ ಸಾಗಾಟ- ಪೊಲೀಸರಿಂದ ಗಾಳಿಯಲ್ಲಿ ಗುಂಡು

    ಕಾರಿನಲ್ಲಿ ಹಸುಗಳ ಸಾಗಾಟ- ಪೊಲೀಸರಿಂದ ಗಾಳಿಯಲ್ಲಿ ಗುಂಡು

    -ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆಸಲು ಆರೋಪಿಗಳು ಯತ್ನ

    ಮಂಗಳೂರು: ಅಕ್ರಮ ಗೋಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿ ಹೋದ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ಮೂಡುಕೊಣಾಜೆ ಎಂಬಲ್ಲಿ ನಡೆದಿದೆ.

    ಇಂದು ಬೆಳಗಿನ ಜಾವ ಗೋಕಳ್ಳರು ಮೂಡುಬಿದ್ರೆಯ ಶಿರ್ತಾಡಿಯಿಂದ 6 ಗೋವುಗಳನ್ನು ರಿಟ್ಸ್ ಕಾರಿನಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮೂಡಬಿದ್ರೆ ಠಾಣೆಯ ಇನ್‍ಸ್ಪೆಕ್ಟರ್ ಬಿ.ಎಸ್.ದಿನೇಶ್ ಕುಮಾರ್ ತಂಡ ಆರೋಪಿಗಳು ಹಸುಗಳನ್ನು ಸಾಗಿಸುತ್ತಿದ್ದ ರಿಟ್ಸ್ ಕಾರನ್ನು ಹಿಂಬಾಲಿಸಿಕೊಂಡು ಹೋದರು. ಈ ವೇಳೆ ಆರೋಪಿಗಳು ಪೊಲೀಸ್ ಜೀಪ್ ಗೆ ಡಿಕ್ಕಿ ಹೊಡೆಯಲು ಯತ್ನಿಸಿದ್ದು, ಇನ್‍ಸ್ಪೆಕ್ಟರ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

    ಇದರಿಂದ ಹೆದರಿದ ಆರೋಪಿಗಳು ಕಾರ್ ಹಾಗೂ ಹಸುಗಳನ್ನು ಅಲ್ಲೇ ಬಿಟ್ಟು ಓಡಿ ಪರಾರಿಯಾಗಿದ್ದಾರೆ. ಕಾರು ಹಾಗೂ ಹಸುಗಳನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಒಂದೂವರೆ ವರ್ಷದಿಂದ ಬಲೆ ಹಾಕಿ ಕಾಯ್ತಿದ್ದ – ಕೊನೆಗೂ ಪ್ರತೀಕಾರಕ್ಕಾಗಿ ಚಿರತೆ ಕೊಂದ

    ಒಂದೂವರೆ ವರ್ಷದಿಂದ ಬಲೆ ಹಾಕಿ ಕಾಯ್ತಿದ್ದ – ಕೊನೆಗೂ ಪ್ರತೀಕಾರಕ್ಕಾಗಿ ಚಿರತೆ ಕೊಂದ

    – ಹಸು ಕಳೆದುಕೊಂಡವನ ಸೇಡಿನ ಕಥೆ

    ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ಹಸುವನ್ನು ಕೊಂದಿದ್ದಕ್ಕೆ ಒಂದೂವರೆ ವರ್ಷದಿಂದ ಕಾದು ಕೊನೆಗೂ ಚಿರತೆಯನ್ನು ಕೊಂದಿರುವ ಘಟನೆ ಕೇರಳದ ಮುನ್ನಾರ್‌ನಲ್ಲಿ ನಡೆದಿದೆ.

    ಚಿರತೆಯನ್ನು ಕೊಂದ 34 ವರ್ಷದ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಅರಣ್ಯ ಇಲಾಖೆ ಬಂಧಿಸಿದೆ. ಚಿರತೆ ಆರೋಪಿಯ ಹಸುವನ್ನು ಒಂದು ವರ್ಷದ ಹಿಂದೆ ಕೊಂದ ನಂತರ ಚಿರತೆಗಾಗಿ ಬಲೆ ಹಾಕಿದ್ದನು ಎಂದು ತಿಳಿದು ಬಂದಿದೆ.

    ಸೆಪ್ಟೆಂಬರ್ 8 ರಂದು ಕನ್ನಿಮಲಾ ಎಸ್ಟೇಟ್ ಕೆಳ ವಿಭಾಗದಲ್ಲಿ ನಾಲ್ಕು ವರ್ಷದ ಚಿರತೆ ಬಲೆಗೆ ಬಿದ್ದು ಶವವಾಗಿ ಪತ್ತೆಯಾಗಿತ್ತು. ನಂತರ ಅರಣ್ಯ ಇಲಾಖೆ ಚಿರತೆಯ ಸಾವಿನ ಬಗ್ಗೆ ತನಿಖೆ ಆರಂಭಿಸಿತ್ತು. ತನಿಖೆ ವೇಳೆ ಕುಮಾರ್ ಚಿರತೆಯನ್ನು ಕೊಂದಿರುವುದು ಪತ್ತೆಯಾಗಿದ್ದು, ಆತನನ್ನು ಬಂಧಿಸಲಾಗಿದೆ. ಈ ವೇಳೆ ಇದು ಪ್ರತೀಕಾರಕ್ಕಾಗಿ ನಡೆದ ಕಥೆ ಎಂದು ಬಹಿರಂಗವಾಗಿದೆ.

    ಕುಮಾರ್ ಹಸು ಹೊಲದಲ್ಲಿ ಮೇಯುತ್ತಿದ್ದಾಗ ಇದೇ ಚಿರತೆ ಹಾಡಹಗಲೇ ಹಸುವಿನ ದಾಳಿ ಮಾಡಿ ಕೊಂದು ಹಾಕಿತ್ತು. ಆ ಹಸು ಕುಮಾರ್ ಜೀವನದ ಆಧಾರವಾಗಿತ್ತು. ಹೀಗಾಗಿ ತನ್ನ ಹಸುವನ್ನು ಕೊಂದು ಚಿರತೆಯ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದ ಎಂದು ನೆರೆಹೊರೆಯವರು ಹೇಳಿದ್ದಾರೆ.

    ಕುಮಾರ್‌ನ ಸೇಡಿನ ಕಥೆಯನ್ನು ನೆರೆಹೊರೆಯವರು ಅರಣ್ಯ ಸಿಬ್ಬಂದಿಗೆ ತಿಳಿಸಿದ ನಂತರ ಚಿರತೆಯ ಸಾವಿನ ರಹಸ್ಯ ಬಹಿರಂಗವಾಗಿದೆ. ನಾನು ಚಿರತೆಗಾಗಿ ಬಲೆಯನ್ನು ಹಾಕಿದ್ದೆ. ಸುಮಾರು ಕಳೆದ 1.5 ವರ್ಷಗಳಿಂದ ಚಿರತೆಗಾಗಿ ಕಾಯುತ್ತಿದ್ದೆ. ಆಗಾಗ ನಾನು ಹಾಕಿದ್ದ ಬಲೆಯನ್ನು ಪರಿಶೀಲಿಸುತ್ತಿದ್ದೆ. ಕೊನೆಗೆ ಚಿರತೆ ನಾನು ಹಾಕಿದ್ದ ಬಲೆಗೆ ಬಿದ್ದಿದೆ. ಆಗ ಚಿರತೆಯನ್ನು ಚಾಕುವಿನಿಂದ ಇರಿದು ಕೊಂದಿದ್ದೇನೆ ಎಂದು ಆರೋಪಿ ಕುಮಾರ್ ಅರಣ್ಯ ಸಿಬ್ಬಂದಿಗೆ ತಿಳಿಸಿದ್ದಾನೆ.

    ಮುನ್ನಾರ್ ಎಸಿಎಫ್ ಸಜೀಶ್ ಕುಮಾರ್ ಮತ್ತು ಶ್ರೇಣಿ ಅಧಿಕಾರಿ ಎಸ್.ಹರೀಂದ್ರನಾಥ್ ತಂಡ ಆರೋಪಿಯನ್ನು ಬಂಧಿಸಿದೆ. ಸದ್ಯಕ್ಕೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

  • ಮಗಳ ಕೈಯಿಂದ ಕರುವಿಗೆ ಬಾಳೆಹಣ್ಣು ತಿನ್ನಿಸಿದ ಯಶ್

    ಮಗಳ ಕೈಯಿಂದ ಕರುವಿಗೆ ಬಾಳೆಹಣ್ಣು ತಿನ್ನಿಸಿದ ಯಶ್

    ಬೆಂಗಳೂರು: ಸ್ಯಾಂಡಲ್‍ವುಡ್‍ನ ರಾಕಿಂಗ್ ಜೋಡಿ ಸದ್ಯಕ್ಕೆ ತಮ್ಮ ಇಬ್ಬರು ಮಕ್ಕಳ ಜೊತೆ ಕಾಲಕಳೆಯುತ್ತಿದ್ದಾರೆ. ನಟಿ ರಾಧಿಕಾ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು ಆಗಾಗ ತಮ್ಮ ಮಕ್ಕಳ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿರುತ್ತಾರೆ. ಇದೀಗ ತಮ್ಮ ಪತಿ ಯಶ್ ಮತ್ತು ಮಗಳ ಫೋಟೋವನ್ನು ಶೇರ್ ಮಾಡಿದ್ದಾರೆ. ಇದನ್ನೂ ಓದಿ: ನಿಮ್ಮ ದೇಹ ಅಪ್ಪ,ಅಮ್ಮ ಕೊಟ್ಟಿರೋ ಭಿಕ್ಷೆ – ಡ್ರಗ್ಸ್ ಬಗ್ಗೆ ಯಶ್ ಖಡಕ್ ಮಾತು

    ಇತ್ತೀಚೆಗಷ್ಟೆ ಯಶ್ ಮತ್ತು ರಾಧಿಕಾ ತಮ್ಮ ಮಗನಿಗೆ ನಾಮಕರಣ ಮಾಡಿದ್ದಾರೆ. ದಂಪತಿ ತಮ್ಮ ಫಾರ್ಮ್ ಹೌಸ್‍ನಲ್ಲೇ ಸರಳವಾಗಿ ನಾಮಕರಣ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ನಾಮಕರಣ ಕಾರ್ಯಕ್ರಮದಲ್ಲಿ ತಮ್ಮ ಕುಟುಂಬದವರು ಮಾತ್ರ ಭಾಗಿಯಾಗಿದ್ದರು. ಯಶ್ ತಮ್ಮ ಮಗನಿಗೆ ಯಥರ್ವ್ ಯಶ್ ಎಂದು ನಾಮಕರಣ ಮಾಡಿದ್ದಾರೆ. ಸದ್ಯಕ್ಕೆ ರಾಕಿಂಗ್ ದಂಪತಿ ತಮ್ಮ ಮಕ್ಕಳೊಂದಿಗೆ ಫಾರ್ಮ್ ಹೌಸ್‍ನಲ್ಲಿಯೇ ಕಾಲಕಳೆಯುತ್ತಿದ್ದಾರೆ. ಇದನ್ನೂ ಓದಿ: ಜೂನಿಯರ್ ಯಶ್‍ಗೆ ನಾಮಕರಣ ಸಂಭ್ರಮ

    ಪಾರ್ಮ್ ಹೌಸ್‍ನಲ್ಲಿರುವ ಫೋಟೋವೊಂದು ರಾಧಿಕಾ ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. ಅದರಲ್ಲಿ ಯಶ್ ತಮ್ಮ ಮಗಳು ಐರಾಳ ಕೈಯಿಂದ ಹಸುವಿನ ಕರುವಿಗೆ ಬಾಳೆಹಣ್ಣು ತಿನ್ನಿಸುತ್ತಿರುವುದನ್ನು ಕಾಣಹುದಾಗಿದೆ. ರಾಧಿಕಾ ಫೋಟೋ ಅಪ್ಲೋಡ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಇತ್ತೀಚಗೆಷ್ಟೆ ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ಮಾಫಿಯಾದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಯಶ್, ಡ್ರಗ್ಸ್ ಅನ್ನೋದು ದೇಶಕ್ಕೆ, ಜಗತ್ತಿಗೆ ಮಾರಕವಾಗಿದೆ. ಡ್ರಗ್ಸ್ ಅಂದರೆ ಇಡೀ ಯುವ ಜನತೆಗೆ ಮಾರಕ. ಅದರಲ್ಲಿ ಯಾರ‍್ಯಾರು ಇದ್ದಾರೆ ಎಂಬುದನ್ನು ನೋಡಿದ್ರೆ, ಹತ್ತು ಡಿಪಾರ್ಟ್ ಮೆಂಟ್ ಇರುತ್ತೆ. ಆದರೆ ಹೈಲೈಟ್ ಆಗುವುದು ಕನ್ನಡ ಚಿತ್ರರಂಗ ಮಾತ್ರ. ಆದರೆ ಇದರಲ್ಲಿ ಇಡೀ ಚಿತ್ರರಂಗ ಅಂತ ಹೇಳಬೇಡಿ. ಯುವಕರು, ಯುವತಿಯರು, ನಮ್ಮ ರಾಜ್ಯದ ಜನರಿಗೆ ಆಗುತ್ತಿದೆ ಎಂದು ಹೇಳಿ. ಆಗ ನಾವೆಲ್ಲರೂ ಒಟ್ಟಾಗಿ ಸಮಾಜದ ಪ್ರಜೆಯಾಗಿ ಚಿಕ್ಕಮಕ್ಕಳಿಗೂ ಜಾಗೃತಿ ಮೂಡಿಸಬೇಕು ಎಂದಿದ್ದರು.

    https://www.instagram.com/p/CE_FPRFAiIy/?igshid=1ut36kb2xb0id

    ನಿಮ್ಮ ಜೀವನ, ನಿಮ್ಮ ದೇಹ ನಿಮ್ಮದಲ್ಲ. ಅದು ನಿಮ್ಮ ಅಪ್ಪ-ಅಮ್ಮ ಕೊಟ್ಟಿರುವುದು. ನಿಮ್ಮ ಪೋಷಕರು ನೀವು ಕೆಳಗೆ ಬಿದ್ದರೆ ಏನಾಗುತ್ತೋ ಎಂದು ಸಾಕಿರುತ್ತಾರೆ. ನನಗೂ ಮಕ್ಕಳಿದ್ದಾರೆ. ಪೋಷಕರು ಒಳ್ಳೆಯ ಊಟ ತಂದು ಮಕ್ಕಳಿಗೆ ಕೊಟ್ಟು ತಿನ್ನಿಸಿ ಬೆಳೆಸಿರುತ್ತಾರೆ. ಅಷ್ಟು ಕಾಳಜಿಯಿಂದ ಬೆಳೆಯಿಸಿರುವ ನಿಮ್ಮನ್ನು ಮುಂದೆ ಏನೋ ಆಗುತ್ತಾರೆ ಎಂದು ಕನಸು ಕಾಣುತ್ತಿರುತ್ತಾರೆ ಎಂದು ಯಶ್ ಹೇಳಿದ್ದರು.

     

    ಯಾರ‍್ಯಾರು ಡ್ರಗ್ಸ್ ತೆಗೆದುಕೊಳ್ಳುತ್ತಿದ್ದಾರೋ ಅವರಿಗೆ ಒಂದು ಮಾತನ್ನ ಹೇಳುವುದಕ್ಕೆ ಇಷ್ಟ ಪಡುತ್ತೀನಿ. ಡ್ರಗ್ಸ್ ಎಂದು ತೆಗೆದುಕೊಂಡು ಹಾಳಾಗಬೇಡಿ. ನಿಮ್ಮ ದೇಹವನ್ನು ನಿಮ್ಮ ಅಪ್ಪ, ಅಮ್ಮ ಕೊಟ್ಟಿರುವ ಭಿಕ್ಷೆ. ನಿಮಗೆ ಯಾವುದೇ ಅಧಿಕಾರ ಇಲ್ಲ. ನಿಮ್ಮ ಪೋಷಕರಿಗಾಗಿ ಒಳ್ಳೆಯ ಹೆಸರು, ಗೌರವದಿಂದ ಕೆಲಸ ಮಾಡಿ. ಇಂತಹ ದುಶ್ಚಟಗಳನ್ನು ಬಿಡಿ ಎಂದು ಯಶ್ ಖಡಕ್ ಸಂದೇಶವನ್ನು ನೀಡಿದ್ದರು.

  • ಶಾಮನೂರು ಶಿವಶಂಕರಪ್ಪ ಮನೆಗೆ ಡಿ ಬಾಸ್ ಭೇಟಿ

    ಶಾಮನೂರು ಶಿವಶಂಕರಪ್ಪ ಮನೆಗೆ ಡಿ ಬಾಸ್ ಭೇಟಿ

    – ದಾವಣೆಗೆರೆಯ ಮಾಜಿ ಸಚಿವರ ಮನೆಗೆ ಭೇಟಿ

    ದಾವಣಗೆರೆ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿ ಪ್ರೀತಿ ಇರುವುದು ತಿಳಿದೇ ಇದೆ. ಅದೇ ರೀತಿ ಇದೀಗ ಗೋವು ಸಾಕಣೆ ಹಾಗೂ ಕುದುರೆ ಸಾಕಣೆ ಕುರಿತು ಮಾಹಿತಿ ಪಡೆಯಲು ಶಾಸಕ, ಮಾಜಿ ಸಚಿವ, ಶಾಮನೂರು ಶಿವಶಂಕರಪ್ಪನವರ ಫಾರ್ಮ್ ಹೌಸ್‍ಗೆ ಭೇಟಿ ನೀಡಿದ್ದಾರೆ.

    ಇಂದು ಮಧ್ಯಾಹ್ನದಿಂದ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿಯಲ್ಲಿನ ಶಾಮನೂರ ಅವರ ತೋಟಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿನ ಗೋ ಪಾಲನೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ದಾವಣಗೆರೆ ನಗರದ ಕಲ್ಲೇಶ್ವರ ರೈಸ್ ಮಿಲ್ ಬಳಿ ಕುದುರೆಗಳ ಪಾಲನೆ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ವೇಳೆ ನಟ ದರ್ಶನ್‍ಗೆ ಶಾಸಕ ಶಾಮನೂರ ಶಿವಶಂಕರಪ್ಪ ಪುತ್ರ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಸಾಥ್ ನೀಡಿದ್ದಾರೆ.

    ಇಂದು ಸಂಜೆ ವರೆಗೆ ವಿವಿಧ ಫಾರ್ಮ್ ಹೌಸ್‍ಗೆ ದರ್ಶನ್ ಭೇಟಿ ನೀಡಿದ್ದು, ಮಾಹಿತಿ ಸಂಗ್ರಹಿಸಿದ್ದಾರೆ. ನಂತರ ರಾತ್ರಿ ಎಸ್‍ಎಸ್ ಮನೆಯಲ್ಲಿಯೇ ಊಟ ಮಾಡಿದ್ದಾರೆ. ಇಂದು ದಾವಣಗೆರೆಯಲ್ಲಿಯೇ ವಾಸ್ತವ್ಯ ಹೂಡಲಿದ್ದು, ಬಾಪೂಜಿ ಗೆಸ್ಟ್ ಹೌಸ್‍ನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.

    ಬೆಳಗ್ಗೆ ಮತ್ತೆ ಕೆಲ ಪ್ರಗತಿಪರ ರೈತರನ್ನು ಡಿ ಬಾಸ್ ಭೇಟಿ ಮಾಡಲಿದ್ದು, ವಿವಿಧ ವಿಚಾರಗಳ ಕುರಿತು ಚರ್ಚಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ವೇಳೆ ನಟ ದರ್ಶನ್ ನೋಡಿದ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದರು.

  • ಅಮ್ಮನನ್ನು ಕದ್ದ ಕಳ್ಳರು, ಕಾರಿನ ಹಿಂದೆಯೇ ಓಡಿದ ಕರು

    ಅಮ್ಮನನ್ನು ಕದ್ದ ಕಳ್ಳರು, ಕಾರಿನ ಹಿಂದೆಯೇ ಓಡಿದ ಕರು

    ಚಿಕ್ಕಮಗಳೂರು: ದನಗಳ್ಳರು ಹಸುವನ್ನು ಗಾಡಿಗೆ ತುಂಬಿಕೊಂಡು ಹೋಗುವಾಗ ಕರು ಅದೇ ಗಾಡಿಯ ಹಿಂದೆ ಓಡಿ ಹೋಗಿರುವ ಕರುಣಾಜನಕ ಘಟನೆ ನಡೆದಿದೆ.

    ತಾಲೂಕಿನ ತೇಗೂರಿನಲ್ಲಿ ಘಟನೆ ನಡೆದಿದ್ದು, ಅಮ್ಮನನ್ನು ಕದ್ದೊಯ್ದ ಕಳ್ಳರ ಕಾರಿನ ಹಿಂದೆ ಕರು ಓಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೂಕ ಪ್ರಾಣಿಯ ಅಮ್ಮನ ಪ್ರೀತಿ ಅನಾವರಣಗೊಂಡಿದೆ. ತಾಯಿಗಾಗಿ ಕರು ಓಡುವ ದೃಶ್ಯ ಕರುಳು ಹಿಂಡುವಂತಿದೆ. ಅಂಬಾ, ಅಂಬಾ ಎನ್ನು ಸುಮಾರು ದೂರ ಕಾರಿನ ಹಿಂದೆಯೇ ಓಡುತ್ತದೆ. ಆದರೆ ಕಟುಕರು ಮಾತ್ರ ಇದಾವುದನ್ನು ಲೆಕ್ಕಿಸದೆ ಹಸುವನ್ನು ಹೊತ್ತೊಯ್ಯುತ್ತಾರೆ.

    ಮಲೆನಾಡು ಭಾಗದಲ್ಲಿ ದನಗಳ್ಳರ ಹಾವಳಿ ವ್ಯಾಪಕವಾಗಿದೆ. ರಸ್ತೆ ಬದಿಯಲ್ಲಿರುವ ದನಗಳನ್ನು ಕ್ಸೈಲೋ, ಸ್ಕಾರ್ಪಿಯೋ ನಂತಹ ವಾಹನಗಳಲ್ಲಿ ತುಂಬಿಕೊಂಡು ಹೋಗುತ್ತಾರೆ. ಇಷ್ಟು ದಿನ ರಸ್ತೆ ಬದಿಯಲ್ಲಿದ್ದ ದನಗಳನ್ನು ಹೊತ್ತೊಯ್ಯುತ್ತಿದ್ದ ಕಳ್ಳರು, ಇದೀಗ ಕೊಟ್ಟಿಗೆಯಲ್ಲಿ ಕಟ್ಟಿದ್ದ ದನಗಳನ್ನೂ ಬಿಡುತ್ತಿಲ್ಲ. ಹೀಗೆ ಮನೆಯ ಪಕ್ಕದಲ್ಲಿ ಕಟ್ಟಿದ್ದ ಹಸುವನ್ನು ಕಳ್ಳರು ಕದ್ದೋಯ್ದಿದ್ದಾರೆ. ಈ ವೇಳೆ ಕರು ಸ್ವಲ್ಪ ದೂರ ಓಡಿ, ನಂತರ ಮೂಕರೋಧನೆ ಅನುಭವಿಸಿದೆ. ಇದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಹಸುವನ್ನ ಗಾಡಿಗೆ ತುಂಬುವ ರೀತಿ ಕೂಡ ಕರುಣೆಯೇ ಇಲ್ಲವೆಂಬಂತಿದೆ. ಕೆಲವರು ಇದೇ ರೀತಿ ಕದಿಯುವ ವೇಳೆ ಸಿಕ್ಕಿ ಬಿದ್ದಿದ್ದರು. ಇನ್ನೂ ಕೆಲವರು ದನವನ್ನು ಕಡಿದು ಮಾಂಸ ಸಾಗಿಸುವಾಗ ಸಿಕ್ಕಿಬಿದ್ದಿದ್ದರು. ಅಲ್ಲದೆ ಗಾಡಿಗಳು ಅಪಘಾತವಾಗಿ ಇನ್ನೂ ಕೆಲವರು ಸಿಕ್ಕಿಬಿದ್ದಿದ್ದಾರೆ. ಇಷ್ಟೆಲ್ಲ ಆದರೂ ಕಳ್ಳತನ ಮಾತ್ರ ಕಡಿಮೆಯಾಗಿಲ್ಲ. ರೈತರ ಹಸುಗಳು ನಿತ್ಯ ಮಾಯವಾಗುತ್ತಿವೆ.