Tag: crime

  • ಬೆಂಗ್ಳೂರಿನ ವೈದ್ಯೆ ಹೆಸರಲ್ಲಿ ಮಹಿಳೆಯರಿಗೆ ಅಶ್ಲೀಲ ಫೋಟೋ – ಆರೋಪಿಗಳು ಅರೆಸ್ಟ್

    ಬೆಂಗ್ಳೂರಿನ ವೈದ್ಯೆ ಹೆಸರಲ್ಲಿ ಮಹಿಳೆಯರಿಗೆ ಅಶ್ಲೀಲ ಫೋಟೋ – ಆರೋಪಿಗಳು ಅರೆಸ್ಟ್

    ಬೆಂಗಳೂರು: ಖ್ಯಾತ ವೈದ್ಯೆ (Doctor) ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಮಹಿಳೆಗೆ (Women) ಅಶ್ಲೀಲ ಫೋಟೋ ಕಳಿಸುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಲೈಂಗಿಕವಾಗಿ ತೊಂದರೆ ಇರುವ ಮಹಿಳೆಯರಿಗೆ ಸೂಕ್ತ ಸಲಹೆ ನೀಡುತ್ತಿದ್ದ ವೈದ್ಯೆ ಡಾ.ಪದ್ಮಿನಿ ಪ್ರಸಾದ್ ಅವರ ಹೆಸರಿನಲ್ಲಿ ಇತರ ಮಹಿಳೆಯರಿಗೆ ಫೋಟೋ ಕಳಿಸಲಾಗುತ್ತಿತ್ತು. ಕಿಡಿಗೇಡಿಗಳ ಕೃತ್ಯದ ಬಗ್ಗೆ ಬೆಂಗಳೂರು (Bengaluru) ಉತ್ತರ ವಿಭಾಗ ಸಿಇಎನ್ ಪೊಲೀಸ್ ಠಾಣೆಯಲ್ಲಿ (CEN Police Station) ಪದ್ಮಿನಿ ಪ್ರಸಾದ್ ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: ಕಾಪಿ ಚೀಟಿಯನ್ನು ಲವ್ ಲೆಟರ್ ಎಂದು ತಪ್ಪಾಗಿ ಭಾವಿಸಿದ ವಿದ್ಯಾರ್ಥಿನಿ- ವಿದ್ಯಾರ್ಥಿಯ ಬರ್ಬರ ಕೊಲೆ

    ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿಕನ್ ಬಿರಿಯಾನಿ ಕೊಡಲಿಲ್ಲವೆಂದು ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ಭೂಪ

    ಚಿಕನ್ ಬಿರಿಯಾನಿ ಕೊಡಲಿಲ್ಲವೆಂದು ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ಭೂಪ

    ವಾಷಿಂಗ್ಟನ್: ತನಗೆ ಚಿಕನ್ ಬಿರಿಯಾನಿ (Chicken) ಕೊಡಲಿಲ್ಲವೆಂದು ನ್ಯೂಯಾರ್ಕ್‌ನಲ್ಲಿರುವ ಬಾಂಗ್ಲಾದೇಶಿ ರೆಸ್ಟೋರೆಂಟ್‌ಗೆ (Restorent) ಪೆಟ್ರೋಲ್ (Petrol) ಸುರಿದು ಬೆಂಕಿ ಹಚ್ಚಿರುವ ಘಟನೆ ನ್ಯೂಯಾರ್ಕ್ (NewYork) ನಗರದಲ್ಲಿ ನಡೆದಿದೆ.

    ಇಲ್ಲಿನ ಜಾಕ್ಸನ್ ಹೈಟ್ಸ್‌ನಲ್ಲಿರುವ ಇಟ್ಟಾಡಿ ಗಾರ್ಡನ್ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ಘಟನೆಗೆ ಸಂಬಂಧಿಸಿದಂತೆ 49 ವರ್ಷದ ಚೋಫೆಲ್ ನಾರ್ಬು ನನ್ನು ನ್ಯೂಯಾರ್ಕ್ ಪೊಲೀಸರು (NewYork Police) ಬಂಧಿಸಿದ್ದಾರೆ. ಆರೋಪಿ ವಿರುದ್ಧ ಕ್ರಿಮಿನಲ್ (Criminal Case) ಆರೋಪ ಹೊರಿಸಲಾಗಿದೆ. ಇದನ್ನೂ ಓದಿ: ಕೇರಳ ಶೈಲಿಯ ರುಚಿಕರ ಸಿಗಡಿ ರೋಸ್ಟ್ ಮಾಡಿ ನೋಡಿ

     

    View this post on Instagram

     

    A post shared by FDNY (@fdny)

    ಬಂಧನದ ಬಳಿಕ ಆರೋಪಿ, ನಾನು ತುಂಬಾ ಕುಡಿದಿದ್ದೆ ಕುಡಿದಿದ್ದರಿಂದ ನನಗೆ ಹುಚ್ಚು ಹಿಡಿದಂತಾಗಿತ್ತು. ಹಾಗಾಗಿ ಚಿಕನ್ ಬಿರಿಯಾನಿ ಖರೀದಿಸಲು ಹೋದೆ. ಆದರೆ ನನಗೆ ಬಿರಿಯಾನಿ ಕೊಡಲಿಲ್ಲ. ಆದ್ದರಿಂದ ಗ್ಯಾಸ್ ಕ್ಯಾನ್ ಖರೀದಿಸಿ, ರೆಸ್ಟೋರೆಂಟ್ ಸುಡಲು ಮುಂದಾದೆ ಎಂದು ಹೇಳಿಕೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಅಮೆರಿಕಾದಲ್ಲಿ ಕಾಂತಾರ ನೋಡಿ ಭಾವುಕರಾದ ನಟ ಜಗ್ಗೇಶ್

    ಘಟನೆ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸರೆಯಾಗಿದೆ. ಅಲ್ಲದೇ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚುವ ವೇಳೆ ಆರೋಪಿಗೂ ಬೆಂಕಿ ತಗುಲಿದೆ. ಈ ದೃಶ್ಯ ಜಾಲತಾಣದಲ್ಲಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಸೇಲ್ಸ್ ಟ್ಯಾಕ್ಸ್ ಏಜೆಂಟ್ ಕಿಡ್ನ್ಯಾಪ್ ಮಾಡಿ 1.5 ಲಕ್ಷ ಸುಲಿಗೆ – ದೆಹಲಿಯ ಇಬ್ಬರು ಪೊಲೀಸರು ಅರೆಸ್ಟ್

    ಸೇಲ್ಸ್ ಟ್ಯಾಕ್ಸ್ ಏಜೆಂಟ್ ಕಿಡ್ನ್ಯಾಪ್ ಮಾಡಿ 1.5 ಲಕ್ಷ ಸುಲಿಗೆ – ದೆಹಲಿಯ ಇಬ್ಬರು ಪೊಲೀಸರು ಅರೆಸ್ಟ್

    ನವದೆಹಲಿ: ಸೇಲ್ಸ್ ಟ್ಯಾಕ್ಸ್ ಏಜೆಂಟ್‌ನನ್ನು (Sales Tax Agent) ಅಪಹರಿಸಿ 1.5 ಲಕ್ಷ ಸುಲಿಗೆ ಮಾಡಿದ ಆರೋಪದ ಮೇಲೆ ದೆಹಲಿ ಇಬ್ಬರು ಪೊಲೀಸರನ್ನು (Delhi Police) ಬಂಧಿಸಲಾಗಿದೆ.

    ದೆಹಲಿಯ ಮೂವರು ಪೊಲೀಸರು ಶನಿವಾರ ಶಾಹರದಾರದ ಜಿಟಿಬಿ ಎನ್‌ಕ್ಲೇವ್‌ನಿಂದ ವ್ಯಕ್ತಿಯೊಬ್ಬನನ್ನು ಅಪಹರಿಸಿದ್ದಾರೆ. ಅಲ್ಲದೇ ಹಣ ನೀಡದಿದ್ದರೆ ಸುಳ್ಳು ಪ್ರಕರಣ ದಾಖಲಿಸುವುದಾಗಿಯೂ ಬೆದರಿಕೆ ಹಾಕಿ, ಆತನನ್ನು ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. 1.5 ಲಕ್ಷ ರೂ. ಹಣ ಪಡೆದ ನಂತರ ಆರೋಪಿಗಳು ಆತನನ್ನು ಬಿಡುಗಡೆ ಮಾಡಿದ್ದಾರೆ. ಬಳಿಕ ಆತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬರ್ತ್‍ಡೇ, ಗ್ರಾಜುಯೇಷನ್ ಪಾರ್ಟಿಗೆ ಬೆಸ್ಟ್ ಇಯರ್‌ರಿಂಗ್ ಡಿಸೈನ್‍ಗಳು

    ಈ ಕುರಿತು ತನಿಖೆ ನಡೆಸಿದ ಜಿಟಿಬಿ ಎನ್ಕ್ಲೇವ್ ಪೊಲೀಸರು, ಆರೋಪಿ ಪೊಲೀಸರ ವಿರುದ್ಧ ಅಪಹರಣ ಮತ್ತು ಸುಲಿಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರ ಸಂಜೆ ಸೀಮಾಪುರಿ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳಾದ ಸಂದೀಪ್ ಮತ್ತು ರಾಬಿನ್ ನನ್ನು ಬಂಧಿಸಿದ್ದಾರೆ. ಇನ್ನೋರ್ವ ಕಾನ್‌ಸ್ಟೆಬಲ್ (Police Constable) ಅಮಿತ್ ಮತ್ತು ಸೀಮಾಪುರಿಯ ವಂಚಕ ಗೌರವ್ ಅಲಿಯಾಸ್ ಅಣ್ಣಾ ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರು ಏಮ್ಸ್ ಹೋರಾಟಗಾರರಿಂದ ಶಾಸಕನ ಮನೆಗೆ ಮುತ್ತಿಗೆ

    ಏನಿದು ಪ್ರಕರಣ?
    ಸಂತ್ರಸ್ತ ವ್ಯಕ್ತಿ ತನ್ನ ಕುಟುಂಬದೊಂದಿಗೆ ಜಿಟಿಬಿ ಎನ್‌ಕ್ಲೇವ್‌ನಲ್ಲಿ ವಾಸಿಸುತ್ತಿದ್ದರು. ಆದಾಯ ತೆರಿಗೆ (Income Tax Department) ಇಲಾಖೆ ಕಚೇರಿಯಲ್ಲಿ ಮಾರಾಟ ತೆರಿಗೆ ಏಜೆಂಟ್ ಆಗಿ ಕೆಲಸ ಮಾಡುವ ಅವರು ಅ.11ರ ರಾತ್ರಿ ತಮ್ಮ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದರು. ಶಹದಾರಾ ಮೇಲ್ಸೇತುವೆಯನ್ನು ದಾಟಿದಾಗ, ಮೂವರಿದ್ದ ಬಿಳಿ ಬಣ್ಣದ ಕಾರು ಅವರನ್ನು ಅಡ್ಡಗಟ್ಟಿತ್ತು. ನಂತರ ಕಾರಿನಲ್ಲಿದ್ದ ಮೂವರು ತನ್ನನ್ನು ಥಳಿಸಿ ತನ್ನ ಕಾರಿನ ಹಿಂದಿನ ಸೀಟಿನಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದರು. ಅವರಲ್ಲೊಬ್ಬರು ತಾವು ಅಪರಾಧ ವಿಭಾಗದವರು ಎಂದು ಹೇಳಿದರು. ಮತ್ತೊಬ್ಬ ಆರೋಪಿ ತನ್ನ ಎದೆಯ ಮೇಲೆ ಪಿಸ್ತೂಲ್ ಇಟ್ಟು ಎಳೆದುಕೊಂಡು, ಜೇಬಿನಲ್ಲಿಟ್ಟಿದ್ದ 35 ಸಾವಿರ ಹಣವನ್ನು ಹೊರತೆಗೆದ. ಆದಾ ನಂತರವೂ 5 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ನಂತರ ಅವರನ್ನು ಶಹದಾರ ಜಿಲ್ಲೆಯ ವಿಶೇಷ ಸಿಬ್ಬಂದಿಯ ಕಚೇರಿಗೆ ಕರೆದೊಯ್ಯಲಾಯಿತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

    ಅಲ್ಲಿ ಅಧಿಕಾರಿಯೊಂದಿಗೆ ಮಾತನಾಡಿದ ಬಳಿಕ ಆರೋಪಿಗಳು ಅವರನ್ನು ಬಲವಂತವಾಗಿ ಮತ್ತೆ ಕಾರಿನಲ್ಲಿ ಕೂರಿಸಿದ್ದಾರೆ. ಆತನಿಗೆ ವೈದ್ಯಕೀಯ ಚಿಕಿತ್ಸೆ ಕೊಡಿಸುವುದಾಗಿ ಹೇಳಿಕೊಂಡು ಆರೋಪಿಗಳು ಸಂತ್ರಸ್ತನನ್ನು ಜಿಟಿಬಿ ಆಸ್ಪತ್ರೆಯ ಸರ್ವೀಸ್ ಲೇನ್ ಗೆ ಕರೆದೊಯ್ದಿದ್ದಾರೆ. ಅಲ್ಲಿ ಮತ್ತೆ ಬೆದರಿಕೆ ಹಾಕಿದ್ದಾರೆ. ನಂತರ ಸಂತ್ರಸ್ತ ವ್ಯಕ್ತಿ ಆರೋಪಿಗಳು ಏಜೆಂಟ್ ತನ್ನ ಮನೆಗೆ ಕರೆದೊಯ್ದು ಸುಮಾರು 50,000 ರೂ. ಹಣ ನೀಡಿದ್ದಾರೆ. ಸ್ನೇಹಿತನಿಂದ ಸಾಲ ಪಡೆದು ಸುಮಾರು 70 ಸಾವಿರ ರೂ. ಹಣವನ್ನು ಗೌರವ್ ಅಲಿಯಾಸ್ ಅಣ್ಣ ಎಂಬಾತನ ಪತ್ನಿ ಖಾತೆಗೆ ವರ್ಗಾಯಿಸಿದ್ದಾನೆ. ಆ ಬಳಿಕ ಆರೋಪಿಗಳು ಆತನನ್ನು ಬಿಡುಗಡೆ ಮಾಡಿದ್ದಾರೆ ಎಂಬುದಾಗಿ ಹೇಳಿದ್ದಾರೆ.

    CRIME 2

    ತನಿಖೆಯ ವೇಳೆ 6ನೇ ಬೆಟಾಲಿಯನ್‌ನಲ್ಲಿರುವ ಕಾನ್ಸ್ಟೇಬಲ್ ಅಮಿತ್ ಈ ಸಂಪೂರ್ಣ ಸಂಚು ರೂಪಿಸಿರುವುದು ಪತ್ತೆಯಾಗಿದೆ. ಆರೋಪಿ ವಾಹಿದ್ ಕಾರನ್ನು ಬಳಸಿಕೊಂಡಿದ್ದು, ಗೌರವ್ ಕೂಡ ಅಪರಾಧಕ್ಕೆ ಸೇರಿಕೊಂಡಿದ್ದಾನೆ. ಇದರಲ್ಲಿ ಒಬ್ಬ ಸಬ್ ಇನ್ಸ್ಪೆಕ್ಟರ್‌ ಕೂಡ ಭಾಗಿಯಾಗಿರುವ ಶಂಕೆ ಇದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಚಂಡಿಯಲ್ಲಿ ಪತ್ತೆ

    ಮೂರು ದಿನದ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಚಂಡಿಯಲ್ಲಿ ಪತ್ತೆ

    ಲಕ್ನೋ: ಇದೇ ತಿಂಗಳ ಅಕ್ಟೋಬರ್ 12ರಂದು ನಾಪತ್ತೆಯಾಗಿದ್ದ 22 ವರ್ಷದ ವಿದ್ಯಾರ್ಥಿಯ (Student) ಶವ ಶನಿವಾರ ಉತ್ತರಪ್ರದೇಶ ಗ್ರೇಟರ್ ನೋಯ್ಡಾದ (Greater Noida) ಗಾಲ್ಗೋಟಿಯಾಸ್ ವಿಶ್ವವಿದ್ಯಾಲಯ (Galgotias University) ಬಳಿಯ ಚರಂಡಿಯಲ್ಲಿ ಪತ್ತೆಯಾಗಿದೆ.

    ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳಾಗಿಲ್ಲ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಂದ ನಂತರ ಏನೆಂಬುದು ತಿಳಿಯಲಿದೆ ಎಂದು ಪೊಲೀಸರು (Police) ತಿಳಿಸಿದ್ದಾರೆ. ಇದನ್ನೂ ಓದಿ: ಧೋನಿ, ಕೊಹ್ಲಿಯನ್ನು ನೆನಪಿಸಿದ ಕೌರ್, ಮಂಧಾನ ಜೋಡಿ

    ಈ ಕುರಿತು ಮಾಹಿತಿ ನೀಡಿರುವ ಹೆಚ್ಚುವರಿ ಎಸ್ಪಿ ವಿಶಾಲ್ ಪಾಂಡೆ, ಬಿಹಾರ ಪಾಟ್ನಾ ಮೂಲದ ವಿದ್ಯಾರ್ಥಿ ಅಕ್ಟೋಬರ್ 12ರಂದು ತನ್ನ ಸ್ನೇಹಿತರೊಂದಿಗೆ ಹೊರಗೆ ಹೋಗಿದ್ದರು. ಈ ಕುರಿತು ಮಾರನೆ ದಿನ ವಿದ್ಯಾರ್ಥಿಯ ತಾಯಿ ಹಾಗೂ ಚಿಕ್ಕಮ್ಮ ದಂಕೌರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿದ್ಯಾರ್ಥಿಗಾಗಿ ಪೊಲೀಸರು (UP Police) ಹುಡುಕಾಟ ನಡೆಸುತ್ತಿದ್ದಾಗ ವಿಶ್ವವಿದ್ಯಾನಿಲಯದಿಂದ 800 ಮೀಟರ್ ದೂರದಲ್ಲೇ ಇರುವ ಚರಂಡಿಯಲ್ಲಿ ಶವ ಪತ್ತೆಯಾಗಿದೆ. ವಿದ್ಯಾರ್ಥಿ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಕಂಡುಬಂದಿಲ್ಲ. ಶವ ಇದ್ದ ಜಾಗದಲ್ಲೇ ವಾಚ್  (Watch) ಹಾಗೂ ವಾಲೆಟ್ ಪತ್ತೆಯಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಲಿವಿಂಗ್ ಟುಗೆದರ್‌ನಲ್ಲಿದ್ದ ಪ್ರಿಯತಮೆಯೊಂದಿಗೆ ಸಲುಗೆಯಿಂದಿದ್ದ ಸ್ನೇಹಿತನನ್ನೇ ಇರಿದು ಕೊಂದ

    ಲಿವಿಂಗ್ ಟುಗೆದರ್‌ನಲ್ಲಿದ್ದ ಪ್ರಿಯತಮೆಯೊಂದಿಗೆ ಸಲುಗೆಯಿಂದಿದ್ದ ಸ್ನೇಹಿತನನ್ನೇ ಇರಿದು ಕೊಂದ

    ಬೆಂಗಳೂರು: ಲಿವಿಂಗ್ ಟುಗೆದರ್‌ನಲ್ಲಿದ್ದ (Living Together) ಪ್ರಿಯಮೆಯೊಂದಿಗೆ ತನ್ನ ಗೆಳೆಯ ಸಲುಗೆಯಿಂದ ಇರುತ್ತಿದ್ದನ್ನು ನೋಡಿ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಅಮೃತಹಳ್ಳಿ ಠಾಣಾ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ನಡೆದಿದೆ.

    ನೈಜೀರಿಯ (Nigeria) ಮೂಲದ ಇಬ್ಬರು ವ್ಯಕ್ತಿಗಳ ಗಲಾಟೆ, ಓರ್ವನ ಕೊಲೆಯಲ್ಲಿ ಅಂತ್ಯಗೊಂಡಿದೆ. ಭಾನುವಾರ ರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗಲಾಟೆಯಲ್ಲಿ ಸ್ನೇಹಿತ ಸುಲೇಮಾನ್ (38)ನನ್ನು ಕೊಲೆ ಮಾಡಿರುವ ಆರೋಪಿ ವಿಕ್ಟರ್‌ನನ್ನು ಪೊಲೀಸರು (Bengaluru Police) ಬಂಧಿಸಿದ್ದಾರೆ. ಇದನ್ನೂ ಓದಿ: ವಿಶ್ವವಿದ್ಯಾಲಯದಿಂದ ಎಡವಟ್ಟು- ಹಾಲ್ ಟಿಕೆಟ್‍ನಲ್ಲಿ ವಿದ್ಯಾರ್ಥಿನಿ ಫೋಟೋ ಬದಲು ಐಶ್ವರ್ಯ ರೈ ಫೋಟೋ

    ಆರೋಪಿ ವಿಕ್ಟರ್ ತನ್ನ ಪ್ರಿಯತಮೆಯೊಂದಿಗೆ ಲಿವಿಂಗ್ ಟುಗೆದರ್‌ನಲ್ಲಿದ್ದ. ಆಗಾಗ್ಗೆ ರೂಮಿಗೆ ಬರ್ತಿದ್ದ ಸುಲೇಮಾನ್, ಆತನ ಗೆಳತಿಯ (Girlfriend) ಜೊತೆ ಸಲುಗೆಯಿಂದ ಇರುವುದನ್ನು ನೋಡಿದ್ದಾನೆ. ಇದೇ ಕಾರಣಕ್ಕೆ ಗಲಾಟೆ ಮಾಡಿ ಚಾಕು ತೆಗೆದುಕೊಂಡು ಇರಿದು ಗೆಳೆಯನನ್ನೇ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಇತ್ತ ಪ್ರಕರಣ (FIR) ದಾಖಲಿಸಿಕೊಂಡಿದ್ದ ಅಮೃತಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: CJI ಹುದ್ದೆಗೆ ನ್ಯಾಯಮೂರ್ತಿ ಚಂದ್ರಚೂಡ್ ಹೆಸರು ಶಿಫಾರಸು

    ವೀಸಾ (Visa), ಪಾಸ್‌ಪೋರ್ಟ್ (PassPort) ಬಗ್ಗೆ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಇಸ್ರೇಲ್‌ನಲ್ಲಿ ಬರ್ತ್‌ಡೆ ಪಾರ್ಟಿ – ಭಾರತ ಮೂಲದ ಯುವಕ ಕೊಲೆ

    ಇಸ್ರೇಲ್‌ನಲ್ಲಿ ಬರ್ತ್‌ಡೆ ಪಾರ್ಟಿ – ಭಾರತ ಮೂಲದ ಯುವಕ ಕೊಲೆ

    ಜೆರುಸಲೇಂ: ಇಸ್ರೇಲ್‌ಗೆ (Israel) ವಲಸೆ ಹೋಗಿದ್ದ ಈಶಾನ್ಯ ಭಾರತದ ಯುವಕನನ್ನು ಬರ್ತ್‌ಡೆ ಪಾರ್ಟಿ (Birthday Party)ಯಲ್ಲಿ ಆದ ಜಗಳದಲ್ಲಿ ಇರಿದು ಕೊಂದಿರುವ ಘಟನೆ ಇಸ್ರೇಲ್‌ನಲ್ಲಿ ನಡೆದಿದೆ.

    ಇಸ್ರೇಲ್‌ನ ಕ್ರಿಯಾತ್ ಶ್ಮೋನಾ ಎಂಬ ನಗರದಲ್ಲಿ ಈ ಘಟನೆ ನಡೆದಿದೆ. ಮೃತ ಯುವಕ ಯೋಯೆಲ್ ಲೆಹಿಂಗಾಹೆಲ್ (18) ಎಂದು ಗುರುತಿಸಲಾಗಿದ್ದು, ಒಂದು ವರ್ಷದ ಹಿಂದೆಯಷ್ಟೇ ಈತ ಇಸ್ರೇಲ್‌ಗೆ ಹೋಗಿದ್ದ ಎಂದು ವರದಿಯಾಗಿದೆ. ಇದನ್ನೂ ಓದಿ: ಸಿಮ್ ಖರೀದಿಸಲು ಬಂದ ನಟಿಯನ್ನು ಕೂಡಿ ಹಾಕಿದ ಕಚೇರಿ ಸಿಬ್ಬಂದಿ

    ಈ ವರ್ಷದ ಆರಂಭದಲ್ಲಿ ಕುಟುಂಬದ ಜತೆ ಭಾರತದಿಂದ ಇಸ್ರೇಲ್‌ಗೆ ಹೋಗಿದ್ದ. ನಾಫ್ ಹಗಲಿಲ್ ಎಂಬಲ್ಲಿನ ತನ್ನ ಮನೆಯಿಂದ ಉತ್ತರಕ್ಕೆ ಸ್ನೇಹಿತನನ್ನು ಭೇಟಿ ಮಾಡುವ ಸಲುವಾಗಿ ಆಗಮಿಸಿದ್ದ. 20ಕ್ಕೂ ಹೆಚ್ಚು ಮಂದಿ ಯುವಕರಿದ್ದ ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಲಾಟೆ ನಡೆದಿದೆ. ಇದನ್ನೂ ಓದಿ: 60 ಸಾವಿರ ಹಸುಗಳನ್ನು ಬಲಿ ಪಡೆದ ಲಂಪಿ ವೈರಸ್ ಕರ್ನಾಟಕಕ್ಕೆ ಎಂಟ್ರಿ

    KILLING CRIME

    ಶುಕ್ರವಾರ ಮುಂಜಾನೆ 7 ಗಂಟೆ ಸುಮಾರಿಗೆ ಮೃತ ಯುವಕ ಸ್ನೇಹಿತ ಕರೆ ಮಾಡಿ ಹಿಂದಿನ ರಾತ್ರಿ ನಡೆದ ಗಲಾಟೆಯಲ್ಲಿ ಯೋಯೆಲ್ ಲೆಹಿಂಗಾಹೆಲ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾನೆ. ಆದರೆ ಕುಟುಂಬದವರು ಆಸ್ಪತ್ರೆಗೆ (Hospital) ತೆರಳುವ ಮುನ್ನವೇ ಆತ ಮೃತಪಟ್ಟಿದ್ದಾದ್ದಾನೆ ಎಂಬುದಾಗಿ ಯಹೂದಿ ಸಮುದಾಯದ ಜತೆ ಕೆಲಸ ಮಾಡುತ್ತಿರುವ ಮೀರ್ ಪಲ್ಟಿಯೆಲ್ ಹೇಳಿದ್ದಾರೆ.

    ಘಟನೆ ಸಂಬಂಧ ಪೊಲೀಸರು (Israel Police) 13 ರಿಂದ 15 ವರ್ಷದೊಳಗಿನ 7 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ, ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • ಗದಗದ ನಡುರಸ್ತೆಯಲ್ಲೇ ಮಹಿಳೆಯ ಕತ್ತು ಸೀಳಿ ಕೊಲೆ

    ಗದಗದ ನಡುರಸ್ತೆಯಲ್ಲೇ ಮಹಿಳೆಯ ಕತ್ತು ಸೀಳಿ ಕೊಲೆ

    ಗದಗ: ಬೇಕರಿ ತಿನಿಸು ಖರೀದಿಸಿ ಮನೆಗೆ ಹೊರಟಿದ್ದ ಮಹಿಳೆಯ (Women) ಕತ್ತು ಕೊಯ್ದು ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

    ನಗರದ ಮುಳಗುಂದ ನಾಕಾ ಬಳಿಯ ಎಸ್.ಬಿ ಬೇಕರಿ ಎದುರು ಈ ದುರ್ಘಟನೆ ನಡೆದಿದೆ. ಶಿಂಗಟರಾಯನಕೇರಿ ತಾಂಡಾದ ಶೋಭಾ ಲಮಾಣಿ ಅಲಿಯಾಸ್ ಮೀನಾಜ್ ಬೇಪಾರಿ ಮೃತ ಮಹಿಳೆ. ಹಳೆ ವೈಷಮ್ಯವೇ ಈ ಕೊಲೆಗೆ ಕಾರಣ ಎನ್ನಲಾಗಿದೆ. ದುಷ್ಕರ್ಮಿಗಳು ಚಾಕುವಿನಿಂದ ಕತ್ತು ಸೀಳಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಇದನ್ನೂ ಓದಿ: ಬಡತನ, ನಿರುದ್ಯೋಗ, ಸಂಪತ್ತಿನ ಅಸಮಾನತೆ ಅಪಾಯಕಾರಿಯಾಗುತ್ತಿದೆ – RSS ಬೇಸರ

    ಏನಿದು ಘಟನೆ?
    2020ರ ಡಿಸೆಂಬರ್‌ನಲ್ಲಿ ಅನೈತಿಕ ಸಂಬಂಧ ಹೊಂದಿದ್ದನೆಂದು ಆಟೋ ಚಾಲಕ (AutoDriver) ರಮೇಶ್ ಹುಳಕಣ್ಣವರ್ ಎಂಬಾತನ ಕೊಲೆಯಾಗಿತ್ತು. ಮಿನಾಜ್ ಬೇಪಾರಿ ಹಾಗೂ ವಾಸಿಮ್ ಬೇಪಾರಿ ಕೊಲೆ ಮಾಡಿದ್ದರು ಎಂದು ತಿಳಿದುಬಂದಿತ್ತು. ಅದರ ಪ್ರತೀಕಾರವಾಗಿ ಮೃತ ರಮೇಶನ ಸಹೋದರರಾದ ಗಂಗಿಮಡಿ ನಿವಾಸಿ ಚೇತನಕುಮಾರ್ ಹುಳಕಣ್ಣವರ್, ಸ್ನೇಹಿತ ರೋಹನ್ ಕುಮಾರ್ ಸೇರಿ ನಡುರಸ್ತೆಯಲ್ಲಿ ಮಹಿಳೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ: PFI ಜೊತೆ SDPIಗೆ ಯಾವುದೇ ಸಂಬಂಧವಿಲ್ಲ – ಚುನಾವಣಾ ಆಯೋಗ ಸ್ಪಷ್ಟನೆ

    ಹಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಗದಗ ನ್ಯಾಯಾಲಯದಲ್ಲಿ (Gadag Court) ಕೇಸ್ ಮುಗಿಸಿ ಮಗುವಿನೊಂದಿಗೆ ಮನೆಗೆ ಹೊರಟಿದ್ದಳು. ಮನೆಗೆ ಹೋಗುವಾಗ ಬೇಕರಿಯಲ್ಲಿ ತಿನಿಸು ಖರೀದಿಸಿ ಆಟೋ ಹತ್ತುವ ಮುನ್ನ ಏಕಾಏಕಿ ದಾಳಿ ಮಾಡಿದ್ದಾರೆ. ಘಟನೆಗೆ ಗದಗ ಬೆಟಗೇರಿ ಅವಳಿ ನಗರದ ಜನ ಬೆಚ್ಚಿಬಿಳ್ಳುವಂತಾಗಿದೆ. ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮೃತ ಮಹಿಳೆ ಶೋಭಾ ಲಮಾಣಿ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಿ ಮಿನಾಜ್ ಬೇಪಾರಿ ಆಗಿ ಮತಾಂತರ ಆಗಿದ್ದಳು. ಸದ್ಯ ರಾಧಾಕೃಷ್ಣನ್ ನಗರದಲ್ಲಿ ವಾಸಿಮ್ ಬೇಪಾರಿಯೊಂದಿಗೆ ವಾಸವಾಗಿದ್ದರು.

    KILLING CRIME

    ಸ್ಥಳಕ್ಕೆ ಗದಗ ಎಸ್ಪಿ ಶಿವಪ್ರಕಾಶ್ ದೇವರಾಜು, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಜಯಂತ ಗೌಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗದಗ ಶಹರ ಪೊಲೀಸ್ ಠಾಣೆಯಲ್ಲಿ (Gadag Police Station) ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲಿ ನರಬಲಿ – 6 ವರ್ಷದ ಬಾಲಕನ ಕತ್ತುಸೀಳಿ ಕೊಂದ ಇಬ್ಬರು ಅರೆಸ್ಟ್

    ದೆಹಲಿಯಲ್ಲಿ ನರಬಲಿ – 6 ವರ್ಷದ ಬಾಲಕನ ಕತ್ತುಸೀಳಿ ಕೊಂದ ಇಬ್ಬರು ಅರೆಸ್ಟ್

    ನವದೆಹಲಿ: 6 ವರ್ಷದ ಬಾಲಕನ ಕತ್ತು ಸೀಳಿ ನರಬಲಿ ನೀಡಿರುವ ಘಟನೆ ದಕ್ಷಿಣ ದೆಹಲಿಯ (NewDelhi) ಲೋಧಿ ಕಾಲೊನಿಯಲ್ಲಿ ನಡೆದಿದ್ದು, ಇಬ್ಬರು ಆರೋಪಿ (Accused) ಗಳನ್ನು ಪೊಲೀಸರು (Police) ಬಂಧಿಸಿದ್ದಾರೆ.

    ಬಿಹಾರ (Bihar) ಮೂಲದ ವಿಜಯ್ ಕುಮಾರ್, ಅಮರ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ಮತ್ತು ಬಾಲಕನ ಪೋಷಕರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಒಂದೇ ಕೊಳೆಗೇರಿಯಲ್ಲಿ ವಾಸವಾಗಿದ್ದರು. ವಿಜಯ್ ಮತ್ತು ಅಮರ್ ಅಪರಾಧ ಎಸಗುವಾಗ ಮಾದಕ ವಸ್ತು ಸೇವಿಸಿದ್ದರು. ಪ್ರಸಾದ ಸೇವಿಸಿದ ಬಳಿಕ ಶ್ರೇಯಸ್ಸಾಗಲು ಹುಡುಗನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಶನಿವಾರ ಊಟ ಮಾಡಿದ ನಂತರ ಭಜನೆ ಕೇಳುತ್ತಿದ್ದೆವು. ರಾತ್ರಿ 10:30ರ ಸುಮಾರಿಗೆ ಬಾಲಕ ತನ್ನ ಶೆಡ್‌ಗೆ ಹಿಂತಿರುಗುತ್ತಿದ್ದಾಗ ಆರೋಪಿಗಳು ಬಾಲಕನನ್ನು ತಮ್ಮ ಅಡುಗೆ ಸ್ಥಳಕ್ಕೆ ಕರೆದು ಮೊದಲು ತಲೆಯ ಮೇಲೆ ಹಲ್ಲೆ ನಡೆಸಿ ನಂತರ ಕತ್ತು ಸೀಳಿ ಕೊಂದಿದ್ದಾರೆ. ಬಳಿಕ ಮಗನ ಮೃತದೇಹ ಕಂಡು ಗಾಬರಿಗೊಂಡಿದ್ದಾರೆ ಎಂದು ಬಾಲಕನ ತಂದೆ ದೂರಿನಲ್ಲಿ ತಿಳಿಸಿರುವುದಾಗಿ ಉಪ ಪೊಲೀಸ್ ಆಯುಕ್ತ (ದಕ್ಷಿಣ) ಚಂದನ್ ಚೌಧರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಗಳ ಆಗಮನದ ಖುಷಿಯಲ್ಲಿ ಮೇಘನಾ ರಾಜ್

    KILLING CRIME

    ಬಳಿಕ ವಿಧಿವಿಜ್ಞಾನ (Forensic Science) ತಜ್ಞರು ಘಟನಾಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಏಮ್ಸ್ (AIIMS) ಟ್ರಾಮಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ. ಬಾಲಕನ ತಂದೆಯ ಹೇಳಿಕೆಯನ್ನು ಆಧರಿಸಿ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 302, 34ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • 10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ – ಕಾಮುಕನಿಗೆ 142 ವರ್ಷ ಜೈಲು

    10 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ – ಕಾಮುಕನಿಗೆ 142 ವರ್ಷ ಜೈಲು

    ತಿರುವನಂತಪುರಂ: 10 ವರ್ಷದ ಬಾಲಕಿಗೆ 2 ವರ್ಷಗಳ ಕಾಲ ಲೈಂಗಿಕ ಕಿರುಕುಳ ನೀಡಿದ್ದ 41 ವರ್ಷದ ಕಾಮುಕನಿಗೆ ಕೇರಳದ ಪತ್ತನಂತಿಟ್ಟದ ಪೋಕ್ಸೋ ನ್ಯಾಯಾಲಯವು (Pocso Court) 142 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಿದೆ.

    ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ನ್ಯಾಯಾಲಯವು ವ್ಯಕ್ತಿಗೆ ಶಿಕ್ಷೆ ವಿಧಿಸಿದೆ. ಅಲ್ಲದೇ ಆರೋಪಿ ದಂಡ ಪಾವತಿಸದೇ ಇದ್ದರೆ ಇನ್ನೂ ಮೂರು ವರ್ಷಗಳ ಕಾಲ ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ. ಇದು ಜಿಲ್ಲೆಯ ಪೋಕ್ಸೋ ಪ್ರಕರಣಗಳಲ್ಲೇ ಅತ್ಯಂತ ಗರಿಷ್ಠ ಅವಧಿಯ ಶಿಕ್ಷೆಯಾಗಿದೆ. ಇದನ್ನೂ ಓದಿ: PFI ಬ್ಯಾನ್ ಮಾಡಿದ್ದಕ್ಕೆ ಕಾಂಗ್ರೆಸ್‍ನ ಕೆಲವರು ಒಂದೇ ಕಣ್ಣಿನಲ್ಲಿ ಅಳುತ್ತಿದ್ದಾರೆ: ತೇಜಸ್ವಿ ಸೂರ್ಯ

    ಆನಂದನ್ ಪಿ.ಆರ್. ಅಲಿಯಾಸ್ ಬಾಬು ಎಂದು ಗುರುತಿಸಲಾದ ಅಪರಾಧಿಯು 2019 ಮತ್ತು 2021ರ ನಡುವೆ 10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದನು. ಆಕೆ ಮೇಲೆ ಅನೇಕ ಬಾರಿ ಅಮಾನುಷವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದನು. ಅದಕ್ಕಾಗಿ ತಿರುವಲ್ಲಾ ಪೊಲೀಸರು (Police) ಆತನ ವಿರುದ್ಧ ಪ್ರಕರಣ ದಾಖಲಿಸಿದ್ದರು.

    ಪ್ರಾಸಿಕ್ಯೂಷನ್ ಪರವಾಗಿ ಪ್ರಧಾನ ಪೋಕ್ಸೋ (POCSO) ಪ್ರಾಸಿಕ್ಯೂಟರ್ ವಕೀಲ (Advocate) ಜೇಸನ್ ಮ್ಯಾಥ್ಯೂಸ್ ಹಾಜರಾದ ಪ್ರಕರಣದಲ್ಲಿ ಸಾಕ್ಷಿ ಹೇಳಿಕೆಗಳು, ವೈದ್ಯಕೀಯ ದಾಖಲೆಗಳು ಮತ್ತು ಸಾಕ್ಷ್ಯಗಳು ಪ್ರಾಸಿಕ್ಯೂಷನ್ ಪರವಾಗಿ ಪ್ರಬಲವಾಗಿದ್ದವು. ಪತ್ತನಂತಿಟ್ಟ ಜಿಲ್ಲಾ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಇದೆಲ್ಲವನ್ನೂ ಪರಿಶೀಲಿಸಿ ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿದೆ. ಇದನ್ನೂ ಓದಿ: ಕಾಂಗ್ರೆಸ್ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ತಲುಪಿದೆ – ಪ್ರಹ್ಲಾದ್ ಜೋಶಿ

    ಒಟ್ಟು 142 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಪೋಕ್ಸೋ ಅಡಿಯಲ್ಲಿ ಪಟ್ಟಿ ಮಾಡಲಾದ ಅಪರಾಧಗಳಿಗಾಗಿ ಒಟ್ಟು 5 ಲಕ್ಷ ರೂ. ಶಿಕ್ಷೆ ವಿಧಿಸಲಾಗಿದೆ ಎಂದು ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಗು ಏಕೆ ಕಪ್ಪಾಗಿದೆ ಎಂದು ಪತ್ನಿಯನ್ನೇ ಕೊಂದ ಪತಿ- ಎರಡೂವರೆ ವರ್ಷದ ಮಗುವಿನಿಂದ ಬಯಲಾಯ್ತು ರಹಸ್ಯ

    ಮಗು ಏಕೆ ಕಪ್ಪಾಗಿದೆ ಎಂದು ಪತ್ನಿಯನ್ನೇ ಕೊಂದ ಪತಿ- ಎರಡೂವರೆ ವರ್ಷದ ಮಗುವಿನಿಂದ ಬಯಲಾಯ್ತು ರಹಸ್ಯ

    ಅಮರಾವತಿ: ಪತ್ನಿ (Wife) ಹಾಗೂ ತನ್ನ ಬಣ್ಣ ಬಿಳಿಯದ್ದಾಗಿದ್ದರೂ ಮಗುವಿನ ಬಣ್ಣ ಮಾತ್ರ ಏಕೆ ಕಪ್ಪಾಗಿದೆ ಎಂದು ಪತ್ನಿಯ ಶೀಲ ಶಂಕಿಸಿ ಪತಿ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

    ಒಡಿಶಾದ ಉಮ್ಮರ್‌ಕೋಟ್‌ನ ಸಿಲಾಟಿಗಾಂವ್ ಗ್ರಾಮದ ಮಾಣಿಕ್ ಘೋಷ್ ಇಂತಹದ್ದೊಂದು ಕೃತ್ಯ ಎಸಗಿದ್ದಾನೆ. ಈತನ ಕೃತ್ಯಕ್ಕೆ ಬಲಿಯಾದವರು ಕರಗಾಂವ್ ಗ್ರಾಮದ ಲಿಪಿಕಾ ಮಂಡಲ್. ಮೊದಲು ಸಹಜ ಸಾವು ಎಂದೇ ಬಿಂಬಿತವಾಗಿದ್ದ ಈ ಸಾವಿನ ಪ್ರಕರಣ ನಂತರದಲ್ಲಿ ಕೊಲೆ ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಕತಾರ್ ವಿಶ್ವದ ಬೆಸ್ಟ್ ಏರ್‌ಲೈನ್ – ಟಾಪ್ 20 ಸಂಸ್ಥೆಗಳಲ್ಲಿ ಕತಾರ್‌ಗೆ No-1 ಸ್ಥಾನ

    ಏನಿದು ಮರ್ಡರ್ ಮಿಸ್ಟ್ರಿ?: ಕಳೆದ 7 ವರ್ಷಗಳ ಹಿಂದೆ ಮಾಣಿಕ್ ಘೋಷ್ ಹಾಗೂ ಲಿಪಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ (Marriage) ನಂತರ ಇಬ್ಬರೂ ಉದ್ಯೋಗಕ್ಕಾಗಿ ಆಂಧ್ರಪ್ರದೇಶದ ಕಾಕಿನಾಡಕ್ಕೆ ವಲಸೆ ಬಂದಿದ್ದರು. ಎರಡೂವರೆ ವರ್ಷಗಳ ಹಿಂದೆ ಈ ದಂಪತಿಗೆ ಹೆಣ್ಣು ಮಗು (Daughter) ಹುಟ್ಟಿತ್ತು. ಆದರೆ ಇಬ್ಬರೂ ಬೆಳ್ಳಗಿದ್ದರೂ ಮಗು ಮಾತ್ರ ಏಕೆ ಕಪ್ಪಗೆ ಇದೆ ಎಂದು ಘೋಷ್ ಸದಾ ಪತ್ನಿಯ ಬಗ್ಗೆ ಸಂದೇಹಪಡುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಪತಿಯ ದೌರ್ಜನ್ಯದಿಂದ ಬೇಸತ್ತ ಲಿಪಿಕಾ ತನ್ನ ತವರು ಮನೆಗೆ ಬಂದಿದ್ದಳು. ನಂತರ ಕುಟುಂಬಸ್ಥರು ಇಬ್ಬರನ್ನೂ ಸಮಾಧಾನಪಡಿಸಿ ವಾಪಸ್ ಕಳುಹಿಸಿದ್ದರು. ಇದನ್ನೂ ಓದಿ: ಡಿಸೆಂಬರ್‌ನಲ್ಲಿ ಮೋದಿಯವರಿಂದ್ಲೇ ಧಾರವಾಡ IIT ಕ್ಯಾಂಪಸ್‌ ಉದ್ಘಾಟನೆ – ಜೋಶಿ

    ಆದರೆ ಇದೇ ತಿಂಗಳ 18ರಂದು ರಾತ್ರಿ ಲಿಪಿಕಾಗೆ ಮೂರ್ಛೆ ಹೋಗಿರುವುದಾಗಿ ಹೇಳಿದ್ದ ಪತಿ, ಅವರನ್ನು ಆಸ್ಪತ್ರೆಗೆ (Hospital) ಕರೆದೊಯ್ದಿದ್ದ. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು. ಮೊದಲು ಇದು ಸಹಜ ಸಾವು ಎನ್ನಲಾಗಿತ್ತು. ನಂತರ ಕುತ್ತಿಗೆಯಲ್ಲಿ ಗಾಯದ ಗುರುತು ಕಂಡುಬಂದಿದ್ದು ಸಂದೇಹಕ್ಕೆ ಎಡೆ ಮಾಡಿಕೊಟ್ಟಿತ್ತು. ಆದರೆ ಪತಿಯೇ ಈ ಕೊಲೆ ಮಾಡಿದ್ದಾನೆ ಎಂಬ ಬಗ್ಗೆ ಪುರಾವೆಗಳು ಇರಲಿಲ್ಲ. ನಂತರ ಸಾಕ್ಷಿ ಹೇಳಿದ್ದೆ ಪುಟ್ಟ ಕಂದಮ್ಮ. ಅಮ್ಮನ ಸಾವಿನ ಬಳಿಕ ಅಜ್ಜಿ ಮನೆಗೆ ಬಂದಿದ್ದ ಎರಡೂವರೆ ವರ್ಷದ ಮಗು, ಅಜ್ಜ-ಅಜ್ಜಿಗೆ ಅಂದು ತಾನು ಕಂಡಿರುವ ದೃಶ್ಯ ವಿವರಿಸಿದೆ. ಅಮ್ಮನ ಗಂಟಲನ್ನು ಎರಡೂ ಕೈಗಳಿಂದ ಅಪ್ಪ ಹಿಡಿದುಕೊಂಡಿದ್ದು, ಅಮ್ಮ ಒದ್ದಾಡಿದ್ದು, ನಂತರ ಅಮ್ಮ ಏನೂ ಮಾತನಾಡದೇ ಇದ್ದುದನ್ನು ಮಗು ವಿವರಿಸಿದೆ.

    ಅಲ್ಲಿಯವರೆಗೂ ಮಗಳು ಪ್ರಜ್ಞೆ ತಪ್ಪಿ ಸತ್ತಿದ್ದಾಳೆ ಎಂದುಕೊಂಡಿದ್ದ ಅವರಿಗೆ ಅಳಿಯನೇ ಮಗಳನ್ನು ಕೊಂದಿದ್ದಾನೆ ಎಂಬುದು ಮೊಮ್ಮಗಳ ಮಾತಿನ ಮೂಲಕ ಅರ್ಥವಾಗಿ ಪೊಲೀಸರಿಗೆ ದೂರು ದಾಖಲು ಮಾಡಿದ್ದಾರೆ. ಪೊಲೀಸರ (Police) ಬಳಿ ಕೂಡ ಮಗು ಅಂದು ನಡೆದ ಘಟನೆ ವಿವರಿಸಿದೆ. ಪತಿಯನ್ನು ಪೊಲೀಸರು ಬಂಧಿಸಿದಾಗ ಸತ್ಯ ಒಪ್ಪಿಕೊಂಡಿದ್ದಾನೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]