Tag: crime

  • 17ನೇ ವಯಸ್ಸಿಗೆ ತಂದೆಯಾಗಿ, ಈಗ 25 ವರ್ಷದ ಹುಡುಗಿಯ ಪತಿ ಆಗಲಾರೆ ಎಂದ!

    17ನೇ ವಯಸ್ಸಿಗೆ ತಂದೆಯಾಗಿ, ಈಗ 25 ವರ್ಷದ ಹುಡುಗಿಯ ಪತಿ ಆಗಲಾರೆ ಎಂದ!

    ಬೆಂಗಳೂರು: ಯುವತಿಯ ಜೊತೆ ದೇಹ ಸಂಪರ್ಕ ಬೆಳೆಸಿ, ಈಗ ವಯಸ್ಸಿನಲ್ಲಿ 8 ವರ್ಷ ಹಿರಿಯಳಾಗಿರುವ ಯುವತಿಯನ್ನು ವರಿಸಲು ಸಾಧ್ಯವಿಲ್ಲ ಎಂದು ಹೇಳಿರುವ  ಆರೋಪವೊಂದು 17 ವರ್ಷದ ಹುಡುಗನ ವಿರುದ್ಧ ಕೇಳಿಬಂದಿದೆ.

    ಬೆಂಗಳೂರಿನ ಹುಡುಗಿ ತನಗಿಂತ 8 ವರ್ಷ ಚಿಕ್ಕವನಾಗಿರುವ ಅಪ್ರಾಪ್ತ ಹುಡುಗನೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದಳು. ಸುಮಾರು 2 ವರ್ಷಗಳಿಂದ ಪ್ರೀತಿಸುತ್ತಿದ್ದ ಪರಿಣಾಮ ಇದೀಗ 25 ವರ್ಷದ ಹುಡುಗಿ ಗರ್ಭಿಣಿಯಾಗಿದ್ದು, ನನ್ನನ್ನು ಮದುವೆಯಾಗು ಎಂದು ಪ್ರಿಯಕರನ ಹಿಂದೆ ದುಂಬಾಲು ಬಿದ್ದಿದ್ದಾಳೆ.

    ಮದುವೆ ವಿಚಾರ ಬಂದಿದ್ದೆ ತಡ ಹುಡುಗ ನಾನು ಇನ್ನೂ ಅಪ್ರಾಪ್ತ. ಹೀಗಾಗಿ 8 ವರ್ಷ ದೊಡ್ಡವಳಾಗಿರುವ ನಿನ್ನನ್ನು ಮದುವೆಯಾಗಲು ಸಾಧ್ಯವಿಲ್ಲ ಎಂದು ಆಕೆಗೆ ಹೇಳಿದ್ದಾನೆ. ಅಷ್ಟೇ ಅಲ್ಲದೇ ಆಕೆ ನನಗೆ ಇಷ್ಟ ಇಲ್ಲ ಎಂದು ಹೇಳಿ ಮನೆಯಲ್ಲಿರುವ ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

    ಈಗ ಅಪ್ರಾಪ್ತ ಹುಡುಗನ ಪೋಷಕರು ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಾಥಮಿಕ ತನಿಖೆಯ ವೇಳೆ ಇವರಿಬ್ಬರು ಪ್ರೀತಿಯಲ್ಲಿದ್ದ ವಿಚಾರ ಗೊತ್ತಾಗಿದೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದೆ ಎಂದು ಡಿಸಿಪಿ ಬೋರಲಿಂಗಯ್ಯ ಹೇಳಿದ್ದಾರೆ.

  • ಕೆಲ್ಸ ಹುಡುಕಿಕೊಂಡು ಮಂಗ್ಳೂರಿನಿಂದ ಬೆಂಗ್ಳೂರಿಗೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

    ಕೆಲ್ಸ ಹುಡುಕಿಕೊಂಡು ಮಂಗ್ಳೂರಿನಿಂದ ಬೆಂಗ್ಳೂರಿಗೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

    ಬೆಂಗಳೂರು: ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

    ಹಬೀಬ್ ಗಣಿ ಬಂಧಿತ ಆರೋಪಿ. ಮೊಬೈಲ್ ಕರೆಯನ್ನು ಆಧಾರಿಸಿ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ಮಂಗಳೂರು ಮೂಲದ ಯುವತಿಯೊಬ್ಬರು ಬಿಕಾಂ ಮುಗಿಸಿ ಬ್ಯಾಂಕ್ ಕೆಲಸ ಹುಡುಕಿಕೊಂಡು ಬೆಂಗಳೂರಿಗೆ ಬಂದಿದ್ದರು. ಕಳೆದ ಸೋಮವಾರ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗಾಗಿ ಖಾಸಗಿ ಬ್ಯಾಂಕ್‍ವೊಂದರಲ್ಲಿ ಸಂದರ್ಶನವನ್ನು ಅಟೆಂಡ್ ಮಾಡಿದ್ದರು. ನಾಲ್ಕು ಸುತ್ತಿನ ಸಂದರ್ಶನದಲ್ಲಿ ಪಾಸ್ ಆಗಿದ್ದ ಯುವತಿ ಐದನೇ ಸುತ್ತು ಮುಗಿದ ಬಳಿಕ ಫಲಿತಾಂಶಕ್ಕಾಗಿ ಕಾಯುತ್ತಿದ್ದರು.

    ಈ ವೇಳೆ ಯುವತಿಗೆ ಅಪರಿಚಿತ ನಂಬರ್‍ನಿಂದ ಕರೆ ಬಂದಿತ್ತು. ನಾನು ಬ್ಯಾಂಕ್‍ನ ಹೆಚ್‍ಆರ್, ನನ್ನ ಹಸರು ರೋಹನ್ ಎಂದು ಪರಿಚಯಿಸಿಕೊಂಡ ವ್ಯಕ್ತಿ ಏನೋ ಮುಖ್ಯವಾದ ವಿಷಯ ಚರ್ಚಿಸಬೇಕು ಎಂದು ಹೇಳಿ ಯುವತಿಯನ್ನು ಬ್ಯಾಂಕಿನಿಂದ ಹೊಬರುವಂತೆ ಹೇಳಿದ್ದ. ಯುವತಿ ಹೊರಹೋದ ನಂತರ ಆ ವ್ಯಕ್ತಿ, ಅಂತಿಮ ಸುತ್ತಿನ ಇಂಟರ್ವ್ಯೂನಲ್ಲಿ ಫೇಲ್ ಆಗಿರುವುದಾಗಿ ಯುವತಿಗೆ ತಿಳಿಸಿದ್ದ.

    ಫೇಲ್ ಆಗಿದ್ದರೂ ನೀವು ಕೆಲಸಕ್ಕೆ ಸೇರಬಹುದು ಎಂದು ಯುವತಿಗೆ ಅಮಿಷವೊಡ್ಡಿದ್ದ. ಈ ಬಗ್ಗೆ ಚರ್ಚೆ ಮಾಡುವುದಿದೆ ಮನೆಗೆ ಬನ್ನಿ ಎಂದು ಕರೆದಿದ್ದ. ಇದಕ್ಕೆ ಯುವತಿ ನಿರಾಕರಿಸಿದ್ದಕ್ಕೆ ಇಲ್ಲಿ ತುಂಬಾ ಟ್ರಾಫಿಕ್ ಇದೆ. ನಿಮ್ಮ ಧ್ವನಿ ಕೇಳಿಸುತ್ತಿಲ್ಲ. ಕಾರು ಹತ್ತಿ ಎಂದು ಕರೆದಿದ್ದ. ಆದ್ರೆ ಕಾರು ಹತ್ತಲು ಯುವತಿ ನಿರಾಕರಿಸಿದ್ದು, ಈ ವೇಳೆ ಆತ ನಡುರಸ್ತೆಯಲ್ಲೇ ಯವತಿಯನ್ನ ಎಳೆದು ಕಾರಿನಲ್ಲಿ ಕೂರಿಸಲು ಮುಂದಾದ. ಆತನಿಂದ ತಪ್ಪಿಸಿಕೊಂಡು ಯುವತಿ ಕಚೇರಿಯೊಳಗೆ ತೆರಳಿದ್ರು. ಕಚೇರಿಯಲ್ಲಿ ವಿಚಾರಿಸಿದಾಗ ಆ ಹೆಸರಿನ ವ್ಯಕ್ತಿ ಕೆಲಸದಲ್ಲಿ ಇಲ್ಲ ಎಂಬುದು ಪತ್ತೆಯಾಗಿತ್ತು. ಈ ಬಗ್ಗೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

  • ಅಳಿಯನ ಪ್ರಾಣವನ್ನು ಮಾವ ತೆಗೆದ್ರೆ, ತನ್ನ ಪ್ರಾಣವನ್ನೇ ತಾನೇ ತೆಗೆದ್ಳು ಮಗಳು: ಇದು ಫಿಲ್ಮಿ ಸ್ಟೈಲ್ ಟ್ರಾಜಿಡಿ ಕಥೆ

    ಅಳಿಯನ ಪ್ರಾಣವನ್ನು ಮಾವ ತೆಗೆದ್ರೆ, ತನ್ನ ಪ್ರಾಣವನ್ನೇ ತಾನೇ ತೆಗೆದ್ಳು ಮಗಳು: ಇದು ಫಿಲ್ಮಿ ಸ್ಟೈಲ್ ಟ್ರಾಜಿಡಿ ಕಥೆ

    ಹೈದರಾಬಾದ್: ಸಿನಿಮೀಯ ಕಥೆಯಂತೆ ಮೇಲ್ಜಾತಿ -ಕೆಳಜಾತಿ ಗಲಾಟೆಯಲ್ಲಿ ಮಗಳನ್ನು ಪ್ರೀತಿಸಿ ಮದುವೆಯಾಗಿದ್ದ ಅಳಿಯನ್ನು ಮಾವ ಕೊಲೆ ಮಾಡಿ ಸುಟ್ಟು ಹಾಕಿದ್ದರೆ, ಆಳಿಯನನ್ನು ಕೊಲೆ ಮಾಡಿ ದೊಡ್ಡ ಸಾಧನೆ ಮಾಡಿದ್ದೇನೆ ಎಂದು ಬೀಗುತ್ತಿದ್ದ ತಂದೆಗೆ ಮಗಳು ನೇಣಿಗೆ ಶರಣಾಗುವ ಮೂಲಕ ಶಾಕ್ ನೀಡಿದ್ದಾಳೆ.

    ನರೇಶ್(23) ಮಾವನಿಂದಲೇ ಕೊಲೆಯಾದರೆ, ಪತಿ ನಾಪತ್ತೆಯಾಗಿದ್ದನ್ನು ಕಂಡು ಸ್ವಾತಿ(23) ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತೆಲಂಗಾಣದಲ್ಲಿ ಈ ಕೊಲೆ, ಆತ್ಮಹತ್ಯೆ ನಡೆದಿದ್ದು, ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನರೇಶ್ ಪತ್ನಿ ಸ್ವಾತಿಯ ತಂದೆ ಶ್ರೀನಿವಾಸ್ ರೆಡ್ಡಿ ಮತ್ತು ಆತನ ಸಂಬಂಧಿಯನ್ನು ಬಂಧಿಸಿದ್ದಾರೆ.

    ಏನಿದು ಪ್ರಕರಣ?
    ರೆಡ್ಡಿ ಸಮುದಾಯಕ್ಕೆ ಸೇರಿದ ಸ್ವಾತಿ(23) ನಲಗೊಂಡಾ ಜಿಲ್ಲೆಯ ವಲಿಗೊಂಡದಲ್ಲಿ ಕಾಲೇಜಿನಲ್ಲಿ ಓದುತ್ತಿದ್ದಾಗ ಫೇಸ್‍ಬುಕ್ ಮೂಲಕ ನರೇಶ್ ಪರಿಚಯವಾಗಿತ್ತು. ಈ ಪ್ರೀತಿಗೆ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಮಾರ್ಚ್ ನಲ್ಲಿ ಮುಂಬೈ ನ್ಯಾಯಾಲಯದಲ್ಲಿ ಮದುವೆಯಾಗಿದ್ದರು.

    ಮಗಳು ಮದುವೆಯಾದ ವಿಚಾರ ತಿಳಿದ ತಂದೆ ಶ್ರೀನಿವಾಸ್ ರೆಡ್ಡಿ ಸ್ವಾತಿಗೆ ಕರೆ ಮಾಡಿ, ಮನೆಗೆ ಬಾ, ಬಹಳ ಅದ್ಧೂರಿಯಾಗಿ ನಿಮ್ಮಿಬ್ಬರ ಮದುವೆ ನಡೆಸುತ್ತೇನೆ ಎಂದು ಹೇಳಿದ್ದ. ಈ ಮಾತಿಗೆ ಬೆಲೆ ನೀಡಿದ ಸ್ವಾತಿ ಮೇ 2ರಂದು ತಂದೆಯ ಜೊತೆ ತನ್ನ ಗ್ರಾಮಕ್ಕೆ ತೆರಳಿದ್ದರೆ, ನರೇಶ್ ಲಿಂಗರಾಜಪಲ್ಲಿ ಗ್ರಾಮಕ್ಕೆ ತೆರಳಿದ್ದ.

    ಅಳಿಯನ ಕೊಲೆ:
    ನರೇಶ್ ಲಿಂಗರಾಜಪುರಪಲ್ಲಿಕ್ಕೆ ತೆರಳುತ್ತಿದ್ದಾಗ ಶ್ರೀನಿವಾಸ್ ರೆಡ್ಡಿ ತನ್ನ ಸಂಬಂಧಿಯ ಜೊತೆ ಸೇರಿ, ನರೇಶ್ ತಲೆಗೆ ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ. ಕೊಲೆಯಾದ ಮೃತದೇಹವನ್ನು ಬೆಂಕಿಯಿಂದ ಸುಟ್ಟು ಕೆಲ ಭಾಗಗಳನ್ನು ನದಿಗೆ ಇವರು ಎಸೆದಿದ್ದರು.

    ನರೇಶ್ ಸಂಪರ್ಕಿಸಲು ಸಾಧ್ಯವಾಗ ಹಿನ್ನೆಲೆಯಲ್ಲಿ 15 ದಿನಗಳ ಹಿಂದೆ ಸ್ವಾತಿ ಮನೆಯ ಸ್ನಾನಗೃಹದಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಗಳ ಅಂತ್ಯಸಂಸ್ಕಾರವನ್ನು ತಂದೆ ಶ್ರೀನಿವಾಸ ರೆಡ್ಡಿ ನರೇಶ್ ಸುಟ್ಟ ಜಾಗದಲ್ಲಿ ನೆರೆವೇರಿಸಿದ್ದ.

    ಮಗಳಿಗೆ ನರೇಶ್ ತುಂಬಾ ಹಿಂಸೆ ನೀಡುತ್ತಿದ್ದ. ವರದಕ್ಷಿಣ ತರಬೇಕೆಂದು ಪೀಡಿಸುತ್ತಿದ್ದ. ಈ ಕಾರಣಕ್ಕೆ ನಾನು ನರೇಶ್ ನನ್ನು ಕೊಲೆ ಮಾಡಿದ್ದೇನೆ ಎಂದು ವಿಚಾರಣೆ ವೇಳೆ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾನೆ.

    ಬೆಳಕಿಗೆ ಬಂದಿದ್ದು ಹೇಗೆ? ನರೇಶ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಆತನ ತಂದೆ ವೆಂಕಟೇಶ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಅಷ್ಟೇ ಅಲ್ಲದೇ ಮಗನ ನಾಪತ್ತೆಯಾಗಿರುವ ಪ್ರಕರಣದ ಹಿಂದೆ ಸ್ವಾತಿ ತಂದೆಯ ಕೈವಾಡ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಕೋರ್ಟ್ ಜೂನ್ 1ರ ಒಳಗಡೆ ನಾಪತ್ತೆ ಪ್ರಕರಣವನ್ನು ಬೇಧಿಸಿ ಮಾಹಿತಿ ನೀಡಬೇಕೆಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಶ್ರೀನಿವಾಸ ರೆಡ್ಡಿಯನ್ನು ವಿಚಾರಣೆ ನಡೆಸಿದಾಗ ಲವ್ ಮರ್ಡರ್ ಪ್ರಕರಣ ಬೆಳಕಿಗೆ ಬಂದಿದೆ.

    ಶನಿವಾರ ಪೊಲೀಸರು ನರೇಶ್‍ನನ್ನು ಹತ್ಯೆ ಮಾಡಿದ ಸ್ಥಳದಿಂದ ಕೆಲ ಅವಶೇಷಗಳನ್ನು ತೆಗೆದಿದ್ದಾರೆ.

  • ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 8 ಜನರಿಂದ ಗ್ಯಾಂಗ್ ರೇಪ್

    ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ 8 ಜನರಿಂದ ಗ್ಯಾಂಗ್ ರೇಪ್

    – ಪ್ರಕರಣ ಮುಚ್ಚಿ ಹಾಕಲು ಸಂತ್ರಸ್ತರಿಗೆ 50 ಸಾವಿರ ರೂ. ಆಫರ್

    ಹೈದರಾಬಾದ್: ಆಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ತಾಂಜಗಿ ಗ್ರಾಮದಲ್ಲಿ ಸ್ಥಳೀಯ ಜಾತ್ರೆಗೆ ಹೋಗಲು ನಿರ್ಧರಿಸಿದ್ದ ಬುಡಕಟ್ಟು ಜನಾಂಗದ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಗ್ರಾಮದ 8 ಜನರ ತಂಡ ಸಾಮೂಹಿಕ ಅತ್ಯಾಚಾರವೆಸಗಿದೆ.

    ಇಬ್ಬರು ಬಾಲಕಿಯರು ಖುಷಿಯಿಂದಲೇ ಜಾತ್ರೆಗೆ ಹೊರಟಿದ್ದರು. ಈ ಸಂದರ್ಭದಲ್ಲಿ ಅವರನ್ನು ಅತ್ಯಾಚಾರವೆಸಗಿ 50,000 ರೂ. ಪರಿಹಾರ ನೀಡಿ ಪ್ರಕರಣವನ್ನು ಮುಚ್ಚಿ ಹಾಕಲು ಪ್ರಯತ್ನಿಸಿದ್ದಾರೆ.

    ಆರೋಪಿ ವಸಂತ್, ಚುನಾಯಿತ ಪ್ರತಿನಿಧಿಯೊಬ್ಬರ ಮಗನಾಗಿದ್ದರೆ, ಮತ್ತೊಬ್ಬ ಆರೋಪಿ ನಾಗೇಂದ್ರ ಹೆಡ್ ಕಾನ್ಸೇಟಬಲ್ ಒಬ್ಬರ ಪುತ್ರನಾಗಿದ್ದಾನೆ. ಈಗ ಇವರಿಬ್ಬರೂ ಸೇರಿದಂತೆ ಆರು ಜನ ಸ್ನೇಹಿತರು ತಲೆಮರೆಸಿಕೊಮಡಿದ್ದಾರೆ.

    ಜಾತ್ರೆಗೆ ಬಾಲಕಿಯರು ತೆರಳುತ್ತಿರುವಾಗ ಭಾರೀ ಮಳೆ ಬಂದ ಹಿನ್ನೆಲೆಯಲ್ಲಿ ಒಂದು ಅಂಗಡಿಯಲ್ಲಿ ಆಶ್ರಮ ಪಡೆದಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ ಆರೋಪಿಗಳು ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ.

    ಈ ಸಂದರ್ಭದಲ್ಲಿ ಪೊಲೀಸರಿಗೆ ದೂರು ನೀಡುವ ಬದಲಾಗಿ ಬುಡಕಟ್ಟು ಸಮುದಾಯದ ಸಂಪ್ರದಾಯದ ಪ್ರಕಾರ ಗ್ರಾಮದ ಹಿರಿಯರನ್ನು ಭೇಟಿಯಾಗಿ ಪ್ರಕರಣದ ಮುಚ್ಚಿ ಹಾಕಲು ಮುಂದಾಗಿದ್ದಾರೆ.

    ಸ್ಥಳೀಯ ವರದಿಗಳು ಹೇಳುವ ಪ್ರಕಾರ ಇಬ್ಬರು ಅಪ್ರಾಪ್ತರಿಗೆ 50 ಸಾವಿರ ರೂ. ನೀಡಲು ಬಂದಾಗ ಅದನ್ನು ಅವರು ಒಪ್ಪಿಕೊಳ್ಳಲು ನಿರಾಕರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿಂತಾಪಲ್ಲಿ ಪೊಲೀಸರು ಅತ್ಯಾಚಾರ ಮತ್ತು ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಾರೆ.

  • ಜನ್ಮದಿನಾಂಕ, ಹೆಸರು ಒಂದೇ: ಸೌದಿಯಲ್ಲಿ ತುಮಕೂರಿನ ಯುವಕ ಅರೆಸ್ಟ್!

    ಜನ್ಮದಿನಾಂಕ, ಹೆಸರು ಒಂದೇ: ಸೌದಿಯಲ್ಲಿ ತುಮಕೂರಿನ ಯುವಕ ಅರೆಸ್ಟ್!

    ತುಮಕೂರು: ಒಂದೇ ಹೆಸರು, ಒಂದೇ ಜನ್ಮ ದಿನಾಂಕದಿಂದಾಗಿ ಕರ್ನಾಟಕದ ಯುವಕನೊಬ್ಬ ಸೌದಿ ಅರೇಬಿಯಾದಲ್ಲಿ ಕಾನೂನು ಜಂಜಾಟದಲ್ಲಿ ಸಿಲುಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ತುಮಕೂರು ಜಿಲ್ಲೆ ತುರುವೇಕೆರೆ ಪಟ್ಟಣದ ಸುಬ್ರಹ್ಮಣ್ಯ ನಿವಾಸಿ ನಯಾಜ್ ಅಹಮದ್ ಸೌದಿಯಲ್ಲಿ ಬಂಧಿಯಾಗಿದ್ದಾರೆ.

    ನಯಾಜ್ ಹೆಸರಿನ ಬೆಂಗಳೂರು ಮೂಲದವನು ಎನ್ನಲಾದ ಯುವಕನೋರ್ವ ಸೌದಿಯಲ್ಲಿ ಅಪರಾಧವೆಸಗಿ ಪರಾರಿಯಾಗಿದ್ದು ತುರುವೇಕೆರೆ ಮತ್ತು ಬೆಂಗಳೂರು ಯುವಕರಿಬ್ಬರ ಹೆಸರು, ಹುಟ್ಟಿದ ದಿನಾಂಕ ಪಾಸ್ ಪೋರ್ಟ್ ನೊಂದಣಿ ಎಲ್ಲವೂ ಹೊಂದಾಣಿಕೆ ಆಗಿದೆ. ಹಾಗಾಗಿ ತುರುವೇಕೆರೆ ಮೂಲದ ನಯಾಜ್‍ನನ್ನು ಸೌದಿ ಪೊಲೀಸರು ವಿಚಾರಣೆಗಾಗಿ ಬಂಧಿಸಿದ್ದಾರೆ.

    ಕಳೆದ ಏಪ್ರಿಲ್ 20ರಂದು ನಯಾಜ್ ಸೌದಿ ಅರೇಬಿಯಾಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿನ ಏರ್ ಪೋರ್ಟ್ ತನಿಖಾಧಿಕಾರಿಗಳು ಕೆಲವೊಂದು ಮಾಹಿತಿ ಬೇಕು ಅಂತಾ ಹೇಳಿ ಬಂಧಿಸಿದ್ದಾರೆ. ಆದ್ರೆ ಒಂದು ತಿಂಗಳು ಕಳೆದರೂ ಇನ್ನೂ ಬಿಡುಗಡೆ ಮಾಡಿಲ್ಲ ಅಂತಾ ನಗರದ ಮೌಲಿಯೊಬ್ಬರು ಪತ್ರಿಕಾಗೋಷ್ಟಿ ನಡೆಸಿ ತಮ್ಮ ನೋವನ್ನು ಅಲವತ್ತುಕೊಂಡಿದ್ದಾರೆ.

  • ಯುವತಿ ಅಲ್ಲ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದೆ: ಕಾಮಿ ಸ್ವಾಮೀಜಿ

    ಯುವತಿ ಅಲ್ಲ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದೆ: ಕಾಮಿ ಸ್ವಾಮೀಜಿ

    ತಿರುವನಂತಪುರಂ: ಅತ್ಯಾಚಾರಕ್ಕೆ ಯತ್ನಿಸಿದ್ದಕ್ಕೆ ನಾನು ಸ್ವಾಮೀಜಿಯ ಮರ್ಮಾಂಗವನ್ನೇ ಕತ್ತರಿಸಿದ್ದೇನೆ ಎಂದು ಯುವತಿ ಪೊಲೀಸರಿಗೆ ಹೇಳಿಕೆ ನೀಡಿದ್ದರೆ, ಸ್ವಾಮೀಜಿ ಮಾತ್ರ ಇದಕ್ಕೆ ತದ್ವಿರುದ್ಧವಾದ ಹೇಳಿಕೆ ನೀಡಿದ್ದಾನೆ.

    ಶ್ರೀಹರಿ ಅಲಿಯಾಸ್ ಗಣೇಶಾನಂದ ತೀರ್ಥಪಾದ ಸ್ವಾಮಿಯನ್ನು ಮಾಧ್ಯಮಗಳು ಪ್ರಶ್ನಿಸಿದ್ದಕ್ಕೆ ಆತ, ನನ್ನ ಮರ್ಮಾಂಗವನ್ನು ನಾನೇ ಕತ್ತರಿಸಿದ್ದೇನೆ. ಯುವತಿ ಸುಳ್ಳು ಹೇಳುತ್ತಿದ್ದಾಳೆ. ಆಕೆಯ ಮಾತನ್ನು ನಂಬಬೇಡಿ. ಸುಳ್ಳು ವರದಿಯನ್ನು ಪ್ರಸಾರ ಮಾಡಬೇಡಿ ಎಂದು ಹೇಳಿದ್ದಾನೆ.

    ಈ ಘಟನೆಯ ಬಗ್ಗೆ ಕೇರಳ ಮುಖ್ಯಮಮತ್ರಿ ಪಿಣರಾಯಿ ವಿಜಯನ್ ಪ್ರತಿಕ್ರಿಯಿಸಿ ಯುವತಿಯ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. ಹುಡುಗಿಯ ಉತ್ತಮವಾದ ಕೆಲಸವನ್ನೇ ಮಾಡಿದ್ದಾಳೆ ಎಂದು ಹೊಗಳಿದ್ದಾರೆ.

    23 ವರ್ಷದ ಕಾನೂನು ವಿದ್ಯಾರ್ಥಿನಿ ಶುಕ್ರವಾರ ರಾತ್ರಿ ಅತ್ಯಾಚಾರಕ್ಕೆ ಯತ್ನಿಸಿದ ಸ್ವಾಮೀಜಿ ಮರ್ಮಾಂಗವನ್ನು ಚಾಕುವಿನಿಂದ ಕತ್ತರಿಸಿದ್ದಳು. ತನ್ನ ಕೃತ್ಯದ ಬಳಿಕ ತಿರುವನಂತಪುರಂ ಪೊಲೀಸ್ ಠಾಣೆಗೆ ಕರೆ ಮಾಡಿ ತನ್ನ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಳು.

    ಈ ಪ್ರಕರಣದ ಸಂಬಂಧ ಯುವತಿಯ ತಾಯಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ಮಾಡುತ್ತಿದ್ದಾರೆ. ಪೊಲೀಸರಿಗೆ ನೀಡಿದ ಹೇಳಿಕೆಯನ್ನು ಸ್ವಾಮೀಜಿ ನನ್ನ ಮೇಲೆ ಎಸಗುತ್ತಿದ್ದ ಕೃತ್ಯ ನನ್ನ ತಾಯಿಗೂ ತಿಳಿದಿತ್ತು ಎಂದು ಯುವತಿ ಹೇಳಿಕೆ ನೀಡಿದ್ದಳು.

    ಇದೇ ವೇಳೆ ಯುವತಿಯ ವಿರುದ್ಧ ಯಾವುದೇ ಕೇಸ್ ದಾಖಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಇದನ್ನೂ ಓದಿ: ಸ್ವಾಮೀಜಿಯ ಮರ್ಮಾಂಗವನ್ನೇ ಕತ್ತರಿಸಿದ ಕಾನೂನು ವಿದ್ಯಾರ್ಥಿನಿ.. ಏನಿದು ಘಟನೆ?

  • ರೇಪಿಸ್ಟ್ ಕಾಮಿ ಸ್ವಾಮೀಜಿಯ ಮರ್ಮಾಂಗವನ್ನೇ ಕಟ್ ಮಾಡಿದ್ಳು ಯುವತಿ!

    ರೇಪಿಸ್ಟ್ ಕಾಮಿ ಸ್ವಾಮೀಜಿಯ ಮರ್ಮಾಂಗವನ್ನೇ ಕಟ್ ಮಾಡಿದ್ಳು ಯುವತಿ!

    ತಿರುವನಂತಪುರಂ: ತನ್ನ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದ ಸ್ವಾಮೀಜಿಯ ಮರ್ಮಾಂಗವನ್ನೇ ಯುವತಿಯೊಬ್ಬಳು ಕತ್ತರಿಸಿದ ಘಟನೆ ತಿರುವನಂತಪುರಂ ಸಮೀಪದ ಕನ್ನಮೂಲ ಎಂಬಲ್ಲಿ ನಡೆದಿದೆ.

    ಕೊಲ್ಲಂನ ಪನ್ಮನದಲ್ಲಿರುವ ಶ್ರೀಹರಿ ಅಲಿಯಾಸ್ ಗಣೇಶಾನಂದ ತೀರ್ಥಪಾದ ಸ್ವಾಮಿಯನ್ನು (53)ಈಗ ತಿರುವನಂತಪುರದಲ್ಲಿರುವ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

    ಘಟನೆಯ ವಿವರ:
    ಶ್ರೀಹರಿ ಅಲಿಯಾಸ್ ಗಣೇಶಾನಂದ ಸ್ವಾಮೀಜಿ ಶುಕ್ರವಾರ ಯುವತಿಯ ಮನೆಗೆ ವಿಶೇಷ ಪೂಜೆಗೆಂದು ಆಗಮಿಸಿದ್ದಾನೆ. ರಾತ್ರಿ ಈತ ಅತ್ಯಾಚಾರಕ್ಕೆ ಯತ್ನಿಸಿದ್ದಾಗ ಯುವತಿ ಹರಿತವಾದ ಚೂರಿಯ ಸಹಾಯದಿಂದ ಮರ್ಮಾಂಗವನ್ನು ಕತ್ತರಿಸಿದ್ದಾಳೆ.

    ಶುಕ್ರವಾರ ಮಧ್ಯರಾತ್ರಿ 11.30ಕ್ಕೆ ಈ ಘಟನೆ ನಡೆದಿದೆ. ಈ ಘಟನೆಯ ಬಳಿಕ ಯುವತಿ ತಿರುವನಂತಪುರಂ ಪೊಲೀಸ್ ಠಾಣೆಗೆ ಕರೆ ಮಾಡಿ ನಾನು ಸ್ವಾಮೀಜಿಯ ಮರ್ಮಾಂಗವನ್ನು ಕತ್ತರಿಸಿದ್ದೇನೆ ಎಂದು ತಿಳಿಸಿದ್ದಾಳೆ.

    ಯುವತಿ ತನ್ನ ಹೇಳಿಕೆಯಲ್ಲಿ, ನಾನು ಹೈಸ್ಕೂಲ್ ಓದುತ್ತಿರುವಾಗಲೇ ಈತ ನನ್ನ ಮೇಲೆ ಅತ್ಯಾಚಾರ ಎಸಗುತ್ತಿದ್ದ. ಈತನ ಈ ಕೃತ್ಯ ನನ್ನ ತಾಯಿಗೆ ತಿಳಿದಿದೆ. ಶುಕ್ರವಾರ ಮನೆಗೆ ಬರುತ್ತಿರುವ ವಿಚಾರ ತಿಳಿದು ಆತನಿಗೆ ಪಾಠ ಕಲಿಸಬೇಕೆಂದು ನಿರ್ಧರಿಸಿದ್ದೆ. ಇದಕ್ಕಾಗಿ ನಾನು ಮೊದಲೇ ಹರಿತವಾದ ಚೂರಿಯನ್ನು ರೆಡಿ ಮಾಡಿ ಇಟ್ಟುಕೊಂಡಿದ್ದೆ ಎಂದು ಹೇಳಿದ್ದಾಳೆ.

    ಯಾಕೆ ಈ ರೀತಿ ಕೃತ್ಯ ಎಸಗಿದ್ದು ಎಂದು ಕೇಳಿದ್ದಕ್ಕೆ ಯುವತಿ, ದೇವಮಾನವ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಿದರೆ ಯಾರೂ ನಂಬುತ್ತಿರಲಿಲ್ಲ. ಈ ಕಾರಣಕ್ಕಾಗಿ ನನಗೆ ಬೇರೆ ದಾರಿ ಇಲ್ಲದೇ ಮರ್ಮಾಂಗವನ್ನೇ ಕತ್ತರಿಸಲು ಮುಂದಾದೆ ಎಂದು ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ.

    ಕೊಲ್ಲಂ ಮೂಲದ 54 ವರ್ಷದ ಹಿರಿಯ ವ್ಯಕ್ತಿ ನಸುಕಿನ ಜಾವ 12.39ಕ್ಕೆ ದಾಖಲಾಗಿದ್ದು, ಆಸ್ಪತ್ರೆಗೆ ಬರುವಾಗ ಮರ್ಮಾಂಗದ ಶೇ.90 ಭಾಗ ನೇತಾಡಿಕೊಂಡಿತ್ತು. ಯುರಲಾಜಿ ಮತ್ತು ಪ್ಲಾಸ್ಟಿಕ್ ಸರ್ಜನ್ ಗಳು ಕೂಡಲೇ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ. ಈಗ ಆರೋಗ್ಯ ಸ್ವಲ್ಪ ಸುಧಾರಿಸಿದೆ ಎಂದು ತಿರುವನಂತಪುರಂ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

    ಪಿಟಾಯ್ ಪೊಲೀಸರು ಐಪಿಸಿ ಸೆಕ್ಷನ್ 376(ಅತ್ಯಾಚಾರ) ಮತ್ತು ಪೋಸ್ಕೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ನಮಗೂ ಆತನಿಗೂ ಸಂಬಂಧ ಇಲ್ಲ: ಆತನ ಗುರುತು ಪತ್ರದಲ್ಲಿ ಆಶ್ರಮದ ವಿಳಾಸ ಸಿಕ್ಕಿದ ಹಿನ್ನೆಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪನ್ಮನ ಆಶ್ರಮದ ಮುಖ್ಯಸ್ಥ ಪ್ರಣವನಂದ ಅವರು, ಈ ಹಿಂದೆ ಆತ ಆಶ್ರಮದಲ್ಲಿ ನೆಲೆಸಿದ್ದ ನಂತರ ಆಶ್ರಮವನ್ನು ತೊರೆದು ತಿರುವನಂತಪುರಂನಲ್ಲಿ ಹೋಟೆಲ್ ನಡೆಸುತ್ತಿದ್ದ. ನಮ್ಮ ಆಶ್ರಮಕ್ಕೆ ಮತ್ತು ಆತನಿಗೆ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದ್ದಾರೆ.

    ಇದನ್ನೂ ಓದಿ: ಪ್ಲಸ್ ಟು ಪರೀಕ್ಷೆಯಲ್ಲಿ 1200ಕ್ಕೆ 1180 ಅಂಕಗಳಿಸಿದ್ದ ವಿದ್ಯಾರ್ಥಿನಿ ಮಾಧ್ಯಮಗಳ ವರದಿಯಿಂದ ಮನನೊಂದು ಆತ್ಮಹತ್ಯೆ!

    ಇದನ್ನೂ ಓದಿ :ಶವದ ಮರ್ಮಾಂಗ ಹಿಡಿದು ಮಹಿಳೆ ರೋಧನೆ: ಕಲಬುರಗಿಯಲ್ಲೊಂದು ವಿಚಿತ್ರ ಘಟನೆ

  • ಕ್ರೈಂ ಲೋಕದ ಅಪರೂಪದ ಕೇಸ್: ಜೀವಾಣುಗಳಿಂದ ಆರೋಪಿಗಳು ಅರೆಸ್ಟ್

    ಕ್ರೈಂ ಲೋಕದ ಅಪರೂಪದ ಕೇಸ್: ಜೀವಾಣುಗಳಿಂದ ಆರೋಪಿಗಳು ಅರೆಸ್ಟ್

    ಬೆಂಗಳೂರು: ಆರೋಪಿಗಳನ್ನ ಪತ್ತೆ ಹಚ್ಚಲು ಪೊಲೀಸರು ನಾನಾ ತಂತ್ರಗಳನ್ನ ಅನುಸರಿಸುತ್ತಾರೆ. ಆದರೆ ಇದೇ ಮೊದಲಬಾರಿಗೆ ಕೈಯಲ್ಲಿರೋ ಜೀವಾಣುಗಳ ಸಹಾಯದಿಂದ ಮೂವರು ಕೊಲೆ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಏಪ್ರಿಲ್ 4 ರಂದು ಜಯನಗರದ ಈಸ್ಟ್ ಎಂಡ್‍ನಲ್ಲಿದ್ದ 58 ವರ್ಷದ ಮಹಿಳೆ ಮಣಿ ಅವರ ಕೊಲೆ ಅವರ ಮನೆಯಲ್ಲೇ ನಡೆದಿತ್ತು. ಬೆಳಗ್ಗೆ ಎಂಟು ಘಂಟೆಗೆ ಮಣಿ ಅವರ ಮಗ ಶ್ರೀನಿವಾಸ್ ಎದ್ದು ಬಾಗಿಲು ತೆರೆಯಲು ಪ್ರಯತ್ನಿಸಿದಾಗ ಹೊರಗಿನಿಂದ ಚಿಲಕ ಹಾಕಲಾಗಿತ್ತು. ನಂತ್ರ ಪರಿಚಾರಕನಿಗೆ ಕರೆ ಮಾಡಿ ಕರೆಸಿಕೊಂಡು ಚಿಲಕ ಓಪನ್ ಮಾಡಿ ನೋಡಿದಾಗ ಮಣಿಯವರ ಕೊಲೆಯಾಗಿರೋದು ಗೊತ್ತಾಗುತ್ತದೆ.

    ತನಿಖೆ ಹೇಗೆ ನಡೆಯಿತು?
    ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ತಿಲಕನಗರ ಪೊಲೀಸರಿಗೆ ಆರೋಪಿಗಳನ್ನ ಹುಡುಕೋದು ಸವಾಲಿನ ಕೆಲಸವಾಗಿರುತ್ತೆ. ಕೊನೆಗೆ ಕಳ್ಳತನಕ್ಕೆ ಬಂದಿದ್ದ ಆರೋಪಿಗಳ ಫಿಂಗರ್ ಪ್ರಿಂಟ್ ಕಿಟಕಿ ಮೇಲೆ ಬಿದ್ದಿರುತ್ತೆ. ವಿಧಿ ವಿಜ್ಞಾನ ಪ್ರಯೋಗಾಲಯದ ನೆರವಿನಿಂದ ಕಳ್ಳರ ಫಿಂಗರ್ ಪ್ರಿಂಟ್ ಇದ್ದ ಜಾಗದಲ್ಲಿ ಜೀವಾಣುಗಳನ್ನು ಕಲೆಹಾಕಲಾಗುತ್ತದೆ. ಜೀವಾಣುಗಳನ್ನ ಮೈಕ್ರೊ ಸ್ಕೋಪಿಕಲ್ ಎಕ್ಸಾಮಿನೇಷನ್‍ಗೆ ಒಳಪಡಿಸಿದಾಗ ಪೊಲೀಸ್ರಿಗೆ ಒಂದು ಕ್ಲೂ ಸಿಗುತ್ತೆ. ಈ ತರಹದ ಜೀವಾಣುಗಳು ಚಿಂದಿ ಆಯೋರ ಬಳಿ ಹೆಚ್ಚಿಗೆ ಕಂಡುಬರೋದಾಗಿ ಗೊತ್ತಾಗುತ್ತೆ.

    ಈ ವಿಚಾರ ತಿಳಿದಿದ್ದೆ ತಡ ಆ ಪ್ರದೇಶದಲ್ಲಿರುವ ಚಿಂದಿ ಆಯೋರನ್ನೆಲ್ಲಾ ಕರೆದುಕೊಂಡು ಬಂದು ವಿಚಾರಣೆ ಮಾಡಿದಾಗ ಕೊಲೆ ಆರೋಪಿಗಳು ಸಿಕ್ಕಿಬಿಳ್ತಾರೆ. ಗಣೇಶ್ ಅಲಿಯಾಸ್ ಚಪ್ಪರ್, ಚಿನ್ನರಾಜು ಅಲಿಯಾಸ್ ಮಾಡು, ಶಕ್ತಿವೇಲು ಅಲಿಯಾಸ್ ಬಾಸ್‍ನನ್ನ ಪೊಲೀಸ್ರು ಬಂಧಿಸ್ತಾರೆ.

    ಅಂದು ನಡೆದಿದ್ದು ಏನು?
    ಶಕ್ತಿವೇಲುವಿನ ಆಜ್ಞೆ ಮೇರೆಗೆ ಮದ್ಯಪಾನ ಮಾಡಿಕೊಂಡು ನಾನು ಮಣಿ ಅವರ ಮನೆಗೆ ನುಗ್ಗಿದ್ದೆ. ಮಗ ಶ್ರೀನಿವಾಸ್ ಕಿಶೋರ್ ಮಲಗಿದ್ದ ಕೋಣೆಗೆ ಹೊರಗಿನಿಂದ ಚಿಲಕ ಹಾಕಿ ನಾನು ಮಣಿಯವರು ಮಲಗಿದ್ದ ರೂಮ್‍ಗೆ ಎಂಟ್ರಿ ಕೊಟ್ಟಿದ್ದೆ. ಅವರ ಕತ್ತಿನಲ್ಲಿದ್ದ ಸರವನ್ನ ಕಟ್ ಮಾಡಿ ಎಳೆದ ನಂತ್ರ ಅವರ ಕೈಯಲ್ಲಿದ್ದ ಬಳೆಯನ್ನ ಬಿಚ್ಚಲು ಪ್ರಯತ್ನಿಸಿದಾಗ ಎಚ್ಚರಗೊಂಡ ಮಣಿಯವರು ಕೂಗಿಕೊಂಡಿದ್ದರು. ಕೂಡಲೇ ನಾನು ಕಬ್ಬಿಣದ ರಾಡ್‍ನಿಂದ ಅವರ ತಲೆಗೆ ಎರಡು ಬಾರಿ ಹೊಡೆದು, ಚಿನ್ನಾಭರಣ ದೋಚಿ ಪರಾರಿಯಾಗಿದ್ದೆ ಎಂದು ಗಣೇಶ ಪೊಲೀಸ್ ವಿಚಾರಣೆ ವೇಳೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.

    ಆರೋಪಿಗಳ ಬಂಧನದಿಂದ 27 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದ್ದು, 9 ಮನೆಕಳವು ಪ್ರಕರಣಗಳು ಪತ್ತೆಯಾಗಿವೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

    ಅನಾಥರನ್ನಾಗಿ ಮಾಡಿತು ಕೊಲೆ
    ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದು ಶ್ರೀನಿವಾಸ್ ಕುಟುಂಬ ನೆಲೆ ಕಂಡುಕೊಂಡಿತ್ತು. ತುಂಬಾ ಸುಸಂಸ್ಕೃತ ಕುಟುಂಬದ ಹಿನ್ನೆಲೆ ಹೊಂದಿದ್ದ ಮಣಿಯವರ ಪತಿ 2014ರಲ್ಲಿ ಕ್ಯಾನ್ಸರ್‍ನಿಂದ ಮೃತಪಟ್ಟಿದ್ದರು. ತಾಯಿಯನ್ನು ನೋಡಿಕೊಳ್ಳುವ ಸಲುವಾಗಿ ಅಮೆರಿಕದಲ್ಲಿ ಸಿಕ್ಕಿದ್ದ ಕೆಲಸವನ್ನ ಶ್ರೀನಿವಾಸ್ ತಿರಸ್ಕರಿಸಿ ತಾಯಿಯ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದರು. ಆದರೆ ದುರ್ವಿಧಿ ಮಣಿಯವರನ್ನ ಕಿತ್ತುಕೊಂಡು ಶ್ರೀನಿವಾಸ್ ಅವರನ್ನು ಅನಾಥರನ್ನಾಗಿ ಮಾಡಿದೆ.

    ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆರೋಪಿಗಳು ಜೈಲು ಸೇರಿದ್ದಾರೆ. ಜೀವಾಣುಗಳ ಸಹಾಯದಿಂದಲೂ ಆರೋಪಿಗಳನ್ನ ಹಿಡಿಯಬಹುದು ಎಂದು ತಿಲಕನಗರ ಇನ್ಸ್ ಪೆಕ್ಟರ್ ತನ್ವೀರ್ ಮತ್ತು ತಂಡ ಈಗ ತೋರಿಸಿಕೊಟ್ಟಿದೆ.

  • ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಆಸೆಪಟ್ಟ ಬೆಂಗಳೂರಿನ ಟೆಕ್ಕಿ ಪತಿ ವಿರುದ್ಧ ದೂರು

    ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಆಸೆಪಟ್ಟ ಬೆಂಗಳೂರಿನ ಟೆಕ್ಕಿ ಪತಿ ವಿರುದ್ಧ ದೂರು

    ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಆಸೆಪಟ್ಟ ಟೆಕ್ಕಿ ವಿರುದ್ಧ ಛತ್ತೀಸ್‌ಗಡದ ರಾಯಭಾಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಈಗ ಪ್ರಕರಣ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.

    ಛತ್ತೀಸ್‍ಗಡದ ಮೂಲದ ಹುಡುಗಿ ಆರು ವರ್ಷದ ಹಿಂದೆ ಸಾಫ್ಟ್ ವೇರ್ ಎಂಜಿನಿಯರ್ ಒಬ್ಬರನ್ನು ಮದುವೆಯಾಗಿದ್ದರು. ಈಜೀಪುರದಲ್ಲಿ ದಂಪತಿ ನೆಲೆಸಿದ್ದು, ಆರಂಭದಲ್ಲಿ ಸಂತೋಷದಲ್ಲಿದ್ದ ಪತ್ನಿಗೆ ನಂತರ ಪತಿಯ ವಿಕೃತ ಮನಸ್ಥಿತಿ ಗೊತ್ತಾಗಿದೆ.

    ಪ್ರತಿ ದಿನ ಬ್ಲೂ ಫಿಲ್ಮ್ ವೀಕ್ಷಿಸುವ ಚಟವನ್ನು ಹೊಂದಿದ್ದ ಈತ  ಅಸ್ವಾಭಾವಿಕ ಲೈಂಗಿಕ ಕ್ರಿಯೆಯ ವಿಡಿಯೋ ತೋರಿಸಿ ನೀನು ಈ ರೀತಿಯಾಗಿ ಸಹಕರಿಸು ಎಂದು ಪೀಡಿಸುತ್ತಿದ್ದ. ಆರಂಭದಲ್ಲಿ ಒಂದೆರಡು ಬಾರಿ ನಾನು ಒಪ್ಪಿ ಸಹಕರಿಸಿದ್ದೆ. ಈ ದೃಶ್ಯಗಳನ್ನು ಮೊಬೈಲ್ ನಲ್ಲಿ ಚಿತ್ರೀಸಿಕೊಂಡಿದ್ದ ಪತಿ  ನಂತರ ಪ್ರತಿ ಬಾರಿಯೂ ಈ ರೀತಿಯಾಗಿ ಸಹಕರಿಸು ಎಂದು ಒತ್ತಾಯಿಸುತ್ತಿದ್ದ.  ನಾನು ಒಲ್ಲೆ ಎಂದಿದ್ದಕ್ಕೆ ನಮ್ಮಿಬ್ಬರ ಲೈಂಗಿಕ ಕ್ರಿಯೆಯ ವಿಡಿಯೋವನ್ನು ನಿನ್ನ ತಂದೆಗೆ ವಾಟ್ಸಪ್ ಮಾಡುತ್ತೇನೆ ಎಂದು ಬೆದರಿಕೆ ಹಾಕುತ್ತಿದ್ದ ಎಂದು ದೂರಿನಲ್ಲಿ ತಿಳಿಸಿದ್ದಾರೆ

    ಕಿರುಕುಳದ ಬಗ್ಗೆ ಮಾವನ ಹತ್ತಿರ ಹೇಳಿಕೊಂಡಿಲ್ಲ . ಆತ್ತೆ ಬಳಿ ಹೇಳಿದಾಗ ಅವರು ಅದನ್ನು ಗಂಭೀರವಾಗಿ ಸ್ವೀಕರಿಸಲಿಲ್ಲ. ಕೊನೆಗೆ ವಿಕೃತ ಪತಿಯ ಕಾಟ ತಡೆಯಲಾರದೆ ಗಂಡನನ್ನು ಬಿಟ್ಟು ಪತ್ನಿ ತಂದೆಯ ಮನೆಯಾದ ಛತ್ತೀಸ್‍ಗಡದ ರಾಯಭಾಗಕ್ಕೆ ತೆರಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಪ್ರಕರಣ ಈಗ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದೆ.

    ಟೆಕ್ಕಿ ವಿರುದ್ಧ ಅಸ್ವಾಭಾವಿಕ ಲೈಂಗಿಕಕ್ರಿಯೆ (ಐಪಿಸಿ377), ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66ಇ ಹಾಗೂ 67ರ (ಅಶ್ಲೀಲ ದೃಶ್ಯ ರವಾನೆ) ಅಡಿ ಹಾಗೂ ತಾಯಿ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪದಡಿ ಪ್ರಕರಣ ದಾಖಲಾಗಿದೆ

    ಪ್ರಕರಣ ವರ್ಗಾವಣೆಯಾಗುತ್ತಿದ್ದಂತೆ ಮನೆಯಿಂದ ಟೆಕ್ಕಿ ಪರಾರಿಯಾಗಿದ್ದು, ಪೊಲೀಸರು ಆತನ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

  • ಕುಡಿದ ಮತ್ತಿನಲ್ಲಿ ಕಾರಿನಲ್ಲೇ ಸಿಇಒ ಪತಿಗೆ ಪತ್ನಿಯಿಂದ ಗುಂಡಿನ ದಾಳಿ

    ಕುಡಿದ ಮತ್ತಿನಲ್ಲಿ ಕಾರಿನಲ್ಲೇ ಸಿಇಒ ಪತಿಗೆ ಪತ್ನಿಯಿಂದ ಗುಂಡಿನ ದಾಳಿ

    ಬೆಂಗಳೂರು: ಕಾರಿನಲ್ಲಿ ಬರುತ್ತಿರುವಾಗ ಸಿಟ್ಟಾದ ಹೆಂಡತಿಯೊಬ್ಬಳು ಗಂಡನ ಮೇಲೆ ಗುಂಡು ಹಾರಿಸಿದ ಘಟನೆ ಹೊಸೂರು ಮುಖ್ಯ ರಸ್ತೆ ಹೆಬ್ಬಗೋಡಿ ಬಳಿ ಶುಕ್ರವಾರ ಸಂಜೆ ನಡೆದಿದೆ.

    ಎಚ್.ಎಸ್‍ಆರ್ ಲೇಔಟ್‍ನಲ್ಲಿರುವ ಕಂಪೆನಿಯೊಂದರ ಸಿಇಒ ಸಾಯಿರಾಂ ಮೇಲೆ ಪತ್ನಿ ಹಂಸ ಗುಂಡು ಹಾರಿಸಿದ್ದಾಳೆ. ಗಂಭೀರವಾಗಿ ಗಾಯಗೊಂಡಿರುವ ಸಾಯಿರಾಂ ಅವರನ್ನು ಸ್ಪರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಪತ್ನಿ ಹಂಸಳನ್ನು ಈಗ ಬಂಧಿಸಿದ್ದಾರೆ.

    ಏನಿದು ಘಟನೆ:
    ಹೊಸೂರಿನಿಂದ ಬೆಂಗಳೂರಿಗೆ ದಂಪತಿ ಕಾರಿನಲ್ಲಿ ಬರುತ್ತಿದ್ದರು. ಬೆಂಗಳೂರಿನ ಹೊರವಲಯದ ಅತ್ತಿಬೆಲೆ ಸಮೀಪದ ಎಸ್.ಕೆ ಗಾರ್ಡನ್ ರೆಸ್ಟೋರೆಂಟ್‍ನಲ್ಲಿ ಇವರಿಬ್ಬರು ಮದ್ಯ ಸೇವಿಸಿದ್ದರು. ಬಳಿಕ ಅಲ್ಲಿಯೇ ಗಲಾಟೆ ಮಾಡಿಕೊಂಡು ಹೊರಟಿದ್ದಾರೆ. ಗಲಾಟೆ ಜೋರಾದಾಗ ಸಾಯಿರಾಂ ಹಂಸ ಮೇಲೆ ಹೊಡೆದಿದ್ದಾರೆ. ಗಲಾಟೆ ಜೋರಾಗುತ್ತಿದ್ದಂತೆ ವೀರಸಂದ್ರ ಸಿಗ್ನಲ್‍ನಲ್ಲಿ ಕಾರು ನಿಲ್ಲಿಸಿದ್ದಾಗ ಹೆಂಡತಿ ಗಂಡನ ಮೇಲೆ ಇದ್ದಕ್ಕಿದ್ದಂತೆ ಗುಂಡಿನ ದಾಳಿ ನಡೆಸಿದ್ದಾಳೆ.

    ಸಿಗ್ನಲ್ ನಲ್ಲಿ ಈ ದೃಶ್ಯವನ್ನು ನೋಡಿದ ಪಕ್ಕದಲ್ಲಿದ್ದವರು ಸಹಾಯಕ್ಕೆ ಬಂದಾಗ ಅವರ ಮೇಲೂ ಗುಂಡಿನ ದಾಳಿ ಮಾಡಲು ಹಂಸ ಮುಂದಾಗಿದ್ದಾಳೆ.  ಅಂಬುಲೆನ್ಸ್ ಬಂದ ಮೇಲೆ ಗಂಡನನ್ನು ಕರೆದೊಯ್ಯದಂತೆ ಪಟ್ಟು ಹಿಡಿದು ಕುಳಿತಿದ್ದಳು. ಕೊನೆಗೆ ಪೊಲೀಸರು ಆಕೆಯನ್ನು ಮನ ಒಲಿಸಿ ಅಂಬುಲೆನ್ಸ್ ನಲ್ಲಿ ಸಾಯಿರಾಂ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಈಗ ಸಾಯಿರಾಂ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ಗುಂಡುಗಳು ಹೊಟ್ಟೆಯಲ್ಲಿದ್ದು ಆಪರೇಷನ್ ನಡೆಯುತ್ತಿದೆ.