Tag: crime

  • ದಲಿತ ಬಾಲಕಿಯನ್ನ ಇಡೀ ರಾತ್ರಿ ಠಾಣೆಯಲ್ಲಿರಿಸಿ ಥಳಿಸಿದ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

    ದಲಿತ ಬಾಲಕಿಯನ್ನ ಇಡೀ ರಾತ್ರಿ ಠಾಣೆಯಲ್ಲಿರಿಸಿ ಥಳಿಸಿದ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

    ಭೋಪಾಲ್: ಅತ್ಯಾಚಾರಕ್ಕೊಳಗಾಗಿದ್ದ 13 ವರ್ಷದ ದಲಿತ ಬಾಲಕಿಯನ್ನು (Dalit Girl) ರಾತ್ರಿ ಇಡೀ ಠಾಣೆಯಲ್ಲಿ ಇರಿಸಿಕೊಂಡು ಥಳಿಸಿದ ಘಟನೆ ಮಧ್ಯ ಪ್ರದೇಶದ (Madhya Pradesh) ಛತ್ತರ್‌ಪುರ ನಗರದಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಪೊಲೀಸ್ (Police) ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

    ಅತ್ಯಾಚಾರ ಸಂತ್ರಸ್ತೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಕ್ಕಾಗಿ ನಗರ ಕೋತ್ವಾಲಿ ಠಾಣೆಯ ಎಚ್‌ಎಸ್‌ಒ ಅನೂಪ್ ಯಾದವ್, ಸಬ್ ಇನ್‌ಸ್ಪೆಕ್ಟರ್ ಮೋಹಿನಿ ಶರ್ಮಾ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ (PSI) ಗುರುದತ್ ಶೇಷಾ ಅವರನ್ನು ಅಮಾನತುಗೊಳಿಸಲಾಗಿದೆ. ಜೊತೆಗೆ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಬಾಬು ಖಾನ್ ನನ್ನು ಸೆಪ್ಟೆಂಬರ್ 1ರಂದು ಐಪಿಸಿ ಸೆಕ್ಷನ್ ಹಾಗೂ ಪರಿಶಿಷ್ಟ ಜಾತಿ ಪಂಗಡಗಳ (SC-ST Act) ದೌರ್ಜನ್ಯ ತಡೆ ಕಾಯ್ದೆ ಹಾಗೂ ಪೋಕ್ಸೋ  (POCSO) ಕಾಯ್ದೆ ಅಡಿಯಲ್ಲಿ ಬಂಧಿಸಲಾಗಿದೆ ಎಂದು ಛತ್ತರ್‌ಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ನಿರ್ಮಾಣ ಹಂತದಲ್ಲಿದ್ದ 4 ಅಂತಸ್ತಿನ ಕಟ್ಟಡ ಕುಸಿತ – ಮೂವರ ದುರ್ಮರಣ

    STOP RAPE

    ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಈ ಸಂಬಂಧ ದೂರು ನೀಡಿದ ನಂತರ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪ್ರತಾಪ್ ಸಿಂಗ್ ಚೌಹಾಣ್ ಹೇಳಿದ್ದಾರೆ.

    ದೂರಿನಲ್ಲಿ ಏನಿದೆ?: ಕಳೆದ ಆಗಸ್ಟ್ 27ರಂದು ಮಗಳು ಆಟವಾಡಲು ಮನೆಯಿಂದ ಹೊರಟಿದ್ದಳು ಮತ್ತೆ ಹಿಂದಿರುಗಿರಲಿಲ್ಲ. ಮರುದಿನ ಪತಿಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದಾದ ಬಳಿಕ ಆಗಸ್ಟ್ 30 ರಂದು ಮಗಳು ತನ್ನ ಮನೆಗೆ ವಾಪಸ್ಸಾದಳು. ಅದೇ ದಿನ ಬಾಬು ಖಾನ್ ಬಲವಂತವಾಗಿ ತನ್ನ ಮಗಳನ್ನ ಕರೆದೊಯ್ದು ಮೂರು ದಿನಗಳ ಕಾಲ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಬಾಲಕಿ ತಾಯಿ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯ ಕಲಾವಿದರೊಂದಿಗೆ ನೃತ್ಯ ಮಾಡಿದ ಬಾಂಗ್ಲಾ ಪ್ರಧಾನಿ – ವೀಡಿಯೋ ವೈರಲ್

    ಈ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಿಸಲು ಪೊಲೀಸ್ ಠಾಣೆಗೆ ಹೋದಾಗ ಇಬ್ಬರು ಪೊಲೀಸರು ನನ್ನ ಮಗಳಿಗೆ ಹೇಳಿಕೆ ಬದಲಾಯಿಸುವಂತೆ ಒತ್ತಡ ಹೇರಿದರು. ಅಲ್ಲದೇ ನನ್ನ ಮಗಳನ್ನು ಹಿಡಿದು ಥಳಿಸಿದರು. ಅಲ್ಲೇ ಇದ್ದ ಮತ್ತೊಬ್ಬ ಪೊಲೀಸ್ ಅಧಿಕಾರಿ ನನ್ನನ್ನು ಹೊರಗೆ ದಬ್ಬಿದರು. ಇಡೀ ರಾತ್ರಿ ನನ್ನ ಮಗಳನ್ನು ಠಾಣೆಯಲ್ಲೇ ಇರಿಸಿಕೊಂಡು ಥಳಿಸಿದರು. ಆಗಸ್ಟ್ 31 ರಂದು ಪೊಲೀಸ್ ಠಾಣೆಯಲ್ಲಿ ಇನ್ಸ್ಪೆಕ್ಟರ್ ಯಾದವ್ ಅವರನ್ನು ಕೇಸ್ ದಾಖಲಿಸುವಂತೆ ಕೇಳಿದಾಗ ನಮ್ಮನ್ನು ಹೆದರಿಸಿ ಓಡಿಸಿದರು. ಅಂತಿಮವಾಗಿ ಸೆಪ್ಟೆಂಬರ್ 1 ರ ಸಂಜೆ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಆದರೆ ಅಪಹರಣದ ಆರೋಪವನ್ನು ಎಫ್‌ಐಆರ್‌ನಲ್ಲಿ ಸೇರಿಸಿರಲಿಲ್ಲ. ಜೊತೆಗೆ ಬಾಲಕಿಯ ವಯಸ್ಸನ್ನು 13ರ ಬದಲಿಗೆ 17 ವರ್ಷ ಎಂದು ತೋರಿಸಲಾಗಿತ್ತು ಎಂದೂ ಸಂತ್ರಸ್ತೆಯ ತಾಯಿ ದೂರಿನಲ್ಲಿ ತಿಳಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

    KPTCL ಪರೀಕ್ಷೆಯಲ್ಲಿ ಅಕ್ರಮ- N95 ಮಾಸ್ಕ್ ಒಳಗಡೆ ಎಲೆಕ್ಟ್ರಾನಿಕ್‌ ಡಿವೈಸ್ ಸೇಲ್ ಮಾಡಿದ್ದ ಆರೋಪಿ ಅರೆಸ್ಟ್

    ಬೆಳಗಾವಿ: ಗೋಕಾಕ್‌ನಲ್ಲಿ ಕೆಪಿಟಿಸಿಎಲ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಎಸೆಗಲು KPTCL ಪರೀಕ್ಷೆಯಲ್ಲಿ ಅಕ್ರಮ – N95  ಡಿವೈಸ್ ಸೇರಿ ಇತರ ವಸ್ತುಗಳನ್ನು ಸರಬರಾಜು ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ ದೇವಸಂದ್ರ ಮೂಲದ ಮೊಹಮ್ಮದ್ ಅಜೀಮುದ್ದಿನ್ (37) ಬಂಧಿತ ಆರೋಪಿ. ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಬಂಧಿತರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್‌ – ಜೆಡಿಎಸ್‌ ನಾಯಕನ ನಗರ ಸಭೆ ಸದಸ್ಯತ್ವ ರದ್ದು

    ಪರೀಕ್ಷಾ ಅಕ್ರಮ ನಡೆಸಲು ಬೇಕಾಗುವ ವಿವಿಧ ಬಗೆಯ ಎಲೆಕ್ಟ್ರಾನಿಕ್‌ ಡಿವೈಸ್ ಗಳನ್ನು (Electronic Devices) ದೆಹಲಿ ಮತ್ತು ಹೈದರಾಬಾದಿನಿಂದ ತಂದು ಸಂಜು ಭಂಡಾರಿ ಹಾಗೂ ಬೆಳಗಾವಿ ಜಿಲ್ಲೆಯ ಬೇರೆ ಜನರಿಗೆ ಮಾರಾಟ ಮಾಡುತ್ತಿದ್ದ ವಿಚಾರ ತನಿಖೆ ವೇಳೆ ಬಯಲಾಗಿದೆ. ಇದನ್ನೂ ಓದಿ: ಉಗ್ರರ ತವರು ನೆಲ ಪಾಕಿಸ್ತಾನಕ್ಕೆ ಅಮೆರಿಕದಿಂದ 3,500 ಕೋಟಿ ಸೇನಾ ನೆರವು

    ಬಂಧಿತನಿಂದ ಎರಡು ಮೊಬೈಲ್ ಮತ್ತು ವಿವಿಧ ಬಗೆಯ 179 ಎಲೆಕ್ಟ್ರಾನಿಕ್‌ ಡಿವೈಸ್ ಗಳು, ಎಲೆಕ್ಟ್ರಾನಿಕ್‌ ಡಿವೈಸ್ ಅಳವಡಿಸಿದ 7 ಎನ್ 95 ಮಾಸ್ಕ್, 41 ಬನಿಯನ್, ವಿವಿಧ ಬಗೆಯ 445 ಎಲೆಕ್ಟ್ರಾನಿಕ್‌ ಇಯರ್ ಪಿನ್, ವಿವಿಧ ಬಗೆಯ 554 ಚಾರ್ಜಿಂಗ್ ಕೇಬಲ್ ಹಾಗೂ 6 ವಾಕಿಟಾಕಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ ಆ.7 ರಂದು ಗೋಕಾಕ್ ನಗರದಲ್ಲಿ ಹೆಸ್ಕಾಂ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ನಡೆದಿತ್ತು.

    Live Tv
    [brid partner=56869869 player=32851 video=960834 autoplay=true]

  • ಭೀಮಾತೀರದಲ್ಲಿ ಮತ್ತೆ ರಕ್ತಪಾತ – ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದ ತಮ್ಮ

    ವಿಜಯಪುರ: ಭೀಮಾತೀರದಲ್ಲಿ ಮತ್ತೆ ರಕ್ತಪಾತ ನಡೆದಿದ್ದು, ಸ್ವಂತ ತಮ್ಮನೇ ಅಣ್ಣನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದಿದೆ.

    ಹತ್ಯೆಗೊಳಗಾದವರು ಜಗ್ಗೇಶ್ ವಡ್ಡರ್. ರಾಹುಲ್ ವಡ್ಡರ್ ಹತ್ಯೆಗೈದ ಅರೋಪಿ. ಇದನ್ನೂ ಓದಿ: ಟಿಪ್ಪು, ಶಿವಾಜಿ ವೃತ್ತ ನಿರ್ಮಾಣ ವಿಚಾರಕ್ಕೆ ಕಿರಿಕ್ – ಯುವಕನ ಬರ್ಬರ ಹತ್ಯೆ

    ಅಣ್ಣ ಜಗ್ಗೇಶ್ ದಿನವೂ ಕುಡಿಯಲು ಹಣ ಕೇಳುತ್ತಿದ್ದ. ತಮ್ಮನನ್ನು ಹಣಕ್ಕಾಗಿ ಪೀಡಿಸುತ್ತಿದ್ದ. ಇದರಿಂದ ರೋಸಿಹೋಗಿದ್ದ ತಮ್ಮ ರಾಹುಲ್, ಹರಿತವಾದ ಆಯುಧದಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಚಡಚಣ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

    ಇದೇ ಸೆಪ್ಟೆಂಬರ್ 1ರಂದು ಟಿಪ್ಪು ಸುಲ್ತಾನ್ ಹಾಗೂ ಶಿವಾಜಿ ಮಹಾರಾಜ್ ವೃತ್ತ ನಿರ್ಮಾಣ ವಿಚಾರದಲ್ಲಿ ಗಲಾಟೆ ನಡೆದು, ಈ ದ್ವೇಷದ ಹಿನ್ನೆಲೆಯಲ್ಲಿ ಪ್ರಶಾಂತ್ ಕ್ಷತ್ರಿ ಎಂಬ ಯುವಕನನ್ನು 8 ಮಂದಿ ಬರ್ಬರವಾಗಿ ಹತ್ಯೆ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮಡಿವಾಳೇಶ್ವರ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು

    ಮಡಿವಾಳೇಶ್ವರ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು

    ಬೆಳಗಾವಿ: ಮಡಿವಾಳೇಶ್ವರ ಮಠದಲ್ಲಿ ಬಸವಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣಾಗಿರುವ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ.

    ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಆಗಿರುವ ಬಸವ ಸಿದ್ಧಲಿಂಗ ಸ್ವಾಮೀಜಿ ಮಠದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಲಹೊಂಗಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯ ಹೋರಾಟಗಾರ, ಶತಾಯಿಷಿ ವೆಂಕಣ್ಣ ನಾಯಕ ಇನ್ನಿಲ್ಲ

    ಮುರುಘಾ ಮಠದ ಶ್ರೀಗಳ ಲೈಂಗಿಕ ಕಿರುಕುಳ ಆರೋಪದ ಬಳಿಕ ಇಬ್ಬರು ಮಹಿಳೆಯರ ಫೋನ್‌ಕಾಲ್‌ ಆಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ಆಡಿಯೋನಲ್ಲಿ ಆತ್ಮಹತ್ಯೆಗೆ ಶರಣಾದ ಬಸವಸಿದ್ಧಲಿಂಗ ಸ್ವಾಮೀಜಿ ಹೆಸರನ್ನೂ ಉಲ್ಲೇಖಿಸಲಾಗಿತ್ತು. ಇದರಿಂದಲೇ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ.

    Live Tv
    [brid partner=56869869 player=32851 video=960834 autoplay=true]

  • KGF ಸಿನಿಮಾ ಸ್ಫೂರ್ತಿ – ದಿಢೀರ್ ಫೇಮಸ್ ಆಗಲು ನಾಲ್ವರನ್ನು ಚಚ್ಚಿಕೊಂದ ಯುವಕ

    KGF ಸಿನಿಮಾ ಸ್ಫೂರ್ತಿ – ದಿಢೀರ್ ಫೇಮಸ್ ಆಗಲು ನಾಲ್ವರನ್ನು ಚಚ್ಚಿಕೊಂದ ಯುವಕ

    ಭೋಪಾಲ್: ಕೆಜಿಎಫ್ ಸಿನಿಮಾ ಹಾಗೂ ಜಾಲತಾಣದಲ್ಲಿ ಹಲವಾರು ಹತ್ಯೆಯ ವೀಡಿಯೋಗಳನ್ನು ನೋಡಿ ಸ್ಫೂರ್ತಿ ಪಡೆದಿದ್ದ ಯುವಕನೊಬ್ಬ ದಿಢೀರ್ ಫೇಮಸ್ ಆಗಬೇಕು ಅಂತಾ ನಾಲ್ವರು ಭದ್ರತಾ ಸಿಬ್ಬಂದಿಯನ್ನು ವಿವಿಧ ಸುತ್ತಿಗೆ, ರಾಡ್, ಕಲ್ಲಿನಿಂದ ಚಚ್ಚಿ ಕೊಂದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

    KGF 2 Yash (4)
    ಸಾಂದರ್ಭಿಕ ಚಿತ್ರ

    ಘಟನೆಗೆ ಸಂಬಂಧಿಸಿದಂತೆ ಶಿವಪ್ರಸಾದ್ (19) ನನ್ನು ಭೋಪಾಲ್ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಸಾದ್ ದುರ್ವೆ ಎಂದು ಗುರುತಿಸಲಾಗಿದ್ದು, ಕೆಜಿಎಫ್ ಸಿನಿಮಾ ನಟನ ಮಾದರಿಯಲ್ಲಿ ಹೆಸರುವಾಸಿಯಾಗಲು ಈ ಕೃತ್ಯ ಎಸಗಿರುವುದಾಗಿ ತನಿಖೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದ 31 ಪ್ರಾಥಮಿಕ, ಹೈಸ್ಕೂಲ್ ಶಿಕ್ಷಕರಿಗೆ `ಉತ್ತಮ ಶಿಕ್ಷಕ’ ಪ್ರಶಸ್ತಿ – ಯಾವ ಜಿಲ್ಲೆಯ ಯಾರಿಗೆ ಪ್ರಶಸ್ತಿ?

    ಸೆಕ್ಯುರಿಟಿ ಗಾರ್ಡ್ಗಳು ಮಲಗಿದ್ದ ಸಂದರ್ಭ ಶಿವಪ್ರಸಾದ್ ಹತ್ಯೆ ಮಾಡಿದ್ದಾನೆ. ಸಾಗರ ಜಿಲ್ಲೆಯಲ್ಲಿ ಮೂವರು ಮತ್ತು ಭೋಪಾಲ್‌ನಲ್ಲಿ ಒಬ್ಬರನ್ನು ಹತ್ಯೆ ಮಾಡಿದ್ದಾನೆ. ಈ ಪೈಕಿ ಒಂದು ಹತ್ಯೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದರಲ್ಲಿ ಆರೋಪಿಯು ಸೆಕ್ಯುರಿಟಿ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ, ಕಲ್ಲಿನಿಂದ ಚಚ್ಚಿ ಭೀಕರವಾಗಿ ಕೊಂದಿರುವುದು ಜನರನ್ನು ಬೆಚ್ಚಿ ಬೀಳಿಸಿದೆ.

    ಆರೋಪಿ ನಾಲ್ಕನೇ ಹತ್ಯೆಯನ್ನು ಭೋಪಾಲ್‌ನಲ್ಲಿ ನಡೆಸಿದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಲಾಗಿದೆ. ಹತ್ಯೆಯಾದ ಸೆಕ್ಯುರಿಟಿಯೊಬ್ಬರ ಮೊಬೈಲ್ ಕಸಿದಿದ್ದ ಆರೋಪಿ ಅದರ ಟವರ್ ಲೊಕೇಶನ್ ಮೂಲಕವೇ ಸಿಕ್ಕಿಬಿದ್ದಿದ್ದಾನೆ. ತನಿಖೆ ವೇಳೆ ನಾಲ್ಕೂ ಹತ್ಯೆಗಳನ್ನು ತಾನೇ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಇದನ್ನೂ ಓದಿ: 1.5 ಕೋಟಿ ರೂ. ನೀಡಿ ನೀರಜ್ ಚೋಪ್ರಾರ ಜಾವೆಲಿನ್ ಖರೀದಿಸಿದ ಬಿಸಿಸಿಐ

    ಆರೋಪಿ ಶಿವಪ್ರಸಾದ್ ಸೆಕ್ಯೂರಿಟಿ ಗಾರ್ಡ್ಗಳನ್ನೇ ಹುಡುಕಿ ಕೊಲ್ಲುವ ಪ್ರೌವೃತ್ತಿ ಬೆಳೆಸಿಕೊಂಡಿದ್ದ, ಅಲ್ಲದೇ ಪೊಲೀಸ್ ಠಾಣೆ ಸಿಬ್ಬಂದಿಯನ್ನೂ ಕೊಲ್ಲೋದಕ್ಕೆ ಯೋಜಿಸಿದ್ದ ಎಂದು ಹೇಳಲಾಗಿದೆ.

    ಶಿವಪ್ರಸಾದ್ ನಿನ್ನೆ ತಡರಾತ್ರಿ ಭದ್ರತಾ ಸಿಬ್ಬಂದಿಯಾಗಿದ್ದ ಸೋನು ವರ್ಮಾ (23) ಎಂಬ ಯುವಕನನ್ನು ಭೋಪಾಲ್‌ನಲ್ಲಿ ಮಾರ್ಬಲ್ ರಾಡ್‌ನಿಂದ ಹೊಡೆದು ಕೊಂದಿದ್ದಾನೆ. ಇದಕ್ಕೂ ಮುನ್ನ ಸಾಗರ್‌ನಲ್ಲಿ ಕಾರ್ಖಾನೆಯೊಂದರ ಭದ್ರತಾ ಸಿಬ್ಬಂದಿ ಕಲ್ಯಾಣ್ ಲೋಧಿ ಅವರನ್ನು ಸುತ್ತಿಗೆಯಿಂದ ಹೊಡೆದು ಕೊಂದಿದ್ದಾನೆ. ಮರುದಿನ ರಾತ್ರಿಯೇ 60 ವರ್ಷದ ಕಾಲೇಜು ಭದ್ರತಾ ಸಿಬ್ಬಂದಿ ಶಂಬು ನಾರಾಯಣ ದುಬೆ ಅವರನ್ನ ಕಲ್ಲಿನಿಂದ ಚಚ್ಚಿ ಕೊಂದಿದ್ದಾನೆ. ಈ ಹತ್ಯೆಗಳು ಮಧ್ಯಪ್ರದೇಶದಲ್ಲಿ ಭಯೋತ್ಪಾದನೆಯ ಭೀತಿ ಹೆಚ್ಚಿಸಿದ್ದು, ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಂತರ್ಜಾತಿ ವಿವಾಹ – ದಲಿತನೆಂದು ಅಳಿಯನನ್ನೇ ಕೊಂದ ಅತ್ತೆ

    ಅಂತರ್ಜಾತಿ ವಿವಾಹ – ದಲಿತನೆಂದು ಅಳಿಯನನ್ನೇ ಕೊಂದ ಅತ್ತೆ

    ಡೆಹ್ರಾಡೂನ್: ತನ್ನ ಅಳಿಯ ದಲಿತನೆಂಬ ಕಾರಣಕ್ಕೆ ಹುಡುಗಿ ತಾಯಿಯೇ ಅಳಿಯನನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಇಂದು ಉತ್ತರಾಖಂಡದ ಅಲ್ಮೊರಾ ಜಿಲ್ಲೆಯಲ್ಲಿ ನಡೆದಿದೆ.

    ಇಲ್ಲಿನ ಪನು ಅಧೋಖಾನ್ ರಾಜಕೀಯ ದಲಿತ ಮುಖಂಡ ಜಗದೀಶ್ ಚಂದ್ರ ಅವರಿಂದು ಭಿಕಿಯಾಸೈನ್ ಪಟ್ಟಣದಲ್ಲಿ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಉಪ್ಪಿನ ಉಪವಿಭಾಗದ ತಹಸೀಲ್ದಾರ್ ನಿಶಾ ರಾಣಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಾಯ್ ಫ್ರೆಂಡ್ ಜೊತೆ ಲಾಡ್ಜ್‌ಗೆ ಹೋಗಿದ್ದ ವಿದ್ಯಾರ್ಥಿನಿ ಹೆಣವಾದ್ಲು – ಕಾರಣ ಮಾತ್ರ ಸಸ್ಪೆನ್ಸ್

    ಮೃತದೇಹವನ್ನು ವಿಲೇವಾರಿ ಮಾಡಲು ಕಾರಿನಲ್ಲಿ ತೆಗೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಪತ್ನಿಯ ತಾಯಿ, ಆಕೆಯ ಮಲತಂದೆ ಹಾಗೂ ಮಲ ಸಹೋದರ ಸಿಕ್ಕಿಬಿದ್ದಿದ್ದು, ತಕ್ಷಣವೇ ಬಂಧಿಸಲಾಗಿದೆ.

    ಆಗಸ್ಟ್ 21ರಂದು ಜಗದೀಶ್ ಚಂದ್ರ ಅಂತರ್ಜಾತಿ ಮಹಿಳೆಯೊಂದಿಗೆ ವಿವಾಹವಾಗಿದ್ದರು. ತಮಗೆ ಜೀವ ಬೆದರಿಕೆ ಬಂದಿರುವುದಾಗಿ ಆಗಸ್ಟ್ 27ರಂದು ಭದ್ರತೆ ಕೋರಿ, ಆಡಳಿತಕ್ಕೆ ಪತ್ರ ಬರೆದಿದ್ದರು. ಸೂಕ್ತ ವ್ಯವಸ್ಥೆ ಕಲ್ಪಿಸ ಹಿನ್ನೆಲೆಯಲ್ಲಿ ಅವರು ಸಾವನ್ನಪ್ಪಿದ್ದಾರೆ. ನಿನ್ನೆ ಪತ್ನಿಯ ತಾಯಿಯೇ ಚಂದ್ರನನ್ನು ಅಪಹರಿಸಿ, ಹತ್ಯೆ ಮಾಡಿದ್ದಾರೆ ಎಂದು ತಹಸೀಲ್ದಾರ್ ಹೇಳಿದ್ದಾರೆ. ಇದನ್ನೂ ಓದಿ: 60 ವರ್ಷ ವಯಸ್ಸಾಗಿದ್ದು, ಹೃದಯ ತುಂಬಾ ಸೂಕ್ಷ್ಮವಾಗಿದ್ರಿಂದ ಪ್ರಾಬ್ಲಂ ಬರೋದು ಸಹಜ: ಡಾ. ರಂಗನಾಥ್

    KILLING CRIME

    ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಉತ್ತರಾಖಂಡ್ ಪರಿವರ್ತನ್ ಪಕ್ಷದ ನಾಯಕ ಪಿ.ಸಿ ತಿವಾರಿ, ಜಗದೀಶ್ ಚಂದ್ರ ಉಪ್ಪಿನ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಚುನಾವಣೆಗೆ ಸ್ಪರ್ಧಿಸಿದರು. ಅವರ ದೂರಿನ ಮೇರೆಗೆ ಭದ್ರತೆ ನೀಡಿದ್ದರೆ ರಕ್ಷಿಸಬಹುದಿತ್ತು. ಈ ಹತ್ಯೆ ಉತ್ತರಾಖಂಡ್‌ಗೆ ನಾಚಿಗೇಡಿನ ಸಂಗತಿಯಾಗಿದೆ. ಮೃತರ ಪತ್ನಿಗೆ 1 ಕೋಟಿ ರೂ. ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಟ್ಟೆ ಮಳಿಗೆಯಲ್ಲಿ ಭೀಕರ ಗುಂಡಿನ ದಾಳಿ – ಬಿಜೆಪಿ ಮುಖಂಡನ ಬರ್ಬರ ಹತ್ಯೆ

    ಬಟ್ಟೆ ಮಳಿಗೆಯಲ್ಲಿ ಭೀಕರ ಗುಂಡಿನ ದಾಳಿ – ಬಿಜೆಪಿ ಮುಖಂಡನ ಬರ್ಬರ ಹತ್ಯೆ

    ಚಂಡೀಗಢ: ಸ್ಥಳೀಯ ಬಿಜೆಪಿ ಮುಖಂಡನನ್ನು ಐವರು ದುಷ್ಕರ್ಮಿಗಳು ಮನಬಂದಂತೆ ಗುಂಡಿಕ್ಕಿ ಕೊಂದಿರುವ ಘಟನೆ ಇಂದು ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ.

    ಇಲ್ಲಿನ ದರ್ ಬಜಾರ್ ಬಳಿಯ ಗುರುದ್ವಾರದ ರಸ್ತೆಯಲ್ಲಿರುವ ಬಟ್ಟೆ ಮಳಿಗೆಯೊಂದರಲ್ಲಿ ಗುಂಡಿನ ದಾಳಿ ನಡೆಸಲಾಗಿದ್ದು, ಬಿಜೆಪಿ ಮುಖಂಡ ಸುಖಬೀರ್ ಖತಾನ ಅವರನ್ನು ಹತ್ಯೆ ಮಾಡಲಾಗಿದೆ. ಸ್ಥಳಕ್ಕೆ ಭೆಟಿ ನೀಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಆಗಸ್ಟ್‌ ಜಿಎಸ್‌ಟಿ ಶೇ.28 ಏರಿಕೆ – 1.43 ಲಕ್ಷ ಕೋಟಿ ರೂ.ನಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    bjP

    ಸುಖಬೀರ್ ಖನಾತಾ ಅವರು ಬಟ್ಟೆ ಬಳಿಗೆ(ಶೋ ರೂಮ್) ಪ್ರವೇಶಿಸುತ್ತಿದ್ದಂತೆ ದುಷ್ಕರ್ಮಿಗಳು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಶಬ್ಧ ಕೇಳುತ್ತಿದ್ದಂತೆ ಇತರ ವ್ಯಾಪಾರಿಗಳೂ ಸ್ಥಳದಿಂದ ಹೆದರಿ ಓಡಿ ಹೋಗಿದ್ದಾರೆ. ಗುಂಡಿನ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಖತಾನ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗುತ್ತಿತ್ತು, ಮಾರ್ಗಮಧ್ಯದಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿ ದೀಪಕ್ ಸಹರಾನ್ ತಿಳಿಸಿದ್ದಾರೆ. ಇದನ್ನೂ ಓದಿ: ನಿರ್ಮಾಪಕ ರವೀಂದರ್‌ ಕೈ ಹಿಡಿದ ನಟಿ, ಖ್ಯಾತ ನಿರೂಪಕಿ ಮಹಾಲಕ್ಷ್ಮೀ

    ಸುಖಬೀರ್ ಖತಾನ ಅವರು ಗುರ್ಗಾಂವ್‌ನ ಸೊಹ್ನಾ ಮಾರುಕಟ್ಟೆ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿದ್ದರು ಹಾಗೂ ಮಾಜಿ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್‌ಗೆ ಆಪ್ತರಾಗಿದ್ದರು. ನಗರದ ಸಮೀಪದ ರಿಥೋಜ್ ಗ್ರಾಮದಿಂದ ಜಿಲ್ಲಾ ಪರಿಷತ್ ಚುನಾವಣೆಗೆ ಸಿದ್ಧತೆ ನಡೆಸಿದ್ದರು ಅಷ್ಟರಲ್ಲೇ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.

    ಸ್ಥಳೀಯ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂದು ಮಗಳನ್ನೇ ಕೊಂದು ಕಾಡಿಗೆ ಎಸೆದ ಪೋಷಕರು

    ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂದು ಮಗಳನ್ನೇ ಕೊಂದು ಕಾಡಿಗೆ ಎಸೆದ ಪೋಷಕರು

    ರಾಯಪುರ: ಸಮಯಕ್ಕೆ ಸರಿಯಾಗಿ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ಸ್ವತಃ ಪೋಷಕರೇ 12 ವರ್ಷದ ಮಗಳನ್ನು ಕೊಂದು ಮೃತದೇಹವನ್ನು ಕಾಡಿನಲ್ಲಿ ಎಸೆದಿದ್ದ ಘಟನೆ ಛತ್ತಿಸ್‌ಗಢದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಘಟನೆಗೆ ಸಂಬಂಧಿಸಿದಂತೆ ತಂದೆ ವಿಶ್ವನಾಥ್ ಎಕ್ಕಾ ಮತ್ತು ಅವರ ಪತ್ನಿ ದಿಲ್ಸಾ ಎಕ್ಕಾ ಇಬ್ಬರನ್ನು ಬಂಧಿಸಲಾಗಿದೆ. ಈ ವರ್ಷ ಜೂನ್ ನಲ್ಲಿ ಘಟನೆ ನಡೆದಿತ್ತು. ಕೃತ್ಯ ಎಸಗಿದ್ದ ಪೋಷಕರು ತನಿಖೆಯ ದಾರಿ ತಪ್ಪಿಸುವ ಉದ್ದೇಶದಿಂದ ಮಗಳನ್ನು ತಾವೇ ಕೊಂದು ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದರು ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರೈಲ್ವೆ ಅಂಡರ್ ಪಾಸ್‍ನಲ್ಲಿ ಸಿಲುಕಿದ ಕಾಲೇಜ್ ಬಸ್- ವಿದ್ಯಾರ್ಥಿಗಳ ರಕ್ಷಣೆ

    ಕೃತ್ಯ ನಡೆದಿದ್ದು ಹೇಗೆ?
    2022ರ ಜೂನ್ 28ರಂದು 12 ವರ್ಷದ ತಮ್ಮ ಮಗಳು ಸಮಯಕ್ಕೆ ಸರಿತಯಾಗಿ ಅಡುಗೆ ಮಾಡಲಿಲ್ಲ ಹಾಗೂ ದನಕರುಗಳಿಗೆ ಮೇವು ಹಾಕಿರಲಿಲ್ಲ. ಇದರಿಂದ ಕೋಪಗೊಂಡ ಬಾಲಕಿ ತಂದೆ ದೊಣ್ಣೆಯಿಂದ ಥಳಿಸಿದ್ದಾನೆ. ನೆಲದ ಮೇಲೆ ಬಿದ್ದು ಒದ್ದಾಡುತ್ತಲೇ ಹುಡುಗೆ ಪ್ರಾಣ ಬಿಟ್ಟಿದ್ದಾಳೆ. ಈ ಸಂದರ್ಭದಲ್ಲಿ ಆಕೆಯ ತಾಯಿ ಕೂಡ ಇದ್ದರು. ಬಳಿಕ ಇಬ್ಬರೂ ಸೇರಿ ಮಗಳ ಮೃತದೇಹವನ್ನು ಇಲ್ಲಿನ ಸುರ್ಗುಜಾ ಜಿಲ್ಲೆಯ ಕಾಡಿನಲ್ಲಿ ಎಸೆದಿದ್ದಾರೆ. ನಂತರ ಯಾರಿಗೂ ಅನುಮಾನ ಬಾರದಂತೆ ಮಗಳು ಕಾಣೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದಾರೆ.

    ಇದೇ ತಿಂಗಳ ಆಗಸ್ಟ್ 26ರಂದು ಹುಡುಗಿಯ ತಂದೆಯೇ ತಮ್ಮ ಮಗಳ ದೇಹವು ಕೊಳೆತ ಸ್ಥಿತಿಯಲ್ಲಿ ಕಾಡಿನಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಮಗಳ ಬಟ್ಟೆ ಹಾಗೂ ಚಪ್ಪಲಿಯನ್ನೂ ಗುರುತಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು ತನಿಖೆಗೆ ಒಳಪಡಿಸಿದಾಗ ತಾವೇ ಕೊಲೆ ಮಾಡಿರುವುದು ತಿಳಿದುಬಂದಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರದಲ್ಲೂ ಜೆಡಿಯು ಬಿಜೆಪಿಯೊಂದಿಗಿನ ಮೈತ್ರಿ ವಾಪಸ್?

    KILLING CRIME

    ಘಟನೆ ಜೂನ್‌ನಲ್ಲಿ ನಡೆದಿತ್ತು. ಆದರೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ನಿನ್ನೆ ಸಂಜೆ ಆರೋಪಿ ಪೋಷಕರನ್ನು ಬಂಧಿಸಲಾಗಿದೆ. ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 302 (ಕೊಲೆ) ಮತ್ತು 201 (ಅಪರಾಧದ ಸಾಕ್ಷ್ಯಗಳನ್ನು ಮರೆಮಾಚುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅತಿಹೆಚ್ಚು ಅತ್ಯಾಚಾರ ಕೇಸ್ ದಾಖಲಾಗಿರೋದು ರಾಜಾಸ್ಥಾನದಲ್ಲೇ, 3ನೇ ಸ್ಥಾನದಲ್ಲಿ ಯೋಗಿ ರಾಜ್ಯ

    ನವದೆಹಲಿ: ನ್ಯಾಷನಲ್ ಕ್ರೈಂ ರೆಕಾರ್ಡ್ಸ್ ಬ್ಯೂರೋ 2021ರ ಅತ್ಯಾಚಾರ ಪ್ರಕರಣಗಳ ವರದಿ ಬಿಡುಗಡೆ ಮಾಡಿದ್ದು, ಅತಿಹೆಚ್ಚು ಅತ್ಯಾಚಾರ ಕೇಸ್‌ಗಳು ದಾಖಲಾಗಿರುವುದು ರಾಜಾಸ್ಥಾನದಲ್ಲಿ, ಜೊತೆಗೆ ಉತ್ತರಪ್ರದೇಶ 3ನೇ ಸ್ಥಾನದಲ್ಲಿರುವುದಾಗಿ ಹೇಳಿದೆ.

    2021ರಲ್ಲಿ ರಾಜಸ್ಥಾನದಲ್ಲಿ 6,337, ಮಧ್ಯಪ್ರದೇಶದಲ್ಲಿ 2,947, ಉತ್ತರಪ್ರದೇಶದಲ್ಲಿ 2,845 ಹಾಗೂ ಮಹಾರಾಷ್ಟ್ರದಲ್ಲಿ 2,496 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2021ರಲ್ಲಿ ರಾಜಸ್ಥಾನದಲ್ಲಿ 5,310 ಪ್ರಕರಣಗಳು ದಾಖಲಾಗಿದ್ದು, ಪ್ರಸ್ತುತ ವರದಿಯು ಅತ್ಯಾಚಾರ ಪ್ರಕರಣಗಳಲ್ಲಿ ಶೇ.19.34 ರಷ್ಟು ಹೆಚ್ಚಾಗಿದೆ ಎಂಬುದನ್ನು ತೋರಿಸಿದೆ. ಇದನ್ನೂ ಓದಿ: ಕುಟುಂಬ ಯೋಜನೆ ಶಸ್ತ್ರಚಿಕಿತ್ಸೆಗೆ ಒಳಗಾಗಿ 4 ಮಹಿಳೆಯರ ಸಾವು

    2021ರಲ್ಲಿ ರಾಜ್ಯದಲ್ಲಿ ದಾಖಲಾದ ಒಟ್ಟು ಪ್ರಕರಣಗಳ ಪೈಕಿ 1,452 ಅತ್ಯಾಚಾರ ಪ್ರಕರಣಗಳಲ್ಲಿ 18 ವರ್ಷ ಒಳಪಟ್ಟ ಅಪ್ರಾಪ್ತರು ಬಲಿಯಾಗಿದ್ದಾರೆ. 4 ಪ್ರಕರಣಗಳಲ್ಲಿ 60 ವರ್ಷ ಮೇಲ್ಪಟ್ಟವರು ಸಿಲುಕಿದ್ದಾರೆ. ಅರ್ಧಕ್ಕಿಂತ ಹೆಚ್ಚು ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳು, ಕುಟುಂಬದ ಸ್ನೇಹಿತರು, ನೆರೆಯವರು ಸೇರಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಇದನ್ನೂ ಓದಿ: ಮನೆಕೆಲಸದಾಕೆಗೆ ಮೂತ್ರ ಕುಡಿಸಿ ಚಿತ್ರಹಿಂಸೆ ನೀಡಿದ ನಾಯಕಿ – ಬಿಜೆಪಿಯಿಂದ ಅಮಾನತು

    ಇನ್ನೂ ಮಹಿಳೆಯರ ವಿರುದ್ಧ ನಡೆದ ಅಪರಾಧ ಪ್ರಕರಣಗಳಲ್ಲಿ ಉತ್ತರಪ್ರದೇಶ ಮೊದಲ ಸ್ಥಾನದಲ್ಲಿದೆ. ರಾಜಸ್ಥಾನ 2ನೇ ಸ್ಥಾನದಲ್ಲಿದ್ದು ಶೇ.17ರಷ್ಟು ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ. ಈ ಪೈಕಿ ರಾಜಸ್ಥಾನದಲ್ಲಿ 40,738 ಪ್ರಕಣಗಳು ದಾಖಲಾಗಿದ್ದರೆ, 56,083 ಪ್ರಕರಣಗಳು ಉತ್ತರಪ್ರದೇಶದಲ್ಲಿ ದಾಖಲಾಗಿವೆ. ಒಟ್ಟಿನಲ್ಲಿ ಈ ಬಾರಿಯ ಎನ್‌ಸಿಆರ್‌ಬಿ ವರದಿಯು ಅಪರಾಧ ಹೆಚ್ಚಿದಂತೆ ಅಪರಾಧಗಳ ನೋಂದಣಿಯೂ ಹೆಚ್ಚಾಗುತ್ತಿದೆ ಎಂಬುದನ್ನು ಒತ್ತಿ ಹೇಳಿದೆ.

    Live Tv
    [brid partner=56869869 player=32851 video=960834 autoplay=true]

  • ಬೆಕ್ಕಿನ ಕೂಗಿನಿಂದ ನಿದ್ರೆಗೆ ಭಂಗ – ಪೆಟ್ರೋಲ್ ಸುರಿದು ಮಾಲೀಕನನ್ನೇ ಕೊಂದ ಭೂಪ

    ಬೆಕ್ಕಿನ ಕೂಗಿನಿಂದ ನಿದ್ರೆಗೆ ಭಂಗ – ಪೆಟ್ರೋಲ್ ಸುರಿದು ಮಾಲೀಕನನ್ನೇ ಕೊಂದ ಭೂಪ

    ಹೈದರಾಬಾದ್: ಬಹುತೇಕ ಮನೆಗಳಲ್ಲಿ ಸಹಜವಾಗಿ ಬೆಕ್ಕು ಇದ್ದೇ ಇರುತ್ತದೆ. ಕೆಲವರಿಗೆ ಬೆಕ್ಕಿನ ಕೂಗು ಅಪ್ಯಾಯಮಾನವೆನಿಸಿದ್ದರೂ ಇನ್ನೂ ಕೆಲವರಿಗೆ ಸದಾ ಕಿರಿ-ಕಿರಿಯಾಗುತ್ತದೆ. ಇಂತಹ ಸಂದರ್ಭದಲ್ಲಿ ಬೆಕ್ಕನ್ನು ಮನೆಯಿಂದ ಆಚೆಗೆ ಬಿಸಾಡಿದ ಉದಾಹರಣೆಗಳೂ ಇವೆ. ಆದರೆ ಇಲ್ಲೊಬ್ಬ ಬೆಕ್ಕಿನ ಕೂಗಿನಿಂದ ತನ್ನ ನಿದ್ರೆಗೆ ಭಂಗವಾಗುತ್ತದೆ ಎಂದು ಬೆಕ್ಕಿನ ಮಾಲೀಕನನ್ನೇ ಪೆಟ್ರೋಲ್ ಸುರಿದು ಕೊಂದಿದ್ದಾನೆ.

    ಹೌದು. ಬೆಕ್ಕಿನ ಕೂಗಿನಿಂದ ಸಿಟ್ಟಾದ ವ್ಯಕ್ತಿ ಹಾಗೂ ಬಾಲಕ ಸೇರಿ ಸಾಕು ಪ್ರಾಣಿ ಬೆಕ್ಕಿನ ಮಾಲೀಕನನ್ನೇ ಬೆಂಕಿಹಚ್ಚಿ ಸುಟ್ಟು ಹಾಕಿರುವ ವಿಲಕ್ಷಣ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಸಂತ್ರಸ್ತನ ಸ್ನೇಹಿತ ಶನಿವಾರ ಹೈದರಾಬಾದ್ ನಗರದ ಬಂಜಾರ ಪೊಲೀಸರಿಗೆ ದೂರು ನೀಡಿದ ಬಳಿಕ ಇದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ರಾಷ್ಟ್ರಗೀತೆಗೆ ಅಪಮಾನ : ಬರಗೂರು ವಿರುದ್ಧ ಬಿಜೆಪಿಯಿಂದ ದೂರು

    ಇಲ್ಲಿನ ರಂಗಾರೆಡ್ಡಿ ಜಿಲ್ಲೆಯ ಕೋತೂರು ಮಂಡಲದ ನಲ್ಲಾಪುರದಲ್ಲಿ ಹರೀಶ್ವರ್ ರೆಡ್ಡಿ ಅಲಿಯಾಸ್ ಚಿಂಟು (20) ಮತ್ತು ಇನ್ನೋರ್ವ 17 ವರ್ಷದ ಬಾಲಕ ವಾಸಿಸುತ್ತಿದ್ದರು.

    ಇಲ್ಲಿಗೆ 20 ವರ್ಷದ ಎಜಾಜ್ ಹುಸೇನ್ ಹಾಗೂ 20 ವರ್ಷದ ಅಸ್ಸಾಂ ಮೂಲದ ಬ್ರಾನ್ ಸ್ಟಿಲಿಂಗ್ ಸಹ ಅದೇ ಮನೆಯಲ್ಲಿ ಕೊಠಡಿಯನ್ನು ಬಾಡಿಗೆಗೆ ತೆಗೆದುಕೊಂಡು ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಅಂದೊಂದು ರಾತ್ರಿ ಎಜಾಜ್ ಮತ್ತು ಬ್ರಾನ್ ಇಬ್ಬರೂ ತಮ್ಮ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ದಾರಿಯಲ್ಲಿ ತಿರುಗಾಡುತ್ತಿದ್ದ ಬೆಕ್ಕನ್ನು ಕಂಡು ಮನೆಗೆ ತಂದಿದ್ದರು. ಇದನ್ನೂ ಓದಿ: ಬಲವಂತವಾಗಿ ದನದ ಮಾಂಸ ತಿನ್ನಿಸಿದ ಮುಸ್ಲಿಂ ಪತ್ನಿ, ಆಕೆಯ ಸಹೋದರ- ವ್ಯಕ್ತಿ ಆತ್ಮಹತ್ಯೆ

    ಈ ಬೆಕ್ಕನ್ನು ಮನೆಗೆ ತಂದಾಗ ನಿರಂತರವಾಗಿ ಕೂಗುತ್ತಿದ್ದರಿಂದ ಹರೀಶ್ವರ್ ರೆಡ್ಡಿ ನಿದ್ರೆಗೆ ಭಂಗ ಬಂದಿತ್ತು. ಇದರಿಂದ ಹರೀಶ್ವರ್ ತೀವ್ರ ಸಿಟ್ಟಿಗೆದ್ದಿದ್ದರು, ಹರೀಶ್ವರ್ ಜೊತೆಗಿದ್ದ ಬಾಲಕನಿಗೂ ಬೆಕ್ಕಿನ ಕೂಗು ಸಿಟ್ಟು ತರಿಸಿತ್ತು. ಬೆಕ್ಕು ಪದೇ-ಪದೇ ಕೂಗುತ್ತಿದ್ದರಿಂದ ಅಪ್ರಾಪ್ತನಿಗೂ ಕೋಪ ನೆತ್ತಿಗೇರಿತ್ತು. ಮಲಗಿದ್ದ ಇಬ್ಬರೂ ಎದ್ದು ಬೆಕ್ಕನ್ನು ತಂದಿದ್ದ ಎಜಾಜ್ ಎಂಬಾತನ ಮನೆಗೆ ಹೋಗಿ ಆತನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲೇ ಏಜಾಜ್‌ಗೆ ಗಂಭೀರವಾಗಿ ಸುಟ್ಟ ಗಾಯಗಳಾಗಿತ್ತು. ತಕ್ಷಣವೇ ಆತನ್ನು ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟನು.

    ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದಾಗ ಹರೀಶ್ವರ್ ರೆಡ್ಡಿ, ಎಜಾಜ್ ಆಕಸ್ಮಿಕವಾಗಿ ಬೆಂಕಿ ಹೊತ್ತಿಸಿಕೊಂಡಿದ್ದಾರೆ ಸುಳ್ಳು ಮಾಹಿತಿ ನೀಡಿದ್ದರು. ನಂತರ ಮೃತನ ಸ್ನೇಹಿತ ಬ್ರಾನ್ ನೀಡಿದ ದೂರಿನ ಮೇರೆಗೆ ಪೊಲೀಸರಿಗೆ ಘಟನೆ ತಿಳಿದುಬಂದಿದೆ. ಘಟನೆ ಸಂಬಂಧ ಹರೀಶ್ವರ್ ರೆಡ್ಡಿ ಹಾಗೂ ಆತನ ಜೊತೆಗಿದ್ದ ಅಪ್ರಾಪ್ತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.

    Live Tv
    [brid partner=56869869 player=32851 video=960834 autoplay=true]