Tag: Cut

  • ಬೈಕ್ ಸವಾರನ ಕಿವಿ ಕತ್ತರಿಸಿದ ದರೋಡೆಕೋರರು!

    ಬೈಕ್ ಸವಾರನ ಕಿವಿ ಕತ್ತರಿಸಿದ ದರೋಡೆಕೋರರು!

    ಬೆಂಗಳೂರು: ದರೋಡೆಕೋರರು ಬೈಕ್ ಸವಾರ ಕಿವಿ ಕತ್ತರಿಸಿದ ಘಟನೆ ಬೆಂಗಳೂರಿನ ಹಲಸೂರು ಬಳಿಯ ಜೋಗುಪಾಳ್ಯದಲ್ಲಿ ನಡೆದಿದೆ.

    ವಿನೋದ್ ಕುಮಾರ್ ಎಂಬ ಯುವಕ ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ರಾಬರ್ಸ್ ಗ್ಯಾಂಗ್ ವಿನೋದ್ ಅವರನ್ನು ರಸ್ತೆಯಲ್ಲಿ ಅಡ್ಡಗಟ್ಟಿದೆ. ಬಳಿಕ ವಿನೋದ್ ಬಳಿಯಿದ್ದ ಚಿನ್ನದ ಚೈನ್, ಉಂಗುರ ಕಿತ್ತುಕೊಂಡು, ಮೊಬೈಲ್ ಕೊಡುವಂತೆ ಒತ್ತಾಯ ಮಾಡಿದೆ.

    ಈ ವೇಳೆ ವಿನೋದ್ ಮೊಬೈಲ್ ಕೊಡಲು ನಿರಾಕರಿಸಿದರು. ಇದರಿಂದ ಸಿಟ್ಟಿಗೆದ್ದ ದರೋಡೆಕೋರರು ಮುಖ ಹಾಗೂ ಕಿವಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ. ಘಟನೆಯಿಂದ ಕಿವಿ ಕಟ್ ಆಗಿ ಗಂಭೀರ ಗಾಯಗೊಂಡಿರುವ ವಿನೋದ್‍ಗೆ ಕಿವಿ ಕೇಳಿಸದ ಹಾಗೇ ಆಗಿದೆ.

    ಈ ಸಂಬಂಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೆಲಸ ಮಾಡುವಾಗ ತುಂಡಾಯ್ತು ಕಾರ್ಮಿಕನ ಬೆರಳುಗಳು- ಚಿಕಿತ್ಸೆಗೆ ಹಣ ಕೇಳಿದಕ್ಕೆ ಕೊಲೆ ಬೆದರಿಕೆ

    ಕೆಲಸ ಮಾಡುವಾಗ ತುಂಡಾಯ್ತು ಕಾರ್ಮಿಕನ ಬೆರಳುಗಳು- ಚಿಕಿತ್ಸೆಗೆ ಹಣ ಕೇಳಿದಕ್ಕೆ ಕೊಲೆ ಬೆದರಿಕೆ

    ಬೆಂಗಳೂರು: ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಬರಿಗೈನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬನ ಬೆರಳುಗಳು ಮಷಿನ್‍ಗೆ ಸಿಲುಕಿ ತುಂಡಾದ ಘಟನೆ ಕಾಮಾಕ್ಷಿಪಾಳ್ಯದಲ್ಲಿ ಇಂದು ನಡೆದಿದೆ.

    ಕಾಮಾಕ್ಷಿಪಾಳ್ಯದ ತಿಮ್ಮೇಗೌಡ ಎಂಬ ವ್ಯಕ್ತಿಗೆ ಸೇರಿದ ಪ್ಲ್ಯಾಸ್ಟಿಕ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಅನಂತ್ ಬರ್ಮನ್ ಎಂಬ ಯುವಕ ನಾಲ್ಕು ಬೆರಳಗಳನ್ನು ಕಳೆದುಕೊಂಡಿದ್ದಾನೆ. ಈ ಫ್ಯಾಕ್ಟರಿಯಲ್ಲಿ ಕಾರ್ಮಿಕರಿಗೆ ತಿಮ್ಮೇಗೌಡ ಸುರಕ್ಷತಾ ವಸ್ತ್ರ ನೀಡದೆ ಕೆಲಸ ಮಾಡಿಸಿಕೊಳ್ಳುತ್ತಿದ್ದರು. ಅನಂತ್ ಬರಿಗೈಯಲ್ಲಿ ಪ್ಲಾಸ್ಟಿಕ್ ಅನ್ನು ಮೆಷಿನ್‍ಗೆ ಹಾಕುವ ವೇಳೆ ಆತನ ಬೆರಳುಗಳು ಸಿಲುಕಿ ತುಂಡಾಗಿದೆ. ಕೂಡಲೆ ಗಾಯಗೊಂಡ ಅನಂತ್‍ನನ್ನು ಸ್ಥಳೀಯ ಆಸ್ಪತ್ರೆಗೆ ಸಹೋದರ ಹೇಮಂತ್ ದಾಖಲಿಸಿದ್ದಾನೆ.

    ಈ ಸಂದರ್ಭದಲ್ಲಿ ಸಹೋದರನ ಚಿಕಿತ್ಸಾ ವೆಚ್ಚಕ್ಕಾಗಿ ಹೇಮಂತ್ ಮಾಲೀಕನ ಬಳಿ ಹಣ ಕೇಳಲು ಹೋದಾಗ, ಮಾಲೀಕ ಆತನಿಗೆ ಬಾಯಿಗೆ ಬಂದಂತೆ ಬೈದು, ಚಿಕಿತ್ಸಾ ವೆಚ್ಚ ಭರಿಸಲು ನಿರಾಕರಿಸಿದ್ದಾನೆ. ಬಳಿಕ ಮಾಲೀಕ ಹಾಗೂ ಹೇಮಂತ್ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ. ಚಿಕಿತ್ಸಾ ವೆಚ್ಚ ಭರಿಸದಿದ್ದರೆ ಪೊಲೀಸರಿಗೆ ದೂರು ನೀಡೋದಾಗಿ ಹೇಮಂತ್ ಹೇಳಿದ್ದಾರೆ. ಈ ವೇಳೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಮಾಲೀಕ ಬೆದರಿಕೆ ಹಾಕಿದ್ದಾನೆ ಎಂದು ಹೇಮಂತ್ ಆರೋಪಿಸಿದ್ದಾರೆ.

    ಇದ್ಯಾವುದಕ್ಕು ಹೆದರದ ಹೇಮಂತ್ ನ್ಯಾಯ ಕೊಡಿಸುವಂತೆ ಕಾಮಾಕ್ಷಿಪಾಳ್ಯದ ಪೊಲೀಸ್ ಠಾಣೆಯಲ್ಲಿ ತಿಮ್ಮೇಗೌಡ ವಿರುದ್ಧ ದೂರು ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕ್ಸಿಯೋಮಿಯ ಮೂರು ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ

    ಕ್ಸಿಯೋಮಿಯ ಮೂರು ಫೋನ್‍ಗಳ ಬೆಲೆ ದಿಢೀರ್ ಭಾರೀ ಇಳಿಕೆ

    ನವದೆಹಲಿ: ಬಜೆಟ್ ಗಾತ್ರದ ಮೊಬೈಲ್ ತಯಾರಿಕಾ ಕಂಪನಿ ಕ್ಸಿಯೋಮಿ ತನ್ನ ಮೂರು ಸ್ಮಾರ್ಟ್ ಫೋನ್‍ಗಳ ದರವನ್ನು ಕಡಿತಗೊಳಿಸಿದೆ.

    ಹೌದು, ಕ್ಸಿಯೋಮಿ ತನ್ನ ರೆಡ್‍ಮಿ ನೋಟ್ 5 ಪ್ರೋ, ರೆಡ್‍ಮಿ ವೈ2 ಹಾಗೂ ಎಂಐ ಎ2 ಸ್ಮಾರ್ಟ್ ಫೋನ್‍ಗಳ ಮೇಲಿನ ದರದಲ್ಲಿ 1,000 ಸಾವಿರ ರೂಪಾಯಿಯನ್ನು ಕಡಿತಗೊಳಿಸಿದೆ. ಈ ದರಗಳು ಶುಕ್ರವಾರ ಮಧ್ಯಾಹ್ನ 12 ಗಂಟೆಯಿಂದ ಜಾರಿಯಾಗಲಿದೆ. ಅಲ್ಲದೇ ಎಲ್ಲಾ ಆನ್‍ಲೈನ್ ಹಾಗೂ ಆಫ್‍ಲೈನ್ ಮಾರುಕಟ್ಟೆಗಳಲ್ಲಿ ನೂತನ ದರ ಅನ್ವಯವಾಗಲಿದೆ ಎಂದು ಕಂಪನಿ ತಿಳಿಸಿದೆ.

     

    ಮಾಹಿತಿಗಳ ಪ್ರಕಾರ ಕ್ಸಿಯೋಮಿ ಸ್ಮಾರ್ಟ್ ಫೋನ್‍ಗಳ ತಯಾರಿಕಾ ವೆಚ್ಚ ಕಡಿಮೆಯಾದ ಹಿನ್ನೆಲೆಯಲ್ಲಿ ಕಂಪನಿ ತನ್ನ ಮೂರು ಮಾದರಿಗಳ ಬೆಲೆಯನ್ನು ಕಡಿತಗೊಳಿಸಿದೆ. ಅಲ್ಲದೇ ತಯಾರಿಕಾ ವೆಚ್ಚದಿಂದ ಉಳಿದ ಹಣವನ್ನು ಗ್ರಾಹಕರಿಗೆ ನೀಡುವ ಉದ್ದೇಶದಿಂದ ಸಂಸ್ಥೆ ದರ ಇಳಿಸಿದೆ ಎಂದು ಹೇಳಲಾಗುತ್ತಿದೆ. ದೇಶದಲ್ಲಿ ಬಹುತೇಕ ಮಂದಿ ಕ್ಸಿಯೋಮಿ ಸ್ಮಾರ್ಟ್ ಫೋನಿನ ಗ್ರಾಹಕರಾಗಿದ್ದಾರೆ. ಹೀಗಾಗಿ ಕಂಪನಿ ಗ್ರಾಹಕರಿಗಾಗಿಯೇ ದರ ಇಳಿಸಿದೆ.

    ತನ್ನ ಸ್ಮಾರ್ಟ್ ಫೋನ್ ದರಗಳನ್ನು ಇಳಿಸಿದ ಬೆನ್ನಲ್ಲೇ, ಇದೇ ನವೆಂಬರ್ 22ರಂದು ಕ್ಸಿಯೋಮಿ ತನ್ನ ನೂತನ ರೆಡ್‍ಮೀ ನೋಟ್ 6 ಪ್ರೋ ಅನ್ನು ಭಾರತದಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

    ರೆಡ್‍ಮಿ ನೋಟ್ 5 ಪ್ರೋ ದರ ಎಷ್ಟಿತ್ತು? ಎಷ್ಟಾಗಿದೆ?

    4ಜಿಬಿ ರ‍್ಯಾಮ್ ಹಾಗೂ 64 ಜಿಬಿ ಆವೃತ್ತಿಗೆ ಈ ಮೊದಲು 14,999 ರೂ. ನಿಗದಿಯಾಗಿದ್ದರೆ, ಇಂದಿನಿಂದ 13,999 ರೂ.ಗೆ ಸಿಗಲಿದೆ. ಇದಲ್ಲದೇ 6ಜಿಬಿ ರ‍್ಯಾಮ್ ಹಾಗೂ 64 ಜಿಬಿ ಮಾದರಿಗೆ 16,999 ರೂ.ಗಳ ಬದಲಾಗಿ 15,999 ರೂ. ಆಗಿದೆ.

    ಕ್ಸಿಯೋಮಿ ಎಂಐ ಎ2 ದರ ಎಷ್ಟಿತ್ತು? ಎಷ್ಟಾಗಿದೆ?

    ಇತ್ತೀಚೆಗೆ ಬಿಡುಗಡೆ ಮಾಡಿದ್ದ ಎಂಐ ಎ2 4ಜಿಬಿ ರ‍್ಯಾಮ್ ಹಾಗೂ 64ಜಿಬಿ ಆವೃತ್ತಿಯ ಬೆಲೆ 16,999 ರೂಪಾಯಿಗಳಾಗಿತ್ತು. ಈಗ 15,999 ರೂ.ಆಗಿದೆ. ಇದಲ್ಲದೇ 6ಜಿಬಿ ರ‍್ಯಾಮ್ ಹಾಗೂ 128 ಜಿಬಿ ಆವೃತ್ತಿಗೆ 19,999 ರೂ. ಇತ್ತು. ಈಗ 18,999 ರೂ. ಆಗಿದೆ.

    ಕ್ಸಿಯೋಮಿ ರೆಡ್‍ಮೀ ವೈ2 ದರ ಎಷ್ಟಿತ್ತು? ಎಷ್ಟಾಗಿದೆ?

    4 ಜಿಬಿ ರ‍್ಯಾಮ್ ಹಾಗೂ 64 ಜಿಬಿ ಆವೃತ್ತಿಗೆ ಈ ಮೊದಲು 12,999 ರೂ. ಇತ್ತು ಈಗ 11,9990 ರೂ.ಗೆ ಇಳಿಕೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯುವಕನ ಮರ್ಮಾಂಗ ಕತ್ತರಿಸಿದ ಮಹಿಳೆ ಪ್ರಕರಣಕ್ಕೆ ಟ್ವಿಸ್ಟ್

    ಯುವಕನ ಮರ್ಮಾಂಗ ಕತ್ತರಿಸಿದ ಮಹಿಳೆ ಪ್ರಕರಣಕ್ಕೆ ಟ್ವಿಸ್ಟ್

    ಭುವನೇಶ್ವರ್: ಒಡಿಶಾದ ಕೆಯೊಂಜ್ಹಾರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಯುವಕನ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಕೃತ್ಯ ನಡೆದಿದೆ ಎಂದು ತಿಳಿದು ಬಂದಿದೆ.

    ಯುವಕನ ಮರ್ಮಾಂಗ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಡೌಗಾನ್ ಗ್ರಾಮದ 24 ವರ್ಷದ ಕಮಲ ಪತ್ರ ಎಂಬ ಮಹಿಳೆಯನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ಆಯುಧವನ್ನು ವಶಪಡಿಸಿಕೊಂಡಿದ್ದೇವು. ಅಲ್ಲದೇ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಿದಾಗ ಆಕೆ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಘಟನೆಗೆ ಅಕ್ರಮ ಸಂಬಂಧವೇ ಕಾರಣ ಎಂದು ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ಜೇಮ್ಸ್ ಟೊಪ್ಪೊ ಮಾಹಿತಿ ನೀಡಿದ್ದಾರೆ.

    ಏನಿದು ಘಟನೆ?
    24 ವರ್ಷದ ರಾಜೇಂದ್ರ ನಾಯಕ್ ಜರಾಬೆದ ಗ್ರಾಮದ ನಿವಾಸಿ. ಅಲ್ಲದೇ ಬಡೌಗಾನ್ ಗ್ರಾಮದ ಕಮಲ ಪತ್ರ ಎಂಬ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ರಾಜೇಂದ್ರ ಚೆನ್ನೈ ಮೂಲದ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಅಲ್ಲದೇ ಅಲ್ಲಿಯೂ ಸಹ ವಿವಾಹಿತ ಮಹಿಳೆಯೊಂದಿಗೆ ಸಂಬಂಧ ಇಟ್ಟುಕೊಂಡಿದ್ದ. ಊರಿಗೆ ಬಂದಾಗಲೆಲ್ಲಾ ಕಮಲಾಳ ಮನೆಗೆ ಭೇಟಿ ನೀಡುತ್ತಿದ್ದ.

    ಕಳೆದ ಮಂಗಳವಾರ ಮತ್ತು ಬುಧವಾರವೂ ಕಮಲಾಳ ಮನೆಗೆ ತೆರಳಿದ್ದ. ಈ ವೇಳೆ ಚೆನ್ನೈ ಮಹಿಳೆಯೊಂದಿಗೆ ಮಾತನಾಡುತ್ತಿರುವಾಗ ಕಮಲಾ ಕೈಗೆ ಸಿಕ್ಕಿಬಿದ್ದಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇದರಿಂದ ಸಿಟ್ಟಿಗೆದ್ದ ಕಮಲ ಮನೆಯಲ್ಲಿ ಮಲಗಿದ್ದ ರಾಜೇಂದ್ರನ ಮರ್ಮಾಂಗವನ್ನು ಕತ್ತರಿಸಿ ಸೇಡು ತೀರಿಸಿಕೊಂಡಿದ್ದಳು.

    ಗಂಭೀರವಾಗಿ ಗಾಯಗೊಂಡಿದ್ದ ರಾಜೇಂದ್ರನನ್ನು ಮೊದಲು ಹರಿಚಂದಾಪುರದ ಆಸ್ಪತ್ರೆಗೆ ಸಾಗಿಸಲಾಗಿತ್ತು. ನಂತರ ಕೆಯೊಂಜ್ಹಾರ್ ಜಿಲ್ಲಾಸ್ಪತ್ರೆಗೆ ರವಾನಿಸಿದ್ದರು. ಆದರೆ  ಹೆಚ್ಚಿನ ಚಿಕಿತ್ಸೆಗಾಗಿ ಕಟಕ್‍ನ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಯುವಕನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಯುವಕನ ಮರ್ಮಾಂಗವನ್ನೇ ಕತ್ತರಿಸಿ ಬಿಟ್ಳು ಆಂಟಿ!

    ಯುವಕನ ಮರ್ಮಾಂಗವನ್ನೇ ಕತ್ತರಿಸಿ ಬಿಟ್ಳು ಆಂಟಿ!

    ಭುವನೇಶ್ವರ್: ಮಹಿಳೆಯೊಬ್ಬಳು ಯುವಕನ ಮರ್ಮಾಂಗವನ್ನು ಕತ್ತರಿಸಿದ ಅಮಾನವೀಯ ಘಟನೆಯೊಂದು ಒಡಿಶಾದ ಕೆಯೊಂಜ್ಹಾರ ಜಿಲ್ಲೆಯ ಹರಿಚಂದನ್ ಪುರ್ ಪ್ರದೇಶದಲ್ಲಿ ನಡೆದಿದೆ.

    ಈ ಘಟನೆ ಕಳೆದ ರಾತ್ರಿ ನಡೆದಿದ್ದು, ಯುವಕನನ್ನು ರಾಜೇಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಈತ ಜರಬಿದಾ ಗ್ರಾಮದ ಘತಗಾನ್ ಪ್ರದೇಶದ ನಿವಾಸಿಯಾಗಿದ್ದಾನೆ.

    ಏನಿದು ಘಟನೆ?:
    ಯುವಕ ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದು, ಬುಧವಾರ ಸಂಜೆ ವಾಪಸ್ಸಾಗಿದ್ದಾನೆ. ಇನ್ನೇನೋ ಸ್ವಲ್ಪ ಹೊತ್ತಿನಲ್ಲೇ ರಾತ್ರಿಯಾಗುತ್ತೆ ಅಂತ ಯುವಕ, ಹರಿಚಂದನ್ ಪುರದಲ್ಲಿರೋ ಮಹಿಳೆಯ ಮನೆಯಲ್ಲಿ ತಂಗಿದ್ದಾನೆ. ಮರುದಿನ ಬೆಳಗ್ಗೆ ಆತ ತನ್ನ ಮನೆಗೆ ಅಲ್ಲಿಂದ ತೆರಳುವವನಿದ್ದನು.

    ರಾತ್ರಿ ಮಹಿಳೆ ತನಗೆ ಒತ್ತಾಯಪೂರ್ವಕವಾಗಿ ಮದ್ಯಪಾನ ಮಾಡಿಸಿದ್ದಾಳೆ. ಅತಿಯಾಗಿ ಮದ್ಯ ಸೇವಿಸಿದ್ದರಿಂದ ಅರೆಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದೆನು. ಇದನ್ನೇ ಸದುಪಯೋಗಪಡಿಸಿಕೊಂಡ ಮಹಿಳೆ ಮರ್ಮಾಂಗವನ್ನು ಕಟ್ ಮಾಡಿದ್ದಾಳೆ ಅಂತ ಯುವಕ ಆರೋಪಿಸಿದ್ದಾನೆ.

    ನಾವಿಬ್ಬರು ಫೋನ್ ನಲ್ಲಿ ಮಾತನಾಡುತ್ತಿದ್ದೆವು. ಆದ್ರೆ ನಾನು ಬೇರೆಯವರ ಜೊತೆ ಮಾತನಾಡುತ್ತಿದ್ದಾಗ ಆಕೆ ಅದನ್ನು ಖಂಡಿಸಿದ್ದಳು. ಈ ವಿಚಾರಕ್ಕಾಗಿ ಇಬ್ಬರ ಮಧ್ಯೆ ಜಗಳ ನಡೆದಿದೆ. ನೀನು ನನ್ನ ಜೊತೆ ಮಾತ್ರ ಮಾತಾಡಬೇಕು, ನನ್ನ ಮನೆಗೆ ಬಂದು ಬೇರೆಯವರ ಜೊತೆ ಮಾತನಾಬೇಡ ಅಂತ ತಗಾದೆ ತೆಗೆದಿದ್ದಳು. ಇದೇ ವಿಚಾರದಿಂದ ಸಿಟ್ಟುಗೊಂಡ ಆಕೆ ಈ ಕೃತ್ಯ ಎಸಗಿದ್ದಾಳೆ ಅಂತ ಸಂತ್ರಸ್ತ ಯುವಕ ತಿಳಿಸಿದ್ದಾನೆ.

    ಸದ್ಯ ಯುವಕ ಹರಿಚಂದನ್ ಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ ಅಂತ ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತೈಲ ಬೆಲೆ 2.50 ರೂ. ಇಳಿಕೆ: ಯಾವೆಲ್ಲ ರಾಜ್ಯಗಳಲ್ಲಿ ಒಟ್ಟು 5 ರೂ. ಇಳಿಕೆಯಾಗಿದೆ?

    ತೈಲ ಬೆಲೆ 2.50 ರೂ. ಇಳಿಕೆ: ಯಾವೆಲ್ಲ ರಾಜ್ಯಗಳಲ್ಲಿ ಒಟ್ಟು 5 ರೂ. ಇಳಿಕೆಯಾಗಿದೆ?

    ನವದೆಹಲಿ: ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತ ಮಾಡಿದ ಬೆನ್ನಲ್ಲೇ ಕೆಲ ರಾಜ್ಯಗಳು ವ್ಯಾಟ್ ಇಳಿಕೆ ಮಾಡಿದೆ. ಹೀಗಾಗಿ ಕೆಲ ರಾಜ್ಯಗಳಲ್ಲಿ ಪ್ರತಿ ಲೀಟರ್, ಪೆಟ್ರೋಲ್ ಡೀಸೆಲ್ ದರ 5 ರೂ. ಇಳಿಕೆಯಾಗಿದೆ.

    ಅಬಕಾರಿ ಸುಂಕವನ್ನು 1.50 ರೂಪಾಯಿ ಕಡಿಮೆ ಮಾಡಿದ್ದು, ತೈಲ ಕಂಪನಿಗಳು 1 ರೂಪಾಯಿ ಕಡಿಮೆ ಮಾಡಲು ನಿರ್ಧರಿಸಿದೆ. ಹೀಗಾಗಿ ಒಟ್ಟು 2.50 ರೂ ಕಡಿತವಾಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ದರ 2.50 ರೂ. ಇಳಿಕೆ

    ತೈಲ ಬೆಲೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಹಣಕಾಸು ಇಲಾಖೆಯ ಜೊತೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವ ಅರುಣ್ ಜೇಟ್ಲಿ, ಅಬಕಾರಿ ಸುಂಕವನ್ನು ಕಡಿತಗೊಳಿಸಿದ ಪರಿಣಾಮ ಸರ್ಕಾರಕ್ಕೆ 10,500 ಕೋಟಿ ರೂ. ಹೊರೆಯಾಗುತ್ತದೆ. ಕೇಂದ್ರ ಸರ್ಕಾರ ಕಡಿಮೆ ಮಾಡಿದಂತೆ ರಾಜ್ಯ ಸರ್ಕಾರಗಳು ವ್ಯಾಟ್ ತೆರಿಗೆಯನ್ನು ಕಡಿತಗೊಳಿಸಲಿ ಎಂದು ಸಲಹೆ ನೀಡಿದ್ದರು.

    ಕೇಂದ್ರ ಸರ್ಕಾರದ 2.5ರೂ. ಇಳಿಕೆ ಮಾಡಿದ ಬೆನ್ನಲ್ಲೇ ಬಿಜೆಪಿ ಆಡಳಿತವಿರುವ ಮಹಾರಾಷ್ಟ್ರದಲ್ಲೂ ತೈಲ ದರ ಇಳಿಕೆಯಾಗಿದೆ. ತೈಲ ದರ ಕಡಿತದಿಂದಾಗಿ ಮಹಾರಾಷ್ಟ್ರದ ವಾಹನ ಸವಾರರಿಗೆ ಪ್ರತಿ ಲೀಟರ್ ಗೆ  5 ರೂಪಾಯಿಗಳವರೆಗೆ ಕಡಿತವಾಗಿದೆ. ಈ ಕುರಿತು ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ರಾಜ್ಯದಲ್ಲಿಯೂ ಸಹ 2.5 ರೂಪಾಯಿ ದರವನ್ನು ಇಳಿಕೆ ಮಾಡಲಿದ್ದು, ಇದರಿಂದಾಗಿ ವಾಹನ ಸವಾರಿಗೆ ಪ್ರತಿ ಲೀಟರ್ ಗೆ ಒಟ್ಟು 5 ರೂಪಾಯಿ ಹೆಚ್ಚುವರಿ ಹೊರೆ ಕಡಿಮೆಯಾಗಿದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಅತಿ ಹೆಚ್ಚು, ಅತಿ ಕಡಿಮೆ ಬೆಲೆಯಲ್ಲಿ ಪೆಟ್ರೋಲ್ ಸಿಗೋ ನಗರಗಳು

    ಮಹಾರಾಷ್ಟ್ರವಲ್ಲದೆ ಜಾರ್ಖಂಡ್, ಗುಜರಾತ್, ಛತ್ತೀಸ್‍ಗಡ್, ಉತ್ತರಪ್ರದೇಶ, ಹರಿಯಾಣ, ಮಧ್ಯಪ್ರದೇಶ, ತ್ರಿಪುರ, ಅಸ್ಸಾಂ, ಹಿಮಾಚಲ ಪ್ರದೇಶ, ಗೋವಾ ಹಾಗೂ ಜಮ್ಮು ಮತ್ತು ಕಾಶ್ಮೀರ ರಾಜ್ಯಗಳು ಸಹ ತಮ್ಮ ತಮ್ಮ ಪಾಲಿನ ವ್ಯಾಟ್ ಇಳಿಕೆ ಮಾಡುವ ಮೂಲಕ ವಾಹನ ಸವಾರರಿಗೆ 5 ರೂಪಾಯಿ ಹೊರೆಯನ್ನು ಕಡಿಮೆಗೊಳಿಸಿವೆ.

    ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾತನಾಡಿ, ಈಗಾಗಲೇ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ 2 ರೂಪಾಯಿ ಸೆಸ್ ಕಡಿಮೆ ಮಾಡಿದ್ದೇವೆ. ಹೀಗಾಗಿ ಮತ್ತೊಮ್ಮೆ ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳ ಮೇಲಿನ ವ್ಯಾಟ್ ಅನ್ನು ಯಾವುದೇ ಕಾರಣಕ್ಕೂ ಕಡಿತಗೊಳಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಇಲ್ಲ: ಎಚ್‍ಡಿಕೆ

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಒಂದು ಬ್ಯಾರೆಲ್ ತೈಲ 76 ಡಾಲರ್ ನಲ್ಲಿ ಮಾರಾಟವಾಗುತ್ತಿದೆ. ಇದರ ಜೊತೆಯಲ್ಲಿ ಅಮೆರಿಕ ಚೀನಾ ವಾಣಿಜ್ಯ ಸಮರ, ಇರಾನ್ ನಿಂದ ತೈಲ ಖರೀದಿಗೆ ನಿರ್ಬಂಧ ಹೇರಿದ ಪರಿಣಾಮ ಡಾಲರ್ ಮುಂದೆ ರೂಪಾಯಿ ದುರ್ಬಲವಾಗುತ್ತಿದ್ದು 73 ರೂ. ಗಡಿ ದಾಟಿದೆ. ಹೀಗಾಗಿ ತೈಲ ಬೆಲೆ ಭಾರತದಲ್ಲಿ ಏರಿಕೆಯಾಗುತ್ತಿದೆ. ಇದನ್ನೂ ಓದಿ:  ನೂರರ ಗಡಿಯತ್ತ ತೈಲ ಬೆಲೆ: ಪೆಟ್ರೋಲ್‍ನಲ್ಲಿ ಕೇಂದ್ರ, ರಾಜ್ಯ ಸರ್ಕಾರದ ಪಾಲು ಎಷ್ಟು? ಕೇಂದ್ರ ಹೇಳೋದು ಏನು?

    2014 ರಿಂದ 2016 ರ ಅವಧಿಯಲ್ಲಿ ಕೇಂದ್ರ ಸರ್ಕಾರ 9 ಬಾರಿ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಈ ಅವಧಿಯಲ್ಲಿ ಪೆಟ್ರೋಲ್ ಮೇಲೆ 11.77 ರೂ., ಡೀಸೆಲ್ ಮೇಲೆ 13.47 ರೂ. ನಂತೆ ಅಬಕಾರಿ ಸುಂಕವನ್ನು ಹೆಚ್ಚಿಸಿತ್ತು. ಇದರಿಂದಾಗಿ 2014-15 ರಲ್ಲಿ ಬೊಕ್ಕಸಕ್ಕೆ 99 ಕೋಟಿ ರೂ. ಬಂದಿದ್ದರೆ, 2016-17 ನೇ ಅವಧಿಯಲ್ಲಿ 2.42 ಲಕ್ಷ ಕೋಟಿ ರೂ. ಆದಾಯ ಬಂದಿತ್ತು.

    ಪ್ರತಿ ಲೀಟರ್ ಪೆಟ್ರೋಲ್ ಮೇಲೆ 9.48 ರೂ. ನಿಂದ 21.48 ರೂ., ಡೀಸೆಲ್ ಮೇಲೆ 3.56 ರೂ.ನಿಂದ 17.33 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿತ್ತು. 2016 ರ ವರೆಗೆ ಈ ಏರಿಕೆ ಮಾಡಿದ್ದು, 2017 ರ ಅಕ್ಟೋಬರ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ. ಅಬಕಾರಿ ಸುಂಕವನ್ನು ಕಡಿತಗೊಳಿಸಿತ್ತು. ಅಬಕಾರಿ ಸುಂಕದಿಂದ ಸಂಗ್ರಹವಾದ ಹಣವನ್ನು ಜನರ ಕಲ್ಯಾಣ ಯೋಜನೆಗೆ ಬಳಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಈ ಹಿಂದೆ ತಿಳಿಸಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv