Tag: D C Tammanna

  • ಕೆಲಸ ಮಾಡಲು ಆಗದಿದ್ರೆ ಡಿ.ಸಿ ತಮ್ಮಣ್ಣ ರಾಜೀನಾಮೆ ಕೊಡ್ಲಿ: ಸುಮಲತಾ

    ಕೆಲಸ ಮಾಡಲು ಆಗದಿದ್ರೆ ಡಿ.ಸಿ ತಮ್ಮಣ್ಣ ರಾಜೀನಾಮೆ ಕೊಡ್ಲಿ: ಸುಮಲತಾ

    ಬೆಂಗಳೂರು: ಸಮಸ್ಯೆ ಹೇಳಿಕೊಳ್ಳಲು ಬಂದಿದ್ದ ಜನರ ಮೇಲೆ ಸಚಿವ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದ ವಿಚಾರವಾಗಿ ಸಂಸದೆ ಸುಮಲತಾ ಅವರು ಪ್ರತಿಕ್ರಿಯಿಸಿ, ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ಕೊಡಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಸೋಲಿಗೆ ಬೇಜಾರಾಗಿದ್ರೆ ರಾಜೀನಾಮೆ ಕೊಡಿ ಎಂದರು. ಬಳಿಕ ಜೆಡಿಎಸ್ ಸೋಲಿಗೆ ಡಿ.ಸಿ ತಮ್ಮಣ್ಣ ಅವರ ಹೇಳಿಯೇ ಕಾರಣ. ಅವರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಕೆಲಸ ಮಾಡಲು ಆಗದಿದ್ದರೆ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

    ಅಷ್ಟೇ ಅಲ್ಲದೆ ತಮ್ಮಣ್ಣ ಅವರು ಹೇಳಿಕೆ ನಿಖಿಲ್ ಹೇಳಿಕೆಗೆ ವಿರುದ್ಧವಾಗಿದೆ. ಅವರ ಪಾರ್ಟಿಯಲ್ಲಿ ಇರೋರು ಅವರಿಗೆ ತಿಳಿಸಿ ಹೇಳಬೇಕು ಎಂದು ಕಿವಿಮಾತು ಹೇಳಿದ್ದಾರೆ.

    ಡಿ.ಸಿ ತಮ್ಮಣ್ಣ ಹೇಳಿದ್ದೇನು?
    ಮದ್ದೂರು ಗ್ರಾಮಸ್ಥರು ಮದ್ದೂರಮ್ಮನ ಕೆರೆಯಂಗಳದಲ್ಲಿ ನಡೆದ ಕುಡಿಯುವ ನೀರಿನ ಕಾಮಗಾರಿಯ ಶಂಕುಸ್ಥಾಪನೆ ವೇಳೆ ದಲಿತ ಕಾಲೋನಿಗೆ ಚರಂಡಿ ಮತ್ತು ಸಮರ್ಪಕ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಡಿ.ಸಿ ತಮ್ಮಣ್ಣ ಅವರ ಬಳಿ ಕೇಳಿಕೊಂಡಿದ್ದರು.

    ಗ್ರಾಮಸ್ಥರ ಮಾತುಕೇಳಿ ಸಿಟ್ಟಿಗೆದ್ದ ಸಚಿವ ತಮ್ಮಣ್ಣ, ಅಭಿವೃದ್ಧಿಗೆ ನಾವು ಬೇಕು, ಮತ ಹಾಕಲು ವೋಟು ನೀಡಲು ಅವರು ಬೇಕಾ ಎಂದು ತರಾಟೆ ತೆಗೆದುಕೊಂಡಿದ್ದಾರೆ. ಅಲ್ಲದೆ ಮಣೆಗಾರಿಕೆ ಮಾಡಲು ಬರುತ್ತಾರೆ, ಅಭಿವೃದ್ದಿ ಕೆಲಸಕ್ಕಾಗಿ ನಮ್ಮನ್ನು ಕೇಳುವುದಕ್ಕೆ ನಾಚಿಕೆ ಆಗಲ್ವಾ ಎಂದು ಮದ್ದೂರು ಕ್ಷೇತ್ರದಲ್ಲಿ ನಿಖಿಲ್‍ಗೆ ಮತ ಹಾಕದ ಜನರ ಮೇಲೆ ಡಿ.ಸಿ ತಮ್ಮಣ್ಣ ವಾಗ್ದಾಳಿ ನಡೆಸಿದರು.

    ಈ ಹಿಂದೆ ಡಿ.ಸಿ ತಮ್ಮಣ್ಣ ಚುನಾವಣೆ ವೇಳೆಯಲ್ಲಿ ತಮ್ಮ ನಾಲಿಗೆ ಹರಿಯಬಿಟ್ಟು ಎಡವಟ್ಟು ಮಾಡಿಕೊಂಡಿದ್ದರು. ತಮ್ಮಣ್ಣ ಅವರು ಹೆಬ್ಬೆರಳು ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಅಲ್ಲದೆ ಹೋದ ಕಡೆಗಳಲ್ಲಿ ಮತ ಹಾಕದ ಮತದಾರರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

  • ನಿವೃತ್ತಿ ಹೊಂದುವ 3 ಗಂಟೆ ಮೊದ್ಲೇ ನೀಡಿದ್ರು ಸಸ್ಪೆಂಡ್ ಆರ್ಡರ್..!

    ನಿವೃತ್ತಿ ಹೊಂದುವ 3 ಗಂಟೆ ಮೊದ್ಲೇ ನೀಡಿದ್ರು ಸಸ್ಪೆಂಡ್ ಆರ್ಡರ್..!

    – ಚೀಫ್ ಮೆಕ್ಯಾನಿಕಲ್ ಎಂಜಿನಿಯರ್ ಕಕ್ಕಾಬಿಕ್ಕಿ

    ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಮೆಕ್ಯಾನಿಕಲ್ ಎಂಜಿನಿಯರೊಬ್ಬರಿಗೆ ನಿವೃತ್ತಿ ಹೊಂದುವ ಕೇವಲ 3 ಗಂಟೆ ಮೊದಲು ಬಿಎಂಟಿಸಿ ಸಸ್ಪೆಂಡ್ ಆರ್ಡರ್ ನೀಡಿದೆ.

    ಬಿಎಂಟಿಸಿಯಲ್ಲಿ ಚೀಫ್ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದ ಗಂಗಣ್ಣಗೌಡರು ಸಸ್ಪೆಂಡ್ ಆರ್ಡರ್ ಪಡೆದು ಕಂಗಾಲಾಗಿದ್ದಾರೆ. ರಾಜ್ಯ ಸಾರಿಗೆ ಇಲಾಖೆಯಲ್ಲಿ 35 ವರ್ಷಗಳ ಕಾಲ ಸೇವೆ ಸಲ್ಲಿಸಿರುವ ಗಂಗಣ್ಣ ಅವರು ಎಷ್ಟೋ ಬಸ್‍ಗಳಿಗೆ ಮರು ಜೀವ ತುಂಬಿದ್ದರು. ಆದ್ರೆ ಬಿಎಂಟಿಸಿಯಲ್ಲಿ ಚೀಫ್ ಮೆಕ್ಯಾನಿಕಲ್ ಎಂಜಿನಿಯರ್ ಆಗಿ ನಿವೃತ್ತಿ ಹೊಂದಬೇಕಾಗಿದ್ದ ದಿನವೇ ಬಿಎಂಟಿಸಿ ಗಂಗಣ್ಣ ಅವರಿಗೆ ಸಸ್ಪೆಂಡ್ ಆರ್ಡರ್ ನೀಡಿ ಶಾಕ್ ಕೊಟ್ಟಿದೆ.

    34 ವರ್ಷಗಳ ಕಾಲ ಒಂದೇ ಒಂದು ಕಪ್ಪುಚುಕ್ಕೆ ಇಲ್ಲದೆ ನಿಸ್ವಾರ್ಥ ಸೇವೆ ಮಾಡಿ ನೆಮ್ಮದಿಯ ನಿವೃತ್ತಿ ಜೀವನ ಮಾಡಬೇಕಾಗಿದ್ದ ಗಂಗಣ್ಣ ಅವರು ಸೇವೆಯ ಕೊನೆಯ ದಿನ ಅಮಾನತುಗೊಂಡು ಚಿಂತೆಯಲ್ಲಿ ಕುಳಿತಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಬಿಎಂಟಿಸಿಯಲ್ಲಿ ಚೀಫ್ ಮೆಕ್ಯಾನಿಕಲ್ ಎಂಜಿನಿಯರ್ ಆಗಿದ್ದ ಗಂಗಣ್ಣ, ತಮ್ಮ ಅವಧಿಯಲ್ಲಿ ಬಸ್ ಬ್ರೇಕ್ ಡೌನ್ ಆಗಿ ನಿಲ್ಲೋದನ್ನ ಅತ್ಯಂತ ಕಡಿಮೆ ಮಟ್ಟಕ್ಕೆ ತಂದಿದ್ದರು. ಈ ಹಿಂದೆ ವರ್ಷಕ್ಕೆ 1500 ರಿಂದ 1800 ಬಸ್‍ಗಳು ಆನ್ ರೋಡ್ ಬ್ರೇಕ್ ಡೌನ್ ಆಗಿ ನಿಲ್ಲುತ್ತಿತ್ತು. ಆದ್ರೆ ಗಂಗಣ್ಣ ಅವರು ಚೀಫ್ ಎಂಜಿನಿಯರ್ ಆದ ಮೇಲೆ ವರ್ಷಕ್ಕೆ 1500 ಆನ್ ರೋಡ್ ಬ್ರೇಕ್ ಡೌನ್ ಪ್ರಕರಣಗಳಿಂದ 300ಕ್ಕೆ ತಂದಿದ್ದರು. ಆದ್ರೆ ಇವರ ಅವಧಿಯಲ್ಲಿ ಬಸ್‍ಗಳು ಹೆಚ್ಚು ಕಾಲ ಶೇಡ್ ನಲ್ಲಿ ನಿಂತಿದೆ ಎಂದು ಆರೋಪಿಸಿ ನಿವೃತ್ತಿಗೊಳ್ಳೋ ಮೂರು ಗಂಟೆ ಮುಂಚೆ ಬಿಎಂಟಿಸಿ ಎಂಡಿ ಗಂಗಣ್ಣ ಅವರನ್ನು ಅಮಾನತು ಮಾಡಿದ್ದಾರೆ.

    ಈ ಬಗ್ಗೆ ಮಾತಾನಾಡಿದ ಎಐಟಿಯುಸಿ ಅಧ್ಯಕ್ಷ ಅನಂತಸುಬ್ಬ ರಾವ್, ಸಾರಿಗೆ ಇಲಾಖೆಗೆ ಮಂತ್ರಿಯಾಗಿ ಡಿ.ಸಿ ತಮ್ಮಣ್ಣ ಬಂದಾಗಿನಿಂದ ಇಂತಹ ಘಟನೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಗಂಗಣ್ಣಗೌಡ ಒಬ್ಬ ದಕ್ಷ ಅಧಿಕಾರಿ. ಮಂತ್ರಿಗಳು ಹಣದಾಸೆಗೆ ಅವರು ಹೇಳಿದಂತೆ ಕೆಲಸ ಮಾಡಲಿಲ್ಲ ಎಂದು ಗಂಗಣ್ಣಗೌಡ ಅವರನ್ನು ಅಮಾನತು ಮಾಡಿದ್ದಾರೆ. ಹಾಗೆಯೇ ದಕ್ಷ ಅಧಿಕಾರಿಗಳಿಗೆ ಒಂದು ಸಂದೇಶ ರವಾನಿಸಿದ್ದಾರೆ. ತಮ್ಮ ವಿರುದ್ಧವಾಗಿ ಕೆಲಸ ಮಾಡಿದರೆ ಇದೇ ಗತಿ ಎಂದು ತೋರಿಸಲು ಮಂತ್ರಿಗಳು ಮಾಡಿರೋ ಕುತಂತ್ರವಿದು, ಗಂಗಣ್ಣಗೌಡರನ್ನ ಬಲಿಪಶು ಮಾಡಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಳೆ KSRTC, ಬಿಎಂಟಿಸಿ ಬಸ್ ಇರುತ್ತಾ – ಸಾರಿಗೆ ಸಚಿವರು ಹೇಳೋದು ಏನು

    ನಾಳೆ KSRTC, ಬಿಎಂಟಿಸಿ ಬಸ್ ಇರುತ್ತಾ – ಸಾರಿಗೆ ಸಚಿವರು ಹೇಳೋದು ಏನು

    ಮಂಡ್ಯ: ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್ ಗೆ ಸಹಕಾರ ನೀಡುವುದಾಗಿ ಸಾರಿಗೆ ಸಚಿವ ಡಿಸಿ.ತಮ್ಮಣ್ಣ ಹೇಳಿದ್ದಾರೆ.

    ಮದ್ದೂರಿನಲ್ಲಿ ಮಾತನಾಡಿದ ಅವರು, ಅನೇಕ ಸಂಘ ಸಂಸ್ಥೆಗಳು ಬಂದ್‍ಗೆ ಕರೆ ನೀಡಿವೆ. ಹೀಗಾಗಿ ಸಾರಿಗೆ ಇಲಾಖೆಯ ನೌಕರರು ಸಹಕರಿಸುತ್ತಾರೆ ಎಂದು ತಿಳಿಸಿದರು.

    ಸರ್ಕಾರದ ಬೆಂಬಲ ಎಂದು ಹೇಳುತ್ತಿಲ್ಲ. ಕಾರ್ಮಿಕರ ಹಿತದೃಷ್ಟಿಯಿಂದ ಅಖಿಲ ಭಾರತ ಮಟ್ಟದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಾವು ಕೂಡ ಸಹಕರಿಸುತ್ತಿದ್ದೇವೆ. ನಾಳೆ ಬಸ್ ಸಂಚಾರದ ಬಗ್ಗೆ ಪರಿಸ್ಥಿತಿ ನೋಡಿ ತೀರ್ಮಾನಕ್ಕೆ ಬರುತ್ತೇವೆ. ಆದರೆ ಬಂದ್ ಇರುವುದರಿಂದ ಸಾರಿಗೆ ವ್ಯವಸ್ಥೆ ಕಷ್ಟ ಎಂದು ಹೇಳಿದರು.

    ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರೆ ಮಾತ್ರ ಬಸ್ ಸಂಚಾರ ಇರುತ್ತೆ. ಇಲ್ಲದಿದ್ರೆ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಬೇಬಿ ಕೇರ್ ಕೊಠಡಿ ನಿರ್ಮಾಣ: ಡಿ.ಸಿ ತಮ್ಮಣ್ಣ

    ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ಬೇಬಿ ಕೇರ್ ಕೊಠಡಿ ನಿರ್ಮಾಣ: ಡಿ.ಸಿ ತಮ್ಮಣ್ಣ

    ಶಿವಮೊಗ್ಗ: ಮಹಿಳೆಯರು ಮಕ್ಕಳಿಗೆ ಬಸ್ ನಿಲ್ದಾಣದಲ್ಲಿ ಹೊರಗಡೆ ಹಾಲುಣಿಸಬೇಕಾಗುತ್ತದೆ. ಹೀಗಾಗಿ ಅವರಿಗೆ ಸಹಾಯವಾಗಲೇಂದು ರಾಜ್ಯದ ಎಲ್ಲಾ ಬಸ್ ನಿಲ್ದಾಣಗಳಲ್ಲೂ ತಾಯಿ ಮಡಿಲ (ಬೇಬಿ ಕೇರ್) ಕೊಠಡಿಯನ್ನು ನಿರ್ಮಾಣ ಮಾಡುವುದಾಗಿ ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆಎಸ್ಆರ್‌ಟಿಸಿ ಸೇರಿ ಯಾವುದೇ ಸಾರಿಗೆ ಸಂಸ್ಥೆ ಖಾಸಗೀಕರಣ ಇಲ್ಲ. 1.16 ಲಕ್ಷ ಕನ್ನಡಿಗರಿಗೆ ಅದರಲ್ಲೂ ಗ್ರಾಮೀಣ ಜನರಿಗೆ ಉದ್ಯೋಗ ನೀಡಿರುವ ಸಂಸ್ಥೆ ಇದು. ಇಂಥ ಸಂಸ್ಥೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡುವುದಿಲ್ಲ. ರಾಜ್ಯದ ಸಾರಿಗೆ ಸಂಸ್ಥೆಗಳು ವಾರ್ಷಿಕ 500 ಕೋಟಿ ರೂ. ನಷ್ಟದಲ್ಲಿವೆ. ಈ ನಷ್ಟ ಸರಿದೂಗಿಸಲು ಹಲವು ಯೋಜನೆ ಹಮ್ಮಿಕೊಳ್ಳಲಾಗಿದೆ. ಸುಸ್ಥಿತಿಯಲ್ಲಿರುವ ಹಳೇ ಚಾಸಿಗಳಿಗೆ ಹೊಸ ಬಾಡಿ ಕಟ್ಟಿಸಿ ಓಡಿಸಲಾಗುವುದು. ಬಸ್ ನಿಲ್ದಾಣಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಹೆಚ್ಚು ಅವಕಾಶ ನೀಡಲಾಗುವುದು ಎಂದು ಹೇಳಿದರು.

    ಎಂಎಸ್‍ಐಎಲ್ ಅವರ ಸಹಯೋಗದೊಂದಿಗೆ ಎಲ್ಲಾ ಬಸ್ ನಿಲ್ದಾಣದಲ್ಲೂ ಅವರದೊಂದು ಸಣ್ಣ ಮಳಿಗೆ ಇರಿಸಲಾಗುತ್ತದೆ. ಅದರಲ್ಲಿ ಪುಸ್ತಕ ಇತರ ವಸ್ತುಗಳ ಮಾರಾಟ ಮಾಡುವ ವ್ಯವಸ್ಥೆ ಇದೆ. ಯಾರು ಬಸ್ಸಿನಲ್ಲಿ ಪ್ರಯಾಣ ಮಾಡುತ್ತಾರೋ ಆ ಬಸ್ಸಿನ ಟಿಕೆಟ್ ತೋರಿಸಿದರೆ ಅವರಿಗೆ 35 ರಿಂದ 40% ಡಿಸ್ಕೌಂಟ್‍ನಲ್ಲಿ ಎಂಎಸ್‍ಐಎಲ್ ಪದಾರ್ಥಗಳು ದೊರಕುತ್ತವೆ. ಅದರೊಂದಿಗೆ ಮಹಿಳೆಯರಿಗಾಗಿ ನ್ಯಾಪ್‍ಕಿನ್ ವ್ಯವಸ್ಥೆ ಕೂಡ ಮಾಡಲಾಗುತ್ತದೆ. ಮಹಿಳೆಯ ಶೌಚಾಲಯದಲ್ಲಿ ನ್ಯಾಪ್‍ಕಿನ್ ಬರ್ನಿಂಗ್ ಸೆಂಟರ್ ಅನ್ನು ಇಡಲಾಗುತ್ತದೆ. ಮುಂದಿನ ದಿನಗಳಲ್ಲಿ ಹೈಟೆಕ್ ನಿಲ್ದಾಣಗಳನ್ನು ಮಾಡುತ್ತೇವೆ ಎಂದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರತಿಷ್ಠಿತ ಐಶಾರಾಮಿ ವೋಲ್ವೋ ಕಂಪೆನಿಗೆ ಶಾಕ್ ನೀಡಿದ ಸಾರಿಗೆ ಸಚಿವರು!

    ಪ್ರತಿಷ್ಠಿತ ಐಶಾರಾಮಿ ವೋಲ್ವೋ ಕಂಪೆನಿಗೆ ಶಾಕ್ ನೀಡಿದ ಸಾರಿಗೆ ಸಚಿವರು!

    ಬೆಂಗಳೂರು: ರಾಜ್ಯದ ಎಲ್ಲಾ ಸಾರಿಗೆ ನಿಗಮಗಳಲ್ಲಿನ ಹೊಸ ವೋಲ್ವೋ ಬಸ್ ಖರೀದಿಗೆ ಸಾರಿಗೆ ಸಚಿವರಾದ ಡಿ.ಸಿ.ತಮ್ಮಣರವರು ಬ್ರೇಕ್ ಹಾಕಿದ್ದಾರೆ.

    ವೋಲ್ವೋ ಬಸ್‍ಗಳ ವ್ಯಾಮೋಹಕ್ಕೆ ಒಳಗಾಗಿದ್ದ ಬಿಎಂಟಿಸಿ, ಕೆಎಸ್‍ಆರ್ ಟಿಸಿ, ಎನ್‍ಇಕೆಎಸ್‍ಆರ್ ಟಿಸಿ, ಎನ್‍ಡಬ್ಲ್ಯೂಕೆಎಸ್‍ಆರ್ ಟಿಸಿಯ ನಿಗಮಗಳಿಗೆ ಸಾರಿಗೆ ಇಲಾಖೆ ತಣ್ಣೀರು ಎರಚಿದ್ದು, ಸಾರಿಗೆ ಸಂಸ್ಥೆಯವರು ಹೊಸ ಬಸ್ ಗಳ ಖರೀದಿಗೆ ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸಚಿವರು ಬ್ರೇಕ್ ಹಾಕುವ ಮೂಲಕ ವೋಲ್ವೋ ಕಂಪೆನಿಗೆ ಬಿಗ್ ಶಾಕ್ ನೀಡಿದ್ದಾರೆ.

    ಅನಗತ್ಯ ದುಂದುವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರಿಗೆ ಸಚಿವರು ಈ ನಿರ್ಧಾರ ತೆಗೆದುಕೊಂಡಿದ್ದು, ನಗರ ಸಾರಿಗೆಗೆ ವೋಲ್ವೋ ಬಸ್ ಖರೀದಿ ಮಾಡೋ ಹಾಗಿಲ್ಲ ಹಾಗೂ ದುಬಾರಿ ಬೆಲೆ ಬಸ್ ಖರೀದಿ ಪ್ರಸ್ತಾವನೆ ನನ್ನ ಮುಂದೆ ತರಬೇಡಿ ಎಂದು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಚಿವರ ಈ ಖಡಕ್ ನಿರ್ಧಾರವು ವೋಲ್ವೋ ಕಂಪೆನಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.

    ಈ ವೇಳೆ ಮಾತನಾಡಿದ ಸಚಿವರು, ವೋಲ್ವೋ ಬಸ್ ನಿರ್ವಹಣೆ ದುಬಾರಿಯಾಗಿದ್ದು, ಮೈಲೇಜ್ ಸಹ ಕಡಿಮೆ ನೀಡುತ್ತದೆ. ಆದ್ದರಿಂದ ಹೊಸ ವೋಲ್ವೋ ಬಸ್ ಖರೀದಿ ನಿಲ್ಲಿಸಿದ್ದೇನೆ. ಈಗಾಗಲೇ ನಾಲ್ಕು ಸಾರಿಗೆ ಸಂಸ್ಥೆಗಳು ಐಷಾರಾಮಿ ಬಸ್ ಗಳಿಂದ ಕೈ ಸುಟ್ಟುಕೊಂಡಿವೆ ಎಂದು ತಿಳಿಸಿದರು.

    ವೋಲ್ವೋ ಬಸ್ ಖರೀದಿಯಿಂದ ಅಧಿಕಾರಿಗಳು ದುಡ್ಡು ಮಾಡುತ್ತಾರೆಯೇ ಹೊರತು, ಸಂಸ್ಥೆಗೆ ಯಾವುದೇ ಪ್ರಯೋಜನವಿಲ್ಲ ಎಂದು ಆರೋಪಿಸಿದ ಅವರು 1 ಕೋಟಿ ಬೆಲೆಯ ಬಸ್‍ಗಳು ಬೇಡ ಎಂದು ಅಧಿಕಾರಿಗಳಿಗೆ ಖಡಕ್ ಆಗಿ ಹೇಳಿದ್ದಾರೆ.

  • ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಸ್ ಟಿಕೆಟ್ ದರ ಏರಲ್ಲ: ಸಾರಿಗೆ ಸಚಿವ ಡಿ ಸಿ ತಮ್ಮಣ್ಣ

    ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಬಸ್ ಟಿಕೆಟ್ ದರ ಏರಲ್ಲ: ಸಾರಿಗೆ ಸಚಿವ ಡಿ ಸಿ ತಮ್ಮಣ್ಣ

    ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

    ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪದವಿವರೆಗೆ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಪಾಸ್ ನೀಡುವ ನಿರ್ಧಾರವನ್ನು ಕೈಗೊಳ್ಳಲಾಗಿದ್ದು ಶೀಘ್ರದಲ್ಲೇ ಮುಖ್ಯಮಂತ್ರಿಗಳೇ ಈ ಘೋಷಣೆ ಮಾಡುತ್ತಾರೆ ಎಂದು ತಿಳಿಸಿದರು.

    ಉಚಿತ ಬಸ್ ಪಾಸ್ ನೀಡಿದರೆ ಇಲಾಖೆಗೆ ಸುಮಾರು 620 ಕೋಟಿ ರೂ. ಹೊರೆಯಾಗುತ್ತದೆ. ಇದರಲ್ಲಿ 15% ರಷ್ಟನ್ನು ಸಂಸ್ಥೆ ಭರಿಸಲಿದ್ದು ಉಳಿದದ್ದನ್ನು ಶಿಕ್ಷಣ ಇಲಾಖೆ ಅಥವಾ ಸರ್ಕಾರ ಭರಿಸಿದರೇ ಶೀಘ್ರವೇ ರಾಜ್ಯದ ಒಟ್ಟು 19.6 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯ ಜಾರಿಗೊಳಿಸಲಾಗುತ್ತದೆ ಎಂದು ಹೇಳಿದರು.

    ಖಾಸಗಿ ಡೀಸೆಲ್ ವಾಹನಗಳಿಗೆ ಕಡಿವಾಣಕ್ಕೆ ಚಿಂತನೆ ನಡೆಸಲಾಗಿದೆ. ಅಲ್ಲದೇ ಹೆಚ್ಚುತ್ತಿರುವ ವಾಹನ ದಟ್ಟಣೆಯಿಂದ ಪಾರ್ಕಿಂಗ್ ಗೆ ತೊಂದರೆಯಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಹೊಸ ಕಾರುಗಳ ಖರೀದಿಗೆ ಪಾರ್ಕಿಂಗ್ ಸೌಲಭ್ಯ ಇದ್ದರೇ ಮಾತ್ರ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲು ಯೋಜನೆ ರೂಪಿಸಲಾಗುವುದು. ಸಾರ್ವಜನಿಕರು ಹೆಚ್ಚಾಗಿ ಸಮೂಹ ಸಾರಿಗೆಯನ್ನು ಬಳಸಬೇಕು ಎಂದರು.

    ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಗಳು ಬಸ್ ಟಿಕೆಟ್ ದರ ಏರಿಸುವಂತೆ ಪ್ರಸ್ತಾವನೆ ಸಲ್ಲಿಸಿವೆ. ಆದರೆ ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ. ಈ ಕುರಿತು ಮುಖ್ಯಮಂತ್ರಿಗಳು ಸಭೆ ಕರೆದಿದ್ದು, ಸಭೆಯಲ್ಲಿ ಬಸ್ ದರ ಏರಿಸುವ ಬದಲು ಸಾರಿಗೆ ಸಂಸ್ಥೆಗಳಲ್ಲಿ ಆಗುತ್ತಿರುವ ನಷ್ಟವನ್ನು ಕಡಿಮೆಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಎಂದು ವಿವರಿಸಿದರು.

    ನಮ್ಮ ಮೆಟ್ರೋ ಸೇವೆಯನ್ನು ಸಾರಿಗೆ ಇಲಾಖೆಯಡಿ ತರುವುದಕ್ಕೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಮ್ಮ ಮೆಟ್ರೋ ಸಾರಿಗೆ ಇಲಾಖೆಯಡಿ ಬಂದರೆ ಹಲವು ಸಮಸ್ಯೆಗಳು ಬಗೆಹರಿಯುತ್ತವೆ. ಸಾರಿಗೆ ಸಂಸ್ಥೆಯು ಮೆಟ್ರೋಗಿಂತ ಯಾವ ರೀತಿಯಿಂದಲೂ ಕಮ್ಮಿ ಇಲ್ಲ. ಆದರೆ ಸಮಯದ ಉಳಿತಾಯಕ್ಕೆ ಜನ ಮೆಟ್ರೋವನ್ನೇ ಅವಲಂಭಿಸಿರುವುದು ಅನಿವಾರ್ಯ. ಅಲ್ಲದೆ ಮೆಟ್ರೋ ಸಂಪರ್ಕಕ್ಕೆ ಸಂಸ್ಥೆಯೂ ಅನೇಕ ಹೊಸ ಬಸ್‍ಗಳನ್ನು ಕಲ್ಪಿಸಿದೆ ಎಂದು ತಿಳಿಸಿದರು.