Tag: CWG2022

  • ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

    ನಿಮ್ಮ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ವಿಶೇಷ: ಮೋದಿ

    ನವದೆಹಲಿ: ಕಾಮನ್‍ವೆಲ್ತ್ ಕ್ರೀಡಾಕೂಟದಲ್ಲಿ ಅತ್ಯುನ್ನತ ಸಾಧನೆಗೈದ ಭಾರತೀಯ ಕ್ರೀಡಾಪಟುಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ದೆಹಲಿಯ ನಿವಾಸದಲ್ಲಿ ಔತಣಕೂಟ ಆಯೋಜಿಸಿದರು.

    ಔತಣಕೂಟದಲ್ಲಿ ಕಾಮನ್‍ವೆಲ್ತ್‌ನಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳು ಎಲ್ಲರೂ ಭಾಗಿಯಾಗಿದ್ದರು. ಮೋದಿ ಕ್ರೀಡಾಪಟುಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಿದರು. ಕಳೆದ ಎರಡು ವಾರಗಳಲ್ಲಿ ಕ್ರೀಡಾ ವಿಭಾಗದಲ್ಲಿ ಎರಡು ದೊಡ್ಡ ಸಾಧನೆ ಮಾಡಲಾಗಿದೆ. ಒಂದು ಕಡೆ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತ ಉತ್ತಮ ಪ್ರದರ್ಶನ ತೋರಿದರೇ, ಮತ್ತೊಂದು ಕಡೆ ಮೊದಲ ಬಾರಿಗೆ ಭಾರತ ಚೆಸ್ ಒಲಿಂಪಿಯಾಡ್ ಆಯೋಜಿಸಿ ಯಶಸ್ವಿಯಾಗಿದೆ. ಭಾರತ ಚೆಸ್ ಒಲಿಂಪಿಯಾಡ್ ನಡೆಸಿ ಯಶಸ್ವಿಯಾಗಿದ್ದು ಮಾತ್ರವಲ್ಲ, ಅತ್ಯುತ್ತಮ ಪ್ರದರ್ಶನವನ್ನೂ ತೋರಿದೆ. ಚೆಸ್ ಒಲಿಂಪಿಯಾಡ್‍ನಲ್ಲಿ ಪಾಲ್ಗೊಂಡ ಎಲ್ಲಾ ಸ್ಪರ್ಧಾಳುಗಳಿಗೂ ಧನ್ಯವಾದಗಳನ್ನು ಸಲ್ಲಿಸುತ್ತಿದ್ದೇನೆ ಎಂದರು. ಇದನ್ನೂ ಓದಿ: ಸ್ಫೋಟಕ ಆಟವಾಡಿದ ಟೆಸ್ಟ್ ಸ್ಪೆಷಲಿಷ್ಟ್‌ – ಒಂದೇ ಓವರ್‌ನಲ್ಲಿ 22 ರನ್ ಚಚ್ಚಿದ ಪೂಜಾರ

    ನೀವೆಲ್ಲರೂ ನಿಮ್ಮ ನಿಮ್ಮ ಕೆಲಸ ಕಾರ್ಯಗಳನ್ನು ಬಿಟ್ಟು ನನ್ನನ್ನು ನನ್ನ ನಿವಾಸದಲ್ಲಿ ಭೇಟಿಯಾಗಲು ಬಂದಿರುವುದಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ. ಎಲ್ಲಾ ಭಾರತೀಯರ ಜೊತೆ ಮಾತನಾಡಿದಂತೆ ನಿಮ್ಮ ಜೊತೆಗೂ ಮಾತನಾಡುತ್ತಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಇನ್ನೆರಡು ದಿನಗಳಲ್ಲಿ ನಮ್ಮ ದೇಶವು ಸ್ವಾತಂತ್ರ್ಯಗೊಂಡ 75 ವರ್ಷ ಪೂರೈಸಲಿದೆ. ನಿಮ್ಮೆಲ್ಲರ ಪರಿಶ್ರಮದಿಂದ ಸ್ಪೂರ್ತಿದಾಯಕ ಸಾಧನೆಯೊಂದಿಗೆ ದೇಶವು ಸ್ವಾತಂತ್ರ್ಯದ ಅಮೃತ ಮಹೋತ್ಸವಕ್ಕೆ ಕಾಲಿಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಮೆಚ್ಚುಗೆ ಸೂಚಿಸಿದರು. ಇದನ್ನೂ ಓದಿ: ಟೀಂ ಇಂಡಿಯಾದ ಕ್ಯಾಪ್ಟನ್, ಕೋಚ್ ಪದೇ ಪದೇ ಬದಲಾವಣೆ – ಬಿಸಿಸಿಐಗೆ ನೆಟ್ಟಿಗರಿಂದ ಫುಲ್ ಕ್ಲಾಸ್

    ಬರ್ಮಿಂಗ್‍ಹ್ಯಾಮ್‍ನಲ್ಲಿ ನಡೆದ 22ನೇ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಭಾರತ 22 ಚಿನ್ನ, 15 ಬೆಳ್ಳಿ, 23 ಕಂಚಿನ ಪದಕದೊಂದಿಗೆ ಒಟ್ಟು 61 ಪದಕ ಗೆದ್ದು ಪದಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ಸಾಧನೆ ಮಾಡಿತ್ತು. ಇದು ಭಾರತ ತನ್ನ ಪ್ರಮುಖ ಪದಕ ಬೇಟೆಯ ಸ್ಪರ್ಧೆಗಳಾದ ಶೂಟಿಂಗ್ ಮತ್ತು ಆರ್ಚರಿ ಇಲ್ಲದೆ ಗಳಿಸಿರುವುದು ವಿಶೇಷವಾಗಿದೆ. ಇದಲ್ಲದೇ ಚೆನ್ನೈನಲ್ಲಿ ನಡೆದಿದ್ದ ಚೆಸ್‌ ಒಲಿಂಪಿಯಡ್‌ನಲ್ಲೂ ಭಾರತ ಉತ್ತಮ ಸಾಧನೆ ಮಾಡಿತ್ತು.

    Live Tv
    [brid partner=56869869 player=32851 video=960834 autoplay=true]

  • ಚಿನ್ನದ ಹುಡುಗಿಯ ಪರಿಸರ ಪ್ರೀತಿ – ಹುಟ್ಟುಹಬ್ಬಕ್ಕೆ ಗಿಡ ನೆಟ್ಟ ಮೀರಾಬಾಯಿ ಚಾನು

    ಚಿನ್ನದ ಹುಡುಗಿಯ ಪರಿಸರ ಪ್ರೀತಿ – ಹುಟ್ಟುಹಬ್ಬಕ್ಕೆ ಗಿಡ ನೆಟ್ಟ ಮೀರಾಬಾಯಿ ಚಾನು

    ಮುಂಬೈ: 2020ರ ಟೋಕಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಹಾಗೂ ಕಾಮನ್‌ವೆಲ್ತ್ ಗೇಮ್ಸ್-2022ರಲ್ಲಿ ಚಿನ್ನದ ಪದಕ ಗೆದ್ದು ಭಾರತದ ಕೀರ್ತಿ ಪತಾಕೆ ಹಾರಿಸಿದ ವೇಟ್‌ಲಿಫ್ಟಿಂಗ್ ಕ್ರೀಡಾತಾರೆ ತಮ್ಮ ಹುಟ್ಟುಹಬ್ಬದಂದು ಪರಿಸರ ಪ್ರೀತಿ ಮೆರೆದಿದ್ದಾರೆ.

    ಇಂದು ವಿವಿಧೆಡೆ ಗಿಡಗಳನ್ನು ನೆಡುವ ಮೂಲಕ ಮೀರಾಬಾಯಿ ಚಾನು ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಅಲ್ಲದೇ ಗಿಡಗಳನ್ನು ನೆಟ್ಟಿದ್ದು ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿಸಿದೆ ಎಂದು ಟ್ವೀಟ್‌ನಲ್ಲಿ ಬರೆದು, ಫೋಟೋಗಳನ್ನೂ ಹಂಚಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ಫೋಟೋಗಳು ಜಾಲತಾಣದಲ್ಲಿ ವೈರಲ್ ಆಗಿದ್ದು, ಕ್ರೀಡಾಭಿಮಾನಿಗಳು ಶುಭಕೋರಿದ್ದಾರೆ. ಇದನ್ನೂ ಓದಿ: ಕಾಮನ್‌ವೆಲ್ತ್‌ಗೆ ತೆರಳಿದ್ದ ಇಬ್ಬರು ಪಾಕಿಸ್ತಾನಿ ಬಾಕ್ಸರ್‌ಗಳು ನಾಪತ್ತೆ – PBF

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಮಿರಾಬಾಯಿ ಚಾನು, `ದೇಶದ ಜನರ ಬೆಂಬಲ ನೋಡಿ ನಾನು ಉತ್ಸುಕಳಾಗಿದ್ದೇನೆ. ಅಲ್ಲದೇ ಕಾಮನ್‌ವೆಲ್ತ್‌ನಲ್ಲಿ ಚಿನ್ನ ಗೆದ್ದಾಗ ರಾಷ್ಟ್ರಗೀತೆ ನುಡಿಸುವ ವೇಳೆ ಎಲ್ಲರೂ ಗಟ್ಟಿಯಾಗಿ ಹಾಡಿದ್ದು, ಮತ್ತಷ್ಟು ಸ್ಫೂರ್ತಿ ನೀಡಿದಂತಾಗಿದೆ. ಸದ್ಯ ನಾನೀಗ ಗಾಯದ ಸಮಸ್ಯೆಗಳಿಂದ ಚೇತರಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಊಟ ಬೇಕಂದ್ರೆ ಕೇಳಿ ಹಾಕಿಸ್ಕೋತಿನಿ ಬಿಡು ಗುರು – ನಟ ಕೋಮಲ್ ಶೈಲಿ ಕಾಪಿ ಹೊಡೆದ್ರಾ ಶಿಖರ್ ಧವನ್?

    ಮೀರಾಬಾಯಿ ಚಾನು 2020ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿಪದಕ ಗೆದ್ದಿದರು. ಆದರೆ 2022ರಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಚಿನ್ನ ಗೆದ್ದು ಸಾಧನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಮಗ ಗೆದ್ದ ಚಿನ್ನದ ಪದಕವನ್ನು ಸೀರೆಯಲ್ಲಿ ಸುತ್ತಿಟ್ಟ ತಾಯಿ

    ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಮಗ ಗೆದ್ದ ಚಿನ್ನದ ಪದಕವನ್ನು ಸೀರೆಯಲ್ಲಿ ಸುತ್ತಿಟ್ಟ ತಾಯಿ

    ಕೋಲ್ಕತ್ತಾ: ಬರ್ಮಿಂಗ್‍ಹ್ಯಾಮ್‌ನಲ್ಲಿ ಮುಕ್ತಾಯಗೊಂಡ 22ನೇ ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಪುರುಷರ 73 ಕೆಜಿ ವಿಭಾಗದ ವೇಟ್‍ಲಿಫ್ಟಿಂಗ್‍ನಲ್ಲಿ ಚಿನ್ನ ಗೆದ್ದ 20ರ ಹರೆಯದ ಅಚಿಂತ್ ಶೆಯುಲಿ ಹುಟ್ಟೂರಿಗೆ ಆಗಮಿಸಿದ್ದಾರೆ. ಮನೆಗೆ ಆಗಮಿಸುತ್ತಿದ್ದಂತೆ ಅಚಿಂತ್, ತಾಯಿ ಪೂರ್ಣಿಮಾ ಶೆಯುಲಿ ಮಗ ಗೆದ್ದ ಚಿನ್ನದ ಪದಕವನ್ನು ನೋಡಿ ಕಣ್ಣೀರಿಟ್ಟರು.

    ಕಾಮನ್ವೆಲ್ತ್ ಗೇಮ್ಸ್‌ನಲ್ಲಿ ಈ ಬಾರಿ ವೇಟ್ ಲಿಫ್ಟರ್‌ಗಳು ಪದಕ ಬೇಟೆ ಆರಂಭಿಸಿದ್ದು ವಿಶೇಷವಾಗಿತ್ತು. 20ರ ಯುವಕ ದಾಖಲೆಯ 313 ಕೆಜಿ ಬಾರ ಎತ್ತಿ ಚಿನ್ನ ಗೆದ್ದ ಅಚಿಂತ್ ಸಾಧನೆ ಗಮನಸೆಳೆಯಿತು. ಕೋಲ್ಕತ್ತಾದಿಂದ ಸುಮಾರು 20 ಕಿಲೋಮೀಟರ್ ದೂರದಲ್ಲಿರುವ ಹೌರಾ ಜಿಲ್ಲೆಯ ದೇಲ್‍ಪುರದಲ್ಲಿರುವ ಮನೆಗೆ ಅಚಿಂತ್ ನಿನ್ನೆ ಆಗಮಿಸಿದರು. ಮಗ ಮನೆಗೆ ಬಂದ ಕೂಡಲೇ ಆತನ ಕೊರಳಲ್ಲಿದ್ದ ಚಿನ್ನದ ಪದಕವನ್ನು ನೋಡಿ ತಾಯಿ ಪೂರ್ಣಿಮಾ ಶೆಯುಲಿ ಕಣ್ಣೀರಿಟ್ಟರು. ಆ ಬಳಿಕ ಪದಕವನ್ನು ಮನೆಯಲ್ಲಿದ್ದ ತನ್ನ ಹರಿದ ಸೀರೆಯಲ್ಲಿ ಸುತ್ತಿ ಬೆಡ್‍ನ ಕೆಳಗೆ ಇಟ್ಟಿದ್ದು ಎಲ್ಲರ ಕಣ್ಣಂಚಲ್ಲಿ ನೀರು ತರಿಸಿತು. ಇದನ್ನೂ ಓದಿ: ಪದಕ ಗೆದ್ದಾಗಿದೆ ಇನ್ನಾದರೂ ಸಿನಿಮಾ ನೋಡು – ಚಿನ್ನದ ಹುಡುಗ ಅಚಿಂತ್‌ಗೆ ಮೋದಿ ಸಂದೇಶ

    ಅಚಿಂತ್ ಹಿಂತಿರುಗಿ ಬಂದಾಗ ಮಾಧ್ಯಮದವರು, ಛಾಯಾಗ್ರಾಹಕರು ನಮ್ಮ ಮನೆಗೆ ಬರುತ್ತಾರೆ ಎಂದು ಗೊತ್ತಿತ್ತು. ಹಾಗಾಗಿ ಅಚಿಂತ್ ಈವರೆಗೆ ಗೆದ್ದಂತಹ ಟ್ರೋಫಿಗಳನ್ನು ಸ್ಟೂಲ್ ಮೇಲೆ ಇಟ್ಟಿದ್ದೇನೆ. ದೇಶಕ್ಕಾಗಿ ಚಿನ್ನ ಗೆಲ್ಲುತ್ತಾನೆ ಎಂದು ನಾನು ಕನಸಿನಲ್ಲೂ ಕೂಡ ಅಂದುಕೊಂಡಿರಲಿಲ್ಲ. ಇದೀಗ ಸಂತೋಷವಾಗಿದೆ. ನಾವು ಪಟ್ಟ ಕಷ್ಟಗಳ ನಡುವೆ ಈ ಗೆಲುವು ತುಂಬಾ ಸಂತೋಷ ನೀಡಿದೆ ಎಂದು ಪೂರ್ಣಿಮಾ ಶೆಯುಲಿ ಇಬ್ಬರು ಗಂಡುಮಕ್ಕಳಾದ ಅಲೋಕ್ ಹಾಗೂ ಅಚಿಂತ್‍ರನ್ನು ಬೆಳೆಸಲು ತಾವು ಪಟ್ಟ ಕಷ್ಟಗಳನ್ನೂ ಕೂಡ ನೆನಪಿಸಿಕೊಂಡರು. ಇದನ್ನೂ ಓದಿ: ಸೇನಾ ಶಿಬಿರದೊಳಗೆ ನುಗ್ಗಲು ಯತ್ನಿಸಿದ್ದ ಇಬ್ಬರು ಉಗ್ರರ ಹತ್ಯೆ- ಮೂವರು ಯೋಧರು ಹುತಾತ್ಮ

    ಕಷ್ಟದ ಜೀವನದ ಮೂಲಕ ಈ ಸಾಧನೆ ಮಾಡಿದ ಅಚಿಂತ್ ಶೆಯುಲಿ 2001ರ ನವೆಂಬರ್ 24 ರಂದು ಪಶ್ಚಿಮ ಬಂಗಾಳ ಜನಿಸಿದರು. ಬಡ ಕುಟುಂಬದವರಾದ ಶೆಯುಲಿ ತಂದೆ 2013ರಲ್ಲಿ ನಿಧನದ ಬಳಿಕ ಕುಟುಂಬದ ಭಾರವೆಲ್ಲ ಅಣ್ಣನ ಮೇಲಿತ್ತು. ಈ ವೇಳೆ ಶೆಯುಲಿ ಅಣ್ಣನ ಸಹಾಯಕ್ಕೆ ನಿಂತಿದ್ದರು. ಶೆಯುಲಿ ಅಣ್ಣ ಅಲೋಕ್ ಟೈಲರ್ ಆಗಿದ್ದು ಬಟ್ಟೆಗಳನ್ನು ಹೊಲಿದು ಅಂಗಡಿಗಳಿಗೆ ಮಾರಾಟ ಮಾಡುತ್ತಿದ್ದರು. ಈ ವೇಳೆ ಬಟ್ಟೆಗಳಿಗೆ ಬಟನ್ ಹಾಕಿ ಹೊಲಿಗೆಗೆ ಶೆಯುಲಿ ಸಹಾಯ ಮಾಡುತ್ತಿದ್ದರು. ಜೊತೆಗೆ ಜಿಮ್‍ನಲ್ಲಿ ಕಸರತ್ತು ನಡೆಸುತ್ತಿದ್ದರು. ಆ ಬಳಿಕ ಅಣ್ಣನ ಮಾತಿನಂತೆ ವೇಟ್‍ಲಿಫ್ಟಿಂಗ್‍ನಲ್ಲಿ ಆಸಕ್ತಿತೋರಿ ತರಬೇತಿ ಪಡೆದರು. ಇದೀಗ ದೇಶಕ್ಕೆ ಚಿನ್ನದ ಪದಕ ತಂದು ಕೊಟ್ಟಿದ್ದಾರೆ. ಈ ಸಾಧನೆಯ ಹಿಂದೆ ಅಚಿಂತ್ ಅದೇಷ್ಟೂ ತ್ಯಾಗಗಳನ್ನು ಮಾಡಿದ್ದಾರೆ. ಕಾಮನ್‍ವೆಲ್ತ್‌ನಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಅಚಿಂತ್ ಪದಕವನ್ನು ಅಣ್ಣ ಅಲೋಕ್ ಹಾಗೂ ಕೋಚ್ ಆಸ್ತಮ್ ದಾಸ್‍ಗೆ ಅರ್ಪಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮುಂದಿನ ಕಾಮನ್‌ವೆಲ್ತ್ ಗೇಮ್ಸ್ ಎಲ್ಲಿ-ಯಾವಾಗ? – ಇಲ್ಲಿದೆ ಡೀಟೈಲ್ಸ್

    ಮುಂದಿನ ಕಾಮನ್‌ವೆಲ್ತ್ ಗೇಮ್ಸ್ ಎಲ್ಲಿ-ಯಾವಾಗ? – ಇಲ್ಲಿದೆ ಡೀಟೈಲ್ಸ್

    ಬರ್ಮಿಂಗ್‌ಹ್ಯಾಮ್: ಈ ಬಾರಿ ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಪ್ರತಿಷ್ಠಿತ ಕಾಮನ್‌ವೆಲ್ತ್ನಲ್ಲಿ 61 ಪದಗಳನ್ನು ಗೆದ್ದು ಬೀಗಿದ ಭಾರತ 4ನೇ ಸ್ಥಾನದೊಂದಿಗೆ ಹೊರಹೊಮ್ಮಿತು. ಈ ಬೆನ್ನಲ್ಲೇ 2026ರಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಎಲ್ಲಿ ನಡೆಯಲಿದೆ ಎನ್ನುವ ಅಧಿಕೃತ ಮಾಹಿತಿ ಹೊರಬಿದ್ದಿದೆ.

    ಮುಂದಿನ ಕಾಮನ್‌ವೆಲ್ತ್ ಗೇಮ್ಸ್ 2026ಕ್ಕೆ ಆಸ್ಟ್ರೇಲಿಯಾದ ವಿಕ್ಟೋರಿಯಾದಲ್ಲಿ ನಡೆಯಲಿದೆ. 2026ರ ಮಾರ್ಚ್ 17 ರಿಂದ ಮಾರ್ಚ್ 29ರ ವರೆಗೆ ನಡೆಯಲಿದ್ದು, ಸುಮಾರು 20 ರಾಷ್ಟ್ರಗಳು ಪಾಲ್ಗೊಳ್ಳಲಿವೆ ಎಂದು ಕಾಮನ್‌ವೆಲ್ತ್ ಕ್ರೀಡಾಮಂಡಳಿ ತಿಳಿಸಿದೆ. ಇದನ್ನೂ ಓದಿ: CWG 2022: ಬ್ಯಾಡ್ಮಿಂಟನ್‍ನಲ್ಲಿ 20ರ ಹರೆಯದ ಯುವಕನಿಗೆ ಚಿನ್ನದ ಹಾರ – ದಿಗ್ಗಜರ ಸಾಲಿಗೆ ಸೇರಿದ ಲಕ್ಷ್ಯ ಸೇನ್

    ಈ ಬಾರಿ ಬರ್ಮಿಂಗ್‌ಹ್ಯಾಂನಲ್ಲಿ ನಡೆದ ಕಾಮನ್‌ವೆಲ್ತ್ನಲ್ಲಿ ಒಟ್ಟು 61 ಪದಕಗಳನ್ನು ಗೆದ್ದು, ಭಾರತ 4ನೇ ಸ್ಥಾನ ಗಳಿಸಿದೆ. 22 ಚಿನ್ನ, 16 ಬೆಳ್ಳಿ ಹಾಗೂ 23 ಕಂಚಿನ ಪದಕಗಳನ್ನು ಗೆದ್ದು ಅತ್ಯುತ್ತಮ ಪ್ರದರ್ಶನದೊಂದಿಗೆ ಹೊರಹೊಮ್ಮಿದೆ. 2010ಲ್ಲಿಯೂ ಭಾರತ 38 ಚಿನ್ನ ಸೇರಿದಂತೆ 101 ಪದಕಗಳನ್ನು ಗೆದ್ದು ಅತ್ಯುತ್ತಮ ಪ್ರದರ್ಶನ ನೀಡಿತ್ತು. ಮ್ಯಾಂಚೆಸ್ಟರ್-2002ರಲ್ಲಿ 69 ಪದಕ, ಗೋಲ್ಡ್ ಕೋಸ್ಟ್-2018ರಲ್ಲಿ 66 ಪದಕ ಹಾಗೂ ಗ್ಲಾಸ್ಗೋ-2014ರಲ್ಲಿ 64 ಪದಕಗಳನ್ನು ಭಾರತ ಮುಡಿಗೇರಿಸಿಕೊಂಡಿತ್ತು.

    ಯಾವ ಕ್ರೀಡೆಯಲ್ಲಿ ಎಷ್ಟು ಪದಕ: ಕುಸ್ತಿಯಲ್ಲಿ 6 ಚಿನ್ನ, 1 ಬೆಳ್ಳಿ, 5 ಕಂಚು. ಟೇಬಲ್ ಟೆನ್ನಿಸ್‌ನಲ್ಲಿ 4 ಚಿನ್ನ, 1 ಬೆಳ್ಳಿ, 2 ಕಂಚು. ವೈಟ್‌ಲಿಫ್ಟಿಂಗ್‌ನಲ್ಲಿ 3 ಚಿನ್ನ, 3 ಬೆಳ್ಳಿ, 4 ಕಂಚು. ಬಾಕ್ಸಿಂಗ್‌ನಲ್ಲಿ 3 ಚಿನ್ನ, 1 ಬೆಳ್ಳಿ, 3 ಕಂಚು. ಬ್ಯಾಡ್ಮಿಂಟನ್‌ನಲ್ಲಿ 3 ಚಿನ್ನ, 1 ಬೆಳ್ಳಿ, 2 ಕಂಚು. ಅಥ್ಲೆಟಿಕ್ಸ್ನಲ್ಲಿ 1 ಚಿನ್ನ, 4 ಬೆಳ್ಳಿ, 3 ಕಂಚು. ಲಾನ್ ಬೌಲ್ಸ್ನಲ್ಲಿ 1 ಚಿನ್ನ, 1 ಬೆಳ್ಳಿ. ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ 1 ಚಿನ್ನ. ಜುಡೋದಲ್ಲಿ 2 ಬೆಳ್ಳಿ, 1 ಕಂಚು. ಹಾಕಿಯಲ್ಲಿ 1 ಬೆಳ್ಳಿ, 1 ಕಂಚು. ಕ್ರಿಕೆಟ್‌ನಲ್ಲಿ 1 ಬೆಳ್ಳಿ. ಸ್ಕ್ವಾಷ್‌ನಲ್ಲಿ 2 ಕಂಚು.

    ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದ ಕೊಹ್ಲಿ: ಈ ಬಾರಿ ಕಾಮನ್‌ವೆಲ್ತ್‌ನಲ್ಲಿ ಪ್ರಶಸ್ತಿ ವಿಜೇತರಿಗೆ ಶುಭ ಕೋರಿರುವ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ ನೀವು ನಮ್ಮ ದೇಶಕ್ಕೆ ದೊಡ್ಡ ಪ್ರಶಸ್ತಿಗಳನ್ನೇ ತಂದಿದ್ದೀರಿ. ಎಲ್ಲಾ ವಿಜೇತರು ಹಾಗೂ ಕಾಮನ್‌ವೆಲ್ತ್ ನಲ್ಲಿ ಭಾಗವಹಿಸಿದ ಎಲ್ಲರಿಗೂ ಧನ್ಯವಾದಗಳು. ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುತ್ತೇವೆ’ ಎಂದು ಟ್ವೀಟ್ ಮೂಲಕ ಹಾರೈಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಿಮ್ಮದು ಅದ್ಭುತ ಸಾಧನೆ – ಪಿ.ವಿ ಸಿಂಧುರನ್ನ ಹೊಗಳಿದ ಆಸ್ಟ್ರೇಲಿಯಾ ಸ್ಟಾರ್ ಡೇವಿಡ್ ವಾರ್ನರ್

    ನಿಮ್ಮದು ಅದ್ಭುತ ಸಾಧನೆ – ಪಿ.ವಿ ಸಿಂಧುರನ್ನ ಹೊಗಳಿದ ಆಸ್ಟ್ರೇಲಿಯಾ ಸ್ಟಾರ್ ಡೇವಿಡ್ ವಾರ್ನರ್

    ಬರ್ಮಿಂಗ್‌ಹ್ಯಾಮ್: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆಯಾಗಿದ್ದ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಕಾಮನ್‌ವೆಲ್ತ್ನಲ್ಲಿ ಚಿನ್ನ ಗೆದ್ದ ಸಾಧನೆಯನ್ನು ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್ ಹೊಗಳಿದ್ದಾರೆ.

    ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಬ್ಯಾಡ್ಮಿಂಟನ್‌ನಲ್ಲಿ ಪಿ.ವಿ.ಸಿಂಧು ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಇದನ್ನೂ ಓದಿ: ಎದ್ದು ಬಿದ್ದು ಬ್ಯಾಟಿಂಗ್‌ಗೆ ಆಗಮಿಸಿದ ಯಾಸ್ತಿಕಾ ಭಾಟಿಯಾ – ಬಿದ್ದು ಬಿದ್ದು ನಕ್ಕ ಸ್ಮೃತಿ, ಕೌರ್

    ಫೈನಲ್ ಪಂದ್ಯದಲ್ಲಿ ಕೆನಡಾದ ಮಿಚೆಲ್ ಲಿ ವಿರುದ್ಧ 21-15, 21-13 ನೇರ ಸೆಟ್‌ಗಳಿಂದ ಪಂದ್ಯವನ್ನು ಗೆದ್ದು ಸತತ ಮೂರು ಕಾಮನ್‌ವೆಲ್ತ್ ಕ್ರೀಡೆಗಳಲ್ಲಿ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಸಿಂಧು ಅವರ ಈ ಸಾಧನೆಯನ್ನು ಆಸ್ಟ್ರೇಲಿಯಾ ಸ್ಟಾರ್ ಕ್ರಿಕೆಟಿಗ ಡೇವಿಡ್ ವಾರ್ನರ್ ಹೊಗಳಿದ್ದಾರೆ. ಇದನ್ನೂ ಓದಿ: ಮನವಿ ಮಾಡಿದ್ರೂ ನನಗೆ ದೆಹಲಿ ಸರ್ಕಾರದಿಂದ ಸಹಾಯವೇ ಸಿಗಲಿಲ್ಲ; ಗೆದ್ದಾಗ ಪ್ರಶಂಸಿಸುತ್ತಿದ್ದಾರೆ – ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಕ್ರೀಡಾಪಟು ಬೇಸರ

    `ಸಿಂಧು ಅವರು ಪದಕ ಪಡೆದ ಚಿತ್ರವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದು, `ವೆಲ್‌ಡನ್ ಪಿ.ವಿ.ಸಿಂಧು, ಕಾಮನ್‌ವೆಲ್ತ್ನಲ್ಲಿ ಚಿನ್ನಗೆದ್ದು ಅದ್ಭುತ ಸಾಧನೆ ಮಾಡಿದ್ದೀರಿ’ ಎಂದು ಬರೆದುಕೊಂಡಿದ್ದಾರೆ.

    ಪಿ.ವಿ.ಸಿಂಧು ಈ ಹಿಂದೆ 2014ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚು ಗೆದ್ದಿದ್ದರು. 2018 ರಲ್ಲಿ ಸೈನಾ ನೆಹ್ವಾಲ್ ವಿರುದ್ಧ ಸೋತು ಬೆಳ್ಳಿ ಗೆದ್ದಿದ್ದ ಸಿಂಧು, ಈ ಬಾರಿ ಚಿನ್ನದ ಪದಕಕ್ಕೆ ಮುತ್ತಿಡುವ ಮೂಲಕ ಕನಸು ನನಸು ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಎದ್ದು ಬಿದ್ದು ಬ್ಯಾಟಿಂಗ್‌ಗೆ ಆಗಮಿಸಿದ ಯಾಸ್ತಿಕಾ ಭಾಟಿಯಾ – ಬಿದ್ದು ಬಿದ್ದು ನಕ್ಕ ಸ್ಮೃತಿ, ಕೌರ್

    ಎದ್ದು ಬಿದ್ದು ಬ್ಯಾಟಿಂಗ್‌ಗೆ ಆಗಮಿಸಿದ ಯಾಸ್ತಿಕಾ ಭಾಟಿಯಾ – ಬಿದ್ದು ಬಿದ್ದು ನಕ್ಕ ಸ್ಮೃತಿ, ಕೌರ್

    ಲಂಡನ್: ಕಾಮನ್‍ವೆಲ್ತ್ ಕ್ರೀಡಾಕೂಟದ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ರಣ ರೋಚಕ ಕಾದಾಟದ ನಡುವೆ ಭಾರತದ ಬ್ಯಾಟರ್ ಯಸ್ತಿಕಾ ಭಾಟಿಯಾ ಬಿದ್ದು ಸಹ ಆಟಗಾರ್ತಿಯರ ನಗುವಿಗೆ ಕಾರಣರಾದ ಪ್ರಸಂಗವೊಂದು ನಡೆದಿದೆ.

    ಫೈನಲ್ ಪಂದ್ಯದಲ್ಲಿ ಗೆಲ್ಲಲು 162 ರನ್‍ಗಳ ಗುರಿಯನ್ನು ಪಡೆದ ಭಾರತ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿದ್ದರೂ ನಾಯಕಿ ಹರ್ಮನ್‍ಪ್ರೀತ್ ಕೌರ್, ಜೆಮಿಮಾ ರಾಡಿಗ್ರಾಸ್ ಹೋರಾಟದಿಂದ ಗೆಲುವಿನ ಹಂತದವರೆಗೆ ತಲುಪಿತ್ತು. ಈ ವೇಳೆ ಯಸ್ತಿಕಾ ಭಾಟಿಯಾ 9ನೇ ಕ್ರಮಾಂಕದಲ್ಲಿ ಬ್ಯಾಟರ್ ಆಗಿ ಬರಲು ಸಿದ್ಧರಾಗಿದ್ದರು. ಒಂದು ಕಡೆ ಪಂದ್ಯ ರೋಚಕ ಘಟ್ಟ ತಲುಪಿತ್ತು. ಈ ವೇಳೆ ಒತ್ತಡದಲ್ಲೇ ಡಗೌಟ್‍ನಿಂದ ಬಂದ ಯಸ್ತಿಕಾ ಭಾಟಿಯಾ ಡಗೌಟ್‌ ಬಳಿ ಇದ್ದ ಜಾಹೀರಾತು ಬೋರ್ಡ್‌ ನೋಡದೆ ಕೆಳಕ್ಕೆ ಬಿದ್ದರು. ಆ ಬಳಿಕ ಎದ್ದು ಬ್ಯಾಟಿಂಗ್‍ಗೆ ಆಗಮಿಸಿದರು. ಇದನ್ನೂ ಓದಿ: ಕಾಮನ್‌ವೆಲ್ತ್‌ನಲ್ಲಿ ಹ್ಯಾಟ್ರಿಕ್‌ ಸಾಧನೆ – ಪಿವಿ ಸಿಂಧುಗೆ ಚಿನ್ನ

    ಇತ್ತ ಯಸ್ತಿಕಾ ಭಾಟಿಯಾ ಬಿದ್ದು, ಎದ್ದು ಬ್ಯಾಟಿಂಗ್‍ಗೆ ಆಗಮಿಸುತ್ತಿದ್ದಂತೆ ಬೌಂಡರಿ ಲೈನ್‌ ಪಕ್ಕ ಕೂತಿದ್ದ ನಾಯಕಿ ಹರ್ಮನ್‍ಪ್ರೀತ್ ಕೌರ್, ಸ್ಮೃತಿ ಮಂದಾನ ಸೇರಿದಂತೆ ಸಹ ಆಟಗಾರ್ತಿಯರು ಬಿದ್ದು, ಬಿದ್ದು ನಕ್ಕರು. ಇದನ್ನೂ ಓದಿ: ನಾಲ್ಕು ವರ್ಷಗಳ ಹಿಂದೆ ಪದಕ ಗೆದ್ದಾಗ ಕೊಟ್ಟ ಭರವಸೆ ಇನ್ನೂ ಈಡೇರಿಲ್ಲ – ಬೇಸರ ವ್ಯಕ್ತಪಡಿಸಿದ ಗುರುರಾಜ್ ಪೂಜಾರಿ

    ಪಂದ್ಯದಲ್ಲಿ ಗೆಲ್ಲಲು 162 ರನ್‍ಗಳ ಗುರಿಯನ್ನು ಪಡೆದ ಭಾರತ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿದ್ದರೂ ನಾಯಕಿ ಹರ್ಮನ್‍ಪ್ರೀತ್ ಕೌರ್, ಜೆಮಿಮಾ ರಾಡಿಗ್ರಾಸ್ ಹೋರಾಟದಿಂದ ಗೆಲುವಿನ ಹಂತದವರೆಗೆ ತಲುಪಿತ್ತು. ಆದರೆ ಕೊನೆಯಲ್ಲಿ ವಿಕೆಟ್ ಕಳೆದುಕೊಳ್ಳುವುದರೊಂದಿಗೆ ಅಂತಿಮವಾಗಿ 19.3 ಓವರ್‌ಗಳಲ್ಲಿ 152 ರನ್‍ಗಳಿಗೆ ಆಲೌಟ್ ಆಯ್ತು. ಈ ಮೂಲಕ ಟೀಂ ಇಂಡಿಯಾದ ಮಹಿಳೆಯರು ಸ್ವಲ್ಪದರಲ್ಲೇ ಚಿನ್ನದ ಪದಕದಿಂದ ವಂಚಿತರಾದರು. ರೋಚಕ ಫೈನಲ್‍ನಲ್ಲಿ ಆಸ್ಟ್ರೇಲಿಯಾ 9 ರನ್‍ಗಳಿಂದ ಇಂಡಿಯಾವನ್ನು ಸೋಲಿಸಿ ಚೊಚ್ಚಲ ಪದಕವನ್ನು ಮುಡಿಗೇರಿಸಿಕೊಂಡಿದೆ. ಇದೇ ಮೊದಲ ಬಾರಿಗೆ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಕ್ರಿಕೆಟ್ ಸೇರಿಸಲಾಗಿತ್ತು. ಇದನ್ನೂ ಓದಿ: Well Done Girls: ಗೋಲ್ಡ್‌ ಜಸ್ಟ್‌ ಮಿಸ್‌ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು

    Live Tv
    [brid partner=56869869 player=32851 video=960834 autoplay=true]

  • ವಿಂಡೀಸ್ ವಿರುದ್ಧದ ಕೊನೆಯ T20 ಪಂದ್ಯಕ್ಕೆ ರೋಹಿತ್ ಚಕ್ಕರ್ – ಕಾಮನ್‍ವೆಲ್ತ್ ಫೈನಲ್ ನೋಡಲು ಹಾಜರ್

    ವಿಂಡೀಸ್ ವಿರುದ್ಧದ ಕೊನೆಯ T20 ಪಂದ್ಯಕ್ಕೆ ರೋಹಿತ್ ಚಕ್ಕರ್ – ಕಾಮನ್‍ವೆಲ್ತ್ ಫೈನಲ್ ನೋಡಲು ಹಾಜರ್

    ಫ್ಲೋರಿಡಾ: ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಟಿ20 ಪಂದ್ಯದಲ್ಲೂ ದೊಡ್ಡ ಮೊತ್ತದ ಜಯದೊಂದಿಗೆ ಭಾರತ ತಂಡ 4-1 ಅಂತರದಲ್ಲಿ ಸರಣಿ ಗೆದ್ದಿದೆ. ಇತ್ತ ವಿಂಡೀಸ್ ಹೀನಾಯ ಪ್ರದರ್ಶನ ನೀಡಿ ತವರಿನಲ್ಲಿ ಮುಖಭಂಗ ಅನುಭವಿಸಿದೆ.

    5ನೇ ಟಿ20 ಪಂದ್ಯದಲ್ಲಿ ಭಾರತ ತಂಡ ನಾಯಕನ ಬದಲಾವಣೆಯೊಂದಿಗೆ ಕಣಕ್ಕಿಳಿಯಿತು. ಖಾಯಂ ನಾಯಕ ರೋಹಿತ್ ಶರ್ಮಾ ವಿಶ್ರಾಂತಿ ಪಡೆದರು. ಇತ್ತ ಹಾರ್ದಿಕ್ ಪಾಂಡ್ಯ ನಾಯಕರಾಗಿ ತಂಡವನ್ನು ಮುನ್ನಡೆಸಿದರು. ಆದರೆ ರೋಹಿತ್ ಶರ್ಮಾ ಮಾತ್ರ ಇತ್ತ ಕಾಮನ್‍ವೆಲ್ತ್ ಕ್ರಿಕೆಟ್ ಫೈನಲ್ ನೋಡುವುದರಲ್ಲಿ ಬ್ಯುಸಿ ಆಗಿದ್ದರು. ರೋಹಿತ್ ಮೊಬೈಲ್‍ನಲ್ಲಿ ಪಂದ್ಯ ವೀಕ್ಷಿಸುತ್ತಿದ್ದರೆ, ಅವರಿಗೆ ಇತರ ಆಟಗಾರರು ಸಾಥ್ ನೀಡಿದರು. ಇದನ್ನೂ ಓದಿ: Well Done Girls: ಗೋಲ್ಡ್‌ ಜಸ್ಟ್‌ ಮಿಸ್‌ – ಚೊಚ್ಚಲ ಪ್ರಯತ್ನದಲ್ಲೇ ಬೆಳ್ಳಿಗೆದ್ದ ವನಿತೆಯರು

    ಇತ್ತ ಪಾಂಡ್ಯ ಸಾರಥ್ಯದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ನಡೆಸಿ 7 ವಿಕೆಟ್ ನಷ್ಟಕ್ಕೆ 188 ರನ್ ಪೇರಿಸಿ ವಿಂಡೀಸ್‍ಗೆ 189 ರನ್ ಟಾರ್ಗೆಟ್ ನೀಡಿತು. ಈ ಮೊತ್ತವನ್ನು ಬೆನ್ನಟ್ಟಿದ ವಿಂಡೀಸ್ ಬ್ಯಾಟ್ಸ್‌ಮ್ಯಾನ್‌ಗಳು ಭಾರತದ ಸ್ಪಿನ್ನರ್‌ಗಳ ದಾಳಿಗೆ ನೆಲಕಚ್ಚಿದರು. 15.4 ಓವರ್‌ಗಳಲ್ಲಿ 100 ರನ್‍ಗಳಿಗೆ ಸರ್ವಪತನಕಂಡು ಸೋಲೊಪ್ಪಿಕೊಂಡರು.

    ವಿಂಡೀಸ್‍ಗೆ ತ್ರಿವಳಿ ಸ್ಪಿನ್ನರ್‌ಗಳ ಆಘಾತ:
    ಕೊನೆಯ ಪಂದ್ಯವನ್ನು ಗೆದ್ದು ಸರಣಿ ಗೆಲುವಿನ ಅಂತರವನ್ನು ತಗ್ಗಿಸುವ ಇರಾದೆಯಲ್ಲಿದ್ದ ವೆಸ್ಟ್ ಇಂಡೀಸ್ ತಂಡಕ್ಕೆ ಭಾರತದ ಸ್ಪಿನ್ನರ್‌ಗಳಾದ ಅಕ್ಷರ್ ಪಟೇಲ್, ಕುಲ್‍ದೀಪ್ ಯಾದವ್, ರವಿ ಬಿಷ್ಣೋಯ್ ಮೇಲಿಂದ ಮೇಲೆ ಆಘಾತ ನೀಡಿದರು. ಈ ಮೂವರು ಸೇರಿಕೊಂಡು ವಿಂಡೀಸ್‍ನ 10 ವಿಕೆಟ್ ಬೇಟೆಯಾಡಿದರು. ವೆಸ್ಟ್ ಇಂಡೀಸ್ ಪರ ಶಿಮ್ರಾನ್ ಹೆಟ್ಮೆಯರ್ 56 ರನ್ (35 ಎಸೆತ, 5 ಬೌಂಡರಿ, 4 ಸಿಕ್ಸ್) ಸಿಡಿಸಿದ್ದನ್ನು ಹೊರತು ಪಡಿಸಿ ಉಳಿದ ಬ್ಯಾಟ್ಸ್‌ಮ್ಯಾನ್‌ಗಳು ಬಂದ ಪುಟ್ಟ, ಹೋದ ಪುಟ್ಟ ಎಂಬಂತೆ ಪೆವಿಲಿಯನ್ ಪರೇಡ್ ನಡೆಸಿದರು.

    ಅಂತಿಮವಾಗಿ 15.4 ಓವರ್‌ಗಳಲ್ಲಿ 100 ರನ್‍ಗಳಿಗೆ ಆಲೌಟ್ ಆಯಿತು. ಟೀಂ ಇಂಡಿಯಾ ಪರ ರವಿ ಬಿಷ್ಣೋಯ್ 4 ವಿಕೆಟ್ ಕಿತ್ತು ಮಿಂಚಿದರೆ, ಅಕ್ಷರ್ ಪಟೇಲ್ ಮತ್ತು ಕುಲ್‍ದೀಪ್ ಯಾದವ್ ತಲಾ 3 ವಿಕೆಟ್ ಪಡೆದರು. ಇದನ್ನೂ ಓದಿ: CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್

    ಈ ಮೊದಲು ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಶ್ರೇಯಸ್ ಅಯ್ಯರ್ 64 ರನ್ (40 ಎಸೆತ, 8 ಬೌಂಡರಿ, 2 ಸಿಕ್ಸ್), ದೀಪಕ್ ಹೂಡಾ 38 ರನ್ (25 ಎಸೆತ, 3 ಬೌಂಡರಿ, 2 ಸಿಕ್ಸ್) ಮತ್ತು ಪಾಂಡ್ಯ 28 ರನ್ (16 ಎಸೆತ, 2 ಬೌಂಡರಿ, 2 ಸಿಕ್ಸ್) ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 188 ರನ್‍ಗಳ ದೊಡ್ಡ ಮೊತ್ತ ಪೇರಿಸಿತು.

    Live Tv
    [brid partner=56869869 player=32851 video=960834 autoplay=true]

  • CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್

    CWG 2022: ನಿಖತ್ ಜರೀನ್‌ಗೆ ಒಲಿದ ಚಿನ್ನ – ಬಾಕ್ಸಿಂಗ್‌ನಲ್ಲಿ ಭಾರತಕ್ಕಿಂದು ಹ್ಯಾಟ್ರಿಕ್ ಗೋಲ್ಡ್

    ಬರ್ಮಿಂಗ್‌ಹ್ಯಾಮ್: ಪ್ರತಿಷ್ಟಿತ ಕಾಮನ್‌ವೆಲ್ತ್ ಗೇಮ್ಸ್‌ನ ಬಾಕ್ಸಿಂಗ್‌ನಲ್ಲಿಂದು 3ನೇ ಚಿನ್ನದ ಪದಕ ಭಾರತದ ಪಾಲಾಗಿದೆ. ಗೇಮ್ಸ್‌ನಲ್ಲಿ ಒಟ್ಟಾರೆಯಾಗಿ ಇಂದು ಒಂದೇ ದಿನದಲ್ಲಿ 4 ಚಿನ್ನದ ಬೇಟೆಯಾಡಿದ ಕೀರ್ತಿಯನ್ನು ಭಾರತ ಸಂಪಾದಿಸಿದೆ.

    50 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್‌ನಲ್ಲಿ ನಿಖತ್ ಜರೀನ್ ಭರ್ಜರಿ ಗೆಲುವಿನೊಂದಿಗೆ ಚಿನ್ನದ ಪದಕ ಗೆದ್ದು ಬೀಗಿದ್ದಾರೆ. ಇದನ್ನೂ ಓದಿ: CWG-2022: ಭಾರತಕ್ಕೆ ಚಿನ್ನದ ಕಿಕ್ ಕೊಟ್ಟ ಬಾಕ್ಸರ್ಸ್, ಸಿಂಧು ಫೈನಲ್‌ಗೆ ಗ್ರ್ಯಾಂಡ್‌ ಎಂಟ್ರಿ

    ಇದಕ್ಕೂ ಮುನ್ನ 48 ಕೆಜಿ ವಿಭಾಗದ ಮಹಿಳೆಯರ ಬಾಕ್ಸಿಂಗ್ ವಿಭಾಗದಲ್ಲಿ ನೀತು ಗಂಗಾಸ್ ಹಾಗೂ 51 ಕೆಜಿ ಪುರುಷರ ವಿಭಾಗದಲ್ಲಿ ಅಮಿತ್ ಪಂಗಲ್ ಭರ್ಜರಿ ಜಯ ಸಾಧಿಸಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

    10ನೇ ದಿನದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತಕ್ಕೆ 4 ಚಿನ್ನದ ಪದಕಗಳು ಲಭಿಸಿವೆ. ಟ್ರಿಪಲ್ ಜಂಪ್‌ನಲ್ಲಿ ಒಂದು ಹಾಗೂ ಬಾಕ್ಸಿಂಗ್‌ನಲ್ಲಿ 3 ಚಿನ್ನದ ಪದಕ ಪಡೆದಿದೆ.

    ಬೆಳ್ಳಿ ಕಿರಣ ಮೂಡಿಸಿದ ಕಮಲ್‌ -ಸತ್ಯನ್‌: ಇಂದಿನ ಪುರುಷರ ಡಬಲ್ಸ್ ಟೇಬಲ್‌ ಟೆನ್ನಿಸ್‌ ಭಾರತದ ಶರತ್ ಕಮಲ್ ಹಾಗೂ ಸತ್ಯನ್‌ ಜ್ಞಾನ ಶೇಖರನ್‌ ಬೆಳ್ಳಿ ಪದಕ ಗೆದ್ದಿದ್ದಾರೆ.

    ಆದರೆ ಇನ್ನೊಂದೆಡೆ ಮಹಿಳೆಯರ ವಿಭಾಗದ ಟೇಬಲ್‌ ಟೆನ್ನಿಸ್‌ ನಲ್ಲಿ ಭಾರತದ ಶ್ರೀಜಾ ಅಕುಲಾ ಅವರು ಪ್ಲೇ ಆಫ್‌ನಲ್ಲಿ ಆಸ್ಟ್ರೇಲಿಯಾದ ಯಾಂಗ್ಜಿ ಲಿಯು ವಿರುದ್ಧ 3-4 ಅಂತರದಲ್ಲಿ ಸೋಲನ್ನು ಕಂಡಿದ್ದಾರೆ. ಒಂದೂವರೆ ಗಂಟೆಗಳಿಗೂ ಅಧಿಕಕಾಲ ಸೆಣಸಿದ ಅವರು 3 6-11 2-11 11-7 13-15 11-9 7-11 ಅಂತರದಲ್ಲಿ ಪರಾಭವಗೊಂಡಿದ್ದು, ಕಂಚಿನ ಪದಕದಿಂದ ವಂಚಿತರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚಿನ್ನದ ಪದಕ ಗೆಲ್ಲಲು ಭಾರತದ ಮೀರಾಬಾಯಿ ಚಾನು ನನಗೆ ಸ್ಫೂರ್ತಿ ಎಂದ ಪಾಕ್ ವೇಟ್ ಲಿಫ್ಟರ್

    ಚಿನ್ನದ ಪದಕ ಗೆಲ್ಲಲು ಭಾರತದ ಮೀರಾಬಾಯಿ ಚಾನು ನನಗೆ ಸ್ಫೂರ್ತಿ ಎಂದ ಪಾಕ್ ವೇಟ್ ಲಿಫ್ಟರ್

    ಲಂಡನ್: ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಬಳಿಕ ಪಾಕಿಸ್ತಾನದ ವೇಟ್ ಲಿಫ್ಟರ್ ದಸ್ತಗೀರ್ ಭಟ್ ನನ್ನ ಈ ಸಾಧನೆಗೆ ಭಾರತದ ಮೀರಾಬಾಯಿ ಚಾನು ಸ್ಫೂರ್ತಿ ಎಂದು ಹಾಡಿ ಹೊಗಳಿದ್ದಾರೆ.

    22ನೇ ಕಾಮನ್‍ವೆಲ್ತ್ ಗೇಮ್ಸ್‌ನ 109 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್‍ನಲ್ಲಿ ಪಾಕಿಸ್ತಾನದ ವೇಟ್ ಲಿಫ್ಟರ್ ದಸ್ತಗೀರ್ ಭಟ್ ಒಟ್ಟು 405 ಕೆಜಿ ಭಾರ ಎತ್ತಿ ಚಿನ್ನದ ಪದಕ ಗೆದ್ದರು. ಇದು ಪಾಕಿಸ್ತಾನಕ್ಕೆ ಬರ್ಮಿಂಗ್ ಹ್ಯಾಮ್‍ನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಸಿಕ್ಕಿರುವ ಮೊದಲ ಚಿನ್ನದ ಪದಕವಾಗಿದೆ. ಇದನ್ನೂ ಓದಿ: ರೇಣುಕಾ ಸಿಂಗ್ ಇನ್‍ಸ್ವಿಂಗ್ – ಜಸ್ಟ್ ವಾವ್ ಎಂದ ಕ್ರಿಕೆಟ್ ಪ್ರಿಯರು

    24ರ ಹರೆಯದ ದಸ್ತಗೀರ್ ಭಟ್ ಸ್ನ್ಯಾಚ್‍ನಲ್ಲಿ 173 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‍ನಲ್ಲಿ 232 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಗೆದ್ದುಕೊಂಡರು. ಆ ಬಳಿಕ ಪದಕ ಗೆದ್ದ ಸಂಭ್ರಮ ಹಂಚಿಕೊಂಡ ದಸ್ತಗೀರ್ ಭಟ್, ನನ್ನ ಈ ಸಾಧನೆಗೆ ನಮ್ಮ ಪಕ್ಕದ ದೇಶ ಭಾರತದ ಮಹಿಳಾ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಸ್ಫೂರ್ತಿ. ನಾನು ಎರಡು ಬಾರಿ ಭಾರತಕ್ಕೆ ಭೇಟಿ ನೀಡಿದ್ದೇನೆ. ಆ ಸಂದರ್ಭ ನನಗೆ ತುಂಬಾ ಸಂತೋಷ ನೀಡಿತ್ತು. ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿರುವ ಭಾರತದ ವೇಟ್ ಲಿಫ್ಟರ್‌ಗಳಾದ ಗುರ್‌ದೀಪ್ ಸಿಂಗ್ ಸಹಿತ ಹಲವರು ನನ್ನ ಸ್ನೇಹಿತರು. ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ ಎಂದರು. ಇದನ್ನೂ ಓದಿ: ಹೈಜಂಪ್‌ನಲ್ಲಿ ತೇಜಸ್ವಿನ್ ತೇಜಸ್ಸು, ವೇಟ್‌ಲಿಫ್ಟಿಂಗ್‌ನಲ್ಲಿ ಗುರ್‌ದೀಪ್ ಪರಾಕ್ರಮ- ಭಾರತಕ್ಕೆ ಮತ್ತೆರಡು ಕಂಚು

    ಮಹಿಳೆಯರ ವಿಭಾಗದ 49 ಕೆಜಿ ವೇಟ್‍ಲಿಫ್ಟಿಂಗ್‍ನಲ್ಲಿ 201 ಕೆಜಿ ಭಾರ ಎತ್ತುವ ಮೂಲಕ ಮೀರಾಬಾಯಿ ಚಾನು ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರು. ಸ್ನ್ಯಾಚ್‍ನಲ್ಲಿ 88 ಕೆಜಿ ಮತ್ತು ಕ್ಲೀನ್ ಮತ್ತು ಜರ್ಕ್‍ನಲ್ಲಿ 113 ಕೆಜಿ ಭಾರ ಎತ್ತುವ ಮೂಲಕ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದರು. ಮೀರಾಬಾಯಿ ಚಾನು 2014ರ ಕಾಮನ್‍ವೆಲ್ತ್ ಗೇಮ್ಸ್‌ನಲ್ಲಿ ಬೆಳ್ಳಿ, 2018ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಅಲ್ಲದೇ 2017ರ ವಿಶ್ವ ಚಾಂಪಿಯನ್‍ಶಿಪ್‍ನಲ್ಲೂ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಈ ಒಂದು ಸಣ್ಣ ತಪ್ಪಿನಿಂದ ಚಿನ್ನದ ಪದಕ ಕೈತಪ್ಪಿತು – ಪಿ.ವಿ.ಸಿಂಧು ವಿಷಾದ

    ಈ ಒಂದು ಸಣ್ಣ ತಪ್ಪಿನಿಂದ ಚಿನ್ನದ ಪದಕ ಕೈತಪ್ಪಿತು – ಪಿ.ವಿ.ಸಿಂಧು ವಿಷಾದ

    ಬರ್ಮಿಂಗ್‌ಹ್ಯಾಮ್: ಕಾಮನ್‌ವೆಲ್ತ್ ಗೇಮ್ಸ್ನ ಗುಂಪು ಹಂತದ ಬ್ಯಾಡ್ಮಿಂಟನ್‌ನಲ್ಲಿ ಚಿನ್ನದ ಪದಕ ಕೈಚೆಲ್ಲಿದ್ದ ಭಾರತ ಫೈನಲ್ಸ್‌ನಲ್ಲಿ ಮಲೇಷ್ಯಾ ವಿರುದ್ಧ 1-3 ಅಂತರದಲ್ಲಿ ಪರಾಭವಗೊಂಡು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತು.

    ಬೆಳ್ಳಿಪದಕಕ್ಕೆ ಕೊರಳೊಡ್ಡಿದ್ದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು, ಮಲೇಷ್ಯಾ ಸೋಲಿಸೋದು ಅಷ್ಟು ಸುಲಭವಾಗಿರಲಿಲ್ಲ. ನಾವು ಫೈನಲ್‌ನಲ್ಲಿ ಆಡುತ್ತಿದ್ದರಿಂದ ಪ್ರತಿ ಪಂದ್ಯವೂ ನಮಗೆ ಮುಖ್ಯವಾಗಿತ್ತು ಎಂದು ಹೇಳಿದ್ದಾರೆ. ಇದನ್ನೂ ಓದಿ: CWG2022: ಗುಂಪು ಬ್ಯಾಡ್ಮಿಂಟನ್‌ನಲ್ಲಿ ಬೆಳ್ಳಿ ಗೆದ್ದ ಭಾರತ, ಸಿಂಗಲ್ಸ್‌ನಲ್ಲಿ ಸಿಂಧು ಪರಾಕ್ರಮ

    ಎಲ್ಲರೊಂದಿಗೆ ನಾನೂ ಒಂದು ತಂಡವಾಗಿ ಚೆನ್ನಾಗಿ ಆಡಿದ್ದೇನೆ. ದುರದೃಷ್ಟವಶಾತ್ ತಂಡದಲ್ಲಿ ನಡೆದ ಸಣ್ಣಪುಟ್ಟ ಬದಲಾವಣೆಯಿಂದಾಗಿ ಚಿನ್ನ ಗೆಲ್ಲುವ ಅವಕಾಶ ಕೈತಪ್ಪಿತ್ತು. ನಾವು ಬೆಳ್ಳಿ ಪದಕ ಪಡೆದಿದ್ದು, ನನ್ನ ತಂಡ ಸಂತೋಷವಾಗಿದೆ. ಇದು ಕೇವಲ ದಿನದ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಈ ದಿನ ನಮ್ಮದಲ್ಲ ಎಂದು ನಾನು ಭಾವಿಸುತ್ತೇನೆ. ಮತ್ತೊಮ್ಮೆ ಬಲವಾದ ತಂಡವಾಗಿ ಹೊರ ಹೊಮ್ಮುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈಗ ವೈಯಕ್ತಿಕ ಆಟದ ಮೇಲೆ ಕೇಂದ್ರೀಕರಿಸುವುದು ಬಹಳ ಮುಖ್ಯ. ಅದರಲ್ಲಿ ನಾನು ನೂರಕ್ಕೆ ನೂರರಷ್ಟು ಫಲಿತಾಂಶ ನೀಡುತ್ತೇನೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವೇಟ್ ಲಿಫ್ಟಿಂಗ್‌ನಲ್ಲಿ ಭಾರತಕ್ಕೆ 8ನೇ ಪದಕ – ವಿಕಾಸ್ ಠಾಕೂರ್‌ಗೆ ಬೆಳ್ಳಿ

    ಭಾರತದ ಅಗ್ರ ಬ್ಯಾಡ್ಮಿಂಟನ್ ಆಟಗಾರ ಶ್ರೀಕಾಂತ್ ಮಲೇಷ್ಯಾದ ಕೆಳಕ್ರಮಾಂಕದ ಆಟಗಾರ ತ್ಸೆಯಾಂಗ್ ಜಿ-ವಿರುದ್ಧ ಸೋಲು ಅನುಭವಿಸಿದ್ದು, ತಂಡದ ಸೋಲಿಗೆ ಕಾರಣವಾಯಿತು. ಅಲ್ಲದೇ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕೂಡ ಸೋಲನುಭವಿಸಿದರು. ಇದರಿಂದ ತಂಡ 2-0 ಯಿಂದ ಹಿನ್ನಡೆ ಕಾಯ್ದುಕೊಂಡಿತು.

    Live Tv
    [brid partner=56869869 player=32851 video=960834 autoplay=true]