Tag: CV Ananda Bose

  • ಪಶ್ಚಿಮ ಬಂಗಾಳದ ರಾಜ್ಯಪಾಲ ಆನಂದ ಬೋಸ್‌ಗೆ ಎದೆ ನೋವು – ಆಸ್ಪತ್ರೆಗೆ ದಾಖಲು

    ಪಶ್ಚಿಮ ಬಂಗಾಳದ ರಾಜ್ಯಪಾಲ ಆನಂದ ಬೋಸ್‌ಗೆ ಎದೆ ನೋವು – ಆಸ್ಪತ್ರೆಗೆ ದಾಖಲು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜ್ಯಪಾಲ ಸಿ.ವಿ. ಆನಂದ ಬೋಸ್‌ (CV Ananda Bose) ಅವರಿಗೆ ಸೋಮವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೋಸ್‌ ಅವರ ಆರೋಗ್ಯ ಸ್ಥಿರವಾಗಿದೆ ಎಂದು ರಾಜಭವನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೋಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರ ಮೇಲೆ ನಿಗಾ ಇಟ್ಟಿದ್ದಾರೆ. ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ಚಿಕಿತ್ಸೆಯ ನಂತರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರನ್ನು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ | ಹಾರಿ ಬಿದ್ದು ಪ್ರಾಣಬಿಟ್ಟ ಮಹಿಳೆ – ವಿಡಿಯೋ ವೈರಲ್‌

    ಶನಿವಾರ ರಾತ್ರಿ ಮುರ್ಷಿದಾಬಾದ್‌ನ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಹಿಂದಿರುಗಿದ ನಂತರ ರಾಜ್ಯಪಾಲರಲ್ಲಿ ಎದೆ ನೋವು ಕಾಣಿಸಿಕೊಂಡಿತ್ತು. ಅವರಿಗೆ ಬಿಡುವಿಲ್ಲದೆ ಇರುವುದು ಆರೋಗ್ಯದ ಮೇಲೆ ಪರಿಣಾಮ ಬೀರಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿಕೊಂಡಿದ್ದಾರೆ.

    ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು (Mamata Banerjee) ಆಸ್ಪತ್ರೆಗೆ ಭೇಟಿ ನೀಡಿ ರಾಜ್ಯಪಾಲರ ಆರೋಗ್ಯವನ್ನು ವಿಚಾರಿಸಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ರಾಜ್ಯಪಾಲರ ಆರೋಗ್ಯ ವಿಚಾರಿಸಿದ್ದೇನೆ. ಅವರ ಚಿಕಿತ್ಸೆಯ ವಿಚಾರದಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನನ್ನ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಿಎಸ್‌ವೈ ವಿರುದ್ಧದ ಭ್ರಷ್ಟಾಚಾರ ಪ್ರಕರಣ – ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ

  • ನಿಮ್ಮ ನಾಚಿಕೆಗೇಡಿನ ನಡವಳಿಕೆ ತೋರಿಸುವ ವೀಡಿಯೋ ನನ್ನ ಬಳಿ ಇದೆ – ರಾಜ್ಯಪಾಲರ ವಿರುದ್ಧ ದೀದಿ ಗುಡುಗು

    ನಿಮ್ಮ ನಾಚಿಕೆಗೇಡಿನ ನಡವಳಿಕೆ ತೋರಿಸುವ ವೀಡಿಯೋ ನನ್ನ ಬಳಿ ಇದೆ – ರಾಜ್ಯಪಾಲರ ವಿರುದ್ಧ ದೀದಿ ಗುಡುಗು

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜ್ಯಪಾಲ (West Bengal Governor) ಸಿ.ವಿ ಆನಂದ್ ಬೋಸ್ (CV Ananda Bose) ಅವರು ಬಿಡುಗಡೆ ಮಾಡಿದ ವೀಡಿಯೋವನ್ನು ಎಡಿಟ್ ಮಾಡಲಾಗಿದೆ. ನನ್ನ ಬಳಿ ರಾಜ್ಯಪಾಲರ ನಾಚಿಕೆಗೇಡಿನ ನಡವಳಿಕೆಯನ್ನು ಸಾಬೀತುಪಡಿಸುವ ಆಘಾತಕಾರಿ ವೀಡಿಯೋ ಇದೆ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಹೊಸ ಬಾಂಬ್ ಸಿಡಿಸಿದ್ದಾರೆ.

    ಹೂಗ್ಲಿಯ ಸಪ್ತಗ್ರಾಮದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ರಚನಾ ಬ್ಯಾನರ್ಜಿ ಅವರನ್ನು ಬೆಂಬಲಿಸಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಅವರು ಮಾತಾಡಿದ್ದಾರೆ. ಈ ವೇಳೆ ರಾಜಭವನದ ಉದ್ಯೋಗಿಯೊಬ್ಬರಿಂದ ಕಿರುಕುಳದ ಆರೋಪ ಎದುರಿಸುತ್ತಿರುವ ರಾಜ್ಯಪಾಲ ಸಿ.ವಿ. ಆನಂದ್ ಬೋಸ್ ತಮ್ಮ ಹುದ್ದೆಗೆ ಏಕೆ ರಾಜೀನಾಮೆ ನೀಡುವುದಿಲ್ಲ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಅವರು ಒತ್ತಾಯಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ: ಮೋದಿ ಭವಿಷ್ಯ

    ಆನಂದ್ ಬೋಸ್ ಅವರು ರಾಜ್ಯಪಾಲರಾಗಿ ಇರುವವರೆಗೆ ನಾನು ರಾಜಭವನಕ್ಕೆ ಕಾಲಿಡುವುದಿಲ್ಲ. ಅವರನ್ನು ರಸ್ತೆ ಬದಿಯಲ್ಲಿ ಭೇಟಿಯಾಗಲು ಬಯಸುತ್ತೇನೆ. ರಾಜಭವನದಲ್ಲಿ ಅವರ ಪಕ್ಕ ಕೂರಲು ಆಗುವುದಿಲ್ಲ. ಅವರ ಪಕ್ಕದಲ್ಲಿ ಪಾಪ ಇರುತ್ತದೆ ಎಂದು ಅವರು ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ.

    ಏಪ್ರಿಲ್ 24 ಮತ್ತು ಮೇ 2ರಂದು ರಾಜ್ಯಪಾಲರ ಮನೆಯಲ್ಲಿ ಆನಂದ್ ಬೋಸ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ರಾಜಭವನದ ಗುತ್ತಿಗೆ ಮಹಿಳಾ ಉದ್ಯೋಗಿಯೊಬ್ಬರು ಕೋಲ್ಕತ್ತಾ ಪೊಲೀಸರಿಗೆ ಕಳೆದ ವಾರ ದೂರು ಸಲ್ಲಿಸಿದ್ದರು. ಈ ಸಂಬಂಧ ವೀಡಿಯೋ ಒಂದನ್ನು ಬಿಡುಗಡೆ ಮಾಡಲಾಗಿತ್ತು.

    ಬಿಡುಗಡೆ ಮಾಡಲಾದ ವೀಡಿಯೋವನ್ನು ಎಡಿಟ್ ಆಗಿರುವ ವೀಡಿಯೋ ಎಂದು ಆರೋಪಿಸಿರುವ ಮಮತಾ ಬ್ಯಾನರ್ಜಿಯವರು, ನನಗೆ ಇನ್ನೊಂದು ವೀಡಿಯೋ ಸಿಕ್ಕಿದೆ. ಅದು ನಿಮ್ಮ ನಾಚಿಕೆಗೇಡಿನ ನಡವಳಿಕೆಯನ್ನು ತೋರಿಸುತ್ತದೆ. ಮಹಿಳೆಯರು ಕಿರುಕುಳಕ್ಕೊಳಗಾಗಿದ್ದಾರೆ ಎಂಬುದನ್ನು ಸಾಬೀತುಪಡಿಸಲು ಸಾಕಷ್ಟು ಸಾಕ್ಷಿಗಳಿವೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ವಕೀಲ ದೇವರಾಜೇಗೌಡಗೆ ಮೇ 24 ರವರೆಗೆ ನ್ಯಾಯಾಂಗ ಬಂಧನ