Tag: cultural program

  • ಮಹಾಬಲಿಪುರಂನಲ್ಲಿ ವಿಶ್ವದ ಮಹಾನ್ ನಾಯಕರ ಸಂಗಮ

    ಮಹಾಬಲಿಪುರಂನಲ್ಲಿ ವಿಶ್ವದ ಮಹಾನ್ ನಾಯಕರ ಸಂಗಮ

    ಚೆನ್ನೈ: ಅಮೆರಿಕದಲ್ಲಿ ಕಳೆದ ತಿಂಗಳು ಡೊನಾಲ್ಡ್ ಟ್ರಂಪ್ ಜೊತೆ ಸೇರಿ ಹೌಡಿ ಮೋದಿ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಮಿಳುನಾಡಿನ ದೇಗುಲ ನಗರಿ ಮಹಾಬಲಿಪುರಂನಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್‍ಗೆ ಸ್ನೇಹ ಹಸ್ತ ಚಾಚಿದ್ದಾರೆ.

    ತಮಿಳುನಾಡಿನ ಸಾಂಪ್ರದಾಯಿಕ ಧರಿಸು ಬಿಳಿ ಪಂಚೆ, ಬಿಳಿ ಅಂಗಿ, ಶಲ್ಯ ಧರಿಸಿದ್ದ ಮೋದಿ, ಜಿನ್‍ಪಿಂಗ್ ಅವರಿಗೆ ಆತ್ಮೀಯ ಸ್ವಾಗತ ಕೋರಿದರು. ಆರಾಮಾಗಿ ಸುತ್ತಾಡುತ್ತಾ ಪಲ್ಲವರ ಕಾಲದ ದೇಗುಲಗಳ ಪರಿಚಯ ಮಾಡಿಕೊಟ್ಟರು. ಮಹಾಭಾರತದ ಅರ್ಜುನ ತಪಸ್ಸು ಮಾಡಿದ್ದ ಸ್ಥಳ, ಒಂದೆಕಲ್ಲಿನಲ್ಲಿ ಕೆತ್ತಿದ ಪಂಚ ರಥ, ಹೀಗೆ ಹಲವು ಸ್ಥಳಗಳ ಮಹಿಮೆಯನ್ನು ವಿವರಿಸಿದರು. ಜೊತೆಯಲ್ಲೇ ಎಳನೀರು ಕುಡಿದರು. ಇದನ್ನೂ ಓದಿ: ಪಂಚೆ, ಶರ್ಟಿನಲ್ಲಿ ಮಿಂಚಿದ ಪ್ರಧಾನಿ ಮೋದಿ

    ಪ್ರಧಾನಿ ಮೋದಿ ಜಿನ್‍ಪಿಂಗ್ ಅವರೊಂದಿಗೆ ಸಮುದ್ರ ತೀರದಲ್ಲಿ ವಿಹರಿಸಿದರು. ಈ ವೇಳೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿ ಆನಂದಿಸಿದರು. ನಂತರ ಜಿನ್‍ಪಿಂಗ್ ಪ್ರವಾಸದ ಗೌರವಾರ್ಥ ಪ್ರಧಾನಿ ಮೋದಿ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟದಲ್ಲಿ ಚೆಟ್ಟಿನಾಡ್, ಕರೈಕುಡಿಯ ಸಾಂಪ್ರದಾಯಿಕ ತಿನಿಸುಗಳನ್ನು ಚೀನಾ ಅಧ್ಯಕ್ಷರಿಗೆ ಉಣಬಡಿಸಲಾಯಿತು.

    ಇದಕ್ಕೂ ಮುನ್ನ ಶುಕ್ರವಾರ ಮಧ್ಯಾಹ್ನ 1.45ಕ್ಕೆ ಚೆನ್ನೈಗೆ ಬಂದಿಳಿದ ಚೀನಾ ಅಧ್ಯಕ್ಷ ಕ್ಸಿ ಜಿನ್‍ಪಿಂಗ್‍ಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಶನಿವಾರ ಬೆಳಗ್ಗೆ ಇಬ್ಬರು ವಿಶ್ವ ದಿಗ್ಗಜರ ನಡುವೆ ಸಭೆ ನಡೆಯಲಿದೆ. ಈ ವೇಳೆ ಭಯೋತ್ಪಾದನೆ ದಮನ, ರಕ್ಷಣಾ ವ್ಯವಹಾರ, ಗಡಿ ವಿವಾದದ ಬಗ್ಗೆ ಪ್ರಮುಖವಾಗಿ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಈ ನಡುವೆ ಚೀನಾ ಆಕ್ರಮಿಸಿರುವ ಪಿಓಕೆಯ 5,000 ಕಿಲೋಮೀಟರ್ ಭೂಭಾಗವನ್ನು ಬಿಟ್ಟು ತೆರಳುವಂತೆ ಕ್ಸಿ ಜಿನ್‍ಪಿಂಗ್‍ರನ್ನು ಪ್ರಧಾನಿ ಮೋದಿ ಆಗ್ರಹಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.

  • ಕೊಡಗಿನ ಜನತೆಗೆ ನೆರವಾಗಲು ರಂಗಸಪ್ತಾಹ- ಭಾಗವಹಿಸಿ, ಸಹಾಯ ಮಾಡಿ

    ಕೊಡಗಿನ ಜನತೆಗೆ ನೆರವಾಗಲು ರಂಗಸಪ್ತಾಹ- ಭಾಗವಹಿಸಿ, ಸಹಾಯ ಮಾಡಿ

    ಬೆಂಗಳೂರು: ಕೊಡಗಿನ ಅನಾಹುತಕ್ಕೆ ನೆರವಾಗಲು ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಹಾಗೂ ಸಮಾನ ಮನಸ್ಕರ ನೇತೃತ್ವದಲ್ಲಿ ಆರಂಭವಾದ ಪೀಪಲ್ ಫಾರ್ ಕೊಡಗು ತಂಡವು ರಂಗಸಪ್ತಾಹ ಹೆಸರಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಿದೆ.

    ಬೆಂಗಳೂರಿನ ಕಲಾಗ್ರಾಮದಲ್ಲಿ ನವೆಂಬರ್ 11 ರಿಂದ ನವೆಂಬರ್ 16ರ ತನಕ ಪ್ರತಿದಿನ ಸಂಜೆ 5.30ಕ್ಕೆ ಗಾಯನ ಹಾಗೂ 7ಕ್ಕೆ ನಾಟಕ ಪ್ರದರ್ಶನವಿರುತ್ತದೆ. ಟಿಕೆಟ್ ಬೆಲೆ 100 ರೂ. ಹಾಗೂ 600 ರೂ. ಸೀಸನ್ ಪಾಸ್ ದರ ನಿಗದಿ ಮಾಡಲಾಗಿದೆ.

    ಪೀಪಲ್ ಫಾರ್ ಪೀಪಲ್ ಮನವಿ ಏನು?
    ಮಳೆ ನಿಂತಿತು, ಕೊಡಗು ಕೂಡ ಜನರ ನೆನಪಿನಿಂದ ಮರೆಯಾಗತೊಡಗಿತು. ನಮ್ಮ ದೇಶದಲ್ಲಿ ಸಮಸ್ಯೆಗಳೇ ಹಾಗೆ. ತಕ್ಷಣದ ಅನುಭೂತಿ ಮುಗಿದ ಮೇಲೆ ನಾವೆಲ್ಲರೂ ಮರೆಯುತ್ತೇವೆ. ಆದರೆ ಕೊಡಗು ನಮ್ಮೆಲ್ಲರ ಹೆಮ್ಮೆ. ಈ ಕೊಡಗು ಸರಿ ಹೋಗಿಲ್ಲ ಸಮಸ್ಯೆಗಳ ಸಾಗರವೇ ಇದೆ. ಕೊಡಗನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಬೆಟ್ಟದಷ್ಟು ಕೆಲಸಗಳು ಬಾಕಿ ಇವೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತಿದ್ದರೂ ಮರುನಿರ್ಮಾಣಕ್ಕೆ ವರ್ಷಾನುಗಟ್ಟಲೆಯ ಬದ್ಧತೆ ಬೇಕಿದೆ, ಶ್ರಮ ಹಾಕಬೇಕಿದೆ. ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ “ಪೀಪಲ್ ಫಾರ್ ಪೀಪಲ್” ತಂಡ 25ಕ್ಕೂ ಹೆಚ್ಚು ದಿನಗಳ ಕಾಲ ಕೊಡಗಿನ ನೆರೆ ಪೀಡಿತ ಪ್ರದೇಶಗಳಲ್ಲಿ ನಿಂತು ಕೆಲಸ ಮಾಡಿದ್ದಲ್ಲದೆ ಸರಕಾರಕ್ಕೆ ಆಗಲೇಬೇಕಾದ 19 ಅವಶ್ಯ ಕೆಲಸಗಳ ಪಟ್ಟಿಯನ್ನು ಮನವಿ ಪತ್ರದ ಮೂಲಕ ಕೊಟ್ಟು, ಆ ನಿಟ್ಟಿನಲ್ಲಿ ಕಾರ್ಯೋನ್ಮುಕರಾಗಲು ಸಮಾಜದ ಎಲ್ಲ ಕ್ಷೇತ್ರಗಳ ಗಣ್ಯರನ್ನು ಕೈಜೋಡಿಸುವಂತೆ ಕೇಳಿಕೊಂಡಿದೆ. ಖುಷಿಯ ವಿಚಾರವೆಂದರೆ ಮಠ ಮಾನ್ಯಗಳಿಂದ ಹಿಡಿದು ರೈತ ಸಂಘದ ವರೆಗೆ ಎಲ್ಲರೂ ಕೈಜೋಡಿಸುತ್ತಿದ್ದಾರೆ.

    ಈಗ ಆಗಬೇಕಾಗಿದ್ದು ಏನು?
    ಜಾಗೃತಿ, 719 ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ, 6095 ಮನೆಗಳ ಮರುನಿರ್ಮಾಣ, 2000 ಜಾನುವಾರು ಮತ್ತು ಹೈನುಗಾರಿಕೆಗೆ ವ್ಯವಸ್ಥೆ, 183 ಶಾಲೆಗಳ ನಿರ್ಮಾಣ, ಹಾಳಾದ 13 ಸಾವಿರ ಹೆಕ್ಟೇರ್ ಭೂ ಪ್ರದೇಶವನ್ನು ವಾಸಯೋಗ್ಯವಾಗಿ ನಿರ್ಮಿಸುವುದು, ಕ್ಯಾಂಪ್ ಗಳ ನಿರ್ವಹಣೆ, ಮುಖ್ಯವಾಗಿ ಐದು ನದಿಗಳ ಪುನರುಜ್ಜೀವನ ಇದಕ್ಕೆ ಸಾಕಷ್ಟು ಶ್ರಮ ಬೇಕು ಜೊತೆಗೆ ಹಣವೂ ಬೇಕು. ಸಿಎಂ ಫಂಡ್ ಕೂಡ ಸಾಲುವುದಿಲ್ಲ. ಹತ್ತು ವರುಷದ ಶ್ರಮ ಬೇಡುವ ಸಮಸ್ಯೆ. ಈ ನಿಟ್ಟಿನಲ್ಲಿ ಪರಿಹಾರ ಕೆಲಸವಾಗಬೇಕಿದೆ. ತಾತ್ಕಾಲಿಕ ಉದ್ಯೋಗ ಮೇಳ, ಆರೋಗ್ಯ ಮೇಳ ಮೆಡಿಕಲ್ ಟರ್ಮ್ ಕೆಲಸ ಆಗಬೇಕು. ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ: Kodagigagi Rangasapthaha

    ಈ ಎಲ್ಲ ಸದುದ್ದೇಶಗಳಿಗಾಗಿ ಈ ರಂಗ ಸಪ್ತಾಹದ ಕಾರ್ಯಕ್ರಮ ನಾಡಿನ ಅತ್ಯುತ್ತಮ ರಂಗತಂಡಗಳು ನವೆಂಬರ್ 11 ರಿಂದ ನವೆಂಬರ್ 17 ರ ವರೆಗೆ ರಂಗ ಪ್ರದರ್ಶನ ನೀಡುವುದರ ಮೂಲಕ ಈ ಮಹಾತ್ಕಾರ್ಯಕ್ಕೆ ನೆರವಾಗುತ್ತಿದ್ದಾರೆ. ಈ ಮೂಲಕ ಏನು ಸಿಗುತ್ತದೊ ಅದನ್ನ ಕೊಡಗಿಗೆ ಬಳಸುವುದು ನಮ್ಮ ಉದ್ದೇಶ.

    ಇದೆಲ್ಲದರ ಜೊತೆ ಕೊಡಗಿನ ಸಮಸ್ಯೆಗಳನ್ನು ಒಳಗೊಂಡ ವೈಜ್ಞಾನಿಕ ವಿಶ್ಲೇಷಣೆಯ ಯಾವುದೇ ಪಕ್ಷ, ಸಂಘಟನೆ ಪರವಾಗಿರದ ತಜ್ಞರ ರಿಸರ್ಚ್ ಆಧಾರದಲ್ಲಿ ಸಹ್ಯಾದ್ರಿ ಬದುಕಿಗೆ ಪರ್ಯಾಯ ಆಂದೋಲನ ರೂಪಿಸುವ ಶಕ್ತಿಗಾಗಿ ಸವಿವರವಾದ ‘ಜಮ್ಮಾ ಭೂಮಿರ ಕಥೆ’ ಸಾಕ್ಷ್ಯಚಿತ್ರ ನಿರ್ಮಾಣದ ಕಾರ್ಯವನ್ನೂ ಹಮ್ಮಿಕೊಂಡಿದ್ದೇವೆ. ನಿಮ್ಮೆಲ್ಲರ ಕಿಂಚಿತ್ತು ಸಹಾಯ, ಉದಾರ ಸಹಾಯಹಸ್ತ ಮುಳುಗಿ ಹೋಗಿರುವ ನಮ್ಮದೇ ನಾಡಿನ ಜನರ ಬದುಕು ಕಟ್ಟುವಲ್ಲಿ ಸಹಕಾರಿಯಾಗುತ್ತದೆ. ದಯವಿಟ್ಟು ನಮ್ಮೊಂದಿಗೆ ಕೈ ಜೋಡಿಸಿ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಕಾಂಗ್ರೆಸ್ ನಾಯಕರು ಗೈರು!

    ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಕಾಂಗ್ರೆಸ್ ನಾಯಕರು ಗೈರು!

    ಮೈಸೂರು: ನಾಡಹಬ್ಬ ದಸರಾ ಉದ್ಘಾಟನಾ ಸಮಾರಂಭದಲ್ಲಿ ದೋಸ್ತಿ ಪಕ್ಷದಲ್ಲಿನ ಮುನಿಸು ಮತ್ತೊಮ್ಮೆ ಎದ್ದು ಕಾಣಿಸಿದ್ದು, ಮೈಸೂರು-ಚಾಮರಾಜನಗರದ ಯಾವೊಬ್ಬ ಕಾಂಗ್ರೆಸ್ ಜನಪ್ರತಿನಿಧಿಯೂ ಸಮಾರಂಭಕ್ಕೆ ಬಂದಿರಲಿಲ್ಲ. ಇದೀಗ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಕಾಂಗ್ರೆಸ್ ಸಚಿವರು ಗೈರುಹಾಜರಾಗಿದ್ದಾರೆ.

    ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಗಳು ದಸರಾದ ಪ್ರಮುಖ ಆಕರ್ಷಣೆಯಾಗಿವೆ. ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಗೈರಾಗಿದ್ದಾರೆ. ಅರಮನೆಯ ಮುಂಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಜೆಡಿಎಸ್ ಸಚಿವರುಗಳು ಹಾಗೂ ಬಿಜೆಪಿ ಶಾಸಕರಷ್ಟೇ ಭಾಗಿಯಾಗಿದ್ದಾರೆ. ದಸರಾ ಉದ್ಘಾನೆಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ವರೆಗೂ ಕಾಂಗ್ರೆಸ್ ಸಚಿವರು ಗೈರಾಗಿದ್ದಾರೆ. ಇದನ್ನು ಓದಿ: ದಸರಾ ಉದ್ಘಾಟನಾ ಸಮಾರಂಭದಲ್ಲೂ ದೋಸ್ತಿ ಪಕ್ಷದ ಮುನಿಸು ಬಹಿರಂಗ!

    ಸಚಿವೆ ಜಯಮಾಲ ಹೊರತು ಪಡಿಸಿ ಇನ್ನುಳಿದ ಕಾಂಗ್ರೆಸ್ ಸಚಿವರು ದಸರಾದಿಂದ ದೂರ ಉಳಿದಿದ್ದರು. ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಹಾಗೂ ದಸರಾ ಉದ್ಘಾಟಕಿ ಸುಧಾಮೂರ್ತಿ ಉಪಸ್ಥಿತರು ಹಾಜರಾಗಿದ್ದರು. ಸಿಎಂ ಜೊತೆಗೆ ಸಚಿವರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಎನ್.ಮಹೇಶ್, ಜಯಮಾಲ, ಶಾಸಕರಾದ ಅಶ್ವಿನ್, ರಾಮದಾಸ್, ಹರ್ಷವರ್ಧನ್, ಮಹದೇವ್, ಕೆ.ಟಿ.ಶ್ರೀಕಂಠೇಗೌಡ ಸಾಥ್ ನೀಡಿದರು.

    ಬೆಳಗ್ಗೆ ನಡೆದ ಕಾರ್ಯಕ್ರಮದಲ್ಲೂ ಜೆಡಿಎಸ್ ಸಚಿವರು, ಶಾಸಕರ ಓಡಾಟ ಜೋರಾಗಿತ್ತು. ಆದರೆ ಕಾಂಗ್ರೆಸ್ಸಿನ ಕೆಲ ನಾಯಕರು ಮುನಿಸಿಕೊಂಡಿದ್ದು, ಯಾರೊಬ್ಬರೂ ದಸರಾದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಯಮಾಲ ಅವರನ್ನು ಹೊರತು ಪಡಿಸಿ ಯಾವೊಬ್ಬ ಕೈ ನಾಯಕ ವೇದಿಕೆಯಲ್ಲಿ ಕಾಣಿಸಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗದಗ್‍ನ ಜಾನಪದ ಜಾತ್ರೆಲಿ ಅನಾವರಣಗೊಂಡ ಗ್ರಾಮೀಣ ಸೊಗಡು

    ಗದಗ್‍ನ ಜಾನಪದ ಜಾತ್ರೆಲಿ ಅನಾವರಣಗೊಂಡ ಗ್ರಾಮೀಣ ಸೊಗಡು

    – ಜನಮನ ಸೂರೆಗೊಂಡ ಸಾಂಸ್ಕೃತಿಕ ಕಾರ್ಯಕ್ರಮಗಳು

    ಗದಗ: ನಗರದಲ್ಲಿ ನಡೆದ ಜಾನಪದ ಜಾತ್ರೆಯಲ್ಲಿ ಗ್ರಾಮೀಣ ಸೊಗಡು ಅನಾವರಣಗೊಂಡಿದೆ. ಗ್ರಾಮೀಣ ಸೊಗಡಿನ ಕಲಾಲೋಕ ನಗರದ ಜನರನ್ನು ವೇದಿಕೆಯತ್ತ ಬರಮಾಡಿಕೊಂಡಿತ್ತು. ನಾಡಿನ ವಿವಿಧ ಮೂಲೆಗಳಿಂದ 400 ಕ್ಕೂ ಹೆಚ್ಚು ಕಲಾವಿದ್ರು, 45 ಕ್ಕೂ ಹೆಚ್ಚು ಕಲಾತಂಡಗಳು ಪಾಲ್ಗೊಳ್ಳುವ ಮೂಲಕ ಜಾತ್ರೆಯ ಮೆರಗು ಹೆಚ್ಚಿಸಿದವು.

    ಗುರ್ಜಿ ನೃತ್ಯ, ಕೋಲಾಟ, ಬುಡಕಟ್ಟು ಜನಾಂಗದ ನೃತ್ಯ, ಡೊಳ್ಳುಪದ, ಲಂಬಾಣಿ ನೃತ್ಯ, ಡಮಾಮಿ ಹೀಗೆ ಹತ್ತು ಹಲವು ಜನಪದ ಕಲೆ ರಸದೌತಣವನ್ನು ಕಲಾರಸಿಕರು ಸವಿದರು. ಜಾನಪದ ಕಲೆಯನ್ನು ಜೀವಂತವಾಗಿರಿಸಲು ಸರ್ಕಾರ ಹಾಗೂ ಕನ್ನಡ ಮತ್ತು ಇಲಾಖೆಯ ಪ್ರಯತ್ನಕ್ಕೆ ನಗರದ ಭೀಷ್ಮಕೆರೆಯ ಒಡಲು ಸಾಕ್ಷಿಯಾಯಿತು. ನಾಡಿನ ಜಾನಪದ ವಿದ್ವಾಂಸರು ಒಂದೆಡೆ ಸೇರಿ ಯೋಜನಾಬದ್ಧವಾಗಿ ಜಾನಪದ ಜಾತ್ರೆಯನ್ನು ಆಯೋಜಿಸಿದ್ದು ವಿಶೇಷವಾಗಿತ್ತು.

    ನಾವುಗಳೆಲ್ಲ ಇಂದು ಮೋಜು, ಮಸ್ತಿಗಾಗಿ ಜಾತ್ರೆಗಳನ್ನು ಮಾಡ್ತಿದ್ದೇವೆ. ಆದ್ರೆ ಇಲ್ಲಿ ನಡೆದ ಜಾತ್ರೆ ಸಮಾಜಕ್ಕೊಂದು ವಿಶೇಷ ಸಂದೇಶ ನೀಡುವುದರ ಮೂಲಕ ನಮ್ಮ ತನದ ಸಂಸ್ಕೃತಿಗೆ ನೀರೆರೆದು ಪೋಷಿಸಲು ಅನುಕೂಲ ಕಲ್ಪಿಸಿತು. ನಗರ ಪ್ರದೇಶ ಜನರಿಗೆ ಗ್ರಾಮೀಣ ಮಹತ್ವ ತಿಳಿಸಲು ಈ ಜಾತ್ರೆ ಮಾಡಲಾಗುತ್ತಿದೆ ಎಂದು ಜಾನಪದ ಜಾತ್ರೆಯ ನಿರ್ದೇಶಕ ಡಾ.ಬಾನಂದೂರು ಕೆಂಪಯ್ಯ ಹೇಳಿದರು.

    ತಾಯಿ ಮೂಲ ಸಂಸ್ಕೃತಿಯಿಂದ ಬೆಳೆದು ಬಂದು ನಮ್ಮ ಅಪರೂಪದ ಕಲೆಗಳು ಇಂದು ಆಧುನಿಕತೆ ಭರಾಟೆಗೆ ಸಿಕ್ಕು ನರಳುತ್ತಿವೆ. ಹೀಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಳಿವಿನಂಚಿನಲ್ಲಿರೋ ಕಲೆಗಳಿಗೆ ಜೀವ ತುಂಬುವ ಮೂಲಕ ಮತ್ತೆ ನೆಲಮೂಲ ಸಂಸ್ಕೃತಿ ಪರಿಚಯವನ್ನು ಯುವಪೀಳಿಗೆಗೆ ತಲುಪಿಸೋ ಕೆಲಸವನ್ನು ಜಾನಪದ ಜಾತ್ರೆ ಮೂಲಕ ಮಾಡ್ತಿರೋದು ವಿಶೇಷವಾಗಿದೆ.

    ರಾಜ್ಯ ಗ್ರಾಮೀಣಾಭಿವೃದ್ದಿ, ಪಂಚಾಯತ್ ರಾಜ್ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಜಾನಪದ ಜಾತ್ರೆ ಕಾರ್ಯಕ್ರಮ ಉದ್ಘಾಟಿಸಿದರು. ರಾಜ್ಯ ಜಲಸಂಪನ್ಮೂಲ ಇಲಾಖೆ ಸಂಸದೀಯ ಕಾರ್ಯದರ್ಶಿ ಹಾಗೂ ಶಿರಹಟ್ಟಿ ಶಾಸಕ ರಾಮಕೃಷ್ಣ ದೊಡ್ಡಮನಿ, ಜಿ.ಪಂ. ಅಧ್ಯಕ್ಷ ವಾಸಣ್ಣ ಕುರಡಗಿ ಉಪಾಧ್ಯಕ್ಷೆ ಶ್ರೀಮತಿ ರೂಪಾ ಅಂಗಡಿ, ಗದಗ ತಾ.ಪಂ.ಅಧ್ಯಕ್ಷ ರವಿ ಮನೋಹರ ಇನಾಮತಿ, ಕನ್ನಡ ಮತ್ತಿ ಸಂಸ್ಕೃತಿ ಇಲಾಖೆ ಜಂಟಿ ನಿರ್ಧೇಶಕ ಅಶೋಕ ಚಲವಾದಿ, ಜಾನಪದ ತಜ್ಞ ಹಾಗೂ ಜಾನಪದ ಜಾತ್ರೆ ನಿರ್ದೇಶಕ ಬಾನಂದೂರ ಕೆಂಪಯ್ಯ ಕನ್ನಡ ಮತ್ತು ಸಂಸ್ಕೃತ ಪ್ರಭಾರಿ ಅಧಿಕಾರಿ ಶರಣು ಗೊಗೇರಿ ಹಾಗೂ ಅನೇಕ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಕಲಾವಿದರು, ಕಲಾ ಪ್ರೇಮಿಗಳು ಉಪಸ್ಥಿತರಿದ್ದರು.