Tag: cries

  • ಹೆಚ್ಚಾದ ಭಿಕ್ಷುಕರ ಹಾವಳಿ – ಹಸುಗೂಸು ಎತ್ತಿಕೊಂಡು ಸುಡುಬಿಸಿಲಲ್ಲೇ ಭಿಕ್ಷಾಟನೆ

    ಹೆಚ್ಚಾದ ಭಿಕ್ಷುಕರ ಹಾವಳಿ – ಹಸುಗೂಸು ಎತ್ತಿಕೊಂಡು ಸುಡುಬಿಸಿಲಲ್ಲೇ ಭಿಕ್ಷಾಟನೆ

    ರಾಯಚೂರು: ಜಿಲ್ಲೆಯನ್ನ ಬಿಸಿಲನಾಡು ಅಂತ ಕರೆಯುವುದೇನೋ ನಿಜ ಆದರೆ ಇಲ್ಲಿನ ಭಿಕ್ಷುಕರಿಗೆ ಬಿಸಿಲು ತಟ್ಟುತ್ತೋ ಇಲ್ಲವೋ ಗೊತ್ತಿಲ್ಲ. ಚಿಕ್ಕಮಕ್ಕಳನ್ನ ಬಳಸಿಕೊಂಡು ಸುಡುಬಿಸಿಲಲ್ಲಿ ಮಹಿಳೆಯರು ಭಿಕ್ಷೆ ಬೇಡುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆ. ಎಲ್ಲೆಲ್ಲಿಂದಲೋ ಬರುವ ಭಿಕ್ಷುಕರ ಕಾಟಕ್ಕೆ ರಾಯಚೂರು ಜನ ಸಹ ಬೇಸತ್ತು ಹೋಗಿದ್ದಾರೆ.

    ಪುಟ್ಟಕಂದಮ್ಮಗಳನ್ನ ಕಂಕುಳಲ್ಲಿ ಇಟ್ಟುಕೊಂಡು ಭಿಕ್ಷೆ ಬೇಡುವವರ ಹಾವಳಿ ಇತ್ತೀಚೆಗೆ ನಗರದಲ್ಲಿ ವಿಪರೀತವಾಗಿದೆ. ಸುಡುಬಿಸಿಲಲ್ಲೂ ಸದಾ ನಿದ್ರೆಗೆ ಜಾರಿರುವ ಕಂದಮ್ಮಗಳೇ ಈ ಮಹಿಳೆಯರಿಗೆ ಬಂಡವಾಳ. ಟ್ರಾಫಿಕ್ ಸಿಗ್ನಲ್, ಹೋಟೆಲ್‍ಗಳ ಮುಂದೆ, ನಗರದ ಬಸವೇಶ್ವರ ವೃತ್ತ, ಚಂದ್ರಮೌಳೇಶ್ವರ ವೃತ್ತ ಸೇರಿದಂತೆ ನಗರದ ಹಲವೆಡೆ ಬೆಳಗ್ಗೆಯಿಂದ ರಾತ್ರಿವರೆಗೆ ನೂರಾರು ಜನ ಭಿಕ್ಷುಕರು ಕಾಣಿಸಿಕೊಳ್ಳುತ್ತಾರೆ.

    ಸಾರ್ವಜನಿಕರಿಗೆ ಈ ಭಿಕ್ಷುಕರದ್ದೇ ದೊಡ್ಡ ಕಾಟವಾಗಿದೆ. ಸಿಗ್ನಲ್‍ಗಳಲ್ಲಂತೂ ಸಿಕ್ಕಾಪಟ್ಟೆ ಹಿಂಸೆ ಕೊಡುತ್ತಾರೆ. ಆದರೆ ಇವರು ಭಿಕ್ಷಾಟನೆಗೆ ಬಳಸುವ ಮಕ್ಕಳು ಸದಾ ನಿದ್ರೆಯಲ್ಲೇ ಇರುವುದು ಅನುಮಾನಗಳಿಗೆ ಕಾರಣವಾಗಿದೆ. ಬೇರೆ ಜಿಲ್ಲೆ ಮಾತ್ರವಲ್ಲದೆ ಬೇರೆ ರಾಜ್ಯಗಳಿಂದಲೂ ಬಂದಿರುವ ಭಿಕ್ಷುಕರು ಇಲ್ಲೆ ಸೇರಿಕೊಂಡಿದ್ದಾರೆ.

    ಕಂದಮ್ಮಗಳಿಗೆ ನಿದ್ರೆ ಬರುವ ಔಷಧಿ ನೀಡಿ ಭಿಕ್ಷಾಟನೆ ದಂಧೆ ನಡೆದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ತೆಗೆದುಕೊಳ್ಳುತ್ತಿಲ್ಲ ಅಂತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಒಂದೇ ಮಗುವನ್ನ ಬೇರೆ ಬೇರೆ ಮಹಿಳೆಯರು ಶಿಫ್ಟ್ ಪ್ರಕಾರ ಬಳಸಿಕೊಳ್ಳುತ್ತಿದ್ದಾರೆ ಅಂತ ಸಾರ್ವಜನಿಕರು ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಮಹಿಳಾ ನಿರಾಶ್ರಿತರ ಕೇಂದ್ರ ಇಲ್ಲದೆ ಇರುವುದು ಹೆಚ್ಚು ಮಹಿಳಾ ಭಿಕ್ಷುಕರು ಇರಲು ಕಾರಣವಾಗಿದೆ. ಇಳಿವಯಸ್ಸಿನ ವೃದ್ದೆಯರು, ಅನಾರೋಗ್ಯ ಪೀಡಿತ ಅಜ್ಜಿಯರು ಸಹ ಸುಡುಬಿಸಿಲಲ್ಲೇ ಭಿಕ್ಷಾಟನೆ ಮಾಡುತ್ತಿದ್ದರೂ ಅವರ ರಕ್ಷಣೆಗೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ ಅಂತ ಜನ ಆರೋಪಿಸಿದ್ದಾರೆ.

    ಪುಟ್ಟ ಕಂದಮ್ಮಗಳನ್ನ ಭಿಕ್ಷಾಟನೆಯ ವಸ್ತುಗಳನ್ನಾಗಿ ಬಳಸಿಕೊಳ್ಳುತ್ತಿರುವುದು ತೀರಾ ಖಂಡನೀಯ. ಸುಡುಬಿಸಿಲಲ್ಲಿ ಏಳೆಂಟು ತಿಂಗಳ ಹಸುಗೂಸುಗಳನ್ನ ಹಿಡಿದು ಬರುವ ಭಿಕ್ಷುಕರ ಸಂಖ್ಯೆ ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಕೂಡಲೇ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಕ್ರಮಕೈಗೊಳ್ಳಬೇಕಿದೆ. ಭಿಕ್ಷುಕರ ಹಾವಳಿಯನ್ನ ತಪ್ಪಿಸಬೇಕು ಅಂತ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.

  • ಮಂಗ್ಳೂರಲ್ಲಿ ಆಣೆ ಪ್ರಮಾಣ ರಾಜಕೀಯ- ಸಚಿವರ ಸವಾಲು ಸ್ವೀಕರಿಸಿದ ಜನಾರ್ದನ ಪೂಜಾರಿ ಆಪ್ತರು

    ಮಂಗ್ಳೂರಲ್ಲಿ ಆಣೆ ಪ್ರಮಾಣ ರಾಜಕೀಯ- ಸಚಿವರ ಸವಾಲು ಸ್ವೀಕರಿಸಿದ ಜನಾರ್ದನ ಪೂಜಾರಿ ಆಪ್ತರು

    ಮಂಗಳೂರು: ಒಂದು ಕಾಲದಲ್ಲಿ ರಮಾನಾಥ ರೈ ಪಾಲಿಗೆ ರಾಜಕೀಯ ಗುರುವಾಗಿದ್ದ ಜನಾರ್ದನ ಪೂಜಾರಿಯವರನ್ನೇ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದರೆಂಬ ಆರೋಪ ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿತ್ತು.  ಇದನ್ನೂ ಓದಿ: ಬ್ಲಾಕ್ ಕಾಂಗ್ರೆಸ್ ಸಭೆಯಲ್ಲಿ ಕಣ್ಣೀರಿಟ್ಟ ಸಚಿವ ರಮಾನಾಥ ರೈ!

    ಸಾರ್ವಜನಿಕ ವೇದಿಕೆಯಲ್ಲಿ ಪೂಜಾರಿಯವರು ಕಣ್ಣೀರು ಹಾಕಿದ್ದು, ಬಿಲ್ಲವರನ್ನು ಸೇರಿದಂತೆ ಸಾರ್ವಜನಿಕ ವಲಯದಲ್ಲಿ ರೈ ವಿರುದ್ಧ ಟೀಕೆ ಎದ್ದುಬಂದಿತ್ತು. ಆದರೆ ಮತ್ತೆ ಪೂಜಾರಿಯವರ ಕಣ್ಣೀರಿಗೆ ಪ್ರತಿಯಾಗಿ ರಮಾನಾಥ ರೈ ಕೂಡ ಕಣ್ಣೀರು ಹಾಕಿದ್ದಲ್ಲದೆ, ಆಣೆ ಪ್ರಮಾಣಕ್ಕೆ ಕರೆದಿದ್ದು ಪೂಜಾರಿ ಆಪ್ತರನ್ನು ಕೆರಳಿಸಿತ್ತು.  ಇದನ್ನೂ ಓದಿ: ಬಹಿರಂಗ ಸಭೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಕಣ್ಣೀರು

    ಇದೀಗ ಸವಾಲನ್ನು ಸ್ವೀಕರಿಸಿರುವ ಪೂಜಾರಿ ಆಪ್ತರಾದ ಹರಿಕೃಷ್ಣ ಬಂಟ್ವಾಳ್ ಮತ್ತು ಅರುಣ್ ಕುವೆಲ್ಲೋ ಆಣೆ ಪ್ರಮಾಣಕ್ಕೆ ಸಿದ್ಧರಾಗಿದ್ದಾರೆ. ಅಲ್ಲದೆ ಧರ್ಮಸ್ಥಳಕ್ಕೆ ಜನಾರ್ದನ ಪೂಜಾರಿ ಯಾಕೆ ಬರಬೇಕು. ನಾವೇ ಬರ್ತೀವಿ. ಯಾಕಂದ್ರೆ ರಮಾನಾಥ ರೈ ಪೂಜಾರಿಯವರನ್ನು ನಿಂದಿಸಿದಾಗ ಅರುಣ್ ಕುವೆಲ್ಲೋ ಸಾಕ್ಷಿಯಾಗಿದ್ರು ಅಂತಾ ಹರಿಕೃಷ್ಣ ಬಂಟ್ವಾಳ್ ಹೇಳಿದ್ದಾರೆ.  ಇದನ್ನೂ ಓದಿ: ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ಮತ್ತೆ ಕಣ್ಣೀರು!

    https://www.youtube.com/watch?v=d0ABn6LEi-w

    https://www.youtube.com/watch?v=3tD5oKIc3EY