Tag: cyclone

  • ಋತುಚಕ್ರವಾದಾಗ ಮನೆಯಿಂದ ಹೊರಹಾಕಿದ್ರು- ದಾರುಣವಾಗಿ ಮೃತಪಟ್ಟ ಬಾಲಕಿ

    ಋತುಚಕ್ರವಾದಾಗ ಮನೆಯಿಂದ ಹೊರಹಾಕಿದ್ರು- ದಾರುಣವಾಗಿ ಮೃತಪಟ್ಟ ಬಾಲಕಿ

    ಚೆನ್ನೈ: ಋತಚಕ್ರದ ವೇಳೆ ಬಾಲಕಿಯನ್ನು ಕುಟುಂಬದವರು ಹೊರಹಾಕಿದ್ದರಿಂದ ಆ ಬಾಲಕಿ ದಾರುಣವಾಗಿ ಮೃತಪಟ್ಟ ಘಟನೆಯೊಂದು ತಮಿಳುನಾಡಿನ ಅನಿಕಡು ಗ್ರಾಮದಲ್ಲಿ ನಡೆದಿದೆ.

    ವಿಜಯ(12) ಮೃತಪಟ್ಟ ಬಾಲಕಿ. ವಿಜಯ 7ನೇ ತರಗತಿಯಲ್ಲಿ ಓದುತ್ತಿದ್ದಳು. ನ. 12ರಂದು ಬಾಲಕಿಗೆ ಮೊದಲ ಬಾರಿಗೆ ಋತುಚಕ್ರವಾಗಿದೆ. ವಿಜಯಗೆ ಋತುಚಕ್ರದ ವೇಳೆ ಆಕೆಯ ಕುಟುಂಬದವರು ಮನೆಯೊಳಗೆ ಪ್ರವೇಶಿಸಲು ನಿರ್ಬಂಧಿಸಿದ್ದರು.

    ವಿಜಯ ಕುಟುಂಬದವರು ಆಕೆಯನ್ನು ಮನೆಯಿಂದ ಹೊರಹಾಕಿ ಹತ್ತಿರದಲ್ಲೇ ಒಂದು ಗುಡಿಸಲು ನಿರ್ಮಿಸಿಕೊಟ್ಟಿದ್ದರು. ವಿಜಯ 16 ದಿನ ಈ ಗುಡಿಸಲಲ್ಲಿ ಒಬ್ಬಳೇ ವಾಸಿಸಬೇಕೆಂದು ಆಕೆಯ ಕುಟುಂಬದವರು ಹೇಳಿದ್ದರು ಎಂದು ವರದಿಯಾಗಿದೆ.

                                                                                             ಸಾಂದರ್ಭಿಕ ಚಿತ್ರ

    ನ. 16ರಂದು ವಿಜಯ ಗುಡಿಸಲಲ್ಲಿ ಇದ್ದಳು. ಆ ದಿನ ಜೋರು ಗಜ ಚಂಡಮಾರುತದಿಂದಾಗಿ ಗಾಳಿ ಜೋರಾಗಿ ಬೀಸಿತ್ತು. ಹವಾಮಾನ ಇಲಾಖೆ ಮೊದಲೇ ಜನರಿಗೆ ಮನೆಯಿಂದ ಹೊರಬರಬೇಡಿ, ಮನೆಯ ಒಳಗೆ ಸುರಕ್ಷಿತ ಸ್ಥಳದಲ್ಲಿ ಇರಿ ಎಂದು ಎಚ್ಚರಿಕೆ ನೀಡಿತ್ತು. ಈ ಮುನ್ಸೂಚನೆ ಸಿಕ್ಕಿದ್ದರೂ ಮನೆಯವರು ಇದನ್ನು ಲೆಕ್ಕಿಸದೇ ವಿಜಯಗಾಗಿ ಗುಡಿಸಲು ನಿರ್ಮಿಸಿಕೊಟ್ಟಿದ್ದರು.

    ಚಂಡಮಾರುತದ ಕಾರಣ ಜೋರಾಗಿ ಗಾಳಿ ಬೀಸಿ ಅಲ್ಲಿದ್ದ ತೆಂಗಿನಮರ ವಿಜಯ ಮಲಗಿದ್ದ ಗುಡಿಸಲಿನ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿಜಯ ಮೃತಪಟ್ಟಿದ್ದಾಳೆ. ಜನರು ಬೆಳಗ್ಗೆ ಎದ್ದು ಬಂದು ನೋಡಿದ್ದಾಗ ವಿಜಯಳ ಮೃತದೇಹ ಪತ್ತೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ತಮಿಳುನಾಡಿನಲ್ಲಿ `ಗಜ’ ಚಂಡಮಾರುತದ ಅಬ್ಬರ – ಇತ್ತ ಕರ್ನಾಟಕಕ್ಕೂ ತಟ್ಟಿತು ಸೈಕ್ಲೋನ್

    ತಮಿಳುನಾಡಿನಲ್ಲಿ `ಗಜ’ ಚಂಡಮಾರುತದ ಅಬ್ಬರ – ಇತ್ತ ಕರ್ನಾಟಕಕ್ಕೂ ತಟ್ಟಿತು ಸೈಕ್ಲೋನ್

    ಚೆನ್ನೈ: ತಮಿಳುನಾಡಿನಲ್ಲಿ ಗಜ ಚಂಡಮಾರುತದ ಅಬ್ಬರ ಜೋರಾಗಿದೆ. ಪರಿಣಾಮ ನಾಗಪಟ್ಟಣಂ, ತಿರುವರೂರ್, ಕಡಲೂರು, ಪುದುಕೋಟೈ, ತಂಜಾವೂರು, ರಾಮನಾಥಪುರಂ ಸೇರಿ ಹಲವೆಡೆ ಭಾರೀ ಮಳೆಯಾಗ್ತಿದೆ. ಅಲ್ಲಲ್ಲಿ ಭೂಕುಸಿತ ಸಂಭವಿಸಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

    ತಮಿಳುನಾಡಿನ ಹಲವೆಡೆ 70 ಸಾವಿರಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ. 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಪುದುಚೇರಿಯಲ್ಲಿ ಗಂಟೆಗೆ 120 ಕಿ.ಮೀ ವೇಗದಲ್ಲಿ ಗಾಳಿ ಬೀಸ್ತಿದ್ದು, ಅಲೆಗಳ ಅಬ್ಬರ ಜೋರಾಗಿದೆ. ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

    ತಿರುಚನಪಲ್ಲಿ-ರಾಮೇಶ್ವರಂ ಮಾರ್ಗದ ರೈಲುಗಳ ಸಂಚಾರ ರದ್ದಾಗಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರ್ನಾಟಕಕ್ಕೂ ಗಜ ಚಂಡಮಾರುತದ ತಂಗಾಳಿ ಬೀಸಿದ್ದು, ಬೆಂಗಳೂರು, ಕೋಲಾರದಲ್ಲಿ ತುಂತುರು ಮಳೆಯಾಗಿದೆ. ಇನ್ನೂ ಎರಡ್ಮೂರು ದಿನ ರಾಜ್ಯದಲ್ಲಿ ಮಳೆಯಾಗಲಿದೆ ಎಮದು ಹಾವಾಮಾನ ಇಲಾಖೆ ಮೂಲಗಳಿಂದ ತಿಳಿದುಬಂದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಗಜ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

    ಗಜ ಚಂಡಮಾರುತ ಎಫೆಕ್ಟ್: ರಾಜ್ಯದಲ್ಲಿ ಮೂರು ದಿನ ಧಾರಾಕಾರ ಮಳೆ

    ಬೆಂಗಳೂರು: ಗಜ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರದ ಕುಸಿತದಿಂದಾಗಿ ‘ಗಜ’ ಚಂಡಮಾರುತ ಸೃಷ್ಟಿಯಾಗಿದೆ. ಇದರ ಪರಿಣಾಮವಾಗಿ ಗುರುವಾರ ಮತ್ತು ಶುಕ್ರವಾರ ಚೆನ್ನೈ ಮತ್ತು ಕೇರಳದಲ್ಲಿ ಮಹಾಮಳೆಯಾಗಲಿದೆ. ಹವಾಮಾನ ಇಲಾಖೆಯ ಮಾಹಿತಿಗಳ ಪ್ರಕಾರ 110 ಮಿ.ಮೀ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

    ಇದೇ ಚಂಡಮಾರುತವು ರಾಜ್ಯಕ್ಕೂ ಅಪ್ಪಳಿಸುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ನವೆಂಬರ್ 17ರಿಂದ ರಾಜ್ಯದ ಕರಾವಳಿ ಭಾಗಗಳಿಗೆ ಗಜ ಚಂಡಮಾರುತ ಅಪ್ಪಳಿಸಲಿದೆ. ಮಾಹಿತಿಗಳ ಪ್ರಕಾರ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ನವೆಂಬರ್ 18 ರಿಂದ 21 ವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗುತ್ತದೆ. ಇದರಿಂದಾಗಿ ಮೂರು ದಿನಗಳ ಕಾಲ ರಾಜ್ಯದಲ್ಲಿ ಎಡೆಬಿಡದೇ ಮಳೆಯಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ತಿತ್ಲಿ ಚಂಡಮಾರುತಕ್ಕೆ ತತ್ತರಿಸಿ ಕೊಚ್ಚಿ ಹೋಯ್ತು ಸೇತುವೆ: ವಿಡಿಯೋ ನೋಡಿ

    ತಿತ್ಲಿ ಚಂಡಮಾರುತಕ್ಕೆ ತತ್ತರಿಸಿ ಕೊಚ್ಚಿ ಹೋಯ್ತು ಸೇತುವೆ: ವಿಡಿಯೋ ನೋಡಿ

    ಭುವನೇಶ್ವರ: ತಿತ್ಲಿ ಚಂಡಮಾರುತದ ಅಬ್ಬರಕ್ಕೆ ಒಡಿಶಾದಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಸೆರೆಹಿಡಿದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

    ಗಂಜಮ್ ಜಿಲ್ಲೆಯ ಕಳಿಂಗದಳ ಪ್ರದೇಶದಲ್ಲಿ ಘಟನೆ ನಡೆದಿದ್ದು, ಬಹುದಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

    ಬಂಗಾಳಕೊಲ್ಲಿ ಕಾಣಿಸಿಕೊಂಡ ತಿತ್ಲಿ ಚಂಡಮಾರುತ ದೇಶದ ಕರಾವಳಿ ಭಾಗದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಂಧ್ರ ಪ್ರದೇಶ ಹಾಗೂ ಒಡಿಶಾ ರಾಜ್ಯಗಳೇ ಹೆಚ್ಚಿನ ಪರಿಣಾಮವನ್ನು ಎದುರಿಸಿತ್ತಿವೆ.

    ಒರಿಶಾ ಕರಾವಳಿಗೆ ತಿತ್ಲಿ ಚಂಡಮಾರುತ ಅಪ್ಪಳಿಸಿದ್ದು, ಗಂಜಮ್, ಗಜಪತಿ ಹಾಗೂ ರಾಯಗಡ ಭಾಗದಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಇದರಿಂದಾಗಿ ಪ್ರವಾಹ ಉಂಟಾಗಿದ್ದು, ಬಹುದಾ, ಋಷಿಕುಲ್ಯ ಹಾಗೂ ವಂಶಧಾರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗಂಜಮ್ ಜಿಲ್ಲೆಯ 22 ಬ್ಲಾಕ್‍ನ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಸಾವಿರಾರು ಜನರನ್ನು ಸ್ಥಳಾಂತರಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅರಬ್ಬಿ ಸಮುದ್ರದಲ್ಲಿ ತಿತ್ಲಿ ಚಂಡಮಾರುತ ಎಫೆಕ್ಟ್ – ಮನೆಗಳಿಗೆ ನುಗ್ಗುತ್ತಿದೆ ನೀರು

    ಅರಬ್ಬಿ ಸಮುದ್ರದಲ್ಲಿ ತಿತ್ಲಿ ಚಂಡಮಾರುತ ಎಫೆಕ್ಟ್ – ಮನೆಗಳಿಗೆ ನುಗ್ಗುತ್ತಿದೆ ನೀರು

    ಮಂಗಳೂರು: ಅರಬ್ಬಿ ಸಮುದ್ರದಲ್ಲಿ ತಿತ್ಲಿ ಚಂಡಮಾರುತದ ಪರಿಣಾಮ ಮಂಗಳೂರಿನ ಉಳ್ಳಾಲ, ಸೋಮೇಶ್ವರದಲ್ಲಿ ಕಡಲು ಉಕ್ಕೇರುತ್ತಿದೆ.

    ಕಳೆದ ಎರಡು ದಿನಗಳಿಂದ ಕಡಲು ಉಕ್ಕೇರುತ್ತಿದ್ದು, ಸಮುದ್ರದ ಸಮೀಪದ ಮನೆಗಳಿಗೆ ನೀರು ನುಗ್ಗುತ್ತಿದೆ. ಉಳ್ಳಾಲ ಸಮೀಪದ ಸೋಮೇಶ್ವರ, ಪೆರಿಬೈಲ್‍ನಲ್ಲಿ ಹತ್ತಕ್ಕೂ ಹೆಚ್ಚು ಮನೆಗಳು ಅಪಾಯದಲ್ಲಿವೆ. ಇಷ್ಟೇಲ್ಲ ಅನಾಹುತವಾದರೂ ಜಿಲ್ಲಾಡಳಿತ ಸ್ಥಳಕ್ಕೆ ಭೇಟಿ ನೀಡದೆ ಬೇಜವಾಬ್ದಾರಿ ಮೆರದಿದೆ ಎಂದು ಸ್ಥಳೀಯರು ದೂರಿದ್ದಾರೆ. ಇದನ್ನು ಓದಿ: ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!

    ಸಾಮಾನ್ಯವಾಗಿ ಮಧ್ಯಾಹ್ನ 11 ಗಂಟೆಯಿಂದ ಸಂಜೆ 5ವರೆಗೆ, ಮತ್ತೆ ರಾತ್ರಿ 12ರ ನಂತರ ಕಡಲು ಉಕ್ಕೇರುತ್ತದೆ. ಹೀಗಾಗಿ ಸಮುದ್ರದ ಸಮೀಪದಲ್ಲಿ ಮನೆಯಿರುವ ಜನರು ಆತಂಕದಲ್ಲಿ ದಿನ ಕಳೆಯುತ್ತಿದ್ದಾರೆ. ಇದಕ್ಕೆ ಯಾವುದೇ ಪರ್ಯಾಯ ವ್ಯವಸ್ಥೆಗೆ ಜಿಲ್ಲಾಡಳಿತ ಮುಂದಾಗದೇ ಇರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!

    ಒಡಿಶಾ, ಆಂಧ್ರ ಕರಾವಳಿಯಲ್ಲಿ ತಿತ್ಲಿ ಅಬ್ಬರ – ಗಂಟೆಗೆ 145 ಕಿಲೋ ಮೀಟರ್ ವೇಗದಲ್ಲಿ ಬಿರುಗಾಳಿ!

    ನವದೆಹಲಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಒಡಿಶಾ, ಆಂಧ್ರಪ್ರದೇಶದಲ್ಲಿ ತಿತ್ಲಿ ಚಂಡಮಾರುತ ತೀವ್ರಗೊಂಡಿದೆ. ಗಂಟೆಗೆ 145 ಕಿಮೀ ವೇಗದಲ್ಲಿ ಗಾಳಿ ಬೀಸ್ತಿದೆ. ಮುಂದಿನ 18 ಗಂಟೆಗಳಲ್ಲಿ ಅದು ಮತ್ತಷ್ಟು ತೀವ್ರಗೊಳ್ಳಲಿದೆ ಅಂತ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಒಡಿಶಾ ಸರ್ಕಾರ ಕರಾವಳಿಯ ತಟದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ. ಅಲ್ಲದೇ ಶಾಲೆ-ಕಾಲೇಜಿಗೂ ರಜೆ ಘೋಷಿಸಲಾಗಿದೆ. ಈ ಚಂಡಮಾರುತದ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಸೋಮೇಶ್ವರದಲ್ಲಿ ಕರಾವಳಿ ತೀರದಲ್ಲಿ ಕಡಲಬ್ಬರ ಜೋರಾಗಿದೆ.

    ಉಲ್ಲಾಳದಲ್ಲಿ ಮನೆ ಮಸೀದಿಗಳಿಗೆ ನೀರು ನುಗ್ಗಿದೆ. ಅಲೆಗಳ ಹೊಡೆತ ತಾಳಲಾರದೆ ಮುಕ್ಕಚ್ಚೇರಿ ಕಿಲೇರಿಯಾ ನಗರ, ಕೈಕೋದ ಎಂಟು ಮನೆ ಮಂದಿ ಬೇರೆ ಕಡೆ ಸ್ಥಳಾಂತರಗೊಂಡಿದ್ದಾರೆ. ಹೀಗಾಗಿ ಯಾರು ಕಡಲಿಗೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಒಡಿಶಾದ ಗೋಪಾಲ್ಪುರ ಹಾಗೂ ಆಂಧ್ರ ಪ್ರದೇಶದ ಕಳಿಂಗಪಟ್ಟಣಂ ನಡುವೆ ಗುರುವಾರ ಬೆಳಗ್ಗೆ 145 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಸಲಾಗಿತ್ತು. ತಿತ್ಲಿ ಗಂಟೆಗೆ 10 ಕಿ.ಮೀ. ವೇಗದಲ್ಲಿ ಬೀಸಲಿದ್ದು ಚಂಡಮಾರುತ ಪ್ರಭಾವವು ಒಡಿಶಾದ ಗೋಪಾಲ್ಪುರದಿಂದ 370 ಕಿಮೀ ಆಗ್ನೇಯಕ್ಕೆ ಹೆಚ್ಚಾಗಿರಲಿದೆ ಎಂದು ಐಎಂಡಿ ಬುಲೆಟಿನ್ ನಲ್ಲಿ ಹೇಳಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಡಗು, ಕೇರಳ ಮಳೆಯ ರಹಸ್ಯ ಭೇದಿಸಿದ ಹವಾಮಾನ ತಜ್ಞರು!

    ಕೊಡಗು, ಕೇರಳ ಮಳೆಯ ರಹಸ್ಯ ಭೇದಿಸಿದ ಹವಾಮಾನ ತಜ್ಞರು!

    – ಜಲಪ್ರಳಯಕ್ಕೆ `ಸೋಮಾಲಿ ಜೆಟ್’ ಕಾರಣ, ಏನಿದು ಸೋಮಾಲಿ ಜೆಟ್?

    ಬೆಂಗಳೂರು: ಮಹಾಮಳೆಯಿಂದ ಪ್ರವಾಹ, ಗುಡ್ಡ ಕುಸಿತವಾಗಿ ಹಲವರ ಸಂಕಷ್ಟಕ್ಕೆ ಕಾರಣವಾಗಿದ್ದ ಮಹಾ ಜಲಪ್ರಳಯಕ್ಕೆ `ಸೋಮಾಲಿ ಜೆಟ್’ ಚಂಡಮಾರುತ ಕಾರಣ ಎಂದು ಹವಾಮಾನ ತಜ್ಞರು ಮಾಹಿತಿ ನೀಡಿದ್ದಾರೆ.

    ಏನಿದು ಸೋಮಾಲಿ ಜೆಟ್?
    ಅಫ್ರಿಕಾ ಬಳಿಯ ಮಡಗಾಸ್ಕರ್ ಬಳಿಯ ದ್ವೀಪದ ಬಳಿ ಎದ್ದ ಚಂಡಮಾರುತವನ್ನು ಸೋಮಾಲಿ ಜೆಟ್ ಎಂದು ಕರೆಯುತ್ತಾರೆ. ಈ ಚಂಡಮಾರುತ ಗಾಳಿಯ ಸಮೇತ ದಿಕ್ಕು ಬದಲಿಸಿ ಭಾರತದತ್ತ ಬೀಸಿದ ಕಾರಣ ಮಹಾಮಳೆಯಾಗಿ ಸಾಕಷ್ಟು ಅವಾಂತರ ಸೃಷ್ಟಿಸಿದೆ ಎನ್ನಲಾಗಿದೆ.

    ಪಶ್ಚಿಮಘಟ್ಟ ಭಾಗಗಳಲ್ಲಿ ಮುಂಗಾರು ಈ ಬಾರಿ ತೀವ್ರಗೊಂಡಿದ್ದ ಕಾರಣ ವಾಯುಭಾರ ಕುಸಿತ ಸಂಭವಿಸಿತ್ತು. ಈ ವೇಳೆ ಸೋಮಾಲಿ ಜೆಟ್ ಚಂಡಮಾರುತ ಬಿರುಸು ಪಡೆದಿದ್ದ ಕಾರಣ ಹೆಚ್ಚಿನ ಮಳೆಯಾಗಿದೆ. ವಾಯುಭಾರ ಕುಸಿತದಿಂದ ಪಶ್ಚಿಮಘಟ್ಟದಲ್ಲಿ ತಡೆಯುಂಟಾಗಿ ಆಗಲೇ ಸುರಿಯುತ್ತಿದ್ದ ಮಳೆಗೆ ಮತ್ತಷ್ಟು ವೇಗ ಕೊಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿವರಿಸಿದೆ.

    ಪಶ್ಚಿಮಘಟ್ಟ ಪ್ರದೇಶಕ್ಕೆ ಈ ಚಂಡಮಾರುತ ತಟ್ಟಿದ ಕಾರಣ ಅಪಾರ ನಷ್ಟ ಉಂಟಾಗಿದೆ. ಪ್ರಮುಖವಾಗಿ ಮಳೆಯಿಂದ ಗುಡ್ಡ ಕುಸಿತ ಹೆಚ್ಚಾಗಿದ್ದರಿಂದ ಹೆಚ್ಚಿನ ಹಾನಿಯಾಗಿದೆ. ಸದ್ಯ ಕೊಡಗು ಎಂದ ತಕ್ಷಣ ಎಲ್ಲರ ಕಣ್ಮುಂದೆ ಬರುತ್ತಿದ್ದ ಚಿತ್ರಣ ಜಲಪ್ರಳಯ. ಮಳೆ ನಿಂತರೂ ಗುಡ್ಡಗಳು ಇನ್ನೂ ಕುಸಿಯುತ್ತಲೇ ಇದ್ದು, ನಾಲ್ಕು ದಿನಗಳ ಕಾಲ ಅಕ್ಷರಶಃ ಜಲ ಪ್ರವಾಹದಲ್ಲಿ ಮುಳುಗಿದ್ದ ಮಡಿಕೇರಿ ಸಹಜ ಸ್ಥಿತಿಯತ್ತ ಮರಳುತ್ತಿದೆ. ಉಳಿದಂತೆ ದಕ್ಷಿಣಕನ್ನಡ, ಚಿಕ್ಕಮಗಳೂರು, ಹಾಸನ ಗಡಿಭಾಗಗಳಲ್ಲಿ ಭೂಕುಸಿತ ಭೀತಿ ಎದುರಾಗಿದೆ.

    ಈ ನಡುವೆ ಮಡಿಕೇರಿಯಲ್ಲಿ ವರುಣನ ಆರ್ಭಟ ತಗ್ಗಿದ್ದು, ಪ್ರವಾಹ ಪೀಡಿತ ಗ್ರಾಮಗಳಲ್ಲಿ ತೆರವು ಕಾರ್ಯ ಚುರುಕುಗೊಂಡಿದೆ. ಇದೇ ಮೊದಲ ಬಾರಿ ರಕ್ಷಣಾ ಕಾರ್ಯಕ್ಕೆ ಡ್ರೋನ್ ಕ್ಯಾಮೆರಾ ಬಳಕೆ ಮಾಡಲಾಗಿದ್ದು, ಮಹಾಮಳೆಗೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕರ್ನಾಟಕಕ್ಕೆ ಪ್ರವಾಹ ಭೀತಿ, ರಾಜ್ಯದಲ್ಲಿ ಹೈ ಅಲರ್ಟ್!

    ಕರ್ನಾಟಕಕ್ಕೆ ಪ್ರವಾಹ ಭೀತಿ, ರಾಜ್ಯದಲ್ಲಿ ಹೈ ಅಲರ್ಟ್!

    ಬೆಂಗಳೂರು: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತ ಕರ್ನಾಟಕದಲ್ಲಿಯೂ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆಗಳಿವೆ ಎಂದು ಎಚ್ಚರಿಕೆ ಸಂದೇಶವನ್ನು ಕೇಂದ್ರ ಹವಾಮಾನ ಇಲಾಖೆ ರಾಜ್ಯಕ್ಕೆ ಕಳುಹಿಸಿದೆ.

    ಒಟ್ಟು ಒಂಬತ್ತು ರಾಜ್ಯಗಳಲ್ಲಿ ಪ್ರವಾಹ ಭೀತಿ ಉಂಟಾಗುವ ಸಾಧ್ಯತೆಗಳಿವೆ. ಇಂದಿನಿಂದ ದಿನಾಂಕ 15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಸಂಬಂಧ ರಾಜ್ಯ ಸರ್ಕಾರಗಳು ಎಚ್ಚರಿಕೆಯಿಂದ ಇರಬೇಕು ಎಂಬ ಸಂದೇಶವನ್ನು ರವಾನಿಸಲಾಗಿದೆ.

    ವೀಕೆಂಡ್ ಎಂದು ಜಾಲಿ ಟ್ರಿಪ್ ಹೋಗುದನ್ನು ಆದಷ್ಟು ಕಡಿತಗೊಳಿಸಬೇಕು. ನದಿ ಪಾತ್ರದ ಪ್ರದೇಶ, ಫಾಲ್ಸ್, ಕರಾವಳಿ ಭಾಗದ ಕಡೆ ವೀಕೆಂಡ್ ಪ್ರವಾಸ ಕೈಗೊಳ್ಳುವುದನ್ನು ನಿಲ್ಲಿಸುವುದು ಉತ್ತಮ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದಿನಿಂದ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಪ್ರವಾಸ ಚಂಡಮಾರುತದ ಸಾಧ್ಯತೆ ಇದೆ.

    ರಾಜ್ಯದಲ್ಲಿ ಶುಕ್ರವಾರವಷ್ಟೇ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರ್ಭಟಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನೇತ್ರಾವತಿ, ಕುಮಾರಧಾರ, ಫಲ್ಗುಣಿ ತುಂಬಿ ಹರಿಯುತ್ತಿದೆ. ಹೀಗಾಗಿ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮೈಸೂರು ಭಾಗದಲ್ಲಿ ಮಳೆಯ ಪ್ರಮಾಣ ತಗ್ಗಿದರೂ, ನದಿಗಳ ನೀರಿನ ಮಟ್ಟ ಇಳಿಕೆಯಾಗಿಲ್ಲ. ನಂಜನಗೂಡು ಸಮೀಪದ ಕಪಿಲಾ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮೈಸೂರು-ಊಟಿ ಹೈವೇ ಜಲಾವೃತಗೊಂಡಿದ್ದು, ಸಂಪರ್ಕ ಕಡಿತವಾಗಿದೆ.

    ರಾಷ್ಟ್ರೀಯ ಹೆದ್ದಾರಿ 766ರಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ನಂಜನಗೂಡು ದೇವಾಲಯದ ಸ್ನಾನಘಟ್ಟ, 16 ಕಾಲು ಮಂಟಪ ಮುಳುಗಡೆಯಾಗಿದೆ. ಸುತ್ತೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸುತ್ತೂರು ಸೇತುವೆ ಸಂಪೂರ್ಣ ಮುಳುಗಡೆ ಆಗಿದೆ. ನೂರಾರು ಎಕರೆ ಜಮೀನಿಗೆ ನೀರು ನುಗ್ಗಿದೆ.

    ಕರ್ನಾಟಕ ಮತ್ತು ಕೇರಳದಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗ್ತಿದ್ದು, ಇನ್ನು ಮೂರು ದಿನ ಇದೇ ಪರಿಸ್ಥಿತಿ ಮುಂದುವರಿಯಲಿದೆ. ಈಗಾಗಲೇ ಹಳ್ಳ, ಕೊಳ್ಳಗಳು ತುಂಬಿ ಹರಿಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿವೆ. ಕಬಿನಿ ಜಲಾಶಯದಲ್ಲಿ ನೀರಿನ ಒಳಹರಿವು ಅಧಿಕವಾಗಿದ್ದು, ಸದ್ಯ 80 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗ್ತಿದೆ. ಹೊರ ಹರಿವು 1 ಲಕ್ಷ ಕ್ಯೂಸೆಕ್ ದಾಟುವ ಸಾಧ್ಯತೆ ಇದ್ದು, ಕಾವೇರಿ ನದಿ ಪಾತ್ರದ ಪ್ರದೇಶಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಉಡುಪಿಗೆ ಮೆಕ್ನು ಚಂಡಮಾರುತ ಎಫೆಕ್ಟ್ – 500ಮೀ. ದೂರದಿಂದ್ಲೇ ಅಬ್ಬರಿಸಿಕೊಂಡು ಅಪ್ಪಳಿಸುತ್ತಿವೆ ಅಲೆಗಳು

    ಉಡುಪಿಗೆ ಮೆಕ್ನು ಚಂಡಮಾರುತ ಎಫೆಕ್ಟ್ – 500ಮೀ. ದೂರದಿಂದ್ಲೇ ಅಬ್ಬರಿಸಿಕೊಂಡು ಅಪ್ಪಳಿಸುತ್ತಿವೆ ಅಲೆಗಳು

    ಉಡುಪಿ: ಯೆಮೆನ್ ದೇಶದಲ್ಲಿ ಅಲ್ಲೋಲ ಕಲ್ಲೋಲ ಎಬ್ಬಿಸಿದ ಮೆಕ್ನು ಚಂಡಮಾರುತ ಎಫೆಕ್ಟ್ ರಾಜ್ಯದ ಕರಾವಳಿಗೂ ಹಬ್ಬಿದ್ದು, ಕಡಲತಡಿಯ ನಿವಾಸಿಗಳು ಆತಂಕ ಎದುರಿಸುವಂತಾಗಿದೆ.

    ಶುಕ್ರವಾರ ಸಂಜೆಯಿಂದಲೇ ಅಬ್ಬರಿಸಲು ಆರಂಭಿಸಿದ ಕಡಲಿನ ಅಲೆಗಳ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಇನ್ನೊಂದೆಡೆ ರಾಜ್ಯದ ಕರಾವಳಿಗೂ ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ಅಪ್ಪಳಿಸುವ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದ್ದು, ಮೀನುಗಾರಿಕೆಗೆ ತೆರಳಿದ್ದ ಬೋಟ್ ಗಳು ದಡ ಸೇರುವಂತಾಗಿದೆ.

    ಉಡುಪಿಯ ಕಾಪು, ಮಲ್ಪೆ ಬೀಚ್ ಗಳಲ್ಲಿ ಶುಕ್ರವಾರ ಸಂಜೆಯಿಂದಲೇ ಕಂಡುಬಂದ ಕಡಲ ಅಲೆಗಳ ಅಬ್ಬರದಿಂದಾಗಿ ಪ್ರವಾಸಿಗರು ಕಡಿಮೆ ಸಂಖ್ಯೆಗಳಲ್ಲಿ ಕಂಡುಬಂದರು. ಕಳೆದ ತಡರಾತ್ರಿ ಗಾಳಿ, ಗುಡುಗು-ಮಿಂಚು ಸಹಿತ ಮಳೆಯಾಗಿದೆ. ಇಂದು ಮುಂಜಾನೆಯಿಂದಲೇ ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ಹಲವೆಡೆ ತುಂತುರು ಮಳೆಯೂ ಆಗಿದೆ.

    ಸದ್ಯ ಕಡಲು ಪ್ರಕ್ಷುಬ್ಧಗೊಂಡ ಹಿನ್ನೆಲೆಯಲ್ಲಿ ಕರಾವಳಿಯ ಮಂದಿ ಆತಂಕಿತರಾಗಿದ್ದಾರೆ. ಸಂಜೆಯಿಂದಲೇ ಸುಮಾರು 500 ಮೀಟರ್ ದೂರದಿಂದಲೇ ಅಬ್ಬರಿಸಿಕೊಂಡು ದಡಕ್ಕೆ ಅಪ್ಪಳಿಸುತ್ತಿರುವ ಅಲೆಗಳು ಇನ್ನೂ ಇಳಿಕೆ ಕಾಣದಿರುವುದು ಅಪಾಯದ ಮುನ್ಸೂಚನೆಯನ್ನು ನೀಡುವಂತಿದೆ. ಕಳೆದ ಡಿಸೆಂಬರ್ ತಿಂಗಳಿನಲ್ಲಿ ಓಖಿ ಚಂಡಮಾರುತ ಕರಾವಳಿಗೆ ಅಪ್ಪಳಿಸಿದ್ದ ಪರಿಣಾಮ ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿಗಳು ನಷ್ಟವಾಗಿತ್ತು.

  • ಹುಣ್ಣಿಮೆ ಜೊತೆ ಕೈ ಜೋಡಿಸಿದ ಓಖಿ- ಬೆಳದಿಂಗಳ ಇಂದಿನ ರಾತ್ರಿ ಏನಾಗುತ್ತೋ..?

    ಹುಣ್ಣಿಮೆ ಜೊತೆ ಕೈ ಜೋಡಿಸಿದ ಓಖಿ- ಬೆಳದಿಂಗಳ ಇಂದಿನ ರಾತ್ರಿ ಏನಾಗುತ್ತೋ..?

    – ದೀಪಕ್ ಜೈನ್
    ಉಡುಪಿ: ಓಖಿ ಚಂಡಮಾರುತ ತಮಿಳ್ನಾಡು ಮತ್ತು ಕೇರಳ ರಾಜ್ಯದ ನಿದ್ದೆಗೆಡಿಸಿದೆ. ಕರ್ನಾಟಕದ ಕರಾವಳಿಗರಿಗೆ ಚಳಿ ಹಿಡಿಸಿದೆ. ಸಮುದ್ರದಲ್ಲೆದ್ದ ಸುಳಿಗಾಳಿಗೂ ಬಾನಿನಲ್ಲಿರುವ ಚಂದ್ರನಿಗೂ ಲಿಂಕ್ ಇದೆ. ಸಮುದ್ರದ ಅಲೆಗಳನ್ನು ಫುಲ್ ಕಂಟ್ರೋಲ್ ಮಾಡೋನೇ ಆ ಚಂದ ಮಾಮ.

    ಅಮಾವಾಸ್ಯೆ ಮತ್ತು ಹುಣ್ಣಿಮೆ ದಿನ ಸಾಮಾನ್ಯವಾಗಿ ಕಡಲು ಎಂದಿನಂತೆ ಇರೋದಿಲ್ಲ. ಅಲೆಗಳ ಅಬ್ಬರ ಜಾಸ್ತಿ ಇರುತ್ತದೆ. ಈ ಬಾರಿ ಹುಣ್ಣಿಮೆ ಜೊತೆ ಓಖಿ ಚಂಡಮಾರುತ ರೌದ್ರ ನರ್ತನ ತೋರುತ್ತಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ ಭಾರಿ ಅನಾಹುತ ಸೃಷ್ಟಿಸಿರುವ ಓಖಿ ಹುಣ್ಣಿಮೆ ಸಂದರ್ಭದಲ್ಲೇ ಹುಟ್ಟಿಕೊಂಡಿರೋದರಿಂದ ಅಪಾಯ ಜಾಸ್ತಿ.

    ಓಖಿ ಚಂಡಮಾರುತದ ಎಫೆಕ್ಟ್ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ತಟ್ಟಿದೆ. ಉಡುಪಿಯಲ್ಲಿ ಹುಣ್ಣಿಮೆಯ ಹಿಂದಿನ ದಿನ (ಡಿ.2) ಕಡಲು ತನ್ನ ರೌದ್ರ ನರ್ತನ ತೋರಿದೆ. ಕಾಪು- ಪಡುಕೆರೆಯಲ್ಲಿ ಸಮುದ್ರದ ನೀರು ರಸ್ತೆಗೆ ಅಪ್ಪಳಿಸಿದೆ. ರಾತ್ರೋ ರಾತ್ರಿ ದೋಣಿಗಳನ್ನು ತೀರದಿಂದ ತಟಕ್ಕೆ ಎಳೆದು ಹಾಕಲಾಗುತ್ತಿದೆ.

    200 ನಾಟಿಕಲ್ ಮೈಲಿ ದೂರ ಚಂಡಮಾರುತದ ಸುಂಟರಗಾಳಿ ಇದ್ದರೂ, ಹುಣ್ಣಿಮೆ ಎಫೆಕ್ಟ್ ನಿಂದ ಸಮುದ್ರ ತೀರದಲ್ಲಿ ಅಲೆಗಳು ಉಬ್ಬುಬ್ಬಿ ಬರುತ್ತಿದೆ. ಅಬ್ಬರದ ಅಲೆಗಳಿಗೆ ಹೆದರಿ ಕಡಲತೀರದ ಜನ ಬೇರೆಡೆ ಶಿಫ್ಟ್ ಆಗುತ್ತಿದ್ದಾರೆ. ಹುಣ್ಣಿಮೆಯ ಭಯವೂ ಜನರನ್ನು ಕಾಡುತ್ತಿದೆ.

    ಸಮುದ್ರಕ್ಕೂ ಚಂದ್ರನಿಗೂ ಸಂಬಂಧ!: ಸಮುದ್ರಕ್ಕೂ ಚಂದ್ರನಿಗೂ ಸಂಬಂಧವಿದೆ. ಚಂದ್ರನ ಚಲನೆಯ ಮೇಲೆಯೇ ಎಲ್ಲಾ ರಾಶಿ, ನಕ್ಷತ್ರಗಳು ನಿಂತಿರುವುದು. ತಿಂಗಳಿಗೊಂದು ಹುಣ್ಣಿಮೆ ಅಮವಾಸ್ಯೆ ಬರುತ್ತದೆ. 15 ದಿನಕ್ಕೊಮ್ಮೆ ಸಮುದ್ರದ ಮೇಲೆ ಎಫೆಕ್ಟ್ ಆಗುತ್ತದೆ. ಸಾಗರದ ನೀರು ದಡಕ್ಕೆ ಹತ್ತಿರಾಗೋದು ಈ ಎರಡು ದಿನಗಳಲ್ಲೇ ಜಾಸ್ತಿ.

    ಅಮಾವಾಸ್ಯೆಯ ಹಿಂದಿನ ಮತ್ತು ನಂತರದ ದಿನ, ಹುಣ್ಣಿಮೆ ಮತ್ತು ಎರಡು ದಿನ ಅಲೆಗಳ ಸಂಖ್ಯೆ ಮತ್ತು ಅಪ್ಪಳಿಸುವ ರಭಸ ಹೆಚ್ಚಾಗಿರುತ್ತದೆ. ಹೀಗಾಗಿ ಓಖಿ ಮತ್ತು ಹುಣ್ಣಿಮೆ ಒಟ್ಟಾಗಿದ್ದು, ಅರಬ್ಬೀ ಸಮುದ್ರದ ಅಬ್ಬರ ಹೆಚ್ಚಾಗಲು ಒಂದು ಕಾರಣವಾಗಿದೆ. ಓಖಿ ಚಂಡಮಾರುತದಿಂದ ಸಮುದ್ರ ತೀರದ ಜನರು ಆತಂಕಗೊಂಡಿದ್ದಾರೆ. ಎರಡು ದಿನಗಳಲ್ಲಿ ಕಡಲು ಸಮಸ್ಥಿತಿಗೆ ಬರಲಪ್ಪಾ ಎಂದು ಸಮುದ್ರ ರಾಜನಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

    ಕಾಪು, ಪಡುಕೆರೆ, ಮಲ್ಪೆ, ಪಿತ್ರೋಡಿ ಆಸುಪಾಸಿನಲ್ಲಿ ಸಮುದ್ರ ತೀರದಲ್ಲಿದ್ದ ದೋಣಿಗಳನ್ನು ಮೇಲಕ್ಕೆ ಶಿಫ್ಟ್ ಮಾಡಿದ್ದೇವೆ. ಮೀನುಗಾರಿಕೆಗೆ ಹೋಗದಂತೆ ಎಚ್ಚರಿಕೆ ಕೊಟ್ಟಿರುವ ಕಾರಣ ಎರಡು ದಿನ ರಜೆ ತೆಗೆದುಕೊಂಡಿದ್ದೇವೆ ಎಂದು ಪಿತ್ರೋಡಿ ಸಂಜೀವ ಸಾಲಿಯಾನ್ ಮಾಹಿತಿ ನೀಡಿದರು.

    ಪ್ರತೀ ಅಮವಾಸ್ಯೆ – ಹುಣ್ಣಿಮೆ ದಿನ ಬರುವಾಗ ಕಡಲು ಕಪ್ಪಗೆ ಮತ್ತು ಬೆಳ್ಳಗೆ ಆಗುತ್ತದೆ. ಈ ಬಾರಿ ಹುಣ್ಣಿಮೆ ದಿನದಂದೇ ದಕ್ಷಿಣದಲ್ಲಿ ಸುಳಿಗಾಳಿ ಎದ್ದಿರುವುದರಿಂದ ನಾವು ಕಸುಬಿಗೆ ಇಳಿಯಲು ಸ್ವಲ್ಪ ಯೋಚನೆ ಮಾಡಬೇಕಾದ ಪರಿಸ್ಥಿತಿ ಬಂದಿದೆ ಎಂದರು.

    ಹುಣ್ಣಿಮೆಯ ಹಿಂದಿನ ದಿನದ ರಾತ್ರಿ ಕೊಂಚಮಟ್ಟಿನ ರೌದ್ರಾವತಾರ ತೋರಿರುವ ಕಡಲು, ಹುಣ್ಣಿಮೆ ರಾತ್ರಿ ಯಾವ ರೀತಿಯಲ್ಲಿ ವರ್ತಿಸುತ್ತದೆ ಎಂಬ ಕುತೂಹಲ ಮತ್ತು ಆತಂಕ ಕರಾವಳಿಯ ಜನರಲ್ಲಿ ಇದೆ. ಅದರಲ್ಲೂ ಸಮುದ್ರವನ್ನೇ ಜೀವನ ಮಾಡಿಕೊಂಡಿರುವ, ತಟದಲ್ಲಿ ಮನೆ ಕಟ್ಟಿಕೊಂಡಿರುವ ಮೀನುಗಾರರಿಗೆ ಆತಂಕ ಕೊಂಚ ಹೆಚ್ಚೇ ಇದೆ.