Tag: CSK

  • ಮಾಸ್ಟರ್ ವಿಜಯ್‍ರೊಂದಿಗೆ ಕಾಣಿಸಿಕೊಂಡ ಬ್ಲಾಸ್ಟರ್ ಧೋನಿ

    ಮಾಸ್ಟರ್ ವಿಜಯ್‍ರೊಂದಿಗೆ ಕಾಣಿಸಿಕೊಂಡ ಬ್ಲಾಸ್ಟರ್ ಧೋನಿ

    ಚೆನ್ನೈ: ಭಾರತ ಕ್ರಿಕೆಟ್ ತಂಡ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ತಮಿಳು ಚಿತ್ರರಂಗದ ದಳಪತಿ ವಿಜಯ್ ಅವರನ್ನು ಭೇಟಿಯಾಗಿದ್ದಾರೆ. ಇದೀಗ ಇವರಿಬ್ಬರು ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿದೆ.

    ಧೋನಿ ಕ್ರಿಕೆಟ್ ಕಂಡ ದಿಗ್ಗಜ ಆಟಗಾರನಾದರೆ, ವಿಜಯ್ ತಮಿಳು ಚಿತ್ರರಂಗದ ದಿಗ್ಗಜ ನಟ. ಇವರಿಬ್ಬರು ಕೂಡ ಒಟ್ಟಿಗೆ ಕಾಣಿಸಿಕೊಂಡಿರುವ ಫೋಟೋವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಮಾಸ್ಟರ್ ಮತ್ತು ಬ್ಲಾಸ್ಟರ್ ಜೊತೆಗೆ ಎಂದು ಬರೆದುಕೊಂಡಿದೆ.

    2021ರ ಜನವರಿಯಲ್ಲಿ ವಿಜಯ್ ನಟನೆಯ ಮಾಸ್ಟರ್ ಸಿನಿಮಾ ತೆರೆಕಂಡು ಉತ್ತಮ ಪ್ರದರ್ಶನ ಕಂಡಿತ್ತು. ಧೋನಿ ಕ್ರಿಕೆಟ್‍ನಲ್ಲಿ ಹೊಡೆಯುವ ಆಕರ್ಷಕ ಹೊಡೆತಗಳಿಗಾಗಿ ಅವರ ಅಭಿಮಾನಿಗಳು ಬ್ಲಾಸ್ಟರ್ ಎಂದು ಪ್ರೀತಿಯಿಂದ ಕರೆದಿದ್ದಾರೆ. ಇದೀಗ ಇಬ್ಬರು ಕೂಡ ಒಟ್ಟಿಗೆ ಫೋಟೋಗೆ ಫೋಸ್ ನೀಡಿದ್ದಾರೆ.

     

    View this post on Instagram

     

    A post shared by Chennai Super Kings (@chennaiipl)

    ವಿಜಯ್ ‘ಬೀಸ್ಟ್’ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಆಕ್ಷ್ಯನ್ ಥ್ರಿಲ್ಲರ್ ಚಿತ್ರದ ಚಿತ್ರೀಕರಣ ಚಿನ್ನೈನ ಗೋಕುಲಂ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಈ ವೇಳೆ ಅದೇ ಸ್ಟುಡಿಯೋದಲ್ಲಿ ಧೋನಿ ಜಾಹೀರಾತು ಒಂದರ ಶೂಟಿಂಗ್‍ಗಾಗಿ ಹೋಗಿದ್ದರು. ಈ ವೇಳೆ ಇಬ್ಬರು ಪರಸ್ಪರ ಭೇಟಿ ಆಗಿದ್ದಾರೆ ಧೋನಿ, ವಿಜಯ್ ಜೊತೆ ಕೆಲಹೊತ್ತು ಕಾಲ ಕಳೆದು ಬಳಿಕ ತೆರಳಿದ್ದರು. ಈ ಸಂದರ್ಭ ತೆಗೆಸಿಕೊಂಡ ಫೋಟೋ ಇದೀಗ ಸಖತ್ ಸುದ್ದಿ ಮಾಡುತ್ತಿದ್ದು, ಈಗಾಗಲೇ 4 ಲಕ್ಷಕ್ಕೂ ಅಧಿಕ ಲೈಕ್ ಬಂದಿದೆ.

    ಐಪಿಎಲ್‍ನಲ್ಲಿ ಚೆನ್ನೈ ತಂಡದ ಪರ ಧೋನಿ ನಾಯಕನಾಗಿ ಆಡುತ್ತಿದ್ದಾರೆ. ಈ ಹಿಂದೆ 2008ರಲ್ಲಿ ಚೆನ್ನೈ ತಂಡದ ರಾಯಭಾರಿಯಾಗಿ ವಿಜಯ್ ಧೋನಿ ಜೊತೆಗೆ ಕಾಣಿಸಿಕೊಂಡಿದ್ದರು. ಆದಾದ ಬಳಿಕ ಇದೀಗ ಮತ್ತೊಮ್ಮೆ ಜೊತೆಯಾಗಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಂತಸ ಮೂಡಿಸಿದ್ದಾರೆ. ಇದನ್ನೂ ಓದಿ: ಐಪಿಎಲ್‍ಗೂ ಮುನ್ನ ಡ್ಯಾಶಿಂಗ್ ಲುಕ್‍ನಲ್ಲಿ ಕಾಣಿಸಿಕೊಂಡ ಧೋನಿ

    ಧೋನಿ ಸೆಪ್ಟೆಂಬರ್‍ ನಲ್ಲಿ ಯುಎಇಯಲ್ಲಿ ಆರಂಭವಾಗಲಿರುವ ಐಪಿಎಲ್‍ಗಾಗಿ ಸಿದ್ಧತೆಯಲ್ಲಿ ತೊಡಗಿಕೊಂಡಿದ್ದರೆ, ವಿಜಯ್ ಬೀಸ್ಟ್ ಸಿನಿಮಾದಲ್ಲಿ ಬ್ಯುಸಿ ಆಗಿದ್ದಾರೆ.

  • ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ಮೊದಲ ಪಂದ್ಯದಲ್ಲಿ ಚೆನ್ನೈ- ಮುಂಬೈ ಸೆಣಸಾಟ

    ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ಮೊದಲ ಪಂದ್ಯದಲ್ಲಿ ಚೆನ್ನೈ- ಮುಂಬೈ ಸೆಣಸಾಟ

    ಮುಂಬೈ: ಕೊರೊನಾದಿಂದಾಗಿ ಮುಂದೂಡಲ್ಪಟ್ಟ 2021ರ ಐಪಿಎಲ್ ಟೂರ್ನಿಯನ್ನು ಸೆಪ್ಟೆಂಬರ್‍ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ನಡೆಸಲು ಈಗಾಗಲೇ ಬಿಸಿಸಿಐ ನಿರ್ಧರಿಸಿದೆ. ಇದರಂತೆ ಇದೀಗ ಸೆಪ್ಟೆಂಬರ್ 19ರಂದು ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ ಸೆಣಸಾಡಲಿದೆ ಎಂದು ವರದಿಯಾಗಿದೆ.

    14ನೇ ಆವೃತ್ತಿಯ ಐಪಿಎಲ್‍ನ 29 ಪಂದ್ಯಗಳು ನಡೆದ ಬಳಿಕ ಕೆಲ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಮೇ 4ರಂದು ಐಪಿಎಲ್-2021 ಮುಂದೂಡಲಾಗಿತ್ತು. ಬಳಿಕ ಬಿಸಿಸಿಐ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಇನ್ನುಳಿದ 31 ಪಂದ್ಯಗಳನ್ನು ದುಬೈ, ಅಬುದಾಬಿ ಮತ್ತು ಶಾರ್ಜಾ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಿದೆ. ಈಗಿನ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್ 19ಕ್ಕೆ ಪ್ರಾರಂಭಗೊಂಡು ಅಕ್ಟೋಬರ್ 15ಕ್ಕೆ ಫೈನಲ್ ಪಂದ್ಯ ನಡೆಸಲು ಪ್ಲಾನ್ ಮಾಡಿಕೊಂಡಿದೆ. ಇದನ್ನೂ ಓದಿ: ಸೆಪ್ಟೆಂಬರ್‌ನಿಂದ ನಡೆಯಲಿವೆ ಮುಂದೂಡಲ್ಪಟ್ಟ ಐಪಿಎಲ್ ಪಂದ್ಯಗಳು- ಬಿಸಿಸಿಐ ಘೋಷಣೆ

    ಈಗಾಗಲೇ ಬಿಸಿಸಿಐ ಮೂಲಗಳು ತಿಳಿಸಿರುವ ಪ್ರಕಾರ ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ನ ಮೊದಲ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಸಾರಥ್ಯದ ಸಿಎಸ್‍ಕೆ ಮತ್ತು ರೋಹಿತ್ ಶರ್ಮಾ ಮುಂದಾಳತ್ವದ ಮುಂಬೈ ತಂಡಗಳು ಸೆಣಸಾಡಲಿದೆ ಎಂದು ವರದಿಯಾಗಿದೆ. ಈ ಸುದ್ದಿ ಹೊರ ಬರುತ್ತಿದ್ದಂತೆ ಕ್ರಿಕೆಟ್ ಪ್ರಿಯರು ಸಂತಸಗೊಂಡಿದ್ದಾರೆ.

  • ಸುದೀಪ್ ಸಿಡಿಪಿಯಲ್ಲಿ ರಾರಾಜಿಸುತ್ತಿದೆ ಮಾಹಿಯ ನಾನಾ ಅವತಾರ

    ಸುದೀಪ್ ಸಿಡಿಪಿಯಲ್ಲಿ ರಾರಾಜಿಸುತ್ತಿದೆ ಮಾಹಿಯ ನಾನಾ ಅವತಾರ

    ಬೆಂಗಳೂರು: ಭಾರತ ಕ್ರಿಕೆಟ್ ಕಂಡ ಅಪ್ರತಿಮ ನಾಯಕ ಕೂಲ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಜುಲೈ 7ರಂದು 40ನೇ ವಸಂತಕ್ಕೆ ಕಾಲಿಡಲಿದ್ದಾರೆ. ಮಾಹಿಯ ಜನ್ಮದಿನಕ್ಕಾಗಿ ಸ್ಯಾಂಡಲ್‍ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರು ಸಿಡಿಪಿ ಅನಾವರಣಗೊಳಿಸಿದ್ದಾರೆ.

    ಮಾಹಿಯ ಅಭಿಮಾನಿಯಾಗಿರುವ ಕಿಚ್ಚ, ಧೋನಿಯ ಹುಟ್ಟುಹಬ್ಬಕ್ಕಾಗಿ ವಿಶೇಷವಾಗಿ ಕಾಮನ್ ಡಿಸ್‍ಪ್ಲೇ ಪಿಕ್ಚರ್(ಸಿಡಿಪಿ)ಯನ್ನು ಬಿಡುಗಡೆ ಮಾಡಿದ್ದಾರೆ. ಈ ಪೋಸ್ಟರ್‍ನಲ್ಲಿ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಟೀಂ ಇಂಡಿಯಾದ ಜೆರ್ಸಿಯನ್ನು ಒಟ್ಟಿಗೆ ಧರಿಸಿರುವಂತೆ ಭಾಸವಾಗುತ್ತಿದ್ದಾರೆ. ಇದರ ಹಿಂದೆ ಮಾಹಿಯ ನಾನಾ ಅವತಾರದ ಫೋಟೋಗಳು ಕೂಡ ಕಂಗೊಳಿಸುತ್ತಿದೆ. ಇದನ್ನೂ ಓದಿ : ಧೋನಿ ಮಾಸ್ ಮೀಸೆಗೆ ಅಭಿಮಾನಿಗಳು ಫಿದಾ

    ಸ್ವತಃ ಕ್ರಿಕೆಟ್ ಆಟಗಾರನಾಗಿ ಕ್ರಿಕೆಟ್ ಪ್ರೇಮಿಯಾಗಿರುವ ಅಭಿನಯಚಕ್ರವರ್ತಿ, ಮಾಹಿಯ ಅಭಿಮಾನಿಯಾಗಿ ಅವರಿಗೆ ತುಂಬಾ ಗೌರವವನ್ನು ಕೊಡುತ್ತಾರೆ. ಈ ಸಿಡಿಪಿಯನ್ನು ಕಿಚ್ಚ ಟ್ವಿಟ್ಟರ್‍ ನಲ್ಲಿ ಪೋಸ್ಟ್ ಮಾಡಿ “ಅವರು ಎಲ್ಲರ ನಾಯಕ, ಎಲ್ಲರ ಅಚ್ಚುಮೆಚ್ಚಿನವರು, ಅವರು ಎಲ್ಲರ ಸ್ಟಾರ್ ಮತ್ತು ಎಲ್ಲರ ಸ್ಫೂರ್ತಿ ಅವರ ಸಿಡಿಪಿ ಬಿಡುಗಡೆ ಮಾಡುತ್ತಿವುರುದು ನನಗೆ ತುಂಬಾ ಸಂತೋಷ ನೀಡಿದೆ. ಹೆಮ್ಮೆ ಅನಿಸುತ್ತಿದೆ. ನಟನಾಗಿ ಅಲ್ಲದೆ, ನಾನೊಬ್ಬ ನಿಮ್ಮ ಅಭಿಮಾನಿಯಾಗಿ ನಿಮಗೆ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದೇನೆ ಸರ್ ಎಂದು ಬರೆದುಕೊಂಡಿದ್ದಾರೆ.

  • ಕುದುರೆ ಜೊತೆ ಧೋನಿ ರೇಸ್

    ಕುದುರೆ ಜೊತೆ ಧೋನಿ ರೇಸ್

    ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಪಿಚ್‍ನಲ್ಲಿ ವೇಗವಾಗಿ ಓಡಿ ರನ್ ಕದಿಯುವುದನ್ನು ನೋಡಿದ್ದೇವೆ. ಇದೀಗ ಧೋನಿ ಕುದುರೆ ಜೊತೆ ವೇಗವಾಗಿ ಓಡುವ ಮೂಲಕ ರೇಸ್‍ಗೆ ಇಳಿದಿದ್ದಾರೆ.

    ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಹೇಳಿದ ಬಳಿಕ ಐಪಿಎಲ್‍ನಲ್ಲಿ ಮಾತ್ರ ಆಡುತ್ತಿರುವ ಧೋನಿ, 14ನೇ ಆವೃತ್ತಿಯ ಐಪಿಎಲ್ ಕೊರೊನಾದಿಂದಾಗಿ ಮುಂದೂಡಲ್ಪಟ್ಟ ಮೇಲೆ ತಮ್ಮ ಫಾರ್ಮ್ ಹೌಸ್ ರಾಂಚಿಯಲ್ಲಿ ತಮ್ಮ ಕುಟುಂಬದ ಜೊತೆ ಕಾಲಕಳೆಯುತ್ತಿದ್ದಾರೆ. ಇದನ್ನೂ ಓದಿ: 2007ರ ಟಿ20ಗೆ ನಾನು ನಾಯಕನಾಗುವ ನಿರೀಕ್ಷೆ ಹೊಂದಿದ್ದೆ, ಆದರೆ ಧೋನಿ ಆಯ್ಕೆಯಾದ್ರು – ಯುವಿ

    ಧೋನಿ ರಾಂಚಿಯ ತಮ್ಮ ಫಾರ್ಮ್ ಹೌಸ್‍ನಲ್ಲಿ ಸುಮ್ಮನೆ ಕೂರದೆ ಒಂದಲ್ಲ ಒಂದು ಕೆಲಸದಲ್ಲಿ ತೊಡಗಿಕೊಂಡಿರುತ್ತಾರೆ. ಇದೀಗ ಧೋನಿ ಬಿಳಿ ವರ್ಣದ ಕುದುರೆಯೊಂದಿಗೆ ರೇಸ್‍ಗೆ ಇಳಿದಿದ್ದಾರೆ. ಈ ರೇಸ್‍ನ ವೀಡಿಯೋ ಒಂದನ್ನು ಪತ್ನಿ ಸಾಕ್ಷಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್‌ನಿಂದ ನಡೆಯಲಿವೆ ಮುಂದೂಡಲ್ಪಟ್ಟ ಐಪಿಎಲ್ ಪಂದ್ಯಗಳು- ಬಿಸಿಸಿಐ ಘೋಷಣೆ 

    ಕುದುರೆಯೊಂದಿಗೆ ವೇಗವಾಗಿ ಓಡುತ್ತಿರುವ ಧೋನಿಯನ್ನು ಕುದುರೆ ರೇಸ್‍ನಲ್ಲಿ ಸೋಲಿಸಿದೆ. ಆದರೆ ಧೋನಿ ಕ್ರಿಕೆಟ್‍ನಲ್ಲಿ ಮಾತ್ರ ರನ್ ಕದಿಯಲು ಕುದುರೆಯಂತೆ ವೇಗವಾಗಿ ಓಡಿ ಸಹ ಆಟಗಾರನ್ನು ಬೆವರಿಳಿಸಿದ್ದನ್ನು ನಾವು ಸಾಕಷ್ಟು ಬಾರಿ ನೋಡಿದ್ದೇವೆ. ಆದರೆ ಇಲ್ಲಿ ಮಾತ್ರ ಮಾಹಿಯನ್ನು ಕುದುರೆ ಬೆವರಿಳಿಸಿದೆ. ಕೆಳದಿನಗಳ ಹಿಂದೆ ಧೋನಿ ಚೇತಕ್ ಹಾಗೂ ಲಿಲ್ಲಿ ಎಂಬ ಹೆಸರಿನ ಎರಡು ಕುದುರೆಗಳನ್ನು ಖರೀದಿಸಿದ್ದರು. ಕುದುರೆಯೊಂದಿಗಿನ ಫೋಟೋವನ್ನು ಸಾಕ್ಷಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

     

    View this post on Instagram

     

    A post shared by Sakshi Singh Dhoni (@sakshisingh_r)

    ಮಾಹಿ 2020ರ ಆಗಸ್ಟ್‍ನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇದೀಗ ಕೊರೊನಾದಿಂದಾಗಿ ಮುಂದೂಡಲ್ಪಟ್ಟಿರುವ ಐಪಿಎಲ್ ಮುಂದಿನ ಪಂದ್ಯಾಟಗಳು ದುಬೈನಲ್ಲಿ ಸೆಪ್ಟೆಂಬರ್ ಮತ್ತು ಅಕ್ಟೋಬರ್‍ನಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿದ್ದು ಈಗಾಗಲೇ ಸಿದ್ಧತೆಯಲ್ಲಿ ತೊಡಗಿಕೊಂಡಿದೆ. ಈ ವೇಳೆ ಮತ್ತೆ ಧೋನಿಯನ್ನು ಕ್ರಿಕೆಟ್ ಮೈದಾನದಲ್ಲಿ ನೋಡಬಹುದಾಗಿದೆ.

  • ಚೊಚ್ಚಲ ಬಾರಿಗೆ ಟೀಂ ಇಂಡಿಯಾ ಪರ ಆಡಲು ಐವರು ಆಟಗಾರರಿಗೆ ಕರೆ

    ಚೊಚ್ಚಲ ಬಾರಿಗೆ ಟೀಂ ಇಂಡಿಯಾ ಪರ ಆಡಲು ಐವರು ಆಟಗಾರರಿಗೆ ಕರೆ

    ಮುಂಬೈ: ಕ್ರಿಕೆಟಿಗರಿಗೆ ನಾವು ಒಮ್ಮೆಯಾದರೂ ಭಾರತ ತಂಡದ ಪರ ಆಡಬೇಕೆಂಬ ಕನಸಿರುತ್ತದೆ. ಹೀಗೆ ಕನಸು ಕಾಣುತ್ತಿದ್ದ ಐವರು ಆಟಗಾರರಿಗೆ ಮೊದಲ ಬಾರಿಗೆ ಟೀ ಇಂಡಿಯಾ ಪರ ಆಡಲು ಕರೆಬಂದಿದೆ.

    ಮುಂಬರುವ ಜುಲೈ ತಿಂಗಳಲ್ಲಿ ಭಾರತ ತಂಡ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ನಾಯಕ ವಿರಾಟ್ ಕೊಹ್ಲಿ ಮತ್ತು ಇತರೆ ಹಿರಿಯ ಆಟಾಗರರು ಇಂಗ್ಲೆಂಡ್ ಪ್ರವಾಸದಲ್ಲಿರುವುದರಿಂದ ಹೊಸ ಪ್ರತಿಭೆಗಳನ್ನೊಳಗೊಂಡ ಭಾರತ ತಂಡವನ್ನು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ. ಅನುಭವಿ ಆಟಗಾರ ಶಿಖರ್ ಧವನ್‍ಗೆ ತಂಡದ ನಾಯಕತ್ವ ನೀಡಲಾಗಿದ್ದು, ಭುವನೇಶ್ವರ್ ಕುಮಾರ್ ಅವರನ್ನು ತಂಡದ ಉಪನಾಯಕನನ್ನಾಗಿ ಮಾಡಲಾಗಿದೆ. ಇದನ್ನೂ ಓದಿ:ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!

    ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಲಂಕಾ ಪ್ರವಾಸಕ್ಕೆ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು, ಐಪಿಎಲ್‍ನಲ್ಲಿ ಅಬ್ಬರಿಸಿದ್ದ ಯುವ ಬ್ಯಾಟ್ಸ್‍ಮ್ಯಾನ್‍ಗಳಾದ ದೇವದತ್ ಪಡಿಕ್ಕಲ್, ಋತುರಾಜ್ ಗಾಯಕ್ವಾಡ್, ನಿತೀಶ್ ರಾಣಾ ಮತ್ತು ವೇಗಿ ಚೇತನ್ ಸಕಾರಿಯಾ, ಆಲ್‍ರೌಂಡರ್ ಕೃಷ್ಣಪ್ಪ ಗೌತಮ್ ಅವರು ಚೊಚ್ಚಲ ಬಾರಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.

    ಈ ಎಲ್ಲಾ ಆಟಗಾರರು ಕೂಡ ಐಪಿಎಲ್‍ನಲ್ಲಿ ಮತ್ತು ದೇಶಿ ಟೂರ್ನಿಯಲ್ಲಿ ಮಿಂಚು ಹರಿಸಿರುವ ಪರಿಣಾಮ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆರ್‍ಸಿಬಿ ತಂಡದ ಪರ ಆಡುವ ದೇವದತ್ ಪಡಿಕ್ಕಲ್ ಐಪಿಎಲ್‍ನಲ್ಲಿ ಒಟ್ಟು 21 ಪಂದ್ಯವಾಡಿ 1 ಶತಕ ಮತ್ತು 5 ಅರ್ಧಶತಕ ಸಹಿತ 668 ರನ್ ಗಳಿಸಿದ್ದಾರೆ. ಇದನ್ನೂ ಓದಿ: 2007ರ ಟಿ20ಗೆ ನಾನು ನಾಯಕನಾಗುವ ನಿರೀಕ್ಷೆ ಹೊಂದಿದ್ದೆ, ಆದರೆ ಧೋನಿ ಆಯ್ಕೆಯಾದ್ರು – ಯುವಿ

    ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುವ ಋತುರಾಜ್ ಗಾಯಕ್ವಾಡ್ ಅವರಿಗೂ ಮೊದಲ ಬಾರಿಗೆ ಟೀಂ ಇಂಡಿಯಾ ಪರ ಆಡುವ ಅವಕಾಶ ಒದಗಿಬಂದಿದೆ. ಸಿಎಸ್‍ಕೆ ಪರ ಗಾಯಕ್ವಾಡ್ ಒಟ್ಟು 13 ಪಂದ್ಯಗಳನ್ನು ಆಡಿದ್ದು 5 ಅರ್ಧಶತಕ ಸಹಿತ 400 ರನ್ ಸಿಡಿಸಿದ್ದಾರೆ.

    ಆಟಗಾರನಾಗಿ ಗುರುತಿಸಿಕೊಂಡಿರುವ ನಿತೀಶ್ ರಾಣಾ ಕೂಡ ಭಾರತ ತಂಡಕ್ಕೆ ಆಯ್ಕೆಯಾಗಿದ್ದು, ಅವರು ಕೋಲ್ಕತ್ತಾ ತಂಡದ ಪರ ಒಟ್ಟು 67 ಪಂದ್ಯವಾಡಿದ್ದು, 13 ಅರ್ಧಶತಕ ಸಹಿತ ಒಟ್ಟು 1638 ರನ್ ಚಚ್ಚಿದ್ದಾರೆ. ಇದನ್ನೂ ಓದಿ:ಲಂಕಾ ಪ್ರವಾಸಕ್ಕೆ ಶಿಖರ್ ಧವನ್ ನಾಯಕ-ತಂಡದಲ್ಲಿ ಮೂವರು ಕನ್ನಡಿಗರಿಗೆ ಸ್ಥಾನ

    2021ರ ಐಪಿಎಲ್‍ನಲ್ಲಿ ಭಾರೀ ಸದ್ದು ಮಾಡಿದ್ದ ರಾಜಸ್ಥಾನ ರಾಯಲ್ಸ್ ತಂಡದ ಯುವ ವೇಗದ ಬೌಲರ್ ಚೇತನ್ ಸಕಾರಿಯಾ ಅವರಿಗೂ ರಾಷ್ಟ್ರೀಯ ತಂಡದ ಬಾಗಿಲು ತೆರೆದುಕೊಂಡಿದೆ. ಜಕಾರಿಯಾ ರಾಜಸ್ಥಾನ ತಂಡದ ಪರ ಒಟ್ಟು 7 ಪಂದ್ಯವಾಡಿ 7 ವಿಕೆಟ್ ಕಬಳಿಸಿದ್ದಾರೆ.

    ಈ ಬಾರಿ ಭಾರತ ತಂಡಕ್ಕೆ ಕನ್ನಡಿಗ ಆಲ್‍ರೌಂಡರ್ ಕೃಷ್ಣಪ್ಪ ಗೌತಮ್ ಕೂಡ ಆಯ್ಕೆಯಾಗಿದ್ದಾರೆ. ಕೆ ಗೌತಮ್ ಈ ಬಾರಿಯ ಐಪಿಎಲ್‍ನಲ್ಲಿ ಆಡದೇ ಇದ್ದರು ಕೂಡ ದೇಶಿ ಟೂರ್ನಿಯಲ್ಲಿ ಕರ್ನಾಟಕದ ಪರ 42 ಪಂದ್ಯಗಳಿಂದ 1045 ರನ್ ಮತ್ತು 166 ವಿಕೆಟ್ ಪಡೆದಿದ್ದಾರೆ.

    ಉಳಿದಂತೆ ತಂಡದಲ್ಲಿ ವಿಶೇಷ ಎಂಬಂತೆ 2 ಜೋಡಿ ಸಹೋದರರು ಇದ್ದಾರೆ. ಕೃನಾಲ್ ಪಾಂಡ್ಯ, ಹಾರ್ದಿಕ್ ಪಾಂಡ್ಯ ಒಂದು ಜೋಡಿಯಾದರೆ, ದೀಪಕ್ ಚಹರ್ ಮತ್ತು ರಾಹುಲ್ ಚಹರ್ ಇನ್ನುಂದು ಜೋಡಿಯಾಗಿದೆ. ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್

    ಬಹುತೇಕ ಹೊಸಮುಖಗಳೊಂದಿಗೆ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡಕ್ಕೆ ರಾಹುಲ್ ದ್ರಾವಿಡ್ ಕೋಚ್ ಆಗಿರಲಿದ್ದಾರೆ. ಶ್ರೀಲಂಕಾ ವಿರುದ್ಧ ಭಾರತ ತಂಡ 3 ಏಕದಿನ ಮತ್ತು 3 ಟಿ20 ಪಂದ್ಯಗಳ ಸರಣಿಯನ್ನು ಆಡಲಿದೆ. ಕೊರೊನಾ ಸುರಕ್ಷತೆಯ ದೃಷ್ಟಿಯಿಂದ ಎಲ್ಲಾ ಪಂದ್ಯಗಳು ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯಲಿದೆ. ಏಕದಿನ ಪಂದ್ಯಗಳು ಜುಲೈ 13, 16 ಮತ್ತು 18 ರಂದು ನಡೆಯಲಿದ್ದು, ಟಿ20 ಪಂದ್ಯಗಳು ಜುಲೈ 21, 23 ಮತ್ತು 25 ರಂದು ನಡೆಯಲಿದೆ.

  • ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!

    ಅಂದು ಧೋನಿಯೊಂದಿಗಿದ್ದ ಪುಟ್ಟ ಬಾಲಕ ಇಂದು ಸ್ಟಾರ್ ಕ್ರಿಕೆಟರ್!

    ಜೈಪುರ: ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯೊಂದಿಗೆ ಪುಟ್ಟ ಬಾಲಕನೋರ್ವ ಜೊತೆಗಿರುವ ಫೋಟೋ ಒಂದು ಬಾರಿ ವೈರಲ್ ಆಗುತ್ತಿದೆ. ಅಂದು ಪುಟ್ಟ ಬಾಲಕನಾಗಿದ್ದ ಈ ಹುಡುಗ ಇಂದು ಧೋನಿಯೊಂದಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರಿಕೆಟ್ ಅಡುವಷ್ಟುರ ಮಟ್ಟಿಗೆ ಬೆಳೆದಿದ್ದಾನೆ.

    ಹಳೆಯ ಫೋಟೋ ಒಂದರಲ್ಲಿ ಧೋನಿ ಜೊತೆಗೆ ಪುಟ್ಟ ಬಾಲಕನೋರ್ವ ನಿಂತು ಫೋಟೋಗೆ ಪೋಸ್ ನೀಡಿದ್ದ. ಆ ಬಾಲಕ ಇಂದು ಧೋನಿಯೊಂದಿಗೆ ಐಪಿಎಲ್‍ನಲ್ಲಿ ಆಡುತ್ತಿದ್ದಾನೆ. ಹೌದು ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಆಲ್‍ರೌಂಡರ್ 19 ವರ್ಷದ ರಿಯಾನ್ ಪರಾಗ್ ಧೋನಿಯೊಂದಿಗೆ ಫೋಟೋದಲ್ಲಿರುವ ಆ ಪುಟ್ಟ ಬಾಲಕ. ಅಂದು ಸಣ್ಣ ಬಾಲಕನಾಗಿದ್ದ ವೇಳೆ ಧೋನಿಯೊಂದಿಗೆ ನಿಂತು ಛಾಯಚಿತ್ರ ತೆಗೆದುಕೊಂಡಿದ್ದರು. ಆ ಫೋಟೋವನ್ನು ಇದೀಗ ರಾಜಸ್ಥಾನ ರಾಯಲ್ಸ್ ತಂಡ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ತನ್ನ ತಂಡದ ಸ್ಟಾರ್ ಆಟಗಾರರ ಬೆಳವಣಿಗೆಯನ್ನು ಕೊಂಡಾಡಿದೆ. ಇದನ್ನೂ ಓದಿ: ರಿಯಾನ್ ಪರಾಗ್ ವಿಶಿಷ್ಟ ಸಂಭ್ರಮಾಚರಣೆಗೆ ಫ್ಯಾನ್ಸ್ ಫಿದಾ

    ರಾಜಸ್ಥಾನ ತಂಡ ತನ್ನ ಸಾಮಾಜಿಕ ಜಾಲತಾಣದಲ್ಲಿ ಧೋನಿ ಜೊತೆ ಇರುವ ಪರಾಗ್ ಅವರ ಪುಟ್ಟ ಬಾಲಕನ ಫೋಟೋ ಮತ್ತು ಇತ್ತೀಚಿನ ಚಿತ್ರವೊಂದನ್ನು ಸೇರಿಸಿ ಪೋಸ್ಟ್ ಮಾಡಿ, ನೀವು ವಿಕಸನಗೊಳ್ಳುತ್ತೀರಿ, ನೀವು ಕಲಿಯುತ್ತಿರಿ, ನೀವು ಬೆಳೆಯುತ್ತಿರಿ, ಧೋನಿಯೊಂದಿಗೆ ಫ್ಯಾನ್ ಬಾಯ್ ರಿಯನ್ ಪರಾಗ್ ಎಂದು ಎಂದು ಬರೆದುಕೊಂಡಿದೆ.

    ಈ ಹಿಂದೆ ಐಪಿಎಲ್‍ನಲ್ಲಿ ಆಡುವಾಗ ಪರಾಗ್ ಈ ಫೋಟೋವನ್ನು ನೆನಪಿಸಿಕೊಂಡು ನಾನು 6 ವರ್ಷದ ಬಾಲಕನಾಗಿರುವಾಗ ಧೋನಿಯೊಂದಿಗೆ ಫೋಟೋ ತೆಗೆಸಿಕೊಂಡಿದ್ದೆ. ಆದರೆ ಇದೀಗ ನಾನು ಧೋನಿಗೆ ಬೌಲಿಂಗ್ ಮಾಡುತ್ತೇನೆ. ಧೋನಿ ವಿರುದ್ಧ ಫೀಲ್ಡಿಂಗ್ ಮಾಡುತ್ತೇನೆ. ನಾನು ಬ್ಯಾಟಿಂಗ್ ಮಾಡುವಾಗ ವಿಕೆಟ್ ಹಿಂದೆ ಧೋನಿಯನ್ನು ಕಾಣುತ್ತೇನೆ ಎಂದು ಸಹ ಆಟಗಾರನೊಂದಿಗೆ ಸಂಭ್ರಮ ಹಂಚಿಕೊಂಡಿದ್ದರು. ಇದನ್ನೂ ಓದಿ: ಕೊಹ್ಲಿಗೆ ಓರ್ವ ನ್ಯೂಜಿಲೆಂಡ್ ಬೌಲರ್‌ನಿಂದ ಕಂಟಕವಿದೆ ಎಂದ ಬಾಲ್ಯದ ಕೋಚ್

    ರಿಯಾನ್ ಪರಾಗ್ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 2019ರಲ್ಲಿ ಪಾದಾರ್ಪಣೆ ಮಾಡಿದರು ಆ ಬಳಿಕ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿ ಸ್ಟಾರ್ ಆಲ್‍ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ. 2019ರಿಂದ 2021ರ ವರೆಗೆ ಐಪಿಎಲ್‍ನಲ್ಲಿ ರಾಜಸ್ಥಾನ ತಂಡದ ಪರ ಒಟ್ಟು 26 ಪಂದ್ಯಗಳನ್ನು ಆಡಿ 324 ರನ್ ಮತ್ತು 3 ವಿಕೆಟ್ ಪಡೆದು ಭರವಸೆಯ ಯುವ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ.

  • ಆರ್​ಸಿಬಿ ಬಿಟ್ಟರೆ ಈ ತಂಡದಲ್ಲಿ ಆಡುವ ಬಯಕೆ ಇದೆ ಎಂದ ಚಹಲ್

    ಆರ್​ಸಿಬಿ ಬಿಟ್ಟರೆ ಈ ತಂಡದಲ್ಲಿ ಆಡುವ ಬಯಕೆ ಇದೆ ಎಂದ ಚಹಲ್

    ಮುಂಬೈ: ಭಾರತ ಕ್ರಿಕೆಟ್ ತಂಡದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಐಪಿಎಲ್‍ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಇರದೇ ಇದ್ದಿದ್ದರೆ ಈ ತಂಡದಲ್ಲಿ ಆಡುತ್ತಿದ್ದೆ ಎಂದು ತಮ್ಮ ಮನದ ಮಾತನ್ನು ಹೇಳಿಕೊಂಡಿದ್ದಾರೆ.

    ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಚಹಲ್, ನಾನು ಐಪಿಎಲ್‍ನಲ್ಲಿ ಆರ್​ಸಿಬಿ ತಂಡದ ಪರ ಆಡದೇ ಇದ್ದಿದ್ದರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಆಡುತ್ತಿದ್ದೆ ಎಂದು ತಮ್ಮ ಬಯಕೆಯನ್ನು ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಕ್ರಿಸ್ ಗೇಲ್ ಮುಂದೆ ಮೋಡಿ ಮಾಡದ ಚಹಲ್ ಬಾಡಿ

    ಸಿಎಸ್‍ಕೆ ತಂಡದಲ್ಲಿ ಧೋನಿ ನಾಯಕರಾಗಿದ್ದಾರೆ ಅವರ ನಾಯಕತ್ವದಲ್ಲಿ ಆಡಲು ಬಯಸುತ್ತೇನೆ. ಚೆನ್ನೈ ತಂಡ ಮೂರು ಬಾರಿ ಚಾಂಪಿಯನ್ ಆಗಿದೆ. ಹಾಗೆ ತಂಡದಲ್ಲಿ ಸ್ಪಿನ್ನರ್‍ ಗೆ ಹೆಚ್ಚಿನ ಮಹತ್ವ ಇದೆ ಹಾಗಾಗಿ ಆಡಲು ನಾನು ಇಷ್ಟ ಪಡುತ್ತೇನೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

    2011ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ ಐಪಿಎಲ್‍ಗೆ ಪಾರ್ದಾಪಣೆ ಮಾಡಿದ ಚಹಲ್ ನಂತರ 2014ರಲ್ಲಿ ಆರ್​ಸಿಬಿ ತಂಡಕ್ಕೆ ಸೇರಿಕೊಂಡರು. ಆ ಬಳಿಕ ಆರ್​ಸಿಬಿ ತಂಡದಲ್ಲಿ ಉತ್ತಮ ಪ್ರದರ್ಶನ ತೋರಿ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಚಹಲ್ ಐಪಿಎಲ್‍ನಲ್ಲಿ ಈ ವರೆಗೆ ಒಟ್ಟು 106 ಪಂದ್ಯಗಳನ್ನು ಆಡಿ 125 ವಿಕೆಟ್ ಪಡೆದಿದ್ದಾರೆ. ಇದನ್ನೂ ಓದಿ:ಕೊಹ್ಲಿ, ವಿಲಿಯಮ್ಸನ್ ನಡುವಿನ ನಾಯಕತ್ವ ವಿಭಿನ್ನತೆ ನೋಡಲು ಕಾತುರ-ಬ್ರೆಟ್ ಲೀ

    ಭಾರತ ತಂಡದ ಪರ ಚಹಲ್ ಒಟ್ಟು 54 ಏಕದಿನ ಪಂದ್ಯದಿಂದ 92 ವಿಕೆಟ್, 42 ಟಿ20 ಪಂದ್ಯದಿಂದ 62 ವಿಕೆಟ್ ಪಡೆದಿದ್ದಾರೆ. ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿರುವ ಚಹಲ್ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತದ ಇನ್ನೊಂದು ತಂಡದ ಪ್ರಮುಖ ಸ್ಪಿನ್ ಬೌಲರ್ ಆಗಿ ಆಯ್ಕೆ ಆಗುವ ನಿರೀಕ್ಷೆ ಇದೆ.

  • ಯುಎಇಯಲ್ಲಿ ಐಪಿಎಲ್ ನಿಗದಿ ಬೆನ್ನಲ್ಲೇ ಟ್ರೋಲ್ ಆದ ಸುರೇಶ್ ರೈನಾ

    ಯುಎಇಯಲ್ಲಿ ಐಪಿಎಲ್ ನಿಗದಿ ಬೆನ್ನಲ್ಲೇ ಟ್ರೋಲ್ ಆದ ಸುರೇಶ್ ರೈನಾ

    ಚೆನ್ನೈ: ಯುಎಇನಲ್ಲಿ 2021ರ ಐಪಿಎಲ್ ಮುಂದಿನ ಭಾಗ ನಡೆಯಲಿದೆ ಎಂದು ಬಿಸಿಸಿಐ ಸ್ಪಷ್ಟಪಡಿಸಿದೆ. ಈ ಸುದ್ದಿ ಹೊರ ಬೀಳುತ್ತಿದ್ದಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರ ಸುರೇಶ್ ರೈನಾ ಟ್ವೀಟ್ ಮಾಡಿ ಸಿಕ್ಕಾಪಟ್ಟೆ ಟ್ರೋಲ್‍ಗೆ ಒಳಗಾಗಿದ್ದಾರೆ.

    14ನೇ ಆವೃತ್ತಿಯ ಐಪಿಎಲ್‍ನ ಮುಂದಿನ ಭಾಗವನ್ನು ಯುಎಇನಲ್ಲಿ ನಡೆಸಲು ಬಿಸಿಸಿಐ ಮಂಡಳಿಯ ವಿಶೇಷ ಮಹಾಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ಈ ನಿಧಾರವನ್ನು ಬಿಸಿಸಿಐ ಖಚಿತಪಡಿಸುತ್ತಿದ್ದಂತೆ, ಸಂತಸಗೊಂಡ ಸುರೇಶ್ ರೈನಾ, ಧೋನಿ ಮತ್ತು ತಾವು ಜೊತೆಗಿರುವ ಫೋಟೋ ಪೋಸ್ಟ್ ಮಾಡಿ ಮುಂದಿನ ಭೇಟಿ ದುಬೈನಲ್ಲಿ ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಧೋನಿ ಬಗ್ಗೆ ಅಚ್ಚರಿ ಮಾತು – ಕೊಹ್ಲಿಗೆ ಅಭಿಮಾನಿಗಳಿಂದ ಚಪ್ಪಾಳೆ

    ಸುರೇಶ್ ರೈನಾ ಈ ರೀತಿ ಟ್ವೀಟ್ ಮಾಡುತ್ತಿದ್ದಂತೆ ನೆಟ್ಟಿಗರು ಸುರೇಶ್ ರೈನಾಗೆ ದುಬೈನಲ್ಲಿ ಬಾಲ್ಕನಿ ಹೊಂದಿರುವ ರೂಂ ಬುಕ್ ಮಾಡಿ ಎಂದು ಚೆನ್ನೈ ಸೂಪರ್ ಕಿಂಗ್ಸ್ ಫ್ರಾಂಚೈಸ್‍ಗೆ ಮನವಿ ಮಾಡುವ ಮೂಲಕ ಪರೋಕ್ಷವಾಗಿ ರೈನಾರ ಕಾಲೆಳೆದಿದ್ದಾರೆ. ಈ ರೀತಿ ಟ್ರೋಲ್ ಮಾಡಲು ಕಾರಣ ಇದೆ. ಕಳೆದ ಬಾರಿ 2020ರ ಐಪಿಎಲ್ ದುಬೈನಲ್ಲಿ ನಡೆದಾಗ ಸುರೇಶ್ ರೈನಾ ಟೂರ್ನಿ ಆರಂಭಕ್ಕೂ ಮೊದಲೇ ತಂಡವನ್ನು ತೊರೆದು ಮನೆ ಸೇರಿದ್ದರು. ಈ ವೇಳೆ ಅವರಿಗೆ ಸರಿಯಾದ ರೂಂ ವ್ಯವಸ್ಥೆ ಮಾಡದ ಕಾರಣ ಮುನಿಸಿಕೊಂಡು ತಂಡ ತೊರೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಹಾಗಾಗಿ ಈ ಬಾರಿ ಮೊದಲೇ ಚೆನ್ನೈ ಫ್ರಾಂಚೈಸ್‍ಗೆ ನೆಟ್ಟಿಗರು ಬಾಲ್ಕನಿ ರೂಂನ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ರೆಟ್ರೋ ಶೈಲಿಯ ಜೆರ್ಸಿಯಲ್ಲಿ ಮಿಂಚುತ್ತಿದ್ದಾರೆ ಟೀಂ ಇಂಡಿಯಾ ಆಟಗಾರರು

    https://twitter.com/crictallkk/status/1398596177084354561

    ಆದರೆ ಕಳೆದ 13ನೇ ಆವೃತ್ತಿಯ ಐಪಿಎಲ್‍ನಿಂದ ಹಿಂದೆ ಸರಿಯಲು ತಮ್ಮ ವೈಯಕ್ತಿಕ ಕಾರಣ ಇತ್ತು ಎಂದು ರೈನಾ ಸ್ಪಷ್ಟ ಪಡಿಸಿದ್ದರು. ಆ ಬಳಿಕ 14ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಚೆನ್ನೈ ತಂಡದ ಪರ ರೈನಾ ಕಣಕ್ಕಿಳಿದಿದ್ದರು. ಆದರೆ 14ನೇ ಆವೃತ್ತಿಯ ಐಪಿಎಲ್ ಕೊರೊನಾದಿಂದಾಗಿ ಅರ್ಧದಲ್ಲೇ ಸ್ಥಗಿತಗೊಂಡಿತ್ತು. ಇದೀಗ ಮುಂದುವರಿದ ಭಾಗ ಮತ್ತೆ ದುಬೈನಲ್ಲಿ ನಡೆಸಲು ಬಿಸಿಸಿಐ ನಿರ್ಧರಿಸಿದೆ. ಇದನ್ನೂ ಓದಿ: ಧೋನಿ, ಕೊಹ್ಲಿಯ ಬಗ್ಗೆ ಒಂದೇ ಪದದಲ್ಲಿ ಉತ್ತರಿಸಿದ ಸೂರ್ಯಕುಮಾರ್ ಯಾದವ್

    ಈ ಮೂಲಕ ಮೂರನೇ ಬಾರಿ ದುಬೈನಲ್ಲಿ ಐಪಿಎಲ್ ನಡೆಸಲು ಬಿಸಿಸಿಐ ಸಿದ್ಧತೆಯಲ್ಲಿದೆ. ಈ ಮೊದಲು 2014ರಲ್ಲಿ ಭಾರತದಲ್ಲಿ ಚುನಾವಣೆ ಇದ್ದ ಕಾರಣ ಮತ್ತು 2020ರಲ್ಲಿ ಕೊರೊನಾದಿಂದಾಗಿ ದುಬೈನಲ್ಲಿ ಟೂರ್ನಿ ನಡೆದಿತ್ತು. ಇದೀಗ ಮತ್ತೆ ಭಾರತದಲ್ಲಿ ಕೊರೊನಾದಿಂದಾಗಿ 14ನೇ ಆವೃತ್ತಿಯ ಉಳಿದ ಪಂದ್ಯಗಳನ್ನು ಮತ್ತೆ ದುಬೈನಲ್ಲಿ ಸೆಪ್ಟಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಬಿಸಿಸಿಐ ತೀರ್ಮಾನಿಸಿದೆ.

    ರೈನಾ, ಮುಂದೂಡಲ್ಪಟ್ಟ 14ನೇ ಆವೃತ್ತಿಯ ಐಪಿಎಲ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ 7 ಪಂದ್ಯಗಳನ್ನು ಆಡಿ 1 ಅರ್ಧಶತಕ ಸಹಿತ 123 ರನ್ ಗಳಿಸಿದ್ದಾರೆ.

  • ಎಲ್ಲರನ್ನು ಕಳುಹಿಸಿ ಕೊನೆಗೆ ಮನೆ ತಲುಪಿದ ಧೋನಿ

    ಎಲ್ಲರನ್ನು ಕಳುಹಿಸಿ ಕೊನೆಗೆ ಮನೆ ತಲುಪಿದ ಧೋನಿ

    ರಾಂಚಿ: ಕೊರೊನಾದಿಂದಾಗಿ 14ನೇ ಆವೃತ್ತಿಯ ಐಪಿಎಲ್ ಅರ್ಧದಲ್ಲೇ ಸ್ಥಗಿತಗೊಂಡಿದೆ. ಆಟಗಾರರೆಲ್ಲ ತಮ್ಮ ತಮ್ಮ ಮನೆಗಳಿಗೆ ತೆರಳಿದ್ದಾರೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ತನ್ನ ತಂಡದ ಆಟಗಾರೆಲ್ಲ ಮನೆಗೆ ಸೇರಿದ ಬಳಿಕ ಕೊನೆಯವರಾಗಿ ಮನೆಗೆ ತೆರಳಿದ್ದಾರೆ.

    ಸಿಎಸ್‍ಕೆ ತಂಡದ ಆಟಗಾರರೆಲ್ಲರನ್ನು ಕೂಡ ಸುರಕ್ಷಿತವಾಗಿ ಮನೆಗೆ ತಲುಪಿಸುವ ಹೊಣೆ ಹೊತ್ತಿದ್ದ ಚೆನ್ನೈ ಫ್ರಾಂಚೈಸಿ, ಆಟಗಾರರನ್ನು ಮನೆಗೆ ತಲುಪಿಸಲು ವಿಮಾನದ ವ್ಯವಸ್ಥೆ ಮಾಡಿತ್ತು. ಈ ವಿಮಾನದಲ್ಲಿ ಮೊದಲು ವಿದೇಶಿ ಆಟಗಾರರು ತೆರಳಿದ ಬಳಿಕ ದೇಶೀಯ ಅಟಗಾರರು ತೆರಳಿ ನಂತರ ಕೊನೆಯವರಾಗಿ ಧೋನಿ ತೆರಳುವ ನಿರ್ಧಾರ ಕೈಗೊಂಡಿದ್ದರು. ಈ ಮೂಲಕ ತನ್ನ ತಂಡದ ಸದಸ್ಯರ ಬಗ್ಗೆ ಧೋನಿಗಿರುವ ಕಾಳಜಿಯನ್ನು ಮತ್ತೊಮ್ಮೆ ತೋರಿಸಿದ್ದಾರೆ.

    ಐಪಿಎಲ್ ರದ್ದುಗೊಳ್ಳುತ್ತಿದ್ದಂತೆ ಸಿಎಸ್‍ಕೆ ತಂಡ ಆಟಗಾರರೆಲ್ಲ ಡೆಲ್ಲಿಯ ಹೋಟೆಲ್ ಒಂದರಲ್ಲಿ ಬಿಡುಬಿಟ್ಟಿದ್ದರು. ಅಲ್ಲಿ ಸಿಎಸ್‍ಕೆ ತಂಡ ಸುದೀರ್ಘವಾದ ಸಭೆಯೊಂದನ್ನು ನಡೆಸಿತ್ತು. ಈ ಸಭೆಯಲ್ಲಿ ಧೋನಿ ಚೆನ್ನೈ ಫ್ರಾಂಚೈಸಿಯೊಂದಿಗೆ ಆಟಗಾರರನ್ನು ಸುರಕ್ಷಿತವಾಗಿ ಮನೆಗೆ ತಲುಪಿಸುವುದರ ಕುರಿತು ಮಾತನಾಡುವ ವೇಳೆ ಮೊದಲು ವಿದೇಶಿ ಆಟಗಾರರು ತೆರಳಲಿ ಬಳಿಕ ದೇಶೀಯ ಆಟಗಾರರು ತಮ್ಮ ತಮ್ಮ ಮನೆಗೆ ತೆರಳಲಿ ಬಳಿಕ ಕೊನೆಯದಾಗಿ ನಾನು ಮನೆ ಸೇರುತ್ತೇನೆ ಎಂದಿದ್ದರು. ಹಾಗಾಗಿ ಚೆನ್ನೈ ತಂಡದ ಆಡಳಿತ ಮಂಡಳಿ ಚಾರ್ಟರ್ ಫ್ಲೈಟ್ ಆಯೋಜನೆ ಮಾಡಿ ಆಟಗಾರರನೆಲ್ಲ ಮನೆಗೆ ಸುರಕ್ಷಿತವಾಗಿ ತಲುಪಿಸಿದೆ. ಬಳಿಕ ಧೋನಿ ತನ್ನ ಮಾತಿನಂತೆ ಗುರುವಾರ ಸಂಜೆ ತಮ್ಮ ರಾಂಚಿಯ ನಿವಾಸಕ್ಕೆ ತಲುಪಿದ್ದಾರೆ.

    ಚೆನ್ನೈ ತಂಡದಿಂದ ಕಡೆಯವರಾಗಿ ಧೋನಿ ರಾಂಚಿಗೆ ಹೊರಡುತ್ತಿದ್ದಂತೆ, ಚೆನ್ನೈ ತಂಡದಲ್ಲಿ ಸೋಂಕಿತರಾಗಿದ್ದ ಬ್ಯಾಟಿಂಗ್ ಕೋಚ್ ಮೈಕ್ ಹಸ್ಸಿ ಮತ್ತು ಬೌಲಿಂಗ್ ಕೋಚ್ ಬಾಲಾಜಿ ಅವರನ್ನು ಏರ್ ಅಂಬ್ಯುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈಗೆ ಕರೆತರಲಾಗಿದೆ. ಹಸ್ಸಿ ಕೊರೊನಾ ಸೋಂಕಿನಿಂದ ಚೇತರಿಕೆ ಕಂಡ ಬಳಿಕ ಆಸ್ಟ್ರೇಲಿಯಾಗೆ ತೆರಳಲು ಸೂಕ್ತ ವ್ಯವಸ್ಥೆ ಮಾಡಲು ಚೆನ್ನೈ ಆಡಳಿತ ಮಂಡಳಿ ನಿರ್ಧರಿಸಿದೆ.

    ಚೆನ್ನೈ ತಂಡ 14ನೇ ಆವೃತ್ತಿಯ ಐಪಿಎಲ್‍ನಲ್ಲಿ ತಾನಾಡಿದ 7 ಪಂದ್ಯಗಳಲ್ಲಿ, 5 ಪಂದ್ಯ ಗೆದ್ದು, 2 ಪಂದ್ಯ ಸೋತು, 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

  • 1 ಓವರ್‌ನಲ್ಲಿ  5 ಸಿಕ್ಸ್, 1 ಮೇಡನ್ 3 ವಿಕೆಟ್ – ಜಡೇಜಾ ಜಾದೂ, ಚೆನ್ನೈಗೆ 69 ರನ್‍ಗಳ ಭರ್ಜರಿ ಜಯ

    1 ಓವರ್‌ನಲ್ಲಿ  5 ಸಿಕ್ಸ್, 1 ಮೇಡನ್ 3 ವಿಕೆಟ್ – ಜಡೇಜಾ ಜಾದೂ, ಚೆನ್ನೈಗೆ 69 ರನ್‍ಗಳ ಭರ್ಜರಿ ಜಯ

    ಮುಂಬೈ: ರವೀಂದ್ರ ಜಡೇಜಾ ಅವರ ಆಲ್‍ರೌಂಡರ್ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 69 ರನ್‍ಗಳಿಂದ ಗೆದ್ದುಕೊಂಡಿದೆ.

    ಗೆಲ್ಲಲು 192 ರನ್‍ಗಳ ಕಠಿಣ ಗುರಿಯನ್ನು ಪಡೆದ ಆರ್‍ಸಿಬಿ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 122 ರನ್‍ಗಳಿಸಿತು. ಈ ಮೂಲಕ ಸತತ 4 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಬೆಂಗಳೂರು ಈಗ ಎರಡನೇ ಸ್ಥಾನಕ್ಕೆ ಜಾರಿದೆ. ಚೆನ್ನೈ ಮೊದಲ ಸ್ಥಾನಕ್ಕೆ ಏರಿದೆ.

    ಸ್ಫೋಟಕ ಬ್ಯಾಟಿಂಗ್ ಮಾಡಿದ್ದ ಜಡೇಜಾ ಇಂದು ವಾಷಿಂಗ್ಟನ್ ಸುಂದರ್ ಅವರನ್ನು ಕ್ಯಾಚ್ ಔಟ್ ಮಾಡಿದ್ದರೆ ಮ್ಯಾಕ್ಸ್ ವೆಲ್ ಮತ್ತು ಎಬಿಡಿ ವಿಲಿಯರ್ಸ್ ಅವರನ್ನು ಬೌಲ್ಡ್ ಮಾಡಿದರು. ಅಷ್ಟೇ ಅಲ್ಲದೇ ಡೇನಿಯಲ್ ಕ್ರಿಸ್ಟಿಯನ್ ಅವರನ್ನು ರನೌಟ್ ಮಾಡಿದರು. ಅಂತಿಮವಾಗಿ ಜಡೇಜಾ 4 ಓವರ್‌ಗಳ ಕೋಟಾದಲ್ಲಿ 1 ಮೇಡನ್ ಮಾಡಿ 13 ರನ್ ನೀಡಿ 4 ವಿಕೆಟ್ ಕಿತ್ತರು.

    ಆರ್‍ಸಿಬಿ ಪರ ದೇವದತ್ ಪಡಿಕ್ಕಲ್ 34 ರನ್(15 ಎಸೆತ, 4 ಬೌಂಡರಿ, 2 ಸಿಕ್ಸರ್) ಹೊಡೆದರೆ ಗ್ಲೇನ್ ಮ್ಯಾಕ್ಸ್ ವೆಲ್ 22 ರನ್(15 ಎಸೆತ, 3 ಬೌಂಡರಿ), ಕೈಲೆ ಜೆಮಿಸನ್ 16 ರನ್(13 ಎಸೆತ, 1 ಬೌಂಡರಿ, 1 ಸಿಕ್ಸರ್) ಮೊಹಮ್ಮದ್ ಸಿರಾಜ್ ಔಟಾಗದೇ 12 ರನ್(14 ಎಸೆತ, 1 ಬೌಂಡರಿ) ಹೊಡೆದರು.

    ಇಮ್ರಾನ್ ತಾಹಿರ್ 2 ವಿಕೆಟ್ ಕಿತ್ತರೆ, ಸ್ಯಾಮ್ ಕರ್ರನ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದೊಂದು ವಿಕೆಟ್ ಪಡೆದರು.

    1 ಓವರಿನಲ್ಲಿ 37 ರನ್: ರವೀಂದ್ರ ಜಡೇಜಾ ಇಂದು ಒಂದೇ ಓವರ್‌ನಲ್ಲಿ 5 ಸಿಕ್ಸರ್ ಚಚ್ಚಿದರೆ, ಆರ್‍ಸಿಬಿಯ ಹರ್ಷಲ್ ಪಟೇಲ್ ದುಬಾರಿ ರನ್ ನೀಡಿದ ಬೌಲರ್ ಎಂಬ ಕುಖ್ಯಾತಿಗೆ ಪಾತ್ರರಾದರು.

    19ನೇ ಓವರ್ ಅಂತ್ಯಕ್ಕೆ ಚೆನ್ನೈ 4 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತ್ತು. ಜಡೇಜಾ 26 ರನ್ ಗಳಿಸಿದ್ದರೆ ಧೋನಿ 2 ರನ್ ಹೊಡೆದಿದ್ದರು. ಕೊನೆಯ ಓವರ್ ಎಸೆಯಲು ಹರ್ಷಲ್ ಪಟೇಲ್ ಬಂದಿದ್ದರೆ ಜಡೇಜಾ ಸ್ಟ್ರೈಕ್‍ನಲ್ಲಿದ್ದರು.

    ಮೊದಲ ಮೂರು ಎಸೆತವನ್ನು ಜಡೇಜಾ ಸಿಕ್ಸ್ ಗೆ  ಅಟ್ಟಿದರು. ಮೂರನೇ ಎಸೆತ ನೋಬಾಲ್ ಆಗಿದ್ದ ಕಾರಣ ಫ್ರಿ ಹಿಟ್ ಸಿಕ್ಕಿತು. ಈ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರೆ 4ನೇ ಎಸೆತದಲ್ಲಿ 2 ರನ್ ಬಂತು. 5ನೇ ಎಸೆತದಲ್ಲಿ ಸಿಕ್ಸರ್ ಬಂದರೆ 6ನೇ ಎಸೆತದಲ್ಲಿ 4 ರನ್ ಬಂತು.

    5 ಸಿಕ್ಸ್, 1 ಬೌಂಡರಿ, 2 ರನ್ ಹೊಡೆಯುವ ಮೂಲಕ ಜಡೇಜಾ 36 ರನ್ ಹೊಡೆದರೆ ಒಂದು ನೋಬಾಲ್ ಹಾಕಿದ ಕಾರಣ 37 ರನ್ ಬಂತು. ಈ ಹಿಂದೆ 2011ರಲ್ಲಿ ಕೊಚ್ಚಿನ್ ಟಸ್ಕರ್ಸ್ ತಂಡದ ಪರಮೇಶ್ವರನ್ ಆರ್‍ಸಿಬಿ ವಿರುದ್ಧದ ಪಂದ್ಯದಲ್ಲಿ 37 ರನ್ ನೀಡಿದ್ದರು.

    ಹರ್ಷಲ್ ಪಟೇಲ್ 4 ಓವರ್ ಎಸೆದು 3 ವಿಕೆಟ್ ಕಿತ್ತು 51 ರನ್ ನೀಡಿದರೆ ಚಹಲ್ 24 ರನ್ ನೀಡಿ 1 ವಿಕೆಟ್ ಕಿತ್ತರು. ಜಡೇಜಾ ಔಟಾಗದೇ 62 ರನ್(28 ಎಸೆತ, 4 ಬೌಂಡರಿ, 5 ಸಿಕ್ಸರ್) ಹೊಡೆದರೆ ಡು ಪ್ಲೆಸಿಸ್ 50 ರನ್(41 ಎಸೆತ, 5 ಬೌಂಡರಿ, 1 ಸಿಕ್ಸರ್, ಋತುರಾಜ್ ಗಾಯಕ್ವಾಡ್ 33 ರನ್(25 ಎಸೆತ, 4 ಬೌಂಡರಿ, 1ಸಿಕ್ಸರ್) ಹೊಡೆದು ಔಟಾದರು. ಅಂತಿಮವಾಗಿ ಚೆನ್ನೈ 4 ವಿಕೆಟ್ ನಷ್ಟಕ್ಕೆ 191 ರನ್ ಗಳಿಸಿತು.