Tag: Custodial Death

  • ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

    ತಮಿಳುನಾಡು ಲಾಕಪ್‌ ಡೆತ್‌ ಕೇಸ್‌ – ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಿದ ಸಿಬಿಐ

    ಚೆನ್ನೈ: ತಮಿಳುನಾಡಿನ ಶಿವಗಂಗೈ ಜಿಲ್ಲೆಯ ಮಾದಾಪುರಂ ದೇವಸ್ಥಾನದ ಭದ್ರತಾ ಸಿಬ್ಬಂದಿ ಅಜಿತ್ ಕುಮಾರ್ (27) ಲಾಕಪ್‌ ಡೆತ್‌ (Tamil Nadu Custodial Death) ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (CBI) ಪೊಲೀಸ್ (Police )ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸಿದೆ.

    ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುಪ್ಪುವನಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಬಳಿಕ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಈ ವೇಳೆ, ಮಧ್ಯ ಪ್ರವೇಶಿಸಿದ್ದ ನ್ಯಾಯಾಲಯ ಹೆಚ್ಚಿನ ತನಿಖೆಗೆ ಆದೇಶಿಸಿ, ಸಿಬಿಐಗೆ ತನಿಖಾಧಿಕಾರಿ ನೇಮಿಸುವಂತೆ ಸೂಚಿಸಿತ್ತು. ಇದೀಗ ಹಲ್ಲೆ ನಡೆಸಿದ್ದ ಪೊಲೀಸರ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿದೆ. ಇದನ್ನೂ ಓದಿ: Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್‌

    ನಿಕಿತಾ ಎಂಬ ಮಹಿಳೆ ನೀಡಿದ್ದ ಆಭರಣ ಕಳ್ಳತನದ ದೂರಿನ ಮೇರೆಗೆ ಅಜಿತ್‌ ಅವರನ್ನು ವಿಚಾರಣೆಗಾಗಿ ಪೊಲೀಸರು ಕರೆದುಕೊಂಡು ಹೋಗಿದ್ದರು. ಅವರಿಗೆ ಪೊಲೀಸ್‌ ಠಾಣೆಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು. ಇದರಿಂದ ಅವರು ಸಾವನ್ನಪ್ಪಿದ್ದರು. ಅವರ ಮರಣೋತ್ತರ ಪರೀಕ್ಷೆಯಲ್ಲಿ 40 ಕ್ಕೂ ಹೆಚ್ಚು ಗಾಯಗಳು ಪತ್ತೆಯಾಗಿತ್ತು.

    ನ್ಯಾಯಾಂಗ ತನಿಖಾ ವರದಿಯಲ್ಲೂ ಅಜಿತ್‌ಗೆ ಚಿತ್ರಹಿಂಸೆ ನೀಡಲಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಇದಾದ ಬಳಿಕ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠ, ಇದು ಅಕ್ರಮ ಬಂಧನ ಮತ್ತು ಕಸ್ಟಡಿಯಲ್ಲಿ ನಡೆದ ಹಿಂಸಾಚಾರದ ಸ್ಪಷ್ಟ ಪ್ರಕರಣವಾಗಿದೆ ಎಂದು ಹೇಳಿತ್ತು. ಇದೇ ವೇಳೆ, ಒಂದು ವಾರದೊಳಗೆ ತನ್ನ ತನಿಖಾ ತಂಡವನ್ನು ನೇಮಿಸಿ ಆಗಸ್ಟ್ 20 ರೊಳಗೆ ಅಂತಿಮ ವರದಿಯನ್ನು ಸಲ್ಲಿಸುವಂತೆ ಸಿಬಿಐಗೆ ನಿರ್ದೇಶಿಸಿತ್ತು.

    ಪ್ರಕರಣ ಸಂಬಂಧ ತಮಿಳುನಾಡು (Tamil Nadu) ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಶಂಕರ್ ಜಿವಾಲ್ ಶುಕ್ರವಾರ ಕ್ಷಮೆಯಾಚಿಸಿದ್ದರು. ಇದನ್ನೂ ಓದಿ: ತಮಿಳುನಾಡು ಲಾಕಪ್ ಡೆತ್ ಪ್ರಕರಣ – ಕ್ಷಮೆಯಾಚಿಸಿದ ಪೊಲೀಸ್ ಮುಖ್ಯಸ್ಥ

  • Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್‌

    Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್‌

    – ಎದೆಗೆ ತೀವ್ರ ಹೊಡೆತದಿಂದ ಹೃದಯಕ್ಕೆ ಗಂಭೀರ ಹಾನಿ

    ಚೆನ್ನೈ: ತಮಿಳುನಾಡಿನ ಥಿರುಪ್ಪುವನಮ್ ಪೊಲೀಸ್​ ಠಾಣೆಯಲ್ಲಿ ನಡೆದಿರುವ ಲಾಕಪ್ ಡೆತ್ ಪ್ರಕರಣವು (Custodial Death Case ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದೀಗ 27 ವರ್ಷದ ದೇಗುಲದ ಸೆಕ್ಯೂರಿಟಿ ಗಾರ್ಡ್​ ಅಜಿತ್ ಕುಮಾರ್ ಮರಣೋತ್ತರ ಪರೀಕ್ಷಾ ವರದಿ ಬಿಡುಗಡೆಯಾಗಿದ್ದು ಆತಂಕಕಾರಿ ಸತ್ಯ ಬಹಿರಂಗಪಡಿಸಿದೆ.

    ಅಜಿತ್ ಕುಮಾರ್ (Ajith Kumar) ಅವರ ಶವಪರೀಕ್ಷೆಯನ್ನು ಚೆನ್ನೈನ ಸರ್ಕಾರಿ ಆಸ್ಪತ್ರೆಯ (Chennai Hospital) ವೈದ್ಯಕೀಯ ತಜ್ಞರು ನಡೆಸಿದ್ದು, ವರದಿಯ ಪ್ರಕಾರ ಆತನ ದೇಹದ ಮೇಲೆ ಒಟ್ಟು 44 ಗಾಯಗಳು ಕಂಡುಬಂದಿವೆ. ತಲೆಗೆ ತೀವ್ರ ಹೊಡೆತಗಳಿಂದ ಮೆದುಳಿನ ರಕ್ತಸ್ರಾವ ಸಂಭವಿಸಿತ್ತ, ಮುಖದ ಮೇಲೆ ಹಲವಾರು ಗಾಯದ ಗುರುತುಗಳು ಕಂಡುಬಂದಿವೆ.

    ಎದೆಗೆ ತೀವ್ರ ಹೊಡೆತದಿಂದ ಹೃದಯಕ್ಕೆ ಗಂಭೀರ ಹಾನಿಯಾಗಿತ್ತು. ಇದು ಆತನ ಮರಣಕ್ಕೆ ಪ್ರಮುಖ ಕಾರಣವಾಗಿದೆ. ದೇಹದ ಒಳಗಿನ ಅಂಗಾಂಗಗಳಿಗೆ ಗಾಯವಾಗಿದ್ದರಿಂದ ತೀವ್ರ ಆಂತರಿಕ ರಕ್ತಸ್ರಾವ ಸಂಭವಿಸಿತ್ತು. ಕೈ ಮತ್ತು ಕಾಲುಗಳ ಮೇಲೆ ಹಲವು ಗಾಯಗಳು ಮತ್ತು ಮೂಳೆ ಮುರಿತಗಳು ಕಂಡುಬಂದಿವೆ. ಶ್ವಾಸಕೋಶಕ್ಕೆ ಗಾಯವಾಗಿದ್ದರಿಂದ ಉಸಿರಾಟದ ತೊಂದರೆಯೂ ಆತನ ಮರಣಕ್ಕೆ ಕಾರಣವಾಯಿತು.

    ವೈದ್ಯಕೀಯ ತಜ್ಞರ ಪ್ರಕಾರ, ಈ ಗಾಯಗಳು ಕೇವಲ ಆಕಸ್ಮಿಕವಾಗಿ ಉಂಟಾಗಿರಲು ಸಾಧ್ಯವಿಲ್ಲ. ತೀವ್ರವಾದ ದೈಹಿಕ ಹಿಂಸೆ, ಸಾಧಾರಣವಾಗಿ ಬಲವಾದ ವಸ್ತುಗಳಿಂದ ದಾಳಿಯಿಂದ ಈ ಗಾಯಗಳು ಉಂಟಾಗಿವೆ ಎಂದು ಶಂಕಿಸಲಾಗಿದೆ.

    ಘಟನೆಯ ಹಿನ್ನೆಲೆ
    ಅಜಿತ್ ಕುಮಾರ್ ಅವರನ್ನು ಜೂನ್ 29 ರಂದು ಚೆನ್ನೈನ ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದರು. ಆದರೆ, ಕಸ್ಟಡಿಯಲ್ಲಿದ್ದಾಗಲೇ ಆತನ ಮರಣ ಸಂಭವಿಸಿತು. ಈ ಘಟನೆಯ ಬಗ್ಗೆ ಪೊಲೀಸ್ ಇಲಾಖೆಯಿಂದ ಆರಂಭಿಕವಾಗಿ ಯಾವುದೇ ಸ್ಪಷ್ಟ ವಿವರಣೆ ನೀಡಲಾಗಿರಲಿಲ್ಲ. ಆದರೆ, ಶವಪರೀಕ್ಷೆ ವರದಿಯ ಬಳಿಕ, ಕಸ್ಟಡಿಯಲ್ಲಿ ತೀವ್ರ ಹಿಂಸೆ ನಡೆದಿರುವ ಸಾಧ್ಯತೆಯ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿವೆ.

    ಈ ಘಟನೆಯು ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಸಾರ್ವಜನಿಕ ವಲಯದಲ್ಲಿ ಕಸ್ಟಡಿ ಮರಣದ ಬಗ್ಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಸ್ಥಳೀಯರು ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಈ ಪ್ರಕರಣದ ತನಿಖೆಯಲ್ಲಿ ಪಾರದರ್ಶಕತೆಗೆ ಒತ್ತಾಯಿಸಿವೆ. ಈ ಪ್ರಕರಣವನ್ನು ಸಿಎಂ ಸ್ಟಾಲಿನ್ ಸಿಬಿಐಗೆ ನೀಡಿದ್ದಾರೆ.

  • Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

    Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

    ಚೆನ್ನೈ: ತಮಿಳುನಾಡಿನ (Tamil Nadu) ಶಿವಗಂಗಾ ಜಿಲ್ಲೆಯಲ್ಲಿ ನಡೆದ ದೇವಾಲಯದ ಸೆಕ್ಯುರಿಟಿ ಗಾರ್ಡ್ ಅಜಿತ್ ಲಾಕಪ್ ಡೆತ್ ಪ್ರಕರಣ (Custodial Death) ತಮಿಳುನಾಡಿನಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

    ಪ್ರಕರಣ ಸಂಬಂಧ ತಡರಾತ್ರಿ ಐವರು ಪೊಲೀಸರನ್ನು ಬಂಧಿಸಲಾಗಿದ್ದು, 6 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಸೂಚಿಸಿತ್ತು. ಇನ್ನೂ ಕೊಲೆಗಾರರು ಹೀಗೆ ಹಲ್ಲೆ ಮಾಡಲ್ಲ ಎಂದು ಕೋರ್ಟ್‌ ಛೀಮಾರಿ ಹಾಕಿತ್ತು. ಇದರ ಬೆನ್ನಲ್ಲೇ ಪೊಲೀಸರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: I Love You ಅನ್ನೋದ್ರಲ್ಲಿ ಲೈಂಗಿಕ ಉದ್ದೇಶವಿಲ್ಲ – ಬಾಂಬೆ ಹೈಕೋರ್ಟ್‌

    ಜೂ.27ರಂದು ತಿರುಪುವನಂ ಮಾದಾಪುರಂ ಭದ್ರಕಾಳಿಯಮ್ಮನ್ ದೇವಸ್ಥಾನದಲ್ಲಿ ತಮ್ಮ ಕಾರಿನಿಂದ 10 ಗ್ರಾಂ. ಚಿನ್ನ ಕಾಣೆಯಾಗಿದೆ ಎಂದು ತಾಯಿ-ಮಗಳು ದೂರು ನೀಡಿದ್ದರು. ಪ್ರಕರಣದ ತನಿಖೆಗೆ ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡ, ದೇವಸ್ಥಾನ ಭದ್ರತಾ ಸಿಬ್ಬಂದಿ ಅಜಿತ್‍ನನ್ನು ಠಾಣೆಗೆ ಕರೆದೊಯ್ದು ಚಿತ್ರಹಿಂಸೆ ಕೊಟ್ಟಿದ್ದರು. ಬಾಯಿಗೆ ಖಾರದ ಪುಡಿ ಹಾಕಿ ಅಮಾನುಷವಾಗಿ ಹಲ್ಲೆ ಮಾಡಿದ್ದರು. ಹಲ್ಲೆ ಮಾಡುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ.

    ತೀವ್ರವಾದ ಹಲ್ಲೆಯಿಂದ ಅಜಿತ್ ಮೃತಪಟ್ಟಿದ್ದ. ಇದು ಲಾಕಪ್ ಡೆತ್ ಅಂತ ಆರೋಪಿ ಕುಟುಂಬಸ್ಥರು ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದರು. ಅಜಿತ್ ದೇಹದ ಮೇಲೆ 20ರಿಂದ30 ಗಾಯ ಹಾಗೂ ದೇಹದೊಳಗೆ ಗಂಭೀರವಾದ ಗಾಯಗಳು ಪತ್ತೆಯಾಗಿವೆ. ಕಸ್ಟಡಿ ಚಿತ್ರಹಿಂಸೆ ಮತ್ತು ಸಾವಿನ ಬಗ್ಗೆ ಸಬ್-ಮ್ಯಾಜಿಸ್ಟ್ರೇಟ್ ವಿಚಾರಣೆ ನಡೆಸುತ್ತಿದ್ದು, ಮೃತನ ಸಹೋದರ ಪೊಲೀಸರ ವಿರುದ್ಧ ಸಾಕ್ಷ್ಯ ನುಡಿದಿದ್ದಾರೆ.

    ಬಂಧಿತ ಐವರು ಪೊಲೀಸರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಅಜಿತ್ ಲಾಕಪ್ ಡೆತ್ ತಮಿಳುನಾಡಿನಲ್ಲಿ ರಾಜಕೀಯ ಫೈಟ್‍ಗೂ ಕಾರಣವಾಗಿದೆ. ಪ್ರತಿಪಕ್ಷಗಳು ಘಟನೆಯನ್ನು ಖಂಡಿಸಿ ಡಿಎಂಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣ| ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ – ಎಸ್‌ಐಟಿ ರದ್ದು, ಸಿಬಿಐ ತನಿಖೆಗೆ ಆದೇಶ