Tag: Crypto Currency

  • ಬೆಂಗ್ಳೂರಿನ ಪ್ರತಿಷ್ಠಿತ ಕಂಪನಿಯ ಸರ್ವರ್ ಹ್ಯಾಕ್ – 378 ಕೋಟಿ ಕ್ರಿಪ್ಟೋ ಕರೆನ್ಸಿ ಕಳ್ಳತನ

    ಬೆಂಗ್ಳೂರಿನ ಪ್ರತಿಷ್ಠಿತ ಕಂಪನಿಯ ಸರ್ವರ್ ಹ್ಯಾಕ್ – 378 ಕೋಟಿ ಕ್ರಿಪ್ಟೋ ಕರೆನ್ಸಿ ಕಳ್ಳತನ

    ಬೆಂಗಳೂರು: ಖಾಸಗಿ ಕಂಪನಿಯೊಂದರ ಸರ್ವರ್ ಹ್ಯಾಕ್ ಮಾಡಿ 3.78 ಕೋಟಿ ರೂ. ಹೆಚ್ಚಿನ ಹಣವನ್ನ ಸೈಬರ್ ಕಳ್ಳತನ ಮಾಡಿರುವ ಘಟನೆ ವೈಟ್‌ಫೀಲ್ಡ್‌ನಲ್ಲಿ (Whitw Field) ನಡೆದಿದೆ.

    ಅದೇ ಕಂಪನಿಯ ನೌಕರ ರಾಹುಲ್ ಬಂಧಿತ ಆರೋಪಿ. ಈ ಕಂಪನಿ ಕ್ರಿಪ್ಟೋ ಕರೆನ್ಸಿಯನ್ನು ಎಕ್ಸ್ಚೇಂಜ್ ಮಾಡುವ ಫ್ಲಾಟ್‌ಫಾರಂ ಆಗಿದೆ.ಇದನ್ನೂ ಓದಿ: Uttar Pradesh | ಕಾಲೇಜಿಗೆ ಬಂದಿದ್ದ ವಿದ್ಯಾರ್ಥಿನಿಯ ಕಿಡ್ನ್ಯಾಪ್ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

    ಪೊಲೀಸರ ಮಾಹಿತಿ ಪ್ರಕಾರ, ಇಂದು (ಜು.30) ಬೆಳಗಿನ ಜಾವ 2:37ರ ಸುಮಾರಿಗೆ ಕಂಪನಿಯ ವ್ಯಾಲೆಟ್‌ನಿಂದ ಇನ್ನೊಂದು ವ್ಯಾಲೆಟ್‌ಗೆ 1 USDT  ವರ್ಗಾವಣೆಯಾಗಿದೆ. ನಂತರ 9:40ರ ಸುಮಾರಿಗೆ ಮತ್ತೆ ಸರ್ವರ್‌ಗೆ ಎಂಟ್ರಿಯಾಗಿ 44 ಮಿಲಿಯನ್ USDT (ಅಂದರೆ ಬರೋಬ್ಬರಿ 378 ಕೋಟಿ ರೂ.) ವರ್ಗಾವಣೆಯಾಗಿದೆ.

    ಬಳಿಕ ಪೊಲೀಸರು ಆಂತರಿಕ ತನಿಖೆ ನಡೆಸಿದಾಗ, ಬಂಧಿತ ಆರೋಪಿಯು ತನ್ನ ಕಂಪನಿ ನೀಡಿದ ಲ್ಯಾಪ್‌ಟಾಪ್‌ನಲ್ಲಿ ಪಾರ್ಟ್ಟೈಮ್ ಕೆಲಸ ಮಾಡಿ 15 ಲಕ್ಷ ರೂ. ಹಣ ಪಡೆದಿರುವುದಾಗಿ ಬೆಳಕಿಗೆ ಬಂದಿದೆ. ಆತ ಕಂಪನಿಯ ಲ್ಯಾಪ್‌ಟಾಪ್ ಬಳಸಿ ಕೆಲಸ ಮಾಡುವ ವೇಳೆ ಹ್ಯಾಕ್ ಮಾಡಲಾಗಿದೆ. ಜೊತೆಗೆ ಆತನ ಲ್ಯಾಪ್ ಟಾಪ್ ಹ್ಯಾಕ್ ಮಾಡಿ ಸರ್ವರ್‌ಗೆ ಎಂಟ್ರಿಯಾಗಿದ್ದಾರೆ. ಬಳಿಕ ಒಟ್ಟು 44 ಮಿಲಿಯನ್ ಡಾಲರ್ ವಂಚನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

    ಭಾರತದಲ್ಲೇ ಪ್ರತಿಷ್ಠಿತ ಕ್ರಿಪ್ಟೋ ಕರೆನ್ಸಿ ಕಂಪನಿಯಾಗಿರುವ ನೆಬಿಲೊ ಟೆಕ್ನಾಲಜೀಸ್ ಸದ್ಯ ಈ ಸಂಬಂಧ ವೈಟ್‌ಫೀಲ್ಡ್ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕರ್ನಾಟಕದಲ್ಲಿ ನಡೆದಿರುವ ಅತಿದೊಡ್ಡ ಸೈಬರ್ ವಂಚನೆಯಾಗಿದ್ದು, ಪೊಲೀಸರು ಇತರ ಆರೋಪಿಗಳಿಗಾಗಿ ಹುಡುಕಾಟ ನಡೆಸ್ತಿದ್ದಾರೆ.ಇದನ್ನೂ ಓದಿ: ನಾರಾಯಣಪುರ ಜಲಾಶಯದಿಂದ 1.45 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ – ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ

  • ಕ್ರಿಪ್ಟೋ ಕರೆನ್ಸಿ ಹಗರಣ – ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

    ಕ್ರಿಪ್ಟೋ ಕರೆನ್ಸಿ ಹಗರಣ – ಬೆಂಗಳೂರು ಸೇರಿ ದೇಶದ 60 ಕಡೆ ಸಿಬಿಐ ದಾಳಿ

    ನವದೆಹಲಿ/ಬೆಂಗಳೂರು: ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು (Bengaluru) ಸೇರಿ ದೇಶದ 60 ಕಡೆ ಸಿಬಿಐ (CBI) ದಾಳಿ ನಡೆಸಿದೆ.

    ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್‌ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿದಂತೆ ಹಲವೆಡೆ ಸಿಬಿಐ ದಾಳಿ ನಡೆಸಿ ಶೋಧಕಾರ್ಯ ಮುಂದುವರಿಸಿದೆ. ಪ್ರಮುಖ ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಇದನ್ನೂ ಓದಿ:  ಕಲಬುರಗಿ | ಲಾಡ್ಲೇ ಮಶಾಕ್ ದರ್ಗಾದ ಶಿವಲಿಂಗ ಪೂಜೆಗೆ ಹಿಂದೂ ಕಾರ್ಯಕರ್ತರಿಂದ ಸಿದ್ಧತೆ

    ಬಿಟ್ ಕಾಯಿನ್, ಕ್ರಿಪ್ಟೋ ಕರೆನ್ಸಿ ಹಗರಣ ಸಂಬಂಧ ಹಲವೆಡೆ ಎಫ್‌ಐಆರ್ ದಾಖಲಾಗಿತ್ತು. ದೇಶದ ಹಲವು ರಾಜ್ಯಗಳಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿತ್ತು. ದೊಡ್ಡ ಮಟ್ಟದ ವಂಚನೆ ಹಾಗೂ ಮನಿ ಲಾಂಡರಿಂಗ್ ಹಿನ್ನೆಲೆ ಹಗರಣ ಸಂಬಂಧ ಸಿಬಿಐ ತನಿಖೆ ಕೈಗೊಂಡಿತ್ತು. ಈ ಸಂಬಂಧ ಮಂಗಳವಾರ ಬೆಂಗಳೂರು ಸೇರಿ 60 ಕಡೆಗಳಲ್ಲಿ ದಾಳಿ ನಡೆಸಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಮಹಾ ಶಿವರಾತ್ರಿ ಸಂಭ್ರಮ – ಮಧ್ಯರಾತ್ರಿಯಿಂದಲೇ ಸಾಲುಗಟ್ಟಿ ನಿಂತ ಶಿವಭಕ್ತರು

    ದಾಳಿ ವೇಳೆ ಕ್ರಿಪ್ಟೋ ವ್ಯಾಲೆಟ್‌ಗಳು, ಡಿಜಿಟಲ್ ಸಾಕ್ಷ್ಯಗಳು, ಡಿಜಿಟಲ್ ಸಾಧನಗಳು ಪತ್ತೆಯಾಗಿವೆ. ಇಮೇಲ್ ಮತ್ತು ಕ್ಲೌಡ್‌ನಲ್ಲಿದ್ದ ಸಾಕ್ಷ್ಯಗಳನ್ನು ಸಿಬಿಐ ವಶಕ್ಕೆ ಪಡೆದುಕೊಂಡಿದೆ. ಪ್ರಕರಣದ ಕುರಿತು ಸಿಬಿಐ ತನಿಖೆ ಮುಂದುವರಿಸಿದೆ. ಇದನ್ನೂ ಓದಿ: ಭಾರತಕ್ಕೆ ಪ್ರವೇಶಿಸುವ ವಿದೇಶಿಯರಿಗೆ ಹೊಸ ಕಾನೂನು – ಕಠಿಣ ವಲಸೆ ನಿಯಮದಲ್ಲಿ ಏನಿರಲಿದೆ? 

  • ಕಾನೂನು ಬದ್ಧವಾಗಿ ಬಿಟ್ ಕಾಯಿನ್ ಸ್ವೀಕರಿಸುವ ಯಾವುದೇ ಯೋಜನೆ ಸರ್ಕಾರದ‌ ಮುಂದಿಲ್ಲ – ನಿರ್ಮಲಾ

    ಕಾನೂನು ಬದ್ಧವಾಗಿ ಬಿಟ್ ಕಾಯಿನ್ ಸ್ವೀಕರಿಸುವ ಯಾವುದೇ ಯೋಜನೆ ಸರ್ಕಾರದ‌ ಮುಂದಿಲ್ಲ – ನಿರ್ಮಲಾ

    ನವದೆಹಲಿ : ದೇಶದಲ್ಲಿ ಕಾನೂನು ಬದ್ಧವಾಗಿ ಬಿಟ್ ಕಾಯಿನ್ ಸ್ವೀಕರಿಸುವ ಯಾವುದೇ ಯೋಜನೆ ಸರ್ಕಾರದ‌ ಮುಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಸಂಸತ್ ಅಧಿವೇಶನ ವೇಳೆ ಸುಮಲತಾ, ಡಿಕೆ ಸುರೇಶ್‌ ಕೇಳಿದ ಪ್ರಶ್ನೆಯೊಂದಕ್ಕೆ ಅವರು ಲಿಖಿತ ರೂಪದಲ್ಲಿ ಉತ್ತರ ನೀಡಿದ್ದಾರೆ.

    ಭಾರತದಲ್ಲಿ ಸದ್ದಿಲ್ಲದೇ ಬಿಟ್ ಕಾಯಿನ್ ವ್ಯಾಪ್ತಿ ಹೆಚ್ಚುತ್ತಿದೆ, ಈ ಬಗ್ಗೆ ಸರ್ಕಾರಕ್ಕೆ ಮಾಹಿತಿ ಇದೆಯೇ ಎಂದು ಪ್ರಶ್ನೆ ಕೇಳಲಾಗಿತ್ತು. ‌ಇದಕ್ಕೆ ಉತ್ತರ ನೀಡಿರುವ ಅವರು, ಭಾರತದಲ್ಲಿ ಬಿಟ್‌ಕಾಯಿನ್ ವಹಿವಾಟಿನ ಬಗ್ಗೆ ಕೇಂದ್ರವು ಯಾವುದೇ ಡೇಟಾವನ್ನು ಸಂಗ್ರಹಿಸುವುದಿಲ್ಲ ಎಂದು ಹೇಳಿದ್ದಾರೆ‌.

    ಕೆಲವು ಮಾಹಿತಿಗಳ ಪ್ರಕಾರ, ವಿಶ್ವದಲ್ಲಿ ಅತಿ ಹೆಚ್ಚು ಮಂದಿ ಕ್ರಿಪ್ಟೋ ಕರೆನ್ಸಿ ಹೂಡಿಕೆದಾರರು ಭಾರತದಲ್ಲಿದ್ದಾರೆ ಈ ಸಂಖ್ಯೆ 10 ಕೋಟಿಗೂ ಅಧಿಕವಾಗಿದೆ. ಭಾರತದ ಬಳಿಕ ಅಮೆರಿಕದಲ್ಲಿ ಅತಿ ಹೆಚ್ಚು ಮಂದಿ ಹೂಡಿಕೆ ಮಾಡಿದ್ದು ಈ ಸಂಖ್ಯೆ 2.74 ಕೋಟಿಯಾಗಿದೆ. ರಷ್ಯಾ 1.74 ಕೋಟಿ ಮತ್ತು ನೈಜೀರಿಯಾ 1.30 ಕೋಟಿಯೊಂದಿಗೆ ಮೂರು ಮತ್ತು ನಾಲ್ಕನೇ ಸ್ಥಾನದಲ್ಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

    ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ‘ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿಯ ನಿಯಂತ್ರಣ ಮಸೂದೆ, 2021’ ಅನ್ನು ಪರಿಚಯಿಸಲು ಸಿದ್ಧವಾಗಿದೆ. ಕೆಲವು ವಿನಾಯಿತಿಗಳನ್ನು ಹೊರತುಪಡಿಸಿ, ದೇಶದಲ್ಲಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಯನ್ನು ನಿಷೇಧಿಸಲು ಮಸೂದೆ ಪ್ರಯತ್ನಿಸಿದೆ. ಮಸೂದೆಯು ಭಾರತದಲ್ಲಿನ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ನಿಷೇಧಿಸಲು ಪ್ರಯತ್ನಿಸುತ್ತದೆ. ಆದಾಗ್ಯೂ, ಕ್ರಿಪ್ಟೋಕರೆನ್ಸಿಯ ಆಧಾರವಾಗಿರುವ ತಂತ್ರಜ್ಞಾನ ಮತ್ತು ಅದರ ಬಳಕೆಗಳನ್ನು ಉತ್ತೇಜಿಸಲು ಕೆಲವು ವಿನಾಯಿತಿಗಳನ್ನು ಇದು ಅನುಮತಿಸುತ್ತದೆ ಎಂದು ಲೋಕಸಭೆಯ ವೆಬ್‌ಸೈಟ್‌ನಲ್ಲಿನ ಬುಲೆಟಿನ್ ಉಲ್ಲೇಖಿಸಿದೆ. ಇದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನೀಡಲಾಗುವ ಅಧಿಕೃತ ಡಿಜಿಟಲ್ ಕರೆನ್ಸಿಯ ರಚನೆಗೆ ಅನುಕೂಲಕರ ಚೌಕಟ್ಟನ್ನು ರಚಿಸಲು ಪ್ರಯತ್ನಿಸಿದೆ. ಇದನ್ನೂ ಓದಿ: ಮಹಿಳಾ ಸಂಸದರೊಂದಿಗೆ ಸೆಲ್ಫಿ, ನೆಟ್ಟಿಗರಿಂದ ಕ್ಲಾಸ್‌- ತರೂರ್ ಕ್ಷಮೆಯಾಚನೆ

    2017 ರಲ್ಲಿ, ವರ್ಚುವಲ್ ಕರೆನ್ಸಿಗಳಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಆರ್ಥಿಕ ವ್ಯವಹಾರಗಳ ಇಲಾಖೆ(ಡಿಇಎ) ಕಾರ್ಯದರ್ಶಿ ಸುಭಾಷ್ ಗಾರ್ಗ್ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ಉನ್ನತ ಮಟ್ಟದ ಅಂತರ-ಸಚಿವಾಲಯ ಸಮಿತಿಯನ್ನು ಸ್ಥಾಪಿಸಿದೆ. ಸಮಿತಿಯು ಜುಲೈ 2019 ರಲ್ಲಿ ವಿವರವಾದ ವರದಿಯನ್ನು ಸಲ್ಲಿಸಿತು. ಭಾರತದಲ್ಲಿ ಕ್ರಿಪ್ಟೋಕರೆನ್ಸಿಗಳಿಗೆ ನಿಷೇಧವನ್ನು ಪ್ರಸ್ತಾಪಿಸಿತು. ಎಲ್ಲಾ ಕ್ರಿಪ್ಟೋಕರೆನ್ಸಿಗಳನ್ನು ಸಾರ್ವಭೌಮರಲ್ಲದವರು ರಚಿಸಿದ್ದಾರೆ ಮತ್ತು ಈ ಅರ್ಥದಲ್ಲಿ ಸಂಪೂರ್ಣವಾಗಿ ಖಾಸಗಿ ಉದ್ಯಮಗಳು ಎಂದು ಸಮಿತಿಯು ಶಿಫಾರಸು ಮಾಡಿದೆ. ಈ ಖಾಸಗಿ ಕ್ರಿಪ್ಟೋಕರೆನ್ಸಿಗಳು ಕರೆನ್ಸಿಯ ಎಲ್ಲಾ ಗುಣಲಕ್ಷಣಗಳನ್ನು ಹೊಂದಿರದ ಕಾರಣ ಅವುಗಳಿಗೆ ಯಾವುದೇ ಅಂತರ್ಗತ ಮೌಲ್ಯವಿಲ್ಲ. ಸಮಿತಿಯು “ರಾಜ್ಯದಿಂದ ನೀಡಲಾದ ಯಾವುದೇ ಕ್ರಿಪ್ಟೋಕರೆನ್ಸಿಯನ್ನು ಹೊರತುಪಡಿಸಿ ಎಲ್ಲಾ ಖಾಸಗಿ ಕ್ರಿಪ್ಟೋಕರೆನ್ಸಿಗಳನ್ನು ಭಾರತದಲ್ಲಿ ನಿಷೇಧಿಸಲಾಗಿದೆ” ಎಂದು ಸೂಚಿಸಿದೆ. ಇದನ್ನೂ ಓದಿ:  ಮಾರ್ಷಲ್‌ಗಳ ಮೇಲೆ ಹಲ್ಲೆ – ರಾಜ್ಯಸಭೆಯ 12 ಸದಸ್ಯರು ಅಮಾನತು

    ಈ ತಿಂಗಳ ಆರಂಭದಲ್ಲಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಆರ್‌ಬಿಐ, ಹಣಕಾಸು ಸಚಿವಾಲಯ ಮತ್ತು ಸೆಬಿಯ ಅಧಿಕಾರಿಗಳೊಂದಿಗೆ ಕ್ರಿಪ್ಟೋಕರೆನ್ಸಿಗಳ ಕುರಿತು ಉನ್ನತ ಮಟ್ಟದ ಸಭೆಯನ್ನು ನಡೆಸಿದ್ದರು. ಇದಕ್ಕೂ ಮುನ್ನ ಇತ್ತೀಚೆಗೆ ಸಿಡ್ನಿ ಸಂವಾದದಲ್ಲಿ, ಎಲ್ಲಾ ಪ್ರಜಾಸತ್ತಾತ್ಮಕ ರಾಷ್ಟ್ರಗಳು ಈ ಕ್ರಿಪ್ಟೋಕರೆನ್ಸಿ ಮೇಲೆ ಕೆಲಸ ಮಾಡುವುದು ಮುಖ್ಯ ಮತ್ತು ಅದು ನಮ್ಮ ಯುವಕರನ್ನು ಹಾಳು ಮಾಡಬಹುದು, ಇದು ತಪ್ಪು ಕೈಗಳಿಗೆ ಸಿಗದಂತೆ ನೋಡಿಕೊಳ್ಳುವುದು ಮುಖ್ಯ ಎಂದಿದ್ದರು.