Tag: crew

  • ಕೋವಿಡ್ ವಾರ್ಡ್‍ನಲ್ಲಿ ಆಮ್ಲಜನಕ ಸೋರಿಕೆ ತಡೆಗೆ ನೌಕಾದಳದ ತಾಂತ್ರಿಕ ತಂಡ ನಿಯೋಜನೆ

    ಕೋವಿಡ್ ವಾರ್ಡ್‍ನಲ್ಲಿ ಆಮ್ಲಜನಕ ಸೋರಿಕೆ ತಡೆಗೆ ನೌಕಾದಳದ ತಾಂತ್ರಿಕ ತಂಡ ನಿಯೋಜನೆ

    – ಮೂರು ಕಡೆ ಸೋರಿಕೆ ತಡೆದ ನೌಕಾದಳ ತಂತ್ರಜ್ಞರು

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೋವಿಡ್ ವಾರ್ಡ್‍ನಲ್ಲಿ ಆಮ್ಲಜನಕ ಸೋರಿಕೆ ನಂತರ ಜಿಲ್ಲಾಡಳಿತ ಎಚ್ವೆತ್ತುಕೊಂಡಿದ್ದು, ಜಿಲ್ಲೆಯಲ್ಲಿರುವ ಕೋವಿಡ್ ವಾರ್ಡ್ ನಲ್ಲಿ ಆಕ್ಸಿಜನ್ ಸೋರಿಕೆ ತಡೆಯಲು ಕೇಂದ್ರ ನೌಕಾದಳದ ಸಹಾಯ ಪಡೆಯುತ್ತಿದೆ.

    ಕದಂಬ ನೌಕಾನೆಲೆಯ ತಾಂತ್ರಿಕ ಸಿಬ್ಬಂದಿಯ ತಂಡವನ್ನು ರಚಿಸಿ ಜಿಲ್ಲೆಯ 12 ತಾಲೂಕುಗಳಲ್ಲಿ ತಪಾಸಣೆಗೆ ನಿಯೋಜನೆ ಮಾಡಿದೆ. ನೌಕಾ ದಳದ ಸಿಬ್ಬಂದಿ ಮೂರು ಕಡೆ ಸೋರಿಕೆ ಗುರಿತಿಸಿದ್ದಾರೆ. ಇದನ್ನೂ ಓದಿ: ಸಕಾಲದಲ್ಲಿ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲಿಯೇ 6 ತಿಂಗಳ ಗಂಡು ಮಗು ಸಾವು

    ಕಳೆದ ತಿಂಗಳು ಶಿರಸಿಯ ತಾಲೂಕು ಆಸ್ಪತ್ರೆಯಲ್ಲಿ ದೊಡ್ಡ ಮಟ್ಟದಲ್ಲಿ ಆಕ್ಸಿಜನ್ ಸೋರಿಕೆ ಆಗಿತ್ತು, ಇದರ ನಂತರ ಇದೀಗ ತಂಡ ರಚನೆ ಮಾಡಿದ್ದು, ಈ ತಂಡವು ಭಟ್ಕಳ ತಾಲೂಕು ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿರುವ ಆಕ್ಸಿಜನ್ ಪ್ಲಾಂಟ್, ಯಲ್ಲಾಪುರದ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಪ್ಲಾಂಟ್ ನಲ್ಲಿ ಸೋರಿಕೆ ಹಾಗೂ ತಾಂತ್ರಿಕ ಸಮಸ್ಯೆ ಗುರುತಿಸಿ ಸರಿಪಡಿಸಿದೆ. ಸದ್ಯ ಈ ತಂಡ 12 ತಾಲೂಕುಗಳಲ್ಲಿ ಸಕ್ರಿಯವಾಗಿರಲಿದ್ದು, ಜಿಲ್ಲಾಡಳಿತದೊಂದಿಗೆ ಕಾರ್ಯ ನಿರ್ವಹಿಸಲಿದೆ.

  • ಚಿತ್ರತಂಡಕ್ಕೆ 400 ಚಿನ್ನದ ಉಂಗುರ ಗಿಫ್ಟ್ ನೀಡಿದ ವಿಜಯ್

    ಚಿತ್ರತಂಡಕ್ಕೆ 400 ಚಿನ್ನದ ಉಂಗುರ ಗಿಫ್ಟ್ ನೀಡಿದ ವಿಜಯ್

    ಚೆನ್ನೈ: ತಮಿಳುನಟ ವಿಜಯ್ ಅವರು ತಮ್ಮ ‘ಬಿಗಿಲ್’ ಚಿತ್ರತಂಡಕ್ಕೆ ಒಟ್ಟು 400 ಚಿನ್ನದ ಉಂಗುರವನ್ನು ಗಿಫ್ಟ್ ಆಗಿ ನೀಡಿದ್ದಾರೆ.

    ವಿಜಯ್ ತಮ್ಮ ಬಹುನಿರೀಕ್ಷಿತ ಬಿಗಿಲ್ ಚಿತ್ರದ ಬಿಡುಗಡೆಗೆ ಕಾಯುತ್ತಿದ್ದಾರೆ. ಈ ನಡುವೆ ಅವರು ತಮ್ಮ ಚಿತ್ರತಂಡಕ್ಕೆ 400 ಚಿನ್ನದ ಉಂಗುರವನ್ನು ಗಿಫ್ಟ್ ಆಗಿ ನೀಡಿದ್ದಾರೆ. ವಿಶೇಷ ಅಂದರೆ ಚಿನ್ನದ ಉಂಗುರದ ಮೇಲೆ ಬಿಗಿಲ್ ಎಂದು ಬರೆಯಲಾಗಿದೆ.

    ಚಿತ್ರತಂಡಕ್ಕೆ ವಿಜಯ್ ಚಿನ್ನದ ಉಂಗುರವನ್ನು ಹಂಚುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ವಿಜಯ್ ಅವರ ಈ ಕೆಲಸ ನೋಡಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಬಿಗಿಲ್ ಚಿತ್ರಕ್ಕಾಗಿ ದುಡಿದ ಪ್ರತಿಯೊಬ್ಬರಿಗೂ ಉಂಗುರವನ್ನು ನೀಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ.

    ಮಂಗಳವಾರ ಬಿಗಿಲ್ ಚಿತ್ರದ ಚಿತ್ರೀಕರಣ ಮುಗಿದಿದೆ. ಜನವರಿಯಲ್ಲಿ ಈ ಚಿತ್ರದ ಚಿತ್ರೀಕರಣ ಶುರುವಾಗಿತ್ತು. ಈಗ ಎರಡು ದಿನದಲ್ಲಿ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಶುರುವಾಗಲಿದ್ದು, ಇದೇ ವರ್ಷ ಅಕ್ಟೋಬರ್ 27ರಂದು ಚಿತ್ರ ಬಿಡುಗಡೆ ಆಗಲಿದೆ.

    ಈ ಚಿತ್ರದಲ್ಲಿ ವಿಜಯ್ ಸೇರಿದಂತೆ ನಟಿ ನಯನತಾರಾ, ಜಾಕಿ ಶ್ರಾಫ್, ವಿವೇಕ್ ಡೇನಿಯಲ್ ಬಾಲಾಜಿ, ಆನಂದ್‍ರಾಜ್, ಇಂದುಜಾ ರವಿಚಂದ್ರನ್, ವರ್ಷ ಬೋಲಮ್ಮ ಸೇರಿದಂತೆ ಹಲವರು ಈ ಚಿತ್ರದಲ್ಲಿ ನಟಿಸಿದ್ದಾರೆ.

    https://twitter.com/ActorAATHMA/status/1161279624904663043?ref_src=twsrc%5Etfw%7Ctwcamp%5Etweetembed%7Ctwterm%5E1161279624904663043&ref_url=https%3A%2F%2Fwww.timesnownews.com%2Fentertainment%2Fsouth-gossip%2Farticle%2Fviral-video-thalapathy-vijay-is-winning-the-internet-as-he-surprises-team-bigil-by-gifting-400-gold-rings%2F468727

  • ಕಿರುತೆರೆ ನಟ ಸುನಾಮಿ ಕಿಟ್ಟಿ ಬಂಧನ, ಬಿಡುಗಡೆ

    ಕಿರುತೆರೆ ನಟ ಸುನಾಮಿ ಕಿಟ್ಟಿ ಬಂಧನ, ಬಿಡುಗಡೆ

    ಬೆಂಗಳೂರು: ಪಬ್‍ನಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಸುನಾಮಿ ಕಿಟ್ಟಿಯನ್ನು ಪೊಲೀಸರು ಬಂಧಿಸಿದ್ದು, ತದನಂತರ ಬಿಡುಗಡೆ ಮಾಡಿದ್ದಾರೆ.

    ಸಿಗರೇಟ್ ವಿಚಾರವಾಗಿ ಪಂಬ್ ಸಿಬ್ಬಂದಿಯ ಮೇಲೆ ಸುನಾಮಿ ಕಿಟ್ಟಿ ಹಲ್ಲೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸುಬ್ರಹ್ಮಣ್ಯನಗರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡಿದ್ದು, ಈಗ ಕಿಟ್ಟಿಯನ್ನು ಬಂಧಿಸಿದ್ದರು.

    ನಡೆದಿದ್ದೇನು?
    ಸುನಾಮಿ ಕಿಟ್ಟಿ ತನ್ನ ಸ್ನೇಹಿತರ ಜೊತೆ ಭಾನುವಾರ ರಾತ್ರಿ ಮದ್ಯಪಾನ ಮಾಡಲು ಪಬ್‍ಗೆ ಹೋಗಿದ್ದರು. ಈ ವೇಳೆ ಸುನಾಮಿ ಕಿಟ್ಟಿ ಸಿಂಗಲ್ ಸಿಗರೇಟ್ ಕೇಳಿದ್ದಾರೆ. ಆಗ ಸಿಂಗಲ್ ಸಿಗರೇಟ್ ಸಿಗಲ್ಲ, ಪ್ಯಾಕ್ ತೆಗೆದುಕೊಳ್ಳುವಂತೆ ಸಿಬ್ಬಂದಿ ಹೇಳಿದ್ದಾರೆ. ಈ ವಿಚಾರವಾಗಿ ಸುನಾಮಿ ಕಿಟ್ಟಿ ಹಾಗೂ ಪಬ್ ಸಿಬ್ಬಂದಿ ನಡುವೆ ಗಲಾಟೆ ನಡೆದಿತ್ತು.

    ಅಲ್ಲದೇ ಇದರಿಂದ ಕೋಪಗೊಂಡ ಸುನಾಮಿ ಕಿಟ್ಟಿ, ಹೈಲಾಂಚ್ ಪಬ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಪಬ್ ಸಿಬ್ಬಂದಿ ಯಾವುದೇ ದೂರು ನೀಡಿರಲಿಲ್ಲ. ಸದ್ಯ ಪಬ್ ಸಿಬ್ಬಂದಿ, ಸುನಾಮಿ ಕಿಟ್ಟಿ ಜೊತೆ ರಾಜಿ ಸಂಧಾನ ಮಾಡಿಕೊಂಡು ಸುಮ್ಮನಾಗಿದ್ದಾರೆ ಎಂದು ತಿಳಿದುಬಂದಿತ್ತು. ಆದರೆ ಸುಬ್ರಹ್ಮಣ್ಯನಗರ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಸುನಾಮಿ ಕಿಟ್ಟಿಯನ್ನು ಇಂದು ಬಂಧಿಸಿದ್ದು, ಬಳಿಕ ಬಿಡುಗಡೆ ಮಾಡಿದ್ದಾರೆ.

    ಈ ಹಿಂದೆ ಸುನಾಮಿ ಕಿಟ್ಟಿ ಕಿಡ್ನಾಪ್ ಕೇಸ್ ನಲ್ಲಿ ಜ್ಞಾನ ಭಾರತಿ ಠಾಣೆಯಲ್ಲಿ ಅರೆಸ್ಟ್ ಆಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಜೆಟ್‌ ಏರ್‌ವೇಸ್  ಸಿಬ್ಬಂದಿ ಎಡವಟ್ಟಿನಿಂದಾಗಿ ಪ್ರಯಾಣಿಕರ ಕಿವಿ, ಮೂಗಲ್ಲಿ ರಕ್ತ ಬಂತು! ನಿಜವಾಗಿ ಆಗಿದ್ದು ಏನು?

    ಜೆಟ್‌ ಏರ್‌ವೇಸ್ ಸಿಬ್ಬಂದಿ ಎಡವಟ್ಟಿನಿಂದಾಗಿ ಪ್ರಯಾಣಿಕರ ಕಿವಿ, ಮೂಗಲ್ಲಿ ರಕ್ತ ಬಂತು! ನಿಜವಾಗಿ ಆಗಿದ್ದು ಏನು?

    ನವದೆಹಲಿ: ಜೆಟ್ ಏರ್ ವೇಸ್ ವಿಮಾನ ಸಿಬ್ಬಂದಿಯ ಎಡವಟ್ಟಿನಿಂದಾಗಿ ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತ ಬಂದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.

    ಇಂದು ಬೆಳಗ್ಗೆ ಮುಂಬೈನಿಂದ ಜೈಪುರಕ್ಕೆ ಹಾರಾಟ ನಡೆಸಿದ್ದ ಜೆಟ್ ಏರ್ ವೇಸ್ ವಿಮಾನ ಸಿಬ್ಬಂದಿ ಬ್ಲೀಡ್ ಸ್ವಿಚ್ ಆನ್ ಮಾಡದ ಕಾರಣ ಪ್ರಯಾಣಿಕರ ಮೂಗು, ಕಿವಿಯಲ್ಲಿ ರಕ್ತ ಬಂದಿದೆ. ಮಾಧ್ಯಮಗಳಲ್ಲಿ ಈ ಸುದ್ದಿ ಪ್ರಕಟವಾಗುತ್ತಿದ್ದಂತೆ ನಾಗರಿಕ ವಿಮಾನಯಾನ ಸಚಿವಾಲಯ(ಡಿಜಿಸಿಎ) ತಕ್ಷಣವೇ ಈ ಪ್ರಕರಣಕ್ಕೆ ಸಂಬಂಧಿಸದಂತೆ ವರದಿ ನೀಡುವಂತೆ ಸೂಚಿಸಿದೆ.

    ಆಗಿದ್ದು ಏನು?
    ಇಂದು ಬೆಳಗ್ಗೆ 5.50ರ ಸಮಯದಲ್ಲಿ ಮುಂಬೈ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣದಿಂದ ಜೈಪುರಕ್ಕೆ ಜೆಟ್ ಏರ್ ವೇಸ್ ವಿಮಾನ 166 ಪ್ರಯಾಣಿಕರೊಂದಿಗೆ ಹಾರಾಟ ಆರಂಭಿಸಿತ್ತು. ಆದರೆ ವಿಮಾನ ಹಾರಾಟದ ಸಂದರ್ಭದಲ್ಲಿ ಕ್ಯಾಬಿನ್ ಒತ್ತಡ ಸಮಸ್ಯೆಯನ್ನು ನಿಯಂತ್ರಿಸಲು ಅಳವಡಿಸಿದ್ದ ಸ್ವಿಚನ್ನು ಆನ್ ಮಾಡಲು ಸಿಬ್ಬಂದಿ ಮರೆತಿದ್ದರು. ಇದರಿಂದ ವಿಮಾನದಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಕರಿಗೆ ಒತ್ತಡ ತಡೆಯಲಾಗದೇ ತಲೆನೋವು ಕಾಣಿಸಿಕೊಂಡು ಬಳಿಕ ಮೂಗು ಹಾಗೂ ಕಿವಿಯಲ್ಲಿ ರಕ್ತಸ್ರಾವವಾಗಿದೆ. ಈ ವೇಳೆ ಪ್ರಯಾಣಿಕರು ಆಸನದ ಮೇಲಿದ್ದ ಆಮ್ಲಜನಕದ ಮಾಸ್ಕನ್ನು ಧರಿಸುವ ಮೂಲಕ ಅಪಾಯದಿಂದ ಪಾರಾದರು.

    ಜೆಟ್ ಏರ್ ವೇಸ್‍ನ 737 ಬೋಯಿಂಗ್ ವಿಮಾನದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಹಾರಾಟದ ಸಂದರ್ಭದಲ್ಲಿ ಒಟ್ಟು 166 ಮಂದಿ ಪ್ರಯಾಣಿಕರು ಹಾಗೂ 5 ಸಿಬ್ಬಂದಿ ಇದ್ದರು ಎಂದು ವಿಮಾನಯಾನ ನಿಯಂತ್ರಣ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಲ್ಲದೇ ಪ್ರಯಾಣಿಕರು ಅಸ್ವಸ್ಥರಾಗುತ್ತಿದ್ದಂತೆ 45 ನಿಮಿಷಗಳ ಹಾರಾಟದ ಬಳಿಕ ಮತ್ತೆ ಮುಂಬೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದ್ದು, ಅಸ್ವಸ್ಥಗೊಂಡಿದ್ದ ಪ್ರಯಾಣಿಕರಿಗೆ ವೈದ್ಯರು ಚಿಕಿತ್ಸೆ ನೀಡಿದ್ದಾರೆ. ಉಳಿದ ಪ್ರಯಾಣಿಕರಿಗೆ ಮತ್ತೊಂದು ವಿಮಾನದ ಮೂಲಕ ಜೈಪುರಕ್ಕೆ ತೆರಳಲು ವ್ಯವಸ್ಥೆ ಮಾಡಿದ್ದಾಗಿ ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ಮಾಹಿತಿ ನೀಡಿದೆ.

    ಈ ಘಟನೆ ಕುರಿತು ಎಎಐಬಿ ತನಿಖೆಗೆ ಆದೇಶಿಸಿದ್ದು, ಡಿಜಿಸಿಎಗೆ ದೂರನ್ನೂ ನೀಡಲಾಗಿದೆ. ಸದ್ಯ ಲಭ್ಯವಾಗಿರುವ ಮಾಹಿತಿ ಅನ್ವಯ ವಿಮಾನ ಸಿಬ್ಬಂದಿಯ ನಿರ್ಲಕ್ಷ್ಯತನದಿಂದಲೇ ಪ್ರಯಾಣಿಕರಿಗೆ ತೊಂದರೆ ಉಂಟಾಗಿದೆ ಎಂದು ಹೇಳಲಾಗಿದೆ. ಡಿಜಿಸಿಎ ಘಟನೆ ವೇಳೆ ಕರ್ತವ್ಯದಲ್ಲಿದ್ದ ಐವರು ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದೆ.

    ಆಗಿದ್ದು ಏನು?
    ಮಾಧ್ಯಮಗಳಲ್ಲಿ ಪ್ರಕಟವಾದಂತೆ ವಿಮಾನದಲ್ಲಿನ ಆಸನಗಳು ಭರ್ತಿಯಾಗಿ ಹಾರುವ ಸಂದರ್ಭದಲ್ಲಿ ಪೈಲಟ್ ಗಳು ಎಂಜಿನ್ ಗಾಳಿಯನ್ನು ಸ್ವಿಚ್ ಆಫ್ ಮಾಡುತ್ತಾರೆ. ವಿಮಾನ ಮೇಲಕ್ಕೆ ಹಾರಿದ ನಂತರ ಬ್ಲೀಡ್ ಸ್ವಿಚ್ ಅನ್ನು ಆನ್ ಮಾಡುತ್ತಾರೆ. ಇದರಿಂದಾಗಿ ಗಾಳಿ ಕ್ಯಾಬಿನ್ ಒಳಗಡೆ ಬರುತ್ತದೆ. ವಿಮಾನದ ಒಳಗಡೆ ಅಮ್ಲಜನಕ ಸಿಗುತ್ತದೆ. ಆದರೆ ಈ ಪ್ರಕರಣದಲ್ಲಿ ಪೈಲಟ್ ವಿಮಾನ ಹಾರುವ ಸಂದರ್ಭದಲ್ಲಿ ಬ್ಲೀಡ್ ಸ್ವಿಚ್ ಅನ್ನು ಆಫ್ ಮಾಡಿದ್ದಾರೆ. ಆದರೆ ನಂತರ ಈ ಸ್ವಿಚ್ ಅನ್ನು ಆನ್ ಮಾಡುವಲ್ಲಿ ಮರೆತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv