Tag: cricket

  • ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಿತ್ತ ಚಹಲ್ ಚೆಸ್‍ನಲ್ಲೂ ಚಾಂಪಿಯನ್ ಆಗಿದ್ರು!

    ಇಂಗ್ಲೆಂಡ್ ವಿರುದ್ಧ 6 ವಿಕೆಟ್ ಕಿತ್ತ ಚಹಲ್ ಚೆಸ್‍ನಲ್ಲೂ ಚಾಂಪಿಯನ್ ಆಗಿದ್ರು!

    ಬೆಂಗಳೂರು: ಮೂರನೇ ಟಿ20 ಕ್ರಿಕೆಟ್ ನಲ್ಲಿ ಇಂಗ್ಲೆಂಡ್ ಹಠಾತ್ ಕುಸಿತ ಕಾಣಲು ಕಾರಣರಾದ ಯಜುವೇಂದ್ರ ಚಹಲ್ ಒಂದು ಕಾಲದಲ್ಲಿ ಚೆಸ್ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

    ಹೌದು, ಹರ್ಯಾಣ ರಾಜ್ಯದ ಚಹಲ್ ತಮ್ಮ ವಿದ್ಯಾರ್ಥಿ ಜೀವನದಲ್ಲಿ ಕ್ರಿಕೆಟ್ ಜೊತೆಗೆ ಚೆಸ್ ಆಡುತ್ತಿದ್ದರು. ಏಷ್ಯಾ ಮತ್ತು ವಿಶ್ವ ಯೂಥ್ ಚಾಂಪಿಯನ್ ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅಷ್ಟೇ ಅಲ್ಲದೇ ಅಂಡರ್ – 12 ವಯಸ್ಸಿನಲ್ಲಿ ರಾಷ್ಟ್ರೀಯ ಚಾಂಪಿಯನ್ ಆಗಿ ಹೊರ ಹೊಮ್ಮಿದ್ದರು.

    ಎಳವೆಯಲ್ಲೇ ವಿಶೇಷ ಸಾಧನೆ ಮಾಡಿದ್ದರೂ ಚೆಸ್‍ನಲ್ಲಿ ಯಾಕೆ ಮುಂದುವರಿಯಲಿಲ್ಲ ಎಂದು ಕೇಳಿದ್ದಕ್ಕೆ, ಚೆಸ್ ನಲ್ಲಿ ಸಾಧನೆ ಮಾಡಬೇಕಾದರೆ ವರ್ಷಕ್ಕೆ 50 ಲಕ್ಷ ರೂ. ಬೇಕಾಗುತ್ತದೆ. ಆದರೆ ನನಗೆ ಪ್ರಯೋಜಕರ ಕೊರತೆಯಿಂದ ಮುಂದುವರಿಯಲು ಸಾಧ್ಯವಾಗಲಿಲ್ಲ. ಆದರೆ ಹವ್ಯಾಸವಾಗಿ ಚೆಸ್ ಆಡುತ್ತೇನೆ ಎಂದು ಈ ಹಿಂದೆ ಮಾಧ್ಯಮವೊಂದಕ್ಕೆ ತಿಳಿಸಿದ್ದರು.

    ಚೆಸ್ ನಿಮಗೆ ಯಾವ ರೀತಿ ಸಹಕಾರವಾಗಿದೆ ಎಂದು ಕೇಳಿದ್ದಕ್ಕೆ, ವಿಶೇಷವಾಗಿ ಟಿ 20ಯಲ್ಲಿ ಬ್ಯಾಟ್ಸ್ ಮನ್‍ಗಳು ದೊಡ್ಡ ಶಾಟ್‍ಗಳನ್ನು ಹೊಡೆಯುತ್ತಾರೆ. ಇದರಿಂದಾಗಿ ಬೌಲರ್‍ಗಳ ಮೇಲೆ ಒತ್ತಡ ಜಾಸ್ತಿ ಇರುತ್ತದೆ. ಆದರೆ ನಾನು ಬಹಳ ಶಾಂತವಾಗಿ ಇರುತ್ತೇನೆ. ಚೆಸ್ ತರಬೇತಿಯಿಂದಾಗಿ ನಾನು ನನ್ನ ಬೌಲಿಂಗ್ ಎಸೆಯುವ ಬಗ್ಗೆ ಹೆಚ್ಚು ಗಮನ ಕೊಡಲು ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದ್ದರು.

    ಫಿಡೆ ವಿಶ್ವ ಚೆಸ್ ಶ್ರೇಯಾಕ ಪಟ್ಟಿಯಲ್ಲಿ ಈಗಲೂ ಚಹಲ್ ಹೆಸರು ಇದ್ದು 1956ನೇ ಸ್ಥಾನದಲ್ಲಿದ್ದಾರೆ. 1990 ಜುಲೈ 23ರಂದು ಜನಿಸಿದ ಚಹಲ್, ಮೂರು ಏಕದಿನ ಮತ್ತು 6 ಟಿ20 ಪಂದ್ಯವನ್ನು ಆಡಿದ್ದಾರೆ. ಟಿ20ಯಲ್ಲಿ 11 ವಿಕೆಟ್, ಏಕದಿನದಲ್ಲಿ 6 ವಿಕೆಟ್ ಪಡೆದಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಮೂರನೇ ಟಿ20ಯಲ್ಲಿ ಚಹಲ್ 25 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ಭಾರತ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಕಾರಣಕ್ಕಾಗಿ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಒಲಿದಿತ್ತು.

     ಇದನ್ನೂ ಓದಿ: 8 ರನ್‍ಗಳಿಗೆ 8 ವಿಕೆಟ್ ಪತನ: ಇದು ಚಹಲ್ ಕಮಾಲ್- ಭಾರತಕ್ಕೆ ಸರಣಿ

  • ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಕೊಹ್ಲಿ ಮರು ಪ್ರಶ್ನೆ ಎಸೆದಿದ್ದು ಹೀಗೆ: ವಿಡಿಯೋ ನೋಡಿ

    ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೇಳಿದ್ದಕ್ಕೆ ಮಾಧ್ಯಮಗಳಿಗೆ ಕೊಹ್ಲಿ ಮರು ಪ್ರಶ್ನೆ ಎಸೆದಿದ್ದು ಹೀಗೆ: ವಿಡಿಯೋ ನೋಡಿ

    ಬೆಂಗಳೂರು: ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವ ತಂಡದ ನಾಯಕ ವಿರಾಟ್ ಕೊಹ್ಲಿ ಅಲ್ಪಮೊತ್ತಕ್ಕೆ ಔಟಾಗುತ್ತಿದ್ದು ಈ ಸಂಬಂಧ ಪತ್ರಕರ್ತರು ಕೇಳಿದ ಪ್ರಶ್ನೆಗೆ ಕೊಹ್ಲಿ ಈ ರೀತಿ ಉತ್ತರ ನೀಡಿದ್ದಾರೆ.

    `ನಾನು ಹೆಚ್ಚು ರನ್ ಗಳಿಸಿದ ಸಂದರ್ಭದಲ್ಲಿ ಹೋ.. ಕ್ರಿಕೆಟ್ ಜಗತ್ತಿನಲ್ಲೇ ಕೊಹ್ಲಿ ಕ್ರಾಂತಿ ಮೂಡಿಸಿದ್ದಾರೆ ಅಂತ ಹೇಳ್ತಿರ ಹೊರತು ಬೇರೆ ಏನೂ ಕೇಳಲ್ಲ. ಆದ್ರೆ ಆದರೆ ಈಗ ನಾನು ರನ್ ಗಳಿಸಿದೇ ಇರುವುದು ನಿಮಗೆ ಸಮಸ್ಯೆಯಾಗಿ ಕಾಣುತ್ತಿದೆಯೇ ಎಂದು ಮರು ಪ್ರಶ್ನೆಯನ್ನು ಎಸೆದರು. ನನ್ನಂತೆಯೇ ಉಳಿದವರ ಆಟದತ್ತನೂ ಗಮನ ಕೊಡಿ. ಒಂದು ಟೀಂ ನಲ್ಲಿ 10 ಮಂದಿ ಆಟಗಾರರಿದ್ದಾರೆ. ನಾನೇ ಎಲ್ಲವನ್ನೂ ಮಾಡಿ ಮುಗಿಸಿದರೆ ಇನ್ನುಳಿದವರು ಏನು ಮಾಡುತ್ತಾರೆ ಎಂದು ಪ್ರಶ್ನಿಸಿದರು.

    ಆರಂಭಿಕ ಬ್ಯಾಟ್ಸ್ ಮನ್ ಆಗಿ ಕಣಕ್ಕೆ ಇಳಿದ ಕೊಹ್ಲಿ ಮೂರು ಪಂದ್ಯದಲ್ಲಿ ಒಟ್ಟು 52 ರನ್ ಗಳಿಸಿದ್ದರು. ಈ ಹಿನ್ನೆಲೆಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸರಣಿಯಲ್ಲಿ ನನ್ನ ಆಟದ ಬಗ್ಗೆ ಸಂತೋಷವಿದೆ. ಒಂದು ವೇಳೆ ಎರಡೂ ಪಂದ್ಯಗಳಲ್ಲಿ 70 ರನ್ ಗಳಿಸಿದ್ದರೆ ನೀವು ಈ ಪ್ರಶ್ನೆಯನ್ನು ಕೇಳುತ್ತಿದ್ರಾ ಅಂತಾ ಪ್ರಶ್ನಿಸಿದ ಅವರು, ಸರಣಿ ಆಟಗಳ ಬಗ್ಗೆ ಖುಷಿ ಪಡಿ. ಅದೇ ನಮಗೆ ಗೆಲುವು ತಂದುಕೊಡುತ್ತೆ ಅಂತಾ ಕೊಹ್ಲಿ ಹೇಳಿದ್ದಾರೆ.

    ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ ಟಿ20 ಸರಣಿಯ ಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 2 ರನ್ ಗೆ ಔಟಾಗಿದ್ದರು. ಈ ಪಂದ್ಯದಲ್ಲಿ ಸುರೇಶ್ ರೈನಾ, ಎಂಎಸ್ ಧೋನಿ, ಯುವರಾಜ್ ಸಿಂಗ್ ಅಬ್ಬರದ ಬ್ಯಾಟಿಂಗ್ ನಿಂದಾಗಿ ಭಾರತ 202 ರನ್ ಗಳಿಸಿತ್ತು. ಜತೆಗೆ ಇಂಗ್ಲೆಂಡ್ ತಂಡವನ್ನು 127 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 75 ರನ್ ಗಳಿಂದ ಜಯಗಳಿಸಿತ್ತು.

  • ಸುರೇಶ್ ರೈನಾ ಸಿಕ್ಸರ್ ಬಾಲ್ 6 ವರ್ಷದ ಬಾಲಕನ ಮೇಲೆ ಬಿತ್ತು!

    ಬೆಂಗಳೂರು: ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಸುರೇಶ್ ರೈನಾ ಹೊಡೆದ ಸಿಕ್ಸರ್ ಬಾಲ್ ಮೈಮೇಲೆ ಬಿದ್ದು ಬಾಲಕನೊಬ್ಬ ಗಾಯಗೊಂಡಿದ್ದಾನೆ.

    6 ವರ್ಷದ ಬಾಲಕ ಸತೀಶ್ ನಿನ್ನೆ ಇಂಗ್ಲೆಂಡ್ ವಿರುದ್ಧದ ಪಂದ್ಯ ನೋಡಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದ. ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ನಿಗದಿತ 20 ಓವರ್‍ಗಳಲ್ಲಿ 202 ರನ್ ಗಳಿಸಿತ್ತು. ಈ ಇನ್ನಿಂಗ್ಸ್‍ ನಲ್ಲಿ ಸುರೇಶ್ ರೈನಾ ಬಾರಿಸಿದ ಸಿಕ್ಸರ್‍ಗೆ ಬಾಲ್ ಕ್ರೀಡಾಂಗಣದ ನಡುವೆ ನುಗ್ಗಿತು. ಬಾಲ್ ಬಾಲಕನ ತೊಡೆಯ ಭಾಗಕ್ಕೆ ತಾಗಿತ್ತು. ತಕ್ಷಣ ಕ್ರೀಡಾಂಗಣದಲ್ಲೇ ಹಾಸ್‍ಮ್ಯಾಟ್ ಆಸ್ಪತ್ರೆ ವೈದ್ಯರು ಬಾಲಕನಿಗೆ ಪ್ರಥಮ ಚಿಕಿತ್ಸೆ ನೀಡಿದರು.

    ಬಾಲಕನಿಗೆ ಕ್ರೀಡಾಂಗಣದಲ್ಲೇ ಇರುವ ಕೆಎಸ್‍ಸಿಎ ಮೆಡಿಕಲ್ ಸೆಂಟರ್‍ನಲ್ಲಿ ಹಾಸ್‍ಮ್ಯಾಟ್ ಆಸ್ಪತ್ರೆಯ ಡಾ.ಥಾಮಸ್ ಚಾಂಡಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಇದಾದ 10 ನಿಮಿಷಗಳಲ್ಲೇ ಬಾಲಕನನ್ನು ಡಿಸ್ಚಾರ್ಜ್ ಮಾಡಿದ್ದಾರೆ ಎಂದು ಹಾಸ್‍ಮ್ಯಾಟ್ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.

    ಈ ಹಿಂದೆಯೂ ಆಗಿತ್ತು!: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ಪ್ರೇಕ್ಷಕರಿಗೆ ಗಾಯವಾಗಿದ್ದು ಇದೇ ಮೊದಲೇನಲ್ಲ. ಈ ಹಿಂದೆ 2012ರ ಏಪ್ರಿಲ್ 17ರಂದು ನಡೆದಿದ್ದ ಐಪಿಎಲ್ ಟಿ20 ಪಂದ್ಯದಲ್ಲಿ ಕ್ರಿಸ್ ಗೇಲ್ ಬ್ಯಾಟಿಂಗ್ ಅಬ್ಬರಕ್ಕೆ 11 ವರ್ಷದ ಬಾಲಕಿ ಟಿಯಾ ಭಾಟಿಯಾ ಎಂಬಾಕೆಯ ಮೂಗಿಗೆ ಗಾಯವಾಗಿತ್ತು. ಅಂದು ಪುಣೆ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಕ್ರಿಸ್ ಗೇಲ್ ರಾಯಲ್ ಚಾಲೆಂಜರ್ಸ್ ಪರ ಆಟವಾಡುತ್ತಿದ್ದರು.

    ಪಂದ್ಯದ ಬಳಿಕ ವಿಷಯ ತಿಳಿದ ಕ್ರಿಸ್ ಗೇಲ್ ತಕ್ಷಣ ಬಾಲಕಿ ದಾಖಲಾಗಿದ್ದ ಮಲ್ಯ ಆಸ್ಪತ್ರೆಗೆ ತೆರಳಿ ಬಾಲಕಿಯ ಯೋಗ ಕ್ಷೇಮ ವಿಚಾರಿಸಿದ್ದರು.

  • 8 ರನ್‍ಗಳಿಗೆ 8 ವಿಕೆಟ್ ಪತನ: ಇದು ಚಹಲ್ ಕಮಾಲ್- ಭಾರತಕ್ಕೆ ಸರಣಿ

    ಬೆಂಗಳೂರು: ಯಜುವೇಂದ್ರ ಚಹಲ್ ಅವರ ಮಾರಕ ಬೌಲಿಂಗ್‍ನಿಂದ ಟೀಂ ಇಂಡಿಯಾ ಇಂಗ್ಲೆಂಡ್ ವಿರುದ್ಧ 75 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಟೆಸ್ಟ್, ಏಕದಿನ ಸರಣಿಯನ್ನು ಗೆದ್ದುಕೊಂಡಿದ್ದ ಭಾರತ ಈಗ ಟಿ20 ಸರಣಿಯನ್ನು ಗೆದ್ದುಕೊಂಡಿದೆ.

    ಗೆಲ್ಲಲು 203 ರನ್‍ಗಳ ಕಠಿಣ ಗುರಿಯನ್ನು ಪಡೆದ ಇಂಗ್ಲೆಂಡ್ 13.3 ಓವರ್ ಗಳಲ್ಲಿ 119 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡು ಉತ್ತಮ ಸ್ಥಿತಿಯಲ್ಲಿತ್ತು. ಆದರೆ ಚಹಲ್ ಸ್ಪಿನ್ ದಾಳಿಗೆ ತತ್ತರಿಸಿದ ಆಂಗ್ಲರು 8 ರನ್ ಅಂತರದಲ್ಲಿ 8 ವಿಕೆಟ್ ಕಳೆದುಕೊಳ್ಳುವ ಮೂಲಕ 16.3 ಓವರ್‍ಗಳಲ್ಲಿ 127 ರನ್ ಗಳಿಗೆ ಆಲೌಟ್ ಆಯ್ತು.

    ಚಹಲ್ ಕಮಾಲ್: ಬಿಲ್ಲಿಂಗ್ಸ್, ಮಾರ್ಗನ್ ರನ್ನು ಔಟ್ ಮಾಡಿದ ಚಹಲ್ ರೂಟ್ ಅವರನ್ನು ಎಲ್‍ಬಿ ಬಲೆಗೆ ಕೆಡವಿದರು. ಇಲ್ಲಿಂದ ಆಂಗ್ಲರ ಪತನ ಆರಂಭವಾಯಿತು. ನಂತರ ಬಂದ ಬಟ್ಲರ್ ಕೊಹ್ಲಿ ಗೆ ಕ್ಯಾಚ್ ನೀಡಿ ಹೊರ ನಡೆದರು. ಚಹಲ್ ಎಸೆತವನ್ನು ಸಿಕ್ಸರ್‍ಗೆ ಬೆನ್ ಸ್ಟೋಕ್ ಅಟ್ಟಿದ್ದರೂ ಸುರೇಶ್ ರೈನಾ ಬೌಂಡರಿ ಗೆರೆಯ ಬಳಿ ಹಿಡಿದ ಅತ್ಯುತ್ತಮ ಕ್ಯಾಚ್‍ಗೆ ಔಟಾದರು. ಇದಾದ ಬಳಿಕ ಮೊಯಿನ್ ಅಲಿ ಕೊಹ್ಲಿ ಕ್ಯಾಚ್ ನೀಡಿದರೆ ಕ್ರಿಸ್ ಜೊರ್ಡನ್ ಅವರನ್ನು ಧೋನಿ ಸ್ಟಂಪ್ ಔಟ್ ಮಾಡಿದರು. ಅಂತಿಮವಾಗಿ 4 ಓವರ್ ಕೋಟಾ ಮುಗಿದಾಗ ಚಹಲ್ 25 ರನ್ ನೀಡಿ 6 ವಿಕೆಟ್ ಪಡೆದಿದ್ದರು.

    ಇಂಗ್ಲೆಂಡ್ ಪರ ಜೇಸನ್ ರೋ 32 ರನ್, ಜೋ ರೂಟ್ 42 ರನ್, ನಾಯಕ ಇಯಾನ್ ಮಾರ್ಗನ್ 40 ರನ್ ಹೊಡೆದರು. ಬುಮ್ರಾ ಮೂರು ವಿಕೆಟ್ ಪಡೆದರೆ ಅಮಿತ್ ಮಿಶ್ರಾ 1 ವಿಕೆಟ್ ಪಡೆದರು

    ವಿಕೆಟ್ ಪತನಗೊಂಡಿದ್ದು ಹೀಗೆ:
    1-8, 2-55, 3-119, 4-119, 5-119, 6-123, 7-127, 8-127, 9-127, 10-127

    ಸಿಕ್ಸರ್, ಬೌಂಡರಿ ಅಬ್ಬರ: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಬ್ ಏರ್ ಸೌಲಭ್ಯ ಅಳವಡಿಕೆಯಾದ ನಡೆದ ಮೊದಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತದ ಬ್ಯಾಟ್ಸ್ ಮನ್‍ಗಳು ರನ್ ಸುರಿಮಳೆಗೈದಿದ್ದರು. ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ಆರಂಭದಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡರೂ ಸುರೇಶ್ ರೈನಾ, ಧೋನಿ ಅರ್ಧಶತಕ, ಕೊನೆಯಲ್ಲಿ ಯುವರಾಜ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತ್ತು.

    ಎರಡನೇ ಓವರ್‍ನ ಮೊದಲ ಎಸೆತದಲ್ಲಿ ನಾಯಕ ಕೊಹ್ಲಿ ಜೊರ್ಡನ್ ಬೌಲಿಂಗ್‍ನಲ್ಲಿ ರನೌಟ್ ಆದರು. ಆರಂಭದಲ್ಲಿ ಕುಸಿತ ಕಂಡರೂ ಎರಡನೇ ವಿಕೆಟ್‍ಗೆ ರಾಹುಲ್ ಮತ್ತು ರೈನಾ 6.1 ಓವರ್ನಲ್ಲಿ 61 ರನ್ ಕಲೆ ಹಾಕಿ ಭದ್ರವಾದ ಇನ್ನಿಂಗ್ಸ್ ಕಟ್ಟಿದರು.

    22 ರನ್(18 ಎಸೆತ, 2 ಬೌಂಡರಿ, 1ಸಿಕ್ಸರ್) ಗಳಿಸಿದ್ದ ರಾಹುಲ್ ಔಟಾದಾಗ ತಂಡದ ಮೊತ್ತ 65 ಆಗಿತ್ತು. ಧೋನಿ ಕ್ರೀಸ್‍ಗೆ ಬಂದ ಮೇಲೆ ಸಿಕ್ಸರ್, ಬೌಂಡರಿ ಸಿಡಿಯಲು ಆರಂಭವಾಯಿತು.

    ರೈನಾ ಮತ್ತು ಧೋನಿ 37 ಎಸೆತದಲ್ಲಿ 55 ರನ್ ಜೊತೆಯಾಟವಾಡಿದರು. 39 ಎಸೆತದಲ್ಲಿ ಅರ್ಧಶತಕ ಹೊಡೆದ ರೈನಾ ಅಂತಿಮವಾಗಿ 63 ರನ್(45 ಎಸೆತ, 2 ಬೌಂಡರಿ, 5 ಸಿಕ್ಸರ್) ಗಳಿಸಿದ್ದಾಗ ಮೊರ್ಗನ್‍ಗೆ ಕ್ಯಾಚ್ ನೀಡಿ ಹೊರ ನಡೆದರು.

    ಯುವರಾಜ್ ಬಂದ ಕೂಡಲೇ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಪರಿಣಾಮ ಜೊರ್ಡನ್ ಎಸೆದ 18ನೇ ಓವರ್ ನಲ್ಲಿ ಯುವರಾಜ್ ಮೂರು ಸಿಕ್ಸರ್ ಒಂದು ಬೌಂಡರಿ ಚಚ್ಚಿದರು. ಈ ಓವರ್ನಲ್ಲಿ ಧೋನಿ ಮತ್ತು ಯುವಿ 24 ರನ್ ಸೊರೆಗೈದರು. ಉತ್ತಮವಾಗಿ ಆಡುತ್ತಿದ್ದ ಯುವರಾಜ್ ಸಿಂಗ್ 27 ರನ್( 10 ಎಸೆತ, 1 ಬೌಂಡರಿ,1 ಸಿಕ್ಸರ್) ಗಳಿಸಿದ್ದಾಗ ಮಿಲ್ಸ್ ಎಸೆದ ಸ್ಲೋ ಬಾಲಿಗೆ ಕೀಪರ್ಗೆ ಕ್ಯಾಚ್ ನೀಡಿ ಹೊರ ನಡೆದರು. ಇವರಿಬ್ಬರು 28 ಎಸೆತದಲ್ಲಿ 57 ರನ್ ಚಚ್ಚುವ ಮೂಲಕ ತಂಡದ ಮೊತ್ತವನ್ನು 170 ರನ್‍ಗಳ ಗಡಿ ದಾಟಿಸಿದರು.

    ಧೋನಿ 56 ರನ್(36 ಎಸೆತ,5 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರೆ, 11 ರನ್(4 ಎಸೆತ, 1 ಸಿಕ್ಸರ್) ಗಳಿಸಿದ್ದ ಹಾರ್ದಿಕ್ ಪಾಂಡ್ಯಾ ಇನ್ನಿಂಗ್ಸ್ ಕೊನೆಯ ಬಾಲ್‍ನಲ್ಲಿ ರನ್ ಔಟಾದರು. ಕೊನೆಯಲ್ಲಿ ರಿಶಬ್ ಪಂತ್ 6 ರನ್ ಗಳಿಸಿ ಔಟಾಗದೇ ಉಳಿದರು. 12 ಸಿಕ್ಸರ್, 11 ಬೌಂಡರಿ ಸಿಡಿದರೆ, ಇತರೇ ರೂಪದಲ್ಲಿ 15 ರನ್ ಟೀಂ ಇಂಡಿಯಾಗೆ ಬಂತು.

    ಭಾರತದ ರನ್ ಏರಿದ್ದು ಹೀಗೆ:
    50 ರನ್ – 5.5 ಓವರ್
    100 ರನ್ – 12.1 ಓವರ್
    150 ರನ್ – 16.5 ಓವರ್
    200 ರನ್ – 19.5 ಓವರ್
    202 ರನ್ – 20 ಓವರ್

    ಕಾನ್ಪುರದಲ್ಲಿ ನಡೆದ ಮೊದಲ ಪಂದ್ಯವನ್ನು ಇಂಗ್ಲೆಂಡ್ 7 ವಿಕೆಟ್‍ನಿಂದ ಗೆದ್ದಿದ್ದರೆ, ನಾಗ್ಪುರದಲ್ಲಿ ನಡೆದ ಎರಡನೇ ಪಂದ್ಯವನ್ನು ಭಾರತ ಜಸ್‍ಪ್ರೀತ್ ಬುಮ್ರಾ ಅವರ ಅಮೋಘ ಬೌಲಿಂಗ್ ಪ್ರದರ್ಶನದಿಂದಾಗಿ 5ರನ್‍ಗಳ ರೋಚಕ ಜಯವನ್ನು ಸಾಧಿಸಿತ್ತು.

    ಯಜುವೇಂದ್ರ ಚಹಲ್ ಪಂದ್ಯಶ್ರೇಷ್ಠ ಮತ್ತು ಸರಣಿಯಲ್ಲಿ 8 ವಿಕೆಟ್ ಕಿತ್ತ ಹಿನ್ನೆಲೆಯಲ್ಲಿ ಸರಣಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು.

  • ಚಿನ್ನಸ್ವಾಮಿಯಲ್ಲಿ ಸಿಕ್ಸರ್, ಬೌಂಡರಿ ಸುರಿಮಳೆ

    ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಬ್ ಏರ್ ಸೌಲಭ್ಯ ಅಳವಡಿಕೆಯಾದ ನಡೆದ ಮೊದಲ ಅಂತರಾಷ್ಟ್ರೀಯ ಪಂದ್ಯದಲ್ಲಿ ಭಾರತ ಬ್ಯಾಟ್ಸ್ ಮನ್‍ಗಳು ರನ್ ಸುರಿಮಳೆಗೈದಿದ್ದಾರೆ.

    ಇಂಗ್ಲೆಂಡ್ ವಿರುದ್ಧ ಮೂರನೇಯ ಟಿ 20 ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ ಆರಂಭದಲ್ಲಿ ವಿರಾಟ್ ಕೊಹ್ಲಿ ವಿಕೆಟ್ ಕಳೆದುಕೊಂಡರೂ ಸುರೇಶ್ ರೈನಾ, ಧೋನಿ ಅರ್ಧಶತಕ, ಕೊನೆಯಲ್ಲಿ ಯುವರಾಜ್ ಅಬ್ಬರದ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಅಂತಿಮವಾಗಿ 6 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿದೆ.

    ಎರಡನೇ ಓವರ್‍ನ ಮೊದಲ ಎಸೆತದಲ್ಲಿ ನಾಯಕ ಕೊಹ್ಲಿ ಜೊರ್ಡನ್ ಬೌಲಿಂಗ್‍ನಲ್ಲಿ ರನೌಟ್ ಆದರು. ಆರಂಭದಲ್ಲಿ ಕುಸಿತ ಕಂಡರೂ ಎರಡನೇ ವಿಕೆಟ್‍ಗೆ ರಾಹುಲ್ ಮತ್ತು ರೈನಾ 6.1 ಓವರ್‍ನಲ್ಲಿ 61 ರನ್ ಕಲೆ ಹಾಕಿ ಭದ್ರವಾದ ಇನ್ನಿಂಗ್ಸ್ ಕಟ್ಟಿದರು.

    22 ರನ್(18 ಎಸೆತ, 2 ಬೌಂಡರಿ, 1ಸಿಕ್ಸರ್) ಗಳಿಸಿದ್ದ ರಾಹುಲ್ ಔಟಾದಾಗ ತಂಡದ ಮೊತ್ತ 65 ಆಗಿತ್ತು. ಧೋನಿ ಕ್ರೀಸ್‍ಗೆ ಬಂದ ಮೇಲೆ ಸಿಕ್ಸರ್, ಬೌಂಡರಿ ಸಿಡಿಯಲು ಆರಂಭವಾಯಿತು.

    ರೈನಾ ಮತ್ತು ಧೋನಿ 37 ಎಸೆತದಲ್ಲಿ 55 ರನ್ ಜೊತೆಯಾಟವಾಡಿದರು. 39 ಎಸೆತದಲ್ಲಿ ಅರ್ಧಶತಕ ಹೊಡೆದ ರೈನಾ ಅಂತಿಮವಾಗಿ 63 ರನ್(45 ಎಸೆತ, 2 ಬೌಂಡರಿ, 5 ಸಿಕ್ಸರ್) ಗಳಿಸಿದ್ದಾಗ ಮೊರ್ಗನ್‍ಗೆ ಕ್ಯಾಚ್ ನೀಡಿ ಹೊರ ನಡೆದರು.

    ಯುವರಾಜ್ ಬಂದ ಕೂಡಲೇ ಆಕ್ರಮಣಕಾರಿ ಆಟಕ್ಕೆ ಮುಂದಾದರು. ಪರಿಣಾಮ ಜೊರ್ಡನ್ ಎಸೆದ 18ನೇ ಓವರ್ ನಲ್ಲಿ ಯುವರಾಜ್ ಮೂರು ಸಿಕ್ಸರ್ ಒಂದು ಬೌಂಡರಿ ಚಚ್ಚಿದರು. ಈ ಓವರ್‍ನಲ್ಲಿ ಧೋನಿ ಮತ್ತು ಯುವಿ 24 ರನ್ ಸೊರೆಗೈದರು. ಉತ್ತಮವಾಗಿ ಆಡುತ್ತಿದ್ದ ಯುವರಾಜ್ ಸಿಂಗ್ 27 ರನ್( 10 ಎಸೆತ, 1 ಬೌಂಡರಿ,1 ಸಿಕ್ಸರ್) ಗಳಿಸಿದ್ದಾಗ ಮಿಲ್ಸ್ ಎಸೆದ ಸ್ಲೋ ಬಾಲಿಗೆ ಕೀಪರ್‍ಗೆ ಕ್ಯಾಚ್ ನೀಡಿ ಹೊರ ನಡೆದರು. ಇವರಿಬ್ಬರು 28 ಎಸೆತದಲ್ಲಿ 57 ರನ್ ಚಚ್ಚುವ ಮೂಲಕ ತಂಡದ ಮೊತ್ತವನ್ನು 170 ರನ್‍ಗಳ ಗಡಿ ದಾಟಿಸಿದರು.

    ಧೋನಿ 56 ರನ್(36 ಎಸೆತ,5 ಬೌಂಡರಿ, 2 ಸಿಕ್ಸರ್) ಹೊಡೆದು ಔಟಾದರೆ, 11 ರನ್(4 ಎಸೆತ, 1 ಸಿಕ್ಸರ್) ಗಳಿಸಿದ್ದ ಹಾರ್ದಿಕ್ ಪಾಂಡ್ಯಾ ಇನ್ನಿಂಗ್ಸ್ ಕೊನೆಯ ಬಾಲ್‍ನಲ್ಲಿ ರನ್ ಔಟಾದರು. ಕೊನೆಯಲ್ಲಿ ರಿಶಬ್ ಪಂತ್ 6 ರನ್ ಗಳಿಸಿ ಔಟಾಗದೇ ಉಳಿದರು.

     12 ಸಿಕ್ಸರ್, 11 ಬೌಂಡರಿ ಸಿಡಿದರೆ, ಇತರೇ ರೂಪದಲ್ಲಿ 15 ರನ್ ಟೀಂ ಇಂಡಿಯಾಗೆ ಬಂತು.

    ಭಾರತದ ರನ್ ಏರಿದ್ದು ಹೀಗೆ:
    50 ರನ್ – 5.5 ಓವರ್
    100 ರನ್ – 12.1 ಓವರ್
    150 ರನ್ – 16.5 ಓವರ್
    200 ರನ್ – 19.5 ಓವರ್
    202 ರನ್ – 20 ಓವರ್

  • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ಭಾರತ-ಇಂಗ್ಲೆಂಡ್ ಟಿ20 ಫೈನಲ್

    – ಭಾರತ ಗೆದ್ರೆ ಕೊಹ್ಲಿ ಟಿ-20ಗೂ ಸಾಮ್ರಾಟ್

    ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಇಂಡೋ-ಇಂಗ್ಲೆಂಡ್ ಟಿ-20 ಸರಣಿಯ ಅಂತಿಮ ಹಣಾಹಣಿ ನಡೆಯಲಿದೆ. 3 ಪಂದ್ಯಗಳ ಸರಣಿಯಲ್ಲಿ 1-1ರ ಸಮಬಲ ಸಾಧಿಸಿರೋದ್ರಿಂದ ಜಿದ್ದಾಜಿದ್ದಿನ ಹೋರಾಟ ನಡೆಯೋದಂತೂ ಸತ್ಯ.

    ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಜಯಿಸಿದ ಕೊಹ್ಲಿ ಮೂರೂ ಪ್ರಕಾರದ ಪಂದ್ಯಗಳಿಗೆ ನಾಯಕರಾದ ಮೇಲೆ ಏಕದಿನ ಸರಣಿಯನ್ನೂ ಬಾಚಿಕೊಂಡು ಈಗ ಟಿ-20 ಮೇಲೂ ಕಣ್ಣಿಟ್ಟಿದ್ದಾರೆ. ಟೀಂ ಇಂಡಿಯಾ ಗೆದ್ರೆ ಆಂಗ್ಲರ ಭಾರತ ಪ್ರವಾಸ `ಹೋದ ಪುಟ್ಟಾ ಬಂದ ಪುಟ್ಟ’ ಎಂಬಂತಾಗುತ್ತೆ. ಇಂದು ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದೆ.

    ಆರ್‍ಸಿಬಿ ನಾಯಕರಾಗಿರೋ ಹಾಗೂ ಟಿ-20 ನಾಯಕರಾಗಿ ಆಯ್ಕೆಯಾದ ಬಳಿಕ ವಿರಾಟ್ ಕೊಹ್ಲಿಗೆ ಬೆಂಗಳೂರಿನಲ್ಲಿ ಇದೇ ಮೊದಲ ಪಂದ್ಯವಾಗಿದೆ. ಹೀಗಾಗಿ ನೆಚ್ಚಿನ ನಾಯಕನ ಆಟದ ಜೊತೆಗೆ ಟೀಂ ಇಂಡಿಯಾದ ಆಟವನ್ನು ನೋಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.