Tag: cpi

  • ಸಿಪಿಐ ಇಲ್ಲಾಳ್‍ ಮೇಲೆ ಹಲ್ಲೆ ಪ್ರಕರಣ- ಆಸ್ಪತ್ರೆಗೆ ಸಂಸದ ಜಾಧವ್ ಭೇಟಿ

    ಸಿಪಿಐ ಇಲ್ಲಾಳ್‍ ಮೇಲೆ ಹಲ್ಲೆ ಪ್ರಕರಣ- ಆಸ್ಪತ್ರೆಗೆ ಸಂಸದ ಜಾಧವ್ ಭೇಟಿ

    ಕಲಬುರಗಿ: ಮಹಾರಾಷ್ಟ್ರದಲ್ಲಿ ಗಾಂಜಾ (Ganja) ಆರೋಪಿಗಳನ್ನು ಬಂಧಿಸಲು ತೆರಳಿದಾಗ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಪಿಐ (CPI) ಶ್ರೀಮಂತ್ ಇಲ್ಲಾಳ್ ಅವರನ್ನು ಇಂದು ಸಂಸದ ಉಮೇಶ್ ಜಾಧವ್ (Dr Umesh Jadhav) ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

    ಸಿಪಿಐ ಶ್ರೀಮಂತ್ ಇಲ್ಲಾಳ್ ಅವರು ನಗರದ ಯುನೈಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಗತ್ಯ ಬಿದ್ದರೆ ಹೆಚ್ಚಿನ ಚಿಕಿತ್ಸೆಗಾಗಿ ಏರ್ ಲಿಫ್ಟ್ ಮಾಡಲಾಗುವುದು. ಸಿಪಿಐಗೆ ಯಾವುದೇ ಕುಂದುಕೊರತೆಯಾಗದಂತೆ ಸಿಎಂ ಬಸವರಾಜ್‌ ಬೊಮ್ಮಾಯಿ (Basavaraj Bommai) ಸೂಚನೆ ನೀಡಿದ್ದಾರೆ ಎಂದು ಡಾ ಉಮೇಶ್ ಜಾಧವ್ ಹೇಳಿದ್ದಾರೆ. ಇದೇ ವೇಳೆ ಕುಟುಂಬಸ್ಥರನ್ನ ಭೇಟಿಯಾಗಿ ಸಂಸದರು ಸಾಂತ್ವನ ಹೇಳಿದರು.

    ಪ್ರಕರಣ ಸಂಬಂಧ 40 ಮಂದಿ ಮೇಲೆ ಎಫ್‍ಐಆರ್ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಗಾಂಜಾ ದಂಧೆಕೋರರಿಂದಲೇ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ – ICUನಲ್ಲಿ ಸಿಪಿಐ

    ಏನಿದು ಗಾಂಜಾ ಕೇಸ್?
    ಗಾಂಜಾ ದಂಧೆ ಕೇಸ್‌ನಲ್ಲಿ ಕಾರ್ಯಾಚರಣೆಗೆ ಹೋಗಿದ್ದ ಇಲ್ಲಾಳ ನೇತೃತ್ವದ ಪೊಲೀಸ್ ತಂಡ, ಕಳೆದ 2-3 ದಿನಗಳ ಹಿಂದೆ ಆರೋಪಿ ಸಂತೋಷ ಸೇರಿದಂತೆ ಅನೇಕ ಗಾಂಜಾ ದಂಧೆಕೋರರನ್ನೂ ಬಂಧಿಸಲಾಗಿತ್ತು.  ಶುಕ್ರವಾರ ಮಧ್ಯಾಹ್ನವು ಸಹ ಗಾಂಜಾ ದಂಧೆ ಬೇಧಿಸಲು ಸಿಪಿಐ ಶ್ರೀಮಂತ ಇಲ್ಲಾಳ್ ನೇತೃತ್ವದಲ್ಲಿ 10 ಜನರ ಪೊಲೀಸ್ ತಂಡ ಮಹಾರಾಷ್ಟ್ರಕ್ಕೆ (Maharashtra) ಹೋಗಿತ್ತು.

    ಗಾಂಜಾ ಬೆಳೆಯುವ ಹೊಲಗಳಿಗೆ (Ganja Plant) ಹೋಗಿದ್ದ ಪೊಲೀಸರ ಮೇಲೆ ರಾತ್ರಿ 9:30ರ ವೇಳೆಗೆ ಸುಮಾರು 30-40 ಮಂದಿ ಗಾಂಜಾ ದಂಧೆಕೋರರು ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಗಾಂಜಾ ದಂಧೆಕೋರರು ಪೊಲೀಸರನ್ನೆ ಅಟ್ಟಾಡಿಸಿದ್ದಾರೆ. ಕೊನೆಗೆ ಪ್ರಾಣ ಉಳಿಸಿಕೊಳ್ಳಲು ಪೊಲೀಸರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಪಿಐ ಇಲ್ಲಾಳ ಅವರನ್ನ ಮಧ್ಯರಾತ್ರಿ 2:30ರ ವೇಳೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಗಾಂಜಾ ದಂಧೆಕೋರರಿಂದಲೇ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ – ICUನಲ್ಲಿ ಸಿಪಿಐ

    ಗಾಂಜಾ ದಂಧೆಕೋರರಿಂದಲೇ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ – ICUನಲ್ಲಿ ಸಿಪಿಐ

    ಕಲಬುರಗಿ: ಗಾಂಜಾ ದಂಧೆ ಪ್ರಕರಣದ ಕಾರ್ಯಾಚರಣೆಗೆ ತೆರಳಿದ್ದ ಸಿಪಿಐ (CPI) ಇಲ್ಲಾಳ ನೇತೃತ್ವದ ಪೊಲೀಸರ (Kalaburagi Police) ತಂಡದ ಮೇಲೆ ಗಾಂಜಾ ದಂಧೆಕೋರರು ಪೊಲೀಸರ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.

    ಕರ್ನಾಟಕ ಮಹಾರಾಷ್ಟ್ರ ಗಡಿಯಂಚಿನಲ್ಲಿರುವ (Karnataka Maharashtra Border) ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಭೋಸಗಾ ಗ್ರಾಮದಲ್ಲಿ ಹಲ್ಲೆ ನಡೆದಿದೆ. ಆ ಗ್ರಾಮದಲ್ಲಿಯೇ ಮಹಾರಾಷ್ಟ್ರ ಮೂಲದ ಕೆಲ ವ್ಯಕ್ತಿಗಳು ಗಾಂಜಾ ಬೆಳೆದಿದ್ದರು ಎಂದು ಹೇಳಲಾಗಿದೆ.

    ದಂಧೆಕೋರರು ಕಲಬುರಗಿ ಜಿಲ್ಲಾ ಗ್ರಾಮೀಣ ಠಾಣೆ ಸಿಪಿಐ ಶ್ರೀಮಂತ ಇಲ್ಲಾಳ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅವರನ್ನು ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತಲೆ, ಮುಖ, ಹೊಟ್ಟೆ ಭಾಗಗಳಲ್ಲಿ ಗಂಭೀರ ಗಾಯಗೊಂಡಿರುವ ಇಲ್ಲಾಳ ಅವರೀಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಐಸಿಯು (ICU)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಏನಿದು ಗಾಂಜಾ ಕೇಸ್?
    ಗಾಂಜಾ ದಂಧೆ ಕೇಸ್‌ನಲ್ಲಿ ಕಾರ್ಯಾಚರಣೆಗೆ ಹೋಗಿದ್ದ ಇಲ್ಲಾಳ ನೇತೃತ್ವದ ಪೊಲೀಸ್ ತಂಡ, ಕಳೆದ 2-3 ದಿನಗಳ ಹಿಂದೆ ಆರೋಪಿ ಸಂತೋಷ ಸೇರಿದಂತೆ ಅನೇಕ ಗಾಂಜಾ ದಂಧೆಕೋರರನ್ನೂ ಬಂಧಿಸಲಾಗಿತ್ತು. ನಿನ್ನೆ ಮಧ್ಯಾಹ್ನವು ಸಹ ಗಾಂಜಾ ದಂಧೆ ಬೇಧಿಸಲು ಸಿಪಿಐ (CPI) ಶ್ರೀಮಂತ ಇಲ್ಲಾಳ ನೇತೃತ್ವದಲ್ಲಿ 10 ಜನರ ಪೊಲೀಸ್ ತಂಡ ಮಹಾರಾಷ್ಟ್ರಕ್ಕೆ (Maharashtra) ಹೋಗಿತ್ತು. ಇದನ್ನೂ ಓದಿ: ನನ್ನ ಸ್ಫೋಟಕ ಬ್ಯಾಟಿಂಗ್ ಕಂಡು ನಾನೇ ಶಾಕ್ – ಪಂದ್ಯ ಗೆದ್ದರೂ ಹೀಗೇಕೆ ಅಂದ್ರು ಹಿಟ್‌ಮ್ಯಾನ್‌?

    ಗಾಂಜಾ ಬೆಳೆಯುವ ಹೊಲಗಳಿಗೆ (Ganja Plant) ಹೋಗಿದ್ದ ಪೊಲೀಸರ ಮೇಲೆ ರಾತ್ರಿ 9:30ರ ವೇಳೆಗೆ ಸುಮಾರು 30-40 ಮಂದಿ ಗಾಂಜಾ ದಂಧೆಕೋರರು ಕಟ್ಟಿಗೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ದಾಳಿ ಮಾಡುತ್ತಿದ್ದಂತೆ ಸಿಪಿಐ ಶ್ರೀಮಂತ ಇಲ್ಲಾಳ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಗಾಂಜಾ ದಂಧೆಕೋರರು ಪೊಲೀಸರನ್ನೆ ಅಟ್ಟಾಡಿಸಿದ್ದಾರೆ. ಕೊನೆಗೆ ಪ್ರಾಣ ಉಳಿಸಿಕೊಳ್ಳಲು ಪೊಲೀಸರು ಚೆಲ್ಲಾಪಿಲ್ಲಿಯಾಗಿ ಓಡಿಹೋಗಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಿಪಿಐ ಇಲ್ಲಾಳ ಅವರನ್ನ ಮಧ್ಯರಾತ್ರಿ 2:30ರ ವೇಳೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸದ್ಯ ಕಲಬುರಗಿಯ ಖಾಸಗಿ ಆಸ್ಪತ್ರೆಗೆ (Private Hospital) ಎಸ್ಪಿ ಈಶಾ ಪಂತ್ ಭೇಟಿ ನೀಡಿದ್ದು, ಶ್ರೀಮಂತ ಇಲ್ಲಾಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಮಂತ್ ಇಲ್ಲಾಳಗೆ ಡಾ.ಸುದರ್ಶನ್ ಲಾಖೆ, ಡಾ.ರಾಕೇಶ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: Bigg Boss Special- ಈ ಬಾರಿ ಬಿಗ್ ಬಾಸ್ 9 ಮನೆ ಪ್ರವೇಶ ಮಾಡಿರುವ ಖ್ಯಾತ ಕಿರುತೆರೆ ನಟಿಯರಿವರು

    ಈ ಕುರಿತು ಮಾಹಿತಿ ನೀಡಿರುವ ವೈದ್ಯ (Doctor) ಡಾ.ಸುದರ್ಶನ, ಶ್ರೀಮಂತ ಇಲ್ಲಾಳ್ ಅವರ ಸ್ಥಿತಿ ಗಂಭೀರವಾಗಿದೆ. ದೇಹದ ವಿವಿಧ ಭಾಗಗಳಲ್ಲಿ ಗಾಯಗಳಾಗಿವೆ. ಪಕ್ಕೆಲುಬು, ಮುಖದ ಎಲುಬುಗಳು ಮುರಿದಿವೆ. ಮೆದುಳಿನ ಭಾಗಕ್ಕೂ ಗಾಯಗಳಾಗಿದ್ದು, ಮೆದುಳಿನಲ್ಲಿ ರಕ್ತಸ್ರಾವವಾಗಿದೆ. ಮುಂಜಾನೆ 4 ಗಂಟೆಗೆ ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯ ಸುಧಾರಣೆಗೆ ಎಲ್ಲಾ ರೀತಿಯಲ್ಲೂ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರು ICU (ತೀವ್ರ ನಿಗಾ ಘಟಕ)ನಲ್ಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    ಬಸವಕಲ್ಯಾಣ ಮಂಠಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    Live Tv
    [brid partner=56869869 player=32851 video=960834 autoplay=true]

  • ‘ಬಿಗ್ ಬಾಸ್’ ಮನೆಯನ್ನು ವೇಶ್ಯಾಗೃಹಕ್ಕೆ ಹೋಲಿಸಿ ಆಕ್ರೋಶ ಹೊರಹಾಕಿದ ಸಿಪಿಐ ಮುಖಂಡ

    ‘ಬಿಗ್ ಬಾಸ್’ ಮನೆಯನ್ನು ವೇಶ್ಯಾಗೃಹಕ್ಕೆ ಹೋಲಿಸಿ ಆಕ್ರೋಶ ಹೊರಹಾಕಿದ ಸಿಪಿಐ ಮುಖಂಡ

    ಬಿಗ್ ಬಾಸ್ (Bigg Boss) ಕುರಿತಾಗಿ ಅನೇಕರು ಈ ಹಿಂದೆಯೂ ಬೇಸರ ವ್ಯಕ್ತ ಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸ್ಪರ್ಧಿಗಳ ಆಯ್ಕೆಯ ಕುರಿತಾಗಿಯೂ ಟ್ರೋಲ್ ಮಾಡಲಾಗಿದೆ. ಆದರೆ, ಬಿಗ್ ಬಾಸ್ ಮನೆಯನ್ನು ವೇಶ್ಯಾಗೃಹಕ್ಕೆ ಹೋಲಿಸುವಂತಹ ಪ್ರಸಂಗಗಳು ನಡೆದಿರಲಿಲ್ಲ. ಇಂಥದ್ದೊಂದು ಘಟನೆಗೆ ತೆಲುಗು (Telugu) ಬಿಗ್ ಬಾಸ್ ಅಂಗಳದಲ್ಲಿ ನಡೆದಿದೆ. ಕಳೆದ ವಾರದಿಂದ ಶುರುವಾಗಿರುವ ತೆಲುಗು ಬಿಗ್ ಬಾಸ್ ಅನ್ನು ಆಂಧ್ರದ (Andhra Pradesh) ಸಿಪಿಐ (CPI) ಮುಖಂಡ ನಾರಾಯಣ್ ಅವರು ವೇಶ್ಯಾಗೃಹಕ್ಕೆ (Brothel House) ಹೋಲಿಸಿದ್ದಾರೆ.

    ತೆಲುಗು ಬಿಗ್ ಬಾಸ್ ಅನ್ನು ನಾಗಾರ್ಜುನ ನಡೆಸಿಕೊಡುತ್ತಿದ್ದಾರೆ. ಅವರಿಗೂ ಹಲವು ಪ್ರಶ್ನೆಗಳನ್ನು ಮಾಡಿರುವ ನಾರಾಯಣ್ (Narayan), ‘ಕುಟುಂಬವಲ್ಲದ, ಅಣ್ಣ ತಮ್ಮ, ಅಕ್ಕ ತಂಗಿ, ಅಣ್ಣ ತಂಗಿ ಹೀಗೆ ಯಾವುದೂ ಅಲ್ಲದ, ಪಡ್ಡೆಗಳನ್ನು ತಂದು ಒಂದೇ ಮನೆಯಲ್ಲಿ ಕೂಡಿ ಹಾಕುತ್ತೀರಿ. ಅವರೇನೂ ಮಹಾ ಸಾಧಕರಲ್ಲ. ಅಂತವರು ಸಂಬಂಧವೇ ಇಲ್ಲದ ಮನೆಯಲ್ಲಿ ಒಂದಾದರೆ ಏನಾಗುತ್ತೆ ಹೇಳಿ? ನನಗೆ ಬಿಗ್ ಬಾಸ್ ಮನೆ ವೇಶ್ಯಾಗೃಹದಂತೆ ಕಾಣುತ್ತಿದೆ ಎಂದು ಅವರು ಹೇಳಿದ್ದಾರೆ.

    ನಾಗಾರ್ಜುನ್ (Nagarjuna) ಅವರಿಗೆ ಪ್ರಶ್ನೆ ಕೇಳುತ್ತಾ, ‘ನಾಗಣ್ಣ ಬಿಗ್ ಬಾಸ್ ಮನೆಯಲ್ಲಿ ಮದುವೆಯಾದವರಿಗೆ ಲೈಸೆನ್ಸ್ ಕೊಟ್ಟಿದ್ದೀರಿ. ಏನೆಲ್ಲ ಮಾಡಬೇಕೋ ಅದಕ್ಕೆಲ್ಲ ವ್ಯವಸ್ಥೆ ಮಾಡಿದ್ದೀರಿ. ಶೋಭನಾ ರೂಮ್ ಕೂಡ ರೆಡಿಯಿದೆ. ಆದರೆ, ಮದುವೆ ಆಗದೇ ಇರೋರ ಕಥೆ ಏನು? ನೂರು ದಿನಗಳ ಕಾಲ ಅವರು ಏನು ಮಾಡಬೇಕು? ಎಂದು ಕೇಳಿದ್ದಾರೆ. ನಾರಾಯಣ್ ಅವರು ಮಾತನಾಡಿದ ವಿಡಿಯೋ ತೆಲುಗು ಕಿರುತೆರೆ ಜಗತ್ತಿನಲ್ಲಿ ಸಖತ್ ವೈರಲ್ ಆಗಿದೆ.

    ಇಂತಹ ಅಸಹ್ಯಗಳನ್ನು ಒಟ್ಟು ಮಾಡಿ ಸಮಾಜದ ಮನಸ್ಥಿತಿಯನ್ನು ಹಾಳು ಮಾಡುತ್ತಿದ್ದೀರಿ. ಕೂಡಲೇ ಇಂತಹ ಶೋ ನಿಲ್ಲಿಸಬೇಕು ಎಂದು ಅವರು ಆಗ್ರಹ ಪಡಿಸಿದ್ದಾರೆ. ನಾರಾಯಣ್ ಅವರ ಈ ಮಾತಿಗೆ ಭಾರೀ ಬೆಂಬಲ ಕೂಡ ವ್ಯಕ್ತವಾಗಿದೆ. ಬಿಗ್ ಬಾಸ್ ಮನೆಯನ್ನು ಸ್ವಚ್ಚ ಮಾಡುವಂತಹ ಕೆಲಸಕ್ಕೆ ನಾರಾಯಣ್ ಕೈ ಹಾಕಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ನವದೆಹಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ನಿರಾಕರಿಸಿದ್ದಾರೆ.

    ಆಡಳಿತ ಪಕ್ಷ ಹಾಗೂ ಪ್ರತಿ ಪಕ್ಷದ ನಾಯಕರೊಂದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಂದು ನಡೆಸಿದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಿದ್ದಾರೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    ಸಭೆಯಲ್ಲಿ ನಾನು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಏಕೆಂದರೆ ಸಕ್ರೀಯ ರಾಜಕಾರಣದ ಇನ್ನಿಂಗ್ಸ್ ಇನ್ನೂ ಇದೆ. ಹಾಗಾಗಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನೂಪುರ್ ಶರ್ಮಾಗೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ

    ಎನ್‌ಸಿಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಪ್ರಮುಖ ಪ್ರಕ್ಷಗಳು ಒಮ್ಮತದ ನಿರ್ಧಾರ ಕೈಗೊಂಡಿದ್ದವು. ಇತ್ತೀಚೆಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು. ಸೋನಿಯಾ ಗಾಂಧಿ ಅವರ ನಿರ್ದೇಶನದಂತೆ ಪವಾರ್ ಅವರನ್ನು ಭೇಟಿ ಮಾಡಿ, ಒಮ್ಮತದ ಅಭ್ಯರ್ಥಿಯಾಗಿ ಬೆಂಬಲಿಸುವ ಬಗ್ಗೆ ಚರ್ಚಿಸಿರುವುದಾಗಿಯೂ ಖರ್ಗೆ ಸ್ಪಷ್ಟಪಡಿಸಿದ್ದರು.

    ಅದಕ್ಕಾಗಿಯೇ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿಯೇತರ ಪಕ್ಷಗಳ ನಾಯಕರು ದೆಹಲಿಗೆ ಆಹ್ವಾನಿಸಿದ್ದರು. ಟಿಎಂಸಿ, ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಸಿಪಿಐಎಂಎಲ್, ಆರ್‌ಎಸ್‌ಪಿ, ಶಿವಸೇನಾ, ಎನ್‌ಸಿಪಿ, ಆರ್‌ಜೆಡಿ, ಎಸ್‌ಪಿ, ನ್ಯಾಶನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿಎಸ್‌, ಡಿಎಂಕೆ, ಆರ್‌ಎಲ್‌ಡಿ, ಐಯುಎಂಎಲ್, ಜೆಎಂಎಂ ಸೇರಿದಂತೆ 17 ಪಕ್ಷದ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

    Live Tv

  • ಅಕ್ರಮ ವೇಶ್ಯಾವಾಟಿಕೆಗೆ ಕುಮ್ಮಕ್ಕು – ಸಿಪಿಐ ಉದಯರವಿ ವಿರುದ್ಧ ಗೃಹ ಸಚಿವರಿಗೆ ದೂರು

    ಅಕ್ರಮ ವೇಶ್ಯಾವಾಟಿಕೆಗೆ ಕುಮ್ಮಕ್ಕು – ಸಿಪಿಐ ಉದಯರವಿ ವಿರುದ್ಧ ಗೃಹ ಸಚಿವರಿಗೆ ದೂರು

    ಕೊಪ್ಪಳ: ಜಿಲ್ಲೆಯ ಗಂಗಾವತಿ ಗ್ರಾಮೀಣ ವೃತ್ತದ ಸಿಪಿಐ ಉದಯರವಿ ಜಿಲ್ಲೆಯಲ್ಲಿ ಹತ್ತಾರು ಅನೈತಿಕ ಚಟುವಟಿಕೆಯಲ್ಲಿ ಭಾಗಿಯಾಗಿದ್ದು, ತಕ್ಷಣವೇ ಅವರ ವಿರುದ್ಧ ಕ್ರಮ ತೆಗೆದುಕೊಂಡು ಕೆಲಸದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಗೃಹ ಸಚಿವ ಆರಗ ಜ್ಞಾನೇಂದ್ರ ದೂರು ನೀಡಿದ್ದಾರೆ.

    ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮುನಿರಾಬಾದ್ ಐಆರ್‌ಬಿಗೆ ಆಗಮಿಸಿದ ವೇಳೆ ಸಿಪಿಐ ಉದಯರವಿ ಅಕ್ರಮ ಚಟುವಟಿಕೆಗಳಲ್ಲಿ ನೇರವಾಗಿ ಭಾಗಿಯಾಗುವ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡಿದ್ದಾರೆ. ಸ್ವತಃ ಶಾಸಕರ ಲೆಟರ್ ಹೆಡ್‌ ನಕಲಿ ಮಾಡಿಕೊಂಡು, ನಕಲಿ ಸಹಿ ಮಾಡಿ ಇದೇ ಜಿಲ್ಲೆಯಲ್ಲಿ ಮುಂದುವರೆದಿದ್ದಾರೆ ಎಂದು ಸ್ಥಳೀಯ ಶಾಸಕರು ದೂರು ನೀಡಿದ್ದಾರೆ ಎನ್ನಲಾಗಿದೆ. ಮೂರು ಪುಟಗಳ ದೂರಿನಲ್ಲಿ ಗಂಭೀರ ಆರೋಪ ಮಾಡಿರುವ ಶಾಸಕರ ಬೆಂಬಲಿಗರು ಹಾಗೂ ಬಿಜೆಪಿ ಮುಖಂಡರು, ಸಿಪಿಐ ಉದಯರವಿ ಸುಮಾರು ವರ್ಷಗಳಿಂದ ಗಂಗಾವತಿ ತಾಲೂಕಿನಲ್ಲಿ ಪೊಲೀಸ್ ಇಲಾಖೆಯಲ್ಲಿಯೇ ಕಾರ್ಯನಿರ್ವಹಿಸುತ್ತಾ ಬಂದಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಕಾನೂನು ಸುವ್ಯವಸ್ಥೆಯಡಿಯಲ್ಲಿ ಸುಮಾರು ಅಕ್ರಮ ಚಟುವಟಿಕೆಗಳನ್ನು ಮಾಡಿಸುತ್ತಾ ಮತ್ತು ಇದರಲ್ಲಿ ಪಾಲುದಾರರಾಗಿ ಇರುವುದು ಸ್ಪಷ್ಟವಾಗಿದೆ ಎಂಬ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಇಸ್ಪೀಟ್ ಆಡೋರಿಗೆ ಪೊಲೀಸರು ತೊಂದರೆ ಕೊಡದಂತೆ ಆದೇಶಿಸಿ: ಹೆಚ್‌ಡಿಕೆ ಮನವಿ

    ಗಂಗಾವತಿ ತಾಲೂಕಿನ ವಾನಭದ್ರಾ ದೇವಸ್ಥಾನ, ಆರಾಳ, ಹಣವಾಳ, ಚಿಕ್ಕಜಂತಕಲ್ ಮತ್ತು ಕಾರಟಗಿ ತಾಲೂಕಿನ ಬರಗೂರು ಗ್ರಾಮದ ಹಳ್ಳದ ಬಸಪ್ಪ ದೇವಸ್ಥಾನದಲ್ಲಿ, ಶ್ರೀರಾಮನಗರ, ಮುಷ್ಟೂರು ಹಾಗೂ ಇನ್ನಿತರ ಗ್ರಾಮಗಳಲ್ಲಿ ಸಾರ್ವತ್ರಿಕವಾಗಿ ಉದಯರವಿ ಅವರೇ ಇಸ್ಪೀಟ್ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಪ್ರಶ್ನೆ ಮಾಡಿದ್ರೆ ನಿಮ್ಮ ಮೇಲೆ ಕೇಸ್ ದಾಖಲಿಸಿ ನಿಮ್ಮೆಲ್ಲರನ್ನು ಗಡಿಪಾರು ಮಾಡುತ್ತೇನೆ ಎಂದು ಹೆದರಿಸುತ್ತಾರೆ.

    ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೌಡಿ ಶೀಟರ್‌ಗಳ ಜೊತೆಯಲ್ಲಿ ಉದಯರವಿ ನಿಕಟಪೂರ್ವ ಸಂಬಂಧವನ್ನು ಹೊಂದಿ ಕಾನೂನು ಬಾಹಿರ ಚಟುವಟಿಕೆ ಮಾಡಲು ಪ್ರೋತ್ಸಾಹಿಸಿದ್ದಾರೆ. ಇಸ್ಪೀಟ್ ಮತ್ತು ಶ್ರೀದೇವಿ ಹೆಸರಿನ ಮಟ್ಕಾ ದಂದೆಯಲ್ಲಿ ಪಾಲುದಾರನಾಗಿ ಕಿಂಗ್‍ಪಿನ್‍ನಂತೆ ಇದ್ದು, ಇದರಿಂದ ಬಂದ ಹಣದಲ್ಲಿ ಇತ್ತೀಚಿಗೆ ಹೊಸಪೇಟೆಯಲ್ಲಿ 3 ಕೋಟಿ 20 ಲಕ್ಷ ರೂಪಾಯಿಗೆ ಕಮರ್ಷಿಯಲ್ ಫ್ಲ್ಯಾಟನ್ನು ಖರೀದಿ ಮಾಡಿ ಅದಕ್ಕೆ ಗಂಗಾವತಿಯ ಪ್ರಮುಖ ಉದ್ಯಮಿಯೊಬ್ಬರನ್ನು ಸಾಕ್ಷಿ ಸಹಿ ಮಾಡಿಸಿದ್ದು, ಚಿಕ್ಕಜಂತಕಲ್ ಗ್ರಾಮದಲ್ಲಿ 5 ಎಕರೆ ಜಮೀನು ಖರೀದಿಸಿ, ಜಮೀನುದಾರರಿಗೆ ಚೆಕ್‍ನ್ನು ನೀಡಿ ಭೂಮಿಯನ್ನು ನುಂಗಿ ಸದರಿ ಮಾಲೀಕರಿಗೆ ಹಣವನ್ನು ನೀಡದೇ ಬೆದರಿಕೆ ಹಾಕುತ್ತಿದ್ದಾರೆ. ಅಲ್ಲದೆ ಗಂಗಾವತಿ ತಾಲೂಕಿನ ಶ್ರೀರಾಮನಗರ ಮತ್ತು ವಿದ್ಯಾನಗರಗಳಲ್ಲಿ ಹಾಗೂ ಬಸಾಪಟ್ಟಣ ಗ್ರಾಮಗಳಲ್ಲಿ ಅಕ್ರಮ ವೇಶ್ಯಾವಾಟಿಕೆಯನ್ನು ನಡೆಸಲು ಕುಮ್ಮಕ್ಕು ನೀಡಿ ಪಾಲು ದಾರರಾಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ – ಕಾರಣ ನಿಗೂಢ

  • ಮಾಜಿ MLA ಪುತ್ರನಿಗೆ ಸಪೋರ್ಟ್ ಆರೋಪ – CPI ಸಸ್ಪೆಂಡ್

    ಮಾಜಿ MLA ಪುತ್ರನಿಗೆ ಸಪೋರ್ಟ್ ಆರೋಪ – CPI ಸಸ್ಪೆಂಡ್

    ಮಂಡ್ಯ: ಮಾಜಿ ಎಂಎಲ್‍ಎ ಪುತ್ರನಿಗೆ ಬೆಂಬಲ ನೀಡಿದ ಹಿನ್ನೆಲೆ ಸಿಪಿಐ ಅಧಿಕಾರಿಯನ್ನು ಸಸ್ಪೆಂಡ್ ಮಾಡಿರುವ ಸುದ್ದಿ ಮಂಡ್ಯದ ಮಳವಳ್ಳಿಯಲ್ಲಿ ಬೆಳಕಿಗೆ ಬಂದಿದೆ.

    ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಪುತ್ರನನ್ನು ರಕ್ಷಣೆ ಮಾಡಲು ಪ್ರಯತ್ನ ಮಾಡಿದ ಆರೋಪದ ಮೇಲೆ ಮಂಡ್ಯ ಜಿಲ್ಲೆಯ ಮಳವಳ್ಳಿ ಉಪವಿಭಾಗದ ಸಿಪಿಐ ಡಿ.ಪಿ.ಧನರಾಜು ಅವರನ್ನು ಅಮಾನತು ಮಾಡಲಾಗಿದೆ ಎಂದು ಮಂಡ್ಯ ಎಸ್‍ಪಿ ತಿಳಿಸಿದ್ದಾರೆ. ಇದನ್ನೂ ಓದಿ: 31 ತಿಂಗಳ ಕಾಲ ಮುಚ್ಚಿದ್ದ ಕಾಶ್ಮೀರ ಶಾಲೆಗಳು ಮತ್ತೆ ಆರಂಭ!

    ಆದ್ರೆ ಈ ಕುರಿತು ಅಧಿಕೃತ ಆದೇಶ ಪ್ರತಿ ನೀಡಲು ಎಸ್‍ಪಿ ನಿರಾಕರಿಸಿದ್ದಾರೆ. ರೈಸ್ ಪುಲ್ಲಿಂಗ್ ದಂಧೆಕೋರ ಸಲೀಂ ಹತ್ಯೆ ಆರೋಪದ ಮೇಲೆ ಕೆ.ಬಿ ಚಂದ್ರಶೇಖರ್ ಪುತ್ರ ಶ್ರೀಕಾಂತ್ ಜೈಲು ಸೇರಿದ್ದಾರೆ. ಈ ವಿಷಯದಲ್ಲಿ ಧನರಾಜು ಅವರಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಪ್ರಸ್ತುತ ಅವರನ್ನು ಕೆಲಸದಿಂದ ಅಮಾನತು ಮಾಡಲು ಆದೇಶ ಹೊರಡಿಸಲಾಗಿದೆ.

  • ಆರೋಪಿ ಪತ್ತೆಗಾಗಿ ದೂರುದಾರನಿಂದ ಬಾಡಿಗೆ ಕಾರು ಕೇಳಿದ ಸಿಪಿಐ ಸಸ್ಪೆಂಡ್‌

    ಆರೋಪಿ ಪತ್ತೆಗಾಗಿ ದೂರುದಾರನಿಂದ ಬಾಡಿಗೆ ಕಾರು ಕೇಳಿದ ಸಿಪಿಐ ಸಸ್ಪೆಂಡ್‌

    ತುಮಕೂರು: ಹಲ್ಲೆ ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಲು ದೂರುದಾರನಿಂದಲೇ ಬಾಡಿಗೆ ಕಾರು ಕೇಳಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತುರುವೇಕೆರೆ ಸಿಪಿಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ.

    POLICE

    ಸಿಪಿಐ ನವೀನ್‌ ಅಮಾನತುಗೊಂಡ ಅಧಿಕಾರಿ. ಕೇಂದ್ರವಲಯ ಐಜಿಪಿ ಚಂದ್ರಶೇಖರ್ ಅವರು ಅಮಾನತುಗೊಳಿಸಿ ಆದೇಶಿದ್ದಾರೆ. ಇದನ್ನೂ ಓದಿ: ರವಿ ಡಿ.ಚನ್ನಣ್ಣನವರ್‌ ಸೇರಿ 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    ದಂಡಿನಶಿವರ ಠಾಣಾ ವ್ಯಾಪ್ತಿಯಲ್ಲಿ ನಾಗಮ್ಮ ಎನ್ನುವ ಮಹಿಳೆ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆಗೆ ಸಂಬಂಧಿಸಿದಂತೆ ಆಕೆ ಪತಿ ನಾಗೇಂದ್ರಪ್ಪ, ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ‌ಆದರೆ ಆರೋಪಿಗಳನ್ನು ಬಂಧಿಸದೇ ಪೊಲೀಸರು ನಿರ್ಲಕ್ಷ್ಯವಹಿಸಿದ್ದರು. ಆರೋಪಿಗಳನ್ನು ಬಂಧಿಸಬೇಕೆಂದರೆ ಬಾಡಿಗೆ ಕಾರು ಮಾಡಿಕೊಂಡು ಬರುವಂತೆ ಸಿಪಿಐ ನವೀನ್ ದೂರುದಾರರಿಗೆ ತಾಕೀತು ಮಾಡಿದ್ದರು.

    ಆಗ ಎಸ್ಪಿ ರಾಹುಲ್ ಕುಮಾರ್ ಸ್ವತಃ ತಮ್ಮ ಕಾರನ್ನೇ ತುರುವೇಕೆರೆ ಠಾಣೆಗೆ ಕಳುಹಿಸಿ ಸಿಪಿಐ ನವೀನ್‌ಗೆ ಶಾಕ್ ನೀಡಿದ್ದಾರೆ. ಕರ್ತವ್ಯ ಲೋಪದ ಮೇಲೆ ನವೀನ್‌ರನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಭಟ್ಕಳದಲ್ಲಿ ಪಾಕಿಸ್ತಾನಿ ಮಹಿಳೆಗೆ ಆಧಾರ್ ಕಾರ್ಡ್ – ಚುನಾವಣೆ ಆಯೋಗದಿಂದ 100ಕ್ಕೂ ಹೆಚ್ಚು ಅರ್ಜಿಗಳು ವಜಾ

  • ಮಹಿಳೆಯರಿಗೆ ವೀಡಿಯೋ ಕಾಲ್ ಮಾಡಿ ಅಸಭ್ಯ ವರ್ತನೆ – CPI ಅಮಾನತು

    ಮಹಿಳೆಯರಿಗೆ ವೀಡಿಯೋ ಕಾಲ್ ಮಾಡಿ ಅಸಭ್ಯ ವರ್ತನೆ – CPI ಅಮಾನತು

    ಹಾವೇರಿ: ದೂರು ನೀಡಲು ಬಂದ ಮಹಿಳೆಯರ ಜೊತೆ ಅಸಭ್ಯ ವರ್ತನೆ ಮಾಡುತ್ತಿದ್ದ ಹಾವೇರಿಯ ಸಿಪಿಐ ಅನ್ನು ಅಮಾನತು ಮಾಡಲಾಗಿದೆ.

    ಮಹಿಳಾ ಪೊಲೀಸ್ ಠಾಣೆ ಸಿಪಿಐ ಚಿದಾನಂದ ದೂರು ನೀಡಲು ಬರುವ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುವುದು ಅಲ್ಲದೇ ಅವರ ಜೊತೆಗೆ ವೀಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದನು. ಪ್ರಸ್ತುತ ಆ ವೀಡಿಯೋಗಳು ಸಹ ವೈರಲ್ ಆಗಿದೆ. ಇದನ್ನೂ ಓದಿ:  15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ – 13 ಮಂದಿಗೆ 20 ವರ್ಷ ಜೈಲು

    ಠಾಣೆಗೆ ಬಂದ ಮಹಿಳೆಯರ ನಂಬರ್ ತೆಗೆದುಕೊಂಡು ಅವರಿಗೆ ಚಿದಾನಂದ ಬಾತ್ ರೂಂನಲ್ಲಿದ್ದಾಗ ವೀಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸುತ್ತಿದ್ದನು. ಮಹಿಳೆಯರ ಜೊತೆಗೆ ಫೋನ್ ನಲ್ಲಿ ಕೆಟ್ಟದಾಗಿ ಮಾತನಾಡಿದ್ದು, ಓರ್ವ ಮಹಿಳೆಗೆ ಮಂಚಕ್ಕೆ ಕರೆದಿದ್ದಾನೆ ಎಂದು ಮಹಿಳೆಯರು ಆರೋಪಿಸಿದ್ದಾರೆ.

    ಈ ಹಿನ್ನೆಲೆ ಈತನ ವಿರುದ್ಧ ಎಸ್‍ಪಿ, ಪೂರ್ವ ವಲಯ ಐಜಿಪಿ ರವಿ.ಎಸ್ ಸೇರಿದಂತೆ ಹಲವರಿಗೆ ಮಹಿಳೆಯರು ದೂರು ನೀಡಿದ್ದು, ಅವರ ದೂರನ್ನು ಆಧರಿಸಿ ಪೂರ್ವ ವಲಯ ಐಜಿಪಿ ಹಾಗೂ ಅಧಿಕಾರಿಗಳು ಚಿದಾನಂದ ಬಗ್ಗೆ ತನಿಖೆ ಮಾಡಿದ್ದಾರೆ. ನಂತರ ಆತನನ್ನು ಅಮಾನತು ಮಾಡಲು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಬ್ಯಾಟರಿ ಚಾರ್ಜಿಂಗ್ ವೇಳೆ ಸ್ಫೋಟ- ಓರ್ವ ಸಾವು, ನಾಲ್ವರು ಗಂಭೀರ

  • ಸಾಗರದ ಸಿಪಿಐ ವಿರುದ್ಧ ರೇಪ್ ಕೇಸ್ ದಾಖಲು – ಜ್ಯೂಸ್‍ನಲ್ಲಿ ಮತ್ತಿನ ಔಷಧಿ ನೀಡಿ ಅತ್ಯಾಚಾರ

    ಸಾಗರದ ಸಿಪಿಐ ವಿರುದ್ಧ ರೇಪ್ ಕೇಸ್ ದಾಖಲು – ಜ್ಯೂಸ್‍ನಲ್ಲಿ ಮತ್ತಿನ ಔಷಧಿ ನೀಡಿ ಅತ್ಯಾಚಾರ

    ಶಿವಮೊಗ್ಗ: ಸಾಗರ ಪೊಲೀಸ್ ಠಾಣೆಯ ಸಿಪಿಐ ಅಶೋಕ್ ಕುಮಾರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಕಳೆದ ನಾಲ್ಕು ವರ್ಷದಿಂದ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಹೇಳಿದ್ದಾರೆ.

    ಪ್ರಕರಣವೊಂದಕ್ಕೆ ದೂರು ಸಲ್ಲಿಸಲು ಮಹಿಳೆ ಠಾಣೆಗೆ ಬಂದಿದ್ದರು. ಈ ವೇಳೆ ಮಹಿಳೆಯ ಫೋನ್ ನಂಬರ್ ಪಡೆದಿದ್ದ, ಅಶೋಕ್ ಪರಿಚಯ ಮಾಡಿಕೊಂಡು ಸಲುಗೆ ಬಳಸಿಕೊಂಡಿದ್ದ ಎಂದು ಮಹಿಳೆ ಹೇಳಿದ್ದಾರೆ. ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಲಾಗಿದೆ. ಅಶ್ಲೀಲ ಫೋಟೋ ಮತ್ತು ವೀಡಿಯೋಗಳನ್ನ ಮಾಡಿಕೊಂಡು ಬ್ಲಾಕ್‍ಮೇಲ್ ಮಾಡಿದ್ದಾನೆ. ಬೆದರಿಸಿ ತಾನು ಹೇಳಿರುವ ಸ್ಥಳಕ್ಕೆ ಕರಸಿಕೊಂಡು ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

    ಪೊಲೀಸರಿಗೆ ದೂರು ನೀಡಿದ್ದಕ್ಕೆ ಕೊಲೆ ಬೆದರಿಕೆ ಹಾಗೂ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ರೇಪ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಸದ್ಯ ಅಶೋಕ್ ವಿರುದ್ಧ ಐಪಿಸಿ ಕಲಂ 354(ಎ), 376 (ಸಿ), 417, 504, 506ರ ಅಡಿ ಪ್ರಕರಣ ದಾಖಲಾಗಿದೆ.

  • ನೆಲಮಂಗಲದಲ್ಲಿ ಬಿಹಾರಿಗಳ ಗಲಾಟೆ ತಡೆಯಲು ರಾಷ್ಟ್ರಗೀತೆ ಹಾಡಿದ ಸಿಪಿಐ

    ನೆಲಮಂಗಲದಲ್ಲಿ ಬಿಹಾರಿಗಳ ಗಲಾಟೆ ತಡೆಯಲು ರಾಷ್ಟ್ರಗೀತೆ ಹಾಡಿದ ಸಿಪಿಐ

    ಬೆಂಗಳೂರು: ಬಿಹಾರಿ ಕಾರ್ಮಿಕರ ಗಲಾಟೆಯನ್ನು ತಡೆಯವುದು ಹರಸಾಹಸವನ್ನೇ ಪಟ್ಟಿದ್ದರು. ನಂತರ ಗಲಾಟೆ ಹತೋಟಿಗೆ ಬಂದಿತ್ತು. ಗಲಾಟೆ ನಿಯಂತ್ರಣದ ವಿಡಿಯೋ ಇದೀಗ ವೈರಲ್ ಆಗಿದ್ದು, ಗಲಾಟೆ ಸಮಯದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

    ಗಲಾಟೆ ಕಡಿಮೆ ಮಾಡಲು ಇನ್ಸ್ ಪೆಕ್ಟರ್ ಪ್ಲಾನ್ ಮಾಡಿ, ಮಾದನಾಯಕನಹಳ್ಳಿ ಠಾಣೆ ಸಿಪಿಐ ಸತ್ಯನಾರಾಯಣ ಅವರು ಗಲಾಟೆ ಸಮಯದಲ್ಲಿ ಜನಗಣ ಮನ ಹಾಡಿದ್ದಾರೆ. ಈ ವೇಳೆ ಇನ್ಸ್ ಪೆಕ್ಟರ್ ರೊಂದಿಗೆ ಬಿಹಾರಿ ವಲಸೆ ಕಾರ್ಮಿಕರು ಸಹ ರಾಷ್ಟ್ರಗೀತೆ ಹಾಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ವಲಸೆ ಕಾರ್ಮಿಕರ ಗಲಾಟೆ ನಿಯಂತ್ರಿಸಿದ ಪರಿಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಮೂರು ದಿನಗಳ ಹಿಂದೆ ನೆಲಮಂಗಲ ಸಮೀಪದ ಮಾದಾವಾರದ ಬಿಐಇಸಿ ಬಳಿ ಬಿಹಾರಿ ವಲಸೆ ಕಾರ್ಮಿಕರ ಗಲಾಟೆ ನಡೆದಿತ್ತು. ನಮ್ಮ ರಾಜ್ಯಕ್ಕೆ ಕಳುಹಿಸಿ ಕೊಡಿ ಎಂದು ಐದು ಸಾವಿರಕ್ಕೂ ಹೆಚ್ಚು ಕಾರ್ಮಿಕರು ಪ್ರತಿಭಟನೆ ನಡೆಸಿದ್ದರು. ಈ ಸಮಯದಲ್ಲಿ ಪೀಣ್ಯ ಇನ್ಸ್‍ಪೆಕ್ಟರ್ ಮುದ್ದುರಾಜ್ ಮೇಲೆ ಬಿಹಾರಿಗಳು ಹಲ್ಲೆ ಮಾಡಿದ್ದರು. ನಂತರ ಗಲಾಟೆ ತಡೆಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.