ನವದೆಹಲಿ: ಒಂದೇ ವಾರದಲ್ಲಿ ಸತತವಾಗಿ ಮೂರು ಜನರನ್ನು ಕೊಲೆ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.
ಆರೋಪಿಯನ್ನು ಮೊಹಮ್ಮದ್ ರಾಜಿ(22) ಎಂದು ಗುರುತಿಸಲಾಗಿದೆ. ಈತ ಮೂಲತಃ ಬಿಹಾರ ನಿವಾಸಿಯಾಗಿದ್ದಾನೆ. ಗುರುಗ್ರಾಮದ ಐಎಫ್ಸಿ ಏಫ್ ಸಿಒ ಚೌಕ್ ಸಮೀಪ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಈ ಸರಣಿ ಹಂತಕ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾಗ ಸರಿಸುಮಾರು 3,000 ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಿದ್ದಾರೆ. ಅಗ ಆರೋಪಿಯ ಕುರಿತಾದ ಸುಳಿವು ಸಿಕ್ಕಿ ಮೊಹಮ್ಮದ್ ರಾಜಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
ಕೊಲೆಗಾರ ಹೇಳಿದ್ದೇನು?
ನವೆಂಬರ್ 23, 24 ಮತ್ತು 25 ರಂದು ಮೂರು ಜನರನ್ನು ಕೊಂದಿದ್ದೇನೆ. ಮೂವರನ್ನು ಕೊಂದು ಆನಂದಿಸುತ್ತಿದ್ದೆನು. ಅಪರಿಚಿತರನ್ನು ಕೊಂದಿದ್ದೇನೆ. ನಾನು ಚಿಕ್ಕವನಿದ್ದಾಗ ನನಗೆ ಏನು ತೀಳಿಯುವುದಿಲ್ಲವಾಗಿತ್ತು. ಆಗ ನನಗೆ ಜನರು ನೀನು ತುಂಬಾ ದುರ್ಬಲ, ನಿನ್ನಿಂದ ಏನು ಮಾಡಲು ಸಾಧ್ಯವಿಲ್ಲ ಎಂದು ಹೇಳಿ ನನ್ನನ್ನು ಹಂಗಿಸುತ್ತಿದ್ದರು. ಹೀಗಾಗಿ ನಾನು ಏನು ಬೇಕಾದರೂ ಮಾಡಬಲ್ಲೆ ಎಂಬುದನ್ನು ಜಗತ್ತಿಗೆ ತಿಳಿಸಲು ಈ ಕೃತ್ಯ ಎಸಗಿದ್ದೇನೆ ಎಂಬುದನ್ನು ಆರೋಪಿ ಮೊಹಮ್ಮದ್ ತನಿಖೆಯಲ್ಲಿ ಪೊಲೀಸರ ಬಳಿ ಹೇಳಿದ್ದಾನೆ.
3 ಕೊಲೆಗಳು ಯಾವವು?
ನವೆಂಬರ್ 23 ರಂದು ಗುರುಗ್ರಾಮದ ಲೀಜರ್ ವ್ಯಾಲಿ ಪಾರ್ಕ್ನಲ್ಲಿ ವ್ಯಕ್ತಿಯೊಬ್ಬನನ್ನು ಇರಿದು ಕೊಂದಿದ್ದಾನೆ. 24 ರಂದು ಗುರುಗ್ರಾಮ್ನ ಸೆಕ್ಟರ್ 40ರಲ್ಲಿ ಸೆಕ್ಯುರಿಟಿ ಗಾರ್ಡ್ ನನ್ನು ಕೊಲೆ ಮಾಡಿದ್ದಾನೆ. ಹಾಗೆಯೇ ಮಾರನೇ ದಿನ 25 ರಂದು ವ್ಯಕ್ತಿಯೊಬ್ಬನ ತಲೆ ಕಡಿದು ಹತ್ಯೆಗೈದಿದ್ದಾನೆ. ಹತ್ಯೆಯಾದ ಮೂರನೇ ವ್ಯಕ್ತಿಯ ಶವ ಚರಂಡಿಯಲ್ಲಿ ಪತ್ತೆಯಾಗಿತ್ತು.
ಮೊಹಮ್ಮದ್ ಈ ಮೂರು ಕೊಲೆ ಮಾತ್ರವಲ್ಲದೇ ದೆಹಲಿ, ಗುರುಗ್ರಾಮ್, ಬಿಹಾರ್ಗಳಲ್ಲಿ ಕನಿಷ್ಟ 10 ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂಬ ಅನುಮಾನವಿದೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಹಾಸನ: ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ನಿಲ್ಲಿಸಿ ಪ್ರೇಮಿಗಳು ನಾಪತ್ತೆಯಾಗಿದ್ದರು. ಇದೀಗ ಇಬ್ಬರ ಮೃತದೇಹ ಪತ್ತೆಯಾಗಿದೆ. ಈ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ನವೆಂಬರ್ 16 ರಂದು ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಯುವ ಪ್ರೇಮಿಗಳ ಮೃತದೇಹ ಹೇಮಾವತಿ ನಾಲೆಯಲ್ಲಿ ಪತ್ತೆಯಾಗಿದೆ. ಒಬ್ಬರನ್ನೊಬ್ಬರು ಬಟ್ಟೆಯಿಂದ ಕಟ್ಟಿಕೊಂಡು ನಾಲೆಗೆ ಜಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತರನ್ನು ಸುಶ್ಮಿತ(18) ಹಾಗೂ ರಮೇಶ್(19) ಎಂದು ಗುರುತಿಸಲಾಗಿದೆ. ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ತುಮಕೂರು ಜಿಲ್ಲೆಯ ವ್ಯಾಪ್ತಿಯಲ್ಲಿ ನಾಲೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಪ್ರೇಮಿಗಳಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಮನೆಯವರ ವಿರೋಧಕ್ಕೆ ಹೆದರಿ ಆತ್ಮಹತ್ಯೆಗೆ ಶಾರಣಾಗಿರಬಹುದು ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೇ ಪ್ರೇಮಿಗಳು ತಾವೇ ಆತ್ಮಹತ್ಯೆಗೆ ಶರಣಾಗಿದ್ದಾರೋ ಅಥವಾ ಯಾರಾದರೂ ಕೊಲೆ ಮಾಡಿ ನಾಲೆಗೆ ಎಸೆದಿದ್ದಾರೋ ಎಂಬ ಅನುಮಾನವೂ ವ್ಯಕ್ತವಾಗುತ್ತಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
– 4 ಲಕ್ಷ ಬಾಡಿಗೆ ಉಳಿಸಿಕೊಂಡಿದ್ದ ಮಹಿಳೆ – ದುಡ್ಡು ಕೇಳಿದ್ದಕ್ಕೆ ಮದುವೆಯ ನಾಟಕ – ಪ್ರೀತಿ ನಿರಾಕರಿಸಿದ್ದಕ್ಕೆ ರೇಪ್ ಕೇಸ್ ಬೆದರಿಕೆ
ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಅಣ್ಣನ ಮಗಳ ಹೆಸರನ್ನು ಹೇಳಿಕೊಂಡು ಅಮಾಯಕರನ್ನು ವಂಚಿಸುತ್ತಿದ್ದ ಕಿಲಾಡಿ ಮಹಿಳೆಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
ಜ್ಞಾನ ಗಂಗಾ ಲೇಔಟ್ ನಿವಾಸಿ ಪಲ್ಲವಿ (32) ಬಂಧಿತ ಆರೋಪಿತೆ. ನಾನೊಬ್ಬಳು ಸಮಾಜಸೇವಕಿ, ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗಕ್ಕೆ ಬ್ಯಾಂಕಿನಿಂದ ಸಾಲ ಕೊಡಿಸುತ್ತೇನೆ ಎಂದು ಹೇಳಿ ವಂಚಿಸುತ್ತಿದ್ದಳು. 10ಕ್ಕೂ ಹೆಚ್ಚು ಜನರಿಗೆ ಈಕೆ ವಂಚಿಸಿದ್ದು ಈಗ ಈಕೆಯನ್ನು ಜ್ಞಾನ ಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಏನಿದು ಪ್ರಕರಣ?
ಜನಾರ್ದನ್ ಎಂಬವರು ಬಾಡಿಗೆ ಕಾರಿನ ವ್ಯವಹಾರ ಮಾಡುತ್ತಿದ್ದು ಅವರ ಬಳಿ ಪಲ್ಲವಿ, ಮಾಜಿ ಡಿಸಿಎಂ ಪರಮೇಶ್ವರ್ ಅವರ ಅಣ್ಣನ ಮಗಳಾದ ನಾನು ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಬ್ಯಾಂಕ್ ನಿಂದ ಸಾಲ ಕೊಡಿಸುವ ಲಸವನ್ನು ಮಾಡುತ್ತಿದ್ದೇನೆ ಎಂದು ಹೇಳಿ ಪರಿಚಯ ಮಾಡಿಕೊಂಡಿದ್ದಳು. ಇದಾದ ಬಳಿಕ ಕೋವಿಡ್ 19 ಲಾಕ್ಡೌನ್ ಸಮಯದಲ್ಲಿ 2 ದಿನದ ಮಟ್ಟಿಗೆ ಕಾರು ಬಾಡಿಗೆಗೆ ಬೇಕು ಎಂದು ರಾಜಶೇಖರ್ ಬಳಿ ಕೇಳಿಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ಕಾರು ಚಾಲಕ ಯೋಗೇಶ್ ಪಲ್ಲವಿಯನ್ನು ಸಂಪರ್ಕಿಸಿದ್ದರು.
ಎರಡು ದಿನ ಬೆಂಗಳೂರು, ತುಮಕೂರಿಗೆ ಕಾರಿನಲ್ಲಿ ಸುತ್ತಾಡಿದ ಬಳಿಕ ಬಾಡಿಗೆ ನೀಡಿ ನಂತರ ತಾನು ಕರೆದಾಗ ಬಾಡಿಗೆಗೆ ಬರಬೇಕು ಎಂದು ಪಲ್ಲವಿ ಸೂಚಿಸಿದ್ದಳು. ಇದಾದ ಬಳಿಕ ಹಲವು ಬಾರಿ ಬಾಡಿಗೆ ಪಡೆದಿದ್ದು ಒಟ್ಟು 40 ಸಾವಿರ ಕಿ.ಮೀ ಸುತ್ತಾಡಿಸಿ 4 ಲಕ್ಷ ರೂ. ಬಾಡಿಗೆ ಉಳಿಸಿಕೊಂಡಿದ್ದಳು.
ಯೋಗೇಶ್ ಬಾಡಿಗೆ ದುಡನ್ನು ಕೇಳಿದಾಗ ಏನೇನೋ ಸಬೂಬು ಹೇಳಲು ಆರಂಭಿಸಿದಳು. ಬಾಡಿಗೆ ನೀಡಲೇಬೇಕು ಎಂದು ಹೇಳಿದಾಗ ಯೋಗೇಶ್ ಬಳಿ ಪ್ರೀತಿಯ ನಾಟಕವಾಡಲು ಆರಂಭಿಸಿದಳು. ನೀನು ಅಂದರೆ ನನಗೆ ಇಷ್ಟ. ನನ್ನನ್ನು ಮದುವೆಯಾಗು ಎಂದು ಹೇಳಲು ಆರಂಭಿಸಿದಳು. ಇದಕ್ಕೆ ಯೋಗೇಶ್ ನಿರಾಕರಿಸಿದಾಗ ಪಲ್ಲವಿ, ನನ್ನನ್ನು ಮದುವೆಯಾಗದೇ ಇದ್ದರೆ ನಿನ್ನ ವಿರುದ್ಧ ಅತ್ಯಾಚಾರದ ಕೇಸ್ ದಾಖಲಿಸುವುದಾಗಿ ಬೆದರಿಕೆ ಹಾಕಿದ್ದಳು.
ಪಲ್ಲವಿಯ ಈ ನಡೆಯ ಬಗ್ಗೆ ಯೋಗೇಶ್ ಮಾಲಿಕ ಜನಾರ್ದನ್ಗೆ ತಿಳಿಸಿದ್ದರು. ಈಕೆಯ ವರ್ತನೆಯಿಂದ ಅನುಮಾನಗೊಂಡ ಜನಾರ್ದನ್ ಮತ್ತು ಯೋಗೇಶ್ ಸದಾಶಿವ ನಗರದಲ್ಲಿರುವ ಪರಮೇಶ್ವರ್ ಅವರ ನಿವಾಸಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಪರಮೇಶ್ವರ್ ಪತ್ನಿ ಈಕೆ ಯಾರು ಎನ್ನುವುದೇ ತಿಳಿದಿಲ್ಲ ಎಂದು ಹೇಳಿದ್ದಾರೆ. ಇದಾದ ಬಳಿಕ ತುಮಕೂರಿನಲ್ಲಿದ್ದ ಪರಮೇಶ್ವರ್ ಅವರ ಬಳಿ ಈಕೆಯನ್ನು ಕರೆದುಕೊಂಡು ಹೋಗಲಾಗಿತ್ತು. ಪರಮೇಶ್ವರ್ ಈಕೆ ನನ್ನ ಅಣ್ಣನ ಮಗಳಲ್ಲ. ಕೂಡಲೇ ದೂರು ನೀಡಿ ಎಂದು ಸೂಚಿಸಿದ್ದರು.
ಕಿಡ್ನಾಪ್ ದೂರು:
ಈಕೆಯನ್ನು ಕರೆ ತರುತ್ತಿದ್ದಾಗ ಕೆಂಗೇರಿ ಸಮೀಪ ನನಗೆ ಮೂತ್ರ ವಿಸರ್ಜನೆ ಬರುತ್ತಿದೆ ಎಂದು ಹೇಳಿ ಕಾರನ್ನು ನಿಲ್ಲಿಸಿದ್ದಾಳೆ. ಈ ವೇಳೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಯೋಗೇಶ್ ಮತ್ತು ಇತರರು ನನ್ನನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಹೇಳಿದ್ದಾಳೆ. ಕರೆಯ ಹಿನ್ನೆಲೆಯಲ್ಲಿ ಅಲರ್ಟ್ ಆದ ಕೆಂಗೇರಿ ಪೊಲೀಸರು ಯೋಗೇಶ್ಗೆ ಕರೆ ಮಾಡಿ, ಪಲ್ಲವಿ ಎಂಬಾಕೆಯನ್ನು ಕಿಡ್ನಾಪ್ ಮಾಡಿದ್ದೀರಿ ಎಂಬ ದೂರು ಕಂಟ್ರೋಲ್ ರೂಂಗೆ ಬಂದಿದೆ. ಕೂಡಲೇ ಆಕೆಯನ್ನು ಪೊಲೀಸ್ ಠಾಣೆಗೆ ಕರೆ ತನ್ನಿ ಎಂದು ಸೂಚಿಸಿದ್ದಾರೆ. ಪೊಲೀಸರ ಸೂಚನೆಯ ಹಿನ್ನೆಲೆಯಲ್ಲಿ ಆಕೆಯನ್ನು ಕೆಂಗೇರಿ ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು.
ಪೊಲಸ್ ಅಧಿಕಾರಿಗಳ ವಿಚಾರಣೆ ಸಮಯದಲ್ಲಿ ಪರಮೇಶ್ವರ್ ಅವರ ಅಣ್ಣನ ಮಗಳು ಎಂದು ಹೇಳಿ ಹಲವು ಜನರಿಗೆ ಮೋಸ ಮಾಡಿದ್ದನ್ನು ಪಲ್ಲವಿ ತಪ್ಪೊಪ್ಪಿಕೊಂಡಿದ್ದಾಳೆ. ವಿಚಾರಣೆ ನಡೆಸಿದ ಕೆಂಗೇರಿ ಪೊಲೀಸರು ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಈಕೆಯ ವಿರುದ್ಧ ದೂರು ನೀಡುವಂತೆ ಸೂಚಿಸಿದ್ದಾರೆ. ಮಹಿಳಾ ಪೊಲೀಸರ ಬೆಂಗಾವಲಿನಲ್ಲಿ ಈಕೆಯನ್ನು ಕರೆತಂದ ಬಳಿಕ ಜ್ಞಾನ ಭಾರತಿ ಠಾಣೆಯಲ್ಲಿ ದೂರು ನೀಡಿದ್ದು, ಈಗ ಬಂಧಿಸಲಾಗಿದೆ.
ಹಾಸನ: ಬಡವರ ಊಟಿ ಎನಿಸಿಕೊಂಡಿರುವ ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಸುಮಾರು 9 ಕೊಲೆಗಳು ನಡೆದಿದ್ದು ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ.
ಕಳೆದ ರಾತ್ರಿ ಕೂಡ ಚನ್ನರಾಯಪಟ್ಟಣ ತಾಲೂಕಿನ, ಬೇಡಿಗನಹಳ್ಳಿ ಸಮೀಪ ಸುಮಾರು 25 ವರ್ಷದ ಯುವಕನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ತಾಲೂಕಿನ ಹೊಸೂರು ಗ್ರಾಮದ ಹೇಮಂತ್ ಎಂಬವರ ಹಿರಿಯ ಮಗ ಪುನೀತ್ (25) ಮೃತ ಯುವಕ.
ಮೃತ ಯುವಕನ ತಂದೆ ಹೇಮಂತ್ ಹಾಗೂ ಪತ್ನಿ ಯಶೋಧಾ ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಹೊಸೂರು ಗ್ರಾಮದಲ್ಲಿ ತಂದೆ ಹೇಮಂತ್ ಜೊತೆ ಎರಡನೇ ಮಗ ಪ್ರಶಾಂತ್ ಇದ್ದರೆ, ತಾಯಿ ಯಶೋಧಾ ಜೊತೆ ಬೇಡಿಗನಹಳ್ಳಿ ಗ್ರಾಮದಲ್ಲಿ ಪುನೀತ್ ವಾಸವಾಗಿದ್ದನು. ರಾತ್ರಿ 8 ಗಂಟೆ ಸುಮಾರಿನಲ್ಲಿ ಹೊಸೂರು ಗ್ರಾಮದ ದೊಡ್ಡಪ್ಪನ ಮನೆಯಲ್ಲಿ ಊಟ ಮುಗಿಸಿಕೊಂಡು ಬೇಡಿಗನಹಳ್ಳಿಗೆ ಕೆರೆ ಏರಿ ಮೇಲೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಪುನೀತನ ಎಡಗೈ ಹಾಗೂ ಎದೆಯ ಭಾಗಕ್ಕೆ ಎರಡು ಗುಂಡು ಬಿದ್ದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಹಾಸನ ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಸುಮಾರು 9 ಕೊಲೆ ಪ್ರಕರಣಗಳು ವರದಿಯಾಗಿದ್ದು ಜಿಲ್ಲೆಯ ಜನರ ನಿದ್ದೆಗೆಡಿಸಿದೆ. ಲಾಕ್ಡೌನ್ ನಂತರ ಹಾಸನದಲ್ಲಿ ಕ್ರೈಂ ಹೆಚ್ಚಳವಾಗುತ್ತಿದೆ ಎಂಬ ಆತಂಕ ಮೂಡಿಸಿದೆ.
ಬೆಂಗಳೂರು: ನಗರದ ವಿಶಾಲ್ ಮಾರ್ಟ್ ಬಳಿ ಇಂದು ಬೆಳಗ್ಗೆ ಯುವತಿಯ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ ಪಾಗಲ್ ಪ್ರೇಮಿ ಗಿರೀಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಯುವತಿ ನಿತ್ಯಶ್ರೀ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದ ಆರೋಪಿ ಗಿರೀಶ್ ತಾವರೆಕೆರೆ ವ್ಯಾಪ್ತಿಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ಲಭಿಸಿದೆ. ಮದುವೆ ನಿರಾಕರಿಸಿದ್ದ ಕಾರಣಕ್ಕೆ ಆರೋಪಿ ಗಿರೀಶ್ ಯುವತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದ. ಕೂಡಲೇ ಪ್ರಕರಣ ತನಿಖೆ ಮುಂದಾದ ಪೊಲೀಸರಿಗೆ ಆರೋಪಿ ಕೂಡ ಆತ್ಮಹತ್ಯೆಗೆ ಶರಣಾಗುವ ಸಾಧ್ಯತೆ ಕುರಿತು ಅನುಮಾನ ಮೂಡಿತ್ತು. ಆದ್ದರಿಂದ ಪೊಲೀಸರು ಆರೋಪಿಯ ಪತ್ತೆಗೆ ತ್ವರಿತ ಕಾರ್ಯಾಚರಣೆ ನಡೆಸಿದ್ದರು.
ತಾವರೆಕರೆ ಬಳಿಯ ತೋಪಿನಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ ಮಾಹಿತಿ ಸ್ಥಳೀಯ ಪೊಲೀಸರಿಗೆ ಲಭಿಸಿತ್ತು. ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸರು ಪರಿಶೀಲನೆ ನಡೆಸಿ ಮಾಹಿತಿ ಕಲೆಹಾಕಿದ್ದು, ಮೃತ ಯುವಕ ಗಿರೀಶ್ ಎಂದು ಖಚಿತ ಪಡಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಗಿರೀಶ್ ಘಟನೆಯಲ್ಲಿ ಆಕೆ ಸಾವನ್ನಪ್ಪಿರುತ್ತಾಳೆ ಎಂದು ತಿಳಿದು ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಕುರಿತು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದರು, ಈ ಅನುಮಾನ ಸದ್ಯ ನಿಜವಾಗಿದೆ.
ಏನಿದು ಘಟನೆ?
ಗಿರೀಶ್ ಮತ್ತು ನಿತ್ಯಶ್ರೀ ಮಂಡ್ಯದಲ್ಲಿ ಕಾಲೇಜು ವ್ಯಾಸಂಗ ಮಾಡುವ ವೇಳೆ ಪ್ರೀತಿ ಮಾಡುತ್ತಿದ್ದರು. ನಂತರ ಓದು ಮಗಿದ ಮೇಲೆ ನಿತ್ಯಶ್ರೀ ಮಂಡ್ಯದಿಂದ ಬೆಂಗಳೂರಿಗೆ ಶಿಫ್ಟ್ ಆಗಿದ್ದಳು. ಬೆಂಗಳೂರಿನ ಪಾಪರೆಡ್ಡಿ ಪಾಳ್ಯದಲ್ಲಿ ವಾಸವಿದ್ದ ನಿತ್ಯಶ್ರೀ, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಗಿರೀಶ್ ಖಾಸಗಿ ಆಸ್ಪತ್ರೆಯ ಸೆಕ್ಯೂರಿಟಿ ಸೂಪರ್ ವೈಸರ್ ಆಗಿದ್ದು, ಕಳೆದ ಕೆಲವು ತಿಂಗಳಿಂದ ಇಬ್ಬರ ನಡುವೆ ಬಿನ್ನಾಭಿಪ್ರಾಯ ಉಂಟಾಗಿತ್ತು.
ಈ ಹಿಂದೆ ಇಬ್ಬರ ಪ್ರೀತಿಯ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬಳಿಕ ರಾಜಿ ಮಾಡಿಕೊಂಡು ಸುಮ್ಮನಾಗಿರುವುದಾಗಿ ಇಬ್ಬರು ಹೇಳಿದ್ದರು. ಆದರೆ ಈ ನಡುವೆ ಮತ್ತೆ ಗಿರೀಶ್ ನಿತ್ಯಶ್ರೀಗೆ ಕಾಟಕೊಡುತ್ತಿದ್ದ. ಈ ಕಾರಣದಿಂದಲೇ ನಿತ್ಯಶ್ರೀಗೆ ಆಕೆಯ ಮನೆಯವರು ಮುಂದಿನ ಜೂನ್ ತಿಂಗಳಲ್ಲಿ ಮದುವೆ ಮಾಡಲು ತಯಾರಿ ನಡೆಸಿದ್ದರು. ಇದನ್ನು ತಿಳಿದ ಗಿರೀಶ್ ಇಂದು ಯುವತಿ ತಾನು ಕೆಲಸ ಮಾಡುತ್ತಿದ್ದ ಖಾಸಗಿ ಕಂಪನಿಗೆ ಕೆಲಸಕ್ಕೆ ರಾಜೀನಾಮೆ ನೀಡಲು ತೆರಳಿದ್ದ ವೇಳೆ ಮಂಡ್ಯದಿಂದ ಬಂದು ಮಚ್ಚಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದ. ಗಂಭೀರವಾಗಿ ಗಾಯಗೊಂಡಿರುವ ನಿತ್ಯಶ್ರೀ ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಚಿಕ್ಕಬಳ್ಳಾಪುರ: ಮದ್ಯದ ಅಮಲಿನಲ್ಲಿ ಸಹೋದರರ ನಡುವೆ ಜಗಳ ನಡೆದಿದ್ದು, ಕೋಪದ ಕೈಗೆ ಬುದ್ಧಿ ಕೊಟ್ಟ ಅಣ್ಣ, ತಮ್ಮನ ಕೈಯನ್ನೇ ತುಂಡರಿಸಿರುವ ಘಟನೆ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ರಮಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿಗಳಾದ 38 ವರ್ಷದ ಕೃಷ್ಣಪ್ಪ ಹಾಗೂ ತಮ್ಮ 33 ವರ್ಷದ ಹನುಮಂತರಾಯಪ್ಪ ಇಬ್ಬರು ಸಹೋದರರು. ಇಂದು ಮದ್ಯ ಸೇವಿಸಿ ಬಳಿಕ ಇಬ್ಬರು ಮನೆಯಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಇಬ್ಬರ ನಡುವೆ ತಟ್ಟೆ ತೊಳೆಯುವ ವಿಚಾರಕ್ಕೆ ಜಗಳ ಆರಂಭವಾಗಿದ್ದೆ. ಮದ್ಯದ ಮತ್ತಿನಲ್ಲಿದ್ದ ಕಾರಣ ಜಗಳ ವಿಕೋಪಕ್ಕೆ ದಾರಿ ಮಾಡಿಕೊಟ್ಟಿದ್ದು, ತಮ್ಮನತ್ತ ಅಣ್ಣ ಮಚ್ಚು ಬೀಸಿದ್ದಾನೆ. ಅಣ್ಣ ಬೀಸಿದ ಮಚ್ಚಿನೇಟಿನಿಂದ ಪಾರಾಗಲು ಯತ್ನಿಸಿದ ತಮ್ಮ ಹನುಮಂತರಾಯಪ್ಪ ತನ್ನ ಎಡಗೈ ಅಡ್ಡ ಇಟ್ಡಿದ್ದು, ಪರಿಣಾಮ ಆತನ ಕೈ ಸಂಪೂರ್ಣ ಕಟ್ ಆಗಿ ನೆಲಕ್ಕೆ ಬಿದ್ದಿದೆ.
ಗಾಯಾಳುವಿಗೆ ಗೌರಿಬಿದನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ನಂತರ ಕೃಷ್ಣಪ್ಪ ಸ್ಥಳದಿಂದ ಪರಾರಿಯಾಗಿದ್ದು, ಮಾಹಿತಿ ಪಡೆದಿರುವ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ.
ಬರೋಬ್ಬರಿ 41 ದಿನಗಳ ಬಳಿಕ ಸರ್ಕಾರ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಿತ್ತು. ಆ ಬಳಿಕ ಅಪಘಾತ, ಹಲ್ಲೆ ಪ್ರಕರಣಗಳು ಹೆಚ್ಚು ವರದಿಯಾಗಿದೆ. ಘಟನೆಯಲ್ಲಿ ಹನುಮಂತರಾಯಪ್ಪ, ಕೃಷ್ಣಪ್ಪ ಇಬ್ಬರು ಮದ್ಯವ್ಯಸನಿಗಳಾಗಿದ್ದು, ಇವರ ಕಿರುಕುಳ ತಾಳಲಾರದೆ ಹೆಂಡತಿಯರು ಸಹ ಇವರನ್ನು ತೊರೆದಿದ್ದರು. ಸಣ್ಣ ಪುಟ್ಟ ವಿಚಾರಗಳಿಗೂ ಇಬ್ಬರು ಜಗಳ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ.
– ಕಳೆದ ವರ್ಷದ ಒಂದು ತಿಂಗಳಲ್ಲಿ 1,503 ಈಗ 260 ಪ್ರಕರಣ
– ಕಾರಣ ಬಿಚ್ಚಿಟ್ಟ ಪೊಲೀಸ್ ಆಯುಕ್ತ
ಚಂಡೀಗಢ: ಕೊರೊನಾ ವೈರಸ್ ಲಾಕ್ಡೌನ್ನಿಂದಾಗಿ ಇಡೀ ದೇಶದ ಜನರು ಸಾಮಾಜಿಕ ಅಂತರ ಕಾಯ್ದುಕೊಂಡು, ಮನೆಯೊಳಗಿದ್ದಾರೆ. ಇದರಿಂದಾಗಿ ಅಪರಾಧ ಪ್ರಕರಣಗಳು ಕೂಡ ಕಡಿಮೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಹರಿಯಾಣದ ಗುರುಗ್ರಾಮ್ನಲ್ಲಿ ಲಾಕ್ಡೌನ್ನಿಂದಾಗಿ ಅತ್ಯಾಚಾರ, ಕೊಲೆ, ಕಳ್ಳತನ ಮತ್ತು ದರೋಡೆ ಮುಂತಾದ ಅಪರಾಧಗಳಲ್ಲಿ ಶೇ.80ಕ್ಕಿಂತಲೂ ಕಡಿಮೆಯಾಗಿದೆ. 2019 ರಲ್ಲಿ ಇದೇ ಅವಧಿಯಲ್ಲಿ ನಡೆದ ಅಪರಾಧಗಳಿಗೆ ಹೋಲಿಸಿದರೆ ಮಾರ್ಚ್ 25 ರಿಂದ ಏಪ್ರಿಲ್ 15 ರವರೆಗೆ ದಾಖಲಾದ ಅಪರಾಧಗಳು ಶೇ.80ಕ್ಕಿಂತಲೂ ಕಡಿಮೆಯಾಗಿದೆ ಎಂದು ಪೊಲೀಸರು ಹೇಳಿದರು.
ಮಾರ್ಚ್ 25 ರಿಂದ ಏಪ್ರಿಲ್ 15 ರವರೆಗೆ 625 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಕಳೆದ ವರ್ಷ ಈ ಇದೇ ಸಮಯದಲ್ಲಿ 1,503 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದರು. ಈ ವರ್ಷ ದಾಖಲಾದ 625 ಪ್ರಕರಣಗಳಲ್ಲಿ 365 ಪ್ರಕರಣಗಳು ಕೊರೊನಾ ವೈರಸ್ ಲಾಕ್ಡೌನ್ ಉಲ್ಲಂಘನೆಗೆ ಸಂಬಂಧಿಸಿವೆ. ಹೀಗಾಗಿ ಒಟ್ಟು 260 ಮಾತ್ರ ಎಫ್ಐಆರ್ ದಾಖಲಾಗಿದೆ. ಇದು 2019 ರಲ್ಲಿ ದಾಖಲಾದ ಎಫ್ಐಆರ್ಗಳ ಸಂಖ್ಯೆಗೆ ಹೋಲಿಸಿದರೆ ಶೇ.83ರಷ್ಟು ಕಡಿಮೆಯಾಗಿದೆ.
ಕಿಕ್ಕಿರಿದ ಬೀದಿಗಳು ಮತ್ತು ಜನರ ಓಡಾಟದಿಂದ ಅಪರಾಧಗಳಿಗೆ ಅವಕಾಶಗಳನ್ನು ಸೃಷ್ಟಿಸುತ್ತದೆ. ಈಗ ಜನರು ಮನೆಯಲ್ಲಿದ್ದಾರೆ ಮತ್ತು ಪೊಲೀಸರು ಬೀದಿಯಲ್ಲಿ ಕರ್ತವ್ಯ ಮಾಡುತ್ತಿರುವುದರಿಂದ ಅಪರಾಧ ಪ್ರಕರಣಗಳು ಕಡಿಮೆಯಾಗಿವೆ. ವಾಹನಗಳ ಸಂಚಾರ ನಿರ್ಬಂಧದಿಂದಲೂ ಅಪರಾಧ ಕಡಿಮೆಯಾಗಿವೆ ಎಂದು ಗುರುಗ್ರಾಮ್ ಪೊಲೀಸ್ ಆಯುಕ್ತ ಮೊಹಮ್ಮದ್ ಅಕಿಲ್ ತಿಳಿಸಿದರು.
ಈ ವರ್ಷ ಕೇವಲ 16 ವಾಹನ ಕಳ್ಳತನ ಪ್ರಕರಣಗಳು ದಾಖಲಾಗಿದ್ದು, ಕಳೆದ ವರ್ಷ 275 ಪ್ರಕರಣಗಳು ಬೆಳಕಿಗೆ ಬಂದಿದ್ದವು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳ್ಳರನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿನ ವಾಹನಗಳನ್ನು ಮಾರುಕಟ್ಟೆ ಪ್ರದೇಶಗಳಲ್ಲಿ ನಿಲ್ಲಿಸಲಾಗಿದೆ. ಯಾಕೆಂದರೆ ಲಾಕ್ಡೌನ್ನಿಂದಾಗಿ ಮಾರುಕಟ್ಟೆಗಳು ಮುಚ್ಚಲ್ಪಟ್ಟಿವೆ. ಜೊತೆಗೆ ನಗರದಾದ್ಯಂತ ಪೊಲೀಸ್ ಚೆಕ್ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ. ಹೀಗಾಗಿ ಕಳ್ಳರು ವಾಹನ ಕಳ್ಳತನ ಮಾಡುವ ಸಾಧ್ಯತೆ ಇಲ್ಲ ಎಂದು ಅಧಿಕಾರಿ ಹೇಳಿದರು.
ಆದರೂ ಈ ವರ್ಷ ವಂಚನೆ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದೆ. ಮಾರ್ಚ್ 25 ರಿಂದ ಏಪ್ರಿಲ್ 15 ರವರೆಗೆ 59 ವಂಚನೆ ಪ್ರಕರಣಗಳು ದಾಖಲಾಗಿದ್ದಾವೆ. ಕಳೆದ ವರ್ಷ ಇದೇ ಅವಧಿಯಲ್ಲಿ ಕೇವಲ 11 ಪ್ರಕರಣ ದಾಖಲಾಗಿತ್ತು.
ಬೆಂಗಳೂರು: ಕೊರೊನಾ ವೈರಸ್ ಮತ್ತಷ್ಟು ಜಾಸ್ತಿ ಆಗದಂತೆ ತಡೆಯಲು ಕರ್ನಾಟಕ ಸರ್ಕಾರ ವಿಶೇಷ ಕಠಿಣ ಕಾನೂನು ಜಾರಿ ಮಾಡಿದೆ. ಸಾಂಕ್ರಾಮಿಕ ರೋಗಗಳ ಕಾಯ್ದೆ 1897ರ ಸೆಕ್ಷನ್ 2,3 ಮತ್ತು 4ರಡಿ ರಾಜ್ಯ ಸರ್ಕಾರ ‘ಕರ್ನಾಟಕ ಸಾಂಕ್ರಾಮಿಕ ರೋಗ ಕೋವಿಡ್ -19 ನಿಯಂತ್ರಣ 2020′(Karnataka Epidemic Diseases, COVID-19 Regulations, 2020’) ಹೆಸರಿನಲ್ಲಿ ನಿಯಂತ್ರಣ ಕ್ರಮವನ್ನು ಪ್ರಕಟಿಸಿದೆ.
ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕಠಿಣ ನಿಯಮವನ್ನು ಜಾರಿ ಮಾಡಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋದರೆ ಈ ನಿಯಮ ಜಾರಿಯಾಗಲಿದೆ.
ಕೊರೊನಾ ನಿಯಮ ಏನು?
1. ಸೋಂಕು ಶಂಕಿತ ವ್ಯಕ್ತಿ ಸರ್ಕಾರಿ/ ಖಾಸಗಿ ಆಸ್ಪತ್ರೆಗೆ ದಾಖಲಾದಾಗ ಕಡ್ಡಾಯವಾಗಿ ಚಿಕಿತ್ಸೆ ನೀಡಲೇಬೇಕು. ಒಂದು ವೇಳೆ ವ್ಯಕ್ತಿ ಚಿಕಿತ್ಸೆ ನಿರಾಕರಿಸಿದ್ರೆ ಆರೋಗ್ಯಾಧಿಕಾರಿಗಳು, ವೈದ್ಯಾಧಿಕಾರಿಗಳು ಒತ್ತಾಯ ಪೂರ್ವಕವಾಗಿ ಆಸ್ಪತ್ರೆಗೆ ದಾಖಲಿಸಬೇಕು. 14 ದಿನ ಐಸೋಲೇಷನ್ ಸೆಂಟರಿನಲ್ಲಿ ಇಟ್ಟುಕೊಳ್ಳಬೇಕು.
2. ಕೊರೊನಾ ಪಾಸಿಟಿವ್ ರಿಪೋರ್ಟ್ ಆದ ವ್ಯಕ್ತಿ ವಾಸವಿರುವ ಪ್ರದೇಶ, ಹಳ್ಳಿ/ಬಡಾವಣೆ/ನಗರ/ ವಾರ್ಡ್/ ಕಾಲೋನಿಗೆ ಸಂಪೂರ್ಣ ದಿಗ್ಭಂಧನವನ್ನು ಹೇರಲಾಗುತ್ತದೆ.
3. ಸೋಂಕು ಪೀಡಿತ ವಾಸವಿರುವ ವ್ಯಕ್ತಿಯ ಪ್ರದೇಶವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ. ಸೋಂಕುಪೀಡಿತ ವ್ಯಕ್ತಿ ಇರುವ ಪ್ರದೇಶಕ್ಕೆ ಬೇರೆ ಜನರ ಪ್ರವೇಶಕ್ಕೆ ನಿಷೇಧ
4. ಸೋಂಕುಪೀಡಿತ ವ್ಯಕ್ತಿ ವಾಸವಿರುವ ಪ್ರದೇಶದವರು ಎಲ್ಲಿಯೂ ಹೊರಗಡೆ ಹೋಗುವಂತಿಲ್ಲ. ಸೋಂಕು ಪೀಡಿತನ ಏರಿಯಾದ ಶಾಲಾ ಕಾಲೇಜ್ ಬಂದ್, ಕಚೇರಿಗಳು ಬಂದ್ ಹಾಗೂ ಸಾರ್ವಜನಿಕ ಸಮಾರಂಭಗಳನ್ನು ಬಂದ್ ಮಾಡಲಾಗುತ್ತದೆ. ಈ ಸ್ಥಳದಲ್ಲಿ ವಾಹನಗಳ ಓಡಾಟ ಸಂಪೂರ್ಣ ನಿಷೇಧಿಸಲಾಗುತ್ತದೆ.
5. ಸೋಂಕು ಪೀಡಿತರು ಹಾಗೂ ಶಂಕಿತರು ಕಡ್ಡಾಯವಾಗಿ ಐಸೋಲೇಷನ್ ಸೆಂಟರ್ನಲ್ಲಿರಬೇಕು. ಈ ಸ್ಥಳದಲ್ಲಿರುವ ಖಾಸಗಿ ಸರ್ಕಾರಿ ಬಿಲ್ಡಿಂಗ್ಗಳನ್ನು ವಶಕ್ಕೆ ಪಡೆದುಕೊಂಡು ಅಲ್ಲಿ ಐಸೋಲೇಷನ್ ನಿರ್ಮಾಣ ಮಾಡಬೇಕು. ತುರ್ತು ಪರಿಸ್ಥಿತಿ ನಿಭಾಯಿಸಲು ಎಲ್ಲಾ ಸರ್ಕಾರಿ ಸಿಬ್ಬಂದಿಗಳು ಕೈಜೋಡಿಸಲೇಬೇಕು. ಕುಟುಂಬ ಮತ್ತು ಆರೋಗ್ಯ ಇಲಾಖೆಯ ಎಲ್ಲ ಸೂಚನೆಗಳನ್ನು ಸರ್ಕಾರಿ ಸಿಬ್ಬಂದಿ ಪಾಲಿಸಲೇಬೇಕು.
6 ಈ ಕಾಯ್ದೆ ಜಾರಿ ಮಾಡುವ ಅಧಿಕಾರ ಆಯಾಯ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯ ಅಧಿಕಾರಿ, ಜಿಲ್ಲಾ ಸರ್ಜನ್, ತಾಲೂಕು ಆರೋಗ್ಯ ಅಧಿಕಾರಿ, ಬಿಬಿಎಂಪಿ ಮುಖ್ಯ ಆರೋಗ್ಯ ಅಧಿಕಾರಿಗಳ ಜೊತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಇರುತ್ತದೆ.
7. ಒಂದು ವೇಳೆ ಕೊರೊನಾ ಪಾಸಿಟಿವ್ ಕಂಡುಬಂದರೆ ಸರ್ಕಾರಿ/ ಖಾಸಗಿ ಆಸ್ಪತ್ರೆಗಳು ರೋಗಿ ವಿದೇಶಕ್ಕೆ ಹೋಗಿದ್ದರೆ ಅಥವಾ ಆತ ಸಂಚರಿಸಿದ ಪ್ರದೇಶದ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳಬೇಕು. ಅಷ್ಟೇ ಅಲ್ಲದೇ ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರ ಎಲ್ಲ ಮಾಹಿತಿಯನ್ನು ಸಂಗ್ರಹಿಸಿಟ್ಟುಕೊಳ್ಳಬೇಕು.
8. ಯಾವುದೇ ಸಂಸ್ಥೆಯರು ಕೊರೊನಾ ಬಗ್ಗೆ ಕುಟುಂಬ ಮತ್ತು ಕಲ್ಯಾಣ ಇಲಾಖೆಯ ಅನುಮತಿ ಪಡೆಯದೇ ಯಾರಿಗೂ ಮಾಹಿತಿಯನ್ನು ನೀಡುವಂತಿಲ್ಲ. ಒಂದು ವೇಳೆ ಸುಳ್ಳು ಮಾಹಿತಿಯನ್ನು ಹರಡಿದರೆ ಈ ನಿಯಮದ ಅನ್ವಯ ಶಿಕ್ಷಿಸಲಾಗುತ್ತದೆ.
9. ಕರ್ನಾಟಕ ರಾಜ್ಯದಲ್ಲಿ ಯಾವುದೇ ಖಾಸಗಿ ಲ್ಯಾಬೋರೇಟರಿಯವರಿಗೆ ಕೊರೊನಾ ವೈರಸ್ ಮಾದರಿ ಪರೀಕ್ಷೆ ಮಾಡಲು ಅನುಮತಿ ನೀಡಿಲ್ಲ. ಎಲ್ಲ ಮಾದರಿಗಳು ಭಾರತ ಸರ್ಕಾರ ನಿಗದಿಪಡಿಸಿದ ಮಾನದಂಡದಲ್ಲಿ ಸಂಗ್ರಹಿಸಬೇಕು ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದ ಲ್ಯಾಬ್ ಗಳಿಗೆ ಕಳುಹಿಸಬೇಕು.
10. ಕಳೆದ 14 ದಿನಗಳ ಹಿಂದೆ ವಿದೇಶದಿಂದ ಆಗಮಿಸಿದ್ದರೆ ಅಥವಾ ಕೊರೊನಾ ಪಾಸಿಟಿವ್ ಕಂಡು ಬಂದ ವ್ಯಕ್ತಿಗಳು ಓಡಾಡಿದ ಜಾಗದಲ್ಲಿ ಸಂಚರಿಸಿದ್ದರೆ ಆ ವ್ಯಕ್ತಿಗಳು ಕಡ್ಡಾಯವಾಗಿ ಸಮಿಪದ ಸರ್ಕಾರಿ ಆಸ್ಪತ್ರೆಗೆ ತೆರಳಬೇಕು ಅಥವಾ ಉಚಿತ ಸಹಾಯವಾಣಿ 104ಕ್ಕೆ ಕರೆ ಮಾಡಿ ತಿಳಿಸಬೇಕು.
11. ವ್ಯಕ್ತಿ ಕೊರೊನಾ ವೈರಸ್ ಇರುವ ದೇಶದಿಂದ ಆಗಮಿಸಿದ್ದರೆ ಅಥವಾ ಕೊರೊನಾ ಸೋಂಕು ಪೀಡಿತ ವ್ಯಕ್ತಿ ಇರುವ ಪ್ರದೇಶದಲ್ಲಿ ಸಂಚರಿಸಿಯೂ ಯಾವುದೇ ಕಫ, ಜ್ವರ, ಉಸಿರಾಟದ ತೊಂದರೆ ಕಾಣಿಸದೇ ಇದ್ದರೂ ಆ ವ್ಯಕ್ತಿ ಮನೆಯಲ್ಲೇ ಪ್ರತೇಕವಾಗಿ ಇರಬೇಕು ಮತ್ತು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಬೇಕು. ಈ ವ್ಯಕ್ತಿ ಯಾವುದೇ ಕಾರಣಕ್ಕೂ 14 ದಿನಗಳ ಕಾಲ ಕುಟುಂಬದ ಸದಸ್ಯರ ಸಂಪರ್ಕದಿಂದ ದೂರ ಇರಬೇಕು.
13. ಇಂದಿನಿಂದ ಈ ಕಾಯ್ದೆ ಜಾರಿಯಾಗಲಿದ್ದು ಒಂದು ವರ್ಷದವರೆಗೆ ಈ ಕಾನೂನು ಜಾರಿಯಲ್ಲಿರಲಿದೆ. ಈ ಕಾಯ್ದೆಯನ್ನು ಸಾರ್ವಜನಿಕರು/ ಸಂಸ್ಥೆಗಳು ಉಲ್ಲಂಘಿಸಿದರೆ ಐಪಿಸಿ ಸೆಕ್ಷನ್ 188ರ(ಸರ್ಕಾರಿ ಆದೇಶದ ಉಲ್ಲಂಘನೆ) ಅಡಿ ಶಿಕ್ಷಾರ್ಹ ಅಪರಾಧವಾಗುತ್ತದೆ. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಅಥವಾ ಜಿಲ್ಲಾಧಿಕಾರಿ ಶಿಕ್ಷೆ ನೀಡಬಹುದು.
– ವಿರೋಧ ವ್ಯಕ್ತಪಡಿಸಿದಾಗ ಬಾಯಿಗೆ ಬಟ್ಟೆ ತುರುಕಿದ – ಅಣ್ಣನಲ್ಲಿ ಘಟನೆ ವಿವರಿಸಿದ ಬಳಿಕ ದೂರು ದಾಖಲು
ಮುಂಬೈ: ದೆಹಲಿಯ ನಿರ್ಭಯಾ ಮೇಲೆ ಕಾಮುಕರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ವಿಕೃತಿ ಮೆರೆದಿದ್ದರೋ ಅದೇ ರೀತಿಯಾಗಿ ಕಾಮುಕನೊಬ್ಬ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ಕಬ್ಬಿಣಡ ರಾಡ್ ಹಾಕಿ ವಿಕೃತಿ ಮೆರೆದಿದ್ದಾನೆ.
ಆರೋಪಿ ಮತ್ತು ಸಂತ್ರಸ್ತೆ ಹತ್ತಿ ಗಿರಣಿಯಲ್ಲಿ ಕೆಲಸ ಮಾಡುತ್ತಿದ್ದು ಆರೋಪಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ ಸಂತ್ರಸ್ಥೆ ಕೂಲಿ ಕೆಲಸ ಮಾಡುತ್ತಿದ್ದಳು. ಯುವತಿ, ಯುವತಿಯ ಸಹೋದರ, ಆರೋಪಿ ಮತ್ತು ಮತ್ತೊಬ್ಬಳು ಯುವತಿ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು.
ಈ ವೇಳೆ ವಿರೋಧ ವ್ಯಕ್ತಪಡಿಸಿದಾಗ ಆರೋಪಿ ಸಂತ್ರಸ್ತೆಯ ಬಾಯಿಗೆ ಬಟ್ಟೆ ತುರುಕಿ ಧ್ವನಿ ಹೊರಬಾರದರಂತೆ ನೋಡಿಕೊಂಡಿದ್ದಾನೆ. ಯುವತಿ ಅರೆಪ್ರಜ್ಞಾವಸ್ಥೆಯಲ್ಲಿದ್ದಾಗ ಆರೋಪಿ ಅತ್ಯಾಚಾರ ಎಸಗಿ ಗುಪ್ತಾಂಗಕ್ಕೆ ರಾಡ್ ಹಾಕಿದ್ದಾನೆ. ಯುವತಿ ಅಣ್ಣ ಜ.24 ರಂದು ಬಂದಾಗ ಯವತಿ ಸಂಪೂರ್ಣ ಘಟನೆಯನ್ನು ವಿವರಿಸಿದ್ದು, ನಂತರ ಪ್ರಕರಣ ದಾಖಲಾಗಿದೆ.
ಆನೇಕಲ್: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ರೌಡಿಗಳನ್ನು ಕರೆಸಿ ಬೆಂಗಳೂರು ಹೊರವಲಯ ಆನೇಕಲ್ ಪೊಲೀಸ್ ಠಾಣಾ ವಿಭಾಗದಲ್ಲಿ ಪೊಲೀಸರು ಖಡಕ್ ಎಚ್ಚರಿಕೆಯನ್ನು ನೀಡಿದ್ದಾರೆ.
ಕೊಲೆ, ಕಳ್ಳತನ, ದರೋಡೆ ಸೇರಿದಂತೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಗಳಲ್ಲಿ ಸುಮಾರು 50ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನು ಪೊಲೀಸ್ ಠಾಣೆಗೆ ಕರೆಸಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದೆ ಸಮಾಜದಲ್ಲಿ ಒಳ್ಳೆಯ ರೀತಿಯಲ್ಲಿ ಬದುಕಬೇಕೆಂದು ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಆನೇಕಲ್ ಸುತ್ತಮುತ್ತ ಗಾಂಜಾ ಮಾರಾಟ ಹಾಗೂ ಮನೆಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಾಗ ಕಾನೂನು ಕ್ರಮಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದೆ. ಒಳ್ಳೆಯ ನಡವಳಿಕೆಯಿಂದ ನಡೆದುಕೊಂಡರೆ, ರೌಡಿ ಶೀಟರ್ ಪಟ್ಟಿಯಿಂದ ಕೈ ಬಿಡಲಾಗುತ್ತದೆ ಎಂಬ ವಿಷಯವನ್ನು ಆನೇಕಲ್ ಪೊಲೀಸ್ ಇನ್ಸ್ ಪೆಕ್ಟರ್ ಕೃಷ್ಣ ಲಮಾಣಿ, ಸಬ್ ಇನ್ಸ್ ಪೆಕ್ಟರ್ ಮುರಳೀಧರ್ ರೌಡಿ ಶೀಟರ್ ಗಳಿಗೆ ಮನವರಿಕೆ ಮಾಡಿಕೊಟ್ಟರು.