Tag: Cyclone Gaja

  • ರಾಜ್ಯಕ್ಕೆ ಕಾಲಿಡ್ತಿದೆ ಗಜ ಚಂಡಮಾರುತ – ಕರಾವಳಿ ಭಾಗದಲ್ಲಿ 2 ದಿನ ಹೈ ಅಲರ್ಟ್..!

    ರಾಜ್ಯಕ್ಕೆ ಕಾಲಿಡ್ತಿದೆ ಗಜ ಚಂಡಮಾರುತ – ಕರಾವಳಿ ಭಾಗದಲ್ಲಿ 2 ದಿನ ಹೈ ಅಲರ್ಟ್..!

    ಬೆಂಗಳೂರು: ಕಳೆದ ಕೆಲದಿನಗಳಿಂದ ತಮಿಳುನಾಡಿನಲ್ಲಿ ಅವಾಂತರ ಸೃಷ್ಟಿಸಿದ್ದ ಗಜ ಚಂಡಮಾರುತ ಇಂದು ರಾಜ್ಯಕ್ಕೆ ಕಾಲಿಡುವ ಸಾಧ್ಯತೆ ಇದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

    ಕರಾವಳಿ ಭಾಗದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಸಾಧ್ಯತೆ ಇದ್ದು, ಸಮುದ್ರ ತೀರದಲ್ಲಿ ರಕ್ಕಸಗಾತ್ರದ ಅಲೆಗಳು ಏಳುವ ಸಾಧ್ಯತೆಯಿಂದ ಮೀನುಗಾರರು ಸಮುದ್ರ ತೀರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ಚಂಡಮಾರುತ ಮುಂಜಾಗೃತ ಕ್ರಮದ ಹಿನ್ನೆಲೆಯಲ್ಲಿ ರಕ್ಷಣಾ ಸಿದ್ಧತೆ ನಡೆಸಲು ಸೂಚಿಸಲಾಗಿದೆ.

    ಗಜ ಚಂಡಮಾರುತ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಶುರುವಾಗಿದ್ದು, ಈಗಾಗಲೇ ವಾಯುಭಾರ ಕುಸಿತವಾಗಿದೆ. ಈ ಚಂಡಮಾರುತದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ನವೆಂಬರ್ 19 ರಿಂದ 21 ರವರಗೂ ಚಂಡಮಾರುತದ ಎಫೆಕ್ಟ್ ಜೋರಾಗಿರಲಿದೆ ಎಂದು ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಒಳಭಾಗ, ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

    ಗಜ ಚಂಡಮಾರುತದ ಭೀಕರತೆಗೆ ತಮಿಳುನಾಡಿನಲ್ಲಿ ಇದುವರೆಗೂ 33 ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಕಣ್ಮರೆಯಾಗಿದ್ದಾರೆ. ಸದ್ಯ ಬಿರುಗಾಳಿ ಮಳೆ ನಿಂತಿದ್ದು, ಎಲ್ಲಿ ನೋಡಿದರು ಹಾನಿಗೊಳಗಾದ ಮನೆಗಳು, ಮರಗಳು, ಕರೆಂಟ್ ಕಂಬಗಳೇ ಕಾಣಸಿಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗಂಟೆಗೆ 120 ಕಿಮೀ ವೇಗದಲ್ಲಿ ಬೀಸುತ್ತಿದೆ ಗಾಳಿ – `ಗಜ’ ರೌದ್ರನರ್ತನಕ್ಕೆ 20ಕ್ಕೂ ಹೆಚ್ಚು ಮಂದಿ ಬಲಿ

    ಗಂಟೆಗೆ 120 ಕಿಮೀ ವೇಗದಲ್ಲಿ ಬೀಸುತ್ತಿದೆ ಗಾಳಿ – `ಗಜ’ ರೌದ್ರನರ್ತನಕ್ಕೆ 20ಕ್ಕೂ ಹೆಚ್ಚು ಮಂದಿ ಬಲಿ

    ಚೆನ್ನೈ: ಗಂಟೆಗೆ 120 ಕಿಮೀ ವೇಗದಲ್ಲಿ ತೀರಕ್ಕೆ ಅಪ್ಪಳಿಸುತ್ತಿರುವ ಗಜ ಚಂಡಮಾರುತಕ್ಕೆ ತಮಿಳುನಾಡು ತತ್ತರಿಸಿದ್ದು, ಇದುವರೆಗೂ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

    ಗಜ ಚಂಡಮಾರುತದಿಂದ ತಮಿಳುನಾಡಿನ ಸಮುದ್ರ ತೀರ ಪ್ರದೇಶಗಳಲ್ಲದೇ ನಾಗಪಟ್ಟಣಂ, ಕರೈಕಲ್, ಕಡಲೂರು, ಪುದುಚ್ಚೇರಿ, ತಂಜಾವೂರು ಪ್ರದೇಶಗಳನ್ನು ತಲುಪಿದ್ದು, ಚಂಡಮಾರುತದ ದಾಳಿಗೆ ಜನರು ತತ್ತರಿಸಿ ಕಂಗಲಾಗಿದ್ದಾರೆ.

    2004ರ ಭೀಕರ ಸುನಾಮಿ ಸಂಭವಿಸಿದ ದಶಕದ ಬಳಿಕ ನಾಗಪಟ್ಟಣಂನಲ್ಲಿ ಮತ್ತೆ ಅಲ್ಲೋಲ ಕಲ್ಲೋಲ ವಾತಾವರಣ ನಿರ್ಮಾಣವಾಗಿದ್ದು, ತಮಿಳುನಾಡಿನ ಹಲವೆಡೆ ನೂರಾರು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಅಲ್ಲದೇ ಸಾವಿರಾರು ಮನೆಗಳಿಗೆ ಹಾನಿ ಆಗಿದೆ.

    ಇದುವರೆಗೂ ತಮಿಳುನಾಡಿನ ಒಟ್ಟು 6 ಜಿಲ್ಲೆಗಳಲ್ಲಿ ಸುಮಾರು 80 ಸಾವಿರ ಮಂದಿಯನ್ನು ರಕ್ಷಿಸಲಾಗಿದ್ದು ಅವರಿಗಾಗಿ 300 ಆಶ್ರಯತಾಣಗಳನ್ನು ತೆರೆಯಲಾಗಿದೆ. ನಾಗಪಟ್ಟಣಂನಲ್ಲಿ ಇಂದೂ ಕೂಡಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೊತೆಗೆ ಅಪಾಯದಲ್ಲಿ ಸಿಲುಕಿರುವವರ ಸಹಾಯಕ್ಕೆ ರಾಜ್ಯ ಮಟ್ಟದಲ್ಲಿ 1070 ಹಾಗೂ ಜಿಲ್ಲೆಗಳಲ್ಲಿ 1077 ಸಹಾಯವಾಣಿಯನ್ನು ನೀಡಲಾಗಿದೆ.

    ಗಜ ಚಂಡಮಾರುತದಿಂದ ತತ್ತರಿಸಿರುವ ತಮಿಳುನಾಡಿಗೆ ಕೇಂದ್ರ ಗೃಹ ಸಚಿವ ರಾಜ್‍ನಾಥ್ ಸಿಂಗ್ ರಕ್ಷಣಾ ಕ್ರಮಕೈಗೊಳ್ಳಲು ಮುಂದಾಗಿದ್ದು, ಗೃಹ ಇಲಾಖೆಯ ನಿರ್ದೇಶಕರಾಗಿರುವ ರಾಜೀವ್ ಅವರಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ತಮಿಳುನಾಡು ಸಿಎಂ ಪಳನಿಸ್ವಾಮಿ ಅವರಿಂದ ಮಾಹಿತಿ ಪಡೆದಿದ್ದು, ಸನ್ನಿವೇಶದ ಮೇಲ್ವಿಚಾರಣೆ ಹಾಗೂ ಸಹಕಾರ ನೀಡಲಾಗುತ್ತಿದೆ ಎಂದು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಇತ್ತ ಸಿಎಂ ಕೂಡ ರಾಜ್ಯದ ಜನರ ರಕ್ಷಣೆಗೆ ಮುಂದಾಗಿದ್ದು, ಅಪಾಯದಲ್ಲಿ ಸಿಲುಕಿರುವ ರಕ್ಷಣೆ ಹಾಗೂ ಸಂತ್ರಸ್ತರ ನೆರವಿಗೆ ಧಾವಿಸಿ ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews