Tag: crime

  • ಬೇರೆ ಯುವಕನೊಂದಿಗೆ ಮದುವೆಯಾದ ಪ್ರೇಯಸಿಯನ್ನ ಇರಿದು ಕೊಂದ ಭಗ್ನಪ್ರೇಮಿ

    ಬೇರೆ ಯುವಕನೊಂದಿಗೆ ಮದುವೆಯಾದ ಪ್ರೇಯಸಿಯನ್ನ ಇರಿದು ಕೊಂದ ಭಗ್ನಪ್ರೇಮಿ

    ಚಿಕ್ಕಬಳ್ಳಾಪುರ: ಪ್ರೀತಿ-ಪ್ರೇಮ (Love) ಅಂತಾ ಸುತ್ತಾಡಿ ಕೊನೆಗೆ ಮನೆಯವರು ನೋಡಿದ ಹುಡುಗನನ್ನೇ ವರಿಸಿದ ಪ್ರಿಯತಮೆಯನ್ನು ಭಗ್ನಪ್ರೇಮಿಯೊಬ್ಬ ಚಾಕುನಿಂದ ಇರಿದು ಕೊಂದಿರುವ (Murder) ಘಟನೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

    ಸೌಮ್ಯ (23) ಹತ್ಯೆಗೊಳಗಾದ ಗೃಹಿಣಿಯಾಗಿದ್ದು, ಸುಬ್ರಹ್ಮಣ್ಯ ಕೊಲೆ ಮಾಡಿದ ಪಾಗಲ್ ಪ್ರೇಮಿ. ಇದನ್ನೂ ಓದಿ: ಶ್ರೀಯಾ ಶರಣ್ ಜೊತೆ ನಾಳೆ ಬೆಂಗಳೂರಿಗೆ ಬರಲಿದ್ದಾರೆ ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ

    ಏನಿದು ಪ್ರಕರಣ?
    ಮೃತ ಸೌಮ್ಯ ಹಾಗೂ ಸುಬ್ರಹ್ಮಣ್ಯ ಇಲ್ಲಿನ ನಾಗವಾರ ಬಳಿಯ ಕಾಫಿ ಡೇ (Coffee Day) ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು (Lovers). ಆದರೆ ಸೌಮ್ಯಾಳಿಗೆ ಕಳೆದ 15 ದಿನಗಳ ಹಿಂದೆಯಷ್ಟೇ ಬೇರೆ ಯುವಕನೊಂದಿಗೆ ಮದುವೆ ನಡೆದಿತ್ತು. ಮದುವೆ ಬಳಿಕ ತವರು ಮನೆಗೆ ಸೌಮ್ಯ ಬಂದಿರುವ ವಿಷಯ ತಿಳಿದುಕೊಂಡ ಸುಬ್ರಹ್ಮಣ್ಯ ಮನೆಯಲ್ಲೇ ಹತ್ಯೆ ಮಾಡಲು ಸ್ಕೆಚ್ ಹಾಕಿದ್ದ. ನಿನ್ನೆ ತಡರಾತ್ರಿ ಯುವತಿ ಗ್ರಾಮಕ್ಕೆ ಆಗಮಿಸಿ ಮನೆಯವರು ಗಣೇಶನ ಪೂಜೆಗೆ (Ganesha Puja) ತೆರಳಿದ್ದ ವೇಳೆ ಏಕಾಂಗಿಯಾಗಿದ್ದ ಸೌಮ್ಯಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ಇದನ್ನೂ ಓದಿ: ಎಕ್ಸ್‌ಬಾಯ್‌ಫ್ರೆಂಡ್‌ಗೆ ಮತ್ತೆ ಲವ್ ಯೂ ಎಂದ ಜಾನ್ವಿ ಕಪೂರ್

    ಪೂಜೆ ಮುಗಿಸಿ ಬಂದಕೂಡಲೇ ಮನೆಯಲ್ಲಿ ರಕ್ತಸಿಕ್ತಳಾಗಿ ಬಿದ್ದಿದ್ದ ಸೌಮ್ಯಾಳನ್ನು ನೋಡಿ ಮನೆಯವರು ಬೆಚ್ಚಿ ಬಿದ್ದಿದ್ದಾರೆ. ಬಳಿಕ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಸೌಮ್ಯ ಮೃತಪಟ್ಟಿದ್ದಾಳೆ. ಇತ್ತ ಸುಬ್ರಹ್ಮಣ್ಯ ಸಹ ವಿಷ ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿದ್ದು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆದರೆ ಸುಬ್ರಹ್ಮಣ್ಯ ಆಸ್ಪತ್ರೆಗೆ ದಾಖಲಾದ ಮಾಹಿತಿ ಇನ್ನೂ ಗಮನಕ್ಕೆ ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ವಿಜಯಪುರ ಪೊಲೀಸ್ ಠಾಣೆಯಲ್ಲಿ (Police Case) ಪ್ರಕರಣ ದಾಖಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ- ಸಾವಿನಲ್ಲೂ ಸಾರ್ಥಕತೆ

    ಪ್ರೇಮ ವೈಫಲ್ಯದಿಂದ ಮನನೊಂದು ಯುವಕ ಆತ್ಮಹತ್ಯೆ- ಸಾವಿನಲ್ಲೂ ಸಾರ್ಥಕತೆ

    ಶಿವಮೊಗ್ಗ: ಪ್ರೇಮ (Love) ವೈಫಲ್ಯದಿಂದ ಮನನೊಂದ ಯುವ ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದಲ್ಲಿ ನಡೆದಿದೆ.

    ಹಿತ್ತಲ ಗ್ರಾಮದ ಮದನ್ ಕುಮಾರ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಡೆತ್ ನೋಟ್ ಬರೆದಿಟ್ಟು ಕಳೆದ ನಾಲ್ಕು ದಿನಗಳ ಹಿಂದೆಯೇ ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿದ್ದಾನೆ. ಇದನ್ನೂ ಓದಿ: ಕೊಟ್ಟ ಮಾತಿನಂತೆ ಕಿರುತೆರೆ ನಟಿ ಸ್ವಪ್ನಾ ಪತಿಗೆ ಕೆಲಸ ಕೊಡಿಸಿದ ಗೋಲ್ಡನ್ ಸ್ಟಾರ್ ಗಣೇಶ್

    ಮದನ್ ಕುಮಾರ್ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಮನೆಯವರು ಯುವಕನ ವಿರುದ್ಧ ಅತ್ಯಾಚಾರ ಹಾಗೂ ಕಿರುಕುಳ ನೀಡುತ್ತಿದ್ದ ಆರೋಪ ಹೊರಿಸಿ, ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಗೆ (Police Station) ದೂರು ನೀಡಿದ್ದರು. ಈ ಸಂಬಂಧ ಪ್ರಕರಣವೂ ದಾಖಲಾಗಿತ್ತು. ಯುವತಿ ಮನೆಯವರ ಕಿರುಕುಳದಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ರಾಜ್ಯದಲ್ಲಿ ಯೋಗಿ ಮಾದರಿ ಆಡಳಿತ ಬೇಕು ಎಂದು ಪ್ರತಿಪಾದಿಸುವವರು ಅತ್ಯಾಚಾರಿಗಳ ಸಮರ್ಥಕರಿದ್ದಂತೆ: ದಿನೇಶ್ ಗುಂಡೂರಾವ್

    ಆತ್ಮಹತ್ಯೆಗೂ ಮುನ್ನ ಯುವಕ ತನ್ನ ಅಂಗಾಂಗ ದಾನ ಮಾಡುವಂತೆ ಡೆತ್ ನೋಟ್ ಬರೆದಿಟ್ಟಿದ್ದಾನೆ. ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ. ತನ್ನ ಪ್ರೇಮ ವೈಫಲ್ಯದ ನಡುವೆಯೂ ಯುವಕ ಮಾನವೀಯತೆ ಮೆರೆದಿದ್ದಾನೆ.

    Live Tv
    [brid partner=56869869 player=32851 video=960834 autoplay=true]

  • ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಳ್ಳಿ – ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ರು

    ಸರಗಳ್ಳತನಕ್ಕೆ ಯತ್ನಿಸಿ ಸಿಕ್ಕಿಬಿದ್ದ ಕಳ್ಳಿ – ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ರು

    ಚಿಕ್ಕಬಳ್ಳಾಪುರ: ಯುವಕರು, ಪುರುಷರಿಂದಲೇ ಸರಗಳ್ಳತನಕ್ಕೆ (Chain Snatch) ಯತ್ನಿಸುತ್ತಿದ್ದ ದೃಶ್ಯಗಳು ಕಂಡು ಬರುವುದು ಸಾಮಾನ್ಯ. ಆದರೆ ಈಗ ಮಹಿಳೆಯೊಬ್ಬಳು (Women) ಸರ ಕದಿಯಲು ಯತ್ನಿಸಿ, ಗ್ರಾಮಸ್ಥರಿಂದಲೇ ಗೂಸಾ ತಿಂದಿರುವ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯಲ್ಲಿ ನಡೆದಿದೆ.

    ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಬಳಿ ಮಾಂಗಲ್ಯ ಸರ ಕಸಿದು ಪರಾರಿಯಾಗಲು ಯತ್ನಿಸಿ ಸಿಕ್ಕಿಬಿದ್ದ ಕಳ್ಳಿಗೆ ಗ್ರಾಮಸ್ಥರೇ ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ (Police) ಒಪ್ಪಿಸಿದ್ದಾರೆ. ಸರಗಳ್ಳಿಯನ್ನು ನಂದಿನಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ವಿರೋಧದ ಮಧ್ಯೆ ಮತಾಂತರ ನಿಷೇಧ ಮಸೂದೆ ಅಂಗೀಕಾರ

    crime

    ಮಧುರೈ-ಹೆಸರುಘಟ್ಟ ರಸ್ತೆಯಲ್ಲಿ ಬೆಳಿಗ್ಗೆಯಿಂದಲೂ ಬೈಕ್ (Bike) ಸವಾರನೊಂದಿಗೆ ಮಹಿಳೆ ಸುತ್ತಾಡುತ್ತಿದ್ದಳು. ನಂತರ ಕನಸವಾಡಿ ಗ್ರಾಮದಲ್ಲಿ ವೃದ್ಧೆಯ ಮಾಂಗಲ್ಯ ಸರಕ್ಕೆ ಕೈ ಹಾಕಿ ಕಿತ್ತುಕೊಳ್ಳಲು ಯತ್ನಿಸಿ, ಬೈಕ್‌ನಿಂದ ಕೆಳಕ್ಕೆ ಬಿದ್ದಿದ್ದಾಳೆ. ಈ ವೇಳೆ ಬೈಕ್ ಸವಾರ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಸಿಕ್ಕಿಬಿದ್ದ ಸರಗಳ್ಳಿಗೆ ಗ್ರಾಮಸ್ಥರು ಥಳಿಸಿ, ದೊಡ್ಡಬೆಳವಂಗಲ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಪ್ರೇಮ್-ಧ್ರುವ ಹೊಸ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಲಿದ್ದಾರೆ ತೌಫಿಕ್ ಖುರೇಷಿ

    ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ (FIR) ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ವೈದ್ಯೆ ದುರ್ಮರಣ

    ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ವೈದ್ಯೆ ದುರ್ಮರಣ

    ಮುಂಬೈ: ಮಹಾರಾಷ್ಟ್ರದ (Maharashtra) ಪುಣೆ ಬಳಿಯಿರುವ ಪಿಂಪ್ರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಮಂಗಳೂರು ಮೂಲದ ವೈದ್ಯೆ (Doctor) ದುರ್ಮರಣಕ್ಕೀಡಾದ ಘಟನೆ ನಡೆದಿದೆ.

    ಮೃತ ವೈದ್ಯೆಯನ್ನು (Doctor) ಜೈಶಾ (27) ಎಂದು ಗುರುತಿಸಲಾಗಿದೆ. ಮಂಗಳೂರು ಮೂಲದ ಜಾನ್ ಥಾಮಸ್ ಮತ್ತು ಉಷಾ ಥಾಮಸ್ ದಂಪತಿಯ ಪುತ್ರಿ ಜೈಶಾ, ರಿಮಿನ್ ಆರ್. ಕುರಿಯಾಕೋಸ್ ನನ್ನು ವಿವಾಹವಾಗಿದ್ದರು. (Marriage) ಇದನ್ನೂ ಓದಿ: ಓಯೋ ರೂಂಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ – ಆರೋಪಿಗಳ ಬಂಧನ

    ಜೈಶಾ ಮಂಗಳವಾರ ಮಧ್ಯಾಹ್ನದ ವಿರಾಮದ ಸಮಯದಲ್ಲಿ ಮನೆಗೆ ತೆರಳಿ, ಊಟ ಮುಗಿಸಿಕೊಂಡು ಕ್ಲಿನಿಕ್‌ಗೆ (Clinic) ಹಿಂದಿರುಗುತ್ತಿದ್ದರು. ಈ ವೇಳೆ ಟ್ರಕ್‌ವೊಂದು ಜೈಶಾ (Jaisha) ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ, ಪರಿಣಾಮ ಸ್ಥಳದಲ್ಲೇ ಜೈಶಾ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಉದ್ಘಾಟನೆಗೆ ರಾಷ್ಟ್ರಪತಿ; ಜಂಬೂಸವಾರಿ ಮೆರವಣಿಗೆಗೆ ಮೋದಿ! ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಮೈಸೂರು

    CRIME 2

    ಘಟನೆಯ ಬಳಿಕ ಮೃತದೇಹವನ್ನು ಪುಣೆಯಲ್ಲಿರುವ ಮನೆಗೆ ತೆಗೆದುಕೊಂಡು ಹೋಗಲಾಯಿತು. ಬಳಿಕ ಅಲ್ಲಿಂದ ಮಂಗಳೂರಿಗೆ ಸ್ಥಳಾಂತರ ಮಾಡಲಾಗಿದ್ದು ಬುಧವಾರ ಅಂತ್ಯಕ್ರಿಯೆ ನಡೆದಿದೆ.

    ಟ್ರಕ್ ಚಾಲಕ ಡಿಕ್ಕಿ ಹೊಡೆದು, ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗೆ ಶೋಧ ಆರಂಭಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • UP ಬಿಜೆಪಿ ಶಾಸಕನ ತಾಯಿಯ ಕಿವಿ ಕತ್ತರಿಸಿ ಓಲೆ ಕದ್ದ ಕಳ್ಳರು

    UP ಬಿಜೆಪಿ ಶಾಸಕನ ತಾಯಿಯ ಕಿವಿ ಕತ್ತರಿಸಿ ಓಲೆ ಕದ್ದ ಕಳ್ಳರು

    ಲಕ್ನೋ: ಬಿಜೆಪಿ (BJP) ಶಾಸಕ ಪ್ರದೀಪ್ ಚೌಧರಿ (Pradeep Chaudhary) ಅವರ 80 ವರ್ಷದ ತಾಯಿಯ ಕಿವಿ ಕತ್ತರಿಸಿ ಕಿವಿಯೋಲೆಗಳನ್ನು ದೋಚಿರುವ ಭಯಾನಕ ಘಟನೆ ಉತ್ತರಪ್ರದೇಶದ (Uttarpradeh) ಗಾಜಿಯಾಬಾದ್‌ನಲ್ಲಿ ನಡೆದಿದೆ.

    ಕಿವಿಯಿಂದ ಎಷ್ಟು ಎಳೆದರೂ ಓಲೆಗಳು ಬರುತ್ತಿಲ್ಲವೆಂದು ಕಟ್ಟರ್‌ನಿಂದ ಕಿವಿಗಳನ್ನೇ ಕತ್ತರಿಸಿ ಓಲೆಗಳನ್ನು ದೋಚಿರುವ ಘಟನೆ ಗಾಜಿಯಾಬಾದ್‌ನ ವಿಜಯನಗರ ಪೊಲೀಸ್ ಠಾಣಾ (Police Station) ವ್ಯಾಪ್ತಿಯಲ್ಲಿಂದು ನಡೆದಿದೆ. ಇದನ್ನೂ ಓದಿ: ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ

    ಇಲ್ಲಿಗೆ ಸಮೀಪದಲ್ಲೇ ಇರುವ ಪ್ರತಾಪ್ ವಿಹಾರ್‌ನಲ್ಲಿ ಶಾಸಕನ ತಾಯಿ ಸಂತೋಷ್ ದೇವಿ ಅವರು ವಾಯುವಿಹಾರಕ್ಕೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ ಎಂದು ಶಾಸಕನ ಸಹೋದರ ಜೀತ್‌ಪಾಲ್ ಚೌದರಿ ತಿಳಿಸಿದ್ದಾರೆ.

    ಏನಿದು ಘಟನೆ? – ಇಂದು ಬೆಳಗ್ಗೆ ಸಂತೋಷ್ ದೇವೆ ವಾಯುವಿಹಾರಕ್ಕಾಗಿ ಹೋಗುತ್ತಿದ್ದರು. ಇಲ್ಲಿನ ಡಿಪಿಎಸ್ ವೃತ್ತದ ಬಳಿ ಹೋಗುತ್ತಿರಬೇಕಾದರೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆಕೆಗೆ ಚಾಕು ತೋರಿಸಿ ಚಿನ್ನ, ಕಿವಿಯೋಲೆಗಳನ್ನು ಕೊಡುವಂತೆ ಒತ್ತಾಯಿಸಿದ್ದಾರೆ. ಆಕೆ ಜೋರಾಗಿ ಕೂಗಿದ್ದರಿಂದ ಕಿವಿಯೋಲೆ ಕಸಿದುಕೊಳ್ಳಲು ಪ್ರಯತ್ನಿಸಿದ್ದಾರೆ, ಕಿವಿ ಸಮೇತ ಹಿಡಿದು ಎಳೆದಾಡಿದ್ದಾರೆ. ಆದರೂ ಓಲೆ ಬಂದಿಲ್ಲ. ಕೊನೆಗೆ ಕಟ್ಟರ್‌ನಿಂದ ಕಿವಿಗಳನ್ನೇ ಕತ್ತರಿಸಿ ಓಲೆಯನ್ನು ದೋಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಅಲ್ಲಿ ಪ್ರವಾಹ ಆಗಿಲ್ಲ, ಆ ಮೋರಿ ಎಲ್ಲಿದೆ, ಎಲ್ಲಿಗೆ ಹೋಗಿ ತಲುಪುತ್ತೆ ಗೊತ್ತಿಲ್ಲ: ಹ್ಯಾರಿಸ್

    ಬಳಿಕ ಅಜ್ಜಿಯ ಚೀರಾಟದ ಕೇಳಿ ಅಲ್ಲಿಗೆ ಧಾವಿಸಿದ ಸ್ಥಳೀಯರು ರಕ್ತಸ್ರಾವವಾಗುತ್ತಿರುವುದನ್ನು ಕಂಡು ಆಸ್ಪತ್ರೆಗೆ ಸೇರಿಸಿದ್ದಾರೆ. ನಂತರ ಪೊಲೀಸರು ಸಂತೋಷ್ ದೇವಿ ಅವರಿಂದ ಹೇಳಿಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಲಕಿ ಮೇಲೆ ಅತ್ಯಾಚಾರ – ಆದ್ರೂ ಬೇರೆಯವರ ಜೊತೆ ಸೆಕ್ಸ್ ಮಾಡು ಅಂದ್ಲು ಆರೋಪಿ ತಾಯಿ

    ಭೋಪಾಲ್: 22 ವರ್ಷದ ಯುವಕನೊಬ್ಬ ಹದಿಹರಿಯದ ಹುಡುಗಿ (Teen Girl) ಮೇಲೆ ಅತ್ಯಾಚಾರ ಎಸಗಿದರೆ, ಆರೋಪಿ ತಾಯಿ ಅದೇ ಸಂತ್ರಸ್ತೆಗೆ ಮತ್ತೊಬ್ಬರ ಜತೆಗೆ ದೈಹಿಕ ಸಂಪರ್ಕ ಮಾಡುವಂತೆ ಬಲವಂತ ಮಾಡಿದ ಘಟನೆ ಮಧ್ಯಪ್ರದೇಶದ (Madhya Pradesh) ಭೋಪಾಲ್‌ನಲ್ಲಿ (Bhopal) ನಡೆದಿದೆ.

    ಮಹಾರಾಷ್ಟ್ರ ನಾಗ್ಪುರದ (Maharastra Nagpur) ಹುಡುಗಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ (Accused) ಹಾಗೂ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸಿದ ತಾಯಿ ವಿರುದ್ಧ ಪ್ರಕರಣ (FIR) ದಾಖಲಾಗಿದ್ದು, ಪೊಲೀಸರು (Police) ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ರೌಡಿಸಂನಲ್ಲಿ ಹವಾ ಮೆಂಟೇನ್ ಮಾಡಲು ಯುವಕನ ಕೊಲೆ

    ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ನಾಗ್ಪುರದ ಹುಡುಗಿ, ಕಳೆದ ಮೇ ತಿಂಗಳಲ್ಲಿ ಭೋಪಾಲ್‌ಗೆ ಹೋಗಿದ್ದಳು. ಆಗ ಆರೋಪಿ ಅಭಿಷೇಕ್ ಕುರ್ಲಿ (AbhiSheak Kurli) ಎಂಬಾತನ ಪರಿಚಯವಾಗಿದೆ. ಆತ ಹುಡುಗಿಗೆ ದೈಹಿಕ ಸಂಪರ್ಕಕ್ಕೆ ಆಹ್ವಾನಿಸಿದ್ದಾನೆ. ಒಪ್ಪದೇ ಇದ್ದಾಗ ಆಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದಲಿತ ಬಾಲಕಿಯನ್ನ ಇಡೀ ರಾತ್ರಿ ಠಾಣೆಯಲ್ಲಿರಿಸಿ ಥಳಿಸಿದ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

    ಬೇರೆಯವರೊಂದಿಗೆ ಸೆಕ್ಸ್ ಮಾಡು ಅಂದ್ಲು ತಾಯಿ:
    45 ವರ್ಷದ ರಜಿನಿ ಎಂಬಾಕೆ ಆರೋಪಿ ಅಭಿಷೇಕ್ ಕುರ್ಲಿಯ ತಾಯಿ. ಈಕೆಯ ವಿರುದ್ಧವೂ ಪ್ರಕರಣವನ್ನು ದಾಖಲಿಸಲಾಗಿದೆ. ದೂರಿನ ಪ್ರಕಾರ, ಅತ್ಯಾಚಾರಕ್ಕೀಡಾದ ಹುಡುಗಿಗೆ ಈಕೆ ಬೇರೆಯವರ ಜತೆ ದೈಹಿಕ ಸಂಪರ್ಕಕ್ಕೆ ಒತ್ತಾಯಿಸುತ್ತಿದ್ದಳು. ಆರೋಪಿ, ಅಭಿಷೇಕ್ ಸಂತ್ರಸ್ತೆಯ ಮೊಬೈಲ್ ಕದ್ದು, ಆಕೆಯ ಆಕ್ಷೇಪಾರ್ಹ ಫೋಟೊಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಅಪ್‌ಲೋಡ್ ಮಾಡಿದ್ದ ಎಂಬ ಆರೋಪ ಬಂದಿದೆ.

    ಅತ್ಯಾಚಾರ, ಕ್ರಿಮಿನಲ್ ಬೆದರಿಕೆ ಮತ್ತು ಇತರ ಅಪರಾಧಗಳನ್ನಾಧರಿಸಿ ಅಭಿಷೇಕ್ ಕುರ್ಲಿ ಹಾಗೂ ಆತನ ತಾಯಿ ವಿರುದ್ಧ ಕೇಸ್ ದಾಖಲಿಸಲಾಗಿದೆ. ಇಬ್ಬರನ್ನು ಬಂಧಿಸಲು ತನಿಖೆ ನಡೆಸಲಾಗುತ್ತಿದೆ ಎಂದು ನಾಗ್ಪುರದ ಜರಿಪಟ್ಕಾ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗೇಟ್ ತೆಗೆಯೋದು ತಡವಾಗಿದ್ದಕ್ಕೆ ಸೆಕ್ಯೂರಿಟಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕಿ

    ಗೇಟ್ ತೆಗೆಯೋದು ತಡವಾಗಿದ್ದಕ್ಕೆ ಸೆಕ್ಯೂರಿಟಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕಿ

    ಲಕ್ನೋ: ಸೆಕ್ಯೂರಿಟಿ ಗಾರ್ಡ್ (Security) ಒಬ್ಬರು ಅಪಾರ್ಟ್ಮೆಂಟ್ ಗೇಟ್ ಬಾಗಿಲು ತೆಗೆಯೋದು ತಡವಾಗಿದ್ದಕ್ಕೇ ಮಹಿಳಾ ಪ್ರೊಫೆಸರ್( Women Professor) ಸಿಬ್ಬಂದಿಯ ಕಾಲರ್‌ಪಟ್ಟಿ ಹಿಡಿದು ಎಳೆದಾಡಿದ್ದಾಳೆ. ಅಲ್ಲದೇ ಬಾಯಿಗೆ ಬಂದಂತೆ ಬೈದು ನಿಂದಿಸಿದ್ದಾಳೆ.

    ನೊಯ್ಡಾದ ಸೆಕ್ಟರ್ 121 ರಲ್ಲಿರುವ ಕ್ಲಿಯೋ ಕೌಂಟಿಯಲ್ಲಿ ಘಟನೆ ನಡೆದಿದ್ದು, ಕಳೆದ ಒಂದು ತಿಂಗಳಲ್ಲಿ ಇದು ನೊಯ್ಡಾದಲ್ಲಿ ನಡೆದ 2ನೇ ಘಟನೆಯಾಗಿದೆ. ಮಹಿಳಾ ಪ್ರೊಫೆಸರ್ (Professor) ಸುತಾಪ್ ದಾಸ್ ಎಂಬಾಕೆಯೇ ತನ್ನ ಕಾರಿನಿಂದ ಇಳಿದು ಭದ್ರತಾ ಸಿಬ್ಬಂದಿ (security guard) ಸಚಿನ್‌ಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ದೃಶ್ಯಾವಳಿ ಸಿಸಿಟಿಯಲ್ಲಿ (CCTV) ಸೆರೆಯಾಗಿದೆ. ಇದನ್ನೂ ಓದಿ: ʼಬ್ರಹ್ಮಾಸ್ತ್ರʼ ಚಿತ್ರದಲ್ಲಿ ನಾಯಕನ ತಾಯಿ ಪಾತ್ರ ಮಾಡಿರೋ ನಟಿ ರಣಬೀರ್‌ ಮಾಜಿ ಪ್ರೇಯಸಿ?

    ಘಟನೆ ಬಳಿಕ ಮಾತನಾಡಿದ ಭದ್ರತಾ ಸಿಬ್ಬಂದಿ ಸಚಿನ್, ನಾವು ಆರ್‌ಎಫ್‌ಐಡಿ (RFID) ಕೆಲಸ ಮಾಡುತ್ತಿದೆವು. ಈ ವೇಳೆ ಮಹಿಳೆ ಆಕೆಯ ಕಾರಿನ ಸಂಖ್ಯೆಯನ್ನು ತೋರಿಸಲಿಲ್ಲ. ಆದರೂ ನಾವು ಕಾರನ್ನು ಒಳಗೆ ಹೋಗಲು ಅನುಮತಿಸಿದೆವು. ನಂತರ ಆಕೆ ಕಾರನ್ನು ನಿಲ್ಲಿಸಿ ಬಂದು ಬಾಯಿಗೆ ಬಂದಂತೆ ನಿಂದಿಸಲು ಶುರು ಮಾಡಿದ್ಲು. ಜೊತೆಗೆ ಕಪಾಳಮೋಕ್ಷ ಮಾಡಿದಳು. ತಕ್ಷಣ ನಾವು ಪೊಲೀಸರಿಗೆ (Police) ದೂರವಾಣಿ ಕರೆ ಮಾಡಿ ಘಟನೆ ವಿವರಿಸಿದೆವು. ಇದನ್ನೂ ಓದಿ: ಕ್ರಾಂತಿಕಾರಿ ಸಾಧು ಎಂದೇ ಹೆಸರಾಗಿದ್ದ ಸ್ವಾಮಿ ಸ್ವರೂಪಾನಂದ ಸರಸ್ವತಿ ನಿಧನ

    ಭದ್ರತಾ ಸಿಬ್ಬಂದಿ ಗೇಟ್ ತೆರೆಯುವುದು ತಡ ಮಾಡಿದ್ದಕ್ಕೇ ಪ್ರಾಧ್ಯಾಪಕಿ ಕಪಾಳಮೋಕ್ಷ ಮಾಡಿದ್ದಾರೆ. ಮಹಿಳೆ, ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿ ನಿಂದಿಸುತ್ತಿದ್ದರೂ ಯಾರೊಬ್ಬರೂ ಮಧ್ಯ ಪ್ರವೇಶಿಸಲಿಲ್ಲ. ಆದರೆ ಸಹ ಸಿಬ್ಬಂದಿ ತಮ್ಮ ಮೊಬೈಲ್‌ನಲ್ಲಿ ಘಟನೆಯನ್ನು ರೆಕಾರ್ಡ್ ಮಾಡುತ್ತಿದ್ದರು. ಈ ದೃಶ್ಯವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಭದ್ರತಾ ಸಿಬ್ಬಂದಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಅದಾದ ಕೆಲವೇ ಕ್ಷಣಗಳಲ್ಲಿ ಆಕೆಗೆ ಜಾಮೀನು ನೀಡಲಾಯಿತು ಎಂದು ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿದ ಮಹಿಳೆ – ರಂಪಾಟದ ವೀಡಿಯೋ ವೈರಲ್

    ಕಳೆದ ತಿಂಗಳು ಇದೇ ರೀತಿ ಘಟನೆಯೊಂದು ನಡೆದಿತ್ತು. ಸೆಕ್ಯೂರಿಟಿ ಕಾಲರ್ ಹಿಡಿದು ಎಳೆದಾಡಿ ತನ್ನ ದರ್ಪ ತೋರಿಸಿದ್ದು, ಹಲ್ಲೆಗೂ ಮುಂದಾಗಿರುವ ಘಟನೆ ನೊಯ್ಡಾದ ಜೇಪೆ ಗ್ರೂಪ್ ಸೊಸೈಟಿ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು.

    Live Tv
    [brid partner=56869869 player=32851 video=960834 autoplay=true]

  • ಹೊಟ್ಟೆನೋವೆಂದು ಖಾಸಗಿ ಕ್ಲಿನಿಕ್ ಸೇರಿದ ಮಹಿಳೆ – ಆಪರೇಷನ್ ನೆಪದಲ್ಲಿ ಎರಡೂ ಕಿಡ್ನಿ ಕದ್ದ ವೈದ್ಯರು

    ಹೊಟ್ಟೆನೋವೆಂದು ಖಾಸಗಿ ಕ್ಲಿನಿಕ್ ಸೇರಿದ ಮಹಿಳೆ – ಆಪರೇಷನ್ ನೆಪದಲ್ಲಿ ಎರಡೂ ಕಿಡ್ನಿ ಕದ್ದ ವೈದ್ಯರು

    ಪಾಟ್ನಾ: ಹೊಟ್ಟೆನೋವೆಂದು ಚಿಕಿತ್ಸೆಗಾಗಿ ಖಾಸಗಿ ಕ್ಲಿನಿಕ್‌ಗೆ (Private Clinic) ದಾಖಲಾಗಿದ್ದ ಮಹಿಳೆಗೆ ಶಸ್ತ್ರಚಿಕಿತ್ಸೆ (Opration) ಮಾಡುವ ನೆಪದಲ್ಲಿ ವೈದ್ಯರು (Doctors) ಎರಡೂ ಕಿಡ್ನಿಗಳನ್ನು ಕದ್ದಿರುವ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ.

    ಮಹಿಳೆಯ ಆರೋಗ್ಯ ತೀವ್ರವಾಗಿ ಕ್ಷೀಣಿಸಿದ ಬಳಿಕ ಹೆಚ್ಚುವರಿ ಚಿಕಿತ್ಸೆಗಾಗಿ ಬೇರೊಂದು ಆಸ್ಪತ್ರೆಗೆ (Hospital) ದಾಖಲಿಸಲಾಯಿತು. ಬಳಿಕ ಕಿಡ್ನಿ (Kidney) ತೆಗೆದಿರುವ ವಿಷಯ ತಿಳಿದುಬಂದಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮಹಿಳೆ ಕುಟುಂಬಸ್ಥರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಬರಿಯಾರ್‌ಪುರ ಠಾಣೆಯ ಪೊಲೀಸರು (Police) ತನಿಖೆ ಆರಂಭಿಸಿದ್ದಾರೆ.

    ಸಂತ್ರಸ್ತ ಮಹಿಳೆ (Women) ಬಾಜಿರೌತ್ ಗ್ರಾಮದವರಾಗಿದ್ದು, ಮಹಿಳೆಯ ವೈದ್ಯಕೀಯ ವರದಿಗಳನ್ನು ನೀಡುವಂತೆ ಕುಟುಂಬಸ್ಥರನ್ನು ಕೇಳಿದಾಗ ಆಕೆಯ ಎರಡೂ ಕಿಡ್ನಿಗಳನ್ನು ತೆಗೆಯಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇದಕ್ಕೂ ಮುನ್ನ ರೊಚ್ಚಿಗೆದ್ದ ಮಹಿಳೆಯ ಕುಟುಂಬಸ್ಥರು ಕ್ಲಿನಿಕ್ ಮುಂಭಾಗದಲ್ಲೇ ಗಲಾಟೆ ಆರಂಭಿಸಿದ್ದರು. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಹಿಂದೆ IT ಕಂಪನಿಗಳ ಕೈವಾಡವೂ ಇದೆ: ಸಂತೋಷ್ ಹೆಗ್ಡೆ

    ಅಷ್ಟಕ್ಕೂ ನಡೆದಿದ್ದೇನು?
    ಬಾಜಿರೌತ್ ನಿವಾಸಿ ಲಾಲ್‌ದೇವ್ ರಾಮ್ ಅವರ ಪುತ್ರಿ ಸುನೀತಾ ದೇವಿ ಆರೋಗ್ಯ ಕಳೆದ ಆಗಸ್ಟ್ 3 ರಂದು ಕ್ಷೀಣಿಸಿತ್ತು. ಹೊಟ್ಟೆನೋವು ಕಾಣಿಸಿಕೊಂಡಿದ್ದರಿಂದ ಬರಿಯಾರ್‌ಪುರದ ಖಾಸಗಿ ಕ್ಲಿನಿಕ್‌ಗೆ ಕರೆದೊಯ್ಯಲಾಗಿತ್ತು. ಬಳಿಕ ಆಪರೇಷನ್ ಮಾಡಬೇಕಾಗುತ್ತದೆ ಎಂದು ಹೇಳಿದ ವೈದ್ಯರು 20 ಸಾವಿರ ರೂಪಾಯಿಯಿಂದ ಚಿಕಿತ್ಸೆ ಆರಂಭಿಸಿದ್ದರು. ಅದಾದ ನಂತರವೂ ಹೊಟ್ಟೆನೋವು ಹೆಚ್ಚಾದ ಬಳಿಕ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸಲಾಯಿತು. ಅಲ್ಲಿ ವೈದ್ಯರು ತಪಾಸಣೆ ನಡೆಸಿದ ಬಳಿಕ ಎರಡೂ ಕಿಡ್ನಿ ತೆಗೆದಿರುವ ರಹಸ್ಯ ಬಯಲಾಗಿದೆ ಕುಟುಂಬಸ್ಥರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ಯುವತಿ ಕೆರೆ ಪಾಲು – ಉಪ್ಪು ಸುರಿದು ಬದುಕಿಸಲು ಯತ್ನ

    ಸದ್ಯ ಪೊಲೀಸರು ವೈದ್ಯಕೀಯ ವರದಿಯ ಮಾಹಿತಿ ಪಡೆಯುತ್ತಿದ್ದಾರೆ. ವೈದ್ಯರಿಂದ ಮಹಿಳೆ ವಂಚನೆಗೆ ಒಳಗಾಗಿದ್ದಾರೆ ಎಂಬುದು ಸತ್ಯಾಂಶವಾಗಿದ್ದು, ಎರಡೂ ಕಿಡ್ನಿ ತೆಗೆಯಲಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಮಹಿಳೆ ನೇಣಿಗೆ ಶರಣು

    ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ ಮಹಿಳೆ ನೇಣಿಗೆ ಶರಣು

    ವಿಜಯಪುರ: ಮನನೊಂದ ಮಹಿಳೆ (Women) ನೇಣಿಗೆ ಶರಣಾದ ಘಟನೆ ವಿಜಯಪುರದ (Vijayapura) ಜಲನಗರದಲ್ಲಿ ನಡೆದಿದೆ.

    35 ವರ್ಷದ ಗಂಗಾ ನರ್ಸರೆಡ್ಡಿ ಆತ್ಮಹತ್ಯೆಗೆ (Suicide) ಶರಣಾದ ಮಹಿಳೆ. ಕೌಟುಂಬಿಕ ಸಮಸ್ಯೆಯಿಂದಾಗಿ ಗಂಗಾ ಮಾನಸಿಕವಾಗಿ ಸಮಸ್ಯೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.

    CRIME 2

    ಯಾರೂ ಇಲ್ಲದ ಸಮಯ ನೋಡಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅವಧಿಯಲ್ಲಿ ಶಿಕ್ಷಕರ ನೇಮಕಾತಿ ಅಕ್ರಮ ಆರೋಪ – 11 ಜನರ ಬಂಧನ

    ಜಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

    Live Tv
    [brid partner=56869869 player=32851 video=960834 autoplay=true]

  • ಸಿಧು ಮೂಸೆವಾಲಾ ಹತ್ಯೆ ಕೇಸ್ – ಮೂವರು ಅರೆಸ್ಟ್

    ಸಿಧು ಮೂಸೆವಾಲಾ ಹತ್ಯೆ ಕೇಸ್ – ಮೂವರು ಅರೆಸ್ಟ್

    ನವದೆಹಲಿ: ಖ್ಯಾತ ಪಂಜಾಬಿ ಗಾಯಕ (Punjabi Singer) ಹಾಗೂ ರಾಜಕೀಯ ನಾಯಕ ಸಿಧು ಮೂಸೆವಾಲಾ (Sidhu MooseWala) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ.

    ದೀಪಕ್, ಕಪಿಲ್ ಪಂಡಿತ್, ರಾಜೇಂದ್ರ ಬಂಧಿತ ಆರೋಪಿಗಳು. ಪಂಜಾಬ್, ದೆಹಲಿ (NewDelhi) ಹಾಗೂ ಕೇಂದ್ರದ ತನಿಖಾ ಏಜೆನ್ಸಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂಸೆವಾಲಾರನ್ನ ಹತ್ಯೆ ಮಾಡಿದ ಆರೋಪಿ ದೀಪಕ್ ಹಾಗೂ ಈತನಿಗೆ ಸಹಕಾರ ನೀಡಿದ್ದ ಇಬ್ಬರನ್ನೂ ಬಂಧಿಸಲಾಗಿದೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರಿಂದ ಈ ಬಾರಿ ದಸರಾ ಉದ್ಘಾಟನೆ – ಸಿಎಂ

    ಇತ್ತೀಚೆಗೆ ಸಿಧು ಮೂಸೆವಾಲಾರನ್ನ ಗುಂಡಿಕ್ಕಿ ಕೊಂದಿದ್ದ ಪ್ರಮುಖ ಆರೋಪಿಯನ್ನ ದೆಹಲಿ ಪೊಲೀಸರ ವಿಶೇಷ ತಂಡ ಬಂಧಿಸಿತು. ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗೋಲ್ಡಿ ಬ್ರಾರ್ ಗ್ಯಾಂಗ್‌ಗೆ ಸೇರಿದ ಇಬ್ಬರು ದರೋಡೆಕೋರರನ್ನು ಬಂಧಿಸಿದ್ದು, ಇಬ್ಬರ ಪೈಕಿ ಆರೋಪಿ ಅಂಕಿತ್ ಸಿರ್ಸಾ ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದ ಶೂಟರ್‌ಗಳಲ್ಲಿ ಒಬ್ಬನಾಗಿದ್ದ ಎಂದು ಪೊಲೀಸರ ತಂಡ ಹೇಳಿತ್ತು. ಇದನ್ನೂ ಓದಿ: ಜನಸ್ಪಂದನಕ್ಕೆ ಕರಾಳೋತ್ಸವದ ಬಿಸಿ – ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

    ಇದಾದ ಬಳಿಕ ಪಂಜಾಬ್‌ನ ಅಮೃತಸರದ ಸಮೀಪ ಒಂಟಿ ಮನೆಯೊಂದರಲ್ಲಿ ಅವಿತು ಕುಳಿತಿದ್ದ ನಾಲ್ವರ ಮೇಲೆ ಪೊಲೀಸರು (Police) ಗುಂಡಿನ ದಾಳಿ ನಡೆಸಿದ್ದರು. ಪಾಕಿಸ್ತಾನ ಗಡಿಯಿಂದ ಕೇವಲ 10 ಕಿಮೀ ದೂರದ ಹಳ್ಳಿಯಲ್ಲಿ ಗುಂಡಿನ ಮಳೆಗರೆದು ಲಾರೆನ್ಸ್ ಬಿಷ್ಣೋಯ್ ಗೋಲ್ಡಿ ಬ್ರಾರ್ ಗ್ಯಾಂಗ್‌ನ ನಾಲ್ವರನ್ನು ಕೊಲ್ಲಲಾಗಿತ್ತು.

    Live Tv
    [brid partner=56869869 player=32851 video=960834 autoplay=true]