Tag: CSK

  • ಅನುಭವ ಮಾರ್ಕೆಟಿನಲ್ಲಿ ಸಿಗಲ್ಲ – ಧೋನಿಯನ್ನು ಹಾಡಿಹೊಗಳಿದ ಆಕಾಶ್ ಚೋಪ್ರಾ

    ಅನುಭವ ಮಾರ್ಕೆಟಿನಲ್ಲಿ ಸಿಗಲ್ಲ – ಧೋನಿಯನ್ನು ಹಾಡಿಹೊಗಳಿದ ಆಕಾಶ್ ಚೋಪ್ರಾ

    – ಧೋನಿ ಇರುವವರೆಗೂ ಚೆನ್ನೈ ತಂಡ ಉಸಿರಾಡುತ್ತಿರುತ್ತದೆ

    ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್ ಧೋನಿಯವರು ಐಪಿಎಲ್-2020ಯನ್ನು ಆಳುತ್ತಾರೆ ಎಂದು ಭಾರತದ ಮಾಜಿ ಆಟಗಾರ ಆಕಾಶ್ ಚೋಪ್ರಾ ಹೇಳಿದ್ದಾರೆ.

    ಐಪಿಎಲ್ ಆರಂಭಕ್ಕೆ ಕೇವಲ ಇನ್ನು ಒಂದು ವಾರ ಬಾಕಿಯಿದೆ. ಎಲ್ಲ ತಂಡಗಳು ಯುಎಇ ಮೈದಾನದಲ್ಲಿ ಭರ್ಜರಿ ಸಿದ್ಧತೆಗಳನ್ನು ನಡೆಸುತ್ತಿವೆ. ತಡವಾದರೂ ಚೆನ್ನೈ ತಂಡ ಕೂಡ ಅಭ್ಯಾಸವನ್ನು ಆರಂಭಿಸಿದೆ. ಈ ನಡುವೆ ಅವರದ್ದೇ ವಾಹಿನಿಯ ಯುಟ್ಯೂಬ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಆಕಾಶ್ ಚೋಪ್ರಾ, ಎಂಎಸ್ ಧೋನಿಯನ್ನು ಹಾಡಿ ಹೊಗಳಿದ್ದಾರೆ.

    ಧೋನಿ ಚೆನ್ನೈ ತಂಡದ ಅತಿದೊಡ್ಡ ಶಕ್ತಿ, ಇಡೀ ಫ್ರಾಂಚೈಸಿಯೇ ಅವರ ಮೇಲೆ ಅವಲಂಬಿತವಾಗಿದೆ. ಆತ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆತ್ಮವಿದ್ದಂತೆ. ಧೋನಿ ತಂಡದಲ್ಲಿ ಇರುವವರೆಗೂ ಚೆನ್ನೈ ತಂಡ ನಿರಳವಾಗಿ ಉಸಿರಾಡುತ್ತದೆ. ಜೊತೆಗೆ ಟೂರ್ನಿಯಲ್ಲಿ ಉತ್ತಮವಾಗಿ ಆಡುತ್ತಾರೆ. ಎಂಎಸ್ ಧೋನಿ ಓರ್ವ ಆಟಗಾರನಾಗಿ ಮತ್ತು ತಂಡದ ನಾಯಕನಾಗಿ ತಂಡದ ಮೇಲೆ ಉತ್ತಮ ಪರಿಣಾಮವನ್ನು ಬೀರುತ್ತಾರೆ ಎಂದು ಚೋಪ್ರಾ ಹೇಳಿದ್ದಾರೆ.

    ಧೋನಿ ಕಳೆದ ಕೆಲ ದಿನಗಳಿಂದ ಕ್ರಿಕೆಟ್ ಆಡಿಲ್ಲ. ಇದು ಕೆಲವರಿಗೆ ಧೋನಿ ಮುಂಚೆಯಂತೆಯೇ ಮೈದಾನದಲ್ಲಿ ಬ್ಯಾಟ್ ಬೀಸುತ್ತಾರಾ, ಓಡುತ್ತಾರಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಆದರೆ ನಾವೆಲ್ಲರೂ ಗಮನದಲ್ಲಿ ಇಟ್ಟುಕೊಳ್ಳಬೇಕು ಆತ ಬಹಳ ಅನುಭವವುಳ್ಳ ಆಟಗಾರ, ಅನುಭವವನ್ನು ನಾವು ಸೂಪರ್ ಮಾರ್ಕೆಟಿನಲ್ಲಿ ಕೊಂಡುಕೊಳ್ಳಲು ಆಗುವುದಿಲ್ಲ. ಈ ಬಾರಿ ಧೋನಿ ಉತ್ತಮವಾಗಿ ಆಡುತ್ತಾರೆ ಎಂದು ಚೋಪ್ರಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಧೋನಿಯವರು ನಮ್ಮ ತಂಡದ ಜೀವನ ಮತ್ತು ಆತ್ಮ ಎಂದು ಈ ಹಿಂದೆಯೇ ಚೆನ್ನೈ ತಂಡ ಹೇಳಿಕೊಂಡಿದೆ. ಹೀಗಾಗಿ ಧೋನಿ ಈ ಬಾರಿ ಎಲ್ಲರಿಗಿಂತ ಬಹಳ ಚೆನ್ನಾಗಿ ಆಡುತ್ತಾರೆ. ಧೋನಿ ಬ್ಯಾಟ್ಸ್ ಮ್ಯಾನ್ ಆಗಿ ಹೆಚ್ಚು ಪ್ರಭಾವ ಬೀರುತ್ತಾರೆ. ಯಾವಾಗ ಸ್ಪಿನ್ನರ್ ಗಳು ಬೌಲ್ ಮಾಡುತ್ತಾರೋ ಆಗ ಧೋನಿ ಉತ್ತಮವಾಗಿ ಆಡುತ್ತಾರೆ. ನನಗೆ ನಂಬಿಕೆ ಇದೆ ಎಂಎಸ್ ಧೋನಿ ಈ ಬಾರಿಯ ಐಪಿಎಲ್ ಅನ್ನು ಆಳುತ್ತಾರೆ ಎಂದು ಅಂತಾ ಆಕಾಶ್ ಚೋಪ್ರಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈಗಾಗಲೇ ಚೆನ್ನೈ ತಂಡದ ಪ್ರಮುಖ ಇಬ್ಬರು ಆಟಗಾರಾದ ರೈನಾ ಮತ್ತು ಹರ್ಭಜನ್ ವೈಯಕ್ತಿಕ ಕಾರಣದಿಂದ ಐಪಿಎಲ್‍ನಿಂದ ಹೊರೆಗೆ ಬಂದಿದ್ದಾರೆ. ಅದರೂ ಚೆನ್ನೈ ತಂಡ ಬಲಿಷ್ಠವಾಗಿದೆ ಎಂದು ಚೋಪ್ರಾ ಹೇಳಿದ್ದಾರೆ. ಯುಎಇ ಮೈದಾನಗಳು ಸ್ಪಿನ್ನರ್ ಗೆ ಹೆಚ್ಚು ಸಹಾಯಕವಾಗಲಿದ್ದು, ಜಡೇಜಾ, ತಾಹೀರ್, ಚಾವ್ಲಾ ಉತ್ತಮವಾಗಿ ಸ್ಪಿನ್ ಮಾಡಲಿದ್ದಾರೆ ಎಂದು ಚೋಪ್ರಾ ತಿಳಿಸಿದ್ದಾರೆ.

  • ತಂದೆ ಮಗನನ್ನು ಬೈಯಬಹುದು – ಶ್ರೀನಿವಾಸನ್ ಹೇಳಿಕೆಗೆ ರೈನಾ ಪ್ರತಿಕ್ರಿಯೆ

    ತಂದೆ ಮಗನನ್ನು ಬೈಯಬಹುದು – ಶ್ರೀನಿವಾಸನ್ ಹೇಳಿಕೆಗೆ ರೈನಾ ಪ್ರತಿಕ್ರಿಯೆ

    ಚೆನ್ನೈ: ಒಬ್ಬ ತಂದೆ ಮಗನನ್ನು ಬೈಯಬಹುದು ಎಂದು ಹೇಳುವ ಮೂಲಕ ಸುರೇಶ್ ರೈನಾ ಅವರು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಲೀಕ ಶ್ರೀನಿವಾಸನ್ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

    ಐಪಿಎಲ್‍ಗಾಗಿ ಸಿದ್ಧತೆ ನಡೆಸಿದ್ದ ರೈನಾ, ಯುಎಇಗೆ ತೆರಳಿದ್ದರು. ಆದರೆ ಇದಕ್ಕಿದ್ದಂತೆ ಅಗಸ್ಟ್ 29ರಂದು ರೈನಾ ಭಾರತಕ್ಕೆ ವಾಪಸ್ ಬಂದಿದ್ದರು. ವೈಯಕ್ತಿಕ ಕಾರಣದಿಂದ ಐಪಿಎಲ್‍ನಿಂದ ಹೊರ ಹೋಗಿದ್ದಾರೆ ಎಂದು ಸಿಎಸ್‍ಕೆ ತಂಡ ಹೇಳಿತ್ತು. ಇದಾದ ಬಳಿಕ ಶ್ರೀನಿವಾಸನ್ ಅವರು, ಕೆಲ ವಿವಾದತ್ಮಾಕ ಹೇಳಿಕೆಗಳನ್ನು ಕೊಟ್ಟಿದ್ದರು.

    ಈಗ ಇದರ ಬಗ್ಗೆ ಖಾಸಗಿ ಕ್ರೀಡಾ ವಾಹಿನಿಯಲ್ಲಿ ಮಾತನಾಡಿರುವ ರೈನಾ, ಅವರು ನಮ್ಮ ತಂದೆಯಿದ್ದಂತೆ. ನಮಗೆ ಬಹಳ ಹತ್ತಿರದವರು. ಅವರು ನನ್ನನ್ನು ಕಿರಿಮಗನಂತೆ ನೋಡಿಕೊಳ್ಳುತ್ತಾರೆ. ಕೆಲ ಸಂದರ್ಭದಲ್ಲಿ ಬೇಸರವಾಗಿ ಮಾತನಾಡಿದ್ದಾರೆ. ಒಬ್ಬ ತಂದೆ ಮಗನನ್ನು ಬೈಯಬಹುದು ಅಲ್ಲವೆ. ನಾನು ಯುಎಇಯಿಂದ ಬರುವಾಗ ಅವರಿಗೆ ಏನೂ ಹೇಳಿ ಬಂದಿರಲಿಲ್ಲ. ಅದಕ್ಕಾಗಿ ಕೆಲ ಮಾತುಗಳನ್ನು ಆಡಿದ್ದಾರೆ. ನಂತರ ಅವರಿಗೆ ಮೆಸೇಜ್ ಮಾಡಿ ತಿಳಿಸಿದೆ. ಆಗ ಓಕೆ ಎಂದರು ಎಂದು ತಿಳಿಸಿದ್ದಾರೆ.

    ರೈನಾ ಅವರು ಐಪಿಎಲ್‍ನಿಂದ ಹೊರಬರುತ್ತಿದ್ದಂತೆ ಮಾತನಾಡಿದ್ದ ಶ್ರೀನಿವಾಸನ್, ಕೆಲವೊಮ್ಮೆ ಯಶಸ್ಸು ನಿಮ್ಮ ತಲೆಗೆ ಸೇರುತ್ತದೆ. ನಾನು ಯಾರನ್ನು ಏನನ್ನೂ ಮಾಡಲು ಒತ್ತಾಯಿಸುವುದಿಲ್ಲ. ಆದರೆ ನೀವು ಹಿಂಜರಿಯುತ್ತಿದ್ದರೆ ಅಥವಾ ಸಂತೋಷವಾಗಿದ್ದರೆ ಹಿಂತಿರುಗಿ ಎಂದು ಹೇಳಿದ್ದರು. ಇದಾದ ನಂತರ ರೈನಾ ಅವರು ಹೊರಕ್ಕೆ ಬರಲು ರೂಮ್ ವಿಚಾರದಲ್ಲಿ ಜಗಳವಾಗಿದ್ದೆ ಕಾರಣ ಎಂದು ಹೇಳಲಾಗಿತ್ತು. ಇದನ್ನು ಓದಿ: ಧೋನಿ ನನ್ನ ದೊಡ್ಡಣ್ಣನಂತೆ – ಕೊನೆಗೂ ಮೌನ ಮುರಿದ ರೈನಾ

    ಇದಾದ ನಂತರ ಮತ್ತೆ ಯೂಟರ್ನ್ ಹೊಡೆದಿದ್ದ ಶ್ರೀನಿವಾಸನ್, ಸಿಎಸ್‍ಕೆ ತಂಡಕ್ಕೆ ರೈನಾ ಅವರ ಕೊಡುಗೆ ಅದ್ಭುತವಾಗಿದೆ. ಸುರೇಶ್ ರೈನಾ ಅವರು ಇದೀಗ ಏನು ಮಾಡುತ್ತಿದ್ದಾರೆ ಎಂಬುವುದನ್ನು ಅರ್ಥ ಮಾಡಿಕೊಂಡು ಅವರಿಗೆ ಅವಕಾಶ ನೀಡುವುದು ಮುಖ್ಯ. ನಮ್ಮ ತಂಡದ ಆಟಗಾರರು ಒಂದೇ ಕುಟುಂಬದಂತೆ. ಕಳೆದ ಒಂದು ದಶಕದಿಂದ ಕುಟುಂಬವಾಗಿದ್ದೇವೆ ಎಂದು ಹೇಳಿದ್ದರು.

    ಐಪಿಎಲ್‍ನಿಂದ ಹೊರ ಬಂದಿದ್ದಕ್ಕೆ ಕಾರಣ ತಿಳಿಸಿರುವ ರೈನಾ, ಮಹಿಭಾಯ್ ನನ್ನ ದೊಡ್ಡಣ್ಣನಂತೆ. ಅವರೊಂದಿಗೆ ಭಿನ್ನಾಭಿಪ್ರಾಯವಿಲ್ಲ, ಇವೆಲ್ಲ ಕಟ್ಟುಕಥೆ ಎಂದಿದ್ದಾರೆ. ಜೊತೆಗೆ ನಾನು ಐಪಿಎಲ್‍ನಿಂದ ಹೊರಬರಲು ಕೊರೊನಾ ವೈರಸ್ ಕಾರಣ, ಸದ್ಯ ದುಬೈನಲ್ಲಿ ಪರಿಸ್ಥಿತಿ ಸರಿಯಿಲ್ಲ. ನನಗೆ ಕುಟುಂಬವಿದೆ. ಎರಡು ಮಕ್ಕಳು, ವಯಸ್ಸಾದ ಪೋಷಕರು ಇದ್ದಾರೆ. ಇದೆಲ್ಲದರ ನಡುವೆ ನಾನು ಅಲ್ಲಿ ಉಳಿಯಲು ಆಗಲಿಲ್ಲ ಎಂದು ರೈನಾ ಹೇಳಿದ್ದಾರೆ.

  • ಚೆನ್ನೈ ಯಾವಾಗಲೂ ರೈನಾರೊಂದಿಗೆ ನಿಲ್ಲುತ್ತದೆ- ಶ್ರೀನಿವಾಸನ್ ಯೂಟರ್ನ್

    ಚೆನ್ನೈ ಯಾವಾಗಲೂ ರೈನಾರೊಂದಿಗೆ ನಿಲ್ಲುತ್ತದೆ- ಶ್ರೀನಿವಾಸನ್ ಯೂಟರ್ನ್

    ಮುಂಬೈ: ನನ್ನ ಹೇಳಿಕೆಯನ್ನು ತಪ್ಪಾಗಿ ಆರ್ಥೈಸಲಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡ ಯಾವಾಗಲೂ ಸುರೇಶ್ ರೈನಾ ಪರ ನಿಲ್ಲುತ್ತದೆ ಎಂದು ಹೇಳಿದ್ದಾರೆ.

    ಮಾಧ್ಯಮವೊಂದರ ಜೊತೆ ಮಾತನಾಡಿರುವ ಚೆನ್ನೈ ತಂಡದ ಮಾಲೀಕ ಶ್ರೀನಿವಾಸನ್, ಸಿಎಸ್‍ಕೆ ತಂಡಕ್ಕೆ ರೈನಾ ಅವರ ಕೊಡುಗೆ ಅದ್ಭುತವಾಗಿದೆ. ಸುರೇಶ್ ರೈನಾ ಅವರು ಇದೀಗ ಏನು ಮಾಡುತ್ತಿದ್ದಾರೆ ಎಂಬುವುದನ್ನು ಅರ್ಥ ಮಾಡಿಕೊಂಡು ಅವರಿಗೆ ಅವಕಾಶ ನೀಡುವುದು ಮುಖ್ಯ ಎಂದಿದ್ದಾರೆ. ಇದನ್ನೂ ಓದಿ: ರೈನಾ ಬೆನ್ನಲ್ಲೇ ಚೆನ್ನೈಗೆ ಮತ್ತೊಂದು ಹಿನ್ನಡೆ- ಮತ್ತೊಬ್ಬ ಸ್ಟಾರ್ ಆಟಗಾರ ಟೂರ್ನಿಯಿಂದ ದೂರ?

    ನಮ್ಮ ತಂಡ ಆಟಗಾರರು ಒಂದೇ ಕುಟುಂಬದಂತೆ. ಕಳೆದ ಒಂದು ದಶಕದಿಂದ ಕುಟುಂಬವಾಗಿದ್ದೇವೆ. ನಾನು ಕ್ರಿಕೆಟಿಗರನ್ನು ಪ್ರೈಮಾ ಡೊನ್ನಾಗಳಂತೆ ಹೋಲಿಕೆ ಮಾಡಿದೆ. ಆದರೆ ಅದು ನಕಾರಾತ್ಮಕವಲ್ಲ. ಪ್ರೈಮಾ ಡೊನ್ನಾ ಪ್ರಮುಖ ಗಾಯಕರು, ಅದೇ ರೀತಿ ಕ್ರಿಕೆಟಿಗರು ಯಾವಾಗಲೂ ವ್ಯಾಯಾಮದಲ್ಲಿ ಮುಂಚೂಣಿಯಲ್ಲಿರುತ್ತಾರೆ ಎಂದು ಹೇಳಿದ್ದಾಗಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಅದರೇ ಇದನ್ನು ತಪ್ಪಾಗಿ ಉಲ್ಲೇಖಿಸಿದ್ದು ದುರದೃಷ್ಟಕರ ಎಂದಿದ್ದಾರೆ.

    ಐಪಿಎಲ್ ಟೂರ್ನಿ ಭಾರತದ ಹೆಮ್ಮೆ. ವಿಶ್ವದ ಅತಿದೊಡ್ಡ ಬ್ರಾಂಡ್ ಆಗಿ ರಫ್ತು ಎಂದು ಹೇಳಬಹುದು. ಐಪಿಎಲ್ ವಿಶ್ವದ ಅತಿದೊಡ್ಡ ಕ್ರೀಡಾ ಟೂರ್ನಿ ಎಂದು ಹೇಳಲು ನಾವು ತುಂಬಾ ಹೆಮ್ಮೆ ಪಡುತ್ತೇವೆ. ಏಕೆಂದರೆ ಕೇವಲ 13 ವರ್ಷಗಳಲ್ಲಿ ಅಷ್ಟು ದೊಡ್ಡ ಸಾಧನೆಯನ್ನು ಮಾಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೋಟೆಲ್ ರೂಮ್ ವಿಚಾರದಲ್ಲಿ ರೈನಾ ಕಿರಿಕ್- ಐಪಿಎಲ್ ತೊರೆಯಲು ಇದೇನಾ ಕಾರಣ?

  • ಸಿಎಸ್‍ಕೆ ಬದಲು ಐಪಿಎಲ್ ಆರಂಭಿಕ ಪಂದ್ಯದಲ್ಲಿ ಕಣಕ್ಕಿಳಿಯಲಿದ್ಯಾ ಆರ್‌ಸಿಬಿ?

    ಸಿಎಸ್‍ಕೆ ಬದಲು ಐಪಿಎಲ್ ಆರಂಭಿಕ ಪಂದ್ಯದಲ್ಲಿ ಕಣಕ್ಕಿಳಿಯಲಿದ್ಯಾ ಆರ್‌ಸಿಬಿ?

    ಅಬುಧಾಬಿ: ಐಪಿಎಲ್ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬದಲು ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಆಡಲಿದೆ ಎಂದು ಹೇಳಲಾಗಿದೆ.

    ಸೆಪ್ಟೆಂಬರ್ 19ರಿಂದ ಐಪಿಎಲ್ ಆರಂಭವಾಗಲಿದೆ. ವಾಡಿಕೆಯಂತೆ ಕಳೆದ ಐಪಿಎಲ್‍ನ ಫೈನಲ್‍ನಲ್ಲಿ ಮುಖಾಮುಖಿಯಾಗಿದ್ದ ಸಿಎಸ್‍ಕೆ ಮತ್ತು ಮುಂಬೈ ತಂಡದ ಈ ಟೂರ್ನಿಯ ಮೊದಲ ಪಂದ್ಯವನ್ನು ಆಡಬೇಕಿತ್ತು. ಆದರೆ ಸಿಎಸ್‍ಕೆ ತಂಡದ ಕೆಲ ಸಹಾಯಕ ಸಿಬ್ಬಂದಿ ಮತ್ತು ಇಬ್ಬರು ಆಟಗಾರರಿಗೆ ಕೊರೊನಾ ಬಂದ ಕಾರಣ ಚೆನ್ನೈ ತಂಡ ಮೊದಲ ಪಂದ್ಯವನ್ನು ಆಡಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.

    ಐಪಿಎಲ್‍ನ ಆರಂಭಿಕ ಪಂದ್ಯದಲ್ಲಿ ನಾಲ್ಕು ಬಾರಿ ಐಪಿಎಲ್ ಟ್ರೋಫಿ ಗೆದ್ದ ಮುಂಬೈ ತಂಡ ಮತ್ತು ಮೂರು ಬಾರಿ ಚಾಂಪಿಯನ್ ಆಗಿರುವ ಚೆನ್ನೈ ತಂಡವನ್ನು ಆಡಿಸಲು ಬಿಸಿಸಿಐ ತೀರ್ಮಾನ ಮಾಡಿತ್ತು. ಆದರೆ ಈ ನಡುವೆ ಈ ಪಂದ್ಯಕ್ಕೆ ಕೊರೊನಾ ಅಡ್ಡಗಾಲು ಹಾಕಿದ್ದು, ಸೆಪ್ಟೆಂಬರ್ 19ರೊಳಗೆ ಸಿಎಸ್‍ಕೆ ತಂಡದ ಆಟಗಾರರು ಸೋಂಕಿನಿಂದ ಹೊರಬರುವುದು ಡೌಟು ಎನ್ನಲಾಗಿದೆ. ಈ ಕಾರಣಕ್ಕೆ ಐಪಿಎಲ್‍ನಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಆರ್‌ಸಿಬಿ ತಂಡ ಆರಂಭಿಕ ಪಂದ್ಯವನ್ನು ಆಡಲಿದೆ ಎನ್ನಲಾಗಿದೆ.

    ಈ ವಿಚಾರವಾಗಿ ಬಿಸಿಸಿಐ ಉನ್ನತ ಮೂಲಗಳಿಂದ ಮಾಹಿತಿ ಹೊರಬಿದ್ದಿದ್ದು, ಈ ಬಾರಿ ಐಪಿಎಲ್ ಆರಂಭಿಕ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಣಕ್ಕಿಳಿಯುವುದು ಬಹುತೇಕ ಪಕ್ಕಾ ಆಗಿದೆ. ಮೊದಲ ಪಂದ್ಯದಲ್ಲಿ ಸ್ಟಾರ್ ಆಟಗಾರರು ಮೈದಾನಕ್ಕೆ ಇಳಿದರೆ, ಆಟದ ಕ್ರೇಜ್ ಜಾಸ್ತಿಯಾಗುತ್ತದೆ. ಒಂದು ಕಡೆ ರೋಹಿತ್ ಸಿದ್ಧವಾಗಿದ್ದಾರೆ. ಆದರೆ ಧೋನಿಯವರ ತಂಡ ಆಡುವುದು ಅನುಮಾನವಾಗಿದೆ. ಹೀಗಾಗಿ ಕೊಹ್ಲಿ ನೇತೃತ್ವದ ಆರ್‌ಸಿಬಿ ತಂಡವನ್ನು ಆಡಿಸಲು ತಯಾರಿ ನಡೆದಿದೆ ಎಂದು ತಿಳಿದು ಬಂದಿದೆ.

    ಸೆ.19ರ ವೇಳೆಗೆ ಚೆನ್ನೈ ತಂಡ ಪೂರ್ಣ ಪ್ರಮಾಣದಲ್ಲಿ ಕೊರೊನಾದಿಂದ ಚೇತರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಟೂರ್ನಿಯ ಶೆಡ್ಯೂಲ್‍ನಲ್ಲಿ ಸಣ್ಣ ಬದಲಾವಣೆ ಮಾಡಿ ಮೊದಲ ಪಂದ್ಯದಲ್ಲಿ ಆರ್‌ಸಿಬಿ ತಂಡವನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಲಾಗಿದೆ. ಇತ್ತ ಎರಡು ದಿನಗಳ ಅವಧಿಯಲ್ಲಿ ಚೆನ್ನೈ ತಂಡದಲ್ಲಿ 12 ಕೊರೊನಾ ಪ್ರಕರಣಗಳು ಪತ್ತೆಯಾಗಿವುದರಿಂದ ಮತ್ತಷ್ಟು ಪಾಸಿಟಿವ್ ಪ್ರಕರಣಗಳು ವರದಿಯಾಗುವ ನಿರೀಕ್ಷೆ ಇದೆ.

  • ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ- ಚಹರ್ ಕಮೆಂಟ್ ವೈರಲ್

    ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ- ಚಹರ್ ಕಮೆಂಟ್ ವೈರಲ್

    ನವದೆಹಲಿ: ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಲ್ಲ ಎಂದು ಸಿಎಸ್‍ಕೆ ತಂಡದ ವೇಗಿ ದೀಪಕ್ ಚಹರ್ ಈ ಹಿಂದೆ ಮಾಡಿದ್ದ ಕಮೆಂಟ್ ವೈರಲ್ ಆಗಿದೆ.

    ಶುಕ್ರವಾರವಷ್ಟೇ ಯುಎಇಯಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ದೀಪಕ್ ಚಹರ್ ಗೆ ಕೊರೊನಾ ಪಾಸಿಟಿವ್ ಬಂದಿತ್ತು. ಇವರ ಜೊತೆ ತಂಡದ 10 ಸಹಾಯಕ ಸಿಬ್ಬಂದಿಗೂ ಕೊರೊನಾ ವೈರಸ್ ತಗುಲಿದ್ದು, ಮಾಸ್ಕ್ ಬಗ್ಗೆ ಚಹರ್ ಈ ಹಿಂದೆ ಮಾಡಿದ್ದ ಇನ್‍ಸ್ಟಾ ಕಮೆಂಟ್ ಈಗ ವೈರಲ್ ಆಗಿದೆ.

    ಯುಎಇಗೆ ಹೊರಡುವ ಮುನ್ನಾ ದೀಪಕ್ ಚಹರ್ ಅವರು, ಮಾಸ್ಕ್ ಧರಿಸದೆ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳದೇ ಸಿಎಸ್‍ಕೆ ಇತರ ಆಟಗಾರರ ಜೊತೆ ಸೆಲ್ಫಿ ತೆಗೆದುಕೊಂಡಿದ್ದರು. ಈ ಫೋಟೋವನ್ನು ಚಹರ್ ಅವರು, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿಕೊಂಡಿದ್ದರು. ಇದಕ್ಕೆ ಸ್ವತಃ ಅವರ ಸಹೋದರ ರಾಹುಲ್ ಚಹರ್ ಅವರು, ನಿಮ್ಮ ಮಾಸ್ಕ್ ಎಲ್ಲಿ ಸಹೋದರ, ಸಾಮಾಜಿಕ ಅಂತರ ಎಲ್ಲಿ ಎಂದು ಕಮೆಂಟ್ ಮಾಡಿದ್ದರು.

    ಸಹೋದರನ ಕಮೆಂಟ್‍ಗೆ ಪ್ರತಿಕ್ರಿಯೆ ಕೊಟ್ಟಿದ್ದ ಚಹರ್, ನಾನು ಎರಡು ಸಲ ಕೊರೊನಾ ಟೆಸ್ಟ್ ಮಾಡಿಸಿದ್ದೇನೆ ಅದರಲ್ಲಿ ನೆಗೆಟಿವ್ ಬಂದಿದೆ ಸಹೋದರ. ನಾವು ಕುಟುಂಬದ ಜೊತೆ ಇದ್ದಾಗ ಮಾಸ್ಕ್ ಹಾಕಿಕೊಳ್ಳಲ್ಲ ಎಂದಿದ್ದರು. ಈಗ ಅವರಿಗೇ ಯುಎಇಗೆ ತೆರಳಿದ ನಂತರ ಕೊರೊನಾ ಪಾಸಿಟಿವ್ ಬಂದಿದ್ದು, ಈಗ ಈ ಕಮೆಂಟ್ ವೈರಲ್ ಆಗಿದೆ. ಇದನ್ನೇ ಇಟ್ಟುಕೊಂಡು ನೆಟ್ಟಿಗರು ಚಹರ್ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.

    ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.

  • ರೈನಾ ಸೋದರತ್ತೆ ಕುಟುಂಬದ ಮೇಲೆ ದಾಳಿಕೋರರಿಂದ ಹಲ್ಲೆ – ಸೋದರ ಮಾವ ಸಾವು

    ರೈನಾ ಸೋದರತ್ತೆ ಕುಟುಂಬದ ಮೇಲೆ ದಾಳಿಕೋರರಿಂದ ಹಲ್ಲೆ – ಸೋದರ ಮಾವ ಸಾವು

    – ಸೋದರತ್ತೆ, ಮಕ್ಕಳಿಬ್ಬರು ಗಂಭೀರ ಸ್ಥಿತಿ

    ನವದೆಹಲಿ: ಭಾರತದ ಮಾಜಿ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರ ಸೋದರತ್ತೆಯ ಕುಟುಂಬದ ಮೇಲೆ ದಾಳಿಕೋರರು ಹಲ್ಲೆ ಮಾಡಿದ್ದು, ಸೋದರಮಾವ ಸಾವನ್ನಪ್ಪಿದ್ದಾರೆ.

    ಸುರೇಶ್ ರೈನಾ ಅವರು ಐಪಿಎಲ್-2020ಯಲ್ಲಿ ಭಾಗವಹಿಸಲು ಆಗಸ್ಟ್ 21ರಂದು ಯುಎಇಗೆ ಹೋಗಿದ್ದರು. ಇದರ ನಡುವೆ ಅವರ ಸೋದರಮಾವ ಸಾವನ್ನಪ್ಪಿರುವ ವಿಚಾರ ತಿಳಿದು ಈಗ ವಾಪಸ್ ಆಗಲಿದ್ದಾರೆ. ಈ ಮೂಲಕ ಐಪಿಎಲ್ ಟೂರ್ನಿಯಿಂದಲೇ ರೈನಾ ಅವರು ಹೊರಬಂದಿದ್ದಾರೆ.

    ರಾಷ್ಟ್ರೀಯ ಮಾಧ್ಯಮದ ವರದಿಯ ಪ್ರಕಾರ, ಪಂಜಾಬ್‍ನ ಪಠಾಣ್‍ಕೋಟ್‍ನ ತರಿಯಾಲ್ ಗ್ರಾಮದಲ್ಲಿ ವಾಸವಿರುವ ರೈನಾ ಅವರ ಸೋದರತ್ತೆ ಕುಟುಂಬ ತಮ್ಮ ಮನೆಯ ಮಹಡಿ ಮೇಲೆ ಮಲಗಿತ್ತು. ಈ ವೇಳೆ ಅವರ ಮೇಲೆ ಅಪರಿಚಿತ ದಾಳಿಕೋರರು ಮಾರಾಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ಅವರ ಸೋದರ ಮಾವ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದ ಮನೆಯ ಎಲ್ಲ ಸದಸ್ಯರು ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

    ರೈನಾ ಅವರ ತಂದೆಯ ಸಹೋದರಿ ಆಶಾ ದೇವಿಯವರ ಸ್ಥಿತಿ ಗಂಭೀರವಾಗಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮತ್ತೊಂದೆಡೆ ಅವರ ಚಿಕ್ಕಪ್ಪ, 58 ವರ್ಷದ ಅಶೋಕ್ ಕುಮಾರ್ ಅವರು ದಾಳಿಯಲ್ಲಿ ಮೃತಪಟ್ಟಿದ್ದಾರೆ. ರೈನಾರ ಅತ್ತೆ ಮತ್ತು ಅತ್ತೆಯ ಮಕ್ಕಳಾದ 32 ವರ್ಷದ ಕೌಶಲ್ ಕುಮಾರ್ ಮತ್ತು 24 ವರ್ಷದ ಅಪಿನ್ ಕುಮಾರ್ ಕೂಡ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

    ರೈನಾ ಅವರ ವಿಚಾರವಾಗಿ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಚೆನ್ನೈ ತಂಡದ ಸಿಇಓ ವಿಶ್ವನಾಥನ್, ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ವಾಪಸ್ ಹೋಗುತ್ತಿದ್ದಾರೆ ಮತ್ತು ಮುಂದೆ ಆರಂಭವಾಗುವ ಐಪಿಎಲ್ ಟೂರ್ನಿಯಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುರೇಶ್ ರೈನಾ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದಿದ್ದರು.

    ಶುಕ್ರವಾರಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಹರ್ ಅವರು ಸೇರಿದಂತೆ ಕೆಲ ಸಹಾಯ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿತ್ತು. ಇದರಿಂದ ಶುಕ್ರವಾರದಿಂದ ಅಭ್ಯಾಸವನ್ನು ಆರಂಭ ಮಾಡಬೇಕಿದ್ದ ಚೆನ್ನೈ ತಂಡ ಸೆಪ್ಟೆಂಬರ್ 1ರವರೆಗೆ ಕ್ವಾರಂಟೈನ್‍ನಲ್ಲಿ ಇರಲು ತೀರ್ಮಾನ ಮಾಡಿತ್ತು. ಇದರ ನಡುವೆ ರೈನಾ ಕೂಡ ಹೊರಗೆ ಬಂದಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

  • ಸಿಎಸ್‍ಕೆ ತಂಡಕ್ಕೆ ಬಿಗ್ ಶಾಕ್ – ಐಪಿಎಲ್‍ನಿಂದ ಹೊರಬಂದ ರೈನಾ

    ಸಿಎಸ್‍ಕೆ ತಂಡಕ್ಕೆ ಬಿಗ್ ಶಾಕ್ – ಐಪಿಎಲ್‍ನಿಂದ ಹೊರಬಂದ ರೈನಾ

    ಅಬುಧಾಬಿ: ಐಪಿಎಲ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ದೊಡ್ಡ ಅಘಾತವೊಂದು ಎದುರಾಗಿದೆ. ತಂಡದ ಅನುಭವಿ ಮತ್ತು ಸ್ಟಾರ್ ಆಟಗಾರ ಸುರೇಶ್ ರೈನಾ ಐಪಿಎಲ್ ಟೂರ್ನಿಯಿಂದ ಹೊರಬಂದಿದ್ದಾರೆ.

    ಈಗಾಗಲೇ ಯುಎಇಯಲ್ಲಿರುವ ಚೆನ್ನೈ ತಂಡದ ವೇಗಿ ದೀಪಕ್ ಚಹರ್ ಮತ್ತು ತಂಡದ ಕೆಲ ಸಹಾಯ ಸಿಬ್ಬಂದಿಗೆ ಕೊರೊನಾ ಬಂದು ಸುದ್ದಿಯಾಗಿತ್ತು. ಈಗ ಸುರೇಶ್ ರೈನಾ ಅವರು ತಮ್ಮ ವೈಯಕ್ತಿಕ ಕಾರಣದಿಂದ ಭಾರತಕ್ಕೆ ವಾಪಸ್ ಬರುತ್ತಿದ್ದಾರೆ ಮತ್ತು ಐಪಿಎಲ್‍ನಲ್ಲಿ ಅಲಭ್ಯರಾಗಲಿದ್ದಾರೆ ಎಂದು ಸ್ವತಃ ಚೆನ್ನೈ ತಂಡವೇ ಹೇಳಿಕೊಂಡಿದೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಚೆನ್ನೈ ತಂಡದ ಸಿಇಓ ವಿಶ್ವನಾಥನ್, ಸುರೇಶ್ ರೈನಾ ಅವರು ವೈಯಕ್ತಿಕ ಕಾರಣಗಳಿಗಾಗಿ ಭಾರತಕ್ಕೆ ವಾಪಸ್ ಹೋಗುತ್ತಿದ್ದಾರೆ ಮತ್ತು ಮುಂದೆ ಆರಂಭವಾಗುವ ಐಪಿಎಲ್ ಟೂರ್ನಿಯಲ್ಲಿ ಅವರು ಲಭ್ಯವಿರುವುದಿಲ್ಲ. ಈ ಸಮಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಸುರೇಶ್ ರೈನಾ ಮತ್ತು ಅವರ ಕುಟುಂಬಕ್ಕೆ ಸಂಪೂರ್ಣ ಬೆಂಬಲವನ್ನು ನೀಡುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.

    ಶುಕ್ರವಾರಷ್ಟೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ವೇಗಿ ದೀಪಕ್ ಚಹರ್ ಅವರು ಸೇರಿದಂತೆ ಕೆಲ ಸಹಾಯ ಸಿಬ್ಬಂದಿಗೆ ಕೊರೊನಾ ಪಾಸಿಟವ್ ಬಂದಿತ್ತು. ಇದರಿಂದ ಶುಕ್ರವಾರದಿಂದ ಅಭ್ಯಾಸವನ್ನು ಆರಂಭ ಮಾಡಬೇಕಿದ್ದ ಚೆನ್ನೈ ತಂಡ ಸೆಪ್ಟೆಂಬರ್ 1ರವರೆಗೆ ಕ್ವಾರಂಟೈನ್‍ನಲ್ಲಿ ಇರಲು ತೀರ್ಮಾನ ಮಾಡಿತ್ತು. ಇದರ ನಡುವೆ ವೈಯಕ್ತಿಕ ಕಾರಣದಿಂದ ರೈನಾ ಕೂಡ ಹೊರಗೆ ಬಂದಿರುವುದು ತಂಡಕ್ಕೆ ದೊಡ್ಡ ಹೊಡೆತ ಬಿದ್ದಿದೆ.

    ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಗಸ್ಟ್ 21ರಂದೇ ಯುಎಇಗೆ ತೆರಳಿತ್ತು. ಎಂದಿನಂತೆ ಎಲ್ಲ ಆಟಗಾರರಿಗೆ ಭಾರತದಲ್ಲೂ ಕೂಡ ಒಂದು ಬಾರಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಅಂತೆಯೇ ಯುಎಇಗೆ ತೆರಳಿದ ತಂಡ ಅಲ್ಲಿ ಆರು ದಿನಗಳ ಕಾಲ ಕ್ವಾರಂಟೈನ್‍ಗೆ ಒಳಗಾಗಿತ್ತು. ಶುಕ್ರವಾರಕ್ಕೆ ಆ ಅವಧಿ ಮುಗಿಯಲಿದ್ದು, ಚೆನ್ನೈ ತಂಡ ಅಭ್ಯಾಸ ನಡೆಸಬೇಕಿತ್ತು. ಆದರೆ ಕೊರೊನಾ ಟೆಸ್ಟ್ ನಲ್ಲಿ ತಂಡದ ಸದಸ್ಯರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಹೀಗಾಗಿ ತಂಡ ಸೆಪ್ಟೆಂಬರ್ 1ರಿಂದ ಅಭ್ಯಾಸ ಆರಂಭಿಸಲಿದೆ.

  • ಆಗಸ್ಟ್‌ 15ಕ್ಕೆ ನಾವಿಬ್ಬರು ನಿವೃತ್ತಿ ಹೇಳಿದ್ದು ಯಾಕೆ – ರಿವೀಲ್‌ ಮಾಡಿದ್ರು ರೈನಾ

    ಆಗಸ್ಟ್‌ 15ಕ್ಕೆ ನಾವಿಬ್ಬರು ನಿವೃತ್ತಿ ಹೇಳಿದ್ದು ಯಾಕೆ – ರಿವೀಲ್‌ ಮಾಡಿದ್ರು ರೈನಾ

    ಚೆನ್ನೈ: ನಾನು ಮತ್ತು ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್‌ ಧೋನಿ ಸ್ವಾತಂತ್ರ್ಯ ದಿನಾಚರಣೆಯ ದಿನವೇ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಹೇಳಿದ್ದು ಯಾಕೆ ಎಂದು ಎಡಗೈ ಬ್ಯಾಟ್ಸ್‌ಮನ್‌ ಸುರೇಶ್‌ ರೈನಾ ಈಗ ಬಹಿರಂಗಪಡಿಸಿದ್ದಾರೆ.

    ಈ ವಿಚಾರದ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಸುರೇಶ್‌ ರೈನಾ ನಾವಿಬ್ಬರು ಮೊದಲೇ ನಿರ್ಧರಿಸಿ ಆಗಸ್ಟ್‌ 15 ರಂದು ನಿವೃತ್ತಿ ಘೋಷಣೆ ಮಾಡುವ ತೀರ್ಮಾನ ತೆಗೆದುಕೊಂಡಿದ್ದೆವು ಎಂದು ತಿಳಿಸಿದ್ದಾರೆ.

    ಧೋನಿ ಜೆರ್ಸಿ ನಂಬರ್‌ 7, ನನ್ನದು 3. ಇಬ್ಬರ ನಂಬರ್‌ ಸೇರಿದರೆ 73 ಆಗುತ್ತದೆ. ಆಗಸ್ಟ್‌ 15ರಂದು ಸ್ವಾತಂತ್ರ್ಯ ಸಿಕ್ಕಿ ನಮಗೆ 73 ವರ್ಷ ಪೂರ್ಣಗೊಳ್ಳುತ್ತದೆ. ಈ ದಿನ ಬಿಟ್ಟರೆ ಬೇರೆ ಉತ್ತಮ ದಿನ ಇಲ್ಲ ಎಂದು ತೀರ್ಮಾನಿಸಿ ನಿವೃತ್ತಿ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

    ಇಬ್ಬರು ಆಟಗಾರು ಒಂದೇ ಸಮಯದಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ ನಲ್ಲಿ ಆಡುತ್ತಿದ್ದರು. ಅಷ್ಟೇ ಅಲ್ಲದೇ ಚೆನ್ನೈ ತಂಡದ ಪರ ಮೊದಲಿನಿಂದಲೂ ಆಡುತ್ತಾ ಬಂದಿದ್ದಾರೆ. ಇದನ್ನೂ ಓದಿ: ಯಾರಿಗೆ ಸಿಗಲಿದೆ ಧೋನಿಯ ನಂ.7 ಜೆರ್ಸಿ?

    ಧೋನಿ 2004ರ ಡಿಸೆಂಬರ್‌ 23 ರಂದು ಬಾಂಗ್ಲಾ ವಿರುದ್ಧ ಮೊದಲ ಪಂದ್ಯವಾಡಿದ್ದರೆ ನಾನು 2005ರ ಜುಲೈ 30 ರಂದು ಶ್ರೀಲಂಕಾ ವಿರುದ್ಧ ಮೊದಲ ಪಂದ್ಯವನ್ನು ಆಡಿದ್ದೆ. ನಾವಿಬ್ಬರು ಒಟ್ಟಾಗಿ ಅಂತರಾಷ್ಟ್ರೀಯ ಕ್ರಿಕೆಟ್‌ ಆಡುತ್ತಿದ್ದೆವು. ಈಗಲೂ ಚೆನ್ನೈ ತಂಡದಲ್ಲಿ ಆಡುತ್ತಿದ್ದೇವೆ. ಹೀಗಾಗಿ ಜೊತೆಯಾಗಿ ನಿವೃತ್ತಿ ಹೇಳಿ ಜೊತೆಯಾಗಿ ಐಪಿಎಲ್‌ ಆಡುತ್ತಿದ್ದೇವೆ ಎಂದು ವಿವರಿಸಿದರು.

    ಸುರೇಶ್‌ ರೈನಾ ಆಗಸ್ಟ್‌ 15 ರಂದು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಮಾಡಿ ನಿವೃತ್ತಿ ಹೇಳಿದ್ದರು. ಆಗಸ್ಟ್‌ 16 ರಂದು ಶಿಷ್ಟಾಚಾರದ ಪ್ರಕಾರ ಬಿಸಿಸಿಐಗೆ ಈ ವಿಚಾರವನ್ನು ತಿಳಿಸಿದ್ದರು. ಧೋನಿ ಶಿಷ್ಟಾಚಾರವನ್ನು ಪಾಲಿಸಿದ್ದು ಶನಿವಾರ ಸಂಜೆ 6:29ಕ್ಕೆ ಬಿಸಿಸಿಐ ತಿಳಿಸಿ ಬಳಿಕ ಇನ್‌ಸ್ಟಾಗ್ರಾಮ್‌ನಲ್ಲಿ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದರು.

  • ಧೋನಿ 4ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ: ಮೈಕ್ ಹಸ್ಸಿ

    ಧೋನಿ 4ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ: ಮೈಕ್ ಹಸ್ಸಿ

    – ಸಿಎಸ್‍ಕೆ ತಂಡದ ಸಕ್ಸಸ್ ಮಂತ್ರ ಬಿಚ್ಚಿಟ್ಟ ಕೋಚ್

    ಮುಂಬೈ: ಭಾರತದ ಮಾಜಿ ನಾಯಕ ಎಂಎಸ್ ಧೋನಿಯವರು ಐಪಿಎಲ್‍ನಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ಯಾಂಟಿಗ್ ಕೋಚ್ ಮೈಕ್ ಹಸ್ಸಿ ಹೇಳಿದ್ದಾರೆ.

    ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿಎಸ್‍ಕೆ ತಂಡದ ಬಗ್ಗೆ ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಇದೇ ವೇಳೆ ನಾನು ಯುಎಇ ಕ್ರಿಕೆಟ್ ಮೈದಾನದಲ್ಲಿ ಜನರಿಲ್ಲದೇ ನಡೆಯುವ ಐಪಿಎಲ್ ಪಂದ್ಯಗಳನ್ನು ನೋಡಲು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಜೊತಗೆ ಯುಎಇನ ಪರಿಸ್ಥಿತಿಗೆ ಆಟಗಾರರು ಹೇಗೆ ಹೊಂದಿಕೊಳ್ಳುತ್ತಾರೆ ನೋಡಬೇಕು ಎಂದು ಹೇಳಿದ್ದಾರೆ.

    ಇದೇ ವೇಳೆ ಸಿಎಸ್‍ಕೆ ತಂಡದ ಬ್ಯಾಟಿಂಗ್ ಬಲದ ಬಗ್ಗೆ ಮಾತನಾಡಿರುವ ಹಸ್ಸಿ, ನಮ್ಮ ತಂಡಕ್ಕೆ ಬ್ಯಾಂಟಿಗ್ ಬಲ ಬಹಳ ಇದೆ. ಜೊತೆಗೆ ನಾವು ಬಹಳ ಬ್ಯಾಲೆನ್ಸ್ ಆಗಿರುವ ಆಟಗಾರರನ್ನು ಹೊಂದಿದ್ದೇವೆ. ನಮ್ಮ ತಂಡ ಎಲ್ಲ ವಿಭಾಗದಿಂದಲೂ ಬಹಳ ಬಲಿಷ್ಠವಾಗಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಟೀಂನ ಸಕ್ಸಸ್ ಮಂತ್ರದ ಬಗ್ಗೆ ಮಾತನಾಡಿದ ಹಸ್ಸಿ, ನಮ್ಮ ತಂಡ ಯಶಸ್ಸಿಗೆ ಒಂದು ನಿರ್ದಿಷ್ಟ ಮಂತ್ರ ಎಂದು ಇಲ್ಲ. ಆದರೆ ನಾವು ಎಲ್ಲರೂ ಸೇರಿ ಒಗ್ಗಟ್ಟಿನಿಂದ ಆಡುತ್ತೇವೆ. ಜೊತೆಗೆ ಆಟಗಾರ ಉತ್ತಮವಾಗಿ ಆಡಲು ನೆರವಾಗುವ ಪರಿಸರವನ್ನು ನಾವು ಕ್ರಿಯೇಟ್ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ಧೋನಿಯವರು ಯಾವ ಕ್ರಮಾಂಕದಲ್ಲಿ ಆಡಿದರೆ ಬೆಸ್ಟ್ ಎಂಬ ಪ್ರಶ್ನೆಗೆ ಉತ್ತರಿಸಿದ ಹಸ್ಸಿ, ಧೋನಿ 4ನೇ ಕ್ರಮಾಂಕದಲ್ಲಿ ಆಡುವುದು ಸೂಕ್ತ. ಆದರೆ ಮಿಡಲ್ ಆರ್ಡರ್ ಬ್ಯಾಟಿಂಗ್‍ನಲ್ಲಿ ನಾವು ಸಮಯಕ್ಕೆ ತಕ್ಕ ಕೆಲ ಬದಲವಾಣೆಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಬಿಸಿಸಿಐ ಸೂಚಿಸಿರುವ ಮಾರ್ಗ ಸೂಚಿಯ ಬಗ್ಗೆ ಮಾತನಾಡಿದ ಹಸ್ಸಿ, ನಾವು ನಿಯಮಗಳನ್ನು ಪಾಲನೆ ಮಾಡಲೇಬೇಕು. ಅದು ನಮಗೆ ಉಪಯುಕ್ತವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಕಳೆದ ಮಾರ್ಚ್ ತಿಂಗಳಲ್ಲೇ ನಡೆಯಬೇಕಿದ್ದ ಐಪಿಎಲ್-2020 ಕೊರೊನಾ ವೈರಸ್ ಕಾರಣದಿಂದ ಮುಂದಕ್ಕೆ ಹೋಗಿತ್ತು. ಈಗ ಮುಂದಿನ ತಿಂಗಳು 19ರಿಂದ ಐಪಿಎಲ್ ಅನ್ನು ಯುಎಇಯಲ್ಲಿ ಆರಂಭ ಮಾಡಲು ಬಿಸಿಸಿಐ ತೀರ್ಮಾನ ಮಾಡಿದೆ. ಅದರಂತೆ ಎಲ್ಲ ತಂಡಗಳು ಈಗಾಗಲೇ ತಯಾರಿ ನಡೆಸುತ್ತಿವೆ. ಎಲ್ಲ ಆಟಗಾರರಿಗೂ ಕೊರೊನಾ ಟೆಸ್ಟ್ ಮಾಡಿಸಲಿದ್ದು, ನೆಗೆಟಿವ್ ವರದಿ ಬಂದ ಆಟಗಾರರು ಐಪಿಎಲ್ ಆಡಲು ಯುಎಇಗೆ ತೆರಳಲಿದ್ದಾರೆ.

  • ‘ಹುತಾತ್ಮ ಯೋಧರ ಶವಪೆಟ್ಟಿಗೆಯಲ್ಲಿ ಪ್ರಧಾನಿ ಕೇರ್ಸ್ ಸ್ಟಿಕ್ಕರ್‌ಗಳಿವೆಯೇ ಪರಿಶೀಲಿಸಿ’ -ಸಿಎಸ್‍ಕೆ ವೈದ್ಯ ಕಿಕೌಟ್

    ‘ಹುತಾತ್ಮ ಯೋಧರ ಶವಪೆಟ್ಟಿಗೆಯಲ್ಲಿ ಪ್ರಧಾನಿ ಕೇರ್ಸ್ ಸ್ಟಿಕ್ಕರ್‌ಗಳಿವೆಯೇ ಪರಿಶೀಲಿಸಿ’ -ಸಿಎಸ್‍ಕೆ ವೈದ್ಯ ಕಿಕೌಟ್

    ಚೆನ್ನೈ: ಲಡಾಕ್‍ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಈ ಕುರಿತು ಐಪಿಎಲ್ ಫ್ರ್ಯಾಂಚೈಸ್ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ)ಯ ಡಾ.ಮಧು ತೊಟ್ಟಪ್ಪಿಲಿಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಒಂದು ಕಡೆ ದೇಶ ಹುತಾತ್ಮರಿಗೆ ಗೌರವ ಸಲ್ಲಿಸುತ್ತಿದೆ. ಇದೇ ಸಮಯದಲ್ಲಿ ಡಾ.ಮಧು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿ ಟ್ವೀಟ್ ಮಾಡಿದ್ದಾರೆ. “ಶವಪೆಟ್ಟಿಗೆಯಲ್ಲಿ ಪ್ರಧಾನಿ ಕೇರ್ಸ್ ಸ್ಟಿಕ್ಕರ್‌ಗಳು ಇವೆಯೇ ಎಂದು ತಿಳಿಯಲು ನನಗೆ ಕುತೂಹಲವಿದೆ” ಎಂದು ಡಾ.ಮಧು ತೊಟ್ಟಪ್ಪಿಲಿಲ್ ಬರೆದುಕೊಂಡಿದ್ದಾರೆ. ಈ ಹಿನ್ನೆಲೆ ಸಿಎಸ್‍ಕೆ ತಕ್ಷಣಕ್ಕೆ ಜಾರಿಗೆ ಬರುವಂತೆ ತಂಡದಿಂದ ಅವರನ್ನು ಅಮಾನತುಗೊಳಿಸಿದೆ.

    ಸಿಎಸ್‍ಕೆ ವಿಷಾದ:
    ಡಾ.ಮಧು ತೊಟ್ಟಪಿಲಿಲ್ ಟ್ವೀಟ್‍ನಿಂದಾಗಿ ನೆಟ್ಟಿಗರು ಅಸಮಾಧಾನ ಹೊರಹಾಕಿದು. ಹೀಗಾಗಿ ತಕ್ಷಣವೇ ಸಿಎಸ್‍ಕೆ ಕ್ರಮ ಕೈಗೊಂಡು ವೈದ್ಯರನ್ನು ಅಮಾನತುಗೊಳಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಚೆನ್ನೈ ಸೂಪರ್ ಕಿಂಗ್ಸ್, “ಡಾ.ಮಧು ಅವರ ವೈಯಕ್ತಿಕ ಟ್ವೀಟ್ ವಿಚಾರ ನಮಗೆ ತಿಳಿದಿರಲಿಲ್ಲ. ಅವರನ್ನು ತಂಡದ ವೈದ್ಯರ ಹುದ್ದೆಯಿಂದ ಅಮಾನತುಗೊಳಿಸಲಾಗಿದೆ. ಮ್ಯಾನೇಜ್ಮೆಂಟ್‍ಗೆ ಹೇಳದೆ ಅವರು ಮಾಡಿದ ಟ್ವೀಟ್‍ಗೆ ಸಿಎಸ್‍ಕೆ ವಿಷಾದಿಸುತ್ತದೆ” ಎಂದು ತಿಳಿಸಿದೆ.

    ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 2010, 2011 ಮತ್ತು 2018ರಲ್ಲಿ ಐಪಿಎಲ್ ಪ್ರಶಸ್ತಿಯನ್ನು ಗೆದ್ದಿದೆ. ಟೂರ್ನಿಯಲ್ಲಿ ಒಟ್ಟು 190 ಪಂದ್ಯಗಳನ್ನು ಆಡಿರುವ ಎಂ.ಎಸ್.ಧೋನಿ 4,432 ರನ್ ಗಳಿಸಿದ್ದಾರೆ.