Tag: crime

  • ಒಂದಲ್ಲ, ಎರಡಲ್ಲ ಮ್ಯಾಟ್ರಿಮೋನಿ ತಾಣದಲ್ಲಿ 75ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ಕಾಮುಕ ಅರೆಸ್ಟ್!

    ಒಂದಲ್ಲ, ಎರಡಲ್ಲ ಮ್ಯಾಟ್ರಿಮೋನಿ ತಾಣದಲ್ಲಿ 75ಕ್ಕೂ ಹೆಚ್ಚು ಮಂದಿಗೆ ವಂಚಿಸಿದ್ದ ಕಾಮುಕ ಅರೆಸ್ಟ್!

    ಬೆಂಗಳೂರು: ನೀವು ಮ್ಯಾಟ್ರಿಮೋನಿ ತಾಣದಲ್ಲಿ ಮದುವೆಯಾಗಲು ಸೂಕ್ತ ವರನನ್ನು ಹುಡುಕುತ್ತಿದ್ದೀರಾ. ಹಾಗಾದ್ರೆ ನೀವು ಎಚ್ಚರವಾಗಿರುವುದು ಒಳಿತು. ಅಪ್ಪಿ ತಪ್ಪಿ ಸರಿಯಾಗಿ ಯೋಚಿಸದೇ ನಿರ್ಧಾರ ತೆಗೆದುಕೊಂಡರೆ ನೀವು ಮೋಸ ಹೋಗುವುದು ಖಂಡಿತ.

    ಹೌದು. ಒಂದಲ್ಲ ಎರಡಲ್ಲ, ಬರೋಬ್ಬರಿ 75 ಮಂದಿಗೆ ವಂಚನೆ ಎಸಗಿದ ಆರೋಪಿಯನ್ನು ಬಾಗಲೂರು ಪೊಲೀಸರು ಬಂಧಿಸಿದ್ದಾರೆ. ಹಾಸನ ಮೂಲದ ಸಾದತ್ ಖಾನ್ (28) ಬಂಧಿತ ಆರೋಪಿ. ಲೈಂಗಿಕವಾಗಿ ಬಳಸಿಕೊಂಡು ಅವರಿಂದಲೇ ಹಣ ಪಡೆದು ಪರಾರಿಯಾಗುತ್ತಿದ್ದ ಖದೀಮ ಕೊನೆಗೂ ಸಿಕ್ಕಿಬಿದ್ದಿದ್ದಾನೆ.

    ಮ್ಯಾಟ್ರಿಮೋನಿ ತಾಣದಲ್ಲಿನ ಪ್ರೊಫೈಲ್‍ಗಳನ್ನು ಟಾರ್ಗೆಟ್ ಮಾಡುತ್ತಿದ್ದ, ಈತ ನಾನು ಕೇಂದ್ರ ಸರ್ಕಾರದ ಉದ್ಯೋಗಿ/ ಕಂಪೆನಿಯ ಸಿಇಒ ಇತ್ಯಾದಿ ಹೆಸರಿನಲ್ಲಿ ಪ್ರೊಫೈಲ್ ಕ್ರಿಯೆಟ್ ಮಾಡುತ್ತಿದ್ದ. ಈ ವೆಬ್‍ಸೈಟ್ ಗಳಲ್ಲಿ ಯುವತಿಯರನ್ನು/ ವಿಚ್ಚೇದನವಾಗಿರುವ ಮಹಿಳೆಯರನ್ನು ಟಾರ್ಗೆಟ್ ಮಾಡಿ ಮದುವೆಯಾಗುವುದಾಗಿ ನಂಬಿಸಿ, ನಂತರ ಲೈಂಗಿಕವಾಗಿ ಬಳಸಿಕೊಂಡು ಅವರಿಂದಲೇ ಹಣ ಪಡೆದು ಸಾದತ್ ಖಾನ್ ಪರಾರಿಯಾಗುತ್ತಿದ್ದ.

    ಸುಮಾರು 40 ಕ್ಕೂ ಹೆಚ್ಚು ಮಹಿಳೆಯರಿಗೆ ಹಣ ಪಡೆದು ಮೋಸ ಮಾಡಿದ್ದು, 75 ರಿಂದ 100 ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಬಳಸಿರುವ ಮಾಹಿತಿ ಈಗ ಸಿಕ್ಕಿದೆ. ಬೆಂಗಳೂರಿನ ಯಲಹಂಕ, ಜಯನಗರ, ಮೈಸೂರು ಕೆ. ಅರ್.ಪುರ. ಧಾರವಾಡ ಸೇರಿದಂತೆ 8 ಕಡೆ ಅಧಿಕೃತ ದೂರು ದಾಖಲಾಗಿದೆ. ಪಿಯೂ ಓದಿದ ಬಳಿಕ ಐಟಿಐ ಮಾಡಿದ್ದ ಈತ ಹೇರ್ ಸ್ಟೈಲ್, ಬಾಡಿ ಸ್ಟ್ರಕ್ಚರ್, ಭಾಷೆ, ಊರು ಎಲ್ಲ ಬದಲಾಯಸಿಕೊಂಡಿದ್ದ. ಅನ್ ಲೈನ್‍ಲ್ಲಿ ಫಾರೀನ್ ಇಂಗ್ಲಿಷ್  ಶೈಲಿಯನ್ನು ಕಲಿತು ಯುವತಿಯರನ್ನು ಪಟಾಯಿಸುತ್ತಿದ್ದ. ಓರ್ವ ಮಹಿಳೆ ಬಳಿಯಿಂದ 20 ಲಕ್ಷ ಹಣ ಸುಲಿಗೆ ಮಾಡಿದ್ದಾನೆ. ನಿವೃತ್ತ ಸರ್ಕಾರಿ ಅಧಿಕಾರಿಯ ಮಗಳಿಗೂ ಮೋಸ ವಂಚಕ ಮೋಸ ಮಾಡಿದ್ದಾನೆ. ಪ್ರತಿಷ್ಠಿತ ಕಾಲೇಜಿನ ಪ್ರೊಫೆಸರ್, ಸರ್ಕಾರಿ ನೌಕರರು, ಟೆಕ್ಕಿಗಳು, ಕಾರ್ಪೊರೇಟ್ ಸಂಸ್ಥೆಯ ಮುಖ್ಯಸ್ಥರು ಸಹ ಇವನಿಂದ ಮೋಸ ಹೋಗಿದ್ದು, ಕೆಲ ಮಹಿಳೆಯರ ಸಂಪೂರ್ಣ ಆಸ್ತಿ ಕಿತ್ತುಕೊಂಡಿರುವ ವಿಚಾರ ತನಿಖೆಯ ವೇಳೆ ಬೆಳಕಿಗೆ ಬಂದಿದೆ.

    ಈತನಿಗೆ ಇದೆ 17 ಹೆಸರು: ಅತಿಯಾದ ಕುಡುಕನಾದ ಈತನಿಗೆ ಹಣ ಬೇಕಿತ್ತು. ಹೀಗಾಗಿ ಸುಲಭವಾಗಿ ಯುವತಿಯರಿಂದ ಹಣ ಸಿಗುತ್ತದೆ ಎನ್ನುವ ಕಾರಣಕ್ಕೆ ಮ್ಯಾಟ್ರಿಮೋನಿ ತಾಣಗಳಲ್ಲಿ 17 ವಿವಿಧ ಹೆಸರಿಟ್ಟುಕೊಂಡು ಆರೋಪಿ ವಂಚಿಸುತ್ತಿದ್ದ. ಒಂದು ತಾಣದಲ್ಲಿ ಸರ್ಕಾರಿ ನೌಕರಿ, ಟೆಕ್ಕಿ, ಬ್ಯಾಂಕ್ ಮ್ಯಾನೇಜರ್ ಇತ್ಯಾದಿ ಹೆಸರುಗಳನ್ನು ನಮೂದಿಸಿ ಪರಿಚಯ ಮಾಡಿಕೊಂಡು ಯುವತಿಯರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಿದ್ದ.

    ಮ್ಯಾಟ್ರಿಮೋನಿಯಲ್ಲಿ ಹೇಗೆ? ಸಾಧಾರಣವಾಗಿ ಮ್ಯಾಟ್ರಿಮೋನಿ ತಾಣಗಳಲ್ಲಿ ಸ್ವ ವಿವರದ ಮಾಹಿತಿಯ ಜೊತೆ ತನಗೆ ಬೇಕಾದ ವಧು/ ವರ ಹೇಗಿರಬೇಕು ಎನ್ನುವುದನ್ನು ತಿಳಿಸಲು ಆಯ್ಕೆಗಳಿರುತ್ತದೆ. ಈ ಆಯ್ಕೆಯಲ್ಲಿ ಯುವತಿಯರು ಯಾವ ರೀತಿಯ ವರ ಇರಬೇಕು ಎನ್ನುವುದನ್ನು ನಮೂದಿಸಿದ್ದಾರೋ, ಆ ಬೇಕಾಗಿದ್ದ ಮಾಹಿತಿಗೆ ಅನುಗುಣವಾಗಿ ಈತ ತನ್ನ ಪ್ರೊಫೈಲ್ ಕ್ರಿಯೆಟ್ ಮಾಡಿ ಟಾರ್ಗೆಟ್ ಆಗಿದ್ದ ಯುವತಿಯರನ್ನು ಖೆಡ್ಡಾಕ್ಕೆ ಬೀಳಿಸುತ್ತಿದ್ದ.

    ಲೈಫ್‍ಸ್ಟೈಲ್ ನೋಡಿ ಮನಸೋತ್ರು: ಹುಡುಗಿಯರು ಮತ್ತು ಮಹಿಳೆಯರು ಶ್ರೀಮಂತ ವರನನ್ನೇ ಹುಡುಕುತ್ತಿದ್ದಾರೆ ಎನ್ನುವುದು ಸಾದತ್‍ಗೆ ತಿಳಿದಿತ್ತು. ಇದಕ್ಕಾಗಿ ಈತ ಪರಸ್ಪರ ಪರಿಚಯವಾಗುವ ವೇಳೆ ಐಷಾರಾಮಿ ಕಾರುಗಳನ್ನು ಬುಕ್ ಮಾಡಿ ಸ್ಥಳಕ್ಕೆ ಬಂದು ಭೇಟಿ ಮಾಡುತ್ತಿದ್ದ. ಬೆನ್ಜ್, ಆಡಿ ಕಾರ್‍ಗಳನ್ನು ಬಾಡಿಗೆ ಪಡೆದು ಹೆಣ್ಣುಮಕ್ಕಳ ಮುಂದೆ ಓಡಾಡುತ್ತಿದ್ದ. ಪ್ರೊಫೈಲ್ ನೋಡಿ ಈತನಿಗೆ ಬಿದ್ದಿದ್ದ ಹುಡುಗಿಯರು ಈತನ ಹೈಫೈ ಲೈಫ್‍ಸ್ಟೈಲ್ ನೋಡಿ ಮನಸೋಲುತ್ತಿದ್ದರು.

    ಹಣ ಪಡೆದು ವಂಚನೆ: ಪರಿಚಯವಾದ ಹುಡುಗಿ ಬಳಿ ನನಗೆ ಸ್ವಲ್ಪ ಸಹಾಯ ಮಾಡಬೇಕು ಎಂದು ಎಂದು ಹೇಳಿ ಅವರಿಂದ ಹಣವನ್ನು ಪಡೆಯುತ್ತಿದ್ದ. ಪಡೆದ ಹಣದಲ್ಲಿ ಅರ್ಧ ಹಣವನ್ನು ತನ್ನ ಶೋಕಿ ಲೈಫ್ ಗೆ ಬಳಸುತ್ತಿದ್ದರೆ ಅರ್ಧ ಹಣವನ್ನು ಬೇರೆ ಯುವತಿಗೆ ನೀಡುತ್ತಿದ್ದ. ಈತನ ಈ ವಿಶೇಷ ಉಪಕಾರವನ್ನು ನೋಡಿ ಹುಡುಗಿಯರು ಸಾದತ್ ಮೇಲೆ ಮತ್ತಷ್ಟು ನಂಬಿಕೆ ಇಡುತ್ತಿದ್ದರು. ಈ ರೀತಿಯ ಸಹಾಯ ಮಾಡಿದ ಕೆಲ ದಿನಗಳ ಬಳಿಕ ಅದೇ ಹುಡುಗಿಯರಿಂದ ಹಣವನ್ನು ಪಡೆಯುತ್ತಿದ್ದ.

    ಬ್ಲ್ಯಾಕ್‌ಮೇಲ್‌ ಆಟ: ಯುವತಿಯರಿಗೆ ಈತನ ಮೇಲೆ ನಂಬಿಕೆ ಜಾಸ್ತಿ ಆಗುತ್ತಿದ್ದಂತೆ ಈತ ಅವರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ. ಲೈಂಗಿಕವಾಗಿ ಬಳಸಿದ ಬಳಿಕ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುವ ಮೂಲಕ ತನ್ನ ನಿಜರೂಪವನ್ನು ತೋರಿಸುತ್ತಿದ್ದ.

    ಬಂಧನವಾಗಿದ್ದ: ಈ ಹಿಂದೆ ಈ ಪ್ರಕರಣದಲ್ಲೇ ಪೊಲೀಸರು ಬಂಧಿಸಿದ್ದರು. ಆದರೆ ಜೈಲಿನಿಂದ ಜಾಮೀನು ಪಡೆದು ಬಿಡುಗಡೆಯಾಗಿ ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸುತ್ತಿದ್ದ. ಸಾಫ್ಟ್ ವೇರ್ ಎಂಜಿನಿಯರ್, ಪ್ರೊಫೆಸರ್ ಉದ್ಯೋಗದಲ್ಲಿರುವ ಯುವತಿಯರು ಮತ್ತು ವಿಚ್ಛೆದಿತ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಕೃತ್ಯವನ್ನು ಎಸಗುತ್ತಿದ್ದ. ಲೈಂಗಿಕವಾಗಿ ಶೋಷಣೆಗೆ ಒಳಗಾದ ಯುವತಿಯರು/ ಮಹಿಳೆಯರು ಪೈಕಿ ಬಹುತೇಕ ಮಂದಿ ದೂರು ನೀಡದೇ ಇದ್ದ ಕಾರಣ ತನ್ನ ವಿಕೃತ ಆಟವನ್ನು ಮುಂದುವರಿಸುತ್ತಿದ್ದ.

    ಪೊಲೀಸರ ಮನವಿ: ಅರೋಪಿಯ ಎಲ್ಲಾ ಬ್ಯಾಂಕ್ ಖಾತೆಯನ್ನು ಸೀಜ್ ಮಾಡಲಾಗಿದೆ. ಈತ ಉಮೇಶ್ ರೆಡ್ಡಿಯ ರೀತಿಯ ಮತ್ತೊಬ್ಬ ವಿಕೃತ ಮನಸ್ಸಿನ ವ್ಯಕ್ತಿ. ಅನೇಕ ಮಹಿಳೆಯರು ಮರ್ಯಾದೆಗೆ ಅಂಜಿ ದೂರು ನೀಡಲು ಬರುತ್ತಿಲ್ಲ. ಈ ಹಿಂದೆ ಯಲಹಂಕದಲ್ಲಿ ಒಂದು ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ. ಧಾರವಾಡ ಠಾಣೆಯಲ್ಲಿ ಒಮ್ಮೆ ಅರೆಸ್ಟ್ ಆಗಿದ್ದ. ಜೈಲಿಗೆ ಹೋಗಿ ಬಂದ ಮೇಲೆ ಎಲ್ಲಾ ಬದಲಾಯಿಸಿಕೊಳ್ಳುತ್ತಾನೆ. ಪೊಲೀಸರು ಮಾರುವೇಷದಲ್ಲಿ ಹೋಗಿ ಲಾಡ್ಜ್ ನಲ್ಲಿ ಆರೋಪಿಯನ್ನು ಹಿಡಿದಿದ್ದಾರೆ. ಶ್ರೀಮಂತ ಮಹಿಳೆಯರ ಲೈಫ್ ಸ್ಟೈಲ್ ತಿಳಿದುಕೊಂಡಿದ್ದ ಈತ ಆನಂತರ, ಡೈವೋರ್ಸ್ ಆದ ಮಹಿಳೆಯರು, ಲೇಟ್ ಮದುವೆಯಾದವರು, ಗಂಡ ಹೆಂಡತಿಯರ ಸಬಂಧ ಸರಿಯಿಲ್ಲದವರನ್ನು ಟಾರ್ಗೆಟ್ ಮಾಡಿ ಕೃತ್ಯ ಎಸಗುತ್ತಿದ್ದ. ಈತನಿಂದ ನೊಂದವರು ಯಾರಾದರೂ ಇದ್ದರೆ ಬಂದು ದೂರು ಕೊಡಬಹುದು ಎಂದು ಈಶಾನ್ಯ ವಿಭಾಗದ ಡಿಸಿಪಿ ಡಾ. ಹರ್ಷಾ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು

    ಪ್ರಿಯಕರ ಫೋನ್ ಕಾಲ್ ರಿಸೀವ್ ಮಾಡದ್ದಕ್ಕೆ ಮನನೊಂದು ನೇಣಿಗೆ ಶರಣು

    ನೆಲಮಂಗಲ: ಪ್ರಿಯಕರ ಫೋನ್ ಕರೆ ಸ್ವೀಕರಿಸದ್ದಕ್ಕೆ ಮನನೊಂದ  ನರ್ಸಿಂಗ್ ವಿದ್ಯಾರ್ಥಿನಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತಿಪ್ಪಗೊಂಡನಹಳ್ಳಿ ಬಳಿ ನಡೆದಿದೆ.

    ಪಶ್ಚಿಮ ಬಂಗಾಳ ಮೂಲದ ಮೂಲದ ರಿಜೀಯಾ ಕಾಟೂನ್ (19)ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

    ತಾಲೂಕಿನ ಟಿ.ಬೇಗೂರು ಬಳಿಯ ಅಂಬಿಕಾ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಡಿಪ್ಲೋಮಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ  ಈಕೆ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಭಾನುವಾರ ಫೋನ್ ಕರೆಯನ್ನು ರಿಸೀವ್ ಮಾಡದಿದ್ದಕ್ಕೆ ಮನನೊಂದು ಪ್ರಿಯತಮನ ಜೊತೆ ತಂಗಲು ಬಾಡಿಗೆ ಪಡೆದಿದ್ದ ತೋಟದ ಮನೆಯಲ್ಲಿ ರಿಜೀಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ.

    ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಿಯಕರ ಹಾಗೂ ಕಾಲೇಜು ಆಡಳಿತ ಮಂಡಳಿಯವರ ವಿಚಾರಣೆ ನಡೆಸುತ್ತಿದ್ದಾರೆ.

  • ಸೆಕ್ಸ್ ತಿರಸ್ಕರಿಸಿದ್ದಕ್ಕೆ ಯುವಕನ ಮರ್ಮಾಂಗವನ್ನೇ ಕತ್ತರಿಸಿದ್ಳು ಯುವತಿ!

    ಸೆಕ್ಸ್ ತಿರಸ್ಕರಿಸಿದ್ದಕ್ಕೆ ಯುವಕನ ಮರ್ಮಾಂಗವನ್ನೇ ಕತ್ತರಿಸಿದ್ಳು ಯುವತಿ!

    ನವದೆಹಲಿ: ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಯುವತಿಯೊಬ್ಬಳು ಯುವಕನ ಮರ್ಮಾಂಗವನ್ನು ಕತ್ತರಿಸಿ ಪರಾರಿಯಾಗಿರುವ ಘಟನೆ ಬುಧವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ದೆಹಲಿಯ ಹೊರವಲಯದ ಮಂಗಳಪುರಿಯಲ್ಲಿ 22 ವರ್ಷದ ಯುವತಿ ಈ ಕೃತ್ಯವನ್ನು ಎಸಗಿದ್ದಾಳೆ. ಕೃತ್ಯ ಎಸಗಿದ ಬಳಿಕ ಯುವತಿ ತನ್ನ ಕುಟುಂಬದ ಸದಸ್ಯರ ಜೊತೆ ಪರಾರಿಯಾಗಿದ್ದಾಳೆ.

    35 ವರ್ಷದ ಸಂತ್ರಸ್ತ ಯುವಕನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆಯ ಬಳಿಕ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆದರೆ ಮರ್ಮಾಂಗವನ್ನು ಜೋಡಿಸುವ ಪ್ರಯತ್ನ ಯಶಸ್ವಿಯಾಗಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಬೀದಿ ವ್ಯಾಪಾರಿಯಾಗಿರುವ ಯುವಕನನ್ನು ಬುಧವಾರ ರಾತ್ರಿ ಯುವತಿ ತನ್ನ ಮನೆಗೆ ಕರೆದಿದ್ದಾಳೆ. ಮನೆಗೆ ಬಂದ ಯುವಕನ ಜೊತೆ ಮದುವೆಯಾಗುವಂತೆ ಒತ್ತಡ ಹೇರಿದ್ದಾಳೆ. ಮದುವೆಯನ್ನು ನಿರಾಕರಿಸಿದ್ದಕ್ಕೆ ಯುವತಿ ಯುವಕನ್ನು ಬಾತ್ ರೂಮ್‍ನಲ್ಲಿ ಕೂಡಿ ಹಾಕಿ ವಿವಸ್ತ್ರಗೊಳಿಸಿ ಬಲವಂತವಾಗಿ ಸೆಕ್ಸ್ ಮಾಡುವಂತೆ ಒತ್ತಡ ಹಾಕಿದ್ದಾಳೆ.

    ತನ್ನ ಬೇಡಿಕೆಯನ್ನು ಯುವಕ ತಿರಸ್ಕರಿಸಿದ್ದಕ್ಕೆ ಆಡುಗೆ ಕೋಣೆಗೆ ಹೋಗಿ ಯುವತಿ ಹರಿತವಾದ ಚೂರಿಯನ್ನು ತಂದು, ನನ್ನ ಜೊತೆ ಸೆಕ್ಸ್ ಮಾಡದೇ ಇದ್ದರೆ ನಿನ್ನನ್ನು ಕೊಲ್ಲುತ್ತೇನೆ ಎಂದು ಬೆದರಿಕೆ ಹಾಕಿದ್ದಾಳೆ. ಬಳಿಕ ಅದೇ ಚೂರಿಯಿಂದ ಮರ್ಮಾಂಗವನ್ನು ಕತ್ತರಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

    ಈ ಸಂದರ್ಭದಲ್ಲಿ ಯುವತಿಯ ಸಹೋದರ ಮತ್ತು ಆತನ ಪತ್ನಿಯು ಮನೆಯಲ್ಲಿದ್ದರು. ಅವರು ಪ್ರಿಯತಮನಿಗೆ ಪಾಠ ಕಲಿಸುವಂತೆ ಆಕೆಗೆ ಪ್ರಚೋದನೆ ನೀಡುತ್ತಿದ್ದರು ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಕೃತ್ಯ ನಡೆದ ಬಳಿಕ ಯುವಕ ಚೀರಾಡಿದ್ದಾನೆ. ಸಹಾಯಕ್ಕಾಗಿ ಚೀರಾಡುತ್ತಿರುವುದನ್ನು ಕೇಳಿಸಿದ ಸ್ಥಳೀಯರು ಯುವತಿಯ ಮನೆಯನ್ನು ಪ್ರವೇಶಿಸಿದ್ದಾರೆ. ಯುವಕನನ್ನು ನೋಡಿದ ಕೂಡಲೇ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವ ವೇಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಯುವಕ ಬಿದ್ದಿದ್ದ.

    ಐಪಿಸಿ ಸೆಕ್ಷನ್ 326(ಮಾರಣಾಂತಿಕ ಹಲ್ಲೆ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಯುವತಿಯ ಬಂಧನಕ್ಕೆ ಬಲೆ ಪೊಲೀಸರು ಬಲೆ ಬೀಸಿದ್ದಾರೆ.

    ಕೆಲ ವರ್ಷದ ಹಿಂದೆ ಯುವಕ ಯುವತಿ ಭೇಟಿಯಾಗಿ ಸ್ನೇಹಿತರಾಗಿದ್ದರು. ಯುವತಿ ಯುವಕನನ್ನು ಇಷ್ಟಪಟ್ಟಿದ್ದರೆ, ಯುವಕನ ಪೋಷಕರು ಇವರಿಬ್ಬರ ಸಂಬಂಧವನ್ನು ವಿರೋಧಿಸಿದ್ದರು. ಹೀಗಾಗಿ ಈಕೆ ಯುವಕನ ಜೊತೆ ನನ್ನನ್ನು ಮದುವೆಯಾಗು ಎಂದು ದುಂಬಾಲು ಬೀಳುತ್ತಿದ್ದಳು.

    ಇದನ್ನೂ ಓದಿ: ಕೆಟ್ಟ ಕಾಫಿ ಕೊಟ್ಟದ್ದಕ್ಕೆ ಕೆನ್ನೆಗೆ ಏಟು: ಪತ್ನಿಯನ್ನು ಕೊಂದ ಪತಿ ಅರೆಸ್ಟ್

  • ಕೆಟ್ಟ ಕಾಫಿ ಕೊಟ್ಟದ್ದಕ್ಕೆ ಕೆನ್ನೆಗೆ ಏಟು: ಪತ್ನಿಯನ್ನು ಕೊಂದ ಪತಿ ಅರೆಸ್ಟ್

    ಕೆಟ್ಟ ಕಾಫಿ ಕೊಟ್ಟದ್ದಕ್ಕೆ ಕೆನ್ನೆಗೆ ಏಟು: ಪತ್ನಿಯನ್ನು ಕೊಂದ ಪತಿ ಅರೆಸ್ಟ್

    ಚಾಮರಾಜನಗರ: ಕೆಟ್ಟ ಕಾಫಿ ಕೊಟ್ಟಿದ್ದೀಯಾ ಎಂದು ಪತಿಯೊಬ್ಬ ಪತ್ನಿಯ ಕೆನ್ನೆ ಹೊಡೆದು ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೆಲಂಬಳ್ಳಿ ಗ್ರಾಮದಲ್ಲಿ ಜರುಗಿದೆ.

    ಮಮತಾ (24) ಕೊಲೆಯಾದ ಮಹಿಳೆ. ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತಿ ಶಿವಕುಮಾರ್‍ನನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ವ್ಯವಸಾಯ ಮಾಡುತ್ತಿರುವ ಶಿವಕುಮಾರ್ ಮಮತಾ ದಂಪತಿಗೆ ಎರಡು ಗಂಡು ಮಕ್ಕಳಿದ್ದು, ಇಂದು ಬೆಳಗ್ಗೆ ಒಬ್ಬ ಮಗನನ್ನು ಶಿವಕುಮಾರ್ ಶಾಲೆಗೆ ಬಿಟ್ಟು ಮನೆಗೆ ಬಂದಿದ್ದಾನೆ. ಬೆಳಿಗ್ಗೆ ತಿಂಡಿ ತಿನ್ನುವ ವೇಳೆ ಮಮತಾ ನಿನ್ನೆಯ ಹಾಲನ್ನು ಹಾಕಿ ಕಾಫಿ ಮಾಡಿಕೊಟ್ಟಿದ್ದಾರೆ.

    ಕಾಫಿಯನ್ನು ಕುಡಿದ ಕೂಡಲೇ ಸಿಟ್ಟಾದ ಶಿವಕುಮಾರ್ ಕೆಟ್ಟ ಕಾಫಿ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ, ಅಲ್ಲೇ ಪತ್ನಿಯ ಕೆನ್ನೆಗೆ ಬಲವಾಗಿ ಹೊಡೆದಿದ್ದಾನೆ. ಈ ಪೆಟ್ಟನ್ನು ತಾಳಲಾರದೇ ಮಮತಾ ಅಲ್ಲೇ ಕುಸಿದುಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪತ್ನಿ ಸಾವನ್ನಪ್ಪಿದ್ದನ್ನು ತಿಳಿದ ಶಿವಕುಮಾರ್ ಯಾರಿಗೂ ನನ್ನ ಮೇಲೆ ಅನುಮಾನ ಬಾರದೇ ಇರಲೆಂದು ಶವವನ್ನು ಸೀರೆ ಬಳಸಿ ಮೇಲಕ್ಕೆ ಕಟ್ಟಿ ಮನೆಯಿಂದ ಕಾಲ್ಕಿತ್ತಿದ್ದಾನೆ.

    ಬೆಳಕಿಗೆ ಬಂದಿದ್ದು ಹೇಗೆ?
    ಸಂಜೆ ವೇಳೆ ಮಮತಾ ಮನೆಗೆ ಪರಿಚಯಸ್ಥರು ಹೋಗಿದ್ದಾರೆ. ಈ ವೇಳೆ ಒಳಗಡೆ ಶವ ನೇತಾಡುತ್ತಿರುವುದನ್ನು ನೋಡಿ ಕೂಡಲೇ ಮಮತಾ ಪೋಷಕರಿಗೆ ಕರೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಪತಿ ಶಿವಕುಮಾರ್‍ಗೂ ಕರೆ ಮಾಡಿ ವಿಚಾರ ತಿಳಿಸಿದ್ದಾರೆ.

    ಪೊಲೀಸರು ಸ್ಥಳಕ್ಕೆ ಬಂದು ಆತ್ಮಹತ್ಯೆ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾರೆ. ಈ ಸಂದರ್ಭದಲ್ಲಿ ಪರಿಚಯದ ವ್ಯಕ್ತಿಗಳು ದಂಪತಿ ಮಧ್ಯೆ ಕೌಟುಂಬಿಕ ವಿಚಾರದ ಬಗ್ಗೆ ಗಲಾಟೆ ನಡೆಯುತ್ತಲೇ ಇತ್ತು ಎನ್ನುವುದನ್ನು ತಿಳಿಸಿದ್ದಾರೆ. ಈ ವಿಚಾರ ತಿಳಿದು ಪೊಲೀಸರು ಮತ್ತು ಪೋಷಕರಿಗೆ ಅನುಮಾನ ಬಂದು ಮತ್ತಷ್ಟು ಪ್ರಶ್ನೆ ಕೇಳಿದಾಗ ಶಿವಕುಮಾರ್ ನಡೆದ ಘಟನೆಯನ್ನು ವಿವರಿಸಿದ್ದಾನೆ ಎಂದು ಮಮತಾ ಸಹೋದರ ಪುನೀತ್ ಹೇಳಿದ್ದಾರೆ.

    ವಿಚಾರ ತಿಳಿದ ಮಮತಾ ಪೋಷಕರು ಶಿವಕುಮಾರ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಶಿವಕುಮಾರ್‍ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

  • ನಪುಂಸಕ ಪತಿ ಮತ್ತು ಆತನ ಪೋಷಕರ ವಿರುದ್ಧ ಪತ್ನಿಯಿಂದ ದೂರು

    ನಪುಂಸಕ ಪತಿ ಮತ್ತು ಆತನ ಪೋಷಕರ ವಿರುದ್ಧ ಪತ್ನಿಯಿಂದ ದೂರು

    ನವದೆಹಲಿ: ನಪುಂಸಕ ಪತಿ ವಿರುದ್ಧ 25 ವರ್ಷದ ಪತ್ನಿಯೊಬ್ಬರು ದೂರು ನೀಡಿದ್ದಾರೆ.

    ನೋಯ್ಡಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಗಂಡ ಮತ್ತು ನಪುಂಸಕತೆಯ ವಿಚಾರವನ್ನು ತಿಳಿಸದಕ್ಕೆ ಆತನ ಪೋಷಕರ ವಿರುದ್ಧ ದೂರು ಪತ್ನಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಮದುವೆಯ ವೆಚ್ಚವನ್ನೂ ಭರಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ.

    ದೂರಿನಲ್ಲಿ ಏನಿದೆ?
    ಕೇಂದ್ರಿಯ ವಿಹಾರ್‍ನಲ್ಲಿ ನೆಲೆಸಿದ್ದ ವ್ಯಕ್ತಿಯ ಜೊತೆ 2015ರ ನವೆಂಬರ್‍ನಲ್ಲಿ ನನ್ನ ಮದುವೆ ನಡೆದಿತ್ತು. ಮದುವೆಯಾದ ಬಳಿಕ ನಾವಿಬ್ಬರೂ ಹನಿಮೂನ್‍ಗೆಂದು ಗೋವಾಕ್ಕೆ ತೆರಳಿದ್ವಿ. ಈ ಸಂದರ್ಭದಲ್ಲಿ ಗಂಡ ನಪುಂಸಕನಾಗಿರುವ ಬಗ್ಗೆ ಅನುಮಾನ ಮೂಡಿತ್ತು.

    ಇದಾದ ಬಳಿಕ ನಾನು ವೈದ್ಯರ ಬಳಿ ಹೋಗಿ ಸಮಸ್ಯೆ ಬಗೆಹರಿಸಿ ಎಂದು ಸಲಹೆ ನೀಡಿದ್ದೆ. ಸಾಕಷ್ಟು ಬಾರಿ ನಾನು ಹೇಳಿದ್ದರೂ ಆತ ನನ್ನ ಸಲಹೆಯನ್ನು ತಿರಸ್ಕರಿಸಿದ್ದ.

    ಮದುವೆಯಾದ ಆರಂಭದಲ್ಲಿ ಪತಿ ಬೆಳಗ್ಗೆ ಹೋಗಿ ಸಂಜೆ ಮನೆಗೆ ಬರುತ್ತಿದ್ದ. ಆದರೆ ನಾನು ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಳಿಕ ಆತ ತನ್ನ ಶಿಫ್ಟ್ ರಾತ್ರಿಗೆ ಬದಲಾಯಿಸಿದ. ಅಷ್ಟೇ ಅಲ್ಲದೇ ನನ್ನ ಜೊತೆ ಮಾತನಾಡದೇ ರಾತ್ರಿ ನಿದ್ದೆಗೆ ಜಾರುತ್ತಿದ್ದ.

    ಗಂಡನ ದೌರ್ಬಲ್ಯದ ಬಗ್ಗೆ ನಾನು ಎರಡೂ ಕುಟುಂಬದರ ಜೊತೆ ಮಾತನಾಡಿದೆ. ಈ ಸಂದರ್ಭದಲ್ಲಿ ಪತಿ ನಾನು ವೈದ್ಯರನ್ನು ಭೇಟಿಯಾಗುತ್ತೇನೆ ಎಂದು ಭರವಸೆ ನೀಡಿದ್ದ. ತದನಂತರ ನಾನು ತವರು ಮನೆಗೆ ಹೋಗಿದ್ದೆ. ತವರು ಮನೆಯಿಂದ ಮರಳಿ ಅತ್ತೆ ಮನೆಗೆ ಬಂದಾಗಲೂ ಹಿಂದಿನಂತೆ ಗಂಡ ನಡೆದುಕೊಳ್ಳುತ್ತಿದ್ದ. ಇದರಿಂದ ಮನನೊಂದು ಪತಿ ಮತ್ತು ನಪುಂಸಕತೆಯನ್ನು ಮುಚ್ಚಿಟ್ಟದ್ದಕ್ಕೆ ಆತನ ಪೋಷಕರ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

    ಐಪಿಸಿ 498ಎ(ವರದಕ್ಷಿಣಿ ಕಿರುಕುಳ) ಐಪಿಸಿ 420(ವಂಚನೆ) ಅಡಿ ಪ್ರಕರಣ ದಾಖಲಾಗಿದೆ. ದಂಪತಿಯನ್ನು ಕರೆದು ಮಾತುಕತೆ ನಡೆಸುತ್ತೇವೆ ಎಂದು ಮಹಿಳಾ ಸ್ಟೇಷನ್ ಹೌಸ್ ಆಫೀಸರ್ ತಿಳಿಸಿದ್ದಾರೆ.

     

  • ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ‘ಸಿಬಿಐ ಅಧಿಕಾರಿ’ ವಶಕ್ಕೆ!

    ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ‘ಸಿಬಿಐ ಅಧಿಕಾರಿ’ ವಶಕ್ಕೆ!

    ಬೆಂಗಳೂರು: ಸಿಬಿಐ ಹೆಸರನ್ನು ಹೇಳಿಕೊಂಡು ಮಸಾಜ್ ಪಾರ್ಲರ್ ಮೇಲೆ ದಾಳಿ ಮಾಡಿ ಯುವತಿಯರನ್ನ ಕೆಟ್ಟದಾಗಿ ನಡೆಸಿಕೊಂಡಿರುವ ಘಟನೆ ಬೆಂಗಳೂರಿನ ಬಾಣಸವಾಡಿಯಲ್ಲಿ ನಡೆದಿದೆ.

    ಶ್ರೀನಿವಾಸ್ ಮತ್ತು ಅವರ ತಂಡ ತಾವು ದೆಹಲಿಯ ನ್ಯಾಷನಲ್ ಇನ್ವೆಸ್ಟಿಗೇಷನ್ ಕ್ರೈಂ ಟೀಂ ಮತ್ತು ಸಿಬಿಐ ಅಧಿಕಾರಿಗಳು ಎಂದು ಸುಳ್ಳು ಹೇಳಿಕೊಂಡು ಶುಕ್ರವಾರ ಸಂಜೆ 5 ಗಂಟೆಗೆ ಮಸಾಜ್ ಪಾರ್ಲರ್ ಮನೆ ಮೇಲೆ ದಾಳಿ ಮಾಡಿದ್ದಾರೆ.

    ಮಸಾಜ್ ಪಾರ್ಲರ್ ಮನೆಯಲ್ಲಿ ಇದ್ದ ಆರು ಯುವತಿಯರನ್ನ ಇವರು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಇವರು ವಿಡಿಯೋ ಮಾಡೋದನ್ನ ನೋಡಿ ಯುವತಿಯರು ಮುಖ ಮುಚ್ಚಿಕೊಂಡಿದ್ದಾರೆ. ಅದಕ್ಕೆ ಸಿಟ್ಟಾದ ಇವರು ಮುಖ ತೆಗೆಯದಿದ್ದರೆ ಟಿವಿಯಲ್ಲಿ ಹಾಕಿ, ನಡುರಸ್ತೆಯಲ್ಲಿ ಮೆರವಣಿಗೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಬಲವಂತವಾಗಿ ಯುವತಿಯರು ಮುಖ ಮುಚ್ಚಿಕೊಂಡಿದ್ದರೂ ಕೈ ತೆಗೆದು ಅವರ ಮೇಲೆ ದೌರ್ಜನ್ಯ ನಡೆಸಿದ್ದಾರೆ.

    ಸಾರ್ವಜನಿಕರು ನೇರವಾಗಿ ನುಗ್ಗಿ ದಾಳಿ ನಡೆಸುವಂತಿಲ್ಲ. ಸಂಬಂಧಪಟ್ಟ ಠಾಣೆಗೆ ತಿಳಿಸಿ ನಂತರ ಪೊಲೀಸರು ದಾಳಿ ನಡೆಸಬೇಕಾಗುತ್ತದೆ. ಆದರೆ ಇಲ್ಲಿ ಇವರೇ ಕಾನೂನು ಕೈಗೆ ತೆಗೆದುಕೊಂಡು ದಾಳಿ ನಡೆಸಿದ್ದಕ್ಕೆ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಿವಾಸ್ ಮತ್ತು ಗೌರಮ್ಮಳನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ಹಲವು ವಿಸಿಟಿಂಗ್ ಕಾರ್ಡ್: ಶ್ರೀನಿವಾಸ್ ಹಲವು ಇಲಾಖೆ ಹೆಸರಿನಲ್ಲಿ ವಿಸಿಟಿಂಗ್ ಮಾಡಿಸಿದ್ದಾನೆ. ನ್ಯಾಷನಲ್ ಇನ್ವೆಸ್ಟಿಗೇಷನ್ ಬ್ಯುರೋ, ನ್ಯಾಷನಲ್ ಮಿಡಿಯಾ ಕೌನ್ಸಿಲ್, ಸಿಟಿಜನ್ ರೈಟ್ಸ್ ಪ್ರೊಟೆಕ್ಷನ್ ಕೌನ್ಸಿಲ್ ಹೆಸರಿನ ಕಾರ್ಡ್ ಬಳಸಿ ಬೆದರಿಕೆ ಹಾಕಿದ್ದಾನೆ.

  • ಹಲ್ಲಿ ಮೈಮೇಲೆ ಎಸೆದು ಯವತಿಯರ ಅಂಗಾಂಗ ಮುಟ್ಟೋ ಗ್ಯಾಂಗ್ ಬೆಂಗ್ಳೂರಲ್ಲಿದೆ ಎಚ್ಚರ!

    ಹಲ್ಲಿ ಮೈಮೇಲೆ ಎಸೆದು ಯವತಿಯರ ಅಂಗಾಂಗ ಮುಟ್ಟೋ ಗ್ಯಾಂಗ್ ಬೆಂಗ್ಳೂರಲ್ಲಿದೆ ಎಚ್ಚರ!

    ಬೆಂಗಳೂರು: ಯುವತಿಯರೇ ಎಚ್ಚರ. ನೀವು ಬೆಂಗಳೂರಿನ ರಸ್ತೆಗಳಲ್ಲಿ ಓಡಾಡುತ್ತೀರಿ ಎಂದರೆ ಸ್ವಲ್ಪ ಎಚ್ಚರದಿಂದಿರಿ. ಯುವತಿಯರ ಮೇಲೆ ದೌರ್ಜನ್ಯವೆಸಗಲು ಬೆಂಗಳೂರಿನಲ್ಲಿ ಯುವಕರು ಹೊಸ ಟೆಕ್ನಿಕ್ ಬಳಸುತ್ತಿದ್ದಾರೆ.

    ತಮ್ಮ ವಾಂಛೆ ತೀರಿಸಿಕೊಳ್ಳಲು ಯುವಕರು ಯುವತಿಯರ ಮೇಲೆ ಹಲ್ಲಿಯನ್ನು ಎಸೆಯುತ್ತಾರೆ. ಬಳಿಕ ಅದನ್ನು ತೆಗೆಯುವ ನೆಪದಲ್ಲಿ ಬಂದು ಅಂಗಾಂಗ ಮುಟ್ಟಿ ಕಿರುಕುಳ ಕೊಟ್ಟಿದ್ದಾರೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಆಗಿದ್ದೇನು?: ಬಿಹಾರ ಮೂಲದ ಯುವತಿಯೊಬ್ಬಳು ಬೆಂಗಳೂರಿಗೆ 15 ದಿವಸದ ಟ್ರೈನಿಂಗ್ ಗೆಂದು ಆಗಮಿಸಿದ್ದಾಳೆ. ಎರಡು ದಿನಗಳ ಹಿಂದೆ ಇಂದಿರಾನಗರದ ಸಿಎಂಎಚ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಯುವತಿ ಟ್ರೈನಿಂಗ್ ಮುಗಿಸಿ ತಾನು ವಾಸವಿದ್ದ ಕಡೆ ಹೊರಟಿದ್ದಾಳೆ. ಈ ವೇಳೆ ರಸ್ತೆ ಬದಿಯಲ್ಲಿದ್ದ ಟೀ ಶಾಪ್ ಬಳಿ ಬಂದಾಗ ಕಾಮುಕರ ಗುಂಪು ಯುವತಿಯ ಮೇಲೆ ಹಲ್ಲಿಯನ್ನು ಎಸೆದಿದ್ದಾರೆ. ಬಳಿಕ ಅದೇ ಹಲ್ಲಿಯನ್ನು ತೆಗೆಯುವ ನೆಪದಲ್ಲಿ ಈ ಗುಂಪು ಯುವತಿಯ ಅಂಗಾಂಗಗಳನ್ನು ಮುಟ್ಟಿ ಕಿರುಕುಳ ನೀಡಿದ್ದಾರೆ.

    ಘಟನೆ ನಡೆದ ಬಳಿಕ ಯುವತಿ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದಾಳೆ. ಐಪಿಸಿ ಸೆಕ್ಷನ್ 354ರ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಪೊಲೀಸರು ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿ ವೀಡಿಯೋ ವಶಪಡಿಸಿಕೊಂಡಿದ್ದು ಇದರ ನೆರವಿನಿಂದ ಆರೋಪಿಗಳನ್ನು ಹುಡುಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ದೂರು ನೀಡಿದ ಯುವತಿ ತನಿಖೆಗೆ ಸಹಕರಿಸುತ್ತಿಲ್ಲ ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.

  • ಸ್ನೇಹಿತನಿಂದ ಹೆಂಡ್ತಿ ಸೀರೆ ಎಳೆಸಿ ಪತಿಯಿಂದಲೇ ಮಾನಭಂಗಕ್ಕೆ ಯತ್ನ!

    ಸ್ನೇಹಿತನಿಂದ ಹೆಂಡ್ತಿ ಸೀರೆ ಎಳೆಸಿ ಪತಿಯಿಂದಲೇ ಮಾನಭಂಗಕ್ಕೆ ಯತ್ನ!

    ಬೆಂಗಳೂರು: ಕಟ್ಟಿಕೊಂಡ ಹೆಂಡತಿ ಮೇಲೆ ಯಾರಾದರೂ ಕಣ್ಣು ಹಾಕಿದ್ರೆ ಅವರ ಮೇಲೆ ಹಲ್ಲೆಗೆ ಮುಂದಾಗುತ್ತಾರೆ. ಅಂತದ್ರಲ್ಲಿ ಪಾಪಿ ಪತಿಯೊಬ್ಬ ಸ್ನೇಹಿತನ ಜೊತೆ ಸೇರಿ ಕೈ ಹಿಡಿದ ಧರ್ಮಪತ್ನಿಯ ಮಾನಭಂಗಕ್ಕೆ ಯತ್ನಿಸಿದ್ದಾನೆ.

    ಬೆಂಗಳೂರಿನ ಏರ್‍ಪೋರ್ಟ್ ಬಳಿಯ ಸಾದಹಳ್ಳಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಈ ಘಟನೆಯ ಸೂತ್ರದಾರ ಮುನಿರಾಜು. ಈತ ಮೊದಲ ಮದುವೆಯಾಗಿ 18 ವರ್ಷಗಳೇ ಕಳೆದಿತ್ತು. ಆದ್ರೆ ಮೊದಲ ಹೆಂಡತಿಗೆ ಗೊತ್ತಾಗದ ಹಾಗೆ ಮತ್ತೊಂದು ಮದುವೆ ಮಾಡಿಕೊಂಡಿದ್ದ.

    ಕಳೆದ ಮೂರು ದಿನಗಳ ಹಿಂದೆ ಸ್ನೇಹಿತನ ಜೊತೆ ಮುನಿರಾಜ ತನ್ನ ಮೊದಲ ಹೆಂಡತಿಯ ಮನೆಗೆ ಬಂದಿದ್ದಾನೆ. ಚೆನ್ನಾಗಿ ಕುಡಿದು ಸ್ನೇಹಿತನ ಜೊತೆಯಲ್ಲಿ ಹಾಸಿಗೆ ಹಂಚಿಕೊಳ್ಳುವಂತೆ ಪಾಪಿ ಪತಿ ಹೇಳಿದ್ದಾನೆ. ಆದರೆ ಈ ಮಾತು ಪತ್ನಿಯನ್ನ ಕೆರಳಿಸಿದೆ. ಇದಕ್ಕೆ ಬಿಲ್‍ಕುಲ್ ಒಪ್ಪದ ಪತ್ನಿಯನ್ನ ಪತಿ ಹಾಗು ಆತನ ಸ್ನೇಹಿತ ಸೇರಿ ಸೀರೆ ಹಿಡಿದು ಎಳೆದಾಡಿದ್ದಾರೆ. ಅಲ್ಲದೇ ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

    ಈ ವೇಳೆ ತಾಯಿಯ ಸಹಾಯಕ್ಕೆ ಬಂದ ಮಕ್ಕಳನ್ನು ಇದೇ ನೀಚರು ಥಳಿಸಿದ್ದಾರೆ. ಮಕ್ಕಳ ಕೂಗಾಟ ಕೇಳಿದ ಸ್ಥಳೀಯರು ಮನೆ ಬಳಿ ಬಂದು ಆರೋಪಿಗಳಾದ ಮುನಿರಾಜು ಆತನ ಸ್ನೇಹಿತರಾದ ರವಿ ಮತ್ತು ಸುಬ್ರಮಣಿಯನ್ನ ಬಂಧಿಸಿದ್ದಾರೆ.

    ಸದ್ಯ ಬೆಂಗಳೂರು ಏರ್‍ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಪೊಲೀಸ್ರು ಆರೋಪಿಗಳ ವಿಚಾರಣೆ ನಡೆಸ್ತಿದ್ದಾರೆ.

    https://www.youtube.com/watch?v=a9QGXgvv6kM

     

  • 4 ತಿಂಗಳ ಗರ್ಭಿಣಿಯನ್ನು 4ನೇ ಮಹಡಿಯಿಂದ ತಳ್ಳಿತು ದೆವ್ವ!

    4 ತಿಂಗಳ ಗರ್ಭಿಣಿಯನ್ನು 4ನೇ ಮಹಡಿಯಿಂದ ತಳ್ಳಿತು ದೆವ್ವ!

    ನವದೆಹಲಿ: ದೆವ್ವರೂಪಿ ಪತಿಯೊಬ್ಬ ತನ್ನ 4 ತಿಂಗಳ ಗರ್ಭಿಣಿ ಪತ್ನಿಯನ್ನು ಕಡ್ಟಡದ 4ನೇ ಮಹಡಿಯಿಂದ ತಳ್ಳಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

    ಫರಿ ಚೌಕಂಡಿ ನಿವಾಸಿಯಾಗಿರುವ ಅಮರ್ ಸಿಂಗ್(26) ಎಂಬಾತ ತನ್ನ ಗರ್ಭಿಣಿ ಪತ್ನಿ ಬಬಿತಾ ಜೊತೆ ಜಗಳವಾಡಿ ನಂತರ ಆಕೆಯನ್ನು ಕಟ್ಡಡದಿಂದ ಕೆಳಕ್ಕೆ ತಳ್ಳಿದ್ದಾನೆ.

    ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ದೆಹಲಿಯ ಸಫ್ದರ್‍ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಬಿತಾ ತಲೆ, ಬೆನ್ನೆಲುಬು ತುಂಬಾ ಗಾಯಗಳಾಗಿವೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.

    ಶನಿವಾರ ರಾತ್ರಿ 11 ಗಂಟೆಗೆ ಈ ಘಟನೆ ನಡೆದಿದ್ದು, ಭಾನುವಾರ ಬೆಳಗ್ಗೆ 4 ಗಂಟೆಗೆ ಬಬಿತಾ ಸಹೋದರ ಸತೀಂದರ್‍ಗೆ ಕರೆ ಮಾಡಿ ಅಮರ್ ಸಿಂಗ್ ದೆವ್ವವೊಂದು ಬಬಿತಾಳನ್ನು ಕಟ್ಟಡದಿಂದ ತಳ್ಳಿದೆ ಎಂದು ಕಟ್ಟು ಕತೆಯನ್ನು ಹೇಳಿದ್ದಾನೆ.

    ಈ ವೇಳೆ ದೆವ್ವ ಅಂದ್ರೆ ಏನು ಎಂದು ಪ್ರಶ್ನಿಸಿದ್ದಕ್ಕೆ ತನ್ನ ಹೇಳಿಕೆಯನ್ನು ಪದೇ ಪದೇ ಬದಲಾಯಿಸುತ್ತಲೇ ಇದ್ದ ಎಂದು ಸತೀಂದರ್ ಹೇಳಿದ್ದಾರೆ. 2016 ರಲ್ಲಿ ಅಮರ್ ಸಿಂಗ್ ಹಾಗೂ ಬಬಿತಾ ಅವರಿಗೆ ಮದುವೆಯಾಗಿದ್ದು, ಅವರಿಗೆ 8 ತಿಂಗಳ ಮಗುವಿದೆ. ಆಕೆ ಮತ್ತೆ ಗರ್ಭಿಣಿಯಾಗಿದ್ದು, ಅಮರ್ ಸಿಂಗ್ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದ ಎಂದು ಸತೀಂದರ್ ತಿಳಿಸಿದ್ದಾರೆ.

    ಸತೀಂದರ್ ನೀಡಿದ ದೂರಿನ ಆಧಾರದಲ್ಲಿ ಅಮರ್ ಸಿಂಗ್ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುವುದು ಪೊಲೀಸ್ ಅಧಿಕಾರಿ ಜಹೀರ್ ಖಾನ್ ತಿಳಿಸಿದ್ದಾರೆ.

    ಇದನ್ನೂ ಓದಿ:ನಿಮ್ಮನ್ನ ಬಿಟ್ಟು ಹೋಗ್ತಿದ್ದೀನಿ, SORRY ಪ್ಲೀಸ್ ಅಳ್ಬೇಡಿ: ಗಂಡನಿಗೆ ಪತ್ರ ಬರೆದು ಮಗುವಿನೊಂದಿಗೆ ಬೇರೊಬ್ಬನ ಜೊತೆ ಪರಾರಿ!

  • ಅಪ್ಪ ಮಾಜಿ ಸಚಿವ, ಮಗ ಕಾಮುಕ: 300ಕ್ಕೂ ಹೆಚ್ಚು ಹುಡುಗಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದವ ಬೆಂಗಳೂರಿನಲ್ಲಿ ಅರೆಸ್ಟ್

    ಅಪ್ಪ ಮಾಜಿ ಸಚಿವ, ಮಗ ಕಾಮುಕ: 300ಕ್ಕೂ ಹೆಚ್ಚು ಹುಡುಗಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದವ ಬೆಂಗಳೂರಿನಲ್ಲಿ ಅರೆಸ್ಟ್

    ಬೆಂಗಳೂರು: ಅಪ್ಪ ಸಮಾಜದ ಕಲ್ಯಾಣಕ್ಕಾಗಿ ದುಡಿಯುತ್ತಿದ್ದರೆ, ಮಗ ಮಾತ್ರ ಹೆಣ್ಣು ಮಕ್ಕಳ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದ್ದ. ಆದರೆ ಈಗ ಮಂಗಳೂರು ಮೂಲದ ಯುವತಿ ನೀಡಿದ ದೂರಿನಿಂದಾಗಿ ಕಾಮುಕ ಅರೆಸ್ಟ್ ಆಗಿದ್ದಾನೆ.

    ಕೆಲ ದಿನಗಳ ಹಿಂದೆ ಉದ್ಯೋಗಕ್ಕಾಗಿ ಆರಸಿ ಬಂದಿದ್ದ ಯುವತಿಯೊಬ್ಬರು ಎಚ್ ಆರ್ ಮ್ಯಾನೇಜರ್ ವಿರುದ್ಧ ಲೈಂಗಿಕ ದೌರ್ಜನ್ಯ ದೂರನ್ನು ಮೈ ಲೇಔಟ್ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದರು. ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ ಪೊಲೀಸರು ಆರೋಪಿ ಹಬೀಬ್ ಗಣಿಯನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಆತ ಜಮ್ಮು ಕಾಶ್ಮೀರದ ಮಾಜಿ ಸಮಾಜ ಕಲ್ಯಾಣ ಸಚಿವ ಅಬ್ದುಲ್ ಗಣಿ ಮಲ್ಲಿಕ್ ಪುತ್ರ ಎನ್ನುವ ಮಾಹಿತಿ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲದೇ 300ಕ್ಕೂ ಹೆಚ್ಚು ಯುವತಿಯರಿಗೆ ಆತ ಲೈಂಗಿಕ ಕಿರುಕುಳ ನೀಡಿರುವ ಮಾಹಿತಿಯೂ ಸಿಕ್ಕಿದೆ.

    ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದಿದ್ದ:
    ವಾಣಿಜ್ಯ ಪದವೀಧರನಾಗಿರುವ ಹಬೀಬ್ ಗನಿ ಉದ್ಯೋಗವನ್ನು ಅರಸಿ ನಗರಕ್ಕೆ ಬಂದಿದ್ದ. ಕಾಲ್‍ಸೆಂಟರ್‍ನಲ್ಲಿ ಕೆಲಸಕ್ಕೆ ಸೇರಿ ಪುಟ್ಟೇನಹಳ್ಳಿಯಲ್ಲಿ ವಾಸವಿದ್ದ. ಖಾಸಗಿ ಕಂಪೆನಿಗಳ ಸಂದರ್ಶನಕ್ಕೆ ಹೋಗುತ್ತಿದ್ದ ಆರೋಪಿಯು ಸ್ವಾಗತಕಾರರ ಕೊಠಡಿಯಲ್ಲಿರುತ್ತಿದ್ದ ಸಂದರ್ಶಕರ ಪುಸ್ತಕದಲ್ಲಿದ್ದ ವಿವರಗಳನ್ನು ಮೊಬೈಲ್‍ನಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿದ್ದ.

    ಬಳಿಕ ಈ ನಂಬರ್ ಗಳಿಗೆ ತನ್ನ ಮೊಬೈಲ್ ನಿಂದ, ನಾನು ಮಾನವ ಸಂಪನ್ಮೂಲ ಅಧಿಕಾರಿ ಎಂದು ಪರಿಚಯಿಸಿ, ನಿಮಗೆ ಉದ್ಯೋಗ ಸಿಕ್ಕಿದೆ ಎಂದು ಯುವತಿಯರಿಗೆ ಕರೆ ಮಾಡುತ್ತಿದ್ದ. ಇದಾದ ಬಳಿಕ ಸಂದರ್ಶನ ಬರುವಂತೆ ಹೇಳಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಉತ್ತರ ಪ್ರದೇಶದ ವಿಳಾಸ ನೀಡಿ ಹಬೀಬ್ ಸಿಮ್ ಕಾರ್ಡ್ ಖರೀದಿಸಿದ್ದು, ಈ ಸಿಮ್ ಮೂಲಕ ತನ್ನ ಕೃತ್ಯವನ್ನು ಎಸಗುತ್ತಿದ್ದ.

    ಮಂಗಳೂರು ಯುವತಿಗೆ ಏನು ಮಾಡಿದ್ದ?
    ಮಂಗಳೂರು ಮೂಲದ ಯುವತಿಯೊಬ್ಬರು ಬಿಕಾಂ ಮುಗಿಸಿ ಬ್ಯಾಂಕ್ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದರು. ಮೇ 15 ರಂದು ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗಾಗಿ ಖಾಸಗಿ ಬ್ಯಾಂಕ್‍ವೊಂದರಲ್ಲಿ ಸಂದರ್ಶನವನ್ನು ಅಟೆಂಡ್ ಮಾಡಿದ್ದರು. ನಾಲ್ಕು ಸುತ್ತಿನ ಸಂದರ್ಶನದಲ್ಲಿ ಪಾಸ್ ಆಗಿದ್ದ ಯುವತಿ ಐದನೇ ಸುತ್ತು ಮುಗಿದ ಬಳಿಕ ಫಲಿತಾಂಶಕ್ಕಾಗಿ ಕಾಯುತ್ತಿದ್ದರು.

    ಈ ವೇಳೆ ಯುವತಿಗೆ ಅಪರಿಚಿತ ನಂಬರ್‍ನಿಂದ ಕರೆ ಬಂದಿತ್ತು. ನಾನು ಬ್ಯಾಂಕ್‍ನ ಹೆಚ್‍ಆರ್, ನನ್ನ ಹೆಸರು ರೋಹನ್ ಎಂದು ಪರಿಚಯಿಸಿಕೊಂಡ ವ್ಯಕ್ತಿ ಏನೋ ಮುಖ್ಯವಾದ ವಿಷಯ ಚರ್ಚಿಸಬೇಕು ಎಂದು ಹೇಳಿ ಯುವತಿಯನ್ನು ಬ್ಯಾಂಕಿನಿಂದ ಹೊರಬರುವಂತೆ ಹೇಳಿದ್ದ. ಯುವತಿ ಹೊರಹೋದ ನಂತರ ಆ ವ್ಯಕ್ತಿ, ಅಂತಿಮ ಸುತ್ತಿನ
    ಸಂದರ್ಶನದಲ್ಲಿ ಫೇಲ್ ಆಗಿರುವುದಾಗಿ ಯುವತಿಗೆ ತಿಳಿಸಿದ್ದ.

    ಫೇಲ್ ಆಗಿದ್ದರೂ ನೀವು ಕೆಲಸಕ್ಕೆ ಸೇರಬಹುದು ಎಂದು ಯುವತಿಗೆ ಅಮಿಷವೊಡ್ಡಿದ್ದ. ಈ ಬಗ್ಗೆ ಚರ್ಚೆ ಮಾಡುವುದಿದೆ ಮನೆಗೆ ಬನ್ನಿ ಎಂದು ಕರೆದಿದ್ದ. ಇದಕ್ಕೆ ಯುವತಿ ನಿರಾಕರಿಸಿದ್ದಕ್ಕೆ ಇಲ್ಲಿ ತುಂಬಾ ಟ್ರಾಫಿಕ್ ಇದೆ. ನಿಮ್ಮ ಧ್ವನಿ ಕೇಳಿಸುತ್ತಿಲ್ಲ. ಕಾರು ಹತ್ತಿ ಎಂದು ಕರೆದಿದ್ದ. ಆದ್ರೆ ಕಾರು ಹತ್ತಲು ಯುವತಿ ನಿರಾಕರಿಸಿದ್ದು, ಈ ವೇಳೆ ಆತ ನಡುರಸ್ತೆಯಲ್ಲೇ ಯವತಿಯನ್ನ ಎಳೆದು ಕಾರಿನಲ್ಲಿ ಕೂರಿಸಲು ಮುಂದಾಗಿದ್ದ. ಆತನಿಂದ ತಪ್ಪಿಸಿಕೊಂಡು ಯುವತಿ ಕಚೇರಿಯೊಳಗೆ ತೆರಳಿದ್ರು. ಕಚೇರಿಯಲ್ಲಿ ವಿಚಾರಿಸಿದಾಗ ಆ ಹೆಸರಿನ ವ್ಯಕ್ತಿ ಕೆಲಸದಲ್ಲಿ ಇಲ್ಲ ಎಂಬುದು ಪತ್ತೆಯಾಗಿತ್ತು. ಈ ಬಗ್ಗೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.