Tag: cow

  • ಕೃಷಿ ಬಿಟ್ಟು ಮೂಕ ಪ್ರಾಣಿಗಳ ಪಾಲಿಗೆ ದೇವರಾದ ಕೊಪ್ಪಳದ ಗವಿಸಿದ್ದಪ್ಪ

    ಕೃಷಿ ಬಿಟ್ಟು ಮೂಕ ಪ್ರಾಣಿಗಳ ಪಾಲಿಗೆ ದೇವರಾದ ಕೊಪ್ಪಳದ ಗವಿಸಿದ್ದಪ್ಪ

    ಕೊಪ್ಪಳ: ಈ ಬರಗಾಲದಲ್ಲಿ ಜನ ಹಾಗೂ ಜಾನುವಾರುಗಳಿಗೆ ಕುಡಿಯಲು ನೀರೂ ಸಿಗುತ್ತಿಲ್ಲ. ಮೂರ್ನಾಲ್ಕು ಕಿಲೋ ಮೀಟರ್ ಅಲೆದಾಡಿದ್ರೂ ಜಾನುವಾರುಗಳಿಗೆ ಹನಿ ನೀರು ಸಿಗುತ್ತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ರೈತರೊಬ್ಬರು ಬೆಳೆ ಬೆಳೆಯಲು ಹಾಕಿಸಿದ್ದ ಬೋರ್‍ವೆಲ್‍ನಲ್ಲೇ ಜಾನುವಾರುಗಳಿಗೆ ನೀರು ಕುಡಿಸುತ್ತಿದ್ದಾರೆ.

    ಹೌದು. ಕೊಪ್ಪಳ ತಾಲೂಕಿನ ಹಿರೇಬಗನಾಳ ಗ್ರಾಮದ ನಮ್ಮ ಪಬ್ಲಿಕ್ ಹೀರೋ ಗವಿಸಿದ್ದಪ್ಪ ಅವರು ನೀರಿನ ಹೊಂಡ ಮಾಡಿ ಜಾನುವಾರುಗಳಿಗೆ ನೀರು ಕುಡಿಸುತ್ತಿದ್ದಾರೆ. ಬರಗಾಲದಲ್ಲಿ ಏನಾದ್ರೂ ಬೆಳೆಯೋಣ ಅಂದುಕೊಂಡು 21 ಬೋರ್‍ವೆಲ್ ಕೊರೆಸಿದವರಿಗೆ ನೀರು ಬಂದಿದ್ದು ಎರಡೇ ಬೋರ್‍ವೆಲ್‍ನಲ್ಲಿ ಮಾತ್ರ. ಆದರೆ, ಈ ನೀರಿನಲ್ಲಿ ಕೃಷಿ ಮಾಡುವ ಬದಲು ಜಾನುವಾರುಗಳಿಗೆ ಉಚಿತವಾಗಿ ನೀರು ಕೊಡುವ ಮೂಲಕ ಮೂಕ ಪ್ರಾಣಿಗಳ ದಾಹ ನೀಗಿಸುತ್ತಿದ್ದಾರೆ.

    ಹಿರೇಬಗನಾಳ ಗ್ರಾಮ ತುಂಗಾಭದ್ರಾ ಜಲಾಶಯ ಪಕ್ಕದಲ್ಲೇ ಇದ್ರೂ ಹನಿ ನೀರಿಗಾಗಿ ಪರದಾಡಬೇಕು. ಇಂಥ ಕಷ್ಟ ಕಂಡ ಗವಿಸಿದ್ದಪ್ಪ ಭಗೀರಥನಂತೆ ಜಾನುವಾರುಗಳ ಪ್ರಾಣ ಉಳಿಸುತ್ತಿದ್ದಾರೆ.

    ಎರಡು ಬೋರ್‍ವೆಲ್ ನೀರಿನಲ್ಲಿ 10 ಎಕರೆಯಲ್ಲಿ ಏನಾದ್ರೂ ಬೆಳೆದು ಲಕ್ಷ ಲಕ್ಷ ದುಡ್ಡು ಸಂಪಾದನೆ ಮಾಡಬಹುದಿತ್ತು. ಆದರೆ, ಮೂಕ ಪ್ರಾಣಿಗಳ ಪಾಲಿಗೆ ದೇವರಾದ ಗವಿಸಿದ್ದಪ್ಪ ನಿಜಕ್ಕೂ ನಮ್ಮ ಪಬ್ಲಿಕ್ ಹೀರೋ ಅನ್ನೋದಕ್ಕೆ ನಮಗೆ ಹೆಮ್ಮೆ ಆಗುತ್ತೆ.

    https://www.youtube.com/watch?v=bAXRmvXy6Rw

  • ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

    ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ರಾಜಸ್ಥಾನ ಹೈಕೋರ್ಟ್

    ಜೈಪುರ: ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ ಎಂದು ಕೇಂದ್ರ ಸರ್ಕಾರಕ್ಕೆ ರಾಜಸ್ಥಾನ ಹೈಕೋರ್ಟ್ ಶಿಫಾರಸು ಮಾಡಿದೆ.

    ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು ಮೊನ್ನೆಯಷ್ಟೇ ಮದ್ರಾಸ್ ಹೈಕೋರ್ಟ್ ಕೇಂದ್ರದ ನಿರ್ಧಾರಕ್ಕೆ ಒಂದು ತಿಂಗಳ ತಡೆಯಾಜ್ಞೆ ನೀಡಿತ್ತು.

    ಈ ನಡುವೆ ರಾಜಸ್ಥಾನ ಹೈಕೋರ್ಟ್ ಕೇಂದ್ರ ಸರ್ಕಾರದ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೇ ವೇಳೆ ಗೋ ಹತ್ಯೆ ಮಾಡಿದವರಿಗೆ ಈಗ ಇರುವ ಮೂರು ವರ್ಷಗಳ ಜೈಲು ಶಿಕ್ಷೆಯಿಂದ ಜೀವಾವಧಿ ಶಿಕ್ಷೆಯಾಗಿ ಬದಲಾಯಿಸಬೇಕು ಎಂದು ಹೇಳಿದೆ.

    ಕೇಂದ್ರ ಸರ್ಕಾರದ ಆದೇಶಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ, ಗೋಹತ್ಯೆ ನಿಷೇಧ ಆದೇಶಕ್ಕೆ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ವಿಧಿಸಿತ್ತು. ಅಲ್ಲದೆ ಈ ಕುರಿತು ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಆಹಾರ ಮನುಷ್ಯರ ಮೂಲ ಹಕ್ಕಾಗಿದ್ದು, ಇದರಲ್ಲಿ ಮಧ್ಯಪ್ರವೇಶ ಬೇಡ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯಪಟ್ಟಿತ್ತು.

    https://twitter.com/mayhempsingh/status/869827993618665472

  • ರಸ್ತೆಯಲ್ಲೇ ಗೋ ಹತ್ಯೆ ಮಾಡಿದ ಕೇರಳದ ಯೂತ್ ಕಾಂಗ್ರೆಸ್ ಸದಸ್ಯರ ನಡೆಗೆ ರಾಹುಲ್ ಗಾಂಧಿ ಖಂಡನೆ

    ರಸ್ತೆಯಲ್ಲೇ ಗೋ ಹತ್ಯೆ ಮಾಡಿದ ಕೇರಳದ ಯೂತ್ ಕಾಂಗ್ರೆಸ್ ಸದಸ್ಯರ ನಡೆಗೆ ರಾಹುಲ್ ಗಾಂಧಿ ಖಂಡನೆ

    ನವದೆಹಲಿ: ಕೇರಳದ ಕೆಲ ಯೂತ್ ಕಾಂಗ್ರೆಸ್ ಸದಸ್ಯರು ಶನಿವಾರದಂದು ನಡು ರಸ್ತೆಯಲ್ಲೇ ಗೋಹತ್ಯೆ ಮಾಡಿದ್ದನ್ನು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಕೇರಳದಲ್ಲಿ ನಿನ್ನೆ ನಡೆದಿರುವ ಘಟನೆ ನಿಜಕ್ಕೂ ಅನಾಗರಿಕವಾದುದು. ಇದನ್ನು ನಾನಗಲೀ, ಕಾಂಗ್ರೆಸ್ ಪಕ್ಷವಾಗಲೀ ಸಹಿಸಿಕೊಳ್ಳಲು ಸಾಧ್ಯವೇ ಇಲ್ಲ. ಈ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    ಕಸಾಯಿಖಾನೆಗಳಿಗೆ ಗೋವುಗಳ ಮಾರಾಟ ಮಾಡುವುದಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದನ್ನು ವಿರೋಧಿಸಿ ಕೇರಳದಲ್ಲಿ ಶನಿವಾರದಂದು ನಡೆದಿದ್ದ ಪ್ರತಿಭಟನೆ ವೇಳೆ ಕೆಲ ಯೂತ್ ಕಾಂಗ್ರೆಸ್ ಸದಸ್ಯರು ನಡು ರಸ್ತೆಯಲ್ಲೇ ಗೋವನ್ನು ಕಡಿದಿದ್ದರು.

    ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಯುವ ಮೋರ್ಚಾದ ದೂರಿನನ್ವಯ ಕೇರಳ ಪೊಲೀಸರು ಕೆಲ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

  • ಇನ್ನು ಮುಂದೆ ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವಂತಿಲ್ಲ

    ಇನ್ನು ಮುಂದೆ ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವಂತಿಲ್ಲ

    ನವದೆಹಲಿ: ಮೋದಿ ಸರ್ಕಾರ ಕಸಾಯಿಖಾನೆಗಳಿಗೆ ಜಾನುವಾರುಗಳ ಮಾರಾಟವನ್ನು ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಮೂರನೇ ವರ್ಷದ ಸಂಭ್ರಮದ ಹೊತ್ತಲ್ಲೇ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ.

    ಜಾನುವಾರುಗಳನ್ನು ಮಾರುವುದಾದರೆ ರೈತರಿಗೆ ಅಥವಾ ಕೃಷಿ ಭೂಮಿ ಇರುವವರಿಗೆ ಮಾತ್ರ ಮಾರಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ದನ, ಗೂಳಿ, ಎತ್ತು, ಕೋಣ, ಹೋರಿ ಮತ್ತು ಒಂಟೆ ಮಾರಾಟಕ್ಕೆ ಈ ನಿಯಮ ಅನ್ವಯವಾಗಲಿದೆ.

    ಪರಿಸರ ಖಾತೆ ಸಚಿವಾಲಯ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಭಾರತ ಸರ್ಕಾರ ಒಮ್ಮತದಿಂದ ಈ ಹೊಸ ನಿಯಮವನ್ನು  ಜಾರಿಗೊಳಿಸಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜಾನುವಾರುಗಳನ್ನು ಕೃಷಿ ಉಪಯೋಗಕ್ಕೆ ಮಾತ್ರ ಮಾರಾಟ ಮಾಡಬೇಕು, ಕಸಾಯಿಖಾನೆಗೆ ಮಾರುವಂತಿಲ್ಲ ಎಂದು ಪ್ರಾಣಿ ಹಿಂಸೆ ತಡೆ (ಪಿಸಿಎ) ಕಾಯ್ದೆಯ 1960ರ ಸೆಕ್ಷನ್ ಅಡಿಯಲ್ಲಿ ಈ ನಿರ್ಬಂಧ ಹೇರಲಾಗಿದೆ.

    ಹೊಸ ನಿಯಮದಲ್ಲಿರುವ ಪ್ರಮುಖ ಅಂಶಗಳು
    ಇನ್ನು ಮುಂದೆ ಜಾನುವಾರುಗಳನ್ನು ವ್ಯಾಪಾರ ಮಾಡುವ ಮಾರಾಟಗಾರರು ಮತ್ತು ಖರೀದಿ ಮಾಡುವವರು ಗುರುತಿನ ಚೀಟಿ ಮತ್ತು ಮಾಲೀಕತ್ವದ ದಾಖಲೆಗಳನ್ನು ತೋರಿಸಬೇಕಾಗುತ್ತದೆ.

    ಖರೀದಿಸಿದ ಜಾನುವಾರನ್ನು 6 ತಿಂಗಳೊಳಗೆ ಮತ್ತೊಮ್ಮೆ ಮಾರಾಟ ಮಾಡುವಂತಿಲ್ಲ. ರೈತರಿಗೆ ಮಾತ್ರ ಜಾನುವರನ್ನು ಮಾರಾಟ ಮಾಡಬೇಕು. ಖರೀದಿಸುವಾಗ ಕಡ್ಡಾಯವಾಗಿ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಎಳೆ ಕರುಗಳನ್ನು ಅಥವಾ ಅನಾರೋಗ್ಯ ಪೀಡಿತ ಹಸುಗಳನ್ನು ಮಾರಾಟ ಮಾಡುವಂತಿಲ್ಲ.

    ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ ತೆಗೆದುಕೊಂಡು ಹೋಗುವಾಗ ಆ ರಾಜ್ಯ ಸರ್ಕಾರದ ವಿಶೇಷ ಅನುಮತಿಯನ್ನು ಪಡೆಯಬೇಕು. ಧಾರ್ಮಿಕ ಕಾರ್ಯಕ್ರಮದಲ್ಲೂ ಈ ಮೇಲೆ ತಿಳಿಸಿದ ಜಾನುವಾರುಗಳ ಹತ್ಯೆಯನ್ನು ನಿಷೇಧಿಸಲಾಗಿದೆ.

    ಮ್ಯಾಜಿಸ್ಟ್ರೇಟ್ ಅಧ್ಯಕ್ಷತೆ ವಹಿಸಿರುವ ಜಿಲ್ಲಾ ಜಾನುವಾರು ಮಾರಾಟ ಸಮಿತಿಯ ಅನುಮತಿಯಿಂದಲೇ ಜಾನುವಾರು ವ್ಯಾಪಾರ ಕೇಂದ್ರಗಳನ್ನು ನಡೆಸಬೇಕು. ಸರ್ಕಾರ ಅಂಗೀಕೃತ ಪ್ರಾಣಿ ರಕ್ಷಣಾ ಸಂಘಟನೆಯ ಇಬ್ಬರು ಸದಸ್ಯರು ಈ ಸಮಿತಿಯಲ್ಲಿರಬೇಕು.

    5 ಪ್ರತಿಗಳನ್ನು ಇಟ್ಟುಕೊಳ್ಳಬೇಕು:
    ಒಂದು ಹಸುವನ್ನು ಕೊಂಡುಕೊಂಡರೆ, ಜಾನುವಾರು ವ್ಯಾಪಾರಿಯು ಮಾರಾಟ ಮಾಡಿದ ದಾಖಲೆಗಳ 5 ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ. ಒಂದು ಪ್ರತಿಯನ್ನು ಸ್ಥಳೀಯ ಕಂದಾಯ ಅಧಿಕಾರಿಗೆ, ಎರಡನೇ ಪ್ರತಿಯನ್ನು ಹಸು ಖರೀದಿ ಮಾಡಿದ ವ್ಯಕ್ತಿಯ ಜಿಲ್ಲೆಯ ಸ್ಥಳೀಯ ಪಶು ವೈದ್ಯರಿಗೆ, ಮೂರನೇ ಪ್ರತಿಯನ್ನು ಜಾನುವಾರು ಮಾರುಕಟ್ಟೆ ಸಮಿತಿಗೆ ನೀಡಬೇಕಾಗುತ್ತದೆ. ಮಾರಾಟಗಾರ ಮತ್ತು ಖರೀದಿಸಿದ ವ್ಯಕ್ತಿಯೂ ಒಂದೊಂದು ಪ್ರತಿಗಳನ್ನು ಇಟ್ಟುಕೊಳ್ಳಬೇಕಾಗುತ್ತದೆ.

  • ವಿಡಿಯೋ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಗೋವನ್ನು ರಕ್ಷಿಸಿದ ರಕ್ಷಣಾ ತಂಡ

    ವಿಡಿಯೋ: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ಗೋವನ್ನು ರಕ್ಷಿಸಿದ ರಕ್ಷಣಾ ತಂಡ

    ಡೆಹ್ರಾಡೂನ್: ಉತ್ತರಾಖಂಡ್‍ನ ವಿಷ್ಣುಪ್ರಯಾಗ ಬಳಿ ಭಾರೀ ಭೂಕುಸಿತ ಸಂಭವಿಸಿ ಸಾವಿರಾರು ಯಾತ್ರಿಕರು ಸಂಕಷ್ಟದಲ್ಲಿ ಸಿಲುಕಿದ ಬೆನ್ನಲ್ಲೇ ಅತ್ತ ಹರಿದ್ವಾರದಲ್ಲಿ ಹರಿಯುತ್ತಿರುವ ನದಿಯಲ್ಲಿ ಕೊಚ್ಚಿ ಹೋಗುತ್ತಿರುವ ಗೋವೊಂದನ್ನು ರಕ್ಷಣೆ ಮಾಡಲಾಗಿದೆ.

    ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿರುವ ಗೋವು ಅಪಾಯದಿಂದ ಪಾರಾಗಲು ಕಷ್ಟಪಡುತ್ತಿರೋ ದೃಶ್ಯ ಮನಕಲಕುವಂತಿದೆ. ಗೋವು ನೀರಿನಲ್ಲಿ ಒದ್ದಾಡುತ್ತಿರೋ ಮಾಹಿತಿ ತಿಳಿದ ತಕ್ಷಣವೇ ರಾಜ್ಯ ವಿಪತ್ತು ತಂಡ ಸ್ಥಳಕ್ಕಾಗಮಿಸಿ ಗೋವಿಗೆ ಹಗ್ಗ ಕಟ್ಟುವ ಮೂಲಕ ಸುರಕ್ಷಿತವಾಗಿ ದಡ ಸೇರಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

    ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಪ್ರಯಾಗ ಬಳಿ ಭಾರೀ ಭೂ ಕುಸಿತ ಸಂಭವಿಸಿದ್ದ ರಿಷಿಕೇಶ್ ಹಾಗೂ ಬದರೀನಾಥ್ ಸಂಪರ್ಕ ಕಲ್ಪಿಸುವ ಹೈವೇಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ ಕನ್ನಡಿಗರು ಸೇರಿದಂತೆ ಸಾವಿರಾರು ಯಾತ್ರಾರ್ಥಿಗಳು ಸಂಕಷ್ಟದಲ್ಲಿ ಸಿಲುಕಿದ್ದರು. ಹಾಥಿ ಪಹಾರ್ ಪರ್ವತದಿಂದ ಭಾರಿ ಗಾತ್ರದ ಬಂಡೆಗಳು ರಸ್ತೆಗೆ ಕುಸಿದು ಬಿದ್ದಿವೆ. ಚಮೋಲಿ ಜಿಲ್ಲೆಯ ಜೋಶಿ ಮಠದಿಂದ 5 ಕಿ.ಮೀ ದೂರದಲ್ಲಿ ಈ ಅನಾಹುತ ನಡೆದಿತ್ತು. ಜೋಶಿಮಠ, ಕರ್ಣಪ್ರಯಾಗ, ಪೀಪಲ್‍ಕೋಟಿ, ಗೋವಿಂದಘಾಟ್ ಮತ್ತು ಬದರಿನಾಥದಲ್ಲಿ ಯಾತ್ರಿಕರು ಸಿಲುಕಿದ್ದರು.

    https://www.youtube.com/watch?v=a2xJzk9G3Zo&feature=youtu.be

  • ವಿಡಿಯೋ: ಗೋವುಗಳ ಅಕ್ರಮ ಸಾಗಾಟ- ಹಿಂದೂಪರ ಸಂಘಟನೆಯಿಂದ ವ್ಯಾನ್‍ಗೆ ಬೆಂಕಿ

    ವಿಡಿಯೋ: ಗೋವುಗಳ ಅಕ್ರಮ ಸಾಗಾಟ- ಹಿಂದೂಪರ ಸಂಘಟನೆಯಿಂದ ವ್ಯಾನ್‍ಗೆ ಬೆಂಕಿ

    ಕೊಡಗು: ಜಾನುವಾರುಗಳ ಕಳ್ಳ ಸಾಗಾಟಗಾರರ ವಿರುದ್ಧ ಅಕ್ರೋಶಗೊಂಡ ಸಾರ್ವಜನಿಕರು ವಾಹನಕ್ಕೆ ಬೆಂಕಿ ಹಚ್ಚಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯಲ್ಲಿ ನಡೆದಿದೆ.

    ಸೋಮವಾರಪೇಟೆ ತಾಲೂಕಿನ ತೋರೆನೂರು ಗ್ರಾಮದ ಬಳಿಯಿಂದ ಟೆಂಪೋ ಟ್ರಾವೆಲರ್‍ನಲ್ಲಿ ದನಗಳನ್ನು ಅಕ್ರಮವಾಗಿ ಮಂಗಳೂರಿಗೆ ಸಾಗಾಟ ಮಾಡಲಾಗ್ತಿತ್ತು. ಈ ಬಗ್ಗೆ ಸುದ್ದಿ ತಿಳಿದ ಪೊಲೀಸರು ಟಿಟಿ ವಾಹನ ಚೇಸ್ ಮಾಡುವ ಸಂದರ್ಭದಲ್ಲಿ ಹಿಂಬಾಲಿಸುತ್ತಿದ್ದ ಪೊಲೀಸರ ಬೈಕ್‍ಗೆ ಟಿಟಿ ವಾಹನದ ಚಾಲಕ ಡಿಕ್ಕಿ ಹೊಡೆದಿದ್ದಾನೆ. ಸುಮಾರು 20 ಕಿಲೋಮೀಟರ್ ವಾಹನ ಹಿಂಬಾಲಿಸಿದ ಪೊಲೀಸರು ಅರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಸ್ಥಳಕ್ಕಾಗಮಿಸಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಹಾಗು ಸಾರ್ವಜನಿಕರು ಟೆಂಪೋಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಮಂಗಳೂರು ಮೂಲದವರು ಎನ್ನಲಾದ ಷರೀಫ್ ಹಾಗು ಮನ್ಸೂರ್ ಎಂಬವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ. ಈ ಸಂಬಂಧ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://youtu.be/WEt4Ww6cXLA

     

  • ತನ್ನ ಕರುವನ್ನು ಸಾಯ್ಸಿದ ಹಾವಿನೊಂದಿಗೆ ಹಸು ಜಗಳಾಡೋ ಮನಕಲಕುವ ವಿಡಿಯೋ ನೋಡಿ

    ತನ್ನ ಕರುವನ್ನು ಸಾಯ್ಸಿದ ಹಾವಿನೊಂದಿಗೆ ಹಸು ಜಗಳಾಡೋ ಮನಕಲಕುವ ವಿಡಿಯೋ ನೋಡಿ

    ಹಾವು-ಮುಂಗುಸಿ ಜಗಳ ಮಾಡುತ್ತವೆ ಅನ್ನೋದನ್ನ ಕೇಳಿರ್ತೀರಿ ಅಥವಾ ನೋಡಿರ್ತೀರಿ. ಆದ್ರೆ ಹಾವು ಮತ್ತು ಹಸು ಜಗಳ ಮಾಡಿರೋ ವಿಚಿತ್ರ ಘಟನೆಯ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಹೌದು. ಆಗ ತಾನೇ ಹುಟ್ಟಿದ ತನ್ನ ಕರುಳ ಕುಡಿಯನ್ನೇ ಕಚ್ಚಿ ಸಾಯಿಸಿದ ಹಾವಿನೊಂದಿಗೆ ಹಸುವೊಂದು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಹೋರಾಟ ಮಾಡಿದೆ.

    ತನ್ನ ಕರುವನ್ನು ಸಾಯಿಸಿದ ಹಾವನ್ನು ಕಾಲಿನಲ್ಲಿ ತುಳಿದು, ಕೊಂಬಿನಿಂದ ತಿವಿದು ಕೊಂದು ಹಾಕಿ ಸೇಡು ತೀರಿಸಿಕೊಳ್ಳೋ ದೃಶ್ಯ ನೋಡೋವಾಗ ಎಂಥವರ ಕರುಳು ಚುರುಕ್ ಅನ್ನತ್ತೆ. ಆದ್ರೆ ಈ ಘಟನೆ ಎಲ್ಲಿ ನಡೆದಿದೆ ಎಂಬುವುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ. ಘಟನೆಯ ದೃಶ್ಯವನ್ನು ಪಕ್ಕದಲ್ಲೇ ನಿಂತಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಕ್ಕೆ ಹರಿಯಬಿಟ್ಟಿದ್ದಾರೆ.

    `ತಮಿಳ್ ಸೈಥಿ’ ಎಂಬ ಯೂಟ್ಯೂಬ್ ಅಕೌಂಟ್‍ನಲ್ಲಿ ಮೇ 6ರಂದು ಈ ವಿಡಿಯೋ ಅಪ್ ಲೋಡ್ ಮಾಡಲಾಗಿದ್ದು ವೈರಲ್ ಆಗಿದೆ.

    https://www.youtube.com/watch?v=xEjI9HzRASI

  • ಗೋ ರಕ್ಷಣೆ ಹೆಸ್ರಲ್ಲಿ ಕಾನೂನು ಕೈಗೆತ್ತಿಕೊಳ್ಳೊ ಮಂದಿ ವಿರುದ್ಧ ಕ್ರಮ: ಸಿಎಂ

    ಗೋ ರಕ್ಷಣೆ ಹೆಸ್ರಲ್ಲಿ ಕಾನೂನು ಕೈಗೆತ್ತಿಕೊಳ್ಳೊ ಮಂದಿ ವಿರುದ್ಧ ಕ್ರಮ: ಸಿಎಂ

    ಬೆಂಗಳೂರು: ಗೋರಕ್ಷಣೆ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ವ್ಯಕ್ತಿಗಳಿಗೆ, ಸಂಘಟನೆಗಳಿಗೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

    ಸಿಎಂ ಸಿದ್ದರಾಮಯ್ಯನವರು ಫೇಸ್‍ಬುಕ್ ಮತ್ತು ಟ್ವಿಟ್ಟರ್ ನಲ್ಲಿ, ಗೋರಕ್ಷಣೆಯ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಯಾವುದೇ ಗುಂಪು, ವ್ಯಕ್ತಿಗಳಿಗೆ ಕರ್ನಾಟಕ ಗೋವಧೆ ತಡೆ ಕಾಯಿದೆ – 1964ರ ಅಡಿ ರಕ್ಷಣೆ ದೊರೆಯುವುದಿಲ್ಲ ಎಂದು ಹೇಳಿದ್ದನ್ನು ಕೆಲವು ಮಂದಿ ಸ್ವಾಗತಿಸಿದ್ದರೆ, ಕೆಲವರು ಟೀಕಿಸಿದ್ದಾರೆ.

    ಪ್ರಮಾಣ ಪತ್ರ ಸಲ್ಲಿಸಿದ್ದ ಸರ್ಕಾರ:
    ಗೋ ಸಂರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ನಡೆಸುವ ಮಂದಿಯನ್ನು ನಾವು ಬೆಂಬಲಿಸುವುದಿಲ್ಲ. 1964 ಗೋವಧೆ ತಡೆ ಅಡಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸುಪ್ರೀಂ ಕೋರ್ಟ್‍ಗೆ ರಾಜ್ಯ ಸರ್ಕಾರ ಈ ಹಿಂದೆಯೇ ಪ್ರಮಾಣಪತ್ರ ಸಲ್ಲಿಕೆ ಮಾಡಿದೆ.

    ಹೀಗಾಗಿ ಇಲ್ಲಿ ಸಿಎಂ ಸಿದ್ದರಾಮಯ್ಯನವರ ಫೇಸ್ ಬುಕ್ ನಲ್ಲಿ ಪ್ರಕಟವಾಗಿರುವ ಪೋಸ್ಟ್, ಇದಕ್ಕೆ ಜನರ ಪ್ರತಿಕ್ರಿಯೆ ನೀಡಲಾಗಿದೆ.

    ಸಿಎಂ ಫೇಸ್‍ಬುಕ್ ಸ್ಟೇಟಸ್:
    ಗೋರಕ್ಷಣೆಯ ಹೆಸರಿನಲ್ಲಿ ಎಸಗುವ ಅಪರಾಧ ಅಥವಾ ಕ್ರಿಮಿನಲ್ ಚಟುವಟಿಕೆಗಳಿಗೆ ಕಾನೂನಿನಡಿ ಯಾವುದೇ ರಕ್ಷಣೆ ಇಲ್ಲ. ಇಂಥ ಗುಂಪು ಅಥವಾ ವ್ಯಕ್ತಿಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಕರ್ನಾಟಕ ಸರ್ಕಾರವು ಗೋರಕ್ಷಕರನ್ನು ರಕ್ಷಿಸುವ ಕಾನೂನನ್ನು ಸಮರ್ಥಿಸಿಕೊಂಡಿದೆ ಎನ್ನುವ ಅರ್ಥದಲ್ಲಿ ಕೆಲವು ಮಾಧ್ಯಮಗಳಲ್ಲಿ ಸತ್ಯಕ್ಕೆ ದೂರವಾದ ವರದಿಗಳು ಬಂದಿವೆ.

    ಕರ್ನಾಟಕ ಗೋವಧೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯಿದೆ 1964ರ ಪರಿಚ್ಛೇಧ 15ರ ಅಡಿಯಲ್ಲಿ ಕಾನೂನು ರೀತ್ಯಾ ರಚಿಸಲಾದ ಗುಂಪು ಅಥವಾ ಈ ಕಾನೂನಿನಡಿ ಕ್ರಮ ಕೈಗೊಳ್ಳಬಹುದಾದ ಅಧಿಕಾರವುಳ್ಳ ವ್ಯಕ್ತಿಗಳು `ಉತ್ತಮ ಉದ್ದೇಶದಿಂದ’ ಕಾನೂನಿನಲ್ಲಿ ನೀಡಲಾಗಿರುವ ಅವಕಾಶದನ್ವಯ ಜರುಗಿಸಿದ ಕ್ರಮಗಳಿಗೆ ರಕ್ಷಣೆಯನ್ನು ನೀಡುತ್ತದೆಯೇ ಹೊರತು ಯಾವುದೇ ವ್ಯಕ್ತಿ, ಸಮೂಹಗಳು ಗೋರಕ್ಷಣೆಯ ಹೆಸರಿನಲ್ಲಿ ಎಸಗುವ ಅಪರಾಧ ಅಥವಾ ಕ್ರಿಮಿನಲ್ ಚಟುವಟಿಕೆಗಳಿಗೆ ರಕ್ಷಣೆಯನ್ನು ನೀಡುವುದಿಲ್ಲ.

    ಮೇಲಿನ ಕಾನೂನಿನ ಪರಿಚ್ಛೇಧ 15ರ ಅವಕಾಶವನ್ನು ಕಾನೂನು ರೀತ್ಯಾ ನೊಂದಾಯಿಸಲ್ಪಟ್ಟ ಯಾವುದೇ ಸಂಘ, ಸಂಸ್ಥೆಗಳಾಗಲಿ, ಅದರ ಸದಸ್ಯರಾಗಲಿ ಬಳಸಲು ಬರುವುದಿಲ್ಲ. ಅದೇ ರೀತಿ ಗೋವಿನ ರಕ್ಷಣೆಯನ್ನು ಮಾಡುವ ಉದ್ದೇಶದಿಂದ ರಚಿಸಿಕೊಂಡಿರುವ ಗುಂಪು, ಸಮೂಹಗಳಿಗೂ ಈ ಪರಿಚ್ಛೇಧದಡಿ ರಕ್ಷಣೆ ಇರುವುದಿಲ್ಲ. ಇಂತಹ ಸಂಘಟನೆಗಳು ಅದರ ಸದಸ್ಯರು ಅಥವಾ ಮತ್ತಿನ್ನಾರೇ ಆಗಲಿ ಗೋವಿನ ರಕ್ಷಣೆಯ ಹೆಸರಿನಲ್ಲಿ ಹಿಂಸಾ ಕೃತ್ಯಗಳಲ್ಲಿ ತೊಡಗುವುದು, ಸಾಮಾಜಿಕ ಸಾಮರಸ್ಯವನ್ನು ಕದಡುವಂಥ ಕೃತ್ಯಗಳಿಗೆ ಮುಂದಾಗುವುದು, ಕಾನೂನನ್ನು ತಾವೇ ಕೈಗೆತ್ತಿಕೊಳ್ಳಲು ಪ್ರಯತ್ನಿಸುವಂಥ ಕೃತ್ಯಗಳಿಗೆ ತೊಡಗಿದರೆ ಅಂಥವರಿಗೆ ಕಾನೂನಿನ್ವಯ ಯಾವುದೇ ರಕ್ಷಣೆ ದೊರೆಯುವುದಿಲ್ಲ.

    ಈ ಹಿಂದೆಯೂ ಗೋರಕ್ಷಣೆಯ ಹೆಸರಿನಲ್ಲಿ ನಡೆಸಲಾಗಿರುವ ಹಲ್ಲೆ ಹಾಗೂ ಕ್ರಿಮಿನಲ್ ಚಟುವಟಿಕೆಗಳ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಕಟ್ಟುನಿಟ್ಟಾಗಿ ಕಾನೂನು ರೀತ್ಯಾ ಕ್ರಮ ಕೈಗೊಂಡಿದೆ. ಸಾಮಾಜಿಕ ಸಾಮರಸ್ಯವನ್ನು ಕದಡುವ, ಧರ್ಮ, ಜಾತಿಗಳ ಅಧಾರದಲ್ಲಿ ಸಮಾಜವನ್ನು ಒಡೆಯುವ ಯಾವುದೇ ಕೃತ್ಯಗಳ ವಿರುದ್ಧ ಸರ್ಕಾರವು ಮುಂದೆಯೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ.

    https://twitter.com/Wikredfy/status/860158260476817408

  • ತಾಯಿ ಹಸು ಜನ್ಮ ನೀಡ್ತಿದ್ದಾಗಲೇ ಕರುವನ್ನ ಕಚ್ಚಿ ತಿಂದ ನಾಯಿಗಳು- ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆ

    ತಾಯಿ ಹಸು ಜನ್ಮ ನೀಡ್ತಿದ್ದಾಗಲೇ ಕರುವನ್ನ ಕಚ್ಚಿ ತಿಂದ ನಾಯಿಗಳು- ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆ

    ಕೊಪ್ಪಳ: ಆಕಳು ಕರುವೊಂದು ಭೂಮಿಗೆ ಬಂದು ಕಣ್ಣು ಬಿಡುವ ಮೊದಲೇ ಬೀದಿ ನಾಯಿಗಳ ಪಾಲಾಗಿರುವ ಹೃದಯ ವಿದ್ರಾವಕ ಘಟನೆ ಕೊಪ್ಪಳದಲ್ಲಿ ನಡೆದಿದೆ.

    ಗಂಗಾವತಿಯ ವಲಯ ಅರಣ್ಯ ಇಲಾಖೆಯ ಕಚೇರಿ ಹಿಂದೆ ಹಸುವೊಂದು ಕರು ಹಾಕುತ್ತಿರುವಾಗಲೇ ಬೀದಿನಾಯಿಗಳು ಕಚ್ಚಿ ತಿಂದಿವೆ.

    ನಡೆದಿದ್ದೇನು?: ಬೀದಿ ಆಕಳೊಂದು ನಿರ್ಜನ ಪ್ರದೇಶದಲ್ಲಿ ಕರುವಿಗೆ ಜನ್ಮ ನೀಡುತ್ತಿತ್ತು. ತಾಯಿ ಹಸುವಿನ ಜನನಾಂಗದಿಂದ ಕರುವಿನ ಮುಖ ಹೊರ ಬರುತ್ತಿದ್ದಂತೆಯೇ ಬೀದಿ ನಾಯಿಗಳು ಕಚ್ಚಿ ತಿಂದಿವೆ. ಹೃದಯ ವಿದ್ರಾವಕ ಘಟನೆ ಕಂಡ ಜನರು ಮಮ್ಮಲ ಮರುಗಿದ್ದಾರೆ. ಬೀದಿ ನಾಯಿಗಳು ಕರು ಮಾತ್ರವಲ್ಲದೇ ತಾಯಿ ಹಸುವಿನ ಜನನಾಂಗವನ್ನೂ ಕಚ್ಚಿದ್ದರಿಂದ ಆಕಳು ಸಾವು ಬದುಕಿನ ನಡುವೆ ಹೋರಾಡುತ್ತಿದೆ.

    ಸ್ಥಳೀಯರು ಹೃದಯ ವಿದ್ರಾವಕ ದೃಶ್ಯ ಕಂಡು ಬೀದಿ ನಾಯಿಗಳನ್ನು ಓಡಿಸಿದ್ದಾರೆ. ಈ ವೇಳೆ ಕರು ಅರ್ಧ ಹೊರ ಬಂದಿದ್ದರೆ ಇನ್ನರ್ಧ ಆಕಳಿನ ದೇಹದಲ್ಲೇ ಉಳಿದಿತ್ತು. ಈ ವೇಳೆ ಸ್ಥಳೀಯರು ಕರುವಿನ ಉಳಿದ ದೇಹವನ್ನು ಹೊರತೆಗೆದಿದ್ದಾರೆ. ಸ್ಥಳೀಯರು ಪಶು ವೈದ್ಯರಿಗೆ ಮಾಹಿತಿ ನೀಡಿದ್ದು, ಸದ್ಯ ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.

    https://youtu.be/wPf_48UsjdI

     

  • ಕೊಪ್ಪಳದಲ್ಲಿ ಕೆಸರು ನೀರು ಕುಡಿದು ಹಸುಗಳು ಸಾವು – ತುಂಗಭದ್ರಾ ಹಿನ್ನೀರಿನಲ್ಲಿ ಮನಕಲಕುವ ದುರಂತ

    ಕೊಪ್ಪಳದಲ್ಲಿ ಕೆಸರು ನೀರು ಕುಡಿದು ಹಸುಗಳು ಸಾವು – ತುಂಗಭದ್ರಾ ಹಿನ್ನೀರಿನಲ್ಲಿ ಮನಕಲಕುವ ದುರಂತ

    ಕೊಪ್ಪಳ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗ್ತಿದೆ. ಭೀಕರ ಬರದಿಂದ ಜಾನುವಾರುಗಳಿಗೆ ಕುಡಿಯಲು ಹನಿ ನೀರು, ಮೇವು ಸಿಗ್ತಿಲ್ಲ. ಹೆಚ್ಚಾಗ್ತಿರೋ ಬಿಸಿಲಿನ ತಾಪ ತಾಳಲಾರದೆ ಜಾನುವಾರಗಳು ಬಲಿಯಾಗ್ತಿವೆ. ಬರದ ಮಧ್ಯೆ ರೈತರ ಜಾನುವಾರುಗಳು ಕೂಡ ಬಲಿಯಾಗ್ತಿರೋದ್ರಿಂದ ಗಾಯದ ಮೇಲೆ ಬರೆ ಎಳೆದಂತಾಗುತ್ತಿದೆ.

    ಗೋಶಾಲೆಯಲ್ಲಿ ಸಮರ್ಪಕವಾಗಿ ಮೇವು, ನೀರು ಪೂರೈಸ್ತಿಲ್ಲ ಅಂತ ಬುಧವಾರ ಉಪ ತಹಸೀಲ್ದಾರ್ ಕಚೇರಿ ಆವರಣಕ್ಕೆ ಜಾನುವಾರು ನುಗ್ಗಿಸಿ ರೈತರು ಪ್ರತಿಭಟನೆ ಮಾಡಿದ್ರು. ಕೊಪ್ಪಳದ ಗಂಗಾವತಿ ತಾಲೂಕಿನ ಕನಕಗಿರಿಯಲ್ಲಿ ಮೇವಿನ ಸಮಸ್ಯೆ ಆಗ್ತಿದೆ ಅಂತ ಅಧಿಕಾರಿಗಳು ಒಪ್ಪಿಕೊಂಡಿದ್ರು. ಆದ್ರೆ ಇದೇ ಕೊಪ್ಪಳದಲ್ಲೀಗ ಜಾನುವಾರುಗಳ ಮರಣ ಮೃದಂಗ ಶುರುವಾಗಿದೆ.

    ಬಿಸಿಲಿನ ತಾಪಕ್ಕೆ ಕೊಪ್ಪಳ ತಾಲೂಕಿನ ಕರ್ಕಿಹಳ್ಳಿಯಲ್ಲಿ ಜಾನುವಾರುಗಳು ಸಾವನ್ನಪ್ಪಿವೆ. ತುಂಗಭದ್ರಾ ಡ್ಯಾಂನ ಹಿನ್ನೀರು ಪ್ರದೇಶದಲ್ಲಿ ಹನಿ ನೀರು ಇಲ್ದೆ ಕೆಸರು ನೀರು ಕುಡಿದು 30ಕ್ಕೂ ಹೆಚ್ಚು ಹಸುಗಳು ಅಸು ನೀಗಿವೆ.

    ಕೊಪ್ಪಳ ಜಿಲ್ಲಾಡಳಿತ ತೆರೆದಿರೋ ಗೋಶಾಲೆಯಲ್ಲೂ ಬಿಸಿಲಿನ ತಾಪ ತಾಳಲಾರದೆ ಈಚೆಗೆ ಎರಡು ಜಾನುವಾರುಗಳು ಬಲಿಯಾಗಿವೆ. ಬಳ್ಳಾರಿ, ಗದಗ, ಬಾಗಲಕೋಟೆ ಜಿಲ್ಲೆಗಳಿಂದ್ಲೂ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಜಾನುವಾರುಗಳು, ಸಾವಿರಾರು ಕುರಿಗಳು ತುಂಗಭದ್ರಾ ಡ್ಯಾಂ ಹಿನ್ನೀರು ಪ್ರದೇಶದಲ್ಲಿ ಬೀಡುಬಿಟ್ಟಿವೆ. ಆದ್ರೆ ಇದು ಅಂಥ್ರಾಕ್ಸ್ ರೋಗದಿಂದ ಆಗಿರೋ ದುರಂತ ಅಂತಾ ಅಧಿಕಾರಿಗಳು ಹೇಳುತ್ತಾರೆ.

    ಒಂದೆಡೆ ಅಂಥ್ರಾಕ್ಸ್ ರೋಗಕ್ಕೆ ಬಲಿಯಾದ್ರೆ ಮತ್ತೊಂದೆಡೆ ಬಿಸಿಲಿತಾಪ, ಕುಡಿಯಲು ನೀರು, ಮೇವು ಸಿಗ್ತಿಲ್ಲ. ಅಧಿಕಾರಿಗಳು ಇನ್ನಾದ್ರೂ ತುಂಗಭದ್ರಾ ಡ್ಯಾಂಗೆ ನೀರು ಬಿಟ್ರೆ ಮತ್ತಷ್ಟು ರೈತರು ಕಣ್ಣೀರು ಹಾಕೋದು ತಪ್ಪುತ್ತೆ.