ಮೇ 4 ರಂದು ನಡೆದ ನಿಗದಿತ ಸಭೆಯಲ್ಲಿ ಆರ್ಬಿಐ 40 ಬಿಪಿಎಸ್ ಹೆಚ್ಚಿಸಿದ್ದು, ಇದು ದರದ ಏರಿಕೆಗೆ ಕಾರಣವಾಗಿದೆ. ಜಾಗತಿಕ ತೈಲ ಮಾನದಂಡ ಬ್ರೆಂಟ್ ಕ್ರೂಡ್ ಫ್ಯೂಚರ್ಸ್ ಪ್ರತಿ ಬ್ಯಾರೆಲ್ಗೆ 123.43 ಡಾಲರ್ ಇದ್ದು, 0.12 ರಷ್ಟು ಕುಸಿದಿದೆ. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR
ದೇಶೀಯ ಈಕ್ವಿಟಿ ಮಾರುಕಟ್ಟೆಯ ಎದುರು 30 ಷೇರುಗಳ ಸೆನ್ಸೆಕ್ಸ್ 10.05 ಪಾಯಿಂಟ್ ಅಥವಾ 0.02 ರಷ್ಟು ಹೆಚ್ಚಿ 54,902.54 ರಲ್ಲಿ ವಹಿವಾಟು ನಡೆಸುತ್ತಿದೆ. ಆದರೆ ನಿಫ್ಟಿ 5.65 ಪಾಯಿಂಟ್ ಅಥವಾ ಶೇಕಡಾ 0.03 ರಷ್ಟು ಮುನ್ನಡೆ ಸಾಧಿಸಿ ಶೇಕಡಾ 0.03 ತಲುಪಿದೆ.
ಬೈಡನ್ ಮಧ್ಯಪ್ರಾಚ್ಯ ದೇಶದ ನಾಯಕರೊಡನೆ ಮಾತುಕತೆ ನಡೆಸಲು ಮುಂದಾಗುತ್ತಿದ್ದಾರೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಹೇಳಿಕೆ ನೀಡಿದ್ದಾರೆ. ಅವರು ಈ ತಿಂಗಳು ನ್ಯಾಟೋ ಶೃಂಗಸಭೆ, ಹಾಗೂ ಜರ್ಮನಿಯಲ್ಲಿ ಗ್ರೂಪ್ ಆಫ್ ಸೆವೆನ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಯೋಜಿಸಿದ್ದಾರೆ. ಈ ವೇಳೆ ಇಸ್ರೇಲ್ಗೆ ಪ್ರಯಾಣಿಸುವ ನಿರೀಕ್ಷೆಯಿದೆ ಎಂದಿದ್ದಾರೆ. ಇದನ್ನೂ ಓದಿ: 2 ವರ್ಷದಿಂದ ಬಗೆಹರಿಯದ ಮಂಡ್ಯ ವ್ಯಕ್ತಿಯ ಸಮಸ್ಯೆಗೆ ಎರಡೇ ದಿನದಲ್ಲಿ ಪರಿಹಾರ ಕೊಟ್ಟ ಮೋದಿ
ಸೌದಿ ಅರೇಬಿಯಾ ನೇತೃತ್ವದ ಪ್ರಮುಖ ತೈಲ ಉತ್ಪಾದಕ ದೇಶಗಳು ಗುರುವಾರ ನಿರೀಕ್ಷಿತ ಉತ್ಪಾದನೆಗಿಂತ ಹೆಚ್ಚಿನ ಉತ್ಪಾದನೆಗೆ ಒಪ್ಪಿಕೊಂಡಿವೆ. ಉಕ್ರೇನ್-ರಷ್ಯಾ ಆಕ್ರಮಣದಿಂದಾಗಿ ಗಗನಕ್ಕೇರುತ್ತಿರುವ ಅನಿಲ ಬೆಲೆಗೆ ಸೌದಿ ಅರೇಬಿಯಾ ನಿರ್ಧಾರ ಪರಿಹಾರವಾಗುವ ಸಾಧ್ಯತೆ ಇದೆ.
ಲಂಡನ್: ಯುರೋಪಿಯನ್ ಒಕ್ಕೂಟ(ಇಯು) ಈ ವರ್ಷದ ಅಂತ್ಯದ ವೇಳೆಗೆ ರಷ್ಯಾದಿಂದ ಆಮದಾಗುವ ತೈಲವನ್ನು ಶೇ.90 ರಷ್ಟು ಕಡಿತಗೊಳಿಸಲು ಒಪ್ಪಿಕೊಂಡಿದೆ. ಇಯು ನಿರ್ಧಾರದ ಬೆನ್ನಲ್ಲೇ ಮಂಗಳವಾರ ಕಚ್ಚಾ ತೈಲದ ಬೆಲೆ ಭಾರೀ ಏರಿಕೆಯಾಗಿದೆ.
ಯುರೋಪಿಯನ್ ಕಮಿಷನ್ ಅಧ್ಯಕ್ಷೆ ಉರ್ಸುಲಾ ವಾನ್ ಡೆರ್ ಲೇಯೆನ್ ಈ ಬಗ್ಗೆ ತಮ್ಮ ಟ್ವಿಟ್ಟರ್ನಲ್ಲಿ, ರಷ್ಯಾದಿಂದ ಆಮದಾಗುವ ತೈಲದ ನಿರ್ಬಂಧದ ಒಪ್ಪಂದವನ್ನು ನಾನು ಸ್ವಾಗತಿಸುತ್ತೇನೆ. ಇದು ಈ ವರ್ಷದ ಅಂತ್ಯದ ವೇಳೆ ರಷ್ಯಾದಿಂದ ಸುಮಾರು ಶೇ.90 ರಷ್ಟು ಆಮದನ್ನು ಕಡಿತಗೊಳಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸತ್ಯೇಂದ್ರ ಜೈನ್ ಬಂಧನ ರಾಜಕೀಯ ಪ್ರೇರಿತ, ನಮ್ಮದು ಪ್ರಾಮಾಣಿಕ ಸರ್ಕಾರ: ಕೇಜ್ರಿವಾಲ್
ಈ ನಿರ್ಧಾರದಿಂದ ಕಚ್ಚಾ ತೈಲ ಹಾಗೂ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಪರಿಣಾಮ ಬೀರಲಿದೆ. ಆದರೆ ಹಂಗೇರಿ, ಸ್ಲೋವಾಕಿಯಾ ಹಾಗೂ ಜೆಕ್ ರಿಪಬ್ಲಿಕ್ಗಳಲ್ಲಿ ರಷ್ಯಾದ ಆಮದನ್ನು ಕಡಿತಗೊಳಿಸಲು ಹೆಚ್ಚಿನ ಸಮಯ ತೆಗೆದುಕೊಳ್ಳಲಿದೆ. ಇದಕ್ಕಾಗಿ ಸದ್ಯ ಪೈಪ್ಲೈನ್ ಮುಖಾಂತರ ರಷ್ಯಾದಿಂದ ಬರುವ ತೈಲಕ್ಕೆ ತಾತ್ಕಾಲಿಕ ವಿನಾಯಿತಿ ಇರಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: 130 ಕೋಟಿ ಜನರಿಗೆ ನಾನು ಸೇವಕನಷ್ಟೇ: ನರೇಂದ್ರ ಮೋದಿ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ಗೆ 117.93 ಡಾಲರ್(9,162 ರೂ.) ಇದ್ದ ಕಚ್ಚಾ ತೈಲದ ಬೆಲೆ ಈಗ 122 ಡಾಲರ್ಗೆ(9,478 ರೂ.) ಏರಿಕೆಯಾಗಿದೆ.
ಜಾಗತಿಕವಾಗಿ ತೈಲಬೆಲೆ ಹೆಚ್ಚಾಗಿದ್ದರೂ ಭಾರತದಲ್ಲಿ ಕಳೆದ 9 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ನ ಬೆಲೆ ತಟಸ್ಥವಾಗಿದೆ. ಮೇ 22 ರಂದು ಕೆಂದ್ರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್ ಪೆಟ್ರೋಲ್ಗೆ 8 ರೂ. ಹಾಗೂ ಲೀಟರ್ ಡೀಸೆಲ್ಗೆ 6 ರೂ. ಕಡಿತಗೊಳಿಸಿದೆ.
ನವದೆಹಲಿ: ಭಾರತವು ರಷ್ಯಾದಿಂದ ಅಗ್ಗದ ಬೆಲೆಗೆ ಕಚ್ಚಾ ತೈಲ ಖರೀದಿಯನ್ನು ಮುಂದುವರಿಸಲಿದೆ. ಆದರೆ, ರಿಯಾಯಿತಿಯ ನಿಯಮಗಳನ್ನು ಅಂತಿಮಗೊಳಿಸಿಲ್ಲ ಎಂದು ಸರ್ಕಾರಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಕ್ರೇನ್ ಮೇಲಿನ ಯುದ್ಧದಿಂದಾಗಿ ಪಾಶ್ಚಿಮಾತ್ಯ ರಾಷ್ಟ್ರಗಳು ಕಚ್ಚಾತೈಲ ಖರೀದಿಯ ಮೇಲೆ ನಿರ್ಬಂಧ ಹೇರಿವೆ. ಕೆಲ ಅಂತಾರಾಷ್ಟ್ರೀಯ ವ್ಯಾಪಾರಿಗಳು ಪಾವತಿ ವ್ಯವಸ್ಥೆ ಮತ್ತು ಸಾಗಣೆ ಹಾಗೂ ಬ್ಯಾರಲ್ಗಳ ಖರೀದಿಯನ್ನು ಅಡ್ಡಿಪಡಿಸುತ್ತಿದ್ದಾರೆ. ಈ ನಡುವೆಯೂ ವಹಿವಾಟು ಸುಗಮಗೊಳಿಸಲು ರೂಪಾಯಿ – ರುಬೆಲ್ ವ್ಯಾಪಾರ ಕಾರ್ಯವಿಧಾನವನ್ನು ಸ್ಥಾಪಿಸುವ ಕೆಲಸ ನಡೆಯುತ್ತಿದೆ. ಆದರೆ ಈ ಬಗ್ಗೆ ಇನ್ನು ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ. ಸರಕುಗಳಿಗೆ ಪಾವತಿಸಲು ಸಾಧ್ಯವಿರುವ ಎಲ್ಲಾ ಮಾರ್ಗಗಳ ಬಗ್ಗೆಯೂ ಚರ್ಚಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶೂಟೌಟ್ಗೂ ಮೊದಲೇ ಇನ್ಸ್ಟಾಗ್ರಾಮ್ನಲ್ಲಿ ಗನ್ಗಳ ಚಿತ್ರ ಪೋಸ್ಟ್ ಮಾಡಿದ್ದ ಆರೋಪಿ
ಇದರೊಂದಿಗೆ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯಿಂದಾಗಿ ಭಾರತವು ಕಲ್ಲಿದ್ದಲಿನ ಮೇಲೆ ಅವಲಂಬನೆಯನ್ನು ಹೆಚ್ಚಿಸುತ್ತಿದೆ. ಮುಂಬರುವ ತಿಂಗಳಲ್ಲಿ ಸರ್ಕಾರಿ ಕೋಲ್ ಇಂಡಿಯಾ ಹೆಚ್ಚು ಕಲ್ಲಿದ್ದಲು ಉತ್ಪಾದಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೊಲಂಬೋ: ತೀವ್ರವಾದ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಅಗತ್ಯ ವಸ್ತುಗಳ ಆಮದಿಗೆ ನಮ್ಮಲ್ಲಿ ಡಾಲರ್ ಕೊರತೆಯಿದೆ ಎಂದು ಲಂಕಾ ನೂತನ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಸೋಮವಾರ ತಿಳಿಸಿದ್ದಾರೆ.
ನಮ್ಮಲ್ಲಿ ಪೆಟ್ರೋಲ್ ಖಾಲಿಯಾಗಿದೆ. ಸದ್ಯ ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಪೆಟ್ರೋಲ್ ಸ್ಟಾಕ್ ಇದೆ. ಮುಂದಿನ ತಿಂಗಳುಗಳಲ್ಲಿ ದೇಶದ ಆರ್ಥಿಕ ಬಿಕ್ಕಟ್ಟು ಇನ್ನಷ್ಟು ತೀವ್ರಗತಿಗೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಲಂಕಾ ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಇಮ್ರಾನ್ ಖಾನ್ನನ್ನು ಬಂಧಿಸಿದ್ರೆ ಪಾಕಿಸ್ತಾನ ಶ್ರೀಲಂಕಾವಾಗುತ್ತದೆ: ಪಾಕ್ ಮಾಜಿ ಸಚಿವ
ನಮ್ಮಲ್ಲಿ ಈಗಾಗಲೇ 3 ಸೆಟ್ ಕಚ್ಚಾತೈಲ ಸಾಗಿಸುವ ಹಡಗುಗಳು ಕೊಲಂಬೋ ಬಂದರಿನ ಹೊರಗೆ ಪಾವತಿಗಾಗಿ ಕಾಯುತ್ತಿವೆ. ಆದರೆ ಪಾವತಿಗೆ ನಮ್ಮ ಸರ್ಕಾರದಿಂದ ಡಾಲರ್ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ ಎಂದು ವಿಕ್ರಮಸಿಂಘೆ ದೇಶದ ಆರ್ಥಿಕ ಸಂಕಷ್ಟವನ್ನು ತಿಳಿಸಿದ್ದಾರೆ. ಇದನ್ನೂ ಓದಿ: ನೇಪಾಳ ಪ್ರವಾಸ – ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ, ಬುದ್ಧನಿಗೆ ಭಕ್ತಿಭಾವದ ನಮನ
ದ್ವೀಪ ರಾಷ್ಟ್ರ ತನ್ನ ಸ್ವಾತಂತ್ರ್ಯದ ಬಳಿಕ ಎಂದೂ ಸಂಭವಿಸದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ. ಅಲ್ಲಿನ 2 ಕೋಟಿಗೂ ಅಧಿಕ ಜನರು ಆಹಾರ, ಇಂಧನ ಹಾಗೂ ಔಷಧಕ್ಕಾಗಿ ತೀವ್ರವಾದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ದೇಶ ಭಾರೀ ಹಣದುಬ್ಬರ ಹಾಗೂ ಸುದೀರ್ಘ ವಿದ್ಯುತ್ ಕಡಿತವನ್ನೂ ಎದುರಿಸುತ್ತಿದೆ.
ನವದೆಹಲಿ: ಕಡಿಮೆ ದರದಲ್ಲಿ ತೈಲ ನೀಡುತ್ತಿರುವ ರಷ್ಯಾ ಜೊತೆ ಭಾರತ ಈಗ ಚೌಕಾಶಿ ಮಾಡುತ್ತಿದೆ ಎಂದು ವರದಿಯಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಯಾದ 70 ಡಾಲರ್ಗೆ(5,300 ರೂ.)ಕಚ್ಚಾ ತೈಲ ನೀಡುವುದಾಗಿ ರಷ್ಯಾ ಈಗಾಗಲೇ ಪ್ರಕಟಿಸಿದೆ. ಆದರೆ ಭಾರತ ಅದಕ್ಕಿಂತಲೂ ಕಡಿಮೆ ದರದಲ್ಲಿ ತೈಲವನ್ನು ಪೊರೈಸುವಂತೆ ಚೌಕಾಶಿ ಮಾಡುತ್ತಿದೆ.
ಒಪೆಕ್ ರಾಷ್ಟ್ರಗಳು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖರೀದಿಗೆ ವಿರೋಧವಿದ್ದರೂ ನಾವು ನಿಮ್ಮ ಜೊತೆ ತೈಲ ಖರೀದಿಸುತ್ತಿದ್ದೇವೆ. ಹೀಗಾಗಿ ದರವನ್ನು ಮತ್ತಷ್ಟು ಇಳಿಸಿ ಎಂದು ರಷ್ಯಾದ ತೈಲ ಕಂಪನಿಗಳ ಜೊತೆ ಭಾರತ ಚೌಕಾಶಿ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 24 ರಂದು ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಸಾರಿದ ಬಳಿಕ ಭಾರತದ ಕಂಪನಿಗಳು ರಷ್ಯಾದಿಂದ ರಿಯಾಯಿತಿ ದರದಲ್ಲಿ 40 ದಶಲಕ್ಷ ಬ್ಯಾರೆಲ್ ಕಚ್ಚಾ ತೈಲವನ್ನು ಖರೀದಿ ಮಾಡಿದೆ.
ಕಳೆದ ವಾರ ಭಾರತದ ತೈಲ ಮತ್ತು ನೈಸರ್ಗಿಕ ಅನಿಲ ಕಾರ್ಪೊರೇಶನ್(ಒನ್ಜಿಸಿ) ವಿಮೆ ಮತ್ತು ಇತರ ಸಮಸ್ಯೆಗಳಿಂದ 7 ಲಕ್ಷ ಬ್ಯಾರೆಲ್ ತೈಲವನ್ನು ರಷ್ಯಾದ ಪೂರ್ವ ಬಂದರಿನಿಂದ ಭಾರತಕ್ಕೆ ಸಾಗಿಸಲು ಬಹಳ ಶ್ರಮಪಟ್ಟಿತ್ತು ಎಂದು ವರದಿಯಾಗಿದೆ.
ಮಾಸ್ಕೋ: ಪ್ರಮುಖ ಜಾಗತಿಕ ವ್ಯಾಪಾರ ಸಂಸ್ಥೆಗಳು ಮೇ 15ರಿಂದ ರಷ್ಯಾದ ರಾಜ್ಯ ನಿಯಂತ್ರಿತ ತೈಲ ಕಂಪನಿಗಳಿಂದ ಕಚ್ಚಾತೈಲ ಖರೀದಿಯನ್ನು ಕಡಿತಗೊಳಿಸಲು ನಿರ್ಧರಿಸಿವೆ ಎಂದು ಮೂಲಗಳು ತಿಳಿಸಿವೆ.
ಉಕ್ರೇನ್ ಮೇಲಿನ ಆಕ್ರಮಣದ ನಂತರವೂ ಯೂರೋಪ್ ಒಕ್ಕೂಟಗಳು ರಷ್ಯಾದ ತೈಲ ಆಮದಿನ ಮೇಲೆ ನಿರ್ಬಂಧ ವಿಧಿಸಿಲ್ಲ. ಏಕೆಂದರೆ ಜರ್ಮನಿಯಂತಹ ಕೆಲ ದೇಶಗಳೂ ರಷ್ಯಾದ ತೈಲ ಆಮದಿನ ಮೇಲೆಯೇ ಅವಲಂಬಿತವಾಗಿವೆ. ಪರ್ಯಾಯ ಮಾರ್ಗ ಕಂಡುಕೊಳ್ಳಲು ಮೂಲ ಸೌಕರ್ಯ ಹೊಂದಿಲ್ಲದೇ ಇರುವುದು ಬಿಕ್ಕಟ್ಟಿಗೆ ಕಾರಣವಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಪತ್ರಿಕಾ ಅಂಕಣದಿಂದಾಗಿ ಟ್ವಿಟ್ಟರ್ ಕಂಪನಿ ಖರೀದಿಗೆ ಮುಂದಾದ್ರಾ ಮಸ್ಕ್?
ಆದಾಗ್ಯೂ, ತೈಲ ಮಾರಾಟ ಕಂಪನಿಗಳು ರಷ್ಯಾದ ಎನರ್ಜಿ ಗ್ರೂಪ್ ರಾಸ್ನೆಫ್ಟ್ನಿಂದ ಖರೀದಿಗಳನ್ನು ಸ್ಥಗಿತಗೊಳಿಸುತ್ತಿವೆ. ಏಕೆಂದರೆ ಅವರು ಅಂತಾರಾಷ್ಟ್ರೀಯ ಹಣಕಾಸು ವ್ಯವಸ್ಥೆಗೆ ರಷ್ಯಾದ ಪ್ರವೇಶವನ್ನು ಮಿತಿಗೊಳಿಸುವ ಉದ್ದೇಶದಿಂದ ಕಡಿತಗೊಳಿಸಲಾಗುತ್ತಿದೆ. ಅದಕ್ಕಾಗಿ ಯೂರೋಪ್ನ ಇಂಧನ ಭದ್ರತೆಗಳನ್ನು ಖಚಿತಪಡಿಸಿಕೊಳ್ಳಲು ನಿರ್ಧರಿಸಿವೆ.
ಯೂರೋಪ್ ಒಕ್ಕೂಟಗಳೂ ಮೇ 15ರಿಂದ ಕೆಲವು ನಿರ್ಬಂಧಗಳನ್ನು ಅನುಸರಿಸಲಿದ್ದು, ತೈಲ ಆಮದನ್ನು ಖಡಿತಗೊಳಿಸಲಿವೆ. ಜೊತೆಗೆ ರಷ್ಯಾದ ಪ್ರಮುಖ ತೈಲ ಖರೀದಿದಾರರಾದ ಟ್ರಾಫಿಗುರಾ ರಾಯಿಟರ್ಸ್ ಸಹ ಎಲ್ಲ ನಿರ್ಬಂಧಗಳನ್ನು ಸಂಪೂರ್ಣವಾಗಿ ಅನುಸರಿಸುತ್ತದೆ. ಹಾಗಾಗಿ ವಹಿವಾಟನ್ನು ಮೇ 15 ರಿಂದ ಇನ್ನಷ್ಟು ಕಡಿತಗೊಳಿಸಲಾಗುವುದು ಎನ್ನಲಾಗಿದೆ. ಇದನ್ನೂ ಓದಿ: ಒಂದೇ ಬಾರಿಗೆ 32 ಜನರಿಗೆ ವಾಯ್ಸ್ ಕಾಲ್ – ಹೀಗಿವೆ ವಾಟ್ಸಪ್ನ 4 ಹೊಸ ಫೀಚರ್ಸ್
ಏಪ್ರಿಲ್ನಲ್ಲಿ ರಷ್ಯಾದ ರೋಸ್ನೆಫ್ಟ್ ಮತ್ತು ಗಾಜ್ಪ್ರೊಮ್ನೆಫ್ಟ್ನ ಪಶ್ಚಿಮ ಬಂದರುಗಳಿಂದ ಕಚ್ಚಾ ತೈಲ ರಫ್ತು ಶೇ.40 ರಷ್ಟು ಹೆಚ್ಚಾಗಲಿದೆ. ಹಾಗಾಗಿ, ನಿರ್ಬಂಧಗಳನ್ನು ವಿಧಿಸುವ ಮೂಲಕ ಆಮದು ಕಡಿತಗೊಳಿಸಲಾಗುತ್ತದೆ ಎಂದು ಇಂಟರ್ನ್ಯಾಷನಲ್ ಎನರ್ಜಿ ಸಂಸ್ಥೆಯೊಂದು ಹೇಳಿದೆ.
ವಾಷಿಂಗ್ಟನ್: ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ರಷ್ಯಾದಿಂದ ಭಾರತ ತೈಲವನ್ನು ಖರೀದಿಸುತ್ತಿರುವ ಕುರಿತು ಪ್ರಶ್ನಿಸಿದ ವಿದೇಶಿ ಪತ್ರಕರ್ತೆಗೆ ಭಾರತ ವಿದೇಶಾಂಗ ಸಚಿವ ಜೈಶಂಕರ್ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಭಾರತ ಮತ್ತು ಅಮೆರಿಕ ನಡುವೆ ನಡೆದ 2+2 ಸಭೆಯಲ್ಲಿ ಮಾತನಾಡಿದ ಅವರು, ನೀವು ತೈಲ ಖರೀದಿಯನ್ನು ಉಲ್ಲೇಖಿಸುವುದನ್ನು ನಾನು ಗಮನಿಸಿದ್ದೇನೆ. ರಷ್ಯಾದಿಂದ ಇಂಧನ ಖರೀದಿಗೆ ಸಂಬಂಧಿಸಿದಂತೆ ನಿಮ್ಮ ಗಮನವನ್ನು ಯುರೋಪ್ ಕಡೆಗೆ ಕೇಂದ್ರೀಕರಿಸಬೇಕೆಂದು ನಾನು ಸಲಹೆ ನೀಡುತ್ತೇನೆ. ಬಹುಶಃ ನಾವು ಅಗತ್ಯವಿರುವಷ್ಟನ್ನು ಮಾತ್ರ ಖರೀದಿಸುತ್ತೇವೆ. ಆದರೆ ಅಂಕಿಅಂಶಗಳನ್ನು ನೋಡುವಾಗ, ಬಹುಶಃ ತಿಂಗಳಿಗೆ ನಮ್ಮ ಒಟ್ಟು ಖರೀದಿಯು ಯುರೋಪ್ನ ಅರ್ಧ ದಿನಕ್ಕಿಂತಲೂ ಕಡಿಮೆಯಿರಬಹುದು. ಆದ್ದರಿಂದ ನೀವು ಅದರ ಬಗ್ಗೆ ಯೋಚಿಸಬೇಕಿದೆ ಎಂದು ತಿರುಗೇಟು ನೀಡಿದ್ದಾರೆ.
ರಷ್ಯಾವನ್ನು ಭಾರತ ಯಾಕೆ ಖಂಡಿಸುವುದಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಶಂಕರ್, ನಾವು ಯುಎನ್ನಲ್ಲಿ, ನಮ್ಮ ಸಂಸತ್ತಿನಲ್ಲಿ ಮತ್ತು ಇತರ ವೇದಿಕೆಗಳಲ್ಲಿ ನಮ್ಮ ನಿಲುವನ್ನು ತಿಳಿಸಿದ್ದೇವೆ. ನಾವು ಸಂಘರ್ಷಕ್ಕೆ ವಿರುದ್ಧವಾಗಿದ್ದೇವೆ. ಮಾತುಕತೆ ಮತ್ತು ರಾಜತಾಂತ್ರಿಕ ಮಾರ್ಗಗಳ ಮೂಲಕ ಭಿನ್ನಾಭಿಪ್ರಾಯವನ್ನು (ರಷ್ಯಾ-ಉಕ್ರೇನ್) ಬಗೆಹರಿಸಿಕೊಳ್ಳಬೇಕು ಎಂದು ಈಗಾಗಲೇ ತಿಳಿಸಿದ್ದೇವೆ. ಆ ನಿಟ್ಟಿನಲ್ಲಿ ನಡೆಯುವುದಾದರೆ ಸೂಕ್ತ ಸಹಕಾರ ನೀಡಲು ಬದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ತಿರುಪತಿ ದೇಗುಲದಲ್ಲಿ ಕಾಲ್ತುಳಿತ – ವೆಂಕಟೇಶ್ವರನ ದರ್ಶನಕ್ಕೆ ಭಕ್ತಾದಿಗಳ ನೂಕುನುಗ್ಗಲು
ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಜೆ ಬ್ಲಿಂಕೆನ್ ಮಾತನಾಡಿ, ಎಸ್-400 ಮಿಸೈಲ್ ಡಿಫೆನ್ಸ್ ಸಿಸ್ಟಮ್ ಖರೀದಿಸಲು ಕಾಟ್ಸಾ ಕಾನೂನಿನಡಿಯಲ್ಲಿ ಅಮೆರಿಕವು ತನ್ನ ಪ್ರಮುಖ ಪಾಲುದಾರರಲ್ಲಿ ಒಂದಾದ ಭಾರತದ ಮೇಲೆ ನಿರ್ಬಂಧಗಳನ್ನು ವಿಧಿಸಬೇಕೇ ಅಥವಾ ನಿರ್ಬಂಧವನ್ನು ಮನ್ನಾ ಮಾಡಬೇಕೇ ಎಂಬ ಬಗ್ಗೆ ಅಮೆರಿಕ ಯಾವುದೇ ನಿರ್ಣಯ ಮಾಡಿಲ್ಲ ಎಂದು ಹೇಳಿದ್ದಾರೆ.
ಭಾರತದಲ್ಲಿನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತು ಬ್ಲಿಂಕೆನ್ ಮಾತನಾಡಿ, ಮಾನವ ಹಕ್ಕುಗಳನ್ನು ರಕ್ಷಿಸುವಂತಹ ನಮ್ಮ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಾವು ಬದ್ಧರಾಗಿದ್ದೇವೆ. ನಾವು ಈ ಮೌಲ್ಯಗಳೊಂದಿಗೆ ನಮ್ಮ ಪಾಲುದಾರ ಭಾರತದೊಂದಿಗೆ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇವೆ. ಸರ್ಕಾರ, ಪೋಲೀಸ್ ಮತ್ತು ಜೈಲು ಅಧಿಕಾರಿಗಳಿಂದ ಮಾನವ ಹಕ್ಕುಗಳ ಉಲ್ಲಂಘನೆಯ ಹೆಚ್ಚಳ ಸೇರಿದಂತೆ ಭಾರತದಲ್ಲಿನ ಇತ್ತೀಚಿನ ಕೆಲವು ಬೆಳವಣಿಗೆಗಳನ್ನು ನಾವು ಮೇಲ್ವಿಚಾರಣೆ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಡುಗಡೆಯಾದ ಕೈದಿಗಳ ಶಿಕ್ಷಣ ಖರ್ಚನ್ನು ಭರಿಸುತ್ತಿದೆ ಇಂದೋರ್ ಜೈಲು
ನವದೆಹಲಿ: ಭಾರತದಲ್ಲಿ ಪ್ರತಿ ದಿನ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗುತ್ತಿದೆ. ಇದೇ ಸಂದರ್ಭದಲ್ಲಿ ರಿಯಾಯಿತಿ ದರದಲ್ಲಿ ಭಾರತಕ್ಕೆ ಕಚ್ಚಾ ತೈಲ ಪೂರೈಕೆ ಮಾಡಲು ರಷ್ಯಾ ಮುಂದಾಗಿದೆ.
ಉಕ್ರೇನ್ ಮೇಲಿನ ಆಕ್ರಮಣವನ್ನು ವಿರೋಧಿಸಿ ರಷ್ಯಾದ ಮೇಲೆ ಯುಎಸ್, ಯುಕೆ ಮತ್ತು ಯೂರೋಪ್ ಒಕ್ಕೂಟ ಹಲವಾರು ನಿರ್ಬಂಧಗಳನ್ನು ವಿಧಿಸಿವೆ. ಅಂತರರಾಷ್ಟ್ರೀಯ ಒತ್ತಡ ಮತ್ತು ನಿರ್ಬಂಧಗಳನ್ನು ಧಿಕ್ಕರಿಸುವ ಮತ್ತು ರಷ್ಯಾದ ಕಚ್ಚಾ ತೈಲವನ್ನು ಖರೀದಿಸುವ ಬೆರಳೆಣಿಕೆಯ ರಾಷ್ಟ್ರಗಳಲ್ಲಿ ಭಾರತವೂ ಸೇರಿದೆ.
ಫೆಬ್ರವರಿ ಅಂತ್ಯದಿಂದ ಕಚ್ಚಾ ತೈಲ ದರ 10 ಡಾಲರ್ಗಿಂತ ಹೆಚ್ಚಾಗಿದೆ. ಏಷ್ಯಾದಲ್ಲಿ ಎರಡನೇ ಅತಿದೊಡ್ಡ ತೈಲ ಆಮದುದಾರನಾಗಿರುವ ಭಾರತವು ಈ ವರ್ಷಕ್ಕೆ ಒಪ್ಪಂದ ಮಾಡಿಕೊಂಡಿರುವಂತೆ, 15 ಮಿಲಿಯನ್ ಬ್ಯಾರೆಲ್ಗಳನ್ನು ತೆಗೆದುಕೊಳ್ಳುತ್ತದೆ ಎಂದು ರಷ್ಯಾ ಖಚಿತಪಡಿಸಿಕೊಳ್ಳಲು ಬಯಸಿದೆ. ಈ ಸಂಬಂಧ ಎರಡೂ ರಾಷ್ಟ್ರಗಳು ಮಾತುಕತೆ ನಡೆಸಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕರಡಿವೇಷ ಹಾಕಿ ಓಡಾಡಿದ್ರೆ ತಿಂಗಳಿಗೆ 15 ಸಾವಿರ ವೇತನ: ಹೀಗೊಂದು ವಿಶಿಷ್ಟ ಉದ್ಯೋಗ
ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ರಿಯಾಯಿತಿ ದರದಲ್ಲಿ ರಷ್ಯಾದ ಕಚ್ಚಾ ತೈಲವನ್ನು ಭಾರತ ಖರೀದಿಸುವ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
ಉಕ್ರೇನ್ ಆಕ್ರಮಣಕ್ಕಾಗಿ ಪಾಶ್ಚಿಮಾತ್ಯ ದೇಶಗಳು ಮಾಸ್ಕೋ ಮೇಲೆ ಹೇರಿದ ನಿರ್ಬಂಧಗಳ ಮಧ್ಯೆ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ವ್ಯಾಪಾರಕ್ಕಾಗಿ ರೂಪಾಯಿ-ರೂಬಲ್ ಪಾವತಿ ವ್ಯವಸ್ಥೆಯನ್ನು ಸ್ಥಾಪಿಸುವ ಬಗ್ಗೆಯೂ ಲಾವ್ರೊವ್ ಚರ್ಚಿಸಲಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಆಂಬುಲೆನ್ಸ್ಗೆ ದಾರಿ ಕಲ್ಪಿಸಲು ತಮ್ಮ ಬೆಂಗಾವಲು ವಾಹನ ನಿಲ್ಲಿಸಿದ ಯೋಗಿ ಆದಿತ್ಯನಾಥ್
2021 ರಲ್ಲಿ ಕೇವಲ 12 ಮಿಲಿಯನ್ ಬ್ಯಾರೆಲ್ ರಷ್ಯಾದ ಕಚ್ಚಾ ತೈಲವನ್ನು ಭಾರತಕ್ಕೆ ತಲುಪಿಸಲಾಯಿತ್ತು. ಡಿಸೆಂಬರ್ನಿಂದ ದೇಶಕ್ಕೆ ಯಾವುದೇ ಸರಕು ವಿತರಣೆಯಾಗಿಲ್ಲ.
ಮಾಸ್ಕೋ: ಆರ್ಥಿಕ ನಿರ್ಬಂಧ ಹೇರಿದ ನ್ಯಾಟೋ ರಾಷ್ಟ್ರಗಳಿಗೆ ಈಗ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ತೈಲ ಶಾಕ್ ನೀಡಿದ್ದಾರೆ.
ಉಕ್ರೇನ್ ಮೇಲೆ ಸಮರ ಸಾರಿದ ಬಳಿಕ ಡಾಲರ್ ಮುಂದೆ ದಿನೇ ದಿನೇ ರಷ್ಯದ ಕರೆನ್ಸಿ ರುಬೆಲ್ ಮೌಲ್ಯ ಕಡಿಮೆಯಾಗುತ್ತಿದೆ. ಇದನ್ನು ಸರಿ ಮಾಡಲು ಪುಟಿನ್ ತನ್ನ ವಿರೋಧಿ ರಾಷ್ಟ್ರಗಳು ರುಬೆಲ್ ಮೂಲಕವೇ ತೈಲ ಖರೀದಿ ಮಾಡಬೇಕು ಎಂದು ಆದೇಶ ಪ್ರಕಟಿಸಿದ್ದಾರೆ. ಇದನ್ನೂ ಓದಿ: ರಷ್ಯಾ ಯುದ್ಧವನ್ನು 2ನೇ ಮಹಾಯುದ್ಧಕ್ಕೆ ಹೋಲಿಸಿದ ಝೆಲೆನ್ಸ್ಕಿ
ಉಕ್ರೇನ್ ಮೇಲೆ ಯುದ್ಧದಿಂದಾಗಿ ಹಲವು ದೇಶಗಳು ರಷ್ಯಾದ ಕಚ್ಚಾತೈಲದ ಮೇಲೆ ನಿರ್ಬಂಧ ಹೇರಿದೆ. ಯುರೋಪಿಯನ್ ಕಮಿಷನ್ ಸಹ ಈ ವರ್ಷ ರಷ್ಯಾದ ಅನಿಲದ ಮೇಲಿನ ಯುರೋಪಿಯನ್ ಅವಲಂಬನೆ 2/3 ರಷ್ಟು ಕಡಿತಗೊಳಿಸಲು ಯೋಜಿಸಿದ್ದು, 2030ರ ವೇಳೆಗೆ ರಷ್ಯಾದ ಮೇಲಿನ ಅವಲಂಬನೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ಚಿಂತನೆ ನಡೆಸಿವೆ. ಇದನ್ನೂ ಓದಿ: ವ್ಲಾಡಿಮಿರ್ ಪುಟಿನ್ ಎಷ್ಟು ಶ್ರೀಮಂತ? ರಷ್ಯಾ ನಾಯಕನ ಜೀವನ ಶೈಲಿ ಹೇಗಿದೆ ಗೊತ್ತಾ?
ಈ ನಡುವೆಯೂ ಹಲವು ಯುರೋಪಿಯನ್ ದೇಶಗಳು ರಷ್ಯಾದ ತೈಲದ ಮೇಲೆ ಅವಲಂಬಿತವಾಗಿದೆ. ಜರ್ಮನಿಯ ಅನೇಕ ಕಂಪನಿಗಳು ರಷ್ಯಾದದಿಂದ ಭಾರೀ ಪ್ರಮಾಣದಲ್ಲಿ ತೈಲವನ್ನು ಆಮದು ಮಾಡುತ್ತಿವೆ. ಹೀಗಾಗಿ ಈಗ ತನ್ನ ವಿರುದ್ಧ ನಿರ್ಬಂಧ ಹೇರಿದ್ದಕ್ಕೆ ಪ್ರತಿಯಾಗಿ ರಷ್ಯಾ ತನ್ನ ಸ್ನೇಹಿಯಲ್ಲದ ರಾಷ್ಟ್ರಗಳು ರುಬೆಲ್ ಮೂಲಕವೇ ತೈಲ ಖರೀದಿಸಬೇಕಿದೆ ಎಂಬ ಷರತ್ತನ್ನು ವಿಧಿಸಿದೆ.
ಯುರೋಪಿಯನ್ ದೇಶಗಳ ಬಳಕೆಯ ಒಟ್ಟು ಅನಿಲಯದಲ್ಲಿ ಶೇ.40 ರಷ್ಟು ಅನಿಲವನ್ನು ರಷ್ಯಾ ಒಳಗೊಂಡಿದೆ. ಈಗಾಗಲೇ ಜಾಗತಿಕ ಮಟ್ಟದಲ್ಲಿ ಬ್ಯಾರಲ್ಗೆ 100 ಡಾಲರ್ (ಸುಮಾರು 7,594.67 ರೂ.) ಇದ್ದ ಕಚ್ಚಾತೈಲ 140 ಡಾಲರ್ಗೆ (ಸುಮಾರು 10,632.53 ರೂ.) ತಲುಪಿದೆ. ಅಲ್ಲದೆ, ಕೆಲವು ಯುರೋಪಿಯನ್ ದೇಶಗಳು ಅನಿಲ ಬೆಲೆಯನ್ನು ಬುಧವಾರ ಶೇ.30ರಚ್ಚು ಹೆಚ್ಚಿಸಿದೆ. ಇದು ಗರಿಷ್ಠ ಮಟ್ಟದ ಏರಿಕೆಯಾಗಿದೆ ಎಂದು ತೈಲ ಕಂಪನಿಗಳು ಅಂದಾಜಿಸಿವೆ. ಹಾಗಾಗಿ ಎದುರಾಳಿ ದೇಶಗಳನ್ನು ಬಗ್ಗು ಬಡಿಯಲು ಪುಟಿನ್ ಷರತ್ತನ್ನು ವಿಧಿಸಿದ್ದಾರೆ.
ವಿರೋಧಿ ರಾಷ್ಟ್ರಗಳು ರಷ್ಯಾ ದೇಶಗಳಿಂದ ಅನಿಲ ಖರೀದಿಯನ್ನು ರುಬೆಲ್ ಮೂಲಕವೇ ಖರೀದಿಸಬೇಕು. ನಮ್ಮ ಅನಿಲ ಬೇಕಾದರೆ, ನಮ್ಮ ದೇಶದ ಕರೆನ್ಸಿಯಲ್ಲೇ ವಹಿವಾಟು ನಡೆಸಬೇಕು. ರಷ್ಯಾವು ಹಿಂದೆ ತೀರ್ಮಾನಿಸಿದ ಒಪ್ಪಂದಗಳಂತೆ ನಿಗದಿತ ಬೆಲೆಗಳಿಗೆ ಅನುಗುಣವಾಗಿ ಕಚ್ಚಾತೈಲ ಪೂರೈಕೆ ಮಾಡುವುದನ್ನು ಮುಂದುವರಿಸುತ್ತದೆ. ಆದರೆ, ನಮ್ಮ ಕರೆನ್ಸಿಯಲ್ಲೇ ಅವರು ವ್ಯವಹರಿಸಬೇಕು ಎಂದು ಪುಟಿನ್ ಷರತ್ತು ವಿಧಿಸಿದ್ದಾರೆ.
ಯುದ್ಧ ಆರಭದ ಬಳಿಕ ಒಂದು ಡಾಲರ್ ರುಬೆಲ್ ಮೌಲ್ಯ 100ರ ಗಡಿ ದಾಟಿತ್ತು. ಪುಟಿನ್ ನಿರ್ಧಾರದ ಬಳಿಕ ರುಬೆಲ್ ಬಲವಾಗಿದ್ದು ಒಂದು ಡಾಲರ್ ರುಬೆಲ್ ಮೌಲ್ಯ 98 ವಿನಿಮಯವಾಗುತ್ತಿದೆ.