Tag: d randeep

  • ಅಡ್ಡಕತ್ತರಿಯಲ್ಲಿ ಐಎಎಸ್ ಅಧಿಕಾರಿ: ಸಿಎಂ-ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಅತಂತ್ರರಾದ ಡಿ.ರಂದೀಪ್

    ಅಡ್ಡಕತ್ತರಿಯಲ್ಲಿ ಐಎಎಸ್ ಅಧಿಕಾರಿ: ಸಿಎಂ-ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಅತಂತ್ರರಾದ ಡಿ.ರಂದೀಪ್

    ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ರೋಹಿಣಿ ಸಿಂಧೂರಿ ನಡುವಿನ ತಿಕ್ಕಾಟದಲ್ಲಿ ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರರಾಗಿದ್ದಾರೆ. ಮೈಸೂರಿನಲ್ಲೂ ಇರಲಾರದೆ ಹಾಸನಕ್ಕೂ ತೆರಳಲಾಗದೆ ನಿರ್ಗಮಿತ ಡಿಸಿ ರಂದೀಪ್ ಕಂಗಾಲಾಗಿದ್ದಾರೆ.

    ವಾರದ ಹಿಂದೆ ಐಎಎಸ್ ಅಧಿಕಾರಿಗಳ ವರ್ಗವಣೆಯಲ್ಲಿ ಹಾಸನ ಡಿಸಿಯಾಗಿ ಡಿ.ರಂದೀಪ್ ವರ್ಗಾವಣೆಯಾಗಿದ್ದರು. ಹಾಸನದ ಡಿಸಿ ರೋಹಿಣಿ ಸಿಂಧೂರಿಯವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿತ್ತು. ಆದ್ರೆ ತಮ್ಮ ವರ್ಗಾವಣೆಯನ್ನ ಪ್ರಶ್ನಿಸಿ ರೋಹಿಣಿ ಸಿಂಧೂರಿ ತಡೆಯಾಜ್ಞೆ ತಂದಿದ್ದು, ಮಾರ್ಚ್ 21ರವರೆಗು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರೆಯುವಂತೆ ತಡೆಯಾಜ್ಞೆ ಆದೇಶಿಸಿದೆ.

    ಆದ್ರೆ ಅತ್ತ ಮೈಸೂರಿಗೆ ನೂತನ ಜಿಲ್ಲಾಧಿಕಾರಿ ಶಿವಕುಮಾರ್ ಆಗಮಿಸಿದ್ದು, ರಂದೀಪ್‍ಗೆ ಮೈಸೂರೂ ಇಲ್ಲದೆ ಹಾಸನವೂ ಇಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಐಎಎಸ್ ಅಧಿಕಾರಿಗೇ ತಮ್ಮ ಕೆಲಸದ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ತಿಲ್ಲ. ಹೀಗಾಗಿ ಡಿಪಿಆರ್‍ಗೆ ನಿರ್ಗಮಿತ ಡಿಸಿ ಡಿ.ರಂದೀಪ್ 2 ಪತ್ರವನ್ನು ಬರೆದಿದ್ದು, ಐಎಎಸ್ ಅಧಿಕಾರಿಯ ಪತ್ರಕ್ಕೂ ಹಿರಿಯ ಅಧಿಕಾರಿಗಳು ಸ್ಪಂದಿಸಿಲ್ಲ.

    ಈ ಹಿನ್ನೆಲೆಯಲ್ಲಿ ಅತ್ತ ಇತ್ತ ಎಲ್ಲಿಯೂ ಇಲ್ಲದೆ ಡಿ.ರಂದೀಪ್ ಖಾಲಿ ಕುಳಿತಿದ್ದಾರೆ. ಸದ್ಯ ಮೈಸೂರಿನ ತಮ್ಮ ಅಧಿಕೃತ ನಿವಾಸದಲ್ಲಿ ನೆಚ್ಚಿನ ನಾಯಿಗಳೊಂದಿಗೆ ಕಾಲ ಕಳೆಯುತ್ತಿದ್ದಾರೆ. ಶೀಘ್ರದಲ್ಲೇ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕೃತ ನಿವಾಸ ಬಿಟ್ಟುಕೊಡಬೇಕಿದೆ.

    ಮಾರ್ಚ್ 21ರವರೆಗು ಐಎಎಸ್ ಅಧಿಕಾರಿ ಡಿ.ರಂದೀಪ್ ಅತಂತ್ರವಾಗಿಯೇ ಇರುವ ಪರಿಸ್ಥಿತಿ ಎದುರಾಗಿದೆ.

  • ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

    ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

    ಮೈಸೂರು: ಇತ್ತೀಚೆಗೆ ಇಲ್ಲಿನ ಹುಣಸೂರಿನಲ್ಲಿ ನಡೆದ ಹನುಮಜಯಂತಿ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಿಸುವಂತೆ ಸೂಚನೆ ನೀಡಿರುವುದಾಗಿ ಜಿಲ್ಲಾಧಿಕಾರಿ ಡಿ.ರಂದೀಪ್ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಅವರು ನಿಬಂಧನೆ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ವಿಚಾರವಾಗಿ ಮೋಟಾರ್ ಕಾಯ್ದೆಯಡಿ ದೂರು ದಾಖಲು ಮಾಡಲು ಸೂಚಿಸಿದ್ದೇನೆ ಅಂದ್ರು. ಇದನ್ನೂ ಓದಿ: ಪ್ರತಾಪ್ ಸಿಂಹ ವಿರುದ್ಧ ಐಪಿಸಿ ಸೆಕ್ಷನ್ 188 ಸೇರಿಸಿ ಪೇಚಿಗೆ ಸಿಲುಕಿದ ಖಾಕಿಗಳು!

    ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ಅವರು ವಿಶೇಷ ವಾಹನ ಬಳಸಿದ್ದರು. ಹನುಮ ಜಯಂತಿ ಮೆರವಣಿಗೆ ಅನುಮತಿ ನೀಡುವ ವೇಳೆ ವಿಶೇಷ ವಾಹನ ಬಳಸುವಂತಿಲ್ಲ ಎಂದು ನಿಬಂಧನೆ ವಿಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಬಂಧನೆ ಉಲ್ಲಂಘನೆಗೆ ಕೇಸು ದಾಖಲಿಸಲು ಸೂಚಿಸಲಾಗಿದೆ. ಇದನ್ನೂ ಓದಿಪೊಲೀಸ್ ಪಂಜರದಲ್ಲೇ ಸಿಂಹ ಘರ್ಜನೆ-ಈದ್ ಮಿಲಾದ್ ಆಚರಣೆಯೂ ಹಿಂಗೇ ಇರಬೇಕೆಂದು ಆಗ್ರಹ

     

    ಹನುಮಜಯಂತಿಯನ್ನ ವಿಶೇಷ ಪ್ರಕರಣವಾಗಿ ಪರಿಗಣಿಸಿಲಾಗಿತ್ತು. ಇನ್ಯಾವುದೇ ಧರ್ಮದ ಜಯಂತಿಗೆ ಈ ರೀತಿಯ ವ್ಯವಸ್ಥೆ ಇರೋದಿಲ್ಲ. ಸಮಸ್ಯೆಯಾಗಿದ್ದಕ್ಕೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿತ್ತು. ಇತರೆ ಜಯಂತಿಗಳು ಶಾಂತಿಯುತವಾಗಿ ನಡೆಯಲಿವೆ ಅಂತ ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.