Tag: CPI(M) leader

  • ಇದು ಕುಸ್ತಿಪಟುಗಳ ಹೋರಾಟ.. ರಾಜಕೀಯ ಮಾಡ್ಬೇಡಿ: ಪ್ರತಿಭಟನೆಗೆ ಬಂದ ಸಿಪಿಐ ನಾಯಕಿಗೆ ತಡೆ

    ಇದು ಕುಸ್ತಿಪಟುಗಳ ಹೋರಾಟ.. ರಾಜಕೀಯ ಮಾಡ್ಬೇಡಿ: ಪ್ರತಿಭಟನೆಗೆ ಬಂದ ಸಿಪಿಐ ನಾಯಕಿಗೆ ತಡೆ

    ನವದೆಹಲಿ: “ಇದು ಕ್ರೀಡಾಪಟುಗಳ ಹೋರಾಟ. ಇದರಲ್ಲಿ ರಾಜಕೀಯ ಬೇಡ” ಎಂದು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್‌ (Brinda Karat) ಅವರಿಗೆ ಪ್ರತಿಭಟನಾನಿರತ ಕುಸ್ತಿಪಟುಗಳು ಕೈಮುಗಿದು ವೇದಿಕೆಯಿಂದ ಕೆಳಗಿಳಿಸಿದ ಪ್ರಸಂಗ ಗುರುವಾರ ನವದೆಹಲಿಯಲ್ಲಿ ನಡೆಯಿತು.

    ಡಬ್ಲ್ಯೂಎಫ್‌ಐ ಅಧ್ಯಕ್ಷ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Charan Singh) ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ನವದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ 200 ಕುಸ್ತಿಪಟುಗಳು ಪಾಲ್ಕೊಂಡಿದ್ದು, ಗುರುವಾರ ಎರಡನೇ ದಿನ ಪೂರೈಸಿದೆ. ಇದನ್ನೂ ಓದಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆ ಆರೋಪ – WFI ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್‌ ಭೂಷಣ್‌ ರಾಜೀನಾಮೆ ಸಾಧ್ಯತೆ

    ಸಿಂಗ್‌ ರಾಜೀನಾಮೆಗೆ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ. ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಲು ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್‌ ಸ್ಥಳಕ್ಕೆ ಬಂದಿದ್ದರು. ಆದರೆ ಇದಕ್ಕೆ ಕುಸ್ತಿಪಟುಗಳು ಒಪ್ಪಲಿಲ್ಲ. ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಹೇಳಿದ್ದಾರೆ.

    “ಮೇಡಂ, ದಯವಿಟ್ಟು ಇದನ್ನು ರಾಜಕೀಯ ಮಾಡಬೇಡಿ ಎಂದು ನಾವು ವಿನಂತಿಸುತ್ತೇವೆ. ಇದು ಕ್ರೀಡಾಪಟುಗಳ ಪ್ರತಿಭಟನೆ” ಎಂದು ಟೋಕಿಯೊ ಒಲಿಂಪಿಕ್ಸ್ ಕಂಚಿನ ಪದಕ ವಿಜೇತ ಬಜರಂಗ್ ಪುನಿಯಾ ಅವರು ಪ್ರತಿಭಟನೆಯ ಎರಡನೇ ದಿನದಂದು ಸ್ಥಳಕ್ಕೆ ಆಗಮಿಸಿದಾಗ ಕಾರಟ್‌ಗೆ ಮನವಿ ಮಾಡಿದರು. ಇದನ್ನೂ ಓದಿ: ರಾಷ್ಟ್ರೀಯ ತರಬೇತುದಾರರಿಂದ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ – ವಿನೇಶ್‌ ಫೋಗಟ್‌ ಗಂಭೀರ ಆರೋಪ

    ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸಂಸದೆ ಕಾರಟ್‌ ಮಾತನಾಡಿ, “ನಾವು ಯಾವುದೇ ರೀತಿಯ ಲೈಂಗಿಕ ಕಿರುಕುಳದ ವಿರುದ್ಧ ಹೋರಾಟದಲ್ಲಿದ್ದೇವೆ. ಯಾವುದೇ ವರ್ಗದ ಮಹಿಳೆಯರನ್ನು ಅವಮಾನಿಸುವ ಯಾವುದೇ ವಿಷಯದ ವಿರುದ್ಧ ನಾವು ಹೋರಾಡುತ್ತೇವೆ. ಆದ್ದರಿಂದ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ನಾವು ಒತ್ತಾಯಿಸುತ್ತೇವೆ” ಎಂದು ತಿಳಿಸಿದ್ದಾರೆ.

    ಅವರು (ಕುಸ್ತಿಪಟುಗಳು) ಇಲ್ಲಿಗೆ ಬಂದು ಧರಣಿ ಕುಳಿತಿರುವುದು ಅತ್ಯಂತ ದುರದೃಷ್ಟಕರ. ಸರ್ಕಾರ ದೂರಿನ ಆಧಾರದ ಮೇಲೆ ಕ್ರಮ ಕೈಗೊಳ್ಳಬೇಕು. ವಿಚಾರಣೆಯು ಅಂತಿಮ ತೀರ್ಮಾನಕ್ಕೆ ಬರುವವರೆಗೆ ಆರೋಪಿಯನ್ನು ತೆಗೆದುಹಾಕಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಗ್ಲಾಸ್‍ನಲ್ಲಿ ಕೈ ಲಾಕ್ ಮಾಡಿ ಕಾರು ಓಡಿಸಿದ – ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಗೆ ಕಿರುಕುಳ

    ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಜಯಿಸಿರುವ ಕುಸ್ತಿಪಟು ವಿನೇಶ್‌ ಫೋಗಟ್‌ (Vinesh Phogat) ನೇತೃತ್ವದಲ್ಲಿ ಬುಧವಾರದಿಂದ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. “ವೈಯಕ್ತಿಕವಾಗಿ ಇಂತಹ ದೌರ್ಜನ್ಯ ಎದುರಿಸಿಲ್ಲ. ಆದರೆ ಅನೇಕ ಕುಸ್ತಿಪಟುಗಳು ತಮಗಾಗಿ ಲೈಂಗಿಕ ಶೋಷಣೆ ಕುರಿತು ನನ್ನ ಬಳಿ ನೊಂದು ಮಾತನಾಡಿದ್ದಾರೆ. ಹೀಗಾಗಿ ನಾವು ಹೋರಾಟ ನಡೆಸುತ್ತಿದ್ದೇವೆ” ಫೋಗಟ್‌ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪದ್ಮಭೂಷಣ ಪ್ರಶಸ್ತಿ ಬೇಡ: ಬುದ್ಧದೇವ್ ಭಟ್ಟಾಚಾರ್ಜಿ

    ಪದ್ಮಭೂಷಣ ಪ್ರಶಸ್ತಿ ಬೇಡ: ಬುದ್ಧದೇವ್ ಭಟ್ಟಾಚಾರ್ಜಿ

    ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಜಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಗೌರವವನ್ನು ನೀಡುವುದಾಗಿ ಅಧಿಕೃತ ಘೋಷಣೆಯಾದ ಕೆಲವೇ ನಿಮಿಷಗಳಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

    ಈ ಪ್ರಶಸ್ತಿಯ ಬಗ್ಗೆ ನನಗೆ ಏನೂ ತಿಳಿದಿಲ್ಲ. ಯಾರೂ ನನಗೆ ಈ ಬಗ್ಗೆ ಏನನ್ನೂ ಹೇಳಿಲ್ಲ. ಅವರು ನನಗೆ ಪದ್ಮಭೂಷಣ ನೀಡಲು ನಿರ್ಧರಿಸಿದ್ದರೆ, ನಾನು ಅದನ್ನು ಸ್ವೀಕರಿಸಲು ನಿರಾಕರಿಸುತ್ತೇನೆ ಅಂತ ಬುದ್ಧದೇವ್ ಭಟ್ಟಾಚಾರ್ಜಿ ಹೇಳಿದ್ದಾರೆ. ಸಿಪಿಐ(ಎಮ್) ಮತ್ತು ಅವರ ಹೇಳಿಕೆಯಲ್ಲಿ, ರಾಜ್ಯದಿಂದ ಅಂತಹ ಪ್ರಶಸ್ತಿಗಳನ್ನು ನಿರಾಕರಿಸುವಲ್ಲಿ ನಮ್ಮ ಪಕ್ಷದ ನೀತಿಯು ಸ್ಥಿರವಾಗಿದೆ. ನಮ್ಮ ಕೆಲಸ ಪ್ರಶಸ್ತಿಗಾಗಿ ಅಲ್ಲ ಜನರಿಗಾಗಿ ಎಂದರು. ಇದನ್ನೂ ಓದಿ: ದೈಹಿಕ ಅನ್ಯೋನ್ಯತೆ ಸಂಬಂಧದ ಪ್ರಮುಖ ಭಾಗವಲ್ಲ: ದೀಪಿಕಾ ಪಡುಕೋಣೆ

    ಮತ್ತೊಂದೆಡೆ ಹಿರಿಯ ಬಿಜೆಪಿ ನಾಯಕ ಮತ್ತು ಸಂಸದ ರವಿಶಂಕರ್ ಪ್ರಸಾದ್ ಅವರು ಟ್ವಿಟ್ಟರ್‌ ನಲ್ಲಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್‍ರವರು, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಅವರಿಗೆ ಪದ್ಮಭೂಷಣ ಪ್ರಶಸ್ತಿಗಳನ್ನು ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಇದನ್ನೂ ಓದಿ: ಗೋವಾದಲ್ಲಿ ಮೌನಿರಾಯ್ ಬ್ಯಾಚುಲರ್ ಪಾರ್ಟಿ

    ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್, ಸಿಪಿಎಂ ನಾಯಕ ಭಟ್ಟಾಚಾರ್ಯ ಜಿ ಅವರಿಗೆ ಪದ್ಮಭೂಷಣ ನೀಡುವುದು ಸಾರ್ವಜನಿಕರ ಜೀವನದಲ್ಲಿ ಅವರ ಕೊಡುಗೆಗಳನ್ನು ಗುರುತಿಸಿದೆ ಎಂದರು.

    ಇದು ಪ್ರಧಾನಿ ನರೇಂದ್ರ ಮೋದಿಯವರ ಉದಾರತೆ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳಲ್ಲಿ ಅವರ ಬದ್ಧತೆಯನ್ನು ತೋರಿಸುತ್ತದೆ ಎಂದು ಪ್ರಸಾದ್ ಟ್ವೀಟ್ ಮಾಡಿದ್ದಾರೆ. ಸಿಪಿಐ(ಎಮ್) ನಾಯಕ, ಬುದ್ಧದೇವ್ ಭಟ್ಟಾಚಾರ್ಜಿ ಅವರು 2000 ರಿಂದ 2011 ರವರೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿದ್ದರು.

    ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ:
    ಪದ್ಮ ವಿಭೂಷಣ (ಅಸಾಧಾರಣ ಮತ್ತು ವಿಶಿಷ್ಟ ಸೇವೆಗಾಗಿ), ಪದ್ಮಭೂಷಣ (ಉನ್ನತ ಶ್ರೇಣಿಯ ವಿಶಿಷ್ಟ ಸೇವೆ) ಮತ್ತು ಪದ್ಮಶ್ರೀ (ವಿಶಿಷ್ಟ ಸೇವೆ). ಸಾರ್ವಜನಿಕ ಸೇವೆಯ ಅಂಶ ಒಳಗೊಂಡಿರುವ ಎಲ್ಲಾ ಚಟುವಟಿಕೆಗಳು ಅಥವಾ ವಿಭಾಗಗಳಲ್ಲಿನ ಸಾಧನೆಗಳನ್ನು ಗುರುತಿಸಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

  • ಲೋಕಸಭಾ ಚುನಾವಣೆಗೆ ಹೆದರಿದ ಬಿಜೆಪಿಯಿಂದ ಯುದ್ಧದ ಗಿಮಿಕ್: ಸಿಪಿಐಎಂ

    ಲೋಕಸಭಾ ಚುನಾವಣೆಗೆ ಹೆದರಿದ ಬಿಜೆಪಿಯಿಂದ ಯುದ್ಧದ ಗಿಮಿಕ್: ಸಿಪಿಐಎಂ

    ತಿರುವನಂತಪುರಂ: ಪುಲ್ವಾಮಾ ದಾಳಿಗೆ ಭಾರತೀಯ ವಾಯು ಪಡೆ ಹಾಗೂ ಕೇಂದ್ರ ಸರ್ಕಾರ ಪ್ರತ್ಯುತ್ತರ ನೀಡಿದ್ದಕ್ಕೆ ಸೋಮವಾರ ದೇಶದಲ್ಲಿ ಸಂಭ್ರಮ ಮನೆ ಮಾಡಿತ್ತು. ಆದರೆ ಕೇರಳದ ಸಿಪಿಐ(ಎಂ) ಮುಖಂಡರೊಬ್ಬರು ಲೋಕಸಭಾ ಚುನಾವಣೆಗೆ ಹೆದರಿರುವ ಬಿಜೆಪಿಯು ಯುದ್ಧದ ವಾತಾವರಣ ಸೃಷ್ಟಿಸುತ್ತಿದೆ ಎಂದು ಹೇಳಿಕೆ ನೀಡುವ ಮೂಲಕ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

    ಸಿಪಿಐಎಂ ಪಕ್ಷದಿಂದ ಇಡುಕ್ಕಿ ಜಿಲ್ಲೆಯ ನೆಡುಂಕಂಡಂನಲ್ಲಿ ಸಮಾವೇಶ ಆಯೋಜಿಸಲಾಗಿತ್ತು. ಈ ವೇಳೆ ಸಿಪಿಐಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ ಅವರು ಮಾತನಾಡಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸೋಲುತ್ತೇವೆ ಎನ್ನುವ ಭಯ ಬಿಜೆಪಿಯಲ್ಲಿದೆ. ಹೀಗಾಗಿ ಯುದ್ಧದ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

    ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಕಾಶ್ಮೀರ ಜನತೆಯನ್ನು ದೇಶ ವಿರೋಧಿಗಳನ್ನಾಗಿ ಮಾಡುತ್ತಿದೆ. ಬಿಜೆಪಿಯವರು ದೇಶದ ಮುಸ್ಲಿಮರ ವಿರುದ್ಧ ದ್ವೇಷ ಸೃಷ್ಟಿಸುತ್ತಿದ್ದಾರೆ. ದೇಶದಲ್ಲಿ ಕೋಮುಗಲಭೆ ಹೆಚ್ಚಿಸುವುದು ಆರ್‍ಎಸ್‍ಎಸ್ ಉದ್ದೇಶವಾಗಿದೆ ಎಂದು ಆರೋಪಿಸಿದ್ದಾರೆ.

    ಕೊಡಿಯೇರಿ ಬಾಲಕೃಷ್ಣನ್ ಅವರ ಹೇಳಿಕೆಯನ್ನು ದೇಶದ ಅನೇಕ ನಾಯಕರು ಖಂಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೂಡ ಬಾಲಕೃಷ್ಣನ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv