Tag: Crohani

  • ಡಿಸೆಂಬರ್ 1 ರಿಂದ ಬೆಳೆಹಾನಿ ಪರಿಹಾರ ವಿತರಣೆ: ಹಾಲಪ್ಪ ಆಚಾರ್

    ಡಿಸೆಂಬರ್ 1 ರಿಂದ ಬೆಳೆಹಾನಿ ಪರಿಹಾರ ವಿತರಣೆ: ಹಾಲಪ್ಪ ಆಚಾರ್

    ರಾಯಚೂರು: ಕಳೆದ ಒಂದು ವಾರದಿಂದ ಸುರಿದ ಮಳೆಗೆ ಹಾನಿಯಾಗಿರುವ ಬೆಳೆ ಸರ್ವೇ ಕಾರ್ಯ ನವೆಂಬರ್ 30ರೊಳಗೆ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಡಿಸೆಂಬರ್ 1 ರಿಂದ ರೈತರಿಗೆ ಪರಿಹಾರ ನೀಡಬೇಕು ಅಂತ ಕಠಿಣವಾಗಿ ಸೂಚಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

    ಬೆಳೆಹಾನಿ ಪರಿಹಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತ ನಾಶವಾಗಿದೆ. ಒಟ್ಟು 49,953 ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ ಈ ವರ್ಷ ಮಳೆಯಿಂದಾಗಿ ರೈತರು ಬೆಳೆ ಮುಟ್ಟದಂತಹ ಪರಿಸ್ಥಿತಿಯಿದೆ. ಅದಕ್ಕೆ ಈ ಕುರಿತು ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಪರಿಹಾರಕ್ಕೆ ಮನವಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ, ಒಂದೇ ಮತ, ಒಂದೇ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

    ಬೆಳೆಹಾನಿಯಿಂದಾಗಿ ಜಿಲ್ಲೆಯಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆ ಮೃತ ರೈತರ ಕುಟುಂಬಗಳನ್ನು ನಾವು ಇಂದು ಭೇಟಿ ಮಾಡಿ ಸಾಂತ್ವನ ಹೇಳುತ್ತೇವೆ. ನಂತರ ಸರ್ಕಾರಿಂದ ಏನೆಲ್ಲಾ ಪರಿಹಾರ ನೀಡಬೇಕು ಅದನ್ನು ಮಾಡುತ್ತೇವೆ ಎಂದು ಹೇಳಿದರು.

    ವಿಧಾನ ಪರಿಷತ್ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, 100ಕ್ಕೆ 100ರಷ್ಟು ನಾವೇ ಗೆಲ್ಲುತ್ತೇವೆ. ಗ್ರಾಮ ಪಂಚಾಯತಿ ಸೇರಿ ಒಟ್ಟು 6 ಸಾವಿರ ಮತದಾರರಿದ್ದಾರೆ. ನಾವು ಸಂಘಟನಾತ್ಮಕವಾಗಿದ್ದೇವೆ. ಅದಕ್ಕೆ ನಮ್ಮ ಅಭ್ಯರ್ಥಿಯೇ ಗೆಲ್ಲುತ್ತಾರೆ. ನಮ್ಮ ನಾಯಕರು ಸೂಚಿಸುವ ಅಭ್ಯರ್ಥಿ ಗೆಲ್ಲಿಸೋದು ನಮ್ಮ ಗುರಿ ಎಂದು ತಿಳಿಸಿದರು.

  • ಬೆಳೆಹಾನಿ ಬಗ್ಗೆ ಅಳಲು ತೋಡಿಕೊಂಡ ರೈತರ ವಿಡಿಯೋಗಳು ಫುಲ್ ವೈರಲ್

    ಬೆಳೆಹಾನಿ ಬಗ್ಗೆ ಅಳಲು ತೋಡಿಕೊಂಡ ರೈತರ ವಿಡಿಯೋಗಳು ಫುಲ್ ವೈರಲ್

    ಬೀದರ್: ಮಹಾರಾಷ್ಟ್ರದ ಧನ್ನೆಗಾಂವ್ ಜಲಾಶಯದಿಂದ ಅಪಾರ ಪ್ರಮಾಣದ ನೀರು ಮಾಂಜ್ರಾನದಿಗೆ ಬಿಡುಗಡೆ ಮಾಡಿದ ಹಿನ್ನೆಲೆ ಮಾಂಜ್ರಾನದಿ ದಡದಲ್ಲಿರುವ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

    ಬೆಳೆಹಾನಿ ಬಗ್ಗೆ ಗಡಿ ಜಿಲ್ಲೆ ಬೀದರ್ ನ ರೈತರು ವೀಡಿಯೋ ಮಾಡಿ ಅಳಲು ತೋಡಿಕೊಂಡ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಪುಲ್ ವೈರಲ್ ಆಗಿವೆ. ಕಮಲನಗರ ತಾಲೂಕಿನ ಸೋನಾಳ ಗ್ರಾಮದ ರೈತರ ಸೋಯಾಬೀನ್ ಬೆಳೆಗೆ ನೀರು ನುಗ್ಗಿದ್ದು, ಜಲಾವೃತವಾದ ಬೆಳೆ ಮಧ್ಯೆ ನಿಂತು ರೈತನೋರ್ವ ಮರಾಠಿ ಭಾಷೆಯಲ್ಲಿ, ಸಾಲ ಮಾಡಿಕೊಂಡ ರೈತ ಬದುಕುವುದು ಹೇಗೆ? ಎಂದು ಹಾಡು ಹಾಡಿದ್ದಾರೆ. ಅವರು ಹಾಡಿದ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಡುವ ಮೂಲಕ ರೈತ ನೋವು ತೋಡಿಕೊಂಡಿಕೊಂಡಿದ್ದಾರೆ. ಇದನ್ನೂ ಓದಿ: ಬೀದಿ ಹುಡುಗನ ಡ್ಯಾನ್ಸ್ ಗೆ ವಿಸ್ಮಯಗೊಂಡ ನೆಟ್ಟಿಗರು – ವೀಡಿಯೋ ವೈರಲ್

    ಭಾಲ್ಕಿ ತಾಲೂಕಿನ ಲಖನಗಾಂವ್ ಹೋಬಳಿ ವ್ಯಾಪ್ತಿಯ ಸೋಮಪುರ ಗ್ರಾಮದ ಇನ್ನೊಬ್ಬ ರೈತ ಉತ್ತಮ ಬಿರಾದರ್ ಕೂಡಾ ವೀಡಿಯೋ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ರೈತನ ಎಂಟು ಎಕರೆ ಸೋಯಾಬೀನ್ ಬೆಳೆ ಸಹ ನೀರು ಪಾಲಾಗಿದ್ದು, ಬೆಳೆಗೆ ಪರಿಹಾರ ನೀಡುವಂತೆ ಅಧಿಕಾರಿಗಳು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ, ಯಾರೊಬ್ಬರು ಸ್ಪಂದಿಸುತ್ತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಜಾಮೀನು ಅರ್ಜಿ ಸಲ್ಲಿಸಿದ ಎರಡನೇ ಆರೋಪಿ ಅಂಬಿಕಾ

    ರೈತರ ಸಂಕಷ್ಟ ಪ್ರಧಾನಿ ನೇರಂದ್ರ ಮೋದಿ ತನಕ ಹೋಗಲಿ ಎಂದು ವೀಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ.