Tag: cyclone

  • ಗುಜರಾತ್‍ಗೆ ಮತ್ತೆ ವಾಯು ಭೀತಿ – ಶೀಘ್ರವೇ ಕಚ್‍ಗೆ ಅಪ್ಪಳಿಸುವ ಸಾಧ್ಯತೆ

    ಗುಜರಾತ್‍ಗೆ ಮತ್ತೆ ವಾಯು ಭೀತಿ – ಶೀಘ್ರವೇ ಕಚ್‍ಗೆ ಅಪ್ಪಳಿಸುವ ಸಾಧ್ಯತೆ

    ಗುಜರಾತ್: ವಾಯು ಪಥ ಬದಲಾವಣೆಯಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟ ಬೆನ್ನಲ್ಲೇ ಗುಜರಾತ್‍ಗೆ ಕೇಂದ್ರ ಭೂವಿಜ್ಞಾನ ಇಲಾಖೆ ವಾಯು ಚಂಡಮಾರುತ ರೀ ಎಂಟ್ರಿಯಾಗುವ ಮಾಹಿತಿ ನೀಡಿದೆ.

    ವಾಯು ಚಂಡಮಾರುತವು ಮರುಕಳಿಸಲಿದ್ದು, ನಾಳೆ ನಾಡಿದ್ದು ಗುಜರಾತ್‍ನ ಕಚ್‍ಗೆ ಅಪ್ಪಳಿಸುವ ಸಾಧ್ಯತೆಗಳಿವೆ. ವಾಯು ತನ್ನ ಪಥ ಬದಲಿಸಿದ್ದರು ಗುರುವಾರದಿಂದಲೂ ಅದರ ಪರಿಣಾಮವಾಗಿ ಗುಜರಾತ್‍ನ ಕೆಲವೆಡೆ ಗಾಳಿ ಸಹಿತ ಮಳೆಯಾಗುತ್ತಿದೆ.

    ಕರಾವಳಿ ಪ್ರದೇಶ, ಗಿರ್, ಸೋಮ್‍ನಾಥ್, ಡಿಯು, ಜುನಾಗಢ, ಪೋರ್ ಬಂದರ್ ಗಳಲ್ಲಿ ಭಾರೀ ಮಳೆಯಾಗುತ್ತಿದೆ. ಆದರೆ ಗುರುವಾರ ಚಂಡಮಾರುತವು ಅದರ ಪಥ ಬದಲಿಸಿದ ಕಾರಣ ಇನ್ನೂ ಹೆಚ್ಚಿನ ಪರಿಣಾಮಗಳೇನೂ ಉಂಟಾಗದು ಎಂದು ಹವಾಮಾನ ಇಲಾಖೆಯೂ ತಿಳಿಸಿತ್ತು.

    ಚಂಡಮಾರುತದ ತೀವ್ರತೆ ಕಡಿಮೆಯಾಗುವ ಸಾಧ್ಯತೆಗಳಿವೆಯಾದರೂ, ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಸಿದೆ.

  • ಕರಾವಳಿ ಭಾಗದಲ್ಲಿ ಭರ್ಜರಿ ಮಳೆ – ತುಂಬಿ ಹರಿದ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಕಳೆ

    ಕರಾವಳಿ ಭಾಗದಲ್ಲಿ ಭರ್ಜರಿ ಮಳೆ – ತುಂಬಿ ಹರಿದ ನೇತ್ರಾವತಿಯಿಂದ ಧರ್ಮಸ್ಥಳಕ್ಕೆ ಕಳೆ

    ಬೆಂಗಳೂರು: ರಾಜ್ಯಕ್ಕೆ ಅಧಿಕೃತವಾಗಿ ಇನ್ನೂ ಮುಂಗಾರು ಪ್ರವೇಶ ಮಾಡದಿದ್ದರೂ ಕರಾವಳಿಯಲ್ಲಿ ಮಳೆ ಅಬ್ಬರಿಸುತ್ತಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಹೀಗಾಗಿ ನೀರಿಲ್ಲದೆ ಬತ್ತಿಹೋಗಿದ್ದ ನೇತ್ರಾವತಿ ನದಿಯಲ್ಲಿ ಮತ್ತೆ ನೀರು ತುಂಬಿದೆ.

    ರಾಜ್ಯದ ಕರಾವಳಿಯಲ್ಲಿ ಸದ್ಯಕ್ಕೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಮಡಿಕೇರಿ ಭಾಗದಲ್ಲಿ ನೀರಿನ ಮೂಲಗಳು ಭರ್ತಿಯಾಗಿವೆ. ನೇತ್ರಾವತಿ ನದಿ ಜೀವ ಪಡೆದಿದ್ದು, ಧರ್ಮಸ್ಥಳದ ಸ್ನಾನಘಟ್ಟಕ್ಕೆ ನೀರು ಬಂದಿದೆ.

    ಮಡಿಕೇರಿಯಲ್ಲೂ ಮಳೆ ಆಗುತ್ತಿದೆ. ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಚಾರ್ಮಾಡಿ ಘಾಟ್‍ನಲ್ಲಿ ಮತ್ತೆ ಗುಡ್ಡ ಕುಸಿತದ ಭೀತಿ ಎದುರಾಗಿದೆ. ಪ್ರಬಲ ಶಕ್ತಿಯೊಂದಿಗೆ ಗುಜರಾತ್‍ಗೆ ಅಪ್ಪಳಿಸಲಿದೆ ಎಂದು ಮುನ್ಸೂಚನೆ ನೀಡಿದ ವಾಯು ಸೈಕ್ಲೋನ್ ಕೊನೆಗೂ ಯಾವುದೇ ಸದ್ದಿಲ್ಲದೇ ಗುಜರಾತ್‍ನಿಂದ ಒಮನ್‍ನತ್ತ ಸಾಗಿದೆ.

    ಆದರೂ, ಗುಜರಾತ್‍ನಲ್ಲಿ ಮುಂದಿನ 24 ಗಂಟೆ ಅಲರ್ಟ್ ಘೋಷಿಸಲಾಗಿದೆ. ಸೌರಾಷ್ಟ್ರ, ಕಚ್‍ನ ಕಡಲ ತೀರಪ್ರದೇಶಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಗೋವಾದಲ್ಲಿ ಅಚಾನಕ್ಕಾಗಿ ಬಂಡೆಯಿಂದ ಜಾರಿ ಸಮುದ್ರದಲ್ಲಿ ಪಾಲಾಗುತ್ತಿದ್ದ ಸೇನಾ ಸಿಬ್ಬಂದಿಯನ್ನು ಕೋಸ್ಟಲ್ ಗಾರ್ಡ್ ಹೆಲಿಕಾಪ್ಟರ್‍ನಿಂದ ರಕ್ಷಣೆ ಮಾಡಲಾಗಿದೆ.

  • ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಇಂದು ಮಧ್ಯಾಹ್ನ ಗುಜರಾತಿಗೆ ಅಪ್ಪಳಿಸಲಿದೆ ವಾಯು – 3 ಲಕ್ಷ ಜನ ಶಿಫ್ಟ್, 500 ಗ್ರಾಮಗಳ ತೆರವು

    ಗಾಂಧಿನಗರ: ಅರಬ್ಬಿ ಸಮುದ್ರದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಚಂಡಮಾರುತ ವಾಯು ಇದೀಗ ಗುಜರಾತ್‍ನತ್ತ ಪಯಣಿಸಿದೆ. ಹವಾಮಾನ ಇಲಾಖೆ ಪ್ರಕಾರ ಇಂದು ಮಧ್ಯಾಹ್ನದ ಹೊತ್ತಿಗೆ ದಕ್ಷಿಣ ಗುಜರಾತ್‍ನ ಕರಾವಳಿಗೆ ಅಪ್ಪಳಿಸಲಿದೆ.

    ಹವಾಮಾನ ಇಲಾಖೆ ಪ್ರಕಾರ, ವಾಯು ಚಂಡಮಾರುತ ವೆರಾವಲ್‍ನಿಂದ 180 ಕಿ.ಮೀ ಹಾಗೂ ಪೋರ್ ಬಂದರ್ ನಿಂದ 260 ಕಿ.ಮೀ ದೂರದಲ್ಲಿದೆ. ಪ್ರಸ್ತುತ ವಾಯು ಸೈಕ್ಲೋನ್ ತೀವ್ರ ಸ್ವರೂಪ ಪಡೆದಿದ್ದು, ಗಂಟೆಗೆ 170 ರಿಂದ 185 ಕಿ.ಮೀ. ವೇಗದಲ್ಲಿ ಪೋರ್ ಬಂದರ್ ನತ್ತ ಪಯಣಿಸುತ್ತಿದೆ.

    ಮುಂಬೈನಿಂದ ಮುಂದೆ ಸಾಗಿದ ವಾಯು ಚಂಡಮಾರುತ, ದಿಯು-ಸೋಮನಾಥ-ಪೋರಬಂದರ್-ದ್ವಾರಕ ಮೂಲಕ ಸಾಗಿ ಪಾಕಿಸ್ತಾನದ ಕರಾಚಿಯತ್ತ ದುರ್ಬಲ ಆಗಲಿದೆ. ಇದರ ನಡುವೆ ದಿಯು ಹಾಗೂ ಪೋರ್ ಬಂದರ್ ನಡುವೆ ಭಾರೀ ವರ್ಷಧಾರೆಯಾಗಲಿದೆ.

    ಬಂಗಾಳಕೊಲ್ಲಿಯ ಫೋನಿಯಿಂದ ಒಡಿಶಾ ಎದುರಿಸಿದ ಸ್ಥಿತಿಯಿಂದ ಗುಜರಾತ್ ಸರ್ಕಾರ ಎಚ್ಚೆತ್ತುಕೊಂಡಿದೆ. ಹೀಗಾಗಿ, ಗುಜರಾತ್‍ನ ಮೋರ್ಬಿ, ಭಾವನಗರ, ಜುನಾಗಢ, ಗಿರ್, ಸೋಮನಾಥ, ಜಾಮ್‍ನಗರ, ದ್ವಾರಕಾ, ಕಛ್, ಪೋರ್ ಬಂದರ್, ರಾಜಕೋಟ್ ಮತ್ತು ಅಮ್ರೇಲಿಯ 10 ಜಿಲ್ಲೆಗಳ 3 ಲಕ್ಷಕ್ಕೂ ಅಧಿಕ ಜನರನ್ನು ಈಗಾಗಲೇ ಸ್ಥಳಾಂತರ ಹಾಗೂ 500 ಗ್ರಾಮಗಳ ತೆರವು ಮಾಡಲಾಗಿದೆ.

    ಅಲ್ಲದೆ ಮುನ್ನೆಚ್ಚರಿಕಾ ಕ್ರಮವಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 52 ತಂಡಗಳು ಗುಜರಾತ್‍ನಲ್ಲಿ ಬೀಡು ಬಿಟ್ಟಿವೆ. ಜೊತೆಗೆ, ಸೇನಾಪಡೆಯ 10 ತುಕಡಿಗಳು, ಮುಂಬೈ ನೌಕಾನೆಲೆಯಲ್ಲಿ ತುರ್ತು ಸ್ಥಿತಿ ಎದುರಿಸಲು ವೈದ್ಯಕೀಯ ತಂಡಗಳು ಸನ್ನದ್ಧವಾಗಿವೆ.

  • ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿಗೆ ಚಂಡಮಾರುತ ಅಡ್ಡಿ

    ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿಗೆ ಚಂಡಮಾರುತ ಅಡ್ಡಿ

    ಬೆಂಗಳೂರು: ಕೇರಳಕ್ಕೆ ಮುಂಗಾರು ಎಂಟ್ರಿಯಾದ ಒಂದೆರಡು ದಿನದ ಬಳಿಕವಾದ್ರೂ ರಾಜ್ಯಕ್ಕೆ ಮುಂಗಾರು ಆಗಮನವಾಗಬೇಕಾಗಿತ್ತು. ಆದರೆ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿಯಿಂದಾಗಿ ಮುಂಗಾರು ವಿಳಂಬವಾಗುತ್ತಿದೆ.

    ರಾಜ್ಯಕ್ಕೆ ಮುಂಗಾರು ಕಾಲಿಡಲು ಸತಾಯಿಸುತ್ತಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು 12ರಂದು ಅಂದರೆ ಬುಧವಾರ ಮುಂಗಾರು ಎಂಟ್ರಿಯಾಗಬಹುದು ಎನ್ನುವ ನಿರೀಕ್ಷೆಯಿದೆ. ಇಂದು ಮುಂಗಾರು ರಾಜ್ಯಕ್ಕೆ ಪ್ರವೇಶ ಯಾವಾಗ ಆಗಬಹುದು ಅನ್ನುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಕೊಡುವ ಸಾಧ್ಯತೆ ಇದೆ. ರೈತರು ಕಣ್ಣುಬಾಯಿ ಬಿಟ್ಟು ಮುಂಗಾರಿಗೆ ಕಾಯುತ್ತಿದ್ದು ಬಾಯರಿದ ಡ್ಯಾಂಗಳು ಕೂಡ ವರುಣಾನಗಮನಕ್ಕೆ ಕಾದು ಕೂತಿದೆ.

    ಇತ್ತ ಮುಂಬೈನಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ರೈಲು ಸಂಚಾರ, ವಿಮಾನಯಾನ, ಸಾರಿಗೆ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಭಾರೀ ಮಳೆಯಿಂದಾಗಿ ಮುಂಬೈನಲ್ಲಿ ಇಳಿಯಬೇಕಾಗಿದ್ದ 11 ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಗಳಲ್ಲಿ ಇಳಿಸಲಾಗಿದೆ. ಅಲ್ಲದೇ ಕೆಲವು ವಿಮಾನಯಾನ ಸಂಚಾರವನ್ನು ರದ್ದು ಮಾಡಲಾಗಿದೆ. ಇದರ ಮಧ್ಯೆ ಉತ್ತರ ಭಾರತ ಸೇರಿ ದೆಹಲಿಯಲ್ಲಿ ಬಿಸಿಲಿನ ತಾಪ ಹೆಚ್ಚಿದೆ. ದೆಹಲಿಯಲ್ಲಿ ಬಿಸಿಲಿನ ತಾಪ 48 ಡಿಗ್ರಿ ಸೆಲ್ಸಿಯಸ್ ತಲುಪಿದೆ.

  • ಫೋನಿ ಚಂಡಮಾರುತ ಅಬ್ಬರ ಅಂಡಮಾನ್-ನಿಕೋಬಾರ್‌ನಲ್ಲಿ ಕನ್ನಡಿಗರ ಪರದಾಟ

    ಫೋನಿ ಚಂಡಮಾರುತ ಅಬ್ಬರ ಅಂಡಮಾನ್-ನಿಕೋಬಾರ್‌ನಲ್ಲಿ ಕನ್ನಡಿಗರ ಪರದಾಟ

    ಚಿಕ್ಕಬಳ್ಳಾಪುರ: ಫೋನಿ ಚಂಡಮಾರುತದ ಅಬ್ಬರಕ್ಕೆ ಅಂಡಮಾನ್ ನಿಕೋಬಾರ್ ದ್ವೀಪದಲ್ಲಿ 70 ಮಂದಿ ಕನ್ನಡಿಗರು ಪರದಾಡುವಂತಾಗಿದೆ.

    ಏಪ್ರಿಲ್ 29ರಂದು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಮೂಲೆಗಳಿಂದ ಅಂಡಮಾನ್- ನಿಕೋಬಾರ್ ದ್ವೀಪಕ್ಕೆ ಪ್ರವಾಸ ಕೈಗೊಂಡಿದ್ದರು. ಆದರೆ ಪ್ರವಾಸ ಮುಗಿಸಿ ಇಂದು ವಾಪಾಸ್ಸಾಗಲು ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆಯಲ್ಲಿ ಟಿಕೆಟ್ ಸಹ ಬುಕ್ ಮಾಡಿದ್ದರು.

    ಫೋನಿ ಸೈಕ್ಲೋನ್ ಭೀತಿಯಿಂದ ಅಂಡಮಾನ್ – ನಿಕೋಬಾರ್ ನ ಪೋರ್ಟ್ ಬ್ಲೇರ್ ನ ವೀರ ಸಾವರ್ಕರ್ ವಿಮಾನ ನಿಲ್ದಾಣದಿಂದ ವಿಮಾನ ಹಾರಾಟ ರದ್ದುಪಡಿಸಲಾಗಿದೆ. ಹೀಗಾಗಿ ಕರ್ನಾಟಕಕ್ಕೆ ವಾಪಾಸ್ಸಾಗಲು ಬೇರೆ ದಾರಿ ಕಾಣದ ಕನ್ನಡಿಗರು ಪರದಾಡುತ್ತಿದ್ದಾರೆ.

    ಸದ್ಯ ಪೋರ್ಟ್ ಬ್ಲೇರ್ ಏರ್ ಪೋರ್ಟ್ ನಲ್ಲಿ ಕಾಲ ಕಳೆಯುತ್ತಿರುವ ಕನ್ನಡಿಗರಿಗೆ ಉಳಿದುಕೊಳ್ಳಲು ಸಹ ಬೇರೆ ದಾರಿ ಇಲ್ಲವಾಗಿದೆ. 70 ಮಂದಿಯಲ್ಲಿ ವೃದ್ಧರು ಮಕ್ಕಳು ಸಹ ಇದ್ದು ಊಟ ತಿಂಡಿಗೂ ಕಷ್ಟಪಡುವಂತಾಗ್ತಿದೆ. ರಾಜ್ಯ ಸರ್ಕಾರ ಸಹಾಯಕ್ಕೆ ಧಾವಿಸುವಂತೆ ಪಬ್ಲಿಕ್ ಟಿವಿಗೆ ಕರೆ ಮಾಡಿ ಕನ್ನಡಿಗರು ಮನವಿ ಮಾಡಿಕೊಂಡಿದ್ದಾರೆ.

  • ಮಗುವಿಗೆ `ಫೋನಿ’ ಎಂದು ಹೆಸರಿಟ್ಟ ದಂಪತಿ

    ಮಗುವಿಗೆ `ಫೋನಿ’ ಎಂದು ಹೆಸರಿಟ್ಟ ದಂಪತಿ

    ಭುವನೇಶ್ವರ್: ಚಂಡಮಾರುತ ಸಮಯದಲ್ಲಿ ಹುಟ್ಟಿದ್ದ ಹೆಣ್ಣು ಮಗುವಿಗೆ ದಂಪತಿ `ಫೋನಿ’ ಎಂದು ಹೆಸರಿಟ್ಟಿದ್ದಾರೆ.

    ಒಡಿಶಾದ ಭುವನೇಶ್ವರ್ ನಲ್ಲಿ ಶುಕ್ರವಾರ 11.03ರ ಸುಮಾರಿಗೆ ರೈಲ್ವೇ ಆಸ್ಪತ್ರೆಯಲ್ಲಿ ಹೆಣ್ಣು ಮಗು ಜನಿಸಿದೆ. ಮಹಿಳೆ ರೈಲ್ವೆ ಸಿಬ್ಬಂದಿ ಆಗಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಚಂಡಮಾರುತಕ್ಕೆ ಫೋನಿ ಹೆಸರು ಬಂದಿದ್ದು ಹೇಗೆ?

    ಮಾಧ್ಯಮ ಸಂಸ್ಥೆಯೊಂದು ವೈದ್ಯರ ಜೊತೆ ಇರುವ ಮಗುವಿನ ಫೋಟೋ ಹಾಕಿ ಟ್ವೀಟ್ ಮಾಡಿದೆ. “32 ವರ್ಷದ ಮಹಿಳೆ ಸುಮಾರು 11.03ಕ್ಕೆ ರೈಲ್ವೆ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ `ಫೋನಿ’ ಎಂದು ಹೆಸರಿಟ್ಟಿದ್ದಾರೆ. ಮಹಿಳೆ ರೈಲ್ವೆ ಸಿಬ್ಬಂದಿಯಾಗಿದ್ದು, ಸದ್ಯ ತಾಯಿ ಹಾಗೂ ಮಗು ಕ್ಷೇಮವಾಗಿದ್ದಾರೆ” ಎಂದು ಬರೆದುಕೊಂಡಿದೆ.

    ಈ ಟ್ವೀಟ್‍ಗೆ ರೀ-ಟ್ವೀಟ್ ಮಾಡುವ ಮೂಲಕ ಹಲವು ಜನ ಮಗುವನ್ನು ಸ್ವಾಗತಿಸಿದ್ದಾರೆ. ಅಲ್ಲದೆ ಕೆಲವರು ಮಗುವಿಗೆ ಫೋನಿ ಎಂದು ಹೆಸರು ಇಡಬಾರದಿತ್ತು. ಏಕೆಂದರೆ ಫೋನಿ ಎಂದರೆ ಹಾವು ಎಂದರ್ಥ ಎಂದು ಹೇಳಿ ರೀ-ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪ್ರಚಂಡ ಮಾರುತಕ್ಕೆ ಒಡಿಶಾ ತತ್ತರ – 8 ಸಾವು, ಆಸ್ತಿ-ಪಾಸ್ತಿ ನಷ್ಟ ಲೆಕ್ಕಕ್ಕೇ ಸಿಗ್ತಿಲ್ಲ

    ಪಶ್ಚಿಮ ಬಂಗಾಳದಲ್ಲೂ 100ರಿಂದ 110 ಕಿ.ಮೀ ವೇಗದಲ್ಲಿ ಫೋನಿ ಚಂಡಮಾರುತ ಅಪ್ಪಳಿಸಿದೆ. ಪೂರ್ವ ಮತ್ತು ಪಶ್ಚಿಮ ಮಿಡ್ನಾಪುರ್, ದಕ್ಷಿಣ ಮತ್ತು ಉತ್ತರ 24 ಪರಗಣ, ಹೌರಾ, ಹೂಗ್ಲಿ, ಜಾಗ್ರಾಂ, ಕೋಲ್ಕತ್ತಾದಲ್ಲೂ ಕಟ್ಟೆಚ್ಚರ ಘೋಷಿಸಲಾಗಿದೆ. ಕೋಲ್ಕತ್ತಾ ಏರ್ ಪೋರ್ಟ್ ನಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ವಿಮಾನಗಳ ಹಾರಾಟ ಸ್ಥಗಿತಗೊಂಡಿದೆ. ಬೆಳಗ್ಗೆ 11.30ರವರೆಗೆ ಅತ್ಯಂತ ಭೀಕರ ಸ್ಥಿತಿಯಲ್ಲಿರುವ ಫೋನಿ ಚಂಡಮಾರುತ, ರಾತ್ರಿ 11.30ರ ವೇಳೆಗೆ ತೀವ್ರ ಸ್ಥಿತಿಗೆ ತನ್ನ ಅಬ್ಬರವನ್ನ ತಗ್ಗಿಸಲಿದೆ ಎಂಬುದಾಗಿ ತಿಳಿದುಬಂದಿದೆ.

  • ಸೈಕ್ಲೋನ್ ಶಾಕ್ – ತಿಂಗಳ ಅಂತ್ಯಕ್ಕೆ ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ

    ಸೈಕ್ಲೋನ್ ಶಾಕ್ – ತಿಂಗಳ ಅಂತ್ಯಕ್ಕೆ ರಾಜ್ಯಕ್ಕೆ ಅಪ್ಪಳಿಸಲಿದೆ ಚಂಡಮಾರುತ

    ಬೆಂಗಳೂರು: ಏಪ್ರಿಲ್ ತಿಂಗಳ ಅಂತ್ಯಕ್ಕೆ ರಾಜ್ಯಕ್ಕೆ ಚಂಡಮಾರುತದ ಎಫೆಕ್ಟ್ ಭಾರೀ ಮಳೆಯ ಎಚ್ಚರಿಕೆಯನ್ನು ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ನೀಡಿದೆ.

    ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿಗೆ ಮಹಾ ಮಳೆಗೆ ಮಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್ 30 ರಿಂದ ಮೂರು ದಿನಗಳ ಕಾಲ ಸತತ ಮಳೆ ಆಗಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು ಭಾಗದಲ್ಲಿ ಸೈಕ್ಲೋನ್ ಎಫೆಕ್ಟ್ ನಿಂದ ಭಾರೀ ಮಳೆ ಬರುವ ಸಾಧ್ಯತೆ ಇದೆ. ಇನ್ನು ಚೆನ್ನೈ ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸೃಷ್ಟಿಯಾಗಿದ್ದು ಆತಂಕಕ್ಕೆ ಕಾರಣವಾಗಿದೆ.

    ಈ ಬಗ್ಗೆ ಮಾತನಾಡಿದ ಪ್ರಾಕೃತಿಕ ವಿಕೋಪ ನಿರ್ವಹಣಾ ಕೇಂದ್ರ ಅಧ್ಯಕ್ಷ, ಶ್ರೀನಿವಾಸ್ ಅವರು, ಬಂಗಾಳಕೊಲ್ಲಿಯ ಎಂಡ್‍ನಲ್ಲಿ ಅಂದರೆ ಶ್ರೀಲಂಕಾ ಮೇಲೆ ಟ್ರಫ್ (ಮೋಡಗಳ ಸಾಲು) ನಿರ್ಮಾಣವಾಗಿದೆ. ಈ ಟ್ರಫ್ ಮುಂದಿನ ಎರಡು ದಿನದಲ್ಲಿ ಸೈಕ್ಲೋನ್ ಆಗುವ ಸಾಧ್ಯತೆ ಇದೆ ಎಂಬ ಮುನ್ಸೂಚನೆ ಇದೆ. ಅರಬ್ಬಿ ಸಮುದ್ರದಲ್ಲಿ ಒಂದು ಟ್ರಫ್ ಇದೆ. ಈ ಟ್ರಫ್ ಮಹಾರಾಷ್ಟ್ರದವರೆಗೂ ಇದೆ. ಇಲ್ಲಿ ಸೈಕ್ಲೋನ್ ಶುರುವಾದಾಗ ಟ್ರಫ್ ಕೂಡ ಆಕ್ಟೀವ್ ಆಗುತ್ತದೆ. ಆಗ ಮಲೆನಾಡಿನಲ್ಲಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಈ ಟ್ರಫ್ ಅರಬ್ಬಿ ಸಮುದ್ರಕ್ಕೆ ಹೊಂದಿಕೊಂಡ ಭಾಗದಲ್ಲಿ ಹೆಚ್ಚಿನ ಮಳೆ ಬರುವ ಸಾಧ್ಯತೆ ಇದೆ. ಏ. 30 ಹಾಗೂ ಮೇ 1ರಂದು ಬೆಂಗಳೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ.

  • ಪೆಥಾಯ್ ಚಂಡಮಾರುತ: 250ಕ್ಕೂ ಹೆಚ್ಚು ಗೋವುಗಳ ಮಾರಣಹೋಮ

    ಪೆಥಾಯ್ ಚಂಡಮಾರುತ: 250ಕ್ಕೂ ಹೆಚ್ಚು ಗೋವುಗಳ ಮಾರಣಹೋಮ

                                                                  ಸಾಂದಭೀಕ ಚಿತ್ರ

    ಭುವನೇಶ್ವರ: ಪೆಥಾಯ್ ಚಂಡಮಾರುತಕ್ಕೆ ತತ್ತರಿಸಿದ ಒಡಿಶಾದಲ್ಲಿ ಮೂರೇ ದಿನದಲ್ಲಿ ಸುಮಾರು 250 ಕ್ಕೂ ಹೆಚ್ಚು ಜಾನುವಾರುಗಳು ಸಾವಿಗೀಡಾಗಿದೆ.

    ಪೆಥಾಯ್ ಚಂಡಮಾರುತಕ್ಕೆ ಒಡಿಶಾ ರಾಜ್ಯ ತತ್ತರಿಸಿ ಹೋಗಿದೆ. ಗಂಜಮ್ ಜಿಲ್ಲೆಯ ಲ್ಯಾಂಡಜುವಿಲಿ ಗ್ರಾಮದಲ್ಲಿ ಗುರುವಾರ ಒಂದೇ ದಿನಕ್ಕೆ ಸುಮಾರು 57 ಕರುಗಳು ಸಾವನ್ನಪ್ಪಿದ್ದವು. ಈ ವಿಷಯ ತಿಳಿಯುತ್ತಿದಂತೆ ಸಂಬಂಧ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೆಥಾಯ್ ಚಂಡಮಾರುತದ ಪರಿಣಾಮದಿಂದ ಜಾನುವಾರುಗಳು ಸಾವನ್ನಪ್ಪಿರುವ ಸಂಗತಿ ತಿಳಿದು ಬಂದಿದೆ.

    ಚಂಡಮಾರುತದಿಂದ ಒಡಿಶಾದಲ್ಲಿ ವಾತಾವರಣ ಹದಗೆಟ್ಟಿತ್ತು. ಇದರ ಪರಿಣಾಮವೆಂಬಂತೆ ಈ ಭಾಗದ ಜಾನುವಾರುಗಳು ನೇರವಾಗಿ ಮಳೆಯಲ್ಲಿ ಇದ್ದಿದ್ದರಿಂದ ಹಾಗೂ ಪ್ರದೇಶದಲ್ಲಿ ಹೆಚ್ಚು ಚಳಿ ಇದ್ದ ಕಾರಣಕ್ಕೆ ನ್ಯುಮೋನಿಯಾ ರೋಗ ಬಂದು ಮೃತಪಟ್ಟಿದೆ ಎಂದು ಸಹಾಯಕ ಜಿಲ್ಲಾ ಪಶುವೈದ್ಯಾಧಿಕಾರಿ ರವೀಂದ್ರನಾಥ್ ಪಾಂಡಾ ತಿಳಿಸಿದರು.

    ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಾವನ್ನಪ್ಪಿದ್ದ ಜಾನುವಾರುಗಳನ್ನು ಸುಡಲಾಯಿತು. ಅಲ್ಲದೆ ಗಂಜಮ್ ಜಿಲ್ಲೆಯ ಇತರೇ ಜಾನುವಾರುಗಳ ರಕ್ತದ ಪರೀಕ್ಷೆ ನಡೆಸಿ, ನ್ಯುಮೋನಿಯಾ ರೋಗ ಲಕ್ಷಣ ಕಂಡು ಬಂದರೆ ಚಿಕಿತ್ಸೆ ನೀಡಲು ಅಲ್ಲಿನ ಜಿಲ್ಲಾಡಳಿತ ಮುಂದಾಗಿದೆ.

    ಕಳೆದ ಮೂರು ದಿನಗಳಲ್ಲಿ ಸರಿ ಸುಮಾರು 259 ಜಾನುವಾರುಗಳಲ್ಲಿ 223 ಕರುಗಳು ಚಂಡಮಾರುತದ ಮಳೆಗೆ ಬಲಿಯಾಗಿದೆ ಎಂದು ವರದಿಯಾಗಿದೆ. ಪೆಥಾಯ್ ಚಂಡಮಾರುತಕ್ಕೆ ಒಡಿಶಾ ರಾಜ್ಯದ ಜನರ ಜೀವನ ಅಸ್ತವ್ಯಸ್ತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪೆಥಾಯ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಹೆಚ್ಚಾಯ್ತು ಚಳಿ!

    ಪೆಥಾಯ್ ಚಂಡಮಾರುತ ಎಫೆಕ್ಟ್: ಕರ್ನಾಟಕದಲ್ಲಿ ಹೆಚ್ಚಾಯ್ತು ಚಳಿ!

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಪೆಥಾಯ್ ಚಂಡಮಾರುತದ ಅಬ್ಬರದಿಂದ ರಾಜ್ಯದಲ್ಲಿ ಮೋಡದ ಜೊತೆಗೆ ಚಳಿಯ ಪ್ರಮಾಣವೂ ಹೆಚ್ಚಾಗಿದೆ.

    ಸಂಜೆ 6 ಗಂಟೆಯಿಂದ ಮರುದಿನ ಬೆಳಗ್ಗೆ ಸುಮಾರು 7 ಗಂಟೆಯವರೆಗೂ ಕೊರೆಯುವ ಚಳಿಯಿದೆ. ಸೋಮವಾರ ಬೆಂಗಳೂರು ಗ್ರಾಮಾಂತರದಲ್ಲಿ 11.8 ಡಿಗ್ರಿ ತಾಪಮಾನ ದಾಖಲಾಗಿದ್ದು, ಇದು ಇತ್ತೀಚಿನ ದಿನಗಳಲ್ಲಿ ಅತಿಕಡಿಮೆ ಎಂದು ಹೇಳಲಾಗುತ್ತಿದೆ. ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಹಿಮದಿಂದ ಕೂಡಿದ ಚಳಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಎಲ್ಲೆಲ್ಲಿ ಎಷ್ಟು?
    ಸೋಮವಾರ ಬೆಂಗಳೂರು ಗ್ರಾಮಾಂತರ 11.8 ಡಿಗ್ರಿ, ಹಾಸನ 11.9 ಡಿಗ್ರಿ, ಕೊಡಗು 12.4 ಡಿಗ್ರಿ, ಬೆಂಗಳೂರು ನಗರದಲ್ಲಿ 12.8 ಡಿಗ್ರಿ ತಾಪಮಾನ ದಾಖಲಾಗಿದೆ.

    ಉಡುಪಿಯಲ್ಲಿ ಅತಿ ಹೆಚ್ಚು 20.1 ಡಿಗ್ರಿ ತಾಪಮಾನ ದಾಖಲಾಗಿದೆ. ದಕ್ಷಿಣ ಕನ್ನಡ 19 ಡಿಗ್ರಿ, ಉತ್ತರ ಕನ್ನಡ 17.7 ಡಿಗ್ರಿ, ಬಳ್ಳಾರಿ 15.9 ಡಿಗ್ರಿ, ಬಾಗಲಕೋಟ 14.6 ಡಿಗ್ರಿ, ಬೀದರ್ 14.5 ಡಿಗ್ರಿ, ಚಿಕ್ಕಬಳ್ಳಾಪುರ 13.2 ಡಿಗ್ರಿ, ಚಿಕ್ಕಮಗಳೂರು 13.3 ಡಿಗ್ರಿ, ಹಾವೇರಿ 14.6 ಡಿಗ್ರಿ, ಕಲಬುರಗಿ 14.7 ಡಿಗ್ರಿ, ಧಾರವಾಡ 13.5 ಡಿಗ್ರಿ ತಾಪಮಾನ ದಾಖಲಾಗಿದೆ.

    ಆಂಧ್ರ, ತಮಿಳುನಾಡಲ್ಲಿ ಭಾರೀ ಮಳೆ:
    ಪೆಥಾಯಿ ಚಂಡಮಾರುತ ಸೋಮವಾರ ಮಧ್ಯಾಹ್ನ ಆಂಧ್ರ ಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗೆ ಅಪ್ಪಳಿಸಿದೆ. ಈಗ ಆಂಧ್ರ, ತಮಿಳುನಾಡು ಕರಾವಳಿ ಭಾಗದಲ್ಲಿ ಮಳೆಯಬ್ಬರ ಜೋರಾಗಿದ್ದು, ಸಾವಿರಾರು ಜನ ಅತಂತ್ರರಾಗಿದ್ದಾರೆ. ಅಲ್ಲದೆ ಆಂಧ್ರದಲ್ಲಿ ಈಗಾಗಲೇ ನಾಲ್ವರು ಬಲಿಯಾಗಿದ್ದಾರೆ. ಅಮಲಾಪುರದಲ್ಲಿ ಚಂಡಮಾರುತದ ಮಳೆಯ ನೀರಿನ ಜೊತೆಗೆ ಗ್ರಾಮದೊಳಗೆ ಮೀನುಗಳು ಬರುತ್ತಿರುವುದು ಜನರಲ್ಲಿ ಅಚ್ಚರಿ ಮೂಡಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

     

  • ಚಂಡಮಾರುತಕ್ಕೆ ನಲುಗಿದ ತಮಿಳುನಾಡಿನ ಜನತೆಗೆ ಬೆಸ್ಕಾಂ ಸಹಾಯ ಹಸ್ತ

    ಚಂಡಮಾರುತಕ್ಕೆ ನಲುಗಿದ ತಮಿಳುನಾಡಿನ ಜನತೆಗೆ ಬೆಸ್ಕಾಂ ಸಹಾಯ ಹಸ್ತ

    ಬೆಂಗಳೂರು: ಚಂಡಮಾರುತಕ್ಕೆ ನಲುಗಿದ ತಮಿಳುನಾಡಿನ ಜನತೆಗೆ ಬೆಸ್ಕಾಂ ನೌಕರರು ಸಹಾಯ ಹಸ್ತ ಚಾಚಿದ್ದಾರೆ.

    ಬೆಂಗಳೂರಿನ ಬೆಸ್ಕಾಂ ನೌಕರರು ಸ್ವಯಂ ಸೇವೆ ನೀಡಲು ಮುಂದಾಗಿದ್ದು, ಈಗಾಗಲೇ ತಮಿಳುನಾಡಿಗೆ 1,000 ಬೆಸ್ಕಾಂ ನೌಕರರು ತೆರೆಳಿದ್ದಾರೆ. ಗಜ ಚಂಡಮಾರುತದಿಂದ 1 ಲಕ್ಷಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಬಿದ್ದು ಹಾಳಾಗಿವೆ. ಅಲ್ಲದೇ ಕಂಬಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಈ ಹಿನ್ನೆಲೆ ತಮಿಳುನಾಡಿನಿಂದ ಸಹಾಯ ಕೋರಿ ಪತ್ರ ಬಂದಿತ್ತು.

    ಪತ್ರ ಬಂದ ಹಿನ್ನೆಲೆ ರಾಜ್ಯ ಸರ್ಕಾರದ ಮೌಖಿಕ ಆದೇಶದ ಮೇರೆಗೆ ನೌಕರರು ತಮಿಳುನಾಡಿಗೆ ತೆರೆಳಿದ್ದಾರೆ. ತಮಿಳುನಾಡಿಗೆ ತೆರಳಿ ಹತ್ತು ದಿನಗಳ ಕಾಲ ಅಲ್ಲಿಯೇ ಉಳಿದು ಬೆಸ್ಕಾಂ ನೌಕರರು ಸೇವೆ ಮಾಡಲಿದ್ದಾರೆ. 10 ಕೆಎಸ್‍ಆರ್ ಟಿಸಿ ಬಸ್‍ನಲ್ಲಿ ನೌಕರರು ತೆರೆಳಿದ್ದಾರೆ. ಬೆಸ್ಕಾಂ ನೌಕರರು ಫ್ರೀಡಂ ಪಾರ್ಕ್ ನಿಂದ 10 ಕೆಎಸ್‍ಆರ್ ಟಿಸಿ ಬಸ್‍ನಲ್ಲಿ ತೆರೆಳಿದ್ದಾರೆ. ಅಲ್ಲಿ ಸ್ವಯಂಕೃತವಾಗಿ ಸೇವೆ ಸಲ್ಲಿಸಿ ವಾಪಾಸ್ಸ್ ಆಗಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv