Tag: cpi

  • ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

    ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ, ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ ನಿಧನ

    ತಿರುವನಂತಪುರಂ: ಭಾರತೀಯ ಕಮ್ಯುನಿಸ್ಟ್ ಪಕ್ಷದ (CIP) ಹಿರಿಯ ನಾಯಕ ಹಾಗೂ ಮಾಜಿ ಸಂಸದ ಸುರವರಂ ಸುಧಾಕರ ರೆಡ್ಡಿ (Suravaram Sudhakar Reddy) ಅವರು ಶುಕ್ರವಾರ ತಡರಾತ್ರಿ ತಮ್ಮ 83ನೇ ವಯಸ್ಸಿನಲ್ಲಿ ನಿಧನರಾದರು.

    ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸುರವರಂ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ (Private Hospital) ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಏರ್‌ ಇಂಡಿಯಾ ಮುಂಬೈ-ಜೋಧ್‌ಪುರ ವಿಮಾನ ರನ್‌ವೇಯಲ್ಲೇ ಸ್ಟಾಪ್ ಮಾಡಿದ ಪೈಲಟ್

    1942ರ ಮಾರ್ಚ್‌ 25ರಂದು ತೆಲಂಗಾಣದ ಮೆಹಬೂಬ್‌ನಗರ ಜಿಲ್ಲೆಯ ಕೊಂಡ್ರಾವಪಲ್ಲಿ ಗ್ರಾಮದಲ್ಲಿ ಜನಿಸಿದ ಸುರವರಂ ಸುಧಾಕರ ರೆಡ್ಡಿ ಎಡಪಂಥೀಯ ಸಿದ್ಧಾಂತಗಳಿಂದ ಆಕರ್ಷಿತರಾಗಿದ್ದರು. ವಿದ್ಯಾರ್ಥಿ ಚಳುವಳಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. 15 ವರ್ಷ ವಯಸ್ಸಿನವರಾಗಿದ್ದಾಗಲೇ ಕರ್ನೂಲ್‌ನ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳಿಗಾಗಿ ಆಂದೋಲನ ನಡೆಸಿ ಗಮನ ಸೆಳೆದಿದ್ದರು.

    ರೆಡ್ಡಿ ಅವರು 1998-1999 ಮತ್ತು 2004-2009ರ ಅವಧಿಯಲ್ಲಿ 2 ಬಾರಿ ನಲ್ಗೊಂಡ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿದ್ದರು. ಸಂಸತ್ತಿನಲ್ಲಿದ್ದ ಅವಧಿಯಲ್ಲಿ, ಕಾರ್ಮಿಕರ ಹಕ್ಕುಗಳು, ಸಾಮಾಜಿಕ ನ್ಯಾಯ, ರೈತರು ಹಾಗೂ ಮತ್ತು ಅಂಚಿನಲ್ಲಿರುವ ಸಮುದಾಯಗಳ ಕಲ್ಯಾಣಕ್ಕಾಗಿ ಹೋರಾಡಿದ್ದರು. ಅಷ್ಟೇ ಅಲ್ಲ ಸರ್ಕಾರದ ಭ್ರಷ್ಟಾಚಾರವನ್ನ ಬಯಲಿಗೆಳೆಯುವಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ: ಬಿಹಾರ ಎಸ್‌ಐಆರ್‌ಗೆ ಪುರಾವೆಯಾಗಿ ಆಧಾರ್ ಕಾರ್ಡ್ ಸ್ವೀಕರಿಸಬೇಕು: ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

    2012 ರಿಂದ 2019ರ ವರೆಗೆ, ಅವರು ಭಾರತ ಕಮ್ಯುನಿಸ್ಟ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. ಮೂರು ಅವಧಿಗೆ ಈ ಹುದ್ದೆಯನ್ನು ಅಲಂಕರಿಸಿದ್ದ ಸುರವರಂ ಅವರು ಜೀವನದುದ್ದಕ್ಕೂ ಸಾಮೂಹಿಕ ಹೋರಾಟಗಳಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಸರಳ, ಸಜ್ಜನಿಕೆಯ ಜೀವನ ಶೈಲಿಯಿಂದಾಗಿ ಜನಮನ ಗೆದ್ದಿದ್ದರು. ಇದನ್ನೂ ಓದಿ: ರಷ್ಯಾ ತೈಲ ಖರೀದಿಸಲು ಸಾಧ್ಯವಾಗದಿದ್ರೆ ಭಾರತಕ್ಕಿರೋ ಆಯ್ಕೆಗಳೇನು? – ಅಮೆರಿಕಗೆ ಭಾರತವೇ ಯಾಕೆ ಟಾರ್ಗೆಟ್?‌

  • ರೆಸಾರ್ಟ್‌ನಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ – ಸಿಪಿಐ ಪುತ್ರ ಸೇರಿ ಮೂವರು ಅರೆಸ್ಟ್‌

    ರೆಸಾರ್ಟ್‌ನಲ್ಲಿ ಅಪ್ರಾಪ್ತೆಯ ಮೇಲೆ ಗ್ಯಾಂಗ್‌ ರೇಪ್‌ – ಸಿಪಿಐ ಪುತ್ರ ಸೇರಿ ಮೂವರು ಅರೆಸ್ಟ್‌

    ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ (Gang Rape) ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಪ್ರಾಪ್ತ ಸೇರಿ ಮೂವರನ್ನು ಪೊಲೀಸರು (Police) ಬಂಧಿಸಿದ್ದಾರೆ.

    ರಾಜ್ಯದ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಪಿಐ ಪುತ್ರ ಸೇರಿ ಅಪ್ರಾಪ್ತ ಆರೋಪಿಯನ್ನು ಬಂಧಿಸಲಾಗಿದೆ. ರೆಸಾರ್ಟ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಳಗಾವಿಯ ಮಾರ್ಕೆಟ್‌ ಪೊಲೀಸರು ಬಂಧಿಸಿದ್ದಾರೆ.

    ಸಾಕೀಬ್ ಮತ್ತು ಇಬ್ಬರು ಅಪ್ರಾಪ್ತರು ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಕೇಳಿ ಬಂದಿದೆ. ಅಪ್ರಾಪ್ತರಿಗೆ ರೆಸಾರ್ಟ್ ಕೊಟ್ಟ ಆರೋಪದಡಿ ರೋಹನ್ ಪಾಟೀಲ್ ಹಾಗೂ ಅಶುತೋಷ್‌ ಪಾಟೀಲ್ ಇಬ್ಬರನ್ನು ಬಂಧಿಸಿ ಈಗಾಗಲೇ ಪೊಲೀಸರು ಹಿಂಡಲಗಾ ಜೈಲಿಗೆ ಕಳಿಸಿದ್ದಾರೆ.

    ಆರೋಪಿಗಳು ಮನೆಯೊಂದನ್ನು ಬಾಡಿಗೆಗೆ ಪಡೆದು ತಿಂಗಳಿಗೆ 20 ಸಾವಿರ ಬಾಡಿಗೆಗೆ ಪಡೆದು ರೆಸಾರ್ಟ್ ಆಗಿ ಪರಿವರ್ತನೆ‌ ಮಾಡಿದ್ದರು. ಇದನ್ನೂ ಓದಿ: ರೇಪ್‌ ಮಾಡಿ ಗರ್ಭಪಾತ, ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ – ಸಹ ಕಲಾವಿದೆಯ ದೂರಿನಲ್ಲಿ ಏನಿದೆ?

     
    ಏನಿದು ಪ್ರಕರಣ?
    ಒಂದು ವಾರದ ಹಿಂದೆ ಘಟನೆ ನಡೆದಿದ್ದು, ಸಾಕೀಬ್ ಹಾಗೂ ಇಬ್ಬರು ಅಪ್ರಾಪ್ತರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಸಾಕೀಬ್ ತನ್ನ ಹೆಸರಲ್ಲಿ ರೂಮ್ ಬುಕ್ ಮಾಡಿದ್ದ. ಬಾಲಕಿಯ ಸ್ನೇಹಿತನಾಗಿರುವ ಅಪ್ರಾಪ್ತ ಆಕೆಯನ್ನು ಕರೆದುಕೊಂಡು ರೂಮಿಗೆ ಹೋಗಿದ್ದು, ಮೂವರು ಸೇರಿಕೊಂಡು ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದರು. ಇದನ್ನೂ ಓದಿ: ರನ್ಯಾ ಮದುವೆಗೆ ಪರಮೇಶ್ವರ್‌ 20 ಲಕ್ಷ ಗಿಫ್ಟ್‌ ಕೊಟ್ಟಿರಬಹುದು: ಡಿಕೆಶಿ

    ಮನೆಗೆ ವಾಪಸ್ ಬಂದ ಬಳಿಕ ಬಾಲಕಿ ಹೊಟ್ಟೆ ನೋವು ಎಂದಿದ್ದಳು. ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

  • ಸಿಪಿಐ ನಾಯಕ ಅತುಲ್‌ ಕುಮಾರ್‌ ಅಂಜಾನ್‌ ನಿಧನ

    ಸಿಪಿಐ ನಾಯಕ ಅತುಲ್‌ ಕುಮಾರ್‌ ಅಂಜಾನ್‌ ನಿಧನ

    ಲಕ್ನೋ: ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಯ ರಾಷ್ಟ್ರೀಯ ಕಾರ್ಯದರ್ಶಿ ಅತುಲ್ ಕುಮಾರ್ ಅಂಜಾನ್ (Atul Kumar Anjaan) ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ.

    70 ವರ್ಷ ವಯಸ್ಸಿನ ಅಂಜಾನ್‌ ಅವರು ಕ್ಯಾನ್ಸರ್‌ (Cancer) ವಿರುದ್ಧ ದೀರ್ಘಕಾಲ ಹೋರಾಟ ನಡೆಸಿದ್ದರು. ಕಳೆದ ಒಂದು ತಿಂಗಳಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

    ಅತುಲ್ ಅಂಜಾನ್ ಅವರು 1977 ರಲ್ಲಿ ಲಕ್ನೋ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಅವರು ಸಕ್ರಿಯ ಕಮ್ಯುನಿಸ್ಟ್ ನಾಯಕರಲ್ಲಿ ಒಬ್ಬರಾಗಿದ್ದ ಅಂಜಾನ್ ಅವರು ಸಾಮಾಜಿಕ ಕಾರ್ಯಕರ್ತರಾಗಿಯೂ ಹೆಸರು ಮಾಡಿದವರಾಗಿದ್ದಾರೆ.

    ವಾಕ್ಚಾತುರ್ಯಕ್ಕೆ ಹೆಸರುವಾಸಿಯಾಗಿರುವ ಜೊತೆಗೆ ರಾಜಕೀಯದಲ್ಲಿ ವಿಶಿಷ್ಟ ಸ್ಥಾನವನ್ನು ಗಳಿಸಿದ್ದರು. ಅಲ್ಲದೇ ರೈತರು ಮತ್ತು ಕಾರ್ಮಿಕರ ಹಿತಾಸಕ್ತಿಗಳಿಗೆ ಅವರ ಅಚಲ ಬದ್ಧತೆಯು ಎಲ್ಲಾ ವರ್ಗದ ಜನರಿಂದ ವ್ಯಾಪಕ ಮೆಚ್ಚುಗೆ ಮತ್ತು ಗೌರವವನ್ನು ಗಳಿಸಿತು.

  • ರಾಹುಲ್‌ಗೆ ಶಾಕ್‌ – ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

    ರಾಹುಲ್‌ಗೆ ಶಾಕ್‌ – ವಯನಾಡಿನಲ್ಲಿ ಸಿಪಿಐ ಅಭ್ಯರ್ಥಿ ಕಣಕ್ಕೆ

    ನವದೆಹಲಿ: ಸಂಸದ ರಾಹುಲ್‌ ಗಾಂಧಿಗೆ (Rahul Gandhi) ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI) ಶಾಕ್‌ ನೀಡಿದ್ದು ವಯನಾಡಿನಲ್ಲಿ (Wayanad) ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ.

    ಕೇರಳದಲ್ಲಿ (Kerala) ಲೋಕಸಭೆ ಚುನಾವಣೆಗೆ (Lok Sabha Election) ನಾಲ್ಕು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಿಪಿಐ ಸೋಮವಾರ ಬಿಡುಗಡೆ ಮಾಡಿದೆ. ರಾಷ್ಟ್ರೀಯ ಮಟ್ಟದಲ್ಲಿ INDIA ಮೈತ್ರಿಕೂಟದ ಭಾಗವಾಗಿರುವ ಸಿಪಿಐ ತಿರುವನಂತಪುರಂನಿಂದ ಪನ್ನಿಯನ್ ರವೀಂದ್ರನ್ ಮತ್ತು ವಯನಾಡಿನಿಂದ ಅನ್ನಿ ರಾಜಾ ಅವರನ್ನು ಕಣಕ್ಕಿಳಿಸಿದೆ. ವಿಎಸ್ ಸುನೀಲ್ ಕುಮಾರ್ ತ್ರಿಶೂರ್ ಮತ್ತು ಅರುಣ್ ಕುಮಾರ್ ಮಾವೇಲಿಕರದಿಂದ ಸ್ಪರ್ಧಿಸಲಿದ್ದಾರೆ.

    ಕಾಂಗ್ರೆಸ್‌ನ (Congress) ಶಶಿ ತರೂರ್ ಅವರು ತಿರುವನಂತಪುರಂನ ಹಾಲಿ ಸಂಸದರಾಗಿದ್ದು, ರಾಹುಲ್ ಗಾಂಧಿ ವಯನಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.  ರಾಹುಲ್‌ ಗಾಂಧಿ ಮತ್ತೆ ವಯನಾಡಿನಿಂದ ಸ್ಪರ್ಧಿಸಿದರೆ ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ ರಾಜಾ (Annie Raja)ಅವರ ಪತ್ನಿ ಅನ್ನಿ ರಾಜಾ ಅವರನ್ನು ಎದುರಿಸಬೇಕಾಗುತ್ತದೆ. ಇದನ್ನೂ ಓದಿ:ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್‌ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

    2019 ರ ಚುನಾವಣೆಯಲ್ಲಿ ಸಿಪಿಐ 4 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆದರೆ ಯಾವುದೇ ಕ್ಷೇತ್ರವನ್ನು ಗೆದ್ದಿರಲಿಲ್ಲ. ಕೇರಳದಲ್ಲಿ ಒಟ್ಟು 20 ಲೋಕಸಭಾ ಸ್ಥಾನಗಳಿವೆ. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಎರಡು ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ಗೆ 2, ಸಿಪಿಐ (ಎಂ), ಕೆಸಿ (ಎಂ), ಮತ್ತು ಆರ್‌ಎಸ್‌ಪಿ ತಲಾ 1 ಸ್ಥಾನಗಳನ್ನು ಗೆದ್ದಿದ್ದವು. ಇದನ್ನೂ ಓದಿ: ಭಾರತಕ್ಕೆ ಬ್ರಿಟನ್ ಲೇಖಕಿ ನಿತಾಶಾ ಕೌಲ್‌ಗೆ ನೋ ಎಂಟ್ರಿ – ಬೆಂಗಳೂರು ವಿಮಾನ ನಿಲ್ದಾಣದಿಂದಲೇ ವಾಪಸ್

    ರಾಜ್ಯಸಭಾ ಸಂಸದ ಮತ್ತು ಸಿಪಿಐ (ಎಂ) ಕಾರ್ಯದರ್ಶಿ ಬಿನೋಯ್ ವಿಶ್ವಂ ಅವರು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಕೇರಳದಿಂದ ಸ್ಪರ್ಧಿಸುವ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಉತ್ತರ ಭಾರತವನ್ನು ಭಾರತದ ಕೇಂದ್ರವೆಂದು ಪರಿಗಣಿಸಲಾಗಿದೆ. ಆ ಭಾಗದಿಂದ ಗರಿಷ್ಠ ಸಂಖ್ಯೆಯ ಸಂಸದರು ಸಂಸತ್ತಿಗೆ ಬರುತ್ತಾರೆ. ಆ ಭಾಗದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಕಾಂಗ್ರೆಸ್‌ ಪ್ರಬಲ ಶಕ್ತಿಯಾಗಿದೆ ಎಂದು ಅವರು ಹೇಳಿದರು.

    ಕೇವಲ 20 ಸ್ಥಾನಗಳಿರುವ ಕಾಂಗ್ರೆಸ್ ದಕ್ಷಿಣ ಭಾರತ ಅದರಲ್ಲೂ ಕೇರಳಕ್ಕೆ ಬರುವ ರಾಜಕೀಯ ತರ್ಕ ಏನು? ಕೇರಳದಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. 2019ರಲ್ಲಿ ಅಮೇಠಿಯಿಂದ ವಯನಾಡಿಗೆ ರಾಹುಲ್‌ ಗಾಂಧಿ ಬಂದರು. ರಾಹುಲ್‌ ಗಾಂಧಿಗೆ ಬಿಜೆಪಿ ಭಯವಿದೆ ಎಂದು ಕಮಲ ನಾಯಕರು ಪ್ರಚಾರ ಆರಂಭಿಸಿದರು. ಇದರ ಪರಿಣಾಮ ಇಡೀ ಉತ್ತರ ಭಾರತದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಯಿತು ಎಂದರು.

     

  • ತ್ರಿಪುರ ಬಿಜೆಪಿ ಬೆಂಬಲಿಗರಿಂದ ಸಂಸದೀಯ ತಂಡದ ಮೇಲೆ ದಾಳಿ

    ತ್ರಿಪುರ ಬಿಜೆಪಿ ಬೆಂಬಲಿಗರಿಂದ ಸಂಸದೀಯ ತಂಡದ ಮೇಲೆ ದಾಳಿ

    ಅಗರ್ತಲಾ: ಬಿಜೆಪಿ (BJP) ಬೆಂಬಲಿಗರಿಂದ ಕಾಂಗ್ರೆಸ್ (Congress) ಹಾಗೂ ಸಿಪಿಐ (CPI) ಸಂಸದೀಯ ತಂಡದ ಮೇಲೆ ದಾಳಿ ನಡೆದ ಘಟನೆ ಬಿಸಲ್‍ಗಢ್‍ನಲ್ಲಿ ನಡೆದಿದೆ.

    ತ್ರಿಪುರ ಸಿಪಿಐ ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ (Jitendra Chaudhury) ಹಾಗೂ ತಂಡ ಶುಕ್ರವಾರ ಸಂಜೆ ಬಿಸಲ್‍ಗಢ್‍ನ (Bisalgarh) ನೇಹಲ್‍ಚಂದ್ರ ನಗರಕ್ಕೆ (Nehalchandra Nagar) ತೆರಳಿದ್ದಾಗ ಈ ದಾಳಿ ನಡೆದಿದೆ. ದಾಳಿಯ ಹಿನ್ನೆಲೆಯಲ್ಲಿ ಇಂದು ನಡೆಯ ಬೇಕಿದ್ದ ಸಂಸದೀಯ ತಂಡದ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಪಡಿಸುವಂತೆ ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಇನ್ನಿಲ್ಲ

    ಸಂಸದೀಯ ತಂಡ ಚುನಾವಣೋತ್ತರ ರಾಜಕೀಯ ಹಿಂಸಾಚಾರದ ಕುರಿತು ಸಂತ್ರಸ್ತರೊಂದಿಗೆ ಮಾತನಾಡಲು ಬಿಜೆಪಿ ಆಡಳಿತದ ತ್ರಿಪುರದಲ್ಲಿ ಎರಡು ದಿನ ಪ್ರವಾಸ ಕೈಗೊಂಡಿತ್ತು.

    ದಾಳಿಯಲ್ಲಿ ಮೂರು ವಾಹನಗಳು ಹಾನಿಗೊಳಗಾಗಿವೆ. ವಾಹನದಲ್ಲಿದ್ದ ಎಲ್ಲರನ್ನೂ ಸುರಕ್ಷಿತವಾಗಿ ಕರೆತರಲಾಯಿತು. ಘಟನೆ ಸಂಬಂಧ ಓರ್ವನನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆಯನ್ನು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಖಂಡಿಸಿದ್ದಾರೆ. ಪಕ್ಷದ ನಾಯಕರ ನಿಯೋಗದ ಮೇಲೆ ಬಿಜೆಪಿ ಗೂಂಡಾಗಳು ದಾಳಿ ನಡೆಸಿದ್ದಾರೆ. ನಿಯೋಗದ ಜೊತೆಯಲ್ಲಿದ್ದ ಪೊಲೀಸರು ಪ್ರತಿಕ್ರಿಯಿಸಿಲ್ಲ. ಬಿಜೆಪಿ ಪ್ರಾಯೋಜಿತ ಹಿಂಸಾಚಾರಕ್ಕೆ ಜಯವಾಗಲಿ ಎಂದು ಟ್ವಿಟ್ಟರ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ತಂದೆ ಮನೆಯಿಂದ ಕಾಸ್ಟ್ಲಿ ವಾಚ್ ತರದಿದ್ದಕ್ಕೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ!

  • ಕಾರು ಅಪಘಾತದಲ್ಲಿ ಮೃತಪಟ್ಟ ಸಿಪಿಐ, ಪತ್ನಿ – ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

    ಕಾರು ಅಪಘಾತದಲ್ಲಿ ಮೃತಪಟ್ಟ ಸಿಪಿಐ, ಪತ್ನಿ – ಹುಟ್ಟೂರಿನಲ್ಲಿ ಅಂತ್ಯಕ್ರಿಯೆ

    ಹಾವೇರಿ: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಿನ್ನೆ ನಡೆದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ವಿಜಯಪುರ ಜಿಲ್ಲೆ ಸಿಂದಗಿ ಪೊಲೀಸ್ ಠಾಣೆ ಸಿಪಿಐ ರವಿ ಉಕ್ಕುಂದ ಅಂತ್ಯಕ್ರಿಯೆ ಇಂದು ಅವರ ಹುಟ್ಟೂರು ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಅರಳೀಕಟ್ಟಿ ಗ್ರಾಮದಲ್ಲಿ ನಡೆಯಿತು.

    ನಿನ್ನೆ ಕಾರಿನಲ್ಲಿ ಸಿಂದಗಿಯಿಂದ ಪತ್ನಿಯೊಂದಿಗೆ ಕಲಬುರಗಿಗೆ ಹೊರಟಿದ್ದರು. ಈ ವೇಳೆ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ ಮತ್ತು ಅವರ ಪತ್ನಿ ಮಧು ಮೃತಪಟ್ಟಿದ್ದರು. ಸುಮಾರು 6 ವರ್ಷಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಸಿಪಿಐ ಆಗಿ ಕೆಲಸ ನಿರ್ವಹಿಸಿ ಪ್ರಸ್ತುತ ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸ್ ಠಾಣೆಯ ಸಿಪಿಐ ಆಗಿ ರವಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಗುಜರಾತ್‌ ಚುನಾವಣೆ – AAP ಸಿಎಂ ಅಭ್ಯರ್ಥಿಗೆ ಸೋಲು

    ಸಿಪಿಐ ರವಿ ಸಾವಿಗೆ ಅರಳೀಕಟ್ಟಿ, ಕೊಪ್ಪಳ, ವಿಜಯಪುರ ಜಿಲ್ಲೆಯ ಜನರು ಕಂಬನಿ ಮಿಡಿದಿದ್ದಾರೆ. ಮೃತ ದಂಪತಿಯ ಅಂತ್ಯಕ್ರಿಯೆ ಅರಳೀಕಟ್ಟಿ ಗ್ರಾಮದಲ್ಲಿ ನಡೆಯಿತು. ಮೃತ ದಂಪತಿಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಇನ್ನೂ ಚಿಕ್ಕ ವಯಸ್ಸಿನಲ್ಲಿರುವ ಇಬ್ಬರು ಮಕ್ಕಳನ್ನು ಬಿಟ್ಟು ಸಿಪಿಐ ರವಿ ಮತ್ತು ಅವರ ಪತ್ನಿ ಮಧು ಬಾರದ ಲೋಕಕ್ಕೆ ತೆರಳಿದ್ದಕ್ಕೆ ನೆರೆದಿದ್ದ ಜನ ಕಂಬನಿ ಮಿಡಿದರು. ಇದನ್ನೂ ಓದಿ: 1 ತಿಂಗಳ ಹಿಂದೆ ಪಿಯೂಷ್ ಗೋಯಲ್ ಹೇಳಿದ್ದ ಭವಿಷ್ಯ ನಿಜವಾಯ್ತು – ವೀಡಿಯೋ ವೈರಲ್

    Live Tv
    [brid partner=56869869 player=32851 video=960834 autoplay=true]

  • ಭೀಕರ ಅಪಘಾತ-  ಸಿಪಿಐ, ಪತ್ನಿ ಸಾವು

    ಭೀಕರ ಅಪಘಾತ- ಸಿಪಿಐ, ಪತ್ನಿ ಸಾವು

    ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ವಿಜಯಪುರ ಜಿಲ್ಲಾ ಸಿಂದಗಿ ತಾಲೂಕಿನ ಸಿಪಿಐ ಹಾಗೂ ಅವರ ಪತ್ನಿ ಸಾವಿಗೀಡಾಗಿದ್ದಾರೆ.

    ಬುಧವಾರ ಮಧ್ಯಾಹ್ನ ನೆಲೋಗಿ ಕ್ರಾಸ್ ಬಳಿ ನಿಂತಿದ್ದ, ಕಂಟೇನರ್ ಗೆ ಮಾರುತಿ ಸ್ವಿಫ್ಟ್ ಡಿಸೈರ್ ಕಾರು (Swift Desire Car) ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಿಪಿಐ ರವಿ ಉಕ್ಕುಂದ (43), ಪತ್ನಿ ಮಧು (40) ದುರ್ಮರಣ ಹೊಂದಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್ ಸಿಬ್ಬಂದಿ ಉದ್ಧಟತನ – ಗಾಯಾಳುವನ್ನು ಅಪಘಾತದ ಸ್ಥಳದಲ್ಲೇ ಬಿಟ್ಟು ವಾಪಸ್

    ಸಿಂದಗಿಯಿಂದ ಕಲಬುರಗಿ ನಗರಕ್ಕೆ ಕಾರಿನಲ್ಲಿ ಆಗಮಿಸುತ್ತಿದ್ದ ಸಿಪಿಐ ದಂಪತಿ, ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ದೌಡಾಯಿಸಿದ್ದು, ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ವಕೀಲೆ ಜೊತೆ ಅಸಭ್ಯ ವರ್ತನೆ ಮಾಡಿದ್ದ ಸಿಪಿಐ ಮೇಲೆ ಪ್ರಕರಣ ದಾಖಲು

    ವಕೀಲೆ ಜೊತೆ ಅಸಭ್ಯ ವರ್ತನೆ ಮಾಡಿದ್ದ ಸಿಪಿಐ ಮೇಲೆ ಪ್ರಕರಣ ದಾಖಲು

    ಧಾರವಾಡ: ವಕೀಲೆಯೊಬ್ಬರು (Lawyer) ಠಾಣೆಗೆ ಬಂದಾಗ ಅವರ ಜೊತೆಗೆ ಸಿಪಿಐ (CPI) ಒಬ್ಬರು ಅನುಚಿತ ವರ್ತನೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಧಾರವಾಡದಲ್ಲಿ (Dharwad) ಸಿಪಿಐ ಮೇಲೆ ಪ್ರಕರಣ ದಾಖಲಾಗಿದೆ.‌

    ಧಾರವಾಡ ಗ್ರಾಮೀಣ ಸಿಪಿಐ ಮಂಜುನಾಥ ಕುಸಗಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳಾ ವಕೀಲೆ‌ ಒಂದು ಪ್ರಕರಣಕ್ಕೆ ಸಂಬಂಧಿಸಿ ಧಾರವಾಡ ಗ್ರಾಮೀಣ ಠಾಣೆಗೆ ಹೋಗಿದ್ದರು. ಆದರೆ ಈ ವೇಳೆ ವಕೀಲೆಗೆ ಕಣ್ಣು ಹೊಡೆದು, ತನ್ನ ತುಟಿಗೆ ತನ್ನದೇ ಕೈಗೆ ಮುತ್ತು ಕೊಟ್ಟು ವಕೀಲೆಗೆ ಅದನ್ನು ಫ್ಲೈಯಿಂಗ್ ಕಿಸ್ ಮಾಡಿದ್ದರು.‌ ಈ ವೇಳೆ ವಕೀಲೆ ಈ‌ ಬಗ್ಗೆ ಪ್ರಶ್ನೆ ಮಾಡಿದ್ದರೂ ಅದಕ್ಕೆ ಇದು ಮಾಡಿದ್ದು ಏನು ತಪ್ಪು ಎಂದು ಸಿಪಿಐ ಕುಸುಗಲ್ ಪ್ರಶ್ನೆ ಮಾಡಿ ಅನುಚಿತವಾಗಿ ವರ್ತಿಸಿದ್ದ. ಇದನ್ನೂ ಓದಿ: ಭವಾನಿ ಅಕ್ಕ, ಪ್ರಜ್ವಲ್ ರೇವಣ್ಣ ನಶೆಯಲ್ಲಿರ್ತಾರೆ; ಥರ್ಟಿ, ಸಿಕ್ಸ್ಟಿ ಅಲ್ಲ 2 ಬಾಟ್ಲಿ ಕುಡಿತಾರೆ – ಪ್ರೀತಂ ಗೌಡ

    ಈ ಸಂಬಂಧ ವಕೀಲೆ ದೂರು ಕೊಡಲು ಠಾಣೆಗೆ ಹೋದಾಗ ದೂರು ಪಡೆಯುವುದಕ್ಕೂ ಪೊಲೀಸರು ಹಿಂದೇಟು ಹಾಕಿದ್ದರು. ಪೊಲೀಸರ ವರ್ತನೆ ಖಂಡಿಸಿ ಪ್ರತಿಭಟಿಸಿದ್ದ ಧಾರವಾಡ ವಕೀಲರು, ಎಸ್ಪಿ ಲೋಕೇಶ್ ಜಗಲಾಸರ್ ಅವರಿಗೆ ಮನವಿ ಕೊಟ್ಟು ಕ್ರಮ‌ ಕೈಗೊಳ್ಳಲು ಹೇಳಿದ್ದರು. ಇಲ್ಲದೇ ಹೋದಲ್ಲಿ ಉಗ್ರ ಪ್ರತಿಭಟನೆ ಮಾಡೋ ಎಚ್ಚರಿಕೆ ನೀಡಿದ್ದ ವಕೀಲರು 3 ಗಂಟೆ ಧಾರವಾಡ ಜುಬ್ಲಿ ವೃತ್ತದಲ್ಲಿ ರಸ್ತೆ ತಡೆ ಮಾಡಿದ್ದರು. ಈ ಹಿನ್ನೆಲೆ ಧಾರವಾಡ ಉಪನಗರ ಠಾಣೆಯ ಪೊಲೀಸರು ಈಗ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಾದರಕ್ಷೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ- ಇಬ್ಬರ ದುರ್ಮರಣ

    Live Tv
    [brid partner=56869869 player=32851 video=960834 autoplay=true]

  • 16ರ ಬಾಲಕಿ ಮೇಲೆ ಗ್ಯಾಂಗ್ ರೇಪ್- ಓರ್ವ ಮಹಿಳೆ ಸೇರಿ ಮೂವರು ಅರೆಸ್ಟ್

    16ರ ಬಾಲಕಿ ಮೇಲೆ ಗ್ಯಾಂಗ್ ರೇಪ್- ಓರ್ವ ಮಹಿಳೆ ಸೇರಿ ಮೂವರು ಅರೆಸ್ಟ್

    ಅಗರ್ತಲಾ: ತ್ರಿಪುರಾದ (Tripura) ಉನಕೋಟಿ ಜಿಲ್ಲೆಯಲ್ಲಿ 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಓರ್ವ ಮಹಿಳೆ (Women) ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.

    ಘಟನೆಯಲ್ಲಿ ಸಿಪಿಐ(ಎಂ) (CPI) ಸಚಿವರ ಪುತ್ರನ ಕೈವಾಡವಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ (Congress) ಆರೋಪಿಸಿದೆ. ಆದರೆ ಬಿಜೆಪಿ (BJP) ಆರೋಪವನ್ನು ತಳ್ಳಿಹಾಕಿದೆ. ಇದನ್ನೂ ಓದಿ: 5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!

    ಇದೇ ತಿಂಗಳ ಅಕ್ಟೋಬರ್ 19ರಂದು ಕುಮಾರಘಾಟ್‌ನ 3 ಅಂತಸ್ತಿನ ಕಟ್ಟಡದಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ನೆರೆಯ ಮಹಿಳೆಯೊಬ್ಬಳೇ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗುವಂತೆ ಮಾಡಿದ್ದಾಳೆ. ಈ ಸಂಬಂಧ ಸಂತ್ರಸ್ತೆ ತಾಯಿ ನೀಡಿದ ದೂರಿನ ಮೇರೆಗೆ ಕೇಸ್ ದಾಖಲಿಸಿ, ಮೂವರನ್ನು ಬಂಧಿಸಲಾಗಿದೆ. ಇನ್ನೂ ಹಲವರಿಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸರು (Tripura Police) ತಿಳಿಸಿದ್ದಾರೆ.

    ಪ್ರಕರಣದಲ್ಲಿ (FIR) ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿದೆ. ಆದ್ದರಿಂದ ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಬಂಧಿಸುವ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗುತ್ತದೆ ಎಂದು ಕಾಂಗ್ರೆಸ್ ಮಾಜಿ ಶಾಸಕ ಆಶಿಶ್ ಸಹಾ ತಿಳಿಸಿದ್ದಾರೆ. ಇದನ್ನೂ ಓದಿ: ನರ್ಸ್‍ನ್ನು ಕಟ್ಟಿ ಹಾಕಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ

    ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಜಿತೇಂದ್ರ ಚೌಧರಿ ಮಾತನಾಡಿ, ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಚಿವರೊಬ್ಬರ ಪುತ್ರನ ಹೆಸರು ಕೇಳಿಬಂದಿರುವುದು ಬೇಸರ ತಂದಿದೆ. ನಾವು ಅವರ ವಿರುದ್ಧ ತನಿಖೆಗೆ ಒತ್ತಾಯಿಸುತ್ತೇವೆ. ಒಂದು ವೇಳೆ ಆರೋಪ ಸಾಬೀತಾದರೆ ಕಠಿಣ ಶಿಕ್ಷೆ ಕೈಗೊಳ್ಳಲಿ ಎಂದು ಹೇಳಿದ್ದಾರೆ.

    CRIME COURT

    ಆರೋಪ ತಳ್ಳಿಹಾಕಿರುವ ಬಿಜೆಪಿ, ಅಕ್ಟೋಬರ್ 19ರಂದು ಸಚಿವರ ಪುತ್ರ ಅಗರ್ತಲಾದಲ್ಲಿದ್ದ ಕಾರಣ ಆರೋಪಗಳು ಸಂಪೂರ್ಣವಾಗಿ ಆಧಾರ ರಹಿತ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • 5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!

    5 ಬಾರಿ ಗರ್ಭಪಾತ, ಮೂರನೇ ಪತ್ನಿಯಾಗಿರುವಂತೆ ಒತ್ತಡ- ಸಿಪಿಐ ವಿರುದ್ಧ ರೇಪ್ ಕೇಸ್!

    ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ರೇಪ್ ಕೇಸ್ ದಾಖಲು ಮಾಡಲಾಗಿದೆ.

    ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಳು. ಇದೀಗ ಈಕೆ ಸೋದರ ಮಾವನ ಮಗನಾಗಿರುವ ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆ (Chitradurga women Police Station) ಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.

    5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ (Umesh) ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ದಾವಣಗೆರೆ (Davanagere) ಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಲಾಗಿದೆ.

    ಆತ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗ (Shivamogga)ಕ್ಕೆ ಬಂದು ಬಲತ್ಕಾರ ಮಾಡಿದ್ದಾರೆ. ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ. ಇದನ್ನೂ ಓದಿ: ನರ್ಸ್‍ನ್ನು ಕಟ್ಟಿ ಹಾಕಿ ಆಕೆ ಮೇಲೆ ಸಾಮೂಹಿಕ ಅತ್ಯಾಚಾರ

    ಸಿಪಿಐ ಉಮೇಶ್‍ಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದಾರೆ. 3ನೇ ಪತ್ನಿಯಾಗಿ ಇರುವಂತೆ ಸಿಪಿಐ ಉಮೇಶ್ ಒತ್ತಡ ಹೇರಿದ್ದಾನೆ. ದಾವಣಗೆರೆಯ ನಿವೇಶನ ನಿನಗೆ ಸಿಗದಂತೆ ಮಾಡುತ್ತೇನೆ. ನಿಮ್ಮ ತಂದೆ-ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವುದಾಗಿ ಯುವತಿ ಆರೋಪಿಸಿದ್ದಾಳೆ.

    ಕಲಂ 376 ಕ್ಲಾಸ್ (2)(ಞ)(ಟಿ), 323 (ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಪ್ರಕರಣ ದಾಖಲಾದ ಬಳಿಕ ಸಿಪಿಐ ಜಿ.ಬಿ.ಉಮೇಶ್ ನಾಪತ್ತೆಯಾಗಿದ್ದಾನೆ.

    Live Tv
    [brid partner=56869869 player=32851 video=960834 autoplay=true]