Tag: Cultural Programme

  • ಹುತ್ತರಿ ಸಂಭ್ರಮ – ಕೊಡಗಿನಲ್ಲಿ ಜಾನಪದ ಲೋಕ ಅನಾವರಣ

    ಹುತ್ತರಿ ಸಂಭ್ರಮ – ಕೊಡಗಿನಲ್ಲಿ ಜಾನಪದ ಲೋಕ ಅನಾವರಣ

    ಮಡಿಕೇರಿ: ಕೊಡಗಿನಾದ್ಯಂತ ಹುತ್ತರಿಯ ಸಂಭ್ರಮ ಮನೆ ಮಾಡಿದೆ. ಧಾನ್ಯ ಲಕ್ಷ್ಮಿಯನ್ನು ಮನೆಗೆ ತುಂಬಿಸಿಕೊಳ್ಳುವ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲೆಯ ವಿವಿಧೆಡೆ ಕೊಡವ ಸಾಂಸ್ಕೃತಿಕ ಕಾರ್ಯಕ್ರಮಗಳು ಅನಾವರಣಗೊಂಡಿವೆ.

    ಕೊಡವರ ವಿಶೇಷ ವಾಲಗದೊಂದಿಗೆ ಸಂಸ್ಕೃತಿ ಆಚಾರ ವಿಚಾರಗಳ ಆಟ್ ಪಾಟ್ ಕಾರ್ಯಕ್ರಮಗಳಿಗೆ ಮಡಿಕೇರಿ ಕೋಟೆಯ ಆವರಣ ಸಾಕ್ಷಿಯಾಯಿತು. ಕೊಡವರ ಸಾಂಪ್ರದಾಯಿಕ ಮತ್ತು ಶ್ರೇಷ್ಠ ಹಬ್ಬವೆಂದು ಗುರುತಿಸಿಕೊಂಡಿರುವ ಹುತ್ತರಿಯ ಆಚರಣೆ ಮಡಿಕೇರಿಯ ಕೋಟೆಯ ಆವರಣದಲ್ಲಿ ಮನೆ ಮಾಡಿತ್ತು.

    ಇತಿಹಾಸದ ಗತವೈಭವಕ್ಕೆ ಕೋಟೆ ಆವರಣ ಸಾಕ್ಷಿಯಾಯಿತು. ಹಿಂದಿನಿಂದಲೂ ಆಚರಿಸಿಕೊಂಡು ಬಂದ ಕಲೆ ಸಂಸ್ಕೃತಿಗಳು ಅನಾವರಣಗೊಂಡವು. ಕೊಡಗಿನ ಸುಗ್ಗಿ ಹಬ್ಬ ಹುತ್ತರಿ ಪ್ರಯುಕ್ತ ನಡೆದ ಸಾಂಪ್ರದಾಯಿಕ ಕೋಲಾಟ ನೋಡುಗರ ಮನಸೂರೆಗೊಂಡಿತು.

    ಹಿಂದೆ ಕೊಡಗನ್ನಾಳುತ್ತಿದ್ದ ರಾಜರು ಕೋಟೆಯ ಆವರಣದಲ್ಲಿ ಕೋಲಾಟ ನಡೆಸಲು ಅನುವು ಮಾಡಿಕೊಟ್ಟಿದ್ದರು. ಆ ನಂತರದಲ್ಲಿ ಬ್ರಿಟಿಷರ ಆಳ್ವಿಕೆಯ ಸಮಯದಲ್ಲಿ ಕೋಲಾಟಗೆ ಕೋಟೆಯ ಹೊರತಾಗಿ ಗದ್ದುಗೆಯ ಬಳಿ ಅವಕಾಶ ಕಲ್ಪಿಸಿಕೊಟ್ಟರು. ತದನಂತರದಲ್ಲಿ ಕೆಲವು ವರ್ಷಗಳ ಇತ್ತೀಚೆಗೆ ಮತ್ತೆ ಕೋಟೆ ಆವರಣದಲ್ಲಿ ಹುತ್ತರಿ ಕೋಲಾಟ ನಡೆಸುವ ಮೂಲಕ ತಮ್ಮ ಐತಿಹಾಸಿಕ ಕಲೆ ಸಂಸ್ಕೃತಿಯನ್ನು ಬಿಂಬಿಸಲಾಯಿತು.

  • ಚಿಕ್ಕಬಳ್ಳಾಪುರದ ನಂದಿ ಹಬ್ಬಕ್ಕೆ 40 ಲಕ್ಷ ರೂ. ಖರ್ಚು- ಜಿಲ್ಲಾಡಳಿತದ ಅಂದ ದರ್ಬಾರ್ ಗೆ ಸಾರ್ವಜನಿಕರು ಅಸಮಾಧಾನ

    ಚಿಕ್ಕಬಳ್ಳಾಪುರದ ನಂದಿ ಹಬ್ಬಕ್ಕೆ 40 ಲಕ್ಷ ರೂ. ಖರ್ಚು- ಜಿಲ್ಲಾಡಳಿತದ ಅಂದ ದರ್ಬಾರ್ ಗೆ ಸಾರ್ವಜನಿಕರು ಅಸಮಾಧಾನ

    ಚಿಕ್ಕಬಳ್ಳಾಪುರ: ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮದ ಬಳಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತದ ವತಿಯಿಂದ ನಂದಿ ಹಬ್ಬ ಆಯೋಜನೆ ಮಾಡಲಾಗಿದೆ.

    ನಂದಿಹಬ್ಬದ ಅಂಗವಾಗಿ ಇಂದು ಮ್ಯಾರಾಥಾನ್, ಸೈಕ್ಲಿಂಗ್, ಯೋಗ, ಪಾರಂಪರಿಕ ಪರಿಸರ ನಡಿಗೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ವಿಶ್ವವಿಖ್ಯಾತ ನಂದಿಗಿರಿಧಾಮದ ತಪ್ಪಲಿನ ಹಿರೇನಹಳ್ಳಿ ಬಳಿಯ ಖಾಸಗಿ ಬಡಾವಣೆಯಲ್ಲಿ ಆಯೋಜನೆ ಮಾಡಲಾಗಿದೆ. ಬೆಳ್ಳಂಬೆಳಗ್ಗೆ ಮ್ಯಾರಾಥಾನ್ ಗೆ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಚಾಲನೆ ನೀಡಿದ್ದರು.

    ನಂದಿಗಿರಿಧಾಮದ ತಪ್ಪಲಿನ ಹಿರೇನಹಳ್ಳಿ ಬಳಿಯಿಂದ ಮ್ಯಾರಾಥಾನ್ ಆರಂಭವಾಗಿದ್ದು, ನಂದಿಗಿರಿಧಾಮದ ಸುತ್ತಳತೆಯ 16 ಕಿಲೋಮೀಟರ್ ನ ಮ್ಯಾರಾಥಾನ್ ಆಯೋಜನೆ ಮಾಡಲಾಗಿದೆ. ಮ್ಯಾರಾಥಾನ್ ಅಂಗವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂದಿಗಿರಿಧಾಮದ ಸುತ್ತ ಸಾರ್ವಜನಿಕರ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

    ಒಂದಲ್ಲ ಎರಡಲ್ಲ ಬರೋಬ್ಬರಿ 40 ಲಕ್ಷ ರೂಪಾಯಿ ಖರ್ಚು ಮಾಡಿ ಮಾಡುತ್ತಿರೋ ಚಿಕ್ಕಬಳ್ಳಾಪುರದ ನಂದಿ ಹಬ್ಬದಲ್ಲಿ ಸಂಭ್ರಮವೇ ಇಲ್ಲದಂತಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ಪ್ರವಾಸೋದ್ಯಮ ಇಲಾಖೆ ನೇತೃತ್ವದಲ್ಲಿ 40 ಲಕ್ಷ ರೂಪಾಯಿ ಹಣ ಖರ್ಚು ಮಾಡಿ ನಂದಿಹಬ್ಬ ಆಚರಣೆ ಮಾಡಲಾಗುತ್ತಿದೆ.

    ಸಾರ್ವಜನಿಕರಲ್ಲಿ ಅಸಮಾಧಾನ: ಈ ಎಲ್ಲಾ ಕಾರ್ಯಕ್ರಮಗಳಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಜನರಿಗೆ ಮಣೆ ಹಾಕದ ಜಿಲ್ಲಾಡಳಿತ ಬೆಂಗಳೂರಿನ ಐಷಾರಾಮಿ ಮಂದಿಗೆ ಮಣೆ ಹಾಕಿದೆ. ಜಿಲ್ಲೆಯ ಜನತೆಗೆ ಕನಿಷ್ಠ ಕಾರ್ಯಕ್ರಮಗಳಲ್ಲೊ ಭಾಗವಹಿಸುವಂತೆ ಆಹ್ವಾನವೂ ನೀಡಿಲ್ಲ. ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಎಂಬಂತೆ ಜಿಲ್ಲಾಡಳಿತ ಶಾಸಕ ಸುಧಾಕರ್ ಅಣತಿಯಂತೆ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಎಂದು ದರ್ಬಾರ್ ನಡೆಸುತ್ತಿದ್ದು, ಈ ಬಗ್ಗೆ ಸಾರ್ವಜನಿಕರು ಅಸಮಾಧಾನ ತೋಡಿಕೊಂಡಿದ್ದಾರೆ.

  • ಗದಗ್ ನಲ್ಲಿ ಸಾಮೂಹಿಕ ವಿವಾಹ: ಸರಿಗಮಪ ಸಿಂಗರ್ಸ್ ನಿಂದ ಅದ್ಭುತ ಕಾರ್ಯಕ್ರಮ

    ಗದಗ್ ನಲ್ಲಿ ಸಾಮೂಹಿಕ ವಿವಾಹ: ಸರಿಗಮಪ ಸಿಂಗರ್ಸ್ ನಿಂದ ಅದ್ಭುತ ಕಾರ್ಯಕ್ರಮ

    ಗದಗ: ಬಿಜೆಪಿ ಸಂಸದ ಶ್ರೀರಾಮುಲು ಅಭಿಮಾನಿ ಬಳಗದಿಂದ ನಗರದಲ್ಲಿ ಸರ್ವಧರ್ಮ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಇಂದು ನಡೆಯುತ್ತಿದ್ದು, ಇದರ ಪೂರ್ವಭಾವಿಯಾಗಿ ನಗರದ ವಿದ್ಯಾದಾನ ಮೈದಾನದಲ್ಲಿ ಸಾಂಸ್ಕೃತಿಕ ಮನರಂಜನಾ ಕಾರ್ಯಕ್ರಮಗಳು ಜರುಗಿದವು.

    ಹಾಸ್ಯ ಬ್ರಹ್ಮ ಎಂದೇ ಖ್ಯಾತಿಯಾದ ಗಂಗಾವತಿ ಪ್ರಾಣೇಶ್, ನರಸಿಂಹ ಜ್ಯೋಷಿ, ಮಹಾಮನಿ ಅವರಿಂದ ಹಾಸ್ಯದ ಹೊನಲನ್ನೇ ಹರಿಸಿದರು. ನಂತರ ಸರಿಗಮಪ ಹಾಡುಗಾರರಾದ ಸುಹಾನಾ, ಶ್ರೀರಾಮ ಕಾಸರ್, ಮೆಹಬೂಬ್, ಪರಶುರಾಮ್, ಭಾವನಾ ಬೇಂದ್ರೆ, ಪ್ರಣತಿ ಎ.ಎಸ್, ಲಹರಿ ಅವರ ಅದ್ಭುತವಾದ ಹಾಡುಗಳು ಎಲ್ಲರನ್ನ ಮೈ ಮರೆಯುವಂತೆ ಮಾಡಿತು.

    ಸರಿಗಮಪ ಹಾಡುಗಾರರ ಹಾಡಿಗೆ ಪ್ರೇಕ್ಷಕರು ಚಪ್ಪಾಳೆಯ ಸುರಿಮಳೆಯೇ ಸುರಿಸಿದರು. ಮಂಗಳೂರು ಹೆಜ್ಜೆನಾದ ತಂಡದ ಡ್ಯಾರ್ನ್ಸ್ ಗೆ ಕೆಕೆ, ಸಿಳ್ಳೆ, ಚಪ್ಪಾಳೆ ಮೂಲಕ ಎಲ್ಲರನ್ನು ಮೈನಮಿರೆಳಿಸುವಂತೆ ಮಾಡುವ ಮೂಲಕ ಅದ್ಭುತ ನೃತ್ಯ ಪ್ರದರ್ಶನ ಮಾಡಿ ತೋರಿಸಿದರು. ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲಾವಿದರಿಗೆ ಬಿ.ಶ್ರೀರಾಮುಲು, ಜನಾರ್ದನ ರೆಡ್ಡಿ ಹಾಗೂ ಅಭಿಮಾನಿ ಬಳಗದವರು ಪಾಲ್ಗೊಂಡು ಸನ್ಮಾನಿಸಿದರು.

  • ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲೆಗುಂಪಾಗುತ್ತಿದೆ ಭರಚುಕ್ಕಿ ಜಲಪಾತೋತ್ಸವ!

    ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೂಲೆಗುಂಪಾಗುತ್ತಿದೆ ಭರಚುಕ್ಕಿ ಜಲಪಾತೋತ್ಸವ!

    ಚಾಮರಾಜನಗರ: ದಟ್ಟ ಕಾನನದ ಮಧ್ಯೆ ಬೋರ್ಗರೆಯುತ್ತಿರುವ ಜಲಪಾತ. ಆ ಜಲಪಾತಕ್ಕೆ ವಿವಿಧ ಬಣ್ಣಬಣ್ಣದ ದೀಪಾಲಂಕಾರ. ಕಣ್ಣು ಹಾಯಿಸಿದೆಲ್ಲೆಲ್ಲಾ ರಂಗೋ ರಂಗು ಚಿತ್ತಾರ. ಇದೆಲ್ಲ ಒಂದು ಕಡೆಯಾದರೆ ಜನರನ್ನು ಹುಚ್ಚೆದ್ದು ಕುಣಿಸುವಂತ ನಾನಾ ಪ್ರದರ್ಶನ ಮತ್ತೊಂದು ಕಡೆ. ಇಂತಹದ್ದೊಂದು ಸುಂದರ ಸಂಜೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕು ಭರಚುಕ್ಕಿ ಜಲಪಾತದ ಆವರಣದಲ್ಲಿ ಕಳೆದ ಮೂರು ವರ್ಷಗಳಿಂದ ಸೃಷ್ಟಿಯಾಗುತಿತ್ತು. ಆದ್ರೆ ಈಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ದಿಂದ ಅದ್ಧೂರಿ ಕಾರ್ಯಕ್ರಮ ಮೂಲೆಗುಂಪಾಗುವ ಹಂತದಲ್ಲಿದೆ. ಈ ತಾಣಕ್ಕೆ ಬಂದ ಪ್ರವಾಸಿಗರು ಬಂದ ದಾರಿಗೆ ಸುಂಕ ಇಲ್ಲ ಅಂತ ಹಿಂತಿರುಗಿ ಹೋಗುತ್ತಿದ್ದಾರೆ.

     

    ಹೌದು. ಸ್ವರ್ಗವನ್ನೇ ಧರೆಗಿಳಿಸಿದ್ದ ಜಲಪಾತೋತ್ಸವದಲ್ಲಿ ಸಾವಿರಾರು ಪ್ರವಾಸಿಗರು ಬಂದು ತಮ್ಮ ತನು ಮನಗಳನ್ನು ತಂಪು ಮಾಡಿಕೊಳ್ಳುತ್ತಿದ್ದರು. ಸಹಕಾರ ಸಚಿವರಾಗಿದ್ದ ಎಚ್.ಎಸ್. ಮಹದೇವ ಪ್ರಸಾದ್ ಅವರು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ ಯಶಸ್ವಿಯಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದ್ದರು.

    ಈ ಜಲಪಾತೋತ್ಸವದಿಂದ ಪ್ರವಾಸೋದ್ಯಮ ಇಲಾಖೆಗೆ ಆದಾಯ ಹರಿದು ಬರುತ್ತಿತ್ತು. ಆದರೆ ಈಗ ಜಲಪಾತದಲ್ಲಿ ನೀರು ಹರಿಯುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಜಲಪಾತೋತ್ಸವ ಕಾರ್ಯಕ್ರಮವನ್ನು ಮಾಡಲು ಕಿಂಚಿತ್ತು ಆಸಕ್ತಿ ತೋರಿಸುತ್ತಿಲ್ಲ.

    ಜಲಾಪಾತೋತ್ಸವದ ವೇಳೆ ಆಹಾರ ಮೇಳ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿತ್ತು. ಬಾಯಲ್ಲಿ ನೀರೂರಿಸುವ ಖಾದ್ಯಗಳು ಸ್ಥಳದಲ್ಲೇ ತಯಾರಾಗುತ್ತಿದ್ದವು. ಪ್ರವಾಸಿಗರು ಅದನ್ನು ಚಪ್ಪರಿಸಿಕೊಂಡು ತಿನ್ನುತ್ತಿದ್ದರು. ಇನ್ನೂ ಸ್ಟಾರ್ ನಟರು ಹಾಗೂ ಕಲಾವಿದರನ್ನು ಆಹ್ವಾನಿಸಿ ಪ್ರತಿ ನಿತ್ಯ ರಾತ್ರಿ ಅದ್ಧೂರಿ ಕಾರ್ಯಕ್ರಮಗಳು ನಡೆಯುತಿತ್ತು.

     

    ಪ್ರವಾಸಿಗರು ಸಂಗೀತಕ್ಕೆ ಹುಚ್ಚೆದ್ದು ಕುಣಿಯುತ್ತಿದ್ದರು. ಭರಚುಕ್ಕಿ ಜಲಪಾತೋತ್ಸವ ಪ್ರವಾಸಿಗರಿಗೆ ಅಕ್ಷರಶಃ ಸ್ವರ್ಗವೇ ಆಗಿತ್ತು. ಸತತ ಮೂರು ವರ್ಷಗಳ ಕಾಲ ಯಶಸ್ವಿಯಾಗಿ ನಡೆದ ಕಾರ್ಯಕ್ರಮವನ್ನು ಈ ವರ್ಷವೂ ಆಯೋಜಿಸಿ ಎಂದು ಪ್ರವಾಸಿಗರು ಹಾಗೂ ಜನ ಬೇಡಿಕೆ ಇಟ್ಟಿದ್ದಾರೆ.

    ಒಟ್ಟಾರೆ ಹೇಳುವುದಾದರೆ ಮೂರು ವರ್ಷಗಳ ಕಾಲ ಯಶಸ್ವಿಯಾಗಿ ನಡೆದುಕೊಂಡು ಬಂದ ಜಲಪಾತೋತ್ಸವ ಕಾರ್ಯಕ್ರಮಕ್ಕೆ ಪ್ರವಾಸಿಗರಿಂದ ಬೇಡಿಕೆ ಹೆಚ್ಚಾಗಿದ್ದು, ಈ ವಿಷಯದಲ್ಲಿ ಸದ್ಯ ತಟಸ್ಥವಾಗಿರುವ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಜಲಪಾತೋತ್ಸವ ಕಾರ್ಯಕ್ರಮ ನಡೆಸಲು ಮುಂದಾಗಬೇಕಿದೆ.