Tag: Cricket Board

  • ಅಘ್ಘಾನ್ ಕ್ರಿಕೆಟ್ ಮಂಡಳಿ ವಶಕ್ಕೆ ತಾಲಿಬಾನ್ ಕಸರತ್ತು

    ಅಘ್ಘಾನ್ ಕ್ರಿಕೆಟ್ ಮಂಡಳಿ ವಶಕ್ಕೆ ತಾಲಿಬಾನ್ ಕಸರತ್ತು

    ಕಾಬೂಲ್: ಅಘ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮುಂದುವರಿದಿದೆ. ಇದೀಗ ಅಘ್ಘಾನ್ ಕ್ರಿಕೆಟ್ ಮಂಡಳಿಯನ್ನು ತಮ್ಮ ವಶಕ್ಕೆ ಪಡೆದುಕೊಳ್ಳಲು ತಾಲಿಬಾನಿಗಳು ಕಸರತ್ತು ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

    ತಾಲಿಬಾನಿಗಳು ಅಘ್ಘಾನಿಸ್ತಾನ್ ಕ್ರಿಕೆಟ್ ಮಂಡಳಿಗೆ ಮುತ್ತಿಗೆ ಹಾಕಿ ಅಲ್ಲಿನ ಮಾಜಿ ಕ್ರಿಕೆಟಿಗರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದ್ದು, ಕೆಲದಿನಗಳ ಹಿಂದೆ ಕ್ರಿಕೆಟ್ ತಂಡಕ್ಕೂ ತಾಲಿಬಾನಿಗಳು ಕಾಟ ಕೊಡುವ ಬಗ್ಗೆ ಅಲ್ಲಿನ ಕ್ರಿಕೆಟ್ ಆಟಗಾರರು ತಮ್ಮ ನೋವು ತೋಡಿಕೊಂಡಿದ್ದರು. ಇದನ್ನೂ ಓದಿ: ಐಸ್‍ಕ್ರೀಮ್ ಸವಿದು, ಜಿಮ್ ಮಾಡಿ ಫುಲ್ ಎಂಜಾಯ್ ಮೂಡ್‍ನಲ್ಲಿ ತಾಲಿಬಾನಿಗಳು

    ತಾಲಿಬಾನ್ ಉಗ್ರರು ಅಘ್ಘಾನಿಸ್ತಾನದ ಎಲ್ಲಾ ಕ್ರಿಕೆಟ್ ಸ್ಟೇಡಿಯಂಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹೀಗಾಗಿ ಅಘ್ಘಾನಿಸ್ತಾನದ ಕ್ರಿಕೆಟಿಗರ ಭವಿಷ್ಯ ಅಪಾಯಕ್ಕೆ ಸಿಲುಕಿದೆ. ಈ ನಡುವೆ ಅಘ್ಘಾನಿಸ್ತಾನ ತಂಡ ಮುಂಬರುವ ಟಿ20 ವಿಶ್ವಕಪ್‍ಗೂ ಅರ್ಹತೆ ಪಡೆದುಕೊಂಡಿದೆ.

    ಅಘ್ಘಾನಿಸ್ತಾನದ ಸ್ಟಾರ್ ಕ್ರಿಕೆಟರ್ ರಶೀದ್ ಖಾನ್, ಅಘ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ವಶಕ್ಕೆ ತೆಗೆದುಕೊಂಡಿದ್ದಾರೆ. ಜನರು ಭಯ ಭೀತಿಯಿಂದ ದೇಶ ತೊರೆಯುತ್ತಿದ್ದಾರೆ. ಇವೆಲ್ಲವನ್ನೂ ನೋಡಿ ನನಗೆ ನಿದ್ದೆ ಮಾಡಲಾಗುತ್ತಿಲ್ಲ. ದಯವಿಟ್ಟು ಎಲ್ಲರೂ ನಮಗಾಗಿ ಪ್ರಾರ್ಥಿಸಿ ಎಂದು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಮಹಿಳೆಯರು ಕೆಲಸ ಮಾಡಬಹುದು, ಮುಸ್ಲಿಂ ಕಾನೂನುಗಳ ವ್ಯಾಪ್ತಿಯಲ್ಲಷ್ಟೇ: ತಾಲಿಬಾನ್

  • ಟಾರ್ಗೆಟ್ ಮಾಡಿದ ಲಸಿತ್ ಮಾಲಿಂಗಾ ಪತ್ನಿ – ಕ್ರಿಕೆಟ್ ಬೋರ್ಡ್ ಮೊರೆ ಹೋದ ತಿಸಾರ ಪೆರೆರಾ

    ಟಾರ್ಗೆಟ್ ಮಾಡಿದ ಲಸಿತ್ ಮಾಲಿಂಗಾ ಪತ್ನಿ – ಕ್ರಿಕೆಟ್ ಬೋರ್ಡ್ ಮೊರೆ ಹೋದ ತಿಸಾರ ಪೆರೆರಾ

    ಕೊಲಂಬೊ: ಶ್ರೀಲಂಕಾ ತಂಡದ ವೇಗದ ಬೌಲರ್ ಲಸಿತ್ ಮಾಲಿಂಗಾ ಪತ್ನಿ ಹಾಗೂ ಆಲ್‍ ರೌಂಡರ್ ತಿಸಾರ ಪೆರೆರಾರ ನಡುವಿನ ಸಾಮಾಜಿಕ ಜಾಲತಾಣದ ಕದನ ಹೆಚ್ಚಾಗಿದ್ದು, ಸದ್ಯ ಪ್ರಕರಣದಲ್ಲಿ ಮಧ್ಯಪ್ರವೇಶ ಮಾಡುವಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಪೆರೆರಾ ಪತ್ರ ಬರೆದು ಮನವಿ ಮಾಡಿದ್ದಾರೆ.

    ಕಳೆದ ಕೆಲ ದಿನಗಳ ಹಿಂದೆ ಮಾಲಿಂಗಾ ಪತ್ನಿ ತಾನ್ಯಾ ಪೆರೆರಾ ಫೇಸ್‍ಬುಕ್ ಖಾತೆಯಲ್ಲಿ ತಿಸಾರರನ್ನು ಟಾರ್ಗೆಟ್ ಮಾಡಿ ಪೋಸ್ಟ್ ಪ್ರಕಟಿಸಿದ್ದರು. ಇದರಲ್ಲಿ ತಿಸಾರ ಪೆರೆರಾ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಶ್ರೀಲಂಕಾದ ಕ್ರೀಡಾ ಸಚಿವರನ್ನು ಭೇಟಿಯಾಗಿದ್ದರು ಎಂದು ಬರೆದುಕೊಂಡಿದ್ದರು.

    ತಾನ್ಯಾರ ಈ ಪೋಸ್ಟ್ ಗೆ ತಿರುಗೇಟು ನೀಡಿದ್ದ ತಿಸ್ಸಾರ ಪೆರಾರ, ಕ್ಯಾಲೆಂಟರ್ ವರ್ಷದಲ್ಲಿ ತಾವು ಮಾಡಿದ ಸಾಧನೆಗಳ ಪಟ್ಟಿ ಮಾಡಿ ತಂಡದಲ್ಲಿ ಸ್ಥಾನ ಪಡೆಯಲು ತಮ್ಮ ಉತ್ತಮ ಪ್ರದರ್ಶನವೇ ಕಾರಣ ಎಂದು ಟಾಂಗ್ ನೀಡಿದ್ದರು. ಇದರ ಬಳಿಕವೂ ತಾನ್ಯಾ ಅವರು, ತಿಸಾರರನ್ನು ಟಾರ್ಗೆಟ್ ಮಾಡಿ ಮತ್ತೊಂದು ಪೋಸ್ಟ್ ಮಾಡಿದ್ದರು.

    ಸದ್ಯ ಸಾಮಾಜಿಕ ಜಾಲತಾಣದಲ್ಲಿ ಉಂಟಾಗುತ್ತಿರುವ ಚರ್ಚೆಗೆ ಬ್ರೇಕ್ ಹಾಕಲು ಮುಂದಾಗಿರುವ ತಿಸಾರ ಪೆರೆರಾ ಶ್ರೀಲಂಕಾ ಕ್ರಿಕೆಟ್ ಬೋರ್ಡಿನ ಸಿಇಒ ಆಶ್ಲೇ ಡಿ ಸಿಲ್ವಾ ಅವರಿಗೆ ಪತ್ರ ಬರೆದಿದ್ದಾರೆ. ಕೆಲವರ ವೈಯಕ್ತಿಕ ದ್ವೇಷಕ್ಕೆ ತಂಡದ ಸಾಮರಸ್ಯ ಹಾಳಾಗುತ್ತಿದೆ. ಇಡೀ ದೇಶಕ್ಕೆ ನಾವು ನಗುವ ವಸ್ತುವಾಗಿದ್ದೇವೆ ಎಂದು ತಿಳಿಸಿ ಪ್ರಕರಣದಲ್ಲಿ ಮಧ್ಯಪ್ರವೇಶದ ಮಾಡುವಂತೆ ಮನವಿ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv